Killer Bmtc : ಕಿಲ್ಲರ್ ಬಿಎಂಟಿಸಿಗೆ ವರ್ಷದ ಮೊದಲ ಬಲಿ - Vistara News

ಕರ್ನಾಟಕ

Killer Bmtc : ಕಿಲ್ಲರ್ ಬಿಎಂಟಿಸಿಗೆ ವರ್ಷದ ಮೊದಲ ಬಲಿ

killer BMTC : ಕಳೆದ ವರ್ಷ ಸುಮಾರು 34 ಮಂದಿಯನ್ನು ಬಿಎಂಟಿಸಿ ಬಲಿ (Road Accident) ಪಡೆದಿತ್ತು. ಇದೀಗ 2024ರಲ್ಲಿ ಬಿಎಂಟಿಸಿ (BMTC accident) ವರ್ಷದ ಮೊದಲ ಬಲಿ ಪಡೆದಿದೆ.

VISTARANEWS.COM


on

Road Accident Killer Bmtc rider dead
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿಯಲ್ಲಿ ಕಿಲ್ಲರ್‌ ಬಿಎಂಟಿಸಿ (killer BMTC) ಬಸ್ಸಿಗೆ ವ್ಯಕ್ತಿಯೊಬ್ಬರು (Road Accident) ಬಲಿಯಾಗಿದ್ದಾರೆ. ಎಳಂಗೋವನ್ ಸೆಂಕತ್ತವಲ್ (43) ಮೃತ ದುರ್ದೈವಿ.

ಜ.6ರಂದು ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ನಡೆದಿದೆ. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್‌ ಸವಾರ ತೆರಳುತಿದ್ದ, ಅದೇ ಮಾರ್ಗದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಬರುತ್ತಿತ್ತು.

ಈ ವೇಳೆ ವೋಲ್ವೋ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಸೇರುವ ಮೊದಲೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಎಚ್‌ಎಎಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸ್‌ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆಯನ್ನು ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಇದನ್ನೂ ಓದಿ: Namma Metro: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ; ರೈಲು ಸೇವೆ ಸ್ಥಗಿತ

ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

ಬಿಎಂಟಿಸಿ ಬೆಂಗಳೂರಿಗರ ಪ್ರಮುಖ ಸಾರ್ವಜನಿಕ ಸಾರಿಗೆ. ಬಿಎಂಟಿಸಿಗೆ ಎಷ್ಟು ಖ್ಯಾತಿ ಇದ್ದಯೋ ಅಷ್ಟೇ ಅಪಖ್ಯಾತಿಯು ಸೇರಿಕೊಂಡಿದೆ. ಚಾಲಕರ ಅತಿವೇಗ ಚಾಲನೆ, ನಿರ್ಲಕ್ಷ್ಯದಿಂದ ಅದೆಷ್ಟೋ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಲ್ಲರ್‌ ಎಂದೇ ಹೆಸರು ಪಡೆದಿರುವ ಬಿಎಂಟಿಸಿಗೆ ಕಳೆದ ನಾಲ್ಕು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ (BMTC Accident) ಕಳೆದುಕೊಂಡಿದ್ದಾರೆ.

