Karwar News : ಭತ್ತದ ಬಣವೆಗೆ ಬೆಂಕಿ ತಗುಲಿ 30 ಸಾವಿರ ರೂ. ನಷ್ಟ - Vistara News

ಉತ್ತರ ಕನ್ನಡ

Karwar News : ಭತ್ತದ ಬಣವೆಗೆ ಬೆಂಕಿ ತಗುಲಿ 30 ಸಾವಿರ ರೂ. ನಷ್ಟ

Karwar News | ರೈತರೊಬ್ಬರು ಬೆಳೆದ ಭತ್ತದ ಪೈರನ್ನು ಗದ್ದೆಯಲ್ಲಿ ಬಣವೆ ಹಾಕಿರುವುದಕ್ಕೆ ಬೆಂಕಿ ತಗುಲಿ 30 ಸಾವಿರ ರೂ. ನಷ್ಟ ಉಂಟಾಗಿದೆ. ಗ್ರಾಮ ಲೆಕ್ಕಾಧಿಕಾರಿ, ಗ್ರಾಪಂ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

VISTARANEWS.COM


on

Fire in the stack karwar
ಹೊತ್ತಿ ಉರಿಯುತ್ತಿರುವ ಗದ್ದೆಯಲ್ಲಿ ಹಾಕಿದ್ದ ಬಣವೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಕುಮಟಾ ತಾಲೂಕಿನ (Karwar News) ಹೆಗಡೆಯ ಕಲ್ಕೊಡ ರಸ್ತೆಯ ಶ್ರೀಕೃಷ್ಣ ದೇವಸ್ಥಾನ ಎದುರಿನ ಗದ್ದೆಯಲ್ಲಿ ಹಾಕಿದ್ದ ಭತ್ತದ ಬಣವೆಗೆ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾಗಿ ನಷ್ಟ ಉಂಟಾಗಿದೆ.

ಹೆಗಡೆ ಗ್ರಾಮದ ರೈತ ಶೇಷಗಿರಿ ವೆಂಕಟ್ರಮಣ ನಾಯ್ಕ ಎಂಬುವವರು ತಾವು ಬೆಳೆದ ಭತ್ತದ ಪೈರನ್ನು ಗದ್ದೆಯಲ್ಲಿ ಬಣವೆ ಹಾಕಿದ್ದರು. ಬಣವೆಯ ಮೇಲ್ಭಾಗದಲ್ಲಿ ವಿದ್ಯುತ್ ಲೈನ್ ಹಾದು ಹೋಗಿದೆ. ಅಲ್ಲಿ ಎರಡು ಹಕ್ಕಿಗಳು ಕುಳಿತುಕೊಂಡಿದ್ದು, ಅವುಗಳ ರೆಕ್ಕೆ ಭಾಗಕ್ಕೆ ಕರೆಂಟಿನಿಂದ ಬೆಂಕಿ ತಗುಲಿದೆ. ಅಲ್ಲಿ ಹೊತ್ತಿಕೊಂಡ ಬೆಂಕಿಯು ಬಣವೆಯ ಮೇಲೆ ಬಿದ್ದು, ಅವಘಡ ಸಂಭವಿಸಿದೆ.

ಇದನ್ನೂ ಓದಿ | Salute to police | ಅತಿ ಎತ್ತರದ ಹೋರ್ಡಿಂಗ್‌ ಟವರಲ್ಲಿ ಸಿಕ್ಕಿ ಒದ್ದಾಡುತ್ತಿದ್ದ ಪಾರಿವಾಳವನ್ನು ಒಂಟಿಯಾಗಿ ಹತ್ತಿ ರಕ್ಷಿಸಿದ ಪೊಲೀಸ್‌!

