KFD vaccine | ಮಂಗನ ಕಾಯಿಲೆ ತಡೆ ಲಸಿಕೆಗೆ ಅನುಮತಿಯೇ ಇಲ್ಲ; ಆದರೂ ಜನರಿಗೆ ನೀಡುತ್ತಿದೆ ಸರ್ಕಾರ! Vistara News
Connect with us

ಆರೋಗ್ಯ

KFD vaccine | ಮಂಗನ ಕಾಯಿಲೆ ತಡೆ ಲಸಿಕೆಗೆ ಅನುಮತಿಯೇ ಇಲ್ಲ; ಆದರೂ ಜನರಿಗೆ ನೀಡುತ್ತಿದೆ ಸರ್ಕಾರ!

ಮಲೆನಾಡಿನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ಮಂಗನ ಕಾಯಿಲೆ ತಡೆಗೆ ನೀಡಲಾಗುತ್ತಿರುವ ಲಸಿಕೆಗೆ (KFD vaccine) ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಪ್ರಾಧಿಕಾರ ಅನುಮತಿಯನ್ನೇ ನೀಡಿಲ್ಲ ಎಂಬುದು ಈಗ ಬಹಿರಂಗಗೊಂಡಿದೆ.

VISTARANEWS.COM


on

Ineffective KFD Vaccine Being Used for Decades
Koo

ಬೆಂಗಳೂರು: ಕಳೆದ ಏಳು ದಶಕಗಳಿಂದ ಮಲೆನಾಡಿನ ಜನರನ್ನು ಕಾಡುತ್ತಿರುವ “ಮಂಗನ ಕಾಯಿಲೆʼʼ ಎಂದೇ ಪ್ರಸಿದ್ಧಿಯಾಗಿರುವ “ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ʼʼ ಬಾರದಂತೆ ತಡೆಯಲು ನೀಡಲಾಗುತ್ತಿರುವ ಲಸಿಕೆಗೆ (KFD vaccine) ಔಷಧ ಗುಣಮಟ್ಟ ನಿಯಂತ್ರಕರ ಕೇಂದ್ರೀಯ ಸಂಘಟನೆ (Central Drugs Standard Control Organisation-CDSCO) ಅನುಮತಿಯನ್ನೇ ನೀಡಿಲ್ಲ ಎಂಬುದು ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಲಸಿಕೆಗೆ CDSCO ನೀಡಿದ್ದ ಅನುಮತಿಯು 2001 ಕ್ಕೇ ಅಂತ್ಯಗೊಂಡಿದ್ದು, ಕಳೆದ ಎರಡು ದಶಕಗಳಿಂದ ಅನುಮತಿ ಪಡೆದುಕೊಳ್ಳದೇ ಈ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗುತ್ತಿದೆ ಎಂದು ನವದೆಹಲಿಯ “ಮಿಂಟ್‌ʼʼ ಪತ್ರಿಕೆ ತನಿಖಾ ವರದಿ ಪ್ರಕಟಿಸಿದೆ. ಅನುಮತಿ ಪಡೆಯದೇ ಇರುವುದಕ್ಕೆ ಇದರ ಗುಣಮಟ್ಟವೇ ಕಾರಣ ಎಂಬುದೂ ಬಹಿರಂಗಗೊಂಡಿದೆ. ಔಷಧ ಮತ್ತು ಕಾಂತಿವರ್ಧಕ ಕಾಯ್ದೆ ಪ್ರಕಾರ ನಮ್ಮ ದೇಶದಲ್ಲಿ ಯಾವುದೇ ಔಷಧ, ಲಸಿಕೆ ಬಳಕೆಯಾಗಬೇಕಾದರೂ ಕೇಂದ್ರ ಆರೋಗ್ಯ ಇಲಾಖೆಯ ಅಡಿ ಕಾರ್ಯನಿರ್ವಹಿಸುವ CDSCOನ ಅನುಮತಿ ಪಡೆಯುವುದು ಕಡ್ಡಾಯ. ಆದರೆ ಇದರ ಅನುಮತಿಯನ್ನೇ ಪಡೆಯದ ಲಸಿಕೆಯನ್ನು ಸರ್ಕಾರವೇ ಜನರಿಗೆ ನೀಡಿರುವುದು ಆಶ್ಚರ್ಯ ಮತ್ತು ಅಘಾತ ಮೂಡಿಸಿದೆ.

ಮಂಗನ ಕಾಯಿಲೆಯು ಬಹುತೇಕವಾಗಿ ಬೇಸಿಗೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು ಬಾರದಂತೆ ತಡೆಯಲು ಈಗ ಲಸಿಕೆ ನೀಡಲಾಗುತ್ತಿದೆ. ಕಾಯಿಲೆ ಬಂದ ನಂತರ ನಿಯಂತ್ರಣಕ್ಕೆ ಇನ್ನೂ ಯಾವುದೇ ಔಷಧಿಯನ್ನು ನಿರ್ಧಿಷ್ಟವಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯೇ ಈ ಲಸಿಕೆಯನ್ನು ನೀಡುತ್ತಾ ಬಂದಿದೆ.

ಅನುಮತಿ ನಿರಾಕರಣೆಗೆ ಗುಣಮಟ್ಟವೇ ಕಾರಣ
ಮಂಗನ ಕಾಯಿಲೆ ಮೊದಲು ಕಾಣಿಸಿಕೊಂಡಿದ್ದು ೧೯೫೭ರಲ್ಲಿ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕ್ಯಾಸನೂರು ರಕ್ಷಿತಾರಣ್ಯ ಮತ್ತು ಸುತ್ತಮುತ್ತಲಿನ ಕಾಡುಗಳಲ್ಲಿ ಮಂಗಗಳಿಂದ ಉಣ್ಣೆಗಳ ಮೂಲಕ ಈ ಕಾಯಿಲೆ ಹರಡಲಾರಂಭಿಸಿತು. ನೂರಾರು ಜನರ ಸಾವಿಗೆ ಕಾರಣವಾದ ಈ ರೋಗದ ನಿಯಂತ್ರಣಕ್ಕೆ 1984ರಲ್ಲಿ ಪುಣೆಯ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ವೈರಾಲಜಿಯು ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು, ಇದನ್ನು ಮೊದಲಿಗೆ (1989 ರಿಂದ) ಶಿವಮೊಗ್ಗದಲ್ಲಿಯೇ ತಯಾರಿಸಿ, ಜನರಿಗೆ ನೀಡಲಾಗುತ್ತಿತ್ತು.

2000ರ ವೇಳೆಗೆ ಕಾಯಿಲೆಯ ತೀವ್ರತೆ ಕಡಿಮೆಯಾಗಿದ್ದರಿಂದ ಈ ಲಸಿಕಾ ಕೇಂದ್ರವೂ ಮುಚ್ಚಿದ್ದು, ಈಗ ಬೆಂಗಳೂರಿನ ಹೆಬ್ಬಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ (Institute of Animal Health and Veterinary Biologicals) ಯಲ್ಲಿ ತಯಾರಿಸಿ, ಬಳಕೆಗೆ ನೀಡಲಾಗುತ್ತಿದೆ. ಆದರೆ ಈ ಲಸಿಕೆಗೆ ಔಷಧ ಗುಣಮಟ್ಟ ನಿಯಂತ್ರಕರ ಕೇಂದ್ರೀಯ ಸಂಘಟನೆ (CDSCO) ನೀಡಿದ್ದ ಅನುಮತಿಯು 2001ಕ್ಕೇ ಅಂತ್ಯವಾಗಿದೆ. ಆದರೂ ಪ್ರಾಣಿಗಳಿಗೆ ಲಸಿಕೆ ಉತ್ಪಾದಿಸುವ ಘಟಕದಲ್ಲಿ ಈ ಲಸಿಕೆಯನ್ನು ತಯಾರಿಸಿ ಜನರಿಗೆ ನೀಡಲಾಗುತ್ತಿದೆ.