ತಿಂಗಳಿಗೆ ಒಬ್ಬರಾದರೂ ಬಿಎಂಟಿಸಿಗೆ ಬಲಿಯಾದರು ಎಂಬ ಸುದ್ದಿ ಕೇಳುತ್ತಲೇ ಇರುತ್ತವೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಿಂದ ಅಪಘಾತಗಳು ಹೆಚ್ಚಾಗುತ್ತಲೆ ಇವೆ. ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ, ಸಾವಿನ‌ ಸಂಖ್ಯೆಗಿಂತ ಗಾಯಾಳುಗಳ ಸಂಖ್ಯೆಯೇ ಹೆಚ್ಚಿದೆ. 2023ರಲ್ಲಿ ಬಿಎಂಟಿಸಿಯಿಂದ ಸತ್ತವರ ಸಂಖ್ಯೆ 34 ಇದ್ದರೆ, 97 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಬಿಎಂಟಿಸಿ ಮಾತ್ರವಲ್ಲ ಕೆಎಸ್‌ಆರ್‌ಟಿಸಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಇದರಿಂದಾಗಿ 2023ರಲ್ಲಿ ಹತ್ತು ಮಂದಿ ಮೃತಪಟ್ಟಿದ್ದರೆ, 28 ಅಪಘಾತಗಳಾಗಿರುವ ವರದಿಯಾಗಿದೆ. ಈ ಮಧ್ಯೆ ಸಂಚಾರಿ ನಿಯಮಗಳನ್ನು ಉಲಂಘಿಸುತ್ತಿರುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಚಾಲಕರಿಗೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ಪೊಲೀಸರ ತನಿಖೆಯಲ್ಲಿ ಕೆಲ ಚಾಲಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಸರಣಿ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ನಾಲ್ವರು ಸ್ಥಳದಲ್ಲೇ ಸಾವು

bmtc accident case

ನಿಯಮ ಉಲ್ಲಂಘಿಸಿ 1 ಕೋಟಿ ದಂಡ ಕಟ್ಟಿದ ಬಿಎಂಟಿಸಿ

ಬಿಎಂಟಿಸಿಯಲ್ಲಿ ಬರೋಬ್ಬರಿ 13, 917 ಸಂಚಾರಿ ನಿಯಮ ಉಲ್ಲಂಘಿಸಿದರೆ, ಕೆಎಸ್‌ಆರ್‌ಟಿಸಿ ಚಾಲಕರು ಮೂರು ಸಾವಿರಕ್ಕೂ ಹೆಚ್ಚು ರೂಲ್ಸ್ ಬ್ರೇಕ್ ಮಾಡಿದ್ದಾರೆ. ಬಿಎಂಟಿಸಿ ಬಸ್‌ ಚಾಲಕರಿಂದಲೇ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ ಆಗಿದೆ. ಹೀಗಾಗಿ 1,04,10,000 ರೂ. ದಂಡವನ್ನು ಬಿಎಂಟಿಸಿ ಇಲಾಖೆ ಕಟ್ಟಿದೆ. 14 ಲಕ್ಷ ರೂ. ದಂಡವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆ ಕಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ‌ ನಡೆದಿರುವ ಅಪಘಾತಗಳ‌ ಅಂಕಿ‌ ಅಂಶ ನೋಡುವುದಾದರೆ,..

ಬಿಎಂಟಿಸಿಗೆ ಬಲಿಯಾದವರು- ಗಂಭೀರ ಗಾಯಗೊಂಡವರು

2020ರಲ್ಲಿ 22 ಮಂದಿ ಸಾವು- 49 ಮಂದಿ ಗಾಯಾಳುಗಳು
2021ರಲ್ಲಿ 27 ಮಂದಿ ಸಾವು- 58 ಮಂದಿ ಗಾಯಾಳುಗಳು
2022ರಲ್ಲಿ 37 ಮಂದಿ ಸಾವು- 85 ಮಂದಿ ಗಾಯಾಳುಗಳು
2023ರಲ್ಲಿ 34 ಮಂದಿ ಸಾವು -97 ಮಂದಿ ಗಾಯಾಳುಗಳು

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಪಘಾತಗಳನ್ನು ಹೆಚ್ಚು ಮಾಡುವರ ವಿರುದ್ಧ ಕ್ರಮಕ್ಕೆ ಇಲಾಖೆ ಸೂಚನೆ ನೀಡಿದೆ. ಮುಂದಿನ ದಿನದಲ್ಲಿ ಚಾಲಕರಿಗೆ ತರಬೇತಿ ಕೊಡಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Student Self Harming: ಪರೀಕ್ಷೆಗೆ ತಡ ಮಾಡಿದ್ದಕ್ಕೆ ನಿಂದನೆ, ಎಂಜಿನಿಯರಿಂಗ್‌ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ

