Karnataka weather : ನಾಲ್ಕು ದಿಕ್ಕಿನಿಂದಲೂ ಮಳೆ ಅಬ್ಬರ; ಸಮುದ್ರ ತೀರದಿಂದ ದೂರವಿರಿ - Vistara News

ಉಡುಪಿ

Karnataka weather : ನಾಲ್ಕು ದಿಕ್ಕಿನಿಂದಲೂ ಮಳೆ ಅಬ್ಬರ; ಸಮುದ್ರ ತೀರದಿಂದ ದೂರವಿರಿ

Karnataka Weather Forecast : ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಇರುವುದರಿಂದ ನೀರಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

Heavy Rain alert To Karnataka
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ. ಕರ್ನಾಟಕದ ಕರಾವಳಿ, ಮಲೆನಾಡಲ್ಲಿ ಭಾರೀ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ ಜಿಲ್ಲೆಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿತ್ರದುರ್ಗ, ತುಮಕೂರು ಮತ್ತು ಮೈಸೂರಲ್ಲಿ ಸಾಧಾರಣ ಮಳೆ ಸುರಿದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ಮಳೆಯಾಗಬಹುದು.

ಉತ್ತರ ಒಳನಾಡಿನ ಹಾವೇರಿಯಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಬರಲಿದ್ದು, ಬೆಳಗಾವಿ, ಧಾರವಾಡ, ಗದಗ ಮತ್ತು ವಿಜಯನಗರದಲ್ಲಿ ಹಗುರವಾದ ಮಳೆಯಾಗಲಿದೆ. ಇನ್ನುಳಿದ ಪ್ರದೇಶದಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಮಲೆನಾಡಿನ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather : ಕರಾವಳಿಯಲ್ಲಿ ಸುರಿದ ಧಾರಾಕಾರ ಮಳೆ; ನಾಳೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -18 ಡಿ.ಸೆ
ಮಂಗಳೂರು: 32 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 28 ಡಿ.ಸೆ – 16 ಡಿ.ಸೆ
ಗದಗ: 31 ಡಿ.ಸೆ – 17 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 32 ಡಿ.ಸೆ – 18 ಡಿ.ಸೆ
ಬೆಳಗಾವಿ: 29 ಡಿ.ಸೆ – 18 ಡಿ.ಸೆ
ಕಾರವಾರ: 33 ಡಿ.ಸೆ – 22 ಡಿ.ಸೆ

ಇದನ್ನೂ ಓದಿ: Inhuman Behaviour : ಕೊರೆಯುವ ಚಳಿಯಲ್ಲಿ ಹೆತ್ತ ತಾಯಿಯನ್ನೇ ಬಿಸಾಡಿ ಹೋದ ಮಗಳು-ಅಳಿಯ! ಥೂ, ಚೀ ಎಂದ್ರು ಜನ

ಚಳಿಗಾಲದಲ್ಲಿ ದ್ರಾಕ್ಷಿ ತಿಂದರೆ ಎಷ್ಟೊಂದು ಲಾಭ!