ನಮ್ಮ ಆರೋಗ್ಯ ಇಲಾಖೆ 2013-14 ರಲ್ಲಿ ಒಮ್ಮೆ ಇದರ ಸಾಮರ್ಥ್ಯವನ್ನು ಪರೀಕ್ಷೆಗೆ ಒಳಪಡಿಸಿಕೊಂಡು, ಜನರಿಗೆ ನೀಡುವ ಕಾರ್ಯ ಮುಂದುವರಿಸಿದೆ. ಇತ್ತೀಚೆಗೆ ಈ ಲಸಿಕೆಯ ಗುಣಮಟ್ಟದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿತ್ತು. ಲಸಿಕೆ ಪಡೆದವರಿಗೂ ಮಂಗನ ಕಾಯಿಲೆ ಬರುತ್ತಿದ್ದು, ಲಸಿಕೆ ಪವರ್‌ ಕಳೆದುಕೊಂಡಿದೇ ಎಂದೇ ಜನಸಾಮಾನ್ಯರು ದೂರುತ್ತಿದ್ದರು. ಆದರೂ ಸರ್ಕಾರ ಈ ಲಸಿಕೆ ತಯಾರಿಕೆ, ವಿತರಣೆಯ ವ್ಯವಸ್ಥೆಯ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಮಾನವನ ಲಸಿಕೆ ತಯಾರಿ!
CDSCO ಲಸಿಕೆಗೆ ಅನುಮತಿ ನೀಡದೇ ಇರುವುದಕ್ಕೆ ಕಾರಣಗಳು ಇಂತಿವೆ;
೧. ಈಗ ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಈ ಲಸಿಕೆಯನ್ನು ತಯಾರಿಸಲಾಗುತ್ತಿದೆ. ಇದು ಪಶುಗಳಿಗೆ ಸಂಬಂಧಿಸಿದ ಪ್ರಯೋಗಾಲಯವನ್ನು ಹೊಂದಿದ್ದು, ಇಲ್ಲಿ ಪಶುಗಳ ಲಸಿಕೆ, ಔಷಧಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇಲ್ಲಿ ಮಾನವನಿಗೆ ನೀಡಲಾಗುವ ಈ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

೨. ಲಸಿಕೆಯ ಗುಣಮಟ್ಟದ ಕುರಿತು ಚೆನ್ನೈನಲ್ಲಿರುವ ಸಾಂಕ್ರಾಮಿಕ ರೋಗಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಸಂಸ್ಥೆ (National Institute of Epidemiology) ನಡೆಸಿದ ಅಧ್ಯಯನ ಸೇರಿದಂತೆ ಹಲವು ಅಧ್ಯಯನಗಳು ಲಸಿಕೆಯು ಪರಿಣಾಮಕಾರಿಯಾಗಿಲ್ಲ ಎಂದು ವರದಿ ನೀಡಿವೆ.

ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯ ಆವರಣದಲ್ಲಿದ್ದ ಲಸಿಕೆ ತಯಾರಿಸುವ ಘಟಕವನ್ನು ಸ್ಥಗಿತಗೊಳಿಸಿದ ನಂತರ ರಾಜ್ಯ ಸರ್ಕಾರವೇ ಪ್ರಾಣಿಗಳಿಗೆ ಲಸಿಕೆ ತಯಾರಿಸುವಲ್ಲಿ (ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ) ಈ ಲಸಿಕೆಯನ್ನು ಅಭಿವೃದ್ಧಿ ಪಡಿಸಲು ಆರಂಭಿಸಿತು. ಆದರೆ ಇದಕ್ಕೆ ಬೇಕಾದ ಔಷಧಿ ಪ್ರಾಧಿಕಾರದ ಅನುಮತಿಯನ್ನು ಪಡೆದುಕೊಂಡಿರಲಿಲ್ಲ!

ಅಲ್ಲದೆ, ಲಸಿಕೆಯ ಗುಣಮಟ್ಟದ ಬಗ್ಗೆ ಬಳಸುವ ಜನರೇ ಕಳೆದ ಐದು ವರ್ಷಗಳಿಂದ ದೂರುತ್ತಿದ್ದರೂ, ಕೇಂದ್ರ ಸರ್ಕಾರದ ಸಂಸ್ಥೆಗಳೇ ಈ ಲಸಿಕೆಯ ಗುಣಮಟ್ಟದ ಕುರಿತು ನೀಡಿದ್ದ ವರದಿಗಳನ್ನು ಮುಚ್ಚಿಟ್ಟು, ಮತ್ತದೇ ಲಸಿಕೆಯನ್ನು ಉತ್ಪಾದಿಸಿ ಜನರಿಗೆ ನೀಡಲಾಗುತ್ತಿತ್ತು. ಇದೀಗ ಸರ್ಕಾರದ, ಆರೋಗ್ಯ ಇಲಾಖೆಯ ಈ ಬೇಜವಾಬ್ದಾರಿತನ ಬೆಳಕಿಗೆ ಬಂದಿದ್ದು, ಮಲೆನಾಡಿನ ಜನರು ಆತಂಕಗೊಂಡಿದ್ದಾರೆ. ಹೀಗೆ ಗುಣಮಟ್ಟವಿಲ್ಲದ ಲಸಿಕೆಯನ್ನು ಪಡೆದುಕೊಂಡಿರುವುದರಿಂದ ಏನಾದರೂ ಅಡ್ಡಪರಿಣಾಮಗಳಾಗಬಹುದೇ ಎಂಬ ಆಂತಕ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ 21 ವರ್ಷಗಳಿಂದ ಅನುಮತಿಯಿಲ್ಲದ ಈ ಲಸಿಕೆಯನ್ನು ಜನರಿಗೆ ನೀಡಲಾಗುತ್ತಿದ್ದು, ಒಂದು ಅಂದಾಜಿನ ಪ್ರಕಾರ ಸುಮಾರು 50 ಲಕ್ಷ ಜನರಿಗೆ ಈ ಲಸಿಕೆಯನ್ನು ನೀಡಲಾಗಿದೆ. ಮಂಗನ ಕಾಯಿಲೆ ಕಾಣಿಸಿಕೊಂಡ ತಕ್ಷಣ ಆ ಪ್ರದೇಶದಲ್ಲಿ ವಾಸಿಸುವ ಜನರಿಗೆ ಮುಂಜಾಗ್ರತೆಯಾಗಿ ಈ ಲಸಿಕೆಯನ್ನು ನೀಡಲಾಗುತ್ತದೆ.

ಇದನ್ನೂ ಓದಿ | ರಾಜ ಮಾರ್ಗ ಅಂಕಣ | ಪೋಲಿಯೋಗೆ ಲಸಿಕೆ ಕಂಡುಹಿಡಿದ ಜೋನಾಸ್‌ ಸಾಲ್ಕ್‌ ಅದನ್ನು ಮಾರಾಟ ಮಾಡಲೇ ಇಲ್ಲ, ಯಾಕೆ?