ಬೆಂಕಿಯ ಕೆನ್ನಾಲಿಗೆಗೆ ನಾಲ್ಕು ಬಣವೆಗಳು ಸಂಪೂರ್ಣ ಭಸ್ಮವಾಗಿವೆ. ಈ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳವು ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಮೂಲಕ ಗದ್ದೆಗಳಿಗೆ ಬೆಂಕಿ ಹರಡದಂತೆ ಎಚ್ಚರ ವಹಿಸಿದೆ. ಗ್ರಾಮ ಲೆಕ್ಕಾಧಿಕಾರಿ ವಿನೋದ್‌ ರಾವ್ ಸ್ಥಳಕ್ಕೆ ಭೇಟಿ ನೀಡಿ ಸುಮಾರು 30 ಸಾವಿರ ರೂ. ನಷ್ಟ ಸಂಭವಿಸಿರುವುದಾಗಿ ಅಂದಾಜಿಸಿದ್ದಾರೆ.

ಅಲ್ಲದೆ, ಘಟನಾ ಸ್ಥಳಕ್ಕೆ ಹೆಗಡೆ ಗ್ರಾಪಂ ಪಿಡಿಒ ವೆಂಕಟ್ರಮಣ ಪಟಗಾರ, ಗ್ರಾಪಂ ಸದಸ್ಯರಾದ ಬಿ.ಜಿ. ಶಾನಭಾಗ, ರಾಮಚಂದ್ರ ಪಟಗಾರ, ವಿದ್ಯಾ ಗೌಡ ಆನಂದು ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು. ಬೆಂಕಿ ನಂದಿಸಲು ಸ್ಥಳೀಯರಾದ ಮೋಹನ ಶಾನಭಾಗ, ಅಮರನಾಥ ಭಟ್ಟ, ಪ್ರಸನ್ನ ನಾಯ್ಕ ಕಲ್ಕೊಡ ಹಾಗೂ ಗ್ರಾಮಸ್ಥರು ಸಹಕರಿಸಿದರು.

ಇದನ್ನೂ ಓದಿ | BWSSB Corruption | ಕೋಟ್ಯಂತರ ರೂಪಾಯಿ ನುಂಗಿದ್ದ ಜಲಮಂಡಳಿಯ 13 ಭ್ರಷ್ಟ ಅಧಿಕಾರಿಗಳು, ಸಿಬ್ಬಂದಿ ಅಮಾನತು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Karnataka Weather Forecast : ವಾಯುಭಾರ ಕುಸಿತದಿಂದಾಗಿ ಕೇರಳ ಕರಾವಳಿಯಲ್ಲಿ ಚಂಡಮಾರುತ ಎದ್ದಿದೆ. ಇದರ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಗಾಳಿಯೊಂದಿಗೆ ಗುಡುಗು ಸಹಿತ ವಿಪರೀತ ಮಳೆಯಾಗುವ (Rain News) ಮುನ್ಸೂಚನೆ ಇದೆ.

VISTARANEWS.COM


on

By

karnataka weather forecast karnataka rains
Koo

ಬೆಂಗಳೂರು: ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ (Karnataka Weather Forecast) ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ (Karnataka Rains) ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಕೆಲವು ಸ್ಥಳಗಳಲ್ಲಿ ಗಾಳಿ ವೇಗವು 40-50 ಕಿ.ಮೀನಲ್ಲಿ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆಯಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಗಾಳಿಯೊಂದಿಗೆ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರದಲ್ಲೂ ಇದೇ ಪರಿಸ್ಥಿತಿ ಇರಲಿದೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

ಚಿಕ್ಕಮಗಳೂರಲ್ಲಿ ಮಳೆಗೆ ಮರ ಬಿದ್ದು ಮಹಿಳೆ ಸಾವು

ನಿನ್ನೆ ಭಾನುವಾರ ಚಿಕ್ಕಮಗಳೂರಲ್ಲಿ ಸುರಿದ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದರು. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು.

Karnataka Weather Forecast

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿತ್ತು. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗಿತ್ತು. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Heavy Rain News : ರಾಜ್ಯದ ಹಲವು ಭಾಗಗಳಲ್ಲಿ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಗುಡುಗು ಸಹಿತ ಭಾರಿ ಗಾಳಿ ಮಳೆ ಅನಾಹುತಗಳು ಸಂಭವಿಸಿದೆ. ಭಾನುವಾರ ಚಿಕ್ಕಮಗಳೂರಲ್ಲಿ ವಿಪರೀತ ಮಳೆಯಾಗುತ್ತಿದ್ದರೆ, ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆಯು ನೆಲಕಚ್ಚಿದೆ.

