Site icon Vistara News

Karnataka Weather Forecast: ನಾಳೆ ಇಲ್ಲೆಲ್ಲ ಮಳೆಯ ಸಿಂಚನ

Karnataka weather Forecast

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ (Karnataka Weather Forecast) ಕರಾವಳಿಯ ಹಲವು ಕಡೆಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ (Rain News ) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ತುಮಕೂರು ಹಾಗೂ ಚಾಮರಾಜನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿದ ಮಳೆ ಬೀಳಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಮಧ್ಯಮ ಮಳೆಯಾಗಬಹುದು. ಆದರೆ ಕಲಬುರಗಿ ಮತ್ತು ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಇದನ್ನೂ ಓದಿ: Captain Pranjal : ಪಂಚಭೂತಗಳಲ್ಲಿ ಲೀನರಾದ ಕ್ಯಾಪ್ಟನ್‌ ಪ್ರಾಂಜಲ್‌; ಮೊಳಗಿದ ಅಮರ್‌ ರಹೇ ಘೋಷಣೆ

ಕರಾವಳಿ, ಮಲೆನಾಡಲ್ಲಿ ಭಾರಿ ಮಳೆ

ಮಲೆನಾಡಿನ ಹಾಸನ, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಅಲ್ಪ ಮಳೆಯ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಭರ್ಜರಿ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ತುಂತುರು ಮಳೆಯಾಗಲಿದೆ.

ಬೆಂಗಳೂರಲ್ಲಿ ತುಂತುರು ಮಳೆ

ಕಳೆದೊಂದು ವಾರದಿಂದ ಬೆಂಗಳೂರು ಅಂತೂ ಮಲೆನಾಡಿನಂತೆ ಭಾಸವಾಗುತ್ತಿದೆ. ಮೈ ನಡುಗಿಸುವ ಚಳಿಯೊಂದಿಗೆ ಆಗಾಗ ಬೀಳುವ ಮಳೆಯು ಖುಷಿ ನೀಡುತ್ತಿದೆ. ಭಾನುವಾರ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ದಾವಣಗೆರೆ, ವಿಜಯಪುರದಲ್ಲಿ ಕನಿಷ್ಠ ಉಷ್ಣಾಂಶ ದಾಖಲು

ರಾಜ್ಯಾದ್ಯಂತ ಶುಕ್ರವಾರ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಉಡುಪಿ, ಮಂಗಳೂರು ವಿಮಾನ ನಿಲ್ದಾಣ ತಲಾ 2 ಸೆಂ.ಮೀ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ತಲಾ 1 ಸೆಂ.ಮೀ ಮಳೆ ಆಗಿದೆ. ಕಡಿಮೆ ಉಷ್ಣಾಂಶ 19.0 ಡಿ.ಸೆ. ದಾವಣಗೆರೆ ಮತ್ತು ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Exit mobile version