ಆರೋಗ್ಯ

14 ತಿಂಗಳು ಮೂತ್ರ ವಿಸರ್ಜನೆ ಸಾಧ್ಯವಾಗದೆ ಪರಿತಪಿಸಿದ ಮಹಿಳೆ; ವರ್ಷದ ಬಳಿಕ ಗೊತ್ತಾಯ್ತು ಈ ಅಪರೂಪದ ಕಾಯಿಲೆ ಹೆಸರು

ಯುವತಿಯ ವಿಚಾರದಲ್ಲಿ ಸಮಸ್ಯೆಯೇ ಆಯಿತು. 2020ರಲ್ಲಿ ಮೊದಲ ಬಾರಿಗೆ ಮೂತ್ರ ವಿಸರ್ಜನೆ ಆಗದೆ ಇದ್ದಾಗ ಆಕೆ ಮೊದಲು ಲಂಡನ್​​ನಲ್ಲಿರುವ ಸೇಂಟ್ ಥಾಮಸ್​ ಆಸ್ಪತ್ರೆಗೆ ಹೋದರು. ಸ್ಕ್ಯಾನ್​ ಮಾಡಿದ ವೈದ್ಯರು, ನಿಮ್ಮ ಮೂತ್ರಕೋಶದಲ್ಲಿ ಸುಮಾರು 1 ಲೀಟರ್​ ಮೂತ್ರ ತುಂಬಿದೆ ಎಂದು ಹೇಳಿದರು.

VISTARANEWS.COM


on

Edited by

UK Woman Unable To Urinate for over 1 Year
Koo

ಯುನೈಟೆಡ್​ ಕಿಂಗ್​​ಡಮ್​​ನ, 30ವರ್ಷದ ಎಲ್ಲೆ ಆಡಮ್ಸ್ ಎಂಬ ಮಹಿಳೆಗೆ 14 ತಿಂಗಳುಗಳ ಕಾಲ ಮೂತ್ರ ವಿಸರ್ಜನೆ ಮಾಡಲು ಸಾಧ್ಯವಾಗಿಯೇ ಇಲ್ಲವಂತೆ..! ಅಂದರೆ ಆಕೆ ಒಂದೂವರೆ ವರ್ಷಗಳ ಕಾಲ ಮೂತ್ರವನ್ನು ವಿಸರ್ಜಿಸಲೇ ಇಲ್ಲ. ಅದೆಷ್ಟೇ ನೀರು, ಜ್ಯೂಸ್​ ಏನೇ ಕುಡಿಯಲಿ, ಆಕೆಗೆ ಮೂತ್ರ ಹೊರಹೋಗುತ್ತಿರಲಿಲ್ಲ. ಮೂತ್ರಕ್ಕೆ ಹೋಗಬೇಕು ಎಂದು ಆಕೆಗೆ ಅನ್ನಿಸಿದರೂ, ಮಾಡಲು ಸಾಧ್ಯವಾಗುತ್ತಿರಲಿಲ್ಲವಂತೆ. ಈ ಬಗ್ಗೆ ಆಕೆಯೇ ತನ್ನ ಇನ್​ಸ್ಟಾಗ್ರಾಂ ಪೋಸ್ಟ್​​ನಲ್ಲಿ ಹೇಳಿಕೊಂಡಿದ್ದಾರೆ.

ಜೀವನದಲ್ಲಿ ಎಲ್ಲವೂ ಚೆನ್ನಾಗಿತ್ತು. ಆರೋಗ್ಯವಾಗಿಯೇ ಇದ್ದೆ. 2020ರ ಅಕ್ಟೋಬರ್​​ನಲ್ಲಿ ಒಂದು ದಿನ ಬೆಳಗ್ಗೆ ಎದ್ದೆ. ಅಂದು ಮೂತ್ರ ಮಾಡಲು ಆಗಲಿಲ್ಲ. ದಿನವೆಲ್ಲ ಹಾಗೇ ಕಳೆದೆ. ನನಗೆ ವಿಚಿತ್ರ ಎನ್ನಿಸಿತು. ಆತಂಕವಾಯಿತು. ವೈದ್ಯರ ಬಳಿ ಹೋದಾಗಲೇ ಗೊತ್ತಾಯಿತು ನನಗೆ ‘ಫೌಲರ್ ಸಿಂಡ್ರೋಮ್’ ಎಂಬ ಅಪರೂಪದ ಕಾಯಿಲೆ ಬಂದಿದ್ದು. ಈ ಕಾಯಿಲೆ ನನ್ನ ಜೀವನವನ್ನು ಸಂಪೂರ್ಣವಾಗಿಯೇ ಬದಲಿಸಿಬಿಟ್ಟಿತು. ಹಾಸಿಗೆಯೇ ಮೇಲೆ ಜೀವನ ಕಳೆವಂತಾಯ್ತು. ಎದ್ದು ಟಾಯ್ಲೆಟ್​ಗೂ ಹೋಗದ ಸ್ಥಿತಿ ತಲುಪಿದೆ’ ಎಂದು ಎಲ್ಲೆ ಬರೆದುಕೊಂಡಿದ್ದಾರೆ.

ಅಂದಹಾಗೇ ಈ ಫೌಲರ್​ ಸಿಂಡ್ರೋಮ್​ ಯಾಕೆ ಉಂಟಾಗುತ್ತದೆ ಎಂಬುದಕ್ಕೆ ನಿರ್ದಿಷ್ಟ ಕಾರಣ ಗೊತ್ತಿಲ್ಲ. ಮೂತ್ರಕೋಶದ ತುದಿಯಲ್ಲಿರುವ ಸ್ನಾಯುಗಳು ತೆರೆಯುವುದು ಮತ್ತು ಬಂದ್​ ಆಗುವ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತವೆ. ಹೀಗಾದಾಗ ಮೂತ್ರ ಅದರಷ್ಟಕ್ಕೇ ಹೊರಹೋಗುವುದಿಲ್ಲ. ಇದು ಸಾಮಾನ್ಯವಾಗಿ ಯುವತಿಯರಲ್ಲಿ ಕಂಡುಬರುವ ಸಮಸ್ಯೆಯಾಗಿದೆ. ಹೆಚ್ಚಾಗಿ ಹೆರಿಗೆಯಾದ ಬಳಿಕ, ಕೆಲವು ಸರ್ಜರಿ ನಂತರ ಈ ಸಮಸ್ಯೆ ಕಾಣಿಸಿಕೊಳ್ಳಬಹುದು ಎನ್ನಲಾಗಿದ್ದರೂ, ಅದರ ಹೊರತಾಗಿ ಯಾಕೆ ತೊಂದರೆಯಾಗುತ್ತದೆ ಎಂದು ಗೊತ್ತಿಲ್ಲ.

