ಕರ್ನಾಟಕ
ಭಾರತ ಇಬ್ಭಾಗವಾಗತ್ತೆ, ಕರ್ನಾಟಕ ಮೂರಾಗತ್ತೆ – ಇದು ಶಿವನಾಣೆ ಸತ್ಯ: ಬ್ರಹ್ಮಾಂಡ ಗುರೂಜಿ ಭವಿಷ್ಯ !
ಹಾಸನಾಂಬೆ ದೇಗುಲಕ್ಕೆ ಭೇಟಿಕೊಟ್ಟು ದೇವಿಯ ದರ್ಶನ ಪಡೆದ ಬ್ರಹ್ಮಾಂಡ ಗುರೂಜಿ ಭವಿಷ್ಯ ನುಡಿದರು. ದೆಹಲಿಯಲ್ಲಿ ಕಟ್ಟಲಾಗುತ್ತಿರುವ ಹೊಸ ಸಂಸತ್ ಭವನದಿಂದ ದೇಶಕ್ಕೆ ಅಪಾಯ ಎಂದೂ ಹೇಳಿದರು.
ಹಾಸನ: ವರ್ಷದ ಬಳಿಕ ಬಾಗಿಲು ತೆರೆದ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಬ್ರಹ್ಮಾಂಡ ಗುರೂಜಿ ನರೇಂದ್ರಬಾಬು ಶರ್ಮ, ಅಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ಭವಿಷ್ಯ ನುಡಿದಿದ್ದಾರೆ. ಹಾಗೇ, ಇತ್ತೀಚೆಗೆ ರಾಣಿಬೆನ್ನೂರಿನ ದೇವರಗುಡ್ಡದಲ್ಲಿ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ನುಡಿಯಲಾದ ‘ಯುವಕ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ’ ಎಂಬ ಭವಿಷ್ಯವನ್ನೂ ವಿಶ್ಲೇಷಿಸಿದ್ದಾರೆ. ಕರ್ನಾಟಕದ ವಿಧಾನಸೌಧದಿಂದ ಹಿಡಿದು ದೆಹಲಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸಂಸತ್ ಭವನದವರೆಗೆ ಬ್ರಹ್ಮಾಂಡ ಗುರೂಜಿ ಮಾತನಾಡಿದ್ದಾರೆ.
ಕಾರಣಿಕ ಭವಿಷ್ಯಕ್ಕೆ ಪ್ರತಿಕ್ರಿಯೆ ನೀಡಿದ ಬ್ರಹ್ಮಾಂಡ ಗುರೂಜಿ ‘ಸಣ್ಣ ವಯಸ್ಸಿನವರು (ಯುವಕರು) ಮುಖ್ಯಮಂತ್ರಿ ಆಗುತ್ತಾರೆ ಎಂದರೆ ಸಣ್ಣ ವಯಸ್ಸಿನವರೇ ಸಿಎಂ ಆಗುತ್ತಾರೆ ಎಂದಲ್ಲ. ಸಣ್ಣ ಅನುಭವ ಇರುವವರು ಅಂತ ಅರ್ಥ. ಚಿಕ್ಕ ವಯಸ್ಸಿನವರಿಗೆಲ್ಲ ಮುಖ್ಯಮಂತ್ರಿಯಾಗಲು ಯಾರೂ ಬಿಡುವುದಿಲ್ಲ. ಈಗ ಶನಿಯ ಅಧಿಪತ್ಯವಿದೆ. ಶನಿ ಶೂದ್ರಪ್ರಿಯ. ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಹುದ್ದೆಗೆ ಏರಿಸಿದಂತೆ, ಇಲ್ಲಿಯೂ ಕಂಡರೂ ಕಾಣದಂತೆ ಇದ್ದು, ಅಷ್ಟೊಂದು ಪ್ರಸಿದ್ಧಿ ಪಡೆದಿಲ್ಲದವರನ್ನು ಕರೆತಂದು ಮುಖ್ಯಮಂತ್ರಿ ಮಾಡಬಹುದು. ಮುಂದೆ ಅಧಿಕಾರಕ್ಕೆ ಬರಲಿರುವ ಬೆರಕೆ ಸರ್ಕಾರದಲ್ಲಿ ಯಾರು ಸಿಎಂ ಆಗುತ್ತಾರೆ ಎಂದು ಹೇಳೋದೇ ಕಷ್ಟ’ ಎಂದು ಹೇಳಿದರು.