VISTARANEWS.COM


on

By

Karnataka Weather Forecast Heavy rain in chikkmagalur
Koo

ಚಿಕ್ಕಮಗಳೂರು/ಬೆಂಗಳೂರು: ಭಾನುವಾರ ರಾಜ್ಯದ ವಿವಿಧೆಡೆ ವರುರ್ಣಾಭಟ (Karnataka Weather Forecast) ಜೋರಾಗಿದೆ. ಚಿಕ್ಕಮಗಳೂರಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮರವೊಂದು ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಯ ಮೇಲೆ ಬಿದ್ದಿದೆ. ಮರದ ಅಡಿ ಸಿಲುಕಿದ ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಸವಿತಾ (48) ಮೃತ ದುರ್ದೈವಿ. ಚಿಕ್ಕಮಗಳೂರಿನ ಎನ್‌ಆರ್‌ ಪುರ ‌ತಾಲೂಕಿನ ಕಟ್ಟಿಮನಿ ಗ್ರಾಮದ ಬಳಿ ಘಟನೆ ನಡೆದಿದೆ.

ಇದೇ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ‌ಕಾರಿನ ಮೇಲೂ ಮರ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ‌ ಮೂವರು ಗಂಭೀರ ಗಾಯಗೊಂಡಿದ್ದಾರೆ. ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಸ್ಥಳೀಯರು ಗಾಯಾಳುಗಳ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಎನ್ ಆರ್ ಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Karnataka Weather Forecast

ಇನ್ನೂ ಮಳೆಯ (Rain News) ಅವಾಂತರಕ್ಕೆ ಜನರು ಕಂಗಲಾಗಿದ್ದಾರೆ. ಚಿಕ್ಕಮಗಳೂರು ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಸುತ್ತಮುತ್ತ ಗುಡುಗು, ಸಿಡಿಲು ಬಿರುಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ. ಶಿರವಾಸೆ ಗ್ರಾ.ಪಂ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಕೂಲಿ ಕಾರ್ಮಿಕರು ಪರದಾಟ ಅನುಭವಿಸುತ್ತಿದ್ದಾರೆ. ಇತ್ತ ನಿರಂತರ ಮಳೆಯಿಂದಾಗಿ ರೈತರು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿದೆ. ಕಾಫಿನಾಡ ಬಯಲುಸೀಮೆ ಭಾಗದಲ್ಲೂ ಧಾರಾಕಾರ ಮಳೆಯಾಗಿದೆ. ಕಳೆದೊಂದು ಗಂಟೆಯಿಂದ ಕಡೂರು, ತರೀಕೆರೆ, ಅಜ್ಜಂಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಬಯಲು ಸೀಮೆ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ತರೀಕೆರೆ, ಅಜ್ಜಂಪುರ ತಾಲೂಕಿನ ಹಲವು ಭಾಗಗಳಲ್ಲೂ ಮಳೆ ಸುರಿಯುತ್ತಿದೆ. ಚಿಕ್ಕಮಗಳೂರು ನಗರದ ಕೋಟೆ, ಹಿರೇಮಗಳೂರು, ಜಯನಗರ ಶಂಕರಪುರ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳಸಾಪುರ, ಬೆಳವಾಡಿ, ಮರ್ಲೆ, ತಿಳಿದಂತೆ ಹಲವು ಗ್ರಾಮಗಳಲ್ಲಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೆಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

ಬೆಂಗಳೂರಲ್ಲೂ ಮಳೆ ಮೋಡಿ

ವೀಕೆಂಡ್‌ ಮೂಡ್‌ನಲ್ಲಿದ್ದ ಸಿಟಿ ಮಂದಿಗೆ ಮಳೆಯು ಮೋಡಿ ಮಾಡಿದೆ. ಬೆಂಗಳೂರಿನ ಉಲ್ಲಾಳ, ನಾಗರಬಾವಿ, ವಿಜಯನಗರ, ಶೇಷಾದ್ರಿಪುರಂ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇತ್ತ ಕೆಲ ರಸ್ತೆಗಳಲ್ಲಿ ನೀರು ನಿಂತು ಕೆರೆಯಂತಾಗಿದೆ. ಪಾದಾಚಾರಿಗಳು ರಸ್ತೆ ದಾಟಲು ಆಗದೆ ಪರದಾಡುವಂತಾಗಿದೆ.

