Aero India 2023: ಕೆಂಪೇಗೌಡ ವಿಮಾನ ನಿಲ್ದಾಣದ ವೇಳಾಪಟ್ಟಿಯಲ್ಲಿ ವ್ಯತ್ಯಾಸ Vistara News

ಕರ್ನಾಟಕ

Aero India 2023: ಕೆಂಪೇಗೌಡ ವಿಮಾನ ನಿಲ್ದಾಣದ ವೇಳಾಪಟ್ಟಿಯಲ್ಲಿ ವ್ಯತ್ಯಾಸ

ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ ಶೋ ನಿಮಿತ್ತ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವೇಳಾಪಟ್ಟಿಯಲ್ಲಿ ವ್ಯತ್ಯಾಸವಾಗಲಿದೆ.

VISTARANEWS.COM


on

Bangalore airport
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಏರೋ ಇಂಡಿಯಾ ಶೋ ನಿಮಿತ್ತವಾಗಿ ಬೆಂಗಳೂರು ಅಂತಾರಾಷ್ಟ್ರೀಯ ನಿಲ್ದಾಣದ ವಿಮಾನ ಹಾರಾಟ ವೇಳಾಪಟ್ಟಿಯಲ್ಲಿ ವ್ಯತ್ಯಯವಾಗಲಿದೆ.

14ನೇ ಆವೃತ್ತಿಯ ಏರೋ ಇಂಡಿಯಾ 2023 ಶೋ ಫೆ.13ರಿಂದ ಫೆ.17ರವರೆಗೆ ಯಲಹಂಕ ವಾಯುನೆಲೆಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಫೆ.8- 17ರ ನಡುವೆ ಹಲವಾರು ವಿಮಾನ ಹಾರಾಟದ ವೇಳಾಪಟ್ಟಿಗಳನ್ನು ವ್ಯತ್ಯಾಸ ಮಾಡಲಾಗಿದೆ ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಟಣೆ ತಿಳಿಸಿದೆ.

ಫೆ.8- 11ರ ನಡುವೆ ಬೆಳಗ್ಗೆ 9ರಿಂದ 12 ಗಂಟೆಯವರೆಗೆ ಹಾಗೂ ಸಂಜೆ 2ರಿಂದ 5 ಗಂಟೆಯವರೆಗೆ, ಫೆ.12ರಂದು ಬೆಳಗ್ಗೆ 9ರಿಂದ 12 ಗಂಟೆಯವರೆಗೆ ಪೂರ್ವಾಭ್ಯಾಸಕ್ಕಾಗಿ; ಫೆ.13ರಂದು ಬೆಳಗ್ಗೆ 9ರಿಂದ 12 ಗಂಟೆಯವರೆಗೆ, ಫೆ.14- 15ರಂದು ಮಧ್ಯಾಹ್ನ 12ರಿಂದ 2.30ರವರೆಗೆ, ಫೆ.16- 17ರಂದು ಬೆಳಗ್ಗೆ 9.30ರಿಂದ 12 ಗಂಟೆಯವರೆಗೆ ಹಾಗೂ ಸಂಜೆ 2ರಿಂದ 5 ಗಂಟೆಯವರೆಗೆ ವೈಮಾನಿಕ ಪ್ರದರ್ಶನಗಳಿಗಾಗಿ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆ ಇರುವುದಿಲ್ಲ. ಈ ಸಮಯದಲ್ಲಿ ಪ್ರಯಾಣ ನಿಗದಿಪಡಿಸಿಕೊಂಡವರು ಸಂಬಂಧಿತ ಏರ್‌ಲೈನ್‌ಗಳನ್ನು ಸಂಪರ್ಕಿಸಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಪ್ರಕಟಣೆ ಸೂಚಿಸಿದೆ.