ಈ ಯುವತಿಯ ವಿಚಾರದಲ್ಲಿ ಸಮಸ್ಯೆಯೇ ಆಯಿತು. 2020ರಲ್ಲಿ ಮೊದಲ ಬಾರಿಗೆ ಮೂತ್ರ ವಿಸರ್ಜನೆ ಆಗದೆ ಇದ್ದಾಗ ಆಕೆ ಮೊದಲು ಲಂಡನ್​​ನಲ್ಲಿರುವ ಸೇಂಟ್ ಥಾಮಸ್​ ಆಸ್ಪತ್ರೆಗೆ ಹೋದರು. ಸ್ಕ್ಯಾನ್​ ಮಾಡಿದ ವೈದ್ಯರು, ನಿಮ್ಮ ಮೂತ್ರಕೋಶದಲ್ಲಿ ಸುಮಾರು 1 ಲೀಟರ್​ ಮೂತ್ರ ತುಂಬಿದೆ ಎಂದು ಹೇಳಿ, ಅದನ್ನು ಟ್ಯೂಬ್ ಹಾಕಿ ಹೊರತೆಗೆದು, ಕಳಿಸಿದರು. ಆದರೆ ಮರುದಿನವೂ ಅದೇ ಸಮಸ್ಯೆಯಾಯಿತು. ಈ ಸಮಸ್ಯೆಗೆ ಕಾರಣ ಗೊತ್ತಾಗಲಿಲ್ಲ. ಹಲವು ತಪಾಸಣೆಗಳು, ಔಷಧಗಳು, ಚಿಕಿತ್ಸೆಯ ಬಳಿಕವೂ ಅದೇನು ರೋಗ ಗೊತ್ತಾಗಲಿಲ್ಲ. ನಂತರ ಎಲ್ಲೆ, ಮನೆಯಲ್ಲೇ ಮೂತ್ರವನ್ನೂ ಸ್ವಯಂ ಆಗಿ ತೆಗೆಯುವುದನ್ನು ಕಲಿತರು.

ಇದನ್ನೂ ಓದಿ: Harrassment : ಕಾಫಿ ತೋಟದೊಳಗೆ ಎಳೆದೊಯ್ದು ಯುವತಿಯ ಅತ್ಯಾಚಾರ ಯತ್ನ; ಒಬ್ಬ ಆರೋಪಿ ಸೆರೆ, ಇನ್ನಿಬ್ಬರು ಪರಾರಿ

ಹೀಗೆ ಒಂದು ವರ್ಷಕ್ಕೂ ಅಧಿಕ ಕಾಲದ ಬಳಿಕ 2021ರ ಡಿಸೆಂಬರ್​ನಲ್ಲಿ ಅವರಿಗೆ ಫೌಲರ್​ ಸಿಂಡ್ರೋಮ್ ಇರುವುದು ಪತ್ತೆಯಾಯಿತು. ನೀವು ಜೀವನ ಪರ್ಯಂತ ಹೀಗೆ ತೂರುನಳಿಕೆಯ ಮೂಲಕವೇ ಮೂತ್ರವನ್ನು ಹೊರಗೆ ತೆಗೆಯಬೇಕು ಎಂದು ವೈದ್ಯರು ಹೇಳಿದರು. ಇದೇ ಜನವರಿಯಲ್ಲಿ ಎಲ್ಲೆ ಆಡಮ್ಸ್​ ಒಂದು ಸರ್ಜರಿಗೂ ಒಳಗಾಗಿದ್ದಾರೆ. ಅದಾದ ಮೇಲೆ ಆಕೆ ತೂರು ನಳಿಕೆ ಬಳಕೆ ಕಡಿಮೆ ಮಾಡಿದ್ದಾರೆ. ಶೇ.50ರಷ್ಟು ಸಮಸ್ಯೆ ಸರಿಯಾಗಿದೆ ಎಂದು ಹೇಳಿಕೊಂಡಿದ್ದಾರೆ.

Continue Reading

ಆರೋಗ್ಯ

Lung Food: ಶ್ವಾಸಕೋಶ ಆರೋಗ್ಯವಾಗಿಡಲು ಈ ಎಲ್ಲ ಆಹಾರಗಳನ್ನು ಸೇವಿಸಿ!

VISTARANEWS.COM


on

Edited by

lung food
Koo

ನಾವು ಉಸಿರಾಡುವ ಗಾಳಿ ಇಂದು ಎಲ್ಲೆಲ್ಲೂ ಕಲಿಶಿತವಾಗಿದೆ. ವಾಯು ಮಾಲಿನ್ಯದಿಂದ, ಕೊರೋನಾದ ಕಾರಣದಿಂದ, ಧೂಮಪಾನದ ಚಟದಿಂದ ಹೀಗೆ ನಾನಾ ಕಾರಣಗಳಿಂದ ಇಂದು ಶ್ವಾಸಕೋಶದ ಆರೋಗ್ಯ ಹಲವರಲ್ಲಿ ಕ್ಷೀಣಿಸಿದೆ. ನಗರಗಳಲ್ಲಿ ಶುದ್ಧ ಗಾಳಿಯ ಕೊರತೆಯೂ ಇದರ ಕಾರಣಗಳಲ್ಲೊಂದು. ಹಾಗಾಗಿ ನಾವು ಸೇವಿಸುವ ಆಹಾರದ ವಿಚಾರದಲ್ಲಿ ನಾವು ಸಾಕಷ್ಟು ಜಾಗರೂಕರಾಗಿರಬೇಕು. ಶ್ವಾಸಕೋಶದ ಆರೋಗ್ಯಕ್ಕೆ ಪೂರಕವಾದ, ಜೀವಸತ್ವ, ಖನಿಜಾಂಶ ಹಾಗೂ ಆಂಟಿ ಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಯಾವೆಲ್ಲ ಆಹಾರದ ಸೇವನೆ ಒಳ್ಳೆಯದು (lung food) ಎಂಬುದನ್ನು ನೋಡೋಣ.

1. ಬಸಳೆ: ಬಸಳೆಯಲ್ಲಿ ಹೆಚ್ಚು ಆಂಟಿ ಆಕ್ಸಿಡೆಂಟ್‌ಗಳಿರುವುದರಿಂದ ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ) ಹಾಗೂ ಶ್ವಾಸಕೋಶ ಸಂಬಂಧೀ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಬಸಳೆಯಲ್ಲಿ ಅತ್ಯಂತ ಹೆಚ್ಚು ವಿಟಮಿನ್‌ ಸಿ ಇದ್ದು ಇದು ಶ್ವಾಸಕೋಶದ ಕ್ರಿಯಾಶೀಲತೆಯನ್ನು ಚುರುಕುಗೊಳಿಸುತ್ತದೆ.

2. ಬ್ರೊಕೋಲಿ: ಬ್ರೊಕೋಲಿ ಎಂಬ ಹೂವಿನಂತಹ ತರಕಾರಿಯಲ್ಲಿ ವಿಟಮಿನ್‌ ಸಿ ಹೇರಳವಾಗಿದ್ದು ಶ್ವಾಸಕೋಶದ ಆರೋಗ್ಯಕ್ಕೆ ಪೂರಕ. ಬ್ರೊಕೋಲಿ ಸೇವಿಸುತ್ತಿದ್ದರೆ ಶ್ವಾಸಕೋಶದ ಕ್ಯಾನ್ಸರ್‌ನಿಂದ ದೂರವಿರಬಹುದು.

3. ಬೆರ್ರಿ ಹಣ್ಣುಗಳು: ಆಂಟಿ ಆಕ್ಸಿಡೆಂಟ್‌ಗಳು ಬೇಕಾದಷ್ಟಿರುವ ಬೆರ್ರಿ ಹಣ್ಣಿನಲ್ಲಿ ವಾತಾವರಣದಲ್ಲಿರುವ ಕಲುಶಿತಗಾಳಿಯಿಂದ ಶ್ವಾಸಕೋಶಕ್ಕೆ ಹಾನಿಯಾಗುವುದನ್ನು ತಪ್ಪಿಸುತ್ತದೆ. ನಿತ್ಯವೂ ಬೆರ್ರಿ ಸೇವಿಸುತ್ತಿದ್ದರೆ ಶ್ವಾಸಕೋಶ ಹೆಚ್ಚು ಚುರುಕಾಗುವುದಲ್ಲದೆ, ಅಸ್ತಮಾದಂತಹ ತೊಂದರೆ ಇರುವ ಮಂದಿಗೂ ಕೊಂಚ ಪರಿಹಾರ ದೊರೆಯುತ್ತದೆ.

