KFD vaccine | ಮಂಗನ ಕಾಯಿಲೆ ತಡೆ ಲಸಿಕೆಗೆ ಅನುಮತಿಯೇ ಇಲ್ಲ; ಆದರೂ ಜನರಿಗೆ ನೀಡುತ್ತಿದೆ ಸರ್ಕಾರ! Vistara News
Connect with us

ಆರೋಗ್ಯ

KFD vaccine | ಮಂಗನ ಕಾಯಿಲೆ ತಡೆ ಲಸಿಕೆಗೆ ಅನುಮತಿಯೇ ಇಲ್ಲ; ಆದರೂ ಜನರಿಗೆ ನೀಡುತ್ತಿದೆ ಸರ್ಕಾರ!

ಮಲೆನಾಡಿನಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ಮಂಗನ ಕಾಯಿಲೆ ತಡೆಗೆ ನೀಡಲಾಗುತ್ತಿರುವ ಲಸಿಕೆಗೆ (KFD vaccine) ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಪ್ರಾಧಿಕಾರ ಅನುಮತಿಯನ್ನೇ ನೀಡಿಲ್ಲ ಎಂಬುದು ಈಗ ಬಹಿರಂಗಗೊಂಡಿದೆ.

VISTARANEWS.COM


on

Ineffective KFD Vaccine Being Used for Decades
Koo

ಬೆಂಗಳೂರು: ಕಳೆದ ಏಳು ದಶಕಗಳಿಂದ ಮಲೆನಾಡಿನ ಜನರನ್ನು ಕಾಡುತ್ತಿರುವ “ಮಂಗನ ಕಾಯಿಲೆʼʼ ಎಂದೇ ಪ್ರಸಿದ್ಧಿಯಾಗಿರುವ “ಕ್ಯಾಸನೂರು ಫಾರೆಸ್ಟ್‌ ಡಿಸೀಸ್‌ʼʼ ಬಾರದಂತೆ ತಡೆಯಲು ನೀಡಲಾಗುತ್ತಿರುವ ಲಸಿಕೆಗೆ (KFD vaccine) ಔಷಧ ಗುಣಮಟ್ಟ ನಿಯಂತ್ರಕರ ಕೇಂದ್ರೀಯ ಸಂಘಟನೆ (Central Drugs Standard Control Organisation-CDSCO) ಅನುಮತಿಯನ್ನೇ ನೀಡಿಲ್ಲ ಎಂಬುದು ಬೆಳಕಿಗೆ ಬಂದಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಲಸಿಕೆಗೆ CDSCO ನೀಡಿದ್ದ ಅನುಮತಿಯು 2001 ಕ್ಕೇ ಅಂತ್ಯಗೊಂಡಿದ್ದು, ಕಳೆದ ಎರಡು ದಶಕಗಳಿಂದ ಅನುಮತಿ ಪಡೆದುಕೊಳ್ಳದೇ ಈ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗುತ್ತಿದೆ ಎಂದು ನವದೆಹಲಿಯ “ಮಿಂಟ್‌ʼʼ ಪತ್ರಿಕೆ ತನಿಖಾ ವರದಿ ಪ್ರಕಟಿಸಿದೆ. ಅನುಮತಿ ಪಡೆಯದೇ ಇರುವುದಕ್ಕೆ ಇದರ ಗುಣಮಟ್ಟವೇ ಕಾರಣ ಎಂಬುದೂ ಬಹಿರಂಗಗೊಂಡಿದೆ. ಔಷಧ ಮತ್ತು ಕಾಂತಿವರ್ಧಕ ಕಾಯ್ದೆ ಪ್ರಕಾರ ನಮ್ಮ ದೇಶದಲ್ಲಿ ಯಾವುದೇ ಔಷಧ, ಲಸಿಕೆ ಬಳಕೆಯಾಗಬೇಕಾದರೂ ಕೇಂದ್ರ ಆರೋಗ್ಯ ಇಲಾಖೆಯ ಅಡಿ ಕಾರ್ಯನಿರ್ವಹಿಸುವ CDSCOನ ಅನುಮತಿ ಪಡೆಯುವುದು ಕಡ್ಡಾಯ. ಆದರೆ ಇದರ ಅನುಮತಿಯನ್ನೇ ಪಡೆಯದ ಲಸಿಕೆಯನ್ನು ಸರ್ಕಾರವೇ ಜನರಿಗೆ ನೀಡಿರುವುದು ಆಶ್ಚರ್ಯ ಮತ್ತು ಅಘಾತ ಮೂಡಿಸಿದೆ.

ಮಂಗನ ಕಾಯಿಲೆಯು ಬಹುತೇಕವಾಗಿ ಬೇಸಿಗೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದು ಬಾರದಂತೆ ತಡೆಯಲು ಈಗ ಲಸಿಕೆ ನೀಡಲಾಗುತ್ತಿದೆ. ಕಾಯಿಲೆ ಬಂದ ನಂತರ ನಿಯಂತ್ರಣಕ್ಕೆ ಇನ್ನೂ ಯಾವುದೇ ಔಷಧಿಯನ್ನು ನಿರ್ಧಿಷ್ಟವಾಗಿ ಅಭಿವೃದ್ಧಿಪಡಿಸಲಾಗಿಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯೇ ಈ ಲಸಿಕೆಯನ್ನು ನೀಡುತ್ತಾ ಬಂದಿದೆ.