ಇದನ್ನೂ ಓದಿ: Aero India 2023: ಏರೋ ಇಂಡಿಯಾದಲ್ಲಿ ಭಾರತೀಯ ಪೆವಿಲಿಯನ್‌ನ ಪ್ರಮುಖ ಆಕರ್ಷಣೆಯಾಗಿ ತೇಜಸ್‌ ಯುದ್ಧ ವಿಮಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pro Pak Slogan: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ

Pro Pak Slogan: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

VISTARANEWS.COM


on

Pro Pak Slogans
Koo

ಬೆಂಗಳೂರು: ʼಪಾಕಿಸ್ತಾನ ಜಿಂದಾಬಾದ್ʼ ಘೋಷಣೆ (Pro Pak Slogan) ಕೂಗಿದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಜೆಪಿ ನಗರದ ಪಬ್‌ನಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದ ವೇಳೆ ಪಾಕ್‌ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಗುರಪ್ಪನಪಾಳ್ಯ ನಿವಾಸಿಗಳಾದ ಇನಾಯತ್ ಉಲ್ಲಾಖಾನ್, ಸೈಯದ್ ಮುಬಾರಕ್ ಬಂಧಿತ ಆರೋಪಿಗಳು. ಜೆ.ಪಿ. ನಗರ ಮೊದಲನೇ ಹಂತದಲ್ಲಿರುವ ಮೋಖಹಾಲಿಕ್ ಪಬ್‌ನಲ್ಲಿ‌ ಭಾರತ ಮತ್ತು ಆಸ್ಟ್ರೇಲಿಯಾ ಮ್ಯಾಚ್‌ ವೀಕ್ಷಿಸುತ್ತಿದ್ದಾಗ ಆರೋಪಿಗಳು ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದಾರೆ. ಇದಕ್ಕೆ ಅಲ್ಲಿದ್ದ ಕೆಲವರು ಆಕ್ಷೇಪಿಸಿದ್ದಾರೆ. ಆದರೂ ಅವರು ಕೂಗಾಡಿದ್ದಾರೆ. ಹೀಗಾಗಿ ಅಲ್ಲಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಜೆ.ಪಿ ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮದ್ಯಪಾನದ ನಶೆಯಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದೇವೆ ಎಂದು ಆರೋಪಿಗಳು ವಿಚಾರಣೆ ವೇಳೆ ಹೇಳಿದ್ದಾರೆ.

ಇದನ್ನೂ ಓದಿ | Murder case : ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಗೆ ಬೀಸಾಕಿದ ಕಿಡಿಗೇಡಿಗಳು!

ನಕಲಿ ನೋಟು ಜಾಲದ ಮೇಲೆ NIA ದಾಳಿ; ಬಳ್ಳಾರಿಯಲ್ಲಿ ಒಬ್ಬ ಅರೆಸ್ಟ್‌

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ತನಿಖಾ ದಳವು (National Investigation Agency) ನಕಲಿ ನೋಟು (Fake Currency) ಜಾಲದ ಮೇಲೆ ಮುಗಿಬಿದ್ದಿದೆ. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ (NIA Raid) ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ (One arrested in Ballary) ಹಿಡಿದಿದೆ. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎನ್ನಲಾಗಿದೆ.

ನಾಲ್ಕು ರಾಜ್ಯಗಳಲ್ಲಿ ಏನೇನು ಸಿಕ್ಕಿದೆ, ಎಷ್ಟು ಜನ ಬಂಧನ?

ರಾಷ್ಟ್ರೀಯ ತನಿಖಾ ದಳವು ಏಕಕಾಲದಲ್ಲಿ ನಾಲ್ಕು ರಾಜ್ಯಗಳಲ್ಲಿ ದಾಳಿಯನ್ನು ಸಂಘಟಿಸಿತ್ತು. ನಕಲಿ ನೋಟುಗಳ ಮುದ್ರಣದ ಸ್ಪಷ್ಟ ಸುಳಿವನ್ನು ಪಡೆದೇ ಈ ದಾಳಿ ನಡೆದಿದ್ದು ಆರೋಪಿಗಳು ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಗಡಿಯಾಚೆಯಿಂದ ಭಾರತಕ್ಕೆ ನಕಲಿ ನೋಟುಗಳು ಹರಿದು ಬರುತ್ತಿರುವ ಬಗ್ಗೆ ಸಂಶಯ ಮೂಡಿತ್ತು. ಈ ನಿಟ್ಟಿನಲ್ಲಿ ನವೆಂಬರ್‌ 24ರಂದು ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಅದರ ಭಾಗವಾಗಿ ಆಳ ತನಿಖೆಗೆ ಇಳಿದ ಸಂಸ್ಥೆಗೆ ದೇಶದೊಳಗಿನ ದುಷ್ಟ ಪ್ರಯೋಗಗಳ ಸುಳಿವುಗಳು ಸಿಕ್ಕವು.