ದೇಹಕ್ಕೆ ಉಪಯುಕ್ತವಾಗುವ ಹಣ್ಣುಗಳ ವಿಷಯ ಬಂದಾಗ ಬೆರ್ರಿಗಳನ್ನು ತಪ್ಪದೇ ಪ್ರಸ್ತಾಪಿಸಲಾಗುತ್ತದೆ. ಚೆರ್ರಿ, ಸ್ಟ್ರಾಬೆರಿ, ಬ್ಲೂಬೆರಿ, ಬ್ಲಾಕ್‌ಬೆರಿ, ರಾಸ್ಪ್‌ಬೆರಿ, ಕ್ರೇನ್‌ಬೆರಿ ಇತ್ಯಾದಿಗಳಲ್ಲಿ ಹೆಚ್ಚಿನವು ಭಾರತದಲ್ಲಿ ಬೆಳೆಯುವಂಥವಲ್ಲ; ಹೊರಗಿನಿಂದಲೇ ಬರಬೇಕು. ಅದರ ಬದಲಿಗೆ ನಮ್ಮಲ್ಲೇ ಬೆಳೆಯುವಂಥ ಯಾವುದಾದರೂ ಹಣ್ಣನ್ನು ಬಳಸಬಹುದೇ? ಸತ್ವ, ಗುಣ, ರುಚಿ ಇತ್ಯಾದಿಗಳು ಬೆರ್ರಿಗಳಿಗೆ ಹತ್ತಿರದಲ್ಲಿ ಇದ್ದರೆ, ಎಲ್ಲಿಂದಲೋ ಆಮದಾಗುವ ಬೆರ್ರಿಗಳನ್ನೇ ಕಾಯಬೇಕೆಂದಿಲ್ಲವಲ್ಲ. ಹಾಗಾದರೆ ಮತ್ತಾವ ಹಣ್ಣನ್ನು ಸೇವಿಸಬಹುದು? ಈಗ ಹೇಳುವ ಹಣ್ಣು ಕೊಂಚ ಹುಳಿ ಇರಬಹುದಾದರೂ ಕೈಗೆಟುಕದ ಹಣ್ಣಂತೂ ಅಲ್ಲ! ಚಳಿಗಾಲದಲ್ಲಿ ಮಾರುಕಟ್ಟೆಯತ್ತ ಕಣ್ಣು ಹಾಯಿಸಿದರೆ ರಸಭರಿತ ದ್ರಾಕ್ಷಿಯ ಗೊಂಚಲುಗಳು ಕಾಣುತ್ತವೆ. ಚಳಿಗಾಲವೆಂಬುದು ದ್ರಾಕ್ಷಿಯ ಋತುವೂ ಹೌದು. ತಿಳಿಗೆಂಪು, ಕಡು ಕೆಂಪು, ನೇರಳೆ, ಹಸಿರು ಬಣ್ಣಗಳ ಈ ಪುಟ್ಟ ಹಣ್ಣುಗಳನ್ನು ಮರೆಯದೆ ಮೆಲ್ಲುವುದಕ್ಕೆ ಕಾರಣಗಳು ಬಹಳಷ್ಟಿವೆ.
ಉತ್ಕರ್ಷಣ ನಿರೋಧಕಗಳು: ದ್ರಾಕ್ಷಿಯಲ್ಲಿ ಹಲವು ರೀತಿಯ ಫ್ಲೆವನಾಯ್ಡ್‌ಗಳಿವೆ. ವಿಟಮಿನ್‌ ಸಿ ಸಹ ಸಮೃದ್ಧವಾಗಿದೆ. ದ್ರಾಕ್ಷಿಯ (Benefits Of Grapes) ಹೊರಮೈ ಬಣ್ಣ ಯಾವುದೇ ಇದ್ದರೂ, ಅವೆಲ್ಲವುಗಳಲ್ಲೂ ಭರಪೂರ ಉತ್ಕರ್ಷಣ ನಿರೋಧಕಗಳಿವೆ. ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವುದೇ ಅಲ್ಲದೆ, ಹೃದ್ರೋಗ, ಕ್ಯಾನ್ಸರ್‌, ಪಾರ್ಶ್ವವಾಯುವಿನಂಥ ಮಾರಕ ರೋಗಗಳಿಂದ ರಕ್ಷಿಸುವಲ್ಲಿ ಇವು ಸಹಕಾರಿ.

Anti inflammatory properties Daruharidra Benefits

ಉರಿಯೂತ ಶಮನ

ದೇಹದಲ್ಲಿ ಎಲ್ಲಿಯೂ ಇರಬಹುದಾದ ಉರಿಯೂತವನ್ನು ಕಡಿಮೆ ಮಾಡಲು ಉತ್ಕರ್ಷಣ ನಿರೋಧಕಗಳು ನೆರವಾಗುತ್ತವೆ. ಅದರಲ್ಲೂ ಉರಿಯೂತದ ಕಾರಣಕ್ಕೇ ವಕ್ಕರಿಸಿಕೊಳ್ಳುವ ಆರ್ಥರೈಟಿಸ್‌ನಂಥ ಸಮಸ್ಯೆ ಇರುವವರಿಗೆ ದ್ರಾಕ್ಷಿ ಸೇವನೆ ಹಿತವಾಗಬಹುದು. ಕೀಲುನೋವು ಇನ್ನಿತರ ಉರಿಯೂತ ಸಂಬಂಧಿ ತೊಂದರೆಗಳು ಶಮನವಾಗಲು ಈ ಹಣ್ಣು ನೆರವಾಗುತ್ತದೆ.