ಅನುಮತಿ ನಿರಾಕರಣೆಗೆ ಗುಣಮಟ್ಟವೇ ಕಾರಣ
ಮಂಗನ ಕಾಯಿಲೆ ಮೊದಲು ಕಾಣಿಸಿಕೊಂಡಿದ್ದು ೧೯೫೭ರಲ್ಲಿ. ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕ್ಯಾಸನೂರು ರಕ್ಷಿತಾರಣ್ಯ ಮತ್ತು ಸುತ್ತಮುತ್ತಲಿನ ಕಾಡುಗಳಲ್ಲಿ ಮಂಗಗಳಿಂದ ಉಣ್ಣೆಗಳ ಮೂಲಕ ಈ ಕಾಯಿಲೆ ಹರಡಲಾರಂಭಿಸಿತು. ನೂರಾರು ಜನರ ಸಾವಿಗೆ ಕಾರಣವಾದ ಈ ರೋಗದ ನಿಯಂತ್ರಣಕ್ಕೆ 1984ರಲ್ಲಿ ಪುಣೆಯ ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ವೈರಾಲಜಿಯು ಲಸಿಕೆಯನ್ನು ಅಭಿವೃದ್ಧಿ ಪಡಿಸಿದ್ದು, ಇದನ್ನು ಮೊದಲಿಗೆ (1989 ರಿಂದ) ಶಿವಮೊಗ್ಗದಲ್ಲಿಯೇ ತಯಾರಿಸಿ, ಜನರಿಗೆ ನೀಡಲಾಗುತ್ತಿತ್ತು.

2000ರ ವೇಳೆಗೆ ಕಾಯಿಲೆಯ ತೀವ್ರತೆ ಕಡಿಮೆಯಾಗಿದ್ದರಿಂದ ಈ ಲಸಿಕಾ ಕೇಂದ್ರವೂ ಮುಚ್ಚಿದ್ದು, ಈಗ ಬೆಂಗಳೂರಿನ ಹೆಬ್ಬಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ (Institute of Animal Health and Veterinary Biologicals) ಯಲ್ಲಿ ತಯಾರಿಸಿ, ಬಳಕೆಗೆ ನೀಡಲಾಗುತ್ತಿದೆ. ಆದರೆ ಈ ಲಸಿಕೆಗೆ ಔಷಧ ಗುಣಮಟ್ಟ ನಿಯಂತ್ರಕರ ಕೇಂದ್ರೀಯ ಸಂಘಟನೆ (CDSCO) ನೀಡಿದ್ದ ಅನುಮತಿಯು 2001ಕ್ಕೇ ಅಂತ್ಯವಾಗಿದೆ. ಆದರೂ ಪ್ರಾಣಿಗಳಿಗೆ ಲಸಿಕೆ ಉತ್ಪಾದಿಸುವ ಘಟಕದಲ್ಲಿ ಈ ಲಸಿಕೆಯನ್ನು ತಯಾರಿಸಿ ಜನರಿಗೆ ನೀಡಲಾಗುತ್ತಿದೆ.

ನಮ್ಮ ಆರೋಗ್ಯ ಇಲಾಖೆ 2013-14 ರಲ್ಲಿ ಒಮ್ಮೆ ಇದರ ಸಾಮರ್ಥ್ಯವನ್ನು ಪರೀಕ್ಷೆಗೆ ಒಳಪಡಿಸಿಕೊಂಡು, ಜನರಿಗೆ ನೀಡುವ ಕಾರ್ಯ ಮುಂದುವರಿಸಿದೆ. ಇತ್ತೀಚೆಗೆ ಈ ಲಸಿಕೆಯ ಗುಣಮಟ್ಟದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿತ್ತು. ಲಸಿಕೆ ಪಡೆದವರಿಗೂ ಮಂಗನ ಕಾಯಿಲೆ ಬರುತ್ತಿದ್ದು, ಲಸಿಕೆ ಪವರ್‌ ಕಳೆದುಕೊಂಡಿದೇ ಎಂದೇ ಜನಸಾಮಾನ್ಯರು ದೂರುತ್ತಿದ್ದರು. ಆದರೂ ಸರ್ಕಾರ ಈ ಲಸಿಕೆ ತಯಾರಿಕೆ, ವಿತರಣೆಯ ವ್ಯವಸ್ಥೆಯ ಬಗ್ಗೆ ತಲೆಕೆಡಿಸಿಕೊಂಡಿರಲಿಲ್ಲ.

ಪ್ರಾಣಿಗಳಿಗೆ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಮಾನವನ ಲಸಿಕೆ ತಯಾರಿ!
CDSCO ಲಸಿಕೆಗೆ ಅನುಮತಿ ನೀಡದೇ ಇರುವುದಕ್ಕೆ ಕಾರಣಗಳು ಇಂತಿವೆ;
೧. ಈಗ ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಈ ಲಸಿಕೆಯನ್ನು ತಯಾರಿಸಲಾಗುತ್ತಿದೆ. ಇದು ಪಶುಗಳಿಗೆ ಸಂಬಂಧಿಸಿದ ಪ್ರಯೋಗಾಲಯವನ್ನು ಹೊಂದಿದ್ದು, ಇಲ್ಲಿ ಪಶುಗಳ ಲಸಿಕೆ, ಔಷಧಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇಲ್ಲಿ ಮಾನವನಿಗೆ ನೀಡಲಾಗುವ ಈ ಲಸಿಕೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ.

೨. ಲಸಿಕೆಯ ಗುಣಮಟ್ಟದ ಕುರಿತು ಚೆನ್ನೈನಲ್ಲಿರುವ ಸಾಂಕ್ರಾಮಿಕ ರೋಗಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಸಂಸ್ಥೆ (National Institute of Epidemiology) ನಡೆಸಿದ ಅಧ್ಯಯನ ಸೇರಿದಂತೆ ಹಲವು ಅಧ್ಯಯನಗಳು ಲಸಿಕೆಯು ಪರಿಣಾಮಕಾರಿಯಾಗಿಲ್ಲ ಎಂದು ವರದಿ ನೀಡಿವೆ.

ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯ ಆವರಣದಲ್ಲಿದ್ದ ಲಸಿಕೆ ತಯಾರಿಸುವ ಘಟಕವನ್ನು ಸ್ಥಗಿತಗೊಳಿಸಿದ ನಂತರ ರಾಜ್ಯ ಸರ್ಕಾರವೇ ಪ್ರಾಣಿಗಳಿಗೆ ಲಸಿಕೆ ತಯಾರಿಸುವಲ್ಲಿ (ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ) ಈ ಲಸಿಕೆಯನ್ನು ಅಭಿವೃದ್ಧಿ ಪಡಿಸಲು ಆರಂಭಿಸಿತು. ಆದರೆ ಇದಕ್ಕೆ ಬೇಕಾದ ಔಷಧಿ ಪ್ರಾಧಿಕಾರದ ಅನುಮತಿಯನ್ನು ಪಡೆದುಕೊಂಡಿರಲಿಲ್ಲ!

ಅಲ್ಲದೆ, ಲಸಿಕೆಯ ಗುಣಮಟ್ಟದ ಬಗ್ಗೆ ಬಳಸುವ ಜನರೇ ಕಳೆದ ಐದು ವರ್ಷಗಳಿಂದ ದೂರುತ್ತಿದ್ದರೂ, ಕೇಂದ್ರ ಸರ್ಕಾರದ ಸಂಸ್ಥೆಗಳೇ ಈ ಲಸಿಕೆಯ ಗುಣಮಟ್ಟದ ಕುರಿತು ನೀಡಿದ್ದ ವರದಿಗಳನ್ನು ಮುಚ್ಚಿಟ್ಟು, ಮತ್ತದೇ ಲಸಿಕೆಯನ್ನು ಉತ್ಪಾದಿಸಿ ಜನರಿಗೆ ನೀಡಲಾಗುತ್ತಿತ್ತು. ಇದೀಗ ಸರ್ಕಾರದ, ಆರೋಗ್ಯ ಇಲಾಖೆಯ ಈ ಬೇಜವಾಬ್ದಾರಿತನ ಬೆಳಕಿಗೆ ಬಂದಿದ್ದು, ಮಲೆನಾಡಿನ ಜನರು ಆತಂಕಗೊಂಡಿದ್ದಾರೆ. ಹೀಗೆ ಗುಣಮಟ್ಟವಿಲ್ಲದ ಲಸಿಕೆಯನ್ನು ಪಡೆದುಕೊಂಡಿರುವುದರಿಂದ ಏನಾದರೂ ಅಡ್ಡಪರಿಣಾಮಗಳಾಗಬಹುದೇ ಎಂಬ ಆಂತಕ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ 21 ವರ್ಷಗಳಿಂದ ಅನುಮತಿಯಿಲ್ಲದ ಈ ಲಸಿಕೆಯನ್ನು ಜನರಿಗೆ ನೀಡಲಾಗುತ್ತಿದ್ದು, ಒಂದು ಅಂದಾಜಿನ ಪ್ರಕಾರ ಸುಮಾರು 50 ಲಕ್ಷ ಜನರಿಗೆ ಈ ಲಸಿಕೆಯನ್ನು ನೀಡಲಾಗಿದೆ. ಮಂಗನ ಕಾಯಿಲೆ ಕಾಣಿಸಿಕೊಂಡ ತಕ್ಷಣ ಆ ಪ್ರದೇಶದಲ್ಲಿ ವಾಸಿಸುವ ಜನರಿಗೆ ಮುಂಜಾಗ್ರತೆಯಾಗಿ ಈ ಲಸಿಕೆಯನ್ನು ನೀಡಲಾಗುತ್ತದೆ.

ಇದನ್ನೂ ಓದಿ | ರಾಜ ಮಾರ್ಗ ಅಂಕಣ | ಪೋಲಿಯೋಗೆ ಲಸಿಕೆ ಕಂಡುಹಿಡಿದ ಜೋನಾಸ್‌ ಸಾಲ್ಕ್‌ ಅದನ್ನು ಮಾರಾಟ ಮಾಡಲೇ ಇಲ್ಲ, ಯಾಕೆ?

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ಆರೋಗ್ಯ

Ripponpet News: ಗ್ರಾಮೀಣ ಜನರ ಆರೋಗ್ಯದ ತಪಾಸಣೆ ಮುಖ್ಯ: ಉಜ್ಜಯನಿ ಪೀಠದ ಜಗದ್ಗುರು

Ripponpet News: ರಿಪ್ಪನ್‌ಪೇಟೆಯಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ಆರಂಭಿಸಿರುವುದು ಪ್ರಶಂಸನೀಯ ಎಂದು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಹೇಳಿದ್ದಾರೆ.

VISTARANEWS.COM


on

Edited by

Nandi Hospital ripponpet
ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶಿರ್ವಚನ ನೀಡಿದರು.
Koo

ರಿಪ್ಪನ್‌ಪೇಟೆ: “ಹಳ್ಳಿಯಲ್ಲಿನ ಸಾಮಾನ್ಯ ಜನರು ಇಂದಿನ ದುಬಾರಿ ಖರ್ಚು ಮಾಡಿಕೊಂಡು ದೂರದ ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆಯ ಬಾಗಿಲಿನಲ್ಲಿ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ಪಡೆಯುವಂತಾಗಲು ನಂದಿ ಆಸ್ಪತ್ರೆ ಸಹಕಾರಿಯಾಗಲಿ” ಎಂದು ಉಜ್ಜಯನಿ ಪೀಠದ ಜಗದ್ಗುರುಗಳು ಹೇಳಿದರು.

ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿನಂದಿ ಆಸ್ಪತ್ರೆ ‘’ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಉಜ್ಜಯನಿ ಪೀಠದ ಜಗದ್ಗುರುಗಳು, ಆಸ್ಪತ್ರೆಯ ಸದುಪಯೋಗವನ್ನು ಸ್ಥಳೀಯ ಜನತೆ ಪಡೆದುಕೊಳ್ಳಬೇಕು. ಗ್ರಾಮೀಣ ಭಾಗದ ಜನರ ಆರೋಗ್ಯ ತಪಾಸಣೆ ಬಹಳ ಮುಖ್ಯವಾಗುತ್ತದೆ ಎಂದು ಕರೆ ನೀಡಿದರು.

ಆನಂದಪುರದ ಮುರುಘಾರಾಜೇಂದ್ರ ಸಂಸ್ಥಾನ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶಿರ್ವಚನ ನೀಡಿ, “ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾರಕ ರೋಗಗಳಿಂದ ಜನರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ದೂರದ ಆಸ್ಪತ್ರೆಗಳಿಗೆ ಹೋಗಿ ಬರುವುದೇ ಕಷ್ಟವಾಗಿರುವಾಗ ರಿಪ್ಪನ್‌ಪೇಟೆಯಲ್ಲಿ ಸುಸಜ್ಜಿತ ಆಸ್ಪತ್ರೆಯನ್ನು ಆರಂಭಿಸುವುದರೊಂದಿಗೆ ಸಾಕಷ್ಟು ವೈದ್ಯರಿಗೆ ಮತ್ತು ಆರೋಗ್ಯ ಶೂಶ್ರೂಷಿಕಿಯರಿಗೆ, ಔಷಧ ಅಂಗಡಿಯವರಿಗೆ ಸ್ವಾವಲಂಬಿ ಬದುಕಿಗೆ ಮಾರ್ಗದರ್ಶಿಯಾಗಿರುವುದು ಪ್ರಶಂಸನೀಯ” ಎಂದರು.

ಇದನ್ನೂ ಓದಿ: Kannada New Movie: ʻದಿಲ್ ದಾರ್’ ಎಂದ ಕೆ.ಮಂಜು ಪುತ್ರ: ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ರವಿಚಂದ್ರನ್ ಸಾಥ್!

ಇದೇ ಕಟ್ಟಡದಲ್ಲಿರುವ ಐಶ್ವರ್ಯ ಕೃಷಿ ಉಪಕರಣಗಳ ಅಂಗಡಿಗೂ ಭೇಟಿ ನೀಡಿ ಗುರು ವಿರಕ್ತ ಪೂಜ್ಯರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮೀಜಿ, ನಾರಾಯಣ ಗುರು ಪೀಠದ ರೇಣುಕಾನಂದ ಮಹಾಸ್ವಾಮೀಜಿ, ಶಾಸಕ ಹರತಾಳು ಹಾಲಪ್ಪ ಮಾಲೀಕರಾದ ಸಚ್ಚಿನ ಗೌಡ, ಜೆ.ಎ.ಶಾಂತ ಕುಮಾರ್, ಹುಗುಡಿ ರಾಜು, ಬೆಳಕೋಡು ಹಾಲಸ್ವಾಮಿಗೌಡ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: Kasapa: ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ವಿರುದ್ಧ ಪ್ರಕಾಶಮೂರ್ತಿ ಗರಂ; ನಡೆ-ನುಡಿ ಬದಲಿಸಿಕೊಳ್ಳಲು ಬಹಿರಂಗ ಪತ್ರ

Continue Reading

ಆರೋಗ್ಯ

Grapes Benefits: ದ್ರಾಕ್ಷಿ ಸೇವಿಸಿದ್ರೆ ಸನಿಹಕ್ಕೂ ಬರಲ್ಲ ಕ್ಯಾನ್ಸರ್! ಅಬ್ಬಾ ಎಷ್ಟೊಂದು ಲಾಭಗಳು?

ದ್ರಾಕ್ಷಿ (Grapes benefits) ತಿನ್ನುವುದರಿಂದ ಆಗುವ ಲಾಭಗಳೇನು? ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

Edited by

Grapes Benefits
Koo

ನರಿಯೊಂದು ದ್ರಾಕ್ಷಿ (Grapes benefits) ಹಣ್ಣಿಗೆ ಆಸೆಪಟ್ಟು, ಎಷ್ಟು ಪ್ರಯತ್ನಿಸಿದರೂ ದೊರೆಯದೆ, ʻಸಾಯಲತ್ಲಾಗೆ, ಹುಳಿ ದ್ರಾಕ್ಷಿಯಿದುʼ ಎಂದು ಹೊರಟುಹೋದ ಕಥೆಯನ್ನು ಸಾಮಾನ್ಯವಾಗಿ ಎಲ್ಲರೂ ಬಾಲ್ಯದಲ್ಲಿ ಕೇಳಿಯೇ ಇರುತ್ತೇವೆ. ಅದು ನರಿಯ ಕಥೆಯಾಯಿತು, ಈಗ ನಮಗೆ ದ್ರಾಕ್ಷಿ ಹಣ್ಣು ಬೇಕೆಂದರೆ ದ್ರಾಕ್ಷಿಯ ತೋಟಕ್ಕೆ ಹೋಗಿ ಹಾರಾಡಬೇಕೆಂದಿಲ್ಲ, ಅಂಗಡಿಗೆ ಹೋಗಿ ಬೇಕಾದಷ್ಟನ್ನು ಖರೀದಿಸಿ ತಂದರಾಯಿತು. ಗೊಂಚಲಲ್ಲಿ ತೂಗುವ ಈ ರಸಭರಿತ ಹಣ್ಣುಗಳು ಕಣ್ಣಿಗೆ ಮಾತ್ರ ತಂಪಲ್ಲ, ಬಾಯಿ, ಹೊಟ್ಟೆಗೂ ಹಿತ. ಒಂದಿಷ್ಟು ಹುಳಿ, ಕೆಲವೊಮ್ಮೆ ಚಿಟಿಕೆಯಷ್ಟು ಒಗರು, ಬಹಳಷ್ಟು ಸಿಹಿ ರುಚಿಯ ಮಿಶ್ರಣದ ಹಣ್ಣುಗಳಿವು.