ಇದನ್ನೂ ಓದಿ: Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ಮಳೆ ಅವಾಂತರಕ್ಕೆ ಬೈಕ್‌ಗಳಿಗೆ ಹಾನಿ

ಹುಬ್ಬಳ್ಳಿಯಲ್ಲಿ ನಿನ್ನೆ ಶನಿವಾರ ಸುರಿದ ಮಳೆಯಿಂದ ಅವಾಂತರ‌ವೇ ಸೃಷ್ಟಿಯಾಗಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಕಮರ್ಷಿಯಲ್ ಕಾಂಪ್ಲೆಕ್ಸ್‌ನಲ್ಲಿದ್ದ 40ಕ್ಕೂ ಹೆಚ್ಚು ಬೈಕ್‌ಗಳಿಗೆ ಹಾನಿಯಾಗಿದೆ. ಕಮರ್ಷಿಯಲ್ ಕಾಂಪ್ಲೆಕ್ಸ್‌ನ ಬೇಸ್ಮೇಂಟ್‌ನಲ್ಲಿ ಮಳೆ ನೀರು ನುಗ್ಗಿದ್ದು, ತಡೆಗೋಡೆ ಕುಸಿದು ಕೆಲವು ಬೈಕ್‌ಗಳಿಗೆ ಹಾನಿಯಾಗಿದೆ. ಕಾಂಪ್ಲೆಕ್ಸ್‌ ಸಿಬ್ಬಂದಿ ಮೆಕ್ಯಾನಿಕಲ್ ಕರೆದುಕೊಂಡು ಬಂದು ಬೈಕ್ ರೀಪೇರಿ ಮಾಡಿಸುತ್ತಿದ್ದಾರೆ.

Karnataka Weather Forecast

ಚಿಕ್ಕಬಳ್ಳಾಪುರ‌ದಲ್ಲಿ ನೆಲಕಚ್ಚಿದ ಪಪ್ಪಾಯಿ ಬೆಳೆ

ಮಳೆಯ ಆರ್ಭಟಕ್ಕೆ ಎರಡು ಎಕರೆ ಪಪ್ಪಾಯಿ ಬೆಳೆ ನೆಲಕಚ್ಚಿದೆ. ಕಟಾವಿಗೆ ಬಂದಿದ್ದ ಪಪ್ಪಾಯಿ‌ ಬೆಳೆ ಮಣ್ಣುಪಾಲಾಗಿದೆ, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ದೇವರಗುಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಗುಡಿಪಲ್ಲಿ ಗ್ರಾಮದ ವೆಂಕಟಶಿವಪ್ಪ ಎಂಬುವರಿಗೆ ಸೇರಿದ ಪಪ್ಪಾಯಿ ಬೆಳೆ ಕೊಯ್ಲಿಗೆ ಬಂದಿತ್ತು. ಇದೀಗ ಗುಡುಗು‌ ಸಿಡಿಲು ಸಮೇತ ಸುರಿದ ಮಳೆಗೆ ಬೆಳೆ ನಾಶವಾಗಿದ್ದು, ರೈತ ಕಂಗಲಾಗಿದ್ದಾರೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಗೆ ಪರಿಹಾರ ನೀಡಿ ಎಂದು ಒತ್ತಾಯಿಸಿದ್ದಾರೆ.