ಸಾಕಷ್ಟು ಅಧ್ಯಯನದ ಬಳಿಕ ಎನ್‌ಐಎ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಹುಲ್‌ ತಾನಾಜಿ ಪಾಟೀಲ್‌ ಅಲಿಯಾಸ್‌ ಜಾವೇದ್‌, ಉತ್ತರ ಪ್ರದೇಶದ ಶಹಜಹಾನ್‌ ಪುರ ಜಿಲ್ಲೆಯ ವಿವೇಕ್‌ ಠಾಕೂರ್‌ ಅಲಿಯಾಸ್‌ ಆದಿತ್ಯ ಸಿಂಗ್‌ ಮತ್ತು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಮಹೇಂದರ್‌ ಎಂಬವರ ಮೇಲೆ ಕಣ್ಣಿಟ್ಟಿತ್ತು ಮತ್ತು ಶನಿವಾರ ದಾಳಿ ಮಾಡಿ ಅವರನ್ನು ಬಂಧಿಸಿತು.

ಇದನ್ನೂ ಓದಿ | Road Accident : ಅತಿವೇಗ ತಂದ ಆಪತ್ತು; ಇಬ್ಬರ ಪ್ರಾಣ ಕಸಿದ ಅಪಘಾತಗಳು!

ಇದಲ್ಲದೆ ಬಿಹಾರ ಜಿಲ್ಲೆಯ ರೋಹ್ತಾಸ್‌ ಜಿಲ್ಲೆಯ ಶಶಿಭೂಷಣ್‌, ಮಹಾರಾಷ್ಟ್ರದ ಯಾವತ್ಮಲ್‌ ಜಿಲ್ಲೆಯ ಶಿವ ಪಾಟೀಲ್‌ ಅಲಿಯಾಸ್‌ ಭೀಮರಾವ್‌ ಅವರ ಮನೆಗಳಿಗೂ ದಾಳಿ ಮಾಡಲಾಗಿದೆ.

ವಿವೇಕ್‌ ಠಾಕೂರ್‌ ಮನೆಯಿಂದ 6600 ಮುಖ ಬೆಲೆಯ ಕರೆನ್ಸಿ, ಪ್ರಿಂಟಿಂಗ್‌ ಪೇಪರ್‌ ವಶಪಡಿಸಿಕೊಳ್ಳಲಾಗಿದೆ. ಠಾಕೂರ್‌ ಮತ್ತು ಪಾಟೀಲ್‌ ಗಡಿಯಾಚೆಯಿಂದಲೂ ಕರೆನ್ಸಿಗಳನ್ನು ತರಿಸಿಕೊಂಡು ಇಲ್ಲಿ ಪ್ರಸರಣ ಮಾಡುತ್ತಿದ್ದರು ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

ಬ್ಯಾಂಕ್‌ ಹಗರಣಗಳ ಸಿಬಿಐ ತನಿಖೆ; ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದ ಡಾ. ಶಂಕರ್ ಗುಹಾ ದ್ವಾರಕನಾಥ್

ಗುರು ರಾಘವೇಂದ್ರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್, ಶ್ರೀ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಹಗರಣದ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವುದಕ್ಕೆ ಡಾ. ಶಂಕರ್ ಗುಹಾ ದ್ವಾರಕನಾಥ್ ಸಂತಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Dr Sankara Guha Dwarakanath
Koo

ಬೆಂಗಳೂರು: ಕರ್ನಾಟಕ ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂದಿಸಿ, ಶ್ರೀ ಗುರು ರಾಘವೇಂದ್ರ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್, ಶ್ರೀ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಇದರಿಂದ ಬ್ಯಾಂಕ್‌ಗಳಲ್ಲಿ ನಡೆದ ಕೋಟ್ಯಂತರ ರೂಪಾಯಿ ಅವ್ಯವಹಾರ ಹೊರ ತರಲು ನಾನು ಸತತ ಮೂರು ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ ಎಂದು ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರು ಮತ್ತು ಷೇರುದಾರರ ಹಿತರಕ್ಷಣಾ ವೇದಿಕೆಯ ಮುಖ್ಯ ಪೋಷಕರಾದ ಡಾ. ಶಂಕರ್ ಗುಹಾ ದ್ವಾರಕನಾಥ್ (Dr Sankara Guha Dwarakanath) ತಿಳಿಸಿದ್ದಾರೆ.