4. ಬೆಳ್ಳುಳ್ಳಿ: ಬೆಳ್ಳುಳ್ಳಿಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವ ಶಕ್ತಿಯೂ ಸೇರಿದಂತೆ ದೇಹದಲ್ಲಿರುವ ಉರಿಯೂತನ್ನು ಕಡಿಮೆಗೊಳಿಸುವ ತಾಕತ್ತಿದೆ. ಶ್ವಾಸಕೋಶದ ಆರೋಗ್ಯಕ್ಕೆ ಬೆಳ್ಳುಳ್ಳಿ ಬಹಳ ಒಳ್ಳೆಯದು. ಬೆಳ್ಳುಳ್ಳಿಯ ನಿತ್ಯ ಸೇವನೆಯಿಂದ ಶ್ವಾಸಕೋಶದ ಇನ್‌ಫೆಕ್ಷನ್‌ನಂತಹ ಸಮಸ್ಯೆಗಳೂ ದೂರಾಗುತ್ತದೆ.

5. ಅರಿಶಿನ: ಅರಿಶಿನದಲ್ಲಿ ದೇಹದ ಉರಿಯೂತವನ್ನು ಕಡಿಮೆ ಮಾಡುವ ಕರ್‌ಕ್ಯುಮಿನ್‌ ಎಂಬ ಅಂಶವು ಇದೆ. ಹಾಗಾದಿ ಶ್ವಾಸಕೋಶದಲ್ಲಿರುವ ಶೀತ, ಕಫದಂತಹ ಸಮಸ್ಯೆಗೂ ಉರಿಗೂ ಇದು ಉತ್ತಮ ಪರಿಹಾರ ನೀಡುವುದಲ್ಲದೆ ಶ್ವಾಸಕೋಶದ ಕಾರ್ಯವನ್ನು ಚುರುಕುಗೊಳಿಸುತ್ತದೆ.

6. ಶುಂಠಿ: ಅರಿಶಿನದಂತೆಯೇ ಶ್ವಾಸಕೋಶಕ್ಕೆ ರಕ್ಷಣೆ ಒದಗಿಸುವ, ಶ್ವಾಸಕೋಶದ ಕೆಲಸವನ್ನು ಚುರುಕಾಗಿಸುವ, ಉರಿಯೂತವನ್ನು ಕಡಿಮೆಗೊಳಿಸುವ ಇನ್ನೊಂದು ಆಹಾರ ಶುಂಠಿ. ಶುಂಠಿ ಟೀ ಅಥವಾ ಶುಂಠಿಯನ್ನು ನಿತ್ಯ ಬಳಸುವಿಕೆಯಿಂದ ಶ್ವಾಸಕೋಶದ ಕೆಲಸವನ್ನು ಚುರುಕಾಗಿಸಬಹುದು.

ಶ್ವಾಸಕೋಶದ ಆರೋಗ್ಯಕ್ಕೆ ಕೆಲವು ಸಲಹೆಗಳು:

1. ಧೂಮಪಾನವು ಇಂದು ಶ್ವಾಸಕೋಶದ ಕ್ಯಾನ್ಸರ್‌ ಹಾಗೂ ರೋಗಗಳಿಗೆ ಪ್ರಮುಖ ಕಾರಣ. ಶ್ವಾಸಕೋಶವನ್ನು ಆರೋಗ್ಯವಾಗಿ ಇರಿಸಿಕೊಳ್ಳಬೇಕೆಂದರಂತೆ ಮೊದಲು ಧೂಮಪಾನದಂತಹ ಕೆಟ್ಟ್‌ ಚಟಗಳಿದ್ದರೆ ಅದನ್ನು ಬಿಡುವುದು ಅತ್ಯಗತ್ಯ.

ಇದನ್ನೂ ಓದಿ: Health Tips: ನಾರು ಒಳ್ಳೆಯದು; ಆದರೂ ಅತಿಯಾಗಿ ತಿನ್ನಬೇಡಿ!

2. ಶ್ವಾಸಕೋಶ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ನಿತ್ಯ ವ್ಯಾಯಾಮ ಅತ್ಯಗತ್ಯ. ಪ್ರತಿನಿತ್ಯ ೩೦ ನಿಮಿಷದ ವ್ಯಾಯಾಮ, ನಡಿಗೆ ಶ್ವಾಸಕೋಶವನ್ನು ಚುರುಕಾಗಿರಿಸುತ್ತದೆ.

3. ವಾಯು ಮಾಲಿನ್ಯ ಅತಿಯಾಗಿದ್ದಾಗ ಹೊರಗಡೆ ವ್ಯಾಯಾಮ, ನಡಿಗೆ ಇತ್ಯಾದಿಗಳನ್ನು ಮಾಡಬೇಡಿ.

4. ಕೈಗಳನ್ನು ಯಾವಾಗಲೂ ಆಗಾಗ ತೊಳೆಯುತ್ತಿರಿ. ಕೈಗಳನ್ನು ಮುಖಕ್ಕೆ ಆಗಾಗ ಸ್ಪರ್ಶಿಸುತ್ತಿರುವುದರಿಂದ ಕೈಗಳ ಮೂಲಕ ಮೂಗಿನಿಂದ ಶ್ವಾಸಕೋಶಕ್ಕೆ ಇನ್‌ಫೆಕ್ಷನ್‌ ರವಾನೆಯಾಗಬಹುದು. ಶ್ವಾಸಕೋಶದ ಸಮಸ್ಯೆ ಇರುವ ವ್ಯಕ್ತಿಗಳು  ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು.

5. ಅಗತ್ಯವಿದ್ದರೆ ನಿಮ್ಮ ವೈದ್ಯರನ್ನು ಸಂಪರ್ಕಿಸಿ, ಫ್ಲೂ, ನ್ಯುಮೋನಿಯಾ ಹಾಗೂ ಇತರ ಶ್ವಾಸಕೋಶ ಸಂಬಂಧೀ ರೋಗಗಳಿಗೆ ವ್ಯಾಕ್ಸಿನ್‌ ಹಾಕಿಸಿಕೊಳ್ಳಿ.

ಉತ್ತಮ ಆಹಾರ, ವ್ಯಾಯಾಮದಂತಹ ಚಟುವಟಿಕೆಗಳು ಹಾಗೂ ಶ್ವಾಸಕೋಶಕ್ಕೆ ಪೂರಕ ಆಹಾರ ಸೇವನೆಯಿಂದ ಶ್ವಾಸಕೋಶವನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು. ಕೆಟ್ಟ ಚಟಗಳಿಂದ ದೂರವಿರುವುದು ಹಾಗೂ ಶಿಸ್ತಿನ ಜೀವನ ರೂಢಿಸಿಕೊಳ್ಳುವುದರಿಂದ ನಿಯಮಿತವಾಗಿ ಉಸಿರಾಟದ ವ್ಯಾಯಾಮ, ಪ್ರಾಣಾಯಾಮಗಳನ್ನು ಮಾಡುವುದರಿಂದ ಶ್ವಾಸಕೋಶವನ್ನು ಚುರುಕಾಗಿಟ್ಟುಕೊಳ್ಳಬಹುದು.

ಇದನ್ನೂ ಓದಿ: Is Mango Good For Diabetes: ಮಧುಮೇಹಿಗಳು ಮಾವಿನಹಣ್ಣು ತಿನ್ನಬಹುದೇ?

