KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ - Vistara News

ಕರ್ನಾಟಕ

KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

KEA : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನವಾಗಿದೆ.

VISTARANEWS.COM


on

KEA
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತ ವಾಗಿರದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಆ.26ರೊಳಗೆ ಪೂರಕ ದಾಖಲೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಈ ಬಗ್ಗೆ ಸೂಚನೆ ನೀಡಿದ್ದು, ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ ಎಂದಿದ್ದಾರೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು.

ಕಡ್ಡಾಯ ಕನ್ನಡ ಪರೀಕ್ಷೆ

ಗ್ರಾಮ ಆಡಳಿತ ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಲೇಬೇಕು. ಸೆಪ್ಟೆಂಬರ್ 29ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಈ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕೆಂದು ಸೂಚಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರ ಅನ್ವಯ, ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ ಅಕ್ಟೋಬರ್ 27ರಂದು ಪತ್ರಿಕೆ- 1 ಮತ್ತು ಪತ್ರಿಕೆ-2 ಇವುಗಳನ್ನು ಒಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ವಿವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಮನಗರ

Toyota Kirloskar Motor: ರಾಮನಗರ ಜಿಲ್ಲೆಯಲ್ಲಿ 3 ಹೊಸ ನೀರು ಶುದ್ಧೀಕರಣ ಘಟಕ ಸ್ಥಾಪಿಸಿದ ಟಿಕೆಎಂ

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಸಂಸ್ಥೆಯು ಇಂದು ರಾಮನಗರ ಜಿಲ್ಲೆಯ ಬೆಣ್ಣೆಹಳ್ಳಿ, ಡಿಯಾಲಕರೇನಹಳ್ಳಿ ಮತ್ತು ಚನ್ನೆಮರೇಗೌಡನದೊಡ್ಡಿಯಲ್ಲಿ ಮೂರು ಹೊಸ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ. ಈ ನೀರು ಶುದ್ಧೀಕರಣ ಘಟಕಗಳು 15 ಹಳ್ಳಿಗಳ ಸುಮಾರು 21,000 ಗ್ರಾಮಸ್ಥರಿಗೆ ಪ್ರಯೋಜನ ಒದಗಿಸುತ್ತವೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Toyota Kirloskar Motor
Koo

ರಾಮನಗರ: ಸ್ಥಳೀಯ ಜನ ಸಮುದಾಯಗಳ ಆರೋಗ್ಯ ಮತ್ತು ಜೀವನ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಸಂಸ್ಥೆಯು (Toyota Kirloskar Motor) ಇಂದು ರಾಮನಗರ ಜಿಲ್ಲೆಯ ಬೆಣ್ಣೆಹಳ್ಳಿ, ಡಿಯಾಲಕರೇನಹಳ್ಳಿ ಮತ್ತು ಚನ್ನೆಮರೇಗೌಡನದೊಡ್ಡಿಯಲ್ಲಿ ಮೂರು ಹೊಸ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ. ಈ ನೀರು ಶುದ್ಧೀಕರಣ ಘಟಕಗಳು 15 ಹಳ್ಳಿಗಳ ಸುಮಾರು 21,000 ಗ್ರಾಮಸ್ಥರಿಗೆ ಪ್ರಯೋಜನ ಒದಗಿಸುತ್ತವೆ.