ರಾಜ್ಯ ಮೂರು ಭಾಗ ಆಗಲಿದೆ !
‘ಬ್ರಹ್ಮಾಂಡ ಗುರೂಜಿ ಇನ್ನೊಂದು ಮಹತ್ವದ ಭವಿಷ್ಯ ಹೇಳಿದ್ದಾರೆ. ‘ನಮಗೆ ಇನ್ನು 31 ವರ್ಷ ಮಾತ್ರ ಹೀಗಿರಲು ಅವಕಾಶ ಇದೆ. 31 ವರ್ಷದ ಬಳಿಕ ಕರ್ನಾಟಕ ಮೂರು ಭಾಗವಾಗುತ್ತದೆ. ಭಾರತ ಇಬ್ಭಾಗವಾಗುತ್ತದೆ. ಕರ್ನಾಟಕ ಮೂರು ಭಾಗವಾಗಿ ಮೂರು ಮುಖ್ಯಮಂತ್ರಿಗಳಾಗುತ್ತಾರೆ, ಮೂವರು ರಾಜ್ಯಪಾಲರೂ ಬರುತ್ತಾರೆ. ಬೆಳಗಾವಿಯೂ ಪ್ರತ್ಯೇಕ ರಾಜ್ಯವಾಗುತ್ತದೆ. ಘಟಪ್ರಭಾ, ಮಲಪ್ರಭಾ ನದಿಗಳ ಪ್ರವಾಹ ಹೆಚ್ಚುತ್ತದೆ. ವಿಧಾನಸೌಧವೂ ಮುಳುಗುತ್ತದೆ ಎಂದು ವೀರಪ್ರಮೇಯದಲ್ಲಿ ಬರೆಯಲಾಗಿದೆ. ಹಾಸನಾಂಬೆಯ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ. ಇದು ಶಿವನಾಣೆ, ದೇವರಾಣೆ ಸತ್ಯ ಎಂದಿದ್ದಾರೆ. ಇನ್ನು ಭಾರತ ಎರಡು ಭಾಗವಾಗಿ ಎರಡು ರಾಷ್ಟ್ರಪತಿಯೂ ಬರುತ್ತಾರೆ’ ಎಂದು ಅವರು ತಿಳಿಸಿದ್ದಾರೆ. ಅಷ್ಟೇ ಅಲ್ಲ ‘31 ವರ್ಷದಲ್ಲಿ ಹೀಗೆಲ್ಲ ಆಗುತ್ತದೆ ಎಂದು ನಾನು ಹೇಳುತ್ತಿರುವುದಲ್ಲ. ವೀರ ಬ್ರಹ್ಮಯ್ಯ, ಕೈವಾರ ತಾತಯ್ಯ, ಮಂಟೆ ಸ್ವಾಮಿಗಳು ಶಾಸನ ಬರೆದು ಇಟ್ಟಿದ್ದಾರೆ. ಅದರಂತೆ ಇವೆಲ್ಲ ಖಂಡಿತವಾಗಿಯೂ ಸತ್ಯವಾಗುತ್ತದೆ’ ಎಂದೂ ಅವರು ಹೇಳಿದ್ದಾರೆ.
ಪಾರ್ಲಿಮೆಂಟ್ ಹೀಗೆ ಕಟ್ಟಬಾರದಿತ್ತು !