Heart Health Fish Benefits

ಹೃದಯಕ್ಕೆ ಪೂರಕ

ದ್ರಾಕ್ಷಿಯಲ್ಲಿ ಪೊಟಾಶಿಯಂ ಅಂಶ ವಿಫುಲವಾಗಿದೆ. ಈ ಸತ್ವವು ರಕ್ತದ ಏರೊತ್ತಡ ನಿರ್ವಹಿಸುವಲ್ಲಿ ಪರಿಣಾಮಕಾರಿ. ಇದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಇದಲ್ಲದೆ, ದ್ರಾಕ್ಷಿಯಲ್ಲಿರುವ ಕೆಲವು ಉತ್ಕರ್ಷಣ ನಿರೋಧಕಗಳು ಕೊಲೆಸ್ಟ್ರಾಲ್‌ ಕಡಿಮೆ ಮಾಡುವ ಸಾಮರ್ಥ್ಯವನ್ನೂ ಹೊಂದಿವೆ. ಇದರಿಂದ ಹೃದಯದ ಆರೋಗ್ಯ ಇನ್ನಷ್ಟು ಸುಧಾರಿಸುತ್ತದೆ.

Grapes Benefits

ನೀರು

ನೀರನ್ನು ಕುಡಿದು ಮಾತ್ರವೇ ಪೂರೈಸಬೇಕೆಂದಿಲ್ಲ. ದ್ರಾಕ್ಷಿಯಂಥ ನೀರು ಹೆಚ್ಚಿರುವ ಹಣ್ಣುಗಳನ್ನು ತಿನ್ನುವ ಮೂಲಕವೂ ದಾಹ ತಣಿಸಿಕೊಳ್ಳಬಹುದು. ದೇಹದ ಉಷ್ಣತೆಯನ್ನು ನಿಯಂತ್ರಿಸಲು, ರಕ್ತ ಪರಿಚಲನೆ ಸುಲಲಿತವಾಗಿರಲು, ಜೀರ್ಣಕ್ರಿಯೆಯನ್ನು ಸಮರ್ಪಕವಾಗಿ ನಡೆಸಲು- ಹೀಗೆ ದೇಹದ ಹಲವಾರು ಕೆಲಸಗಳಿಗೆ ನೀರು ಅಗತ್ಯವಾಗಿ ಬೇಕು.

Grapes For Diabetics
Grapes For Diabetics

ಡಿಟಾಕ್ಸ್

ದೇಹದಲ್ಲಿ ಸೇರಿರುವ ಕಶ್ಮಲಗಳನ್ನು ಹೊರಹಾಕಿ, ಶರೀರವನ್ನು ನೈಸರ್ಗಿಕವಾಗಿ ಡಿಟಾಕ್ಸ್‌ ಮಾಡುವ ಸಾಮರ್ಥ್ಯವನ್ನು ದ್ರಾಕ್ಷಿ ಹೊಂದಿದೆ. ಇದರಲ್ಲಿ ತುಂಬಿರುವ ಉತ್ಕರ್ಷಣ ನಿರೋಧಕಗಳೇ ಹೆಚ್ಚಿನಾಂಶ ಡಿಟಾಕ್ಸಿಫೈ ಮಾಡುವ ಹೊಣೆಯನ್ನೂ ನಿರ್ವಹಿಸುತ್ತವೆ. ಅದರಲ್ಲೂ ಮುಖ್ಯವಾಗಿ ಕಿಡ್ನಿ ಮತ್ತು ಲಿವರ್‌ನ ಶುಚಿ ಮಾಡುವಲ್ಲಿ ಇದು ಹೆಚ್ಚಿನ ನೆರವು ನೀಡುತ್ತದೆ

healthy internal organs of human digestive system

ಪಚನಕಾರಿ

ದ್ರಾಕ್ಷಿಯಲ್ಲಿ ನೀರು ಮಾತ್ರವಲ್ಲ, ನಾರು ಸಹ ಹೇರಳವಾಗಿದೆ. ನಾರಿನಂಶ ಇರುವ ಆಹಾರಗಳು ನಮ್ಮ ಜೀರ್ಣಾಂಗಗಳ ಉತ್ತಮ ಬ್ಯಾಕ್ಟೀರಿಯಗಳನ್ನು ಹೆಚ್ಚಿಸುತ್ತವೆ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ. ಜೊತೆಗೆ ಬೇಡದ್ದನ್ನೆಲ್ಲಾ ದೇಹದಿಂದ ಹೊರದೂಡಲು ನೆರವಾಗಿ ಮಲಬದ್ಧತೆ ನಿವಾರಿಸುತ್ತವೆ. ಹೀಗಾಗಿ ದ್ರಾಕ್ಷಿ ತಿನ್ನುವುದಕ್ಕೆ ಕಾರಣಗಳು ಪ್ರಬಲವಾಗಿಯೇ ಇವೆ.