ಪ್ರತೀ ನೀರಿನ ಶುದ್ಧೀಕರಣ ಘಟಕವು ಗಂಟೆಗೆ 1,000 ಲೀಟರ್ ಶುದ್ಧೀಕರಿಸುವ ಸಾಮರ್ಥ್ಯವನ್ನು ಹೊಂದಿದೆ. ಕಾರ್ಬನ್ ಫಿಲ್ಟರ್‌ಗಳು, ಮಲ್ಟಿಮೀಡಿಯಾ ಫಿಲ್ಟರೇಷನ್, 5 ಮೈಕ್ರಾನ್ಸ್, ರಿವರ್ಸ್ ಓಸ್ಮಾಸಿಸ್ (ಆರ್‌ಓ) ಮತ್ತು ಯುವಿ ಫಿಲ್ಟರೇಷನ್ ಎಂಬ ಆರು ಹಂತದ ಶುದ್ಧೀಕರಣ ಪ್ರಕ್ರಿಯೆಯ ಮೂಲಕ ನೀರನ್ನು ಶುದ್ಧೀಕರಿಸಲಾಗುತ್ತಿದ್ದು, ಅತ್ಯುತ್ತಮ ಗುಣಮಟ್ಟದ ನೀರನ್ನು ಒದಗಿಸಲಾಗುತ್ತದೆ. ಅತ್ಯಾಧುನಿಕ ಫಿಲ್ಟರೇಷನ್ ಪ್ರಕ್ರಿಯೆ ಮೂಲಕ ಕಾರ್ಯನಿರ್ವಹಿಸುವ ಈ ಘಟಕಗಳು ನವೀಕರಿಸಲಾಗುವ ಇಂಧನ (ಸೌರ ಶಕ್ತಿ) ದ ಮೂಲಕ ಕಾರ್ಯ ನಿರ್ವಹಿಸುತ್ತವೆ. ಈ ಮೂಲಕ ಸುಸ್ಥಿರತೆಗೆ ಕೊಡುಗೆ ನೀಡುತ್ತವೆ. ಈ ಘಟಕಗಳು 15 ವರ್ಷಗಳ ಕಾಲ ಗ್ರಾಮ ಪಂಚಾಯಿತಿಗಳು ಮತ್ತು ನಿರ್ವಹಣಾ ಏಜೆನ್ಸಿಯ ಮೂಲಕ ನಿರ್ವಹಿಸಲ್ಪಡುತ್ತವೆ.

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ಶುದ್ಧೀಕರಣ ಘಟಕಗಳ ಸ್ಥಾಪನೆಯ ಯೋಜನೆ ಆರಂಭಿಸಿದಾಗಿನಿಂದ ಇದುವರೆಗೆ ಟಿಕೆಎಂ ಸಂಸ್ಥೆಯು ಭಾರತದಾದ್ಯಂತ ಒಟ್ಟು 51 ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದೆ. ಇದರಿಂದ 312 ಹಳ್ಳಿಗಳ 350000ಕ್ಕೂ ಹೆಚ್ಚು ಜನ ಶುದ್ಧ ಮತ್ತು ಸುರಕ್ಷಿತ ನೀರಿನ ಪ್ರಯೋಜನವನ್ನು ಪಡೆದಿದ್ದಾರೆ.

ಈ ಕುರಿತು ಮಾತನಾಡಿದ ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನ ಎಸ್‌ವಿಪಿ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ದಳವಿ, “ಜನ ಸಮುದಾಯಕ್ಕೆ ವಾಹನಗಳನ್ನು ಉತ್ಪಾದನೆ ಮಾಡುವುದರ ಹೊರತಾಗಿ ಹೆಚ್ಚಿನ ನೆರವು ಒದಗಿಸಲು ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸುತ್ತಮುತ್ತಲಿನ ಜನರ ಜೀವನ ಗುಣಮಟ್ಟವನ್ನು ಹೆಚ್ಚಿಸುವ ಜವಾಬ್ದಾರಿ ಇದೆ. ಅದಕ್ಕೆ ಪೂರಕವಾಗಿ ರಾಮನಗರ ಜಿಲ್ಲೆಯಲ್ಲಿ ಮೂರು ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿದ್ದು, ಈ ಕ್ರಮವು ಸ್ಥಳೀಯ ಜನರ ಆರೋಗ್ಯ ಮತ್ತು ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ನಮ್ಮ ಬದ್ಧತೆಗೆ ಪುರಾವೆಯಾಗಿದೆ. ಶುದ್ಧ ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಹಕ್ಕು. ಈ ಯೋಜನೆಯ ಮೂಲಕ ಈ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಿದ್ದೇವೆ. ಜನರಿಗೆ ಅವಶ್ಯ ಸೌಲಭ್ಯ ಒದಗಿಸುವುದರ ಜತೆಗೆ ನಾವು ಸುಸ್ಥಿರತೆಯ ಕಡೆಗೆ ಕೂಡ ಗಮನ ಹರಿಸಿದ್ದೇವೆ. ಈ ಮೂಲಕ ಉಜ್ವಲ ಭವಿಷ್ಯವನ್ನು ಸಾಧಿಸಬಹುದು ಎಂದು ನಾವು ನಂಬಿದ್ದೇವೆ” ಎಂದು ಹೇಳಿದರು.