Student Self Harming: ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

VISTARANEWS.COM


on

pes university student self harming
Koo

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ (Electronic city) ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ (PES university) ಎಂಜಿಯರಿಂಗ್‌ ವಿದ್ಯಾರ್ಥಿಯೊಬ್ಬ (Engineering Student) ಆತ್ಮಹತ್ಯೆ (Student Self harming) ಮಾಡಿಕೊಂಡಿದ್ದಾನೆ. ಪರೀಕ್ಷೆಗೆ (Exam) ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಕಾಲೇಜಿನ 6ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದು ಪಿಇಎಸ್‌ ಕಾಲೇಜಿನಲ್ಲಿ ಸಂಭವಿಸುತ್ತಿರುವ ಎರಡನೇ ವಿದ್ಯಾರ್ಥಿ ಆತ್ಮಹತ್ಯೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ. ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ. ತಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ.

ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.

ಕೆಲ ತಿಂಗಳ ಹಿಂದೆ ಹೊಸಕೆರೆಹಳ್ಳಿ ಬಳಿಯ ಪಿಇಎಸ್ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ‌ಮಾಡಿಕೊಂಡಿದ್ದ. 2023ರಲ್ಲಿ 19 ವರ್ಷದ ಆದಿತ್ಯ ಪ್ರಭು ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದುದು ವರದಿಯಾಗಿತ್ತು. ಇದೀಗ ಪಿಇಎಸ್‌ ಕಾಲೇಜಿನಲ್ಲಿ ಎರಡನೇ ಆತ್ಮಹತ್ಯೆ ಸಂಭವಿಸಿದೆ. ಇದು ಸ್ಪರ್ಧಾತ್ಮಕ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಮೇಲಿರುವ ಮಾನಸಿಕ ಒತ್ತಡದತ್ತ ಬೆಟ್ಟು ಮಾಡಿದೆ.

ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

woman murder case kengeri

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading

ರಾಜಕೀಯ

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Prajwal Revanna Case: ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದ್ದಾರೆ.