ಸಹಕಾರಿ ಬ್ಯಾಂಕ್‌ಗಳ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕರ್ನಾಟಕ ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂದಿಸಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಇದರ ಹಿಂದೆ ಯಾವ ಎಂಎಲ್ಎ, ಎಂಪಿ ಅಥವಾ ಮತ್ಯಾರ ಕೈವಾಡವಿದ್ದರೂ ಅದನ್ನು ನಿಷ್ಪಕ್ಷಪಾತವಾಗಿ ಸಿಬಿಐ ತನಿಖೆ ಮಾಡಿ ನೊಂದ ಠೇವಣಿದಾರರಿಗೆ ನ್ಯಾಯ ಕೊಡಿಸಬೇಕಾಗಿ ವಿನಂತಿಸುತ್ತೇನೆ.

ಮಾನ್ಯ ತೇಜಸ್ವಿ ಸೂರ್ಯ ರವರು ಈ ಹಿಂದೆ ನಡೆಸಿದ ಕಾರ್ಯಕ್ರಮದಲ್ಲಿ ಒಂದು ತಿಂಗಳ ಒಳಗೆ ಈ ವಿಚಾರವಾಗಿ ಪವರ್ ಪಾಯಿಂಟ್ ಪ್ರೆಸೆಂಟೇಶನ್ ಅನ್ನು ಮಾಡಿ ನ್ಯಾಯ ಕೊಡಿಸುತ್ತೇವೆ ಎಂದು ಚುನಾವಣೆಗೆ ಮುನ್ನ ಹೇಳಿದ್ದರು. ಆದರೆ 6 ತಿಂಗಳು ಕಾಲ ಕಳೆದರೂ ಈ ಬಗ್ಗೆ ಯಾವ ಒಂದು ವಿಚಾರವನ್ನು ಮಾತನಾಡಿಲ್ಲಾ. ಬಿಜೆಪಿ ಸರ್ಕಾರವು ಚುನಾವಣೆಯ ನಂತರ ಇದ್ಯಾವುದರ ಬಗ್ಗೆಯೂ ಗಮನಹರಿಸದೆ ಈ ವಿಚಾರವನ್ನು ಅರ್ಧಕ್ಕೆ ಕೈ ಬಿಟ್ಟಿತ್ತು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರವು ನೊಂದ ಠೇವಣಿದಾರದ ರಕ್ಷಣೆಗಾಗಿ ಹಾಗೂ ಅವರಿಗೆ ನ್ಯಾಯ ಕೊಡಿಸುವುದಕ್ಕಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಇಂದು ಆದೇಶ ಹೊರಡಿಸಿದೆ. ಇದು ಈ ಹೋರಾಟದಲ್ಲಿ ನನ್ನ ಜತೆ ಕೈಜೋಡಿಸಿದ ಎಲ್ಲರಿಗೂ ನಾನು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Bheemanna Khandre: ರಾಜ್ಯದಲ್ಲೇ ಬೀದರ್ ಉಳಿಯಲು ಭೀಮಣ್ಣ ಖಂಡ್ರೆ ಹೋರಾಟವೂ ಕಾರಣ: ಸಿಎಂ

ಗುರು ರಾಘವೇಂದ್ರ, ವಸಿಷ್ಠ, ಗುರು ಸಾರ್ವಭೌಮ ಬ್ಯಾಂಕ್‌ ಹಗರಣದ ಸಿಬಿಐ ತನಿಖೆಗೆ ಸಿಎಂ ಒಪ್ಪಿಗೆ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

ಬೆಂಗಳೂರಿನ ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ ಆಡಳಿತ ಮಂಡಳಿಯ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಕರು ಮತ್ತು ಸಿಬ್ಬಂದಿ ನಡೆಸಿರುವ ಹಗರಣದ ತನಿಖೆ ಮಾಡಿ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ತನಿಖಾಧಿಕಾರಿಗಳಿಗೆ ಸಹಕರಿಸಬೇಕು ಎಂದು ಗೃಹ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಸಿಬಿಐಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್​​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಇದನ್ನೂ ಓದಿ | Telangana Elections 2023 : ತೆಲಂಗಾಣ ಕೈ ಶಾಸಕರ ರಕ್ಷಣೆ; ಡಿಕೆಶಿ, ಜಮೀರ್‌ಗೆ ಹೈಕಮಾಂಡ್‌ ಹೊಣೆ