ಸಿಎಸ್ಆರ್ 2001ನೇ ಇಸವಿಯಿಂದಲೂ ಟಿಕೆಎಂ ಸಂಸ್ಥೆಯ ಆದ್ಯ ಕರ್ತವ್ಯಗಳ ಭಾಗವಾಗಿದೆ. ಉತ್ಪಾದನೆ ಹೆಚ್ಚಳ, ಸುಸ್ಥಿರತೆ ಕಡೆಗೆ ಗಮನ ಹರಿಸುವುದರ ಜತೆಗೆ ಟಿಕೆಎಂ ಮತ್ತು ಅದರ ಉದ್ಯೋಗಿಗಳು ಸ್ವಯಂ ಪ್ರೇರಣೆಯಿಂದ ಹಲವಾರು ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಶಿಕ್ಷಣ, ಪರಿಸರ, ಆರೋಗ್ಯ ಮತ್ತು ನೈರ್ಮಲ್ಯ, ರಸ್ತೆ ಸುರಕ್ಷತೆ ಹಾಗೂ ಕೌಶಲ್ಯ ಅಭಿವೃದ್ಧಿ ಎಂಬ ಐದು ವಿಚಾರಗಳನ್ನು ಕೇಂದ್ರವಾಗಿಟ್ಟುಕೊಂಡು ಚಟುವಟಿಕೆಗಳನ್ನು ನಡೆಸಲಾಗಿದೆ. ಇವುಗಳ ಜತೆಗೆ ಸ್ಥಳೀಯರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಸಮುದಾಯ ಆರೋಗ್ಯ ಕೇಂದ್ರವಾದ ಕರ್ನಾಟಕದ ಬಿಡದಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಮ್ಲಜನಕ-ಉತ್ಪಾದನಾ ಘಟಕವನ್ನು ಕೊಡುಗೆ ನೀಡಿದೆ.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ವಿಶೇಷವಾಗಿ ಶಾಲಾಧರಿತ ಆರೋಗ್ಯ ಮತ್ತು ನೈರ್ಮಲ್ಯ ಯೋಜನೆಗಳಾದ ಎಬಿಸಿಡಿ (ಎ ಬಿಹೇವಿಯರಲ್ ಚೇಂಜ್ ಡೆಮಾನ್‌ಸ್ಟ್ರೇಷನ್), ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆ ಮತ್ತು ಟೊಯೋಟಾ ಶಾಲಾ ಆರೋಗ್ಯ ಕಾರ್ಯಕ್ರಮಗಳು ಆರೋಗ್ಯ ಕ್ಷೇತ್ರದಲ್ಲಿ ಶ್ಲಾಘನೀಯ ಕೆಲಸವನ್ನು ಮಾಡಿವೆ. 2022-23ರ ಆರ್ಥಿಕ ವರ್ಷದಲ್ಲಿ ಈ ಯೋಜನೆಗಳು ಸುಮಾರು 64,000ಕ್ಕೂ ಹೆಚ್ಚಿನ ಜನರ ಬದುಕಲ್ಲಿ ಪ್ರಯೋಜನ ಉಂಟು ಮಾಡಿವೆ. ಟಿಕೆಎಂ ತನ್ನ ಹಲವಾರು ಸಿಎಸ್ಆರ್ ಯೋಜನೆಗಳ ಮೂಲಕ ಇಲ್ಲಿಯವರೆಗೆ ಸುಮಾರು 23 ಲಕ್ಷಕ್ಕೂ ಹೆಚ್ಚು ಜನರ ಬದುಕಲ್ಲಿ ಸಕಾರಾತ್ಮಕ ಪರಿಣಾಮ ಬೀರಿವೆ. ಜನರ ಅಗತ್ಯಕ್ಕೆ ತಕ್ಕಂತೆ, ದೇಶದ ಆದ್ಯತೆಗಳಿಗೆ ಪೂರಕವಾಗಿ ಮತ್ತು ಸಮಾಜಕ್ಕೆ ಅರ್ಥಪೂರ್ಣ ಕೊಡುಗೆ ನೀಡುವ ನಿಟ್ಟಿನಲ್ಲಿ ಟಿಕೆಎಂನ ಯೋಜನೆಗಳನ್ನು ರೂಪಿಸಲಾಗುತ್ತದೆ.