Grapes Benefits

ಇದರ ಬಣ್ಣಗಳೇ ಕೆಲವೊಮ್ಮೆ ಬಾಯಲ್ಲಿ ನೀರೂರಿಸಿಬಿಡುತ್ತವೆ. ತಿಳಿ ಹಸಿರು, ಅಚ್ಚ ಹಸಿರು, ನಸುಗೆಂಪು, ತುಸು ಹೆಚ್ಚೇ ಕೆಂಪು, ಕಪ್ಪು, ನಸು ನೀಲಿ, ನೇರಳೆ- ಹೀಗೆ ಹಲವಾರು ಬಣ್ಣಗಳಲ್ಲಿ ದ್ರಾಕ್ಷಿಯನ್ನು ಕಾಣಬಹುದು. ಹೊರಮೈ ಮಾಟಗಳೂ ಅಷ್ಟೇ, ಸಣ್ಣದು, ದೊಡ್ಡದು, ಉರುಟಾದ್ದು, ಮೊಟ್ಟೆಯಾಕಾರದ್ದು, ಉದ್ದ ಮಾಟದ್ದು- ಎಷ್ಟೊಂದು ಬಗೆಗಳಿವೆ. ಹಾಗೆಂದು ಈ ಯಾವ ಬಣ್ಣ, ಮಾಟಗಳ ದ್ರಾಕ್ಷಿ ತಿಂದರೂ, ರುಚಿ ಮತ್ತು ಪೋಷಕತತ್ವಗಳಿಗೆ ಏನೂ ಮೋಸವಿಲ್ಲ. ಹಾಗಾದರೆ ಏನೆಲ್ಲ ಲಾಭಗಳಿವೆ ದ್ರಾಕ್ಷಿ ತಿನ್ನುವುದರಲ್ಲಿ?

Grapes Benefits

ಕ್ಯಾನ್ಸರ್‌ ದೂರ

ಪಾಲಿಫೆನಾಲ್ ಮತ್ತು ರೆಸ್ವೆರಾಟ್ರೋಲ್‌ನಂಥ ಪ್ರಮುಖ ಆಂಟಿ ಆಕ್ಸಿಡೆಂಟ್‌ಗಳು ದ್ರಾಕ್ಷಿಯಲ್ಲಿವೆ. ಕ್ಯಾನ್ಸರ್‌ ಅಥವಾ ಯಾವುದೇ ರೀತಿಯ ಗಡ್ಡೆಗಳು ಬೆಳೆಯದಂತೆ ತಡೆಯುವ ಸಾಮರ್ಥ್ಯ ಇವುಗಳಿಗಿರುವುದಾಗಿ ಅಧ್ಯಯನಗಳು ಹೇಳುತ್ತವೆ. ಯಕೃತ್‌, ಕರುಳು, ಸ್ತನ, ಜಠರ, ಚರ್ಮ ಮುಂತಾದ ಕಡೆಗಳಲ್ಲಿ ಕ್ಯಾನ್ಸರ್‌ ಗಡ್ಡೆಗಳು ಬಾರದಂತೆ ಕಾಪಾಡುತ್ತದೆ, ಇದರಲ್ಲಿನ ಕ್ವಾರ್ಸೆಂಟೀನ್‌ ಎಂಬ ಫ್ಲವನಾಯ್ಡ್‌ನಿಂದ ಕ್ಯಾನ್ಸರ್‌ ಕೋಶಗಳ ಬೆಳವಣಿಗೆ ಕುಂಠಿತಗೊಳ್ಳುವುದು ಪತ್ತೆಯಾಗಿದೆ.

Grapes Benefits

ಹೃದಯಾರೋಗ್ಯ ವೃದ್ಧಿ

ಇದರ ಪಾಲಿಫೆನಾಲ್‌ಗಳು ದೇಹದಲ್ಲಿನ ಉರಿಯೂತ ತಗ್ಗಿಸಿ, ಹೃದಯದ ಆಯಸ್ಸು ಹೆಚ್ಚಿಸುತ್ತವೆ. ರಕ್ತದ ಪರಿಚಲನೆಯನ್ನು ವೃದ್ಧಿಸಿ, ಹೃದಯಕ್ಕೆ ಬಾಧೆಯಾಗದಂತೆ ನೋಡಿಕೊಳ್ಳುತ್ತವೆ. ಕೊಲೆಸ್ಟ್ರಾಲ್‌ ಮಟ್ಟ ಕಡಿಮೆಯಾಗುವಂತೆ ಮಾಡುವ ಬಗ್ಗೆಯೂ ಅಧ್ಯಯನಗಳು ಹೇಳುತ್ತವೆ.