ಇದೀಗ ಹೊಸದಾಗಿ ಕಟ್ಟುತ್ತಿರುವ ಸಂಸತ್ತು ಸರಿಯಾಗಿಲ್ಲ. ಇದರ ಪರಿಣಾಮ ಘೋರವಾಗಿರುತ್ತದೆ. ಈ ಬಗ್ಗೆ ವೀರ ಬ್ರಹ್ಮ ಸ್ವಾಮಿ ಚರಿತ್ರೆಯಲ್ಲೂ ಉಲ್ಲೇಖವಿದೆ. ಪಾರ್ಲಿಮೆಂಟ್ ಗುಂಡಾಗಿರಬೇಕು, ಚೌಕಾಗಿರಬೇಕು. ಆದರೆ ಇದೀಗ ತ್ರಿಕೋನಾತ್ಮಿಕ ದೀಪಕವಾಗಿದೆ. ಚಂದ್ರ ಇಲ್ಲವೇ ಕುಜನಾಂಶವಾಗಿರದೆ, ತ್ರಿಕೋನಾಕೃತಿ ಮಾಡಿದಾಗ ಅದರ ಪರಿಣಾಮ ಉಗ್ರವಾಗಿರುತ್ತದೆ. ದೇಶದ ಮೇಲೆ, ಜನಗಳ ಮೇಲೆ ಒತ್ತಾಯ, ಒತ್ತಡಗಳು ಜಾಸ್ತಿ ಆಗುತ್ತವೆ. ಡಿಸೆಂಬರ್ ಅಂತ್ಯಕ್ಕೆ 5 ಗ್ರಹಗಳು ಒಟ್ಟಿಗೆ ಬಂದು, ಅವು ಹಾಗೇ ಒಂಭತ್ತು ತಿಂಗಳು ಕೂರುತ್ತವೆ. ಎರಡು ಗ್ರಹಣಗಳ ಹತ್ತಿರ ಬರಬಾರದು. ಹೀಗಾದಾಗ ನೀರಿನ ಅಭಾವ, ಬೆಂಕಿ ಅವಘಡ, ಗಲಾಟೆ, ಘರ್ಷಣೆ, ಸ್ವಂತದವರ ಹತ್ತಿರ ಜಗಳಗಳು ಹೆಚ್ಚಾಗುತ್ತವೆ ಎಂದು ಬ್ರಹ್ಮಾಂಡ ಗುರೂಜಿ ತಿಳಿಸಿದ್ದಾರೆ.
ಇದನ್ನೂ ಓದಿ: ದೇವಗಢದ ಬೈದ್ಯನಾಥನ ದರ್ಶನ ಮಾಡಿದ ಪ್ರಧಾನಿ ಮೋದಿ, ಏನೀ ಕಾರಣಿಕ ದೇಗುಲದ ವಿಶೇಷ?
ಕರ್ನಾಟಕ
Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು
Hosakerehalli Lake: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ಹೊಸಕೆರೆಹಳ್ಳಿ ಕೆರೆಯ (Hosakerehalli Lake) ಮಧ್ಯೆ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಿದ ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕ್ರಮ ಕೈಗೊಳ್ಳಲು ಸೂಚಿಸಿದ ಬೆನ್ನಲ್ಲೇ ಇಬ್ಬರು ಮಹಿಳಾ ಅಧಿಕಾರಿಗಳನ್ನು ಅಮಾನತು ಮಾಡಿ ಬಿಬಿಎಂಪಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್.ಕೆ.ಲಕ್ಷ್ಮೀಸಾಗರ್ ಆದೇಶ ಹೊರಡಿಸಿದ್ದಾರೆ.
ಘನತ್ಯಾಜ್ಯ ವಿಭಾಗದ ಇಇ ಎಚ್.ಎಸ್.ಮೇಘ ಹಾಗೂ ಎಇ ಶಿಲ್ಪ ಅಮಾನತುಗೊಂಡ ಅಧಿಕಾರಿಗಳು. ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆಯ ಮಧ್ಯೆ ರಸ್ತೆ ನಿರ್ಮಾಣಕ್ಕೆ ಕಾರಣಕರ್ತರಾದ ಅಧಿಕಾರಿಗಳು, ಎಂಜಿನಿಯರ್ಗಳನ್ನು ಸೋಮವಾರ (ಜೂನ್ 5) ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದರು. ಹೀಗಾಗಿ ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ಇದನ್ನೂ ಓದಿ | ಗ್ಲೋಬಲ್ ಬೆಂಗಳೂರು ಮಾಡಲು ಸಲಹಾ ಸಮಿತಿ; ಇದು ಡಿಕೆಶಿ ಮಾಸ್ಟರ್ ಪ್ಲ್ಯಾನ್!
ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸೋಮವಾರ ಮಧ್ಯಾಹ್ನ ಸಭೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಪ್ರಶ್ನಿಸಿದ್ದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪ ಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ದರು.
ಕರ್ನಾಟಕ
Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ
Koppal News: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಕೊಪ್ಪಳ: ರಾಯಚೂರು ಜಿಲ್ಲೆಯ ರೇಖಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಒಬ್ಬ ಬಾಲಕ ಮೃತಪಟ್ಟು, 30ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಪ್ರಕರಣ ನಡೆದ ಬೆನ್ನಲ್ಲೇ ಅಂತಹುದೇ ಪ್ರಕರಣ ಜಿಲ್ಲೆಯಲ್ಲಿ (Koppal News) ನಡೆದಿದೆ. ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆಯೊಬ್ಬರು ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.
ಹೊನ್ನಮ್ಮ ಶಿವಪ್ಪ (65) ಮೃತ ಮಹಿಳೆ. ಬಸರಿಹಾಳ ಗ್ರಾಮದಲ್ಲಿ ಸುಮಾರು ಮೂರು ದಿನಗಳಿಂದ ವಾಂತಿ- ಭೇದಿಯಿಂದ ಹಲವು ಜನರು ಬಳಲುತ್ತಿದ್ದರು. ಅಸ್ವಸ್ಥಗೊಂಡವರನ್ನು ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಲುಷಿತ ನೀರು ಪೂರೈಕೆಯಾಗಿದೆ ಸ್ಥಳೀಯರು ಆರೋಪಿಸಿದ್ದಾರೆ. ವೃದ್ಧೆ ಸಾವು ಬಳಿಕ ದಿನದಿಂದ ದಿನಕ್ಕೆ ಅಸ್ವಸ್ಥರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಗಮನಕ್ಕೆ ತಾರದೆ ನಿರ್ಲಕ್ಷ್ಯ ವಹಿಸಿದ ಆರೋಪ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಕೇಳಿಬಂದಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
ಟಯರ್ ಸಿಡಿದು ಪಲ್ಟಿ ಹೊಡೆದ ಕಾರು; ಐವರಿಗೆ ಗಾಯ
ಮಂಡ್ಯ: ಟಯರ್ ಸಿಡಿದು ಕಾರು ಪಲ್ಟಿಯಾಗಿದ್ದರಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಚಿಕ್ಕಮಂಡ್ಯ ಬಳಿ ಸೋಮವಾರ ನಡೆದಿದೆ. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು ಮೂಲದ ಅರ್ಜುನ್, ಮಂಜುನಾಥ್ ಜಿ.ಅಡಿಗ, ಶ್ರೀಕಾಂತ್, ಕೃಷ್ಣ, ಮೂರ್ತಿ ಗಾಯಗೊಂಡವರು.
ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದಾಗ ಚಿಕ್ಕಮಂಡ್ಯ ಸಮೀಪಿಸುತ್ತಿದ್ದಂತೆ ಕಾರಿನ ಟಯರ್ ಸ್ಫೋಟಗೊಂಡಿದೆ. ಹೀಗಾಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಕರ್ನಾಟಕ
World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ
World Environment Day: ಶಿವಮೊಗ್ಗದ ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಶಿವಮೊಗ್ಗ: ಪರಿಸರ ದಿನಾಚರಣೆ ನಿಮಿತ್ತ ವಿಸ್ತಾರ ನ್ಯೂಸ್ ಹಮ್ಮಿಕೊಂಡಿದ್ದ ಅಭಿಯಾನಕ್ಕೆ (World Environment Day) ಶಿವಮೊಗ್ಗದಲ್ಲಿ ಭಾರಿ ಬೆಂಬಲ ವ್ಯಕ್ತವಾಗಿದೆ. ತುಂಗಾ ಮೇಲ್ದಂಡೆ ಕಾಲುವೆಯ ಇಕ್ಕೆಲಗಳಲ್ಲಿ ಸಹಸ್ರ ವೃಕ್ಷಾರೋಪಣ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ದೊರಕಿದೆ. ನಗರ ವ್ಯಾಪ್ತಿಯ 11 ಕಿ.ಮೀ. ಉದ್ದದ ಕಾಲುವೆಯ ಎರಡೂ ಬದಿಗಳಲ್ಲಿ ಸಾವಿರ ಗಿಡಗಳನ್ನು ನೆಡುವ ಬೃಹತ್ ಅಭಿಯಾನಕ್ಕೆ ಆರ್ಎಸ್ಎಸ್ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಚಾಲನೆ ನೀಡಿದರು.