Continue Reading

ಬೆಂಗಳೂರು

World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

ವಿಶ್ವ ಹಿರಿಯ ನಾಗರಿಕರ ದಿನದ (World Senior Citizens Day) ಪ್ರಯುಕ್ತ ಹಿರಿಯರ ಆರೋಗ್ಯದ ಬಗೆಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆಗಸ್ಟ್‌ 21ರಂದು ಬೆಂಗಳೂರಿನ ವಾಸವಿ ಆಸ್ಪತ್ರೆಯು ವಿಶೇಷವಾದ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

World Senior Citizens Day
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವ ಹಿರಿಯ ನಾಗರಿಕರ ದಿನದ (World Senior Citizens Day) ಪ್ರಯುಕ್ತ ಹಿರಿಯರ ಆರೋಗ್ಯದ ಬಗೆಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆಗಸ್ಟ್‌ 21 ರಂದು ವಾಸವಿ ಆಸ್ಪತ್ರೆಯು ವಿಶೇಷವಾದ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಪ್ರತಿ ವರ್ಷ ಆಗಸ್ಟ್‌ 21 ಅನ್ನು ವಿಶ್ವ ನಾಗರಿಕರ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರಿಗೆ ಅನುಭವಿ ವೈದ್ಯರಿಂದ ಉಚಿತ ಸಮಾಲೋಚನೆ, ಲ್ಯಾಬ್‌ ಪರೀಕ್ಷೆಯಲ್ಲಿ ಶೇ.20ರಷ್ಟು ರಿಯಾಯಿತಿ ಮತ್ತು ರೇಡಿಯಾಲಜಿ ಸೇವೆಗಳಲ್ಲಿ ಶೇ.50ರಷ್ಟು ರಿಯಾಯಿತಿಯನ್ನು ನೀಡಲಾಗುತ್ತಿದೆ.

ಇದನ್ನೂ ಓದಿ: Kannada New Movie: ʼಲಂಗೋಟಿ ಮ್ಯಾನ್ʼ ಚಿತ್ರದ ಟೀಸರ್ ಬಿಡುಗಡೆಗೊಳಿಸಿದ ನಟ ಶರಣ್

58 ವರ್ಷ ಮೇಲ್ಪಟ್ಟ ಹಿರಿಯರು ಈ ಆರೋಗ್ಯ ಶಿಬಿರದಲ್ಲಿ ಪಾಲ್ಗೊಳ್ಳಲು ಅರ್ಹರಾಗಿರುತ್ತಾರೆ. ವಯೋಮಿತಿಯನ್ನು ದೃಢಪಡಿಸುವ ಯಾವುದೇ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ವಾಸವಿ ಆಸ್ಪತ್ರೆಯಲ್ಲಿ ಈ ಸೌಲಭ್ಯವನ್ನು ಪಡೆಯಬಹುದು.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ನಗರದ ವಾಸವಿ ಆಸ್ಪತ್ರೆಯು ನುರಿತ ತಂತ್ರಜ್ಞಾನಗಳನ್ನು ಒಳಗೊಂಡಿದ್ದು, ಉತ್ತಮ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸುತ್ತಾ ಬಂದಿದೆ. ಅಲ್ಲದೆ ಹಿರಿಯ ನಾಗರಿಕರ ಆರೋಗ್ಯದ ಕಾಳಜಿಯ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂ.ಸಂಖೈ: 080 71500500/504 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಬೆಂಗಳೂರು

KHIR City Project: ಬೆಂಗಳೂರಿನಲ್ಲಿ ನಾಲೆಜ್‌-ಹೆಲ್ತ್‌ ಸಿಟಿ ಮೊದಲ ಹಂತದ ಯೋಜನೆಗೆ ಸದ್ಯದಲ್ಲೇ ಚಾಲನೆ: ಎಂ.ಬಿ. ಪಾಟೀಲ

ಕೆಎಚ್ಐಆರ್ ಸಿಟಿ ಈಗ 2,000 ಎಕರೆ ಜಾಗದಲ್ಲಿ ತಲೆ ಎತ್ತಲಿದೆ. ಇದರಲ್ಲಿ 500 ಎಕರೆಯ ಮೊದಲ ಹಂತದ ಯೋಜನೆಗೆ (KHIR City Project) ಸದ್ಯದಲ್ಲೇ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಕೆಎಚ್ಐಆರ್ ಸಿಟಿ ಯೋಜನೆ ವಿಸ್ತರಣೆ ಆಗಲಿದೆ. ಇದಕ್ಕೆ ಸಲಹಾ ಸಮಿತಿಯ ಸದಸ್ಯರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ತುಂಬಾ ಅಗತ್ಯವಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

VISTARANEWS.COM


on

KHIR City Project
Koo

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕೆಎಚ್ಐಆರ್‌ಸಿಟಿ ಯೋಜನೆಯ (KHIR City Project) ಸಲಹಾ ಮಂಡಳಿಯ ಪ್ರಥಮ ಸಭೆ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರ ನೇತೃತ್ವದಲ್ಲಿ ಇಲ್ಲಿನ ಖನಿಜ ಭವನದಲ್ಲಿ ನಡೆಯಿತು.

ಸಲಹಾ ಮಂಡಳಿ ಸದಸ್ಯರಾದ ನಾರಾಯಣ ಹೃದ್ರೋಗ ಸಂಸ್ಥೆ ಅಧ್ಯಕ್ಷ ಡಾ. ದೇವಿಶೆಟ್ಟಿ, ಬಯೊಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಷಾ, ಇನ್ಫೋಸಿಸ್ ಆಡಳಿತ ಮಂಡಳಿ ಸದಸ್ಯ ಮೋಹನದಾಸ್ ಪೈ, ಹ್ರದ್ರೋಗ ತಜ್ಞ ಡಾ.ವಿವೇಕ್ ಜವಳಿ, ಆ್ಯಕ್ಸಲ್ ಪಾಲುದಾರ ಪ್ರಶಾಂತ್ ಪ್ರಕಾಶ್, ಅಮೆರಿಕಾದ ಬೋಸ್ಟನ್ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ಟ್ರಸ್ಟಿ ರಾಂಚ್ ಕಿಂಬಾಲ್, ವೆಕ್ಸ್ ಫೋರ್ಡ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ಸಂಸ್ಥೆ ಕಾರ್ಯನಿರ್ವಾಹಕ ಉಪಾಧ್ಯಕ್ಷ ಥಾಮಸ್ ಓಶ ಮತ್ತು ಆಸ್ಟೀನ್‌ನ ನಾವೀನ್ಯತೆ ಮತ್ತು ಉದ್ಯಮಶೀಲತೆ ವಿಭಾಗದ ಡೀನ್ ಸ್ಟೀಫನ್ ಎಕ್ಕರ್ ಅವರು ವರ್ಚುಯಲ್ ಆಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಲಹಾ ಮಂಡಳಿಯ ಸದಸ್ಯರಿಗೆ ಭೂಮಿಪುತ್ರ ಸಂಸ್ಥೆಯು ನಿರ್ಮಿಸಿರುವ ಯೋಜನೆಯ ಪ್ರಾತ್ಯಕ್ಷಿಕೆಯನ್ನು ತೋರಿಸಲಾಯಿತು. ಜತೆಗೆ ಯೋಜನೆಗೆ ಸಂಬಂಧಿಸಿದಂತೆ ಸಲಹಾ ಮಂಡಳಿಯ ಸದಸ್ಯರಿಂದ ಸಲಹೆ ಸೂಚನೆಗಳನ್ನು ಆಲಿಸಲಾಯಿತು. ಸಭೆಯಲ್ಲಿ ವರ್ಚುಯಲ್ ಆಗಿ ಭಾಗವಹಿಸಿದ್ದ ಸಮಿತಿಯ ಸದಸ್ಯರು, ದೊಡ್ಡಬಳ್ಳಾಪುರ- ದಾಬಸ್‌ಪೇಟೆ ಮಧ್ಯದಲ್ಲಿ ಬರುವ ಕೆಎಚ್ಐಆರ್ ಸಿಟಿಯ ಪರಿಕಲ್ಪನೆ ಅತ್ಯದ್ಭುತವಾಗಿದ್ದು, ಬೆಂಗಳೂರಿನ ಬೆಳವಣಿಗೆಗೆ ಅತ್ಯಗತ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕೆಎಚ್ಐಆರ್ ಸಿಟಿ ಈಗ 2,000 ಎಕರೆ ಜಾಗದಲ್ಲಿ ತಲೆ ಎತ್ತಲಿದೆ. ಇದರಲ್ಲಿ 500 ಎಕರೆಯ ಮೊದಲ ಹಂತದ ಯೋಜನೆಗೆ ಸದ್ಯದಲ್ಲೇ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಕೆಎಚ್ಐಆರ್ ಸಿಟಿ ಯೋಜನೆ ವಿಸ್ತರಣೆ ಆಗಲಿದೆ. ಇದಕ್ಕೆ ಸಲಹಾ ಸಮಿತಿಯ ಸದಸ್ಯರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ತುಂಬಾ ಅಗತ್ಯವಿದೆ ಎಂದು ತಿಳಿಸಿದರು.