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Fake Currency : ನಕಲಿ ನೋಟು ಜಾಲದ ಮೇಲೆ NIA ದಾಳಿ; ಬಳ್ಳಾರಿಯಲ್ಲಿ ಒಬ್ಬ ಅರೆಸ್ಟ್‌

Fake Currency : ರಾಷ್ಟ್ರದ ನಾಲ್ಕು ರಾಜ್ಯದಲ್ಲಿ ಎನ್‌ಐಎ ದಾಳಿ ಮಾಡಿ ನಕಲಿ ನೋಟು ಜಾಲದ ಐವರನ್ನು ಬಂಧಿಸಿದೆ. ಅದರಲ್ಲಿ ಬಳ್ಳಾರಿಯ ಮಹೀಂದ್ರಾ ಕೂಡಾ ಒಬ್ಬ.

VISTARANEWS.COM


on

Fake Currency NIA
Koo

ನವದೆಹಲಿ/ಬೆಂಗಳೂರು: ರಾಷ್ಟ್ರೀಯ ತನಿಖಾ ದಳವು (National Investigation Agency) ನಕಲಿ ನೋಟು (Fake Currency) ಜಾಲದ ಮೇಲೆ ಮುಗಿಬಿದ್ದಿದೆ. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ (NIA Raid) ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ (One arrested in Ballary) ಹಿಡಿದಿದೆ. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎನ್ನಲಾಗಿದೆ.

ನಾಲ್ಕು ರಾಜ್ಯಗಳಲ್ಲಿ ಏನೇನು ಸಿಕ್ಕಿದೆ, ಎಷ್ಟು ಜನ ಬಂಧನ?

ರಾಷ್ಟ್ರೀಯ ತನಿಖಾ ದಳವು ಏಕಕಾಲದಲ್ಲಿ ನಾಲ್ಕು ರಾಜ್ಯಗಳಲ್ಲಿ ದಾಳಿಯನ್ನು ಸಂಘಟಿಸಿತ್ತು. ನಕಲಿ ನೋಟುಗಳ ಮುದ್ರಣದ ಸ್ಪಷ್ಟ ಸುಳಿವನ್ನು ಪಡೆದೇ ಈ ದಾಳಿ ನಡೆದಿದ್ದು ಆರೋಪಿಗಳು ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಗಡಿಯಾಚೆಯಿಂದ ಭಾರತಕ್ಕೆ ನಕಲಿ ನೋಟುಗಳು ಹರಿದು ಬರುತ್ತಿರುವ ಬಗ್ಗೆ ಸಂಶಯ ಮೂಡಿತ್ತು. ಈ ನಿಟ್ಟಿನಲ್ಲಿ ನವೆಂಬರ್‌ 24ರಂದು ಎನ್‌ಐಎ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಅದರ ಭಾಗವಾಗಿ ಆಳ ತನಿಖೆಗೆ ಇಳಿದ ಸಂಸ್ಥೆಗೆ ದೇಶದೊಳಗಿನ ದುಷ್ಟ ಪ್ರಯೋಗಗಳ ಸುಳಿವುಗಳು ಸಿಕ್ಕವು.

ಸಾಕಷ್ಟು ಅಧ್ಯಯನದ ಬಳಿಕ ಎನ್‌ಐಎ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ರಾಹುಲ್‌ ತಾನಾಜಿ ಪಾಟೀಲ್‌ ಅಲಿಯಾಸ್‌ ಜಾವೇದ್‌, ಉತ್ತರ ಪ್ರದೇಶದ ಶಹಜಹಾನ್‌ ಪುರ ಜಿಲ್ಲೆಯ ವಿವೇಕ್‌ ಠಾಕೂರ್‌ ಅಲಿಯಾಸ್‌ ಆದಿತ್ಯ ಸಿಂಗ್‌ ಮತ್ತು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಮಹೇಂದರ್‌ ಎಂಬವರ ಮೇಲೆ ಕಣ್ಣಿಟ್ಟಿತ್ತು ಮತ್ತು ಶನಿವಾರ ದಾಳಿ ಮಾಡಿ ಅವರನ್ನು ಬಂಧಿಸಿತು.