ನಿರ್ಮಲ ತುಂಗಾ ಅಭಿಯಾನ ತಂಡ, ಪರ್ಯಾವರಣ ಸಂರಕ್ಷಣೆ, ಸರ್ಜಿ ಫೌಂಡೇಶನ್, ವಿಸ್ತಾರ ನ್ಯೂಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲಾಡಳಿತ, ತುಂಗಾ ಮೇಲ್ದಂಡೆ ಯೋಜನೆ, ಅರಣ್ಯ ಇಲಾಖೆ ಸಹಯೋಗ ನೀಡಿದ್ದು, ನಗರದ ಪರಿಸರ ಪ್ರೇಮಿಗಳು ಪರಿಸರ ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.
ಆರ್ಎಸ್ಎಸ್ ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ಜಿಲ್ಲಾ ಸಂಘಚಾಲಕ ರಂಗನಾಥ, ಸರ್ಜಿ ಫೌಂಡೇಶನ್ ಮುಖ್ಯಸ್ಥ ಡಾ. ಧನಂಜಯ ಸರ್ಜಿ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ದಿನೇಶ್ ಶೇಟ್, ತ್ಯಾಗರಾಜ ಮಿತ್ಯಾಂತ, ಬಾಲಕೃಷ್ಣ ನಾಯ್ಡು, ಗೊ.ಕೃ. ಭಾಗವತ್, ರಂಗಭೂಮಿ ಮಂಜು, ನಾಗಭೂಷಣ್ ಸ್ವಾಮಿ, ಕುಮಾರಿಪ್ರಣಮ್ಯ, ಪ್ರಣೀತಾ, ಮುಂತಾದವರು ಇದ್ದರು.
ಉತ್ತರ ಕನ್ನಡ
Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ
Uttara Kannada News: ಶಿರಸಿಯ ಹೊರವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದ್ದಾರೆ.
ಶಿರಸಿ: ಪರಿಸರ ಸಂರಕ್ಷಣೆಗೆ (Environmental protection) ಪ್ರತಿಯೊಬ್ಬರೂ (Everyone) ಕಂಕಣ ಬದ್ಧರಾಗಬೇಕು ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ನಗರದ ಹೊರವಲಯದ ವೇದ ಆರೋಗ್ಯ ಕೇಂದ್ರದಲ್ಲಿ ಸೋಮವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷಾರೋಪಣ ನಡೆಸಿ ಮಾತನಾಡಿದ ಶ್ರೀಗಳು, ಪ್ರಧಾನಿ ನರೇಂದ್ರ ಮೋದಿ ಅವರೂ ಸ್ವಚ್ಛ ಭಾರತ, ಕಸ ಮುಕ್ತ ಭಾರತದ ಕನಸು ಕಂಡಿದ್ದಾರೆ. ಹುಕ್ಕೇರಿ ಮಠದಿಂದಲೂ ಪ್ಲಾಸ್ಟಿಕ್ ಚೀಲ ಮುಕ್ತ ಮಾಡುವಲ್ಲಿ ನಮ್ಮದೇ ಕೊಡುಗೆ ಕೊಡಬೇಕು ಎಂದು 2.80 ಲಕ್ಷ ಬಟ್ಟೆ ಚೀಲಗಳನ್ನು ಹೊಲಿಸಿ ವಿತರಣೆ ಮಾಡಿದ್ದೆವು ಎಂದರು.