Continue Reading

ಆರೋಗ್ಯ

Tuberculosis Day: ಕ್ಷಯರೋಗ ಮುಕ್ತ ದೇಶ ನಿರ್ಮಾಣಕ್ಕೆ ಶ್ರಮಿಸೋಣ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Tuberculosis Day: “ಹೌದು ನಾವು ಕ್ಷಯ ರೋಗವನ್ನು ಕೊನೆಗೊಳಿಸಬಹುದು” ಎಂಬ ಘೋಷಣೆಯೊಂದಿಗೆ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಆಯೋಜಿಸಲಾಗಿದ್ದು, ಎಲ್ಲರೂ ಒಟ್ಟಾಗಿ ಕ್ಷಯರೋಗ ಮುಕ್ತ ನಾಡನ್ನು ಕಟ್ಟಲು ಪಣ ತೊಡಲಾಯಿತು.

VISTARANEWS.COM


on

Edited by

Tuberculosis Day karwar
ವಿಶ್ವ ಕ್ಷಯರೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ.
Koo

ಕಾರವಾರ: “ದೇಶವನ್ನು ಪೋಲಿಯೋದಿಂದ ಮುಕ್ತ ಮಾಡಲು ಹೇಗೆ ನಾವೆಲ್ಲರೂ ಶ್ರಮವಹಿಸಿದ್ದೆವೋ ಹಾಗೆಯೇ ಇಂದು ಕ್ಷಯರೋಗವನ್ನು (Tuberculosis Day) ದೇಶದಿಂದ ಮುಕ್ತ ಮಾಡಲು ನಾವೆಲ್ಲರೂ ಶ್ರಮವಹಿಸುವ ಅಗತ್ಯವಿದೆ” ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಆಶ್ರಯದಲ್ಲಿ “ಹೌದು ನಾವು ಕ್ಷಯ ರೋಗವನ್ನು ಕೊನೆಗೊಳಿಸಬಹುದು” ಎಂಬ ಘೋಷಣೆಯೊಂದಿಗೆ ಆಯೋಜಿಸಲಾದ್ದ ವಿಶ್ವ ಕ್ಷಯರೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು‌.

“ಆರೋಗ್ಯದ ಸಮಸ್ಯೆಗೆ ಒಳಗಾದವರನ್ನು ಸಮಾಜ ನೋಡುವ ದೃಷ್ಟಿಕೋನ ಹೇಗಿರುತ್ತದೆ ಎಂಬುದನ್ನು ನಾವು ಕೋವಿಡ್ ಸಮಯದಲ್ಲಿ ನೋಡಿದ್ದೇವೆ. ರೋಗಗಳು ಮೇಲು-ಕೀಳು, ಬಡವ-ಶ್ರೀಮಂತ ಎನ್ನದೇ ಪ್ರತಿಯೊಬ್ಬರಿಗೂ ಬರುವಂಥದ್ದಾಗಿದೆ. ಕೊರೋನಾ ಸಂದರ್ಭದಲ್ಲಿ ರೋಗಗ್ರಸ್ತರಾದ ಎಲ್ಲರೂ ಬದುಕಿದರೆ ಸಾಕು ಎನ್ನುವ ಪರಿಸ್ಥಿತಿಯನ್ನು ನಾವು ಈಗಾಗಲೇ ಕಣ್ಣಾರೆ ಕಂಡಿದ್ದೇವೆ. ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜೀವಿಸುವ ಹಕ್ಕಿದೆ. ಹೀಗಾಗಿ ಕ್ಷಯ ರೋಗ ಅಥವಾ ಇತರೆ ರೋಗದ ಸಮಸ್ಯೆಗಳಿಗೆ ಒಳಗಾದವರನ್ನು ಗುರುತಿಸಿ ಅಂಥವರಿಗೆ ಸೂಕ್ತ ಚಿಕಿತ್ಸೆ ನೀಡುವ ಅಗತ್ಯ ಇದೆ” ಎಂದರು.

“ಜನರಲ್ಲಿ ರೋಗಗಳ ಬಗ್ಗೆ ಭಯ ಇರಬಾರದು. ಅವುಗಳ ಬಗ್ಗೆ ಅರಿವು ಮತ್ತು ಜಾಗೃತಿ ಇರಬೇಕು. ಕ್ಷಯ ರೋಗಕ್ಕೆ ಒಳಗಾದವರು ವೈದ್ಯರು ನೀಡುವ ನಿರ್ದೇಶನ ಮತ್ತು ಚಿಕಿತ್ಸೆಯನ್ನು ಚಾಚೂ ತಪ್ಪದೇ ಪಾಲಿಸಿದರೆ ಮಾತ್ರ ಈ ವರ್ಷದ ಘೋಷ ವಾಕ್ಯದಂತೆ, ಹೌದು ನಾವು ಕ್ಷಯ ರೋಗವನ್ನು ಕೊನೆಗೂಳಿಸಬಹುದು. ಆಗ ಮಾತ್ರ ನಾವು ಕ್ಷಯ ರೋಗವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ” ಎಂದರು.

ಇದನ್ನೂ ಓದಿ: Wedding Fashion: ಮದುವೆಯ ಟ್ರೆಂಡಿ ಆಕರ್ಷಕ ಬ್ರೈಡಲ್‌ವೇರ್‌ ಆಯ್ಕೆಗೆ ಪಾಲಿಸಬೇಕಾದ 7 ರೂಲ್ಸ್ ಯಾವವು?

ಬಳಿಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಶರದ ನಾಯಕ ಮಾತನಾಡಿ, “ಕಾಯಿಲೆಗಳು ಬರದಂತೆ ನಿಯಂತ್ರಿಸಲು ಎಲ್ಲೆಡೆಯೂ ಆರೋಗ್ಯ, ಎಲ್ಲರಿಗೂ ಆರೋಗ್ಯ ಎಂಬ ವಾಕ್ಯದಂತೆ ರೋಗಗಳನ್ನು ನಿರ್ವಹಣೆ ಮಾಡಲು ಪ್ರಾಥಮಿಕ ಹಂತದಲೇ ಆರೋಗ್ಯ ಕೇಂದ್ರವು ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಟಿಬಿ ಕಾಯಿಲೆ ಪರೀಕ್ಷೆಯನ್ನು ಪ್ರಾರಂಭಿಸಿ ಈವರೆಗೆ 823 ಜನರನ್ನು ಪರೀಕ್ಷೆ ಮಾಡಲಾಗಿದೆ. ಈ ಕಾಯಿಲೆಯನ್ನು ನಿಯತ್ರಿಸಲು ಇತರೆ ಸಂಸ್ಥೆಗಳ ಸಹಕಾರ ಬೇಕು” ಎಂದರು.

“ಯಾರಿಗಾದರೂ ಕ್ಷಯ ರೋಗದ ಲಕ್ಷಣಗಳು ಕಂಡುಬಂದಲ್ಲಿ ಅವರಿಗೆ ಈ ಬಗ್ಗೆ ಅರಿವು ಮೂಡಿಸಿ ಚಿಕಿತ್ಸೆಗೆ ಒಳಪಡಿಸಬೇಕು. ಹಾಗೆಯೇ ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ದಿನನಿತ್ಯ ದೈಹಿಕ ವ್ಯಾಯಾಮವನ್ನು ಮಾಡುವುದು ಅವಶ್ಯಕವಾಗಿದೆ” ಎಂದರು.