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ಇದೊಂದು ಅಸಾಂಪ್ರದಾಯಿಕ ಯೋಜನೆಯಾಗಿದೆ. ಇದು ಬೆಂಗಳೂರು ನಗರದ ಆರ್ಥಿಕತೆಯನ್ನು ಇನ್ನೊಂದು ಎತ್ತರಕ್ಕೆ ಕೊಂಡೊಯ್ಯಲಿದೆ. ಸಲಹಾ ಸಮಿತಿಯ ಸದಸ್ಯರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ವಿವರಿಸಿದರು.

Continue Reading

ಬೆಂಗಳೂರು

D Devaraja Arasu birth Anniversary: ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರ; ಸಿದ್ದರಾಮಯ್ಯ ಆರೋಪ

ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. (D Devaraja Arasu Birth Anniversary) ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

VISTARANEWS.COM


on

D Devaraja Arasu birth Anniversary
Koo

ಬೆಂಗಳೂರು: ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. (D Devaraja Arasu birth Anniversary) ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು.

ಇದನ್ನೂ ಓದಿ: CM Siddaramaiah: ಹೊಟ್ಟೆಕಿಚ್ಚಿನಿಂದಾಗಿ ಬಿಜೆಪಿಯವರಿಂದ ನನ್ನ ವಿರುದ್ಧ ಸುಳ್ಳು ಆರೋಪ; ಸಿದ್ದರಾಮಯ್ಯ

ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು ಎಂದು ತಿಳಿಸಿದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ ಎಂದರು.

ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ. ಬಸವಾದಿ ಶರಣರು 800 ವರ್ಷಗಳ ಹಿಂದೆಯೇ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯನ್ನು ಮಾಡಿದರು. ಆದರೆ ಸಂಪೂರ್ಣ ಸಮ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ ಎಂದರು.