Grapes Benefits

ದೃಷ್ಟಿ ಚುರುಕು

ನಿಯಮಿತವಾಗಿ ದ್ರಾಕ್ಷಿ ಹಣ್ಣು ತಿನ್ನುವುದರಿಂದ ಕಣ್ಣಿನ ದೃಷ್ಟಿ ಮಂದವಾಗುವ ಸಾಧ್ಯತೆಯನ್ನು ಶೇ. ೩೬ರಷ್ಟು ತಗ್ಗಿಸಬಹುದು ಎನ್ನುತ್ತವೆ ಅಧ್ಯಯನಗಳು. ಅದರಲ್ಲೂ ಕೆಂಪು ದ್ರಾಕ್ಷಿಯನ್ನು ಪ್ರತಿದಿನ ಸೇವಿಸುವುದರಿಂದ ವೃದ್ಧಾಪ್ಯದಲ್ಲಿ ಕಾಡುವ ದೃಷ್ಟಿದೋಷದ ಸಾಧ್ಯತೆ ಕ್ಷೀಣವಾಗುತ್ತದೆ.

ಪ್ರತಿರೋಧಕ ಶಕ್ತಿ ವೃದ್ಧಿ

ಹಲವು ಫ್ಲವನಾಯ್ಡ್‌ಗಳು, ವಿಟಮಿನ್‌ ಎ, ಸಿ ಮತ್ತು ಕೆ ಜೀವಸತ್ವಗಳು, ಕಬ್ಬಿಣ ಮತ್ತು ಮೆಗ್ನೀಶಿಯಂನಂಥ ಖನಿಜಗಳಿಂದ ಸಮೃದ್ಧವಾಗಿರುವ ದ್ರಾಕ್ಷಿ ಹಣ್ಣುಗಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಬಲ್ಲವು. ಅದರಲ್ಲೂ ದೈನಂದಿನ ಆಹಾರದಲ್ಲಿ ಬೊಗಸೆ ದ್ರಾಕ್ಷಿಗೆ ಸ್ಥಾನ ನೀಡಿದರೆ ಋತು ಬದಲಾವಣೆಯ ಹೊತ್ತಿಗೆ ಬರುವಂಥ ನೆಗಡಿ, ಜ್ವರದಂಥ ಕಿರಕಿರಿಗಳನ್ನು ತಡೆಯಬಹುದು

Grapes Benefits

ಮೂಳೆಗಳ ಬಲವರ್ಧನೆ

ತಾಮ್ರ, ಕಬ್ಬಿಣ, ಮ್ಯಾಂಗನೀಸ್‌ನಂಥ ಅಗತ್ಯ ಖನಿಜಗಳನ್ನು ಹೊಂದಿರುವ ದ್ರಾಕ್ಷಿಯ ಸೇವನೆಯಿಂದ ಮೂಳೆಗಳ ಶಕ್ತಿಯನ್ನು ಹೆಚ್ಚಿಸಬಹುದು. ಆಸ್ಟಿಯೊ ಆರ್ಥರೈಟಿಸ್‌ನಿಂದ ಉಂಟಾಗುವ ಮಂಡಿ ನೋವಿನ ಉಪಟಳವನ್ನು ದ್ರಾಕ್ಷಿಗಳು ಶಮನ ಮಾಡಬಲ್ಲವು. ಇದರಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು ಕೀಲುಗಳಲ್ಲಿ ಶಕ್ತಿ ಸಂಚಯಿಸಿ, ಅವುಗಳ ಕ್ಷಮತೆಯನ್ನು ಹೆಚ್ಚಿಸುತ್ತವೆ.

Grapes Benefits

ಮಧುಮೇಹಿಗಳಿಗೂ ಕ್ಷೇಮ

ಹೌದು, ಸಿಹಿ ರುಚಿಯ ಹಣ್ಣುಗಳನ್ನು ತಿನ್ನುವಾಗ ಇದು ಮಧುಮೇಹಿಗಳಿಗೆ ಸುರಕ್ಷಿತವೇ ಎಂಬ ಸಂಶಯ ಕಾಡುವುದು ಸಹಜ. ಇದರ ಗ್ಲೈಸೆಮಿಕ್‌ ಇಂಡೆಕ್ಸ್‌ ಮಧ್ಯಮ ಪ್ರಮಾಣದಲ್ಲಿದ್ದು, ಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಮಧುಮೇಹಿಗಳಿಗೂ ಅಪಥ್ಯವಾಗುವುದಿಲ್ಲ.

ಇದನ್ನೂ ಓದಿ: Bone Health: ಮೂಳೆಗಳ ಬಲವರ್ಧನೆಗೆ ಏನು ಮಾಡಬೇಕು?

Continue Reading

ಆರೋಗ್ಯ

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ಕೊರೊನಾ ಸೋಂಕಿನ ಬೆನ್ನಲ್ಲೇ ಮತ್ತೊಂದು ಸೋಂಕಿನ (New Virus) ಸುದ್ದಿ ಎಲ್ಲೆಡೆ ಹರಿದಾಡಿದೆ. ಸಿಲ್ವರ್‌ ಲೀಫ್‌ ಡಿಸೀಸ್‌ ಹೆಸರಿನ ಕಾಯಿಲೆ ಭಾರತದಲ್ಲಿ ಮೊದಲನೆಯದಾಗಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