ಇದನ್ನೂ ಓದಿ: Bank Fraud : ಸಹಕಾರಿ ಬ್ಯಾಂಕ್‌ ಹಗರಣ; ಸಿಬಿಐ ತನಿಖೆಗೆ ಒಪ್ಪಿಸಲು ಒತ್ತಾಯಿಸಿ ಮೌನ ಪ್ರತಿಭಟನೆ

ಬಳಿಕ ಸಂಪನ್ಮೂಲ ವ್ಯಕ್ತಿ ಶ್ವಾಸಕೋಶ ತಜ್ಞ ಡಾ. ಶ್ರೀನಿವಾಸ್ ಎ. ಕ್ಷಯ ರೋಗದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಮಂಜುನಾಥ, ಜಿಲ್ಲಾ ತರಬೇತಿ ಕೇಂದ್ರ ಪ್ರಾಚಾರ್ಯ ಡಾ. ವಿನೋದ ಭೂತೆ, ಡಿ.ಎಲ್.ಒ ಡಾ.ಶಂಕರ ರಾವ್, ಡಿಎಂಒ ಡಾ. ರಮೇಶ ರಾವ್, ಕುಟುಂಬ ಕಲ್ಯಾಣ ಅಧಿಕಾರಿ ಅನ್ನಪೂರ್ಣ ವಸ್ತ್ರದ, ಡಿ.ಎಸ್.ಒ. ಡಾ.ಅರ್ಚನಾ ನಾಯಕ, ತಾಲೂಕು ಆರೋಗ್ಯ ಅಧಿಕಾರಿ ಸೂರಜ್ ನಾಯಕ್, ಆಶಾ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಹಾಗೂ ವಿವಿಧ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಆರೋಗ್ಯ

Covid-19 : ಹೊಸ ಕೋವಿಡ್ ತಳಿಯ ತೀವ್ರತೆಗೆ ಯಾವುದೇ ಪುರಾವೆ ಇಲ್ಲ ಎಂದ ತಜ್ಞರು

ಕೋವಿಡ್‌ನ ಹೊಸ ರೂಪಾಂತರ ತೀವ್ರತೆಯ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ ಕೋವಿಡ್(Covid-19) ಪ್ರಕರಣಗಳು ಹೆಚ್ಚುತ್ತಿದ್ದರೂ ತೀರಾ ಆತಂಕಪಡುವ ಅಗತ್ಯವಿಲ್ಲ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

VISTARANEWS.COM


on

Edited by

new Covid 19 variants severity not confirmed says experts
Koo

ನವದೆಹಲಿ: ಭಾರತದಲ್ಲಿ ಮತ್ತೆ ಕೋವಿಡ್(Covid-19) ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹಾಗಿದ್ದೂ, ತೀರಾ ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರತದಲ್ಲಿ ಎಕ್ಸ್‌ಬಿಬಿ.1.16(XBB.1.16) ಕೊರೊನಾ ವೈರಸ್‌ನ ಪ್ರಧಾನ ರೂಪಾಂತರವಾಗಿದೆ. ಭಾರತೀಯ ತಜ್ಞರು ಬಿಡುಗಡೆ ಮಾಡಿದ ಜೀನೋಮ್ ಅನುಕ್ರಮ ವಿಶ್ಲೇಷಣೆಯ ಪ್ರಕಾರ, ಸೋಂಕು ಹೆಚ್ಚಳ ಸ್ವಲ್ಪಮಟ್ಟಿಗೆ ಕಂಡುಬಂದರೂ, ತೀವ್ರತೆಯ ಯಾವುದೇ ಆತಂಕಕಾರಿ ಚಿಹ್ನೆಗಳೊಂದಿಗೆ ಪರಸ್ಪರ ಸಂಬಂಧ ಹೊಂದಿಲ್ಲ.

ಭಾರತದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕಳೆದ ವಾರಕ್ಕೆ ಹೋಲಿಸಿದರೆ, ಬುಧವಾರ ಸರಾರಿ 966 ಪ್ರಕರಣಗಳು ದಾಖಲಾಗಿವೆ. ಕಳೆದ ವಾರ ಇದೇ ದಿನ 520 ಕೇಸ್ ದಾಖಲಾಗಿದ್ದವು. ವೈರಸ್ ಹರಡುವಿಕೆಯ ಸ್ವರೂಪ ಮತ್ತು ಜನರ ನಡವಳಿಕೆಯ ಮಾದರಿಗಳ ಬಗ್ಗೆ ಸಾಕಷ್ಟು ನಿಗಾ ಇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಗಳು ಮತ್ತು ಇತರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೇಂದ್ರ ಸರ್ಕಾರದ ಮಾಹಿತಿಯ ಪ್ರಕಾರ, ಮಹಾರಾಷ್ಟ್ರ (4.49%), ಗುಜರಾತ್ (2%), ಕೇರಳ (4.17%), ಕರ್ನಾಟಕ (3.08%), ತಮಿಳುನಾಡು (2.26%), ದೆಹಲಿ (3.76%), ಹಿಮಾಚಲ ಪ್ರದೇಶ (7.1% ) ಮತ್ತು ರಾಜಸ್ಥಾನ (1.43%) ಅನುಪಾತದಲ್ಲಿ ಪ್ರಕರಣಗಳು ಏರಿಕೆಯಾಗುತ್ತಿವೆ. ಜ್ವರ ಬಾಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಜನರು ಪರೀಕ್ಷೆಗೊಳಪಡುತ್ತಿದ್ದಾರೆ. ಹೀಗೆ ಪರೀಕ್ಷೆಗೊಳಗಾಗುತ್ತಿರುವ ಪೈಕಿ ಹೆಚ್ಚಿನವರಿಗೆ ಕೋವಿಡ್ ಇರುವುದು ಪತ್ತೆಯಾಗಿದೆ. ಹಾಗಾಗಿ, ಪ್ರಕರಣಗಳ ಸಂಖ್ಯೆಯೂ ಹೆಚ್ಚಳವಾಗುತ್ತಿವೆ.

ಪ್ರಾಣಿಗಳಿಂದಲೇ ಮನುಷ್ಯರಿಗೆ ತಗುಲಿದ ಕೋವಿಡ್

ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್-19 ಮೂಲ ಯಾವುದು ಎಂಬ ಚರ್ಚೆ ಇನ್ನೂ ನಿಂತಿಲ್ಲ. ಕೆಲವರು ಇದು ಮಾನವ ನಿರ್ಮಿತ ಎಂದು ವಾದಿಸುತ್ತಾರೆ, ಮತ್ತೆ ಕೆಲವರು ಚೀನಾದಿಂದಲೇ ಈ ವೈರಸ್ ಇಡೀ ಜಗತ್ತಿಗೆ ಅಂಟಿದೆ ಎಂದು ಹೇಳುತ್ತಾರೆ. ಈಗ ಹೊಸ ಅಧ್ಯಯನ ವರದಿಯೊಂದರಲ್ಲಿ ಕೋವಿಡ್-19 ಮೂಲ (Covid Origin) ಯಾವುದು ಎಂಬುದರ ಮೇಲೆ ಬೆಳಕು ಚೆಲ್ಲಲಾಗಿದೆ. ಚೀನಾ ವುಹಾನ್ ಮಾರುಕಟ್ಟೆಯಿಂದ ಪಡೆದ ಕೆಲವು ಸ್ಯಾಂಪಲ್‌ಗಳನ್ನು ಅಧ್ಯಯನ ಮಾಡಿರುವ ಸಂಶೋಧಕರು, ಕೋವಿಡ್-19 ಸೋಂಕು ಪ್ರಾಣಿಗಳಿಂದ ಮನುಷ್ಯರಿಗೆ ತಗಲಿದೆ ಎಂಬ ನಿರ್ಣಯಕ್ಕೆ ಬಂದಿದ್ದಾರೆ.