ಇದಲ್ಲದೆ ಬಿಹಾರ ಜಿಲ್ಲೆಯ ರೋಹ್ತಾಸ್‌ ಜಿಲ್ಲೆಯ ಶಶಿಭೂಷಣ್‌, ಮಹಾರಾಷ್ಟ್ರದ ಯಾವತ್ಮಲ್‌ ಜಿಲ್ಲೆಯ ಶಿವ ಪಾಟೀಲ್‌ ಅಲಿಯಾಸ್‌ ಭೀಮರಾವ್‌ ಅವರ ಮನೆಗಳಿಗೂ ದಾಳಿ ಮಾಡಲಾಗಿದೆ.

ವಿವೇಕ್‌ ಠಾಕೂರ್‌ ಮನೆಯಿಂದ 6600 ಮುಖ ಬೆಲೆಯ ಕರೆನ್ಸಿ, ಪ್ರಿಂಟಿಂಗ್‌ ಪೇಪರ್‌ ವಶಪಡಿಸಿಕೊಳ್ಳಲಾಗಿದೆ. ಠಾಕೂರ್‌ ಮತ್ತು ಪಾಟೀಲ್‌ ಗಡಿಯಾಚೆಯಿಂದಲೂ ಕರೆನ್ಸಿಗಳನ್ನು ತರಿಸಿಕೊಂಡು ಇಲ್ಲಿ ಪ್ರಸರಣ ಮಾಡುತ್ತಿದ್ದರು ಎನ್ನಲಾಗಿದೆ.

Continue Reading

ಕರ್ನಾಟಕ

ಗುರು ರಾಘವೇಂದ್ರ, ವಸಿಷ್ಠ, ಗುರು ಸಾರ್ವಭೌಮ ಬ್ಯಾಂಕ್‌ ಹಗರಣದ ಸಿಬಿಐ ತನಿಖೆಗೆ ಸಿಎಂ ಒಪ್ಪಿಗೆ

ಬೆಂಗಳೂರಿನ ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

VISTARANEWS.COM


on

Guru Raghavendra bank
Koo

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

ಬೆಂಗಳೂರಿನ ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ ಆಡಳಿತ ಮಂಡಳಿಯ ನಿರ್ದೇಶಕರು, ಮುಖ್ಯ ಕಾರ್ಯನಿರ್ವಾಹಕರು ಮತ್ತು ಸಿಬ್ಬಂದಿ ನಡೆಸಿರುವ ಹಗರಣದ ತನಿಖೆ ಮಾಡಿ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖೆಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ತನಿಖಾಧಿಕಾರಿಗಳಿಗೆ ಸಹಕರಿಸಬೇಕು ಎಂದು ಗೃಹ ಇಲಾಖೆಯ ಸರ್ಕಾರದ ಕಾರ್ಯದರ್ಶಿ, ಸಿಬಿಐಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಬ್ಯಾಂಕ್‌ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು. ಮೂರೂ ಬ್ಯಾಂಕ್‌ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಬೆಂಬಲ ಸೂಚಿಸಿದ್ದರು. ಇದೀಗ ಹಗರಣಗಳ ತನಿಖೆ ಹೊಣೆಯನ್ನು ಸಿಬಿಐಗೆ ನೀಡಲು ಅನುಮೋದನೆ ನೀಡಲಾಗಿದೆ.

ಗುರು ರಾಘವೇಂದ್ರ ಬ್ಯಾಂಕ್ ಹಗರಣದ​ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿ ನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಆದರೆ ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರದು ಈ ಹಣವನ್ನು ಲಾಂಡರಿಂಗ್​ ಮಾಡಿದೆ.

ಇದನ್ನೂ ಓದಿ | Murder case : ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಸ್ತೆಗೆ ಬೀಸಾಕಿದ ಕಿಡಿಗೇಡಿಗಳು!

ಫೆಬ್ರವರಿ 2022 ರಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಮನಿ ಲಾಂಡರಿಂಗ್ ಆರೋಪದ ಮೇಲೆ ಇಡಿ ಬಂಧಿಸಿತು. ಈವರೆಗೆ ಸಂಸ್ಥೆಯ ಅಧ್ಯಕ್ಷ ಸೇರಿ 4 ಮಂದಿಯನ್ನು ಬಂಧಿಸಲಾಗಿದೆ. ಬ್ಯಾಂಕ್​​ನಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನವರಾಗಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿಗುರು ರಾಘವೇಂದ್ರ ಸಹಕಾರ ಬ್ಯಾಂಕ್​ನಲ್ಲಿ ಠೇವಣಿ ಇಟ್ಟಿದ್ದರು.