ಇದನ್ನೂ ಓದಿ: Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
ಒಂದು ವೃಕ್ಷವು ಸ್ವಚ್ಛ ಮನದಿಂದ ಎಷ್ಟೆಲ್ಲ ನೆರವಾಗುತ್ತದೆ. ಹಾಗೆ ಪರಿಸರದ ಉಳಿವಿಗೆ ಸರ್ವರೂ ಕಂಕಣ ಬದ್ಧರಾಗಬೇಕು. ಇಲ್ಲವಾದರೆ ಭವಿಷ್ಯಕ್ಕೆ ದೊಡ್ಡ ಕಂಟಕ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, 1974 ರಿಂದ ಪರಿಸರದ ದಿನ ಆಚರಣೆ ಮಾಡುತ್ತಿದ್ದೇವೆ. ಈ ಬಾರಿಯ ಘೋಷ ವಾಕ್ಯ ಪ್ಲಾಸ್ಟಿಕ್ ಮಾಲಿನ್ಯ ತಡೆಯಬೇಕು. ಎಲ್ಲರಿಗೂ ವೈಯಕ್ತಿಕ, ಸಾಮಾಜಿಕ, ಕೌಟುಂಬಿಕ, ಸಂಘಟಿತ ಜೀವನದಲ್ಲಿ ಪರಿಸರದ ಮಹತ್ವ ಅರಿವಿದೆ. ಆದರೆ, ಈ ಅರಿವನ್ನು ವೈಯಕ್ತಿಕ ಜೀವನದಲ್ಲಿ ಅನುಷ್ಠಾನಕ್ಕೆ ತರಬೇಕು ಎಂದರು.
ಭವಿಷ್ಯದ ಜನಾಂಗದ ಭವಿಷ್ಯ ಅಂಧಕಾರಕ್ಕೆ ಹೋಗದಂತೆ ಪರಿಸರ ಸಂರಕ್ಷಿಸಬೇಕು. ಯಾರೂ ಉದಾಸೀನ ಮಾಡದೇ ಪರಿಸರ ಸಂರಕ್ಷಣೆ ಮಾಡಬೇಕು ಎಂದೂ ಹೇಳಿದರು.
ಇದನ್ನೂ ಓದಿ: Eco friendly Fashion: ಪರಿಸರ ಸ್ನೇಹಿ ಉಡುಪುಗಳಿಗೂ ಸಿಕ್ತು ಗ್ಲಾಮರ್ ಟಚ್
ಪ್ರಸಿದ್ಧ ವೈದ್ಯ ಡಾ. ವೆಂಕಟ್ರಮಣ ಹೆಗಡೆ ಮಾತನಾಡಿ, ಪ್ರಕೃತಿ ಸಂರಕ್ಷಣೆ ಎಲ್ಲರ ಜವಾಬ್ದಾರಿ. ನಿಸರ್ಗದ ಉಳಿದರೆ ಮಾತ್ರ ಎಲ್ಲ ಜೀವಿಗಳ ಉಳಿವು. ಈ ಸತ್ಯ ಅರಿತರೆ ಮಾತ್ರ ಪರಿಸರ ಉಳಿಸುವ ಜವಬ್ದಾರಿ ಹೃದಯದಿಂದ ಆರಂಭವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಗೀತಾ ಹೆಗಡೆ, ನಾರಾಯಣ ಹೆಗಡೆ ಸೇರಿದಂತೆ ಇತರರು ಇದ್ದರು.
-
ಕರ್ನಾಟಕ18 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ16 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ9 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ಕರ್ನಾಟಕ13 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ದೇಶ14 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ17 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ9 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ16 hours ago
ಕಲಬುರಗಿಯಲ್ಲಿ ಚಂಡಿಕಾ ಹೋಮದ ಬೆಂಕಿಯಲ್ಲಿ ಕಾಣಿಸಿಕೊಂಡ ದುರ್ಗಾ ದೇವಿ!; ಇಲ್ಲಿದೆ ನೋಡಿ ಫೋಟೊ