Bone Health In Winter

ಮೂಳೆಗಳ ಬಲವರ್ಧನೆ

ದ್ರಾಕ್ಷಿಯಲ್ಲಿ ಖನಿಜಗಳು ಮತ್ತು ಸೂಕ್ಷ್ಮ ಪೋಷಕಾಂಶಗಳು ಸಾಕಷ್ಟಿವೆ. ಪೊಟಾಶಿಯಂ, ಕ್ಯಾಲ್ಶಿಯಂ, ಮೆಗ್ನೀಶಿಯಂ ಖನಿಜಗಳು ಮೂಳೆಗಳ ಬಲವರ್ಧನೆಗೆ ನೆರವಾಗುವಂಥವು. ದ್ರಾಕ್ಷಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಆರ್ಥರೈಟಿಸ್‌ ಮಾತ್ರವಲ್ಲ, ಆಸ್ಟಿಯೊಪೊರೊಸಿಸ್‌ನಂಥ ಮೂಳೆ ಟೊಳ್ಳಾಗುವ ತೊಂದರೆಯನ್ನೂ ದೂರ ಮಾಡಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Rain News : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರದಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಅತಿ ಹೆಚ್ಚು ಮಳೆಯು ಪುತ್ತೂರು ಹಾಗೂ ರಾಯಚೂರಿನಲ್ಲಿ ತಲಾ 10 ಸೆಂ.ಮೀ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ 9, ಸಿರಾ ಮತ್ತು ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ, ಗಬ್ಬೂರು, ಬೆಳಗಾವಿಯಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ ರಾಯಚೂರಿನಲ್ಲಿ 39.4 ಡಿ. ಸೆ ದಾಖಲಾಗಿದೆ.

ಕಾಸರಗೋಡಿನಲ್ಲಿ ಗಾಳಿ ಮಳೆಗೆ ನೆಲಕ್ಕುರುಳಿದ ಬೃಹತ್ ಹೋರ್ಡಿಂಗ್‌

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೇರಳದ ಕಾಸರಗೋಡಿನ ಬಸ್ ನಿಲ್ದಾಣ ಬಳಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್‌ ನೆಲಕ್ಕುರುಳಿದ ಘಟನೆ ನಡೆದಿದೆ. ಹೋರ್ಡಿಂಗ್‌ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಹೋರ್ಡಿಂಗ್‌ ಬಿದ್ದು ಕೆಳಗಡೆ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಜನರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಹಾಸನದಲ್ಲಿ ಉರುಳಿ ಬಿದ್ದ ಮರ

ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮರವೊಂದು ಉರುಳಿ ಬಿದ್ದಿತ್ತು. ಪರಿಣಾಮ ಎರಡು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಗೆ ಮರ ಬಿದ್ದಿತ್ತು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಸ್ಥಳಕ್ಕಾಗಮಿಸಿ ಟ್ರಾಫಿಕ್‌ ಪೊಲೀಸರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿದರು.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮಳೆ ಜತೆಗೆ 60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ಕೇರಳ ಕರಾವಳಿಯಲ್ಲಿ ಚಂಡಮಾರುತ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತ ಮಳೆಯಾಗುವ (Rain News) ಮುನ್ಸೂಚನೆ ಇದೆ.

VISTARANEWS.COM


on

By

karnataka weather forecast karnataka rains
Koo

ಬೆಂಗಳೂರು: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಚಿಕ್ಕಮಗಳೂರಲ್ಲಿ ಮಳೆಗೆ ಮರ ಬಿದ್ದು ಮಹಿಳೆ ಸಾವು

ನಿನ್ನೆ ಭಾನುವಾರ ಚಿಕ್ಕಮಗಳೂರಲ್ಲಿ ಸುರಿದ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Karnataka Weather Forecast

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿತ್ತು. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ3 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ4 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ4 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ4 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ4 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ5 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು5 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ8 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ9 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ9 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ9 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ10 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ16 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ21 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ22 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