Site icon Vistara News

Karnataka Weather : ನಾಳೆ ಇಲ್ಲೆಲ್ಲ ಸೂರ್ಯ ಮರೆಯಾಗಿ ಧರೆಗೆ ಅಪ್ಪಳಿಸುವ ಮಳೆ

Rain alert For Karnataka

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿಯ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಜಿಟಿಜಿಟಿ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ (Rain News) ಭಾರಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ರಾಮನಗರ, ಮಂಡ್ಯ ಹಲವೆಡೆ ಪ್ರತ್ಯೇಕ ಕಡೆ ಭಾರಿ ಮಳೆಯಾಗುವ ಸಂಭವವಿದೆ. ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತುಮಕೂರು, ಮೈಸೂರು ಮತ್ತು ಚಾಮರಾಜನಗರ, ಚಿತ್ರದುರ್ಗದಲ್ಲಿ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಚದುರಿದಂತೆ ಮಳೆ ಬರಬಹುದು.

ಉತ್ತರ ಒಳನಾಡಿನ ಹಾವೇರಿಯಲ್ಲಿ ಅಲ್ಲಲ್ಲಿ ತುಂಬಾ ಹಗುರದಿಂದ ಸಾಧಾರಣ ಮಳೆಯಾಗಬಹುದು. ಬೆಳಗಾವಿ, ಧಾರವಾಡ, ವಿಜಯನಗರ ಮತ್ತು ಗದಗದಲ್ಲಿ ಸಣ್ಣ ಮಳೆ ಸುರಿಯಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಮುಸುಕಿದ ವಾತಾವರಣವಿರುತ್ತದೆ. ಕೆಲವು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನೈರುತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು. ಒಂದೆರಡು ಕಡೆಗಳಲ್ಲಿ ಮಳೆಯಾಗಿರುವ ವರದಿ ಆಗಿದೆ. ಚಿಕ್ಕಮಗಳೂರಿನ ಜಯಪುರದಲ್ಲಿ 5, ಶಿವಮೊಗ್ಗದ ಹುಂಚದಕಟ್ಟೆ, ಹಾಸನ ಕೊಣನೂರಲ್ಲಿ ತಲಾ 4 ಸೆಂ.ಮೀ ಮಳೆಯಾಗಿದೆ. ಗೇರುಸೊಪ್ಪ 2, ಸಿದ್ದಾಪುರ, ಸಿಆರ್‌ಪಟ್ನ ತಲಾ 1 ಸೆಂ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ 36.4 ಡಿ.ಸೆ ಚಿಕ್ಕನಹಳ್ಳಿಯಲ್ಲಿ ದಾಖಲಾಗಿದೆ. ಕಡಿಮೆ ಉಷ್ಣಾಂಶ 14.0 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version