ಇದನ್ನೂ ಓದಿ: Kannada New Movie: ಮಧುಸೂದನ್ ಹವಾಲ್ದಾರ್ ನಿರ್ದೇಶನದ ʼಕಾಖಂಡಕಿ ಶ್ರೀ ಮಹಿಪತಿದಾಸರುʼ ಚಿತ್ರದ ಹಾಡುಗಳ ಅನಾವರಣ

ಪ್ರತಿಯೊಬ್ಬರಿಗೂ ಶಿಕ್ಷಣ ಹಾಗೂ ಆರ್ಥಿಕ ಸ್ವಾತಂತ್ರ್ಯ ಸಿಕ್ಕದರೆ ಮಾತ್ರ ಜಾತಿ ವ್ಯವಸ್ಥೆ ಹೋಗಬಹುದು. ಇದಕ್ಕಾಗಿಯೇ ಅರಸು ಅವರು ದಲಿತರು, ಮಹಿಳೆಯರು, ರೈತರು, ಅಲ್ಪಸಂಖ್ಯಾತರ ಶಿಕ್ಷಣಕ್ಕೆ ಒತ್ತು ನೀಡಿದರು. ಮಲ ಹೊರುವ ಪದ್ಧತಿ ಸೇರಿದಂತೆ ಅನೇಕ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡಿದರು. ಎಲ್ಲರಿಗೂ ಸಮಾನ ಅವಕಾಶ ಸಿಗಲು ಹಾವನೂರು ಅವರ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗದ ಆಯೋಗ ರಚನೆ ಮಾಡಿ, ಎಷ್ಟೇ ವಿರೋಧ ಇದ್ದರೂ ಆಯೋಗದ ಶಿಫಾರಸುಗಳನ್ನು ಜಾರಿ ಮಾಡಿದರು. ಇದರಿಂದ ಹಿಂದುಳಿದ ವರ್ಗದವರಿಗೆ ಶಿಕ್ಷಣದಲ್ಲಿ ಮೀಸಲಾತಿ ಸಾಧ್ಯವಾಯಿತು. ತಳ ಸಮುದಾಯದವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲಗೊಳಿಸಲು ಎಷ್ಟೇ ವಿರೋಧ ಇದ್ದರೂ, ಜಾರಿಗೊಳಿಸಿದರು. ಹಿಂದುಳಿದವರಿಗೆ ಶೇ.38 ರಷ್ಟು ಮೀಸಲಾತಿ ಸಿಕ್ಕಿದ್ದರೆ ಅದಕ್ಕೆ ಅರಸು ಅವರೇ ಕಾರಣ ಎಂದು ತಿಳಿಸಿದರು.

ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದ್ದಾರೆ. ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾವು ಜಾತಿ ಗಣತಿ ಮಾಡಿದ್ದೇವೆ. ಜಾತಿ ಗಣತಿ ಮಾಡದೆ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ನಾವು ನಡೆಸುತ್ತಿರುವ ಪ್ರಯತ್ನಗಳಿಂದ ಹತಾಶರಾಗಿ ನನ್ನನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ಮಾಡುತ್ತಿದಾರೆ ಎಂದು ಆರೋಪಿಸಿದರು.

ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ 40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ ಎಂದರು.

ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಖರ್ಚು ಮಾಡಲು ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಗೆ ತಿದ್ದುಪಡಿ ತಂದದ್ದು ನಮ್ಮ ಸರ್ಕಾರ. ಕೇಂದ್ರದಲ್ಲಿ ಈ ರೀತಿಯ ಕಾಯ್ದೆಯನ್ನು ಜಾರಿಗೆ ತರದೇ ಇಲ್ಲಿ ಅನುಷ್ಠಾನದ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಈ ರೀತಿ ಟೀಕಿಸಲು ಅವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: KEA: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಕನ್ನಡ ಕಡ್ಡಾಯ; ಅರ್ಜಿ ಅಂಗೀಕೃತವಾಗಿರದಿದ್ದರೆ ದಾಖಲೆ ಸಲ್ಲಿಸಲು ಆ.26 ಕೊನೆಯ ದಿನ

ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್‌ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್‌ ಸಿಟಿ ಎಂದು ನಾಮಕರಣ ಮಾಡಲಾಗುವುದು. ಕರ್ನಾಟಕ ಏಕೀಕರಣ 1956 ನವಂಬರ್‌ 1 ರಂದೇ ಆಗಿದ್ದರೂ, 1973 ರಲ್ಲಿ ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು, ನವೆಂಬರ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ನವೆಂಬರ್‌ 1 ರಂದು ಅನಾವರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Continue Reading
Advertisement
What is Lateral Entry?
ದೇಶ1 min ago

What is Lateral Entry?: ಏನಿದು ಲ್ಯಾಟರಲ್ ಎಂಟ್ರಿ ವಿವಾದ? ಕಾಂಗ್ರೆಸ್‌ ಆರೋಪವೇನು? ಬಿಜೆಪಿಯ ವಾದವೇನು?