VISTARANEWS.COM


on

Edited by

Koo

ನವದೆಹಲಿ: ಕೊರೊನಾ ಸೋಂಕು ವಿಶ್ವಾದ್ಯಂತ ಭಾರೀ ತಲ್ಲಣವನ್ನೇ ಉಂಟುಮಾಡಿತ್ತು. ಲಕ್ಷಾಂತರ ಜೀವಗಳು ಈ ಸೋಂಕಿನಿಂದಾಗಿ ಸಾವನ್ನಪ್ಪಿವೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ವೈರಸ್‌ (New Virus) ಬಂದಿರುವ ಬಗ್ಗೆ ಸುದ್ದಿ ಹರಿದಾಡಲಾರಂಭಿಸಿದೆ. ಅದರಲ್ಲೂ ಭಾರತದಲ್ಲಿಯೇ ಮೊದಲನೆಯದಾಗಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Covid-19 Cases: ಕೊರೊನಾ ಸೋಂಕಿನ ಕೇಸ್​​ನಲ್ಲಿ 24ಗಂಟೆಯಲ್ಲಿ ಶೇ.40 ಏರಿಕೆ; ಇಂದು 3ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ಹೌದು. ಭಾರತದಲ್ಲಿ ಸಸ್ಯಗಳಿಗೆ ಹೆಚ್ಚಾಗಿ ಕಾಡುವ ರೋಗವೆಂದರೆ ಅದು ಸಿಲ್ವರ್‌ ಲೀಫ್‌ ರೋಗ. ಈ ರೋಗದ ವೈರಸ್‌ ಇದೀಗ ಮಾನವನ ದೇಹಕ್ಕೂ ಹೊಗ್ಗಿರುವುದಾಗಿ ವರದಿಯಾಗಿದೆ. ಭಾರತದ ರೈತನೊಬ್ಬನಿಗೆ ಈ ಸೋಂಕು ತಗುಲಿದ್ದು, ಆತನಲ್ಲಿ ಜ್ವರ, ಕೆಮ್ಮುವಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಇದುವರೆಗೆ ಈ ಸೋಂಕು ಯಾವುದೇ ದೇಶದಲ್ಲಿಯೂ ಮನುಷ್ಯರಿಗೆ ಹಬ್ಬಿರಲಿಲ್ಲ. ಇದೇ ಮೊದಲನೇ ಬಾರಿಗೆ ಇಂತದ್ದೊಂದು ಪ್ರಕರಣ ವರದಿಯಾಗಿದೆ.

ಅಂದ ಹಾಗೆ ಈ ಸೋಂಕು ಯಾವಾಗ ರೈತನಿಗೆ ತಗುಲಿದ್ದು ಎನ್ನುವ ವಿಚಾರದಲ್ಲಿ ಸ್ಪಷ್ಟ ಮಾಹಿತಿಯಿಲ್ಲ. ಆದರೆ ಈ ಕುರಿತಾದ ವರದಿಯೊಂದು ʼಮೆಡಿಕಲ್‌ ಮೈಕೋಲಜಿ ಕೇಸ್‌ ರಿಪೋರ್ಟ್ಸ್‌ʼ ಜರ್ನಲ್‌ನಲ್ಲಿ ದಾಖಲಾಗಿದೆ.

ಇದನ್ನೂ ಓದಿ: Coronavirus: ಇಂದು 1800ಕ್ಕೂ ಅಧಿಕ ಕೊರೊನಾ ಕೇಸ್​ಗಳು ಪತ್ತೆ; ಏಪ್ರಿಲ್​​ನಲ್ಲಿ 2 ದಿನ ಆಸ್ಪತ್ರೆಗಳಲ್ಲಿ ಅಣುಕು ಕಾರ್ಯಾಚರಣೆ

ಇತ್ತೀಚೆಗೆ ಅಮೆರಿಕದ ಆರೋಗ್ಯ ಅಧಿಕಾರಿಗಳು ವೈರಸ್‌ ಒಂದರ ಬಗ್ಗೆ ಎಚ್ಚರಿಕೆ ಕೊಟ್ಟಿದ್ದರು. ಕ್ಯಾಂಡಿಡಾ ಔರಿಸ್‌ ಫಂಗಸ್‌ ಹೆಸರಿನ ಸೋಂಕು ಇತ್ತೀಚಿನ ದಿನಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದರು. ಹಾಗೆಯೇ ಈ ಸೋಂಕಿಗೆ ತುತ್ತಾಗುವವರಲ್ಲಿ ಶೇ.60 ಮಂದಿ ಸಾವನ್ನಪ್ಪುವ ಸಾಧ್ಯತೆಯಿದೆ ಎಂದೂ ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇದೀಗ ಭಾರತದಲ್ಲಿ ಮತ್ತೊಂದು ಸೋಂಕಿನ ವಿಚಾರ ಸುದ್ದಿಯಾಗಿದೆ. ಇದರ ಬಗ್ಗೆ ಭಾರತೀಯ ಆರೋಗ್ಯ ಇಲಾಖೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ.

Continue Reading

ಆರೋಗ್ಯ

Shivamogga News: ವಿನ್‌ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ

Shivamogga News: ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶದಲ್ಲಿ ಜೀವ ರಕ್ಷಕ ತರಬೇತಿ, ಕಿರು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ವಿನ್‌ಲೈಫ್ ಟ್ರಸ್ಟಿ ಡಾ.ಪೃಥ್ವಿ ಮಾಹಿತಿ ನೀಡಿದ್ದಾರೆ.