ಗುರು ರಾಘವೇಂದ್ರ ಬ್ಯಾಂಕ್‌ ಹಾಗೂ ಗುರು ಸಾರ್ವಭೌಮ ಬ್ಯಾಂಕ್‌ನಲ್ಲಿ 1,500 ಕೋಟಿ ರೂ. ಅಕ್ರಮ, ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 450 ರಿಂದ 500 ಕೋಟಿ ವಂಚನೆ ನಡೆದಿರುವ ಆರೋಪವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
police protest in Chikkamagaluru
ಪ್ರಮುಖ ಸುದ್ದಿ12 mins ago

ಕಾಫಿನಾಡಲ್ಲಿ ವಕೀಲರ ವಿರುದ್ಧ ಪೊಲೀಸರ ಪ್ರತಿಭಟನೆ; ಸಾಮೂಹಿಕ ರಾಜೀನಾಮೆ ಎಚ್ಚರಿಕೆ

Man Kills Girlfriend
ಕ್ರೈಂ55 mins ago

ಪ್ರೇಯಸಿಯನ್ನು ಕೊಂದು, ಆಕೆಯ ಶವದ ಫೋಟೊ ವಾಟ್ಸ್‌ಆ್ಯಪ್ ಸ್ಟೇಟಸ್‌ ಇಟ್ಟ ಯುವಕ

Pro Pak Slogans
ಕರ್ನಾಟಕ1 hour ago

Pro Pak Slogan: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಇಬ್ಬರ ಬಂಧನ

home
ಧಾರ್ಮಿಕ1 hour ago

Vastu Tips: ಇದು ಬರೀ ಬೆಳಕಲ್ಲ… ಅದೃಷ್ಟಕ್ಕಾಗಿ ವಾಸ್ತು ಪ್ರಕಾರ ಮನೆಯನ್ನು ಈ ರೀತಿ ಬೆಳಗಿ

december
ಮನಿ-ಗೈಡ್1 hour ago

Money Guide: ಆಧಾರ್‌ ಅಪ್‌ಡೇಟ್‌ನಿಂದ ಎಫ್‌ಡಿ ಹೂಡಿಕೆವರೆಗೆ; ತಿಂಗಳಾಂತ್ಯಕ್ಕೆ ಮುಗಿಸಲೇಬೇಕಾದ ಕೆಲಸಗಳಿವು

Tsunami
ಪ್ರಮುಖ ಸುದ್ದಿ1 hour ago

Tsunami Warning: 7.6 ತೀವ್ರತೆಯ ಭೂಕಂಪ; ಭೀಕರ ಸುನಾಮಿಯ ವಾರ್ನಿಂಗ್‌!

ABD Villiars
ಕ್ರಿಕೆಟ್2 hours ago

AB de Villiers : ನನ್ನ ಹೃದಯ ಆರ್​​ಸಿಬಿಯಲ್ಲೇ ಇದೆ ಎಂದ ಮಿಸ್ಟರ್​ 360

Dr Sankara Guha Dwarakanath
ಬೆಂಗಳೂರು2 hours ago

ಬ್ಯಾಂಕ್‌ ಹಗರಣಗಳ ಸಿಬಿಐ ತನಿಖೆ; ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದ ಡಾ. ಶಂಕರ್ ಗುಹಾ ದ್ವಾರಕನಾಥ್

Rohit Sharma1
ಕ್ರಿಕೆಟ್2 hours ago

Team India : ವಿಶ್ವಕಪ್​ ಫೈನಲ್​ನಲ್ಲಿ ಸೋತಿದ್ದು ಯಾಕೆ? ದ್ರಾವಿಡ್, ರೋಹಿತ್​ಗೆ ಪ್ರಶ್ನೆಗಳ ಸುರಿಮಳೆ

Fake Currency NIA
ಕರ್ನಾಟಕ2 hours ago

Fake Currency : ನಕಲಿ ನೋಟು ಜಾಲದ ಮೇಲೆ NIA ದಾಳಿ; ಬಳ್ಳಾರಿಯಲ್ಲಿ ಒಬ್ಬ ಅರೆಸ್ಟ್‌

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Cockroaches bite baby born 2 days ago in vanivilas hospital
ಆರೋಗ್ಯ5 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ1 day ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ1 day ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ2 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ2 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ5 days ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

ಟ್ರೆಂಡಿಂಗ್‌