ಮುಕ್ಕಾಲು ಕರ್ನಾಟಕಕ್ಕೆ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮಳೆಯು ಅಬ್ಬರಿಸಲಿದ್ದು, ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಭಾರಿ ಗಾಳಿ ಹಾಗೂ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿ ಕಲಬುರಗಿ, ವಿಜಯಪುರ, ಯಾದಗಿರಿ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಕೊಡುಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಇನ್ನುಳಿದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿಕ್ಕಬಳ್ಳಾಪುರ

Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

Drowned in water : ಸ್ನೇಹಿತರು ಹಾಕಿದ ಸವಾಲಿಗೆ ಜೋಶ್‌ನಲ್ಲಿ ಕೆರೆಗೆ ಹಾರಿದ ಟೆಕ್ಕಿ ನೀರುಪಾಲಾದ ದಾರುಣ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

VISTARANEWS.COM


on

By

Drowned in water
Koo

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ವಾಟದಹೊಸಳ್ಳಿ ಕೆರೆಯಲ್ಲಿ ಈಜಲು ಹೋದ ಟೆಕ್ಕಿ ನೀರಲ್ಲಿ (Drowned in water) ಮುಳುಗಿ ಮೃತಪಟ್ಟಿದ್ದಾರೆ. ನಿನ್ನೆ ಶನಿವಾರ ಮಧ್ಯಾಹ್ನ ನೀರಿನಲ್ಲಿ ಮುಳುಗಿ ವಿನಯ್ ರಮೇಶ್ (42) ಎಂಬುವವರು ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಭಾನುವಾರ ಟೆಕ್ಕಿ ಮೃತದೇಹವು ಪತ್ತೆಯಾಗಿದೆ.

ಬೆಂಗಳೂರಿನ ಇಂದಿರಾನಗರ ನಿವಾಸಿಯಾದ ವಿನಯ್ ರಮೇಶ್, ಐದು ಜನ ಸ್ನೇಹಿತರೊಟ್ಟಿಗೆ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಕೆಲವರು ಈ ದಡದಿಂದ ಆ ದಡಕ್ಕೆ ಯಾರು ಮೊದಲು ಈಜಿಕೊಂಡು ಬರುತ್ತಾರೆ ನೋಡೋಣಾ ಎಂದು ಸವಾಲು ಹಾಕಿಕೊಂಡಿದ್ದಾರೆ. ಈ ಚಾಲೆಂಜ್‌ ಅನ್ನು ಸ್ವೀಕರಿಸಿದ ರಮೇಶ್‌ ಜೋಶ್‌ನಲ್ಲಿ ನೀರಿಗೆ ಇಳಿದಿದ್ದಾರೆ. ಆದರೆ ವಿನಯ್ ರಮೇಶ್ ವಾಪಸ್ ಬಂದಿರಲಿಲ್ಲ.

Drowned in water

ಹೀಗಾಗಿ ಜತೆಗೆ ಇದ್ದ ಸ್ನೇಹಿತರು ಗಾಬರಿಯಾಗಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ವಿನಯ್‌ ರಮೇಶ್‌ ವಿಮಾನದಲ್ಲಿ ಚೆನ್ನೈ ನಿಂದ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಸ್ನೇಹಿತರೊಟ್ಟಿಗೆ ಚಿಕ್ಕಬಳ್ಳಾಪುರಕ್ಕೆ ಬಂದಿದ್ದರು. ನಿರಂತರ ಪ್ರಯಾಣದಿಂದ ಬಳಲಿದ್ದ ವಿನಯ್ ಈಜಲು ಕೆರೆಗೆ ಇಳಿದಾಗ ಸುಸ್ತಾಗಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈಜುವ ಚಾಲೆಂಜ್ ವಿನಯ್ ರಮೇಶ್‌ಗೆ ಮುಳುವಾಯ್ತಾ ಎಂಬ ಪ್ರಶ್ನೆ ಕಾಡುತ್ತಿದೆ. 24 ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಕೆರೆಯಿಂದ ಹೊರಗೆ ತಂದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Road Accident : ತಂದೆ ಜತೆಗೆ ಕಾರ್‌ ವಾಶ್‌ ಮಾಡುವಾಗ ಎಕ್ಸಿಲೇಟರ್‌ ತುಳಿದ ಬಾಲಕ; ಆಟವಾಡುತ್ತಿದ್ದ ಮಗು ಅಪ್ಪಚ್ಚಿ

Drowned in water

ಸಮುದ್ರದಲ್ಲಿ ಮುಳುಗುತ್ತಿದ್ದ ಕಾರ್ಮಿಕನ ರಕ್ಷಣೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಬಬ್ಲು ಶೇನ್ (34) ರಕ್ಷಣೆಗೊಳಗಾದ ಕಾರ್ಮಿಕ.

