Site icon Vistara News

Karnataka Weather : ಬೆಂಗಳೂರಿನಲ್ಲಿ ಭರ್ಜರಿ ಮಳೆ; ದಕ್ಷಿಣ ಒಳನಾಡು, ಕರಾವಳಿಯಲ್ಲಿ ಸಾಧಾರಣ ಪ್ರದರ್ಶನ

A girl reading a book in the rain

ಬೆಂಗಳೂರು: ಇನ್ನೆರಡು ದಿನ ರಾಜ್ಯದ ಹಲವು ಕಡೆ ಮಳೆಯಾಗುವ (Rain News) ಮುನ್ಸೂಚನೆಯನ್ನು (Karnataka Weather) ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ (South Inland) ಹಲವು ಕಡೆ ಹಾಗೂ ಕರಾವಳಿಯ (Coastal Karnataka Rainfall) ಕೆಲವು ಸ್ಥಳಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದ್ದರೂ ಬಹುತೇಕ ಕಡೆ ಉಷ್ಣಾಂಶದಲ್ಲಿ ಏರಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ.

ಇನ್ನು ಮುಂದಿನ 48 ಗಂಟೆಗಳನ್ನು ಗಮನಿಸುವುದಾದರೆ, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದ ಜನರು ಎಚ್ಚರಿಕೆ ವಹಿಸುವ ಅಗತ್ಯ ಇದೆ ಎಂದು ಹೇಳಲಾಗಿದೆ.

ಬೆಂಗಳೂರಲ್ಲಿ ಭಾರಿ ಮಳೆ ಸಂಭವ

ಬೆಂಗಳೂರು ನಗರ (Bangalore Rain today), ಬೆಂಗಳೂರು ಗ್ರಾಮಾಂತರ ಭಾಗದ ಸುತ್ತಮುತ್ತಲು ಇನ್ನೆರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನಾ ವರದಿಯಲ್ಲಿ (Bangalore weather updates) ಉಲ್ಲೇಖಿಸಿದೆ. ಅಲ್ಲದೆ, ಸಂಜೆ ಅಥವಾ ರಾತ್ರಿ ವೇಳೆಗೆ ಭಾರಿ ಮಳೆಯಾಗುವುದರಿಂದ ಟ್ರಾಫಿಕ್‌ ಸಮಸ್ಯೆ ಉಂಟಾಗಬಹುದು. ಅಲ್ಲದೆ, ಗಾಳಿಯ ತೀವ್ರತೆಯೂ ಅಲ್ಪ ಪ್ರಮಾಣದಲ್ಲಿ ಹೆಚ್ಚು ಇರಬಹುದು.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಒಂದು ಅಥವಾ ಎರಡು ಬಾರಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಚಾಮರಾಜನಗರ, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಲ್ಲೆಲ್ಲ ತಾಪಮಾನ ಏರಿಕೆ!

ಉತ್ತರ ಒಳನಾಡಿನ (North Inland) ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳದಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇತ್ತ ದಕ್ಷಿಣ ಒಳನಾಡಿನ ಮಂಡ್ಯ, ಹಾಸನ, ಚಿತ್ರದುರ್ಗ, ದಾವಣಗೆರೆ ಮತ್ತು ಮೈಸೂರು ಸೇರಿದಂತೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮಂಗಳವಾರದ ಮಳೆ ವಿವರ

ಭಾರಿ ಮಳೆಯು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 9 ಸೆಂ.ಮೀ, ಶ್ರವಣಬೆಳಗೊಳದಲ್ಲಿ 8 ಸೆಂ.ಮೀ ಹಾಗೂ ದೇವನಹಳ್ಳಿ, ಬೆಂಗಳೂರು ನಗರದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ. ಉಳಿದಂತೆ ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಶ್ರೀರಂಗಪಟ್ಟಣದಲ್ಲಿ ತಲಾ 6 ಸೆಂ.ಮೀ, ಬೆಂಗಳೂರು ಕೆಐಎಎಲ್, ಎಲೆಕ್ಟ್ರಾನಿಕ್ ಸಿಟಿ ಎಆರ್‌ಜಿ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ ತಲಾ 5 ಸೆಂ.ಮೀ ಮಳೆಯಾಗಿದೆ. ಕೊಳ್ಳೇಗಾಲ, ರಾಮನಗರ, ಸುತ್ತೂರು , ಉತ್ತರಹಳ್ಳಿ, ಜಿಕೆವಿಕೆ, ಕನಕಪುರದಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Vistara News Impact : ಬುಡಕಟ್ಟು ಸಮುದಾಯ, ಸಾಗುವಳಿದಾರರಿಗಿಲ್ಲ ಮೀಸಲು ಅರಣ್ಯ ಕಂಟಕ; 3 ತಿಂಗಳಲ್ಲಿ ಹಕ್ಕು ಪತ್ರ

ಧರ್ಮಸ್ಥಳ, ಅರಕಲಗೂಡು, ಕೋಣನೂರು, ಸಿ.ಆರ್‌.ಪಟ್ನಾ, ಮೈಸೂರು, ಸರಗೂರು, ಟಿ ನರಸೀಪುರ, ನಾಪೋಕ್ಲು , ಕೃಷ್ಣರಾಜಪೇಟೆ , ಮಾಲೂರಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ಹುಂಚದಕಟ್ಟೆ, ಹೆಸರಘಟ್ಟ, ಹಾರಂಗಿ, ಹಾಸನದಲ್ಲಿ ತಲಾ 2 ಸೆಂ.ಮೀ, ಕೃಷ್ಣರಾಜಸಾಗರ, ಬೆಳ್ಳೂರು, ಸೋಮವಾರಪೇಟೆ , ಹೊಸಕೋಟೆ, ಮಾಗಡಿ, ಸಾಲಿಗ್ರಾಮ, ಜಯಪುರ, ಚಾಮರಾಜನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

Exit mobile version