ರೋಗಕ್ಕೆ ತುತ್ತಾಗುವ ರಕೂನ್ ನಾಯಿಗಳು ಸೇರಿದಂತೆ ಅನೇಕ ಪ್ರಾಣಿಗಳ ಆನುವಂಶಿಕ ವಸ್ತುಗಳ ಜೊತೆಗೆ ನಾವೆಲ್ ಕೊರೊನಾ ವೈರಸ್ ಇರುವ ಪುರಾವೆಗಳನ್ನು ಮಾದರಿಗಳು ಕಂಡುಕೊಂಡಿವೆ. ಈ ಬಗ್ಗೆ ಓಪನ್ ಸೈನ್ಸ್ ಜಾಲತಾಣವಾಗಿರುವ Zenodo.orgನಲ್ಲಿ ವರದಿಯೊಂದನ್ನು ಪ್ರಕಟಿಸಲಾಗಿದೆ. ಈ ವರದಿಯ ಪ್ರಕಾರ, ಹುವಾನಾನ್ ಸಗಟು ಸಮುದ್ರಾಹಾರ ಮಾರುಕಟ್ಟೆಯು ಸಾಂಕ್ರಾಮಿಕದ ಕೇಂದ್ರಬಿಂದುವಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: H3N2 Virus : ಹಾಸನದ ವ್ಯಕ್ತಿ H3N2ಗೆ ಬಲಿ, ಕೋವಿಡ್‌ನಂತೆ ದೇಶದ ಮೊದಲ ಸಾವು ರಾಜ್ಯದಲ್ಲೆ, ಹರಿಯಾಣದಲ್ಲಿ 2ನೇ ಮೃತ್ಯು

ಕೆಲವು ಸ್ಯಾಂಪಲ್‌ಗಳಲ್ಲಿ ಪ್ರಾಣಿಗಳಲ್ಲಿ ಸಂಭವನೀಯ SARS-CoV-2 ಸೋಂಕನ್ನು ಸೂಚಿಸುವ ಮಾನವ ಆನುವಂಶಿಕ ವಸ್ತುಗಳಿಗಿಂತ ಹೆಚ್ಚು ಪ್ರಾಣಿಗಳ ಆನುವಂಶಿಕ ವಸ್ತುಗಳು ಕಂಡುಬಂದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಈ ವರದಿಗೆ ಇನ್ನೂ ಯಾವುದೇ ವೈಜ್ಞಾನಿಕ ಸಮುದಾಯವು ತನ್ನ ಒಪ್ಪಿಗೆ ನೀಡಿಲ್ಲ. ಸಾಂಕ್ರಾಮಿಕ ಸಮಯದಲ್ಲಿ ಅನೇಕ ಅಧ್ಯಯನ ವರದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ವೈಜ್ಞಾನಿಕ ಸಮುದಾಯವು ಈ ಎಲ್ಲ ವರದಿಗಳನ್ನು ಪರಿಶೀಲಿಸಲು ಹೋಗಿಲ್ಲ.

Continue Reading
Advertisement
Uttara Kannada News
ಉತ್ತರ ಕನ್ನಡ4 hours ago

Uttara Kannada News: ವಾಕ್ಪ್ರತಿಯೋಗಿತಾ ಸ್ಪರ್ಧೆ; ಉಮ್ಮಚಗಿಯ ಶ್ರೀ ಮಾತಾ ಸಂಸ್ಕೃತ ಮಹಾಪಾಠ ಶಾಲೆ ಉತ್ತಮ ಸಾಧನೆ

Modi in Karnataka
ಕರ್ನಾಟಕ5 hours ago

Modi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ

rahul-gandhi-will-act-like-a-martyr-with-an-eye-on-karnataka-elections-bjp
ದೇಶ5 hours ago

ಕರ್ನಾಟಕ ಚುನಾವಣೆ ಮೇಲೆ ಕಣ್ಣಿಟ್ಟು ಹುತಾತ್ಮನಂತೆ ನಟಿಸ್ತಾ ಇರೋ ರಾಹುಲ್ ಗಾಂಧಿ: ಬಿಜೆಪಿ

Your rules don't apply to the Gandhi family; Spark of Congress MP!
ದೇಶ5 hours ago

Rahul Gandhi Disqualified : ನಿಮ್ಮ ರೂಲ್ಸ್​ ಗಾಂಧಿ ಫ್ಯಾಮಿಲಿಗೆ ಅನ್ವಯವಾಗಲ್ಲ; ಕಾಂಗ್ರೆಸ್​ ಸಂಸದನ ಕಿಡಿ!

Zaheer Khan: Team India is still sailing in an old boat; Why did Zaheer Khan say this?
ಕ್ರಿಕೆಟ್6 hours ago

Zaheer Khan: ಟೀಮ್​ ಇಂಡಿಯಾ ಇನ್ನೂ ಹಳೆಯ ಬೋಟ್​ನಲ್ಲೇ ಪ್ರಯಾಣಿಸುತ್ತಿದೆ; ಜಹೀರ್​ ಖಾನ್​ ಹೀಗೆ ಹೇಳಿದ್ದು ಏಕೆ?

Amit Shah to visit karnataka on march 26 and Participate in various programmes
ಕರ್ನಾಟಕ6 hours ago

Amit Shah Visit: ಭಾನುವಾರ ಅಮಿತ್‌ ಶಾ ರಾಜ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

heavy rainfall likely to occur at isolated places in the karnataka on March 26 and 27
ಕರ್ನಾಟಕ6 hours ago

Karnataka Rain: ಮಾ.26, 27 ರಂದು ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

Tricolor flag flown in America; Patriots strike back at Khalistanis
ದೇಶ6 hours ago

ವಿಸ್ತಾರ ಸಂಪಾದಕೀಯ: ಅಮೆರಿಕದಲ್ಲಿ ಹಾರಾಡಿದ ತ್ರಿವರ್ಣ ಧ್ವಜ; ಖಲಿಸ್ತಾನಿಗಳಿಗೆ ದೇಶಪ್ರೇಮಿಗಳ ತಿರುಗೇಟು

WPL 2023: Nita Ambani dances with team players in Khasi in finals; The video is viral
ಕ್ರಿಕೆಟ್6 hours ago

WPL 2023: ಫೈನಲ್​ಗೆ ಲಗ್ಗೆಯಿಟ್ಟ ಖಷಿಯಲ್ಲಿ ತಂಡದ ಆಟಗಾರ್ತಿಯರೊಂದಿಗೆ ಕುಣಿದು ಕುಪ್ಪಳಿಸಿದ ನೀತಾ ಅಂಬಾನಿ; ವಿಡಿಯೊ ವೈರಲ್

Final race of Moto GP today in Portugal
ಕ್ರೀಡೆ7 hours ago

Moto GP : ಫೋರ್ಚುಗಲ್​ನಲ್ಲಿ ಭಾನುವಾರ ಮೋಟೊ ಜಿಪಿ ಮೊದಲ ಸುತ್ತಿನ ಫೈನಲ್​ ರೇಸ್​

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ4 days ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ5 days ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ5 days ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ6 days ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ6 days ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ6 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ7 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ7 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ1 week ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ1 week ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!