ಪಶ್ಚಿಮ ಬಂಗಾಳ ಮೂಲದ ಬಬ್ಲು ಶೇನ್ ಕಾರವಾರದ ಇಂಡಸ್ಟ್ರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ರಜಾ ದಿನವಾದ ಹಿನ್ನೆಲೆಯಲ್ಲಿ ಈಜಲು ಕಡಲತೀರಕ್ಕೆ ಬಂದಿದ್ದ. ಈಜುತ್ತಿದ್ದ ವೇಳೆ ನಿತ್ರಾಣಗೊಂಡು ಮುಳುಗುತ್ತಿದ್ದಾಗ, ಲೈಫ್‌ಗಾರ್ಡ್ ಹಾಗೂ ವಾಟರ್‌ಸ್ಪೋರ್ಟ್ಸ್ ಸಿಬ್ಬಂದಿ ಕಾರ್ಮಿಕ ಬಬ್ಲುನನ್ನು ರಕ್ಷಣೆ ಮಾಡಿದ್ದಾರೆ. ಜೆಟ್‌ಸ್ಕೀ ಮೂಲಕ ತೆರಳಿ ಕಾರ್ಮಿಕನನ್ನ ರಕ್ಷಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
shivamogga triple murder case
ಕ್ರೈಂ18 mins ago

Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

Turbo Trailer Out mammoottys raj b shetty looks menacing
ಮಾಲಿವುಡ್24 mins ago

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಎಸ್‌ಐಟಿಗೆ ಸವಾಲೆಸೆದ ನವೀನ್‌ ಗೌಡ; ದೇವರಾಜೇಗೌಡ, ಪ್ರೀತಂಗೌಡ ಆಪ್ತರು ಎಸ್‌ಐಟಿ ಕಸ್ಟಡಿಗೆ?

Health Tips Kannada Stay away from these foods to get rid of acne
ಆಹಾರ/ಅಡುಗೆ1 hour ago

Health Tips Kannada: ಈ ಆಹಾರಗಳಿಂದ ದೂರವಿದ್ದರೆ ಮೊಡವೆ ಸಮಸ್ಯೆಯಿಂದ ಪಾರಾಗಬಹುದು!

Kannada New Movie meghashri starrer kuntebille goes on floor
ಸ್ಯಾಂಡಲ್ ವುಡ್1 hour ago

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Brinda Acharya Saavira Gungali Video Song Out
ಸ್ಯಾಂಡಲ್ ವುಡ್2 hours ago

Brinda Acharya: ‘ಸಾವಿರ ಗುಂಗಲಿ’ ಒಲವಿನ ಸವಾರಿ ಹೊರಟ ಬೃಂದಾ ಆಚಾರ್ಯ-ಭರತ್ ಬೋಪಣ್ಣ!

pm narendra Modi Varanasi road show
Lok Sabha Election 20242 hours ago

PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

Food Tips Kannada adulterated food effect health
ಲೈಫ್‌ಸ್ಟೈಲ್2 hours ago

Food Tips Kannada: ಕಲಬೆರಕೆ ಆಹಾರಗಳಿಂದ ನಮ್ಮ ಆರೋಗ್ಯದ ಮೇಲಾಗುವ ಪರಿಣಾಮಗಳೇನು?

Jyoti Rai seeks divine blessings at tirupathi
ಕಿರುತೆರೆ2 hours ago

Jyoti Rai: ವೈರಲ್ ವಿಡಿಯೊ ಬೆನ್ನಲ್ಲೇ ಜ್ಯೋತಿ ರೈ ಟೆಂಪಲ್‌ ರನ್‌!

Kochi Tour
ಪ್ರವಾಸ2 hours ago

Kochi Tour: ವಾರಾಂತ್ಯದ ಪ್ರವಾಸಕ್ಕೆ ಕೊಚ್ಚಿ ಸೂಕ್ತ ತಾಣ; ಏನೇನಿವೆ ಆಕರ್ಷಣೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather forecast karnataka rains
ಮಳೆ4 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ6 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ16 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ17 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ17 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ20 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

ಟ್ರೆಂಡಿಂಗ್‌