Site icon Vistara News

Karnataka Weather : ರಾಜ್ಯದಲ್ಲಿ ಮಳೆ ಹೋಯ್ತು, ಮಂಜು ಬಂತು, ಚಳಿ ಆವರಿಸಿತು

No rain Only Dry weather in karnataka

ಬೆಂಗಳೂರು: ರಾಜ್ಯದಲ್ಲಿ ಮಳೆ (Rain News) ಸದ್ದಿಲ್ಲದಂತಾಗಿದೆ. ಸದ್ಯ ಬೆಳಗಿನ ಜಾವ ದಟ್ಟ ಮಂಜು ಆವರಿಸಿದರೆ ನಂತರ ಬಿಸಿಲು ಹೊರಗೆ ಇದ್ದವರಿಗೆ ಚುರುಕ್‌ ಎನಿಸಲಿದೆ. ಜತೆಗೆ ರಾತ್ರಿಯಾದರೆ ಚಳಿಯ ವಾತಾವರಣವು ಮೈ ನಡುಗಿಸಲಿದೆ. ಹೀಗೆ ಒಟ್ಟೊಟ್ಟಿಗೆ ಎಲ್ಲ ತರಹ ವಾತಾವರಣ ದಾಳಿ ಮಾಡುತ್ತಿದೆ. ರಾಜ್ಯದಲ್ಲಿಂದು ಒಣಹವೆ ಮುಂದುವರಿದಿದೆ. ಬೆಳಗ್ಗೆ ಇಬ್ಬನಿ ಬೀಳಲು ಆರಂಭವಾಗಿದ್ದು, ಮಳೆ ದೂರವಾದ ಲಕ್ಷಣ (Karnataka Weather Forecast) ಎದ್ದು ಕಾಣುತ್ತಿದೆ.

ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣವೇ ಮೇಲುಗೈ ಸಾಧಿಸಲಿದೆ. ದಕ್ಷಿಣ ಒಳನಾಡಿನ ಮಳೆ ಮುನ್ಸೂಚನೆ ಇಲ್ಲದಿದ್ದರೂ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ಮಲೆನಾಡಿನಲ್ಲೂ ಬೆಳಗ್ಗೆ-ರಾತ್ರಿ ಚಳಿ ಇದ್ದರೆ ಹಗಲಿನಲ್ಲಿ ಬಿಸಿಲು ಇರಲಿದೆ.

ಇದನ್ನೂ ಓದಿ:Mount Carmel College : ಕೋ ಎಜುಕೇಶನ್‌ಗೆ ಮೌಂಟ್‌ ಕಾರ್ಮೆಲ್‌ ಮುಕ್ತ; ಹುಡುಗರು ಬೇಡ ಅಂದ್ರಾ ಹೆಣ್ಮಕ್ಕಳು!?

ರಾಜ್ಯದ ಇಲ್ಲೆಲ್ಲ ಶುಷ್ಕ ವಾತಾವರಣ

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ. ಇನ್ನು ಉತ್ತರ ಒಳನಾಡಿನಲ್ಲಿ ಮಳೆಯೇ ಇಲ್ಲದಂತಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ಮಂಡ್ಯ, ಮೈಸೂರು, ರಾಮನಗರ, ತುಮಕೂರಲ್ಲಿ ಇಬ್ಬನಿಯೊಂದಿಗೆ ಶುಷ್ಕ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಮುಂಜಾನೆ ಮಂಜು

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಗರಿಷ್ಠ ಉಷ್ಣಾಂಶ 28 ಹಾಗೂ ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ: Lorry strike : ಜ.17ಕ್ಕೆ ಲಾರಿ ಚಾಲಕರ ಹಿಟ್‌; ಪೆಟ್ರೋಲ್‌, ಡೀಸೆಲ್‌ ಸಿಗದೇ ಸವಾರರಿಗೆ ಆಗುತ್ತಾ ಎಫೆಕ್ಟ್‌

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 28 ಡಿ.ಸೆ -17 ಡಿ.ಸೆ
ಮಂಗಳೂರು: 33 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 29 ಡಿ.ಸೆ – 17 ಡಿ.ಸೆ
ಗದಗ: 29 ಡಿ.ಸೆ – 18 ಡಿ.ಸೆ
ಹೊನ್ನಾವರ: 33 ಡಿ.ಸೆ- 22 ಡಿ.ಸೆ
ಕಲಬುರಗಿ: 30 ಡಿ.ಸೆ – 20 ಡಿ.ಸೆ
ಬೆಳಗಾವಿ: 29 ಡಿ.ಸೆ – 18 ಡಿ.ಸೆ
ಕಾರವಾರ: 34 ಡಿ.ಸೆ – 22 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version