T20 World Cup
ಕ್ರಿಕೆಟ್5 mins ago

T20 World Cup: ಟಿ20 ವಿಶ್ವಕಪ್​ನ 3 ಪಿಚ್​ಗಳಿಗೆ ಕಳಪೆ ರೇಟಿಂಗ್​ ಕೊಟ್ಟ ಐಸಿಸಿ

Toyota Kirloskar Motor
ರಾಮನಗರ24 mins ago

Toyota Kirloskar Motor: ರಾಮನಗರ ಜಿಲ್ಲೆಯಲ್ಲಿ 3 ಹೊಸ ನೀರು ಶುದ್ಧೀಕರಣ ಘಟಕ ಸ್ಥಾಪಿಸಿದ ಟಿಕೆಎಂ

World Senior Citizens Day
ಬೆಂಗಳೂರು25 mins ago

World Senior Citizens Day: ವಿಶ್ವ ಹಿರಿಯ ನಾಗರಿಕರ ದಿನದ ಪ್ರಯುಕ್ತ ವೈದ್ಯರಿಂದ ಉಚಿತ ಸಮಾಲೋಚನೆ

KHIR City Project
ಬೆಂಗಳೂರು27 mins ago

KHIR City Project: ಬೆಂಗಳೂರಿನಲ್ಲಿ ನಾಲೆಜ್‌-ಹೆಲ್ತ್‌ ಸಿಟಿ ಮೊದಲ ಹಂತದ ಯೋಜನೆಗೆ ಸದ್ಯದಲ್ಲೇ ಚಾಲನೆ: ಎಂ.ಬಿ. ಪಾಟೀಲ

D Devaraja Arasu birth Anniversary
ಬೆಂಗಳೂರು32 mins ago

D Devaraja Arasu birth Anniversary: ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರ; ಸಿದ್ದರಾಮಯ್ಯ ಆರೋಪ

ICC Women’s T20 World Cup
ಕ್ರಿಕೆಟ್1 hour ago

ICC Women’s T20 World Cup: ಯುಎಇಗೆ ಸ್ಥಳಾಂತರಗೊಂಡ ಮಹಿಳಾ ಟಿ20 ವಿಶ್ವಕಪ್

Kailash Vijayvargiya
ಪ್ರಮುಖ ಸುದ್ದಿ1 hour ago

Kailash Vijayvargiya: 30 ವರ್ಷದಲ್ಲಿ ದೇಶದೊಳಗೆ ಅಂತರ್ಯುದ್ಧ, ಹಿಂದೂಗಳು ಬದುಕುವುದೇ ಕಷ್ಟ: ಕೈಲಾಶ್‌ ವಿಜಯ್‌ವರ್ಗೀಯ

Murder Case
ಕರ್ನಾಟಕ1 hour ago

Murder Case: ಬೆಳ್ತಂಗಡಿ ಬಳಿ ಮನೆಯ ಅಂಗಳದಲ್ಲೇ ನಿವೃತ್ತ ಶಿಕ್ಷಕನ ಭೀಕರ ಕೊಲೆ

Scott Boland
ಕ್ರೀಡೆ2 hours ago

Scott Boland: ಬಾರ್ಡರ್-ಗವಾಸ್ಕರ್ ಟ್ರೋಫಿ ಆರಂಭಕ್ಕೂ ಮುನ್ನವೇ ಕೊಹ್ಲಿಗೆ ಎಚ್ಚರಿಕೆ ನೀಡಿದ ಆಸೀಸ್​ ವೇಗಿ

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