VISTARANEWS.COM


on

Edited by

WinLife Trust shivamogga
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನ್ ಲೈಫ್ ಟ್ರಸ್ಟಿ ಡಾ.ಪೃಥ್ವಿ .
Koo

ಶಿವಮೊಗ್ಗ: ವಿನ್‌ಲೈಫ್ ಟ್ರಸ್ಟ್ (WinLife Trust) ವತಿಯಿಂದ ಕುವೆಂಪು ರಂಗ ಮಂದಿರದಲ್ಲಿ ಏ.2 ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನ್‌ಲೈಫ್ ಟ್ರಸ್ಟಿ ಡಾ.ಪೃಥ್ವಿ, “ಈ ಸಮಾವೇಶದಲ್ಲಿ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಾಗಾರ ನಡೆಯಲಿದ್ದು, ದೈನಂದಿನ ಬದುಕಿನಲ್ಲಿ ಒತ್ತಡ ನಿರ್ವಹಣೆ, ಮಧುಮೇಹ @360 ಈ ವಿಷಯ ಕುರಿತು ಅರಿವು ಮೂಡಿಸಲಾಗುವುದು. ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ, ಕಾರ್ಯಾಗಾರ, ಯೋಗ, ವಸ್ತು ಪ್ರದರ್ಶನ, ಕಿರು ನಾಟಕ ಪ್ರದರ್ಶನ, ಸಮಾಲೋಚನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: Ananya Panday: ತನ್ನನ್ನು ಎಸಿಪಿ ಎಂದು ಕರೆಯದಂತೆ ಮಾಧ್ಯಮಗಳಿಗೆ ವಿನಂತಿಸಿದ ಅನನ್ಯಾ ಪಾಂಡೆ

ಸುದ್ದಿಗೋಷ್ಠಿಯಲ್ಲಿ ವಿನ್‌ಲೈಫ್ ನಿರ್ದೇಶಕರಾದ ಡಾ.ಶಂಕರ್, ಡಾ.ವಿಜಯ ಕುಮಾರ್, ರೆಹಮತ್ ಹಾಗೂ ಬದ್ರಿನಾಥ್ ಉಪಸ್ಥಿತರಿದ್ದರು.

Continue Reading
Advertisement
Elephant trap
ಕರ್ನಾಟಕ4 hours ago

Elephant trapped : ಮೂರು ತಿಂಗಳಿನಿಂದ ಸತಾಯಿಸುತ್ತಿರುವ 10 ವರ್ಷದ ಗಂಡಾನೆ ಕೊನೆಗೂ ಹನಿ ಟ್ರ್ಯಾಪ್‌ಗೆ ಬಿತ್ತು!

Unaccounted 6.4 Crore rupees seized in Chikmagalur
ಕರ್ನಾಟಕ4 hours ago

Karnataka Election 2023: ಚುನಾವಣೆ ಹಿನ್ನೆಲೆ ಹಣದ ಹೊಳೆ, ದಾಖಲೆ ಇಲ್ಲದ 6 ಕೋಟಿ ರೂ., 17 ಕೆಜಿ ಚಿನ್ನ, ಬೆಳ್ಳಿ ವಶ

Champion Gujarat won by 5 wickets in the first match, CSK was disappointed
ಕ್ರಿಕೆಟ್4 hours ago

IPL 2023 : ಚಾಂಪಿಯನ್​ ಗುಜರಾತ್​​ಗೆ ಮೊದಲ ಪಂದ್ಯದಲ್ಲಿ 5 ವಿಕೆಟ್ ಜಯ, ಸಿಎಸ್​ಕೆ ನಿರಾಸೆ

holalu urus
ಕರ್ನಾಟಕ4 hours ago

Communal Harmony : ಉರೂಸ್‌ ಸಂಭ್ರಮದಲ್ಲಿ ಹಿಂದೂ ಶ್ರೀಗಳನ್ನು ಗೌರವಿಸಿ ಭಾವೈಕ್ಯತೆ ಮೆರೆದ ಮುಸ್ಲಿಮರು

Nelyadi suicide
ಕರ್ನಾಟಕ4 hours ago

Suicide case : ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ, ಆ ಮನೆಯಲ್ಲಿ ಇದು ಮೂರನೇ ಸುಸೈಡ್‌!

Bangalore mysore highway
ಪ್ರಮುಖ ಸುದ್ದಿ5 hours ago

ವಿಸ್ತಾರ ಸಂಪಾದಕೀಯ: ಟೋಲ್ ದರ ಜನರಿಗೆ ದುಃಸ್ವಪ್ನವಾಗದಿರಲಿ

IT Raid on the bank owned by Belgaum Congress leader VS Sadhunavar
ಕರ್ನಾಟಕ5 hours ago

IT Raid: ಕಾಂಗ್ರೆಸ್‌ ಮುಖಂಡ ವಿ.ಎಸ್.‌ ಸಾಧುನವರ ಒಡೆತನದ ಬ್ಯಾಂಕ್‌ ಮೇಲೆ ಐಟಿ ದಾಳಿ

IPL 2023
ಕ್ರಿಕೆಟ್5 hours ago

IPL 2023 : ಐಪಿಎಲ್​ನ ಮೊದಲ ಇಂಪ್ಯಾಕ್ಟ್​​ ಪ್ಲೇಯರ್​ ಯಾರು? ಅನುಕೂಲ ಬಳಸಿಕೊಂಡಿದ್ದು ಯಾವ ತಂಡ?

People In Pakistan Unhappy, Believe Partition Was A Mistake: Says Mohan Bhagwat
ದೇಶ5 hours ago

Mohan Bhagwat: ಪಾಕ್ ಜನಕ್ಕೆ ನೆಮ್ಮದಿ ಇಲ್ಲ, ದೇಶ ವಿಭಜನೆ ಪ್ರಮಾದ ಎಂಬ ಭಾವನೆ ಇದೆ: ಮೋಹನ್‌ ಭಾಗವತ್‌

Mohammad Shami who scored a century in bowling, what is the achievement?
ಕ್ರಿಕೆಟ್6 hours ago

IPL 2023 : ಬೌಲಿಂಗ್​ನಲ್ಲಿ ಶತಕ ಬಾರಿಸಿದ ಮೊಹಮ್ಮದ್​ ಶಮಿ, ಏನಿದು ಸಾಧನೆ?

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್6 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ16 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ1 day ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ2 days ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ5 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ5 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ2 weeks ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ2 weeks ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!