VISTARANEWS.COM


on

Prajwal Revanna Case Prajwal case controlled by Congress government says R Ashok
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣವನ್ನು ಕಾಂಗ್ರೆಸ್‌ ನಿಯಂತ್ರಣ ಮಾಡುತ್ತಿದೆ. ಇದೆಲ್ಲವೂ ಕಾಂಗ್ರೆಸ್‌ ಸರ್ಕಾರದ ಪ್ರೀ ಪ್ಲ್ಯಾನ್‌ ಆಗಿದೆ. ಈ ಪೆನ್‌ಡ್ರೈವ್‌ ಹಂಚಿಕೆಯಲ್ಲಿ ಮಹಾ ನಾಯಕನ ಕೈವಾಡ ಇದೆ ಎಂಬುದಾಗಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಹೇಳಿಕೆಯಿಂದ ಮುಜುಗರವಾಗಿ ಈಗ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತರ ಮೊಬೈಲ್‌ನಲ್ಲಿ ಈ ಕೇಸ್‌ಗೆ ಸಂಬಂಧಿಸಿದ ವಿಡಿಯೊಗಳಿಲ್ಲವಾ? ಅಲ್ಲದೇ, ಪ್ರಜ್ವಲ್‌ ಮಾಜಿ ಡ್ರೈವರ್‌ ಕಾರ್ತಿಕ್‌ನನ್ನು ಏಕೆ ಬಂಧಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್.‌ ಅಶೋಕ್‌, ಎಚ್‌.ಡಿ. ಕುಮಾರಸ್ವಾಮಿಯವರು ಮಹಾನಾಯಕನ ಹೆಸರು ಹೇಳಿರುವ ಕಾರಣಕ್ಕಾಗಿಯೇ ಈಗ ಪ್ರಕರಣವನ್ನು ಬಿಜೆಪಿ ಕಡೆಗೆ ತಿರುಗಿಸಲಾಗುತ್ತಿದೆ. ಏಕೆಂದರೆ ಕಾಂಗ್ರೆಸ್‌ನವರಿಗೆ ಈಗ ಇದರಿಂದ ಮುಜುಗರವಾಗತೊಡಗಿದೆ. ಹೀಗಾಗಿ ಪ್ರಕರಣವನ್ನು ತಮ್ಮ ಕಂಟ್ರೋಲ್‌ಗೆ ತೆಗೆದುಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ನಿರಾಕರಣೆ ಆದ ಕೂಡಲೇ ಬಂಧಿಸಲಾಗುತ್ತದೆ. ಆದರೆ, ಅದೇ ಪೆನ್‌ಡ್ರೈವ್‌ ಅನ್ನು ಹರಿಬಿಟ್ಟ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ನನ್ನು ಮಾತ್ರ ಈವರೆಗೆ ಏಕೆ ಬಂಧಿಸಿಲ್ಲ? ಈಗ ಹಾಸನದಲ್ಲಿ ಆಗಿರುವ ಎಸ್ಐಟಿ ದಾಳಿ ಉದ್ದೇಶವೇನೆಂದರೆ ಇಡೀ ಪ್ರಕರಣವನ್ನು ಬೇರೆ ಕಡೆ ಡೈವರ್ಟ್ ಮಾಡುವುದಾಗಿದೆ ಎಂದು ಕಿಡಿಕಾರಿದರು.

ಸಿಬಿಐಗೆ ಪ್ರಕರಣ ವಹಿಸಿ

ಎಸ್ಐಟಿ ನಡೆಸುವ ತನಿಖೆಯ ಪಿನ್ ಟು ಪಿನ್ ಮಾಹಿತಿ‌ ಕಾಂಗ್ರೆಸ್ ಸರ್ಕಾರಕ್ಕೆ ಹೋಗುತ್ತಿದೆ. ಅದಕ್ಕಾಗಿಯೇ ಇಡೀ ಕೇಸ್‌ ಅನ್ನು ಬಿಜೆಪಿ ಕಡೆ ತಿರುಗಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆಯನ್ನು ವಹಿಸಬೇಕು. ಪ್ರಜ್ವಲ್ ವಾಪಸ್ ಬಂದಿಲ್ಲ ಎಂದರೆ ಅದು ಸರ್ಕಾರದ ವೈಫಲ್ಯ. ಎಸ್ಐಟಿ ಟೀಂನವರು ಅವರನ್ನು ಬಂಧಿಸಿ ಕರೆ ತಂದಿಲ್ಲ. ಅದೇ ಈ ಕೇಸ್‌ ಅನ್ನು ಸಿಬಿಐಗೆ ವಹಿಸಿದರೆ ಅವರು ಬಂಧಿಸಿ ಕರೆತರುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಇದೆಲ್ಲ ಪ್ರೀ ಪ್ಲ್ಯಾನ್‌

ಹಾಸನದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಈಗ ಎಸ್‌ಐಟಿ ತಂಡದವರು ದಾಳಿ ಮಾಡುತ್ತಿದ್ದಾರೆ. ಇದು ಬೇಕೆಂದೇ ಮಾಡುತ್ತಿರುವ ಕೃತ್ಯವಾಗಿದೆ. ಹಾಗಾದರೆ, ಹಾಸನ ಕಾಂಗ್ರೆಸ್ ಕಾರ್ಯಕರ್ತರ ಬಳಿ ವಿಡಿಯೊಗಳು ಇಲ್ಲವೇ? ಅವರ ಮೊಬೈಲ್‌ಗಳನ್ನು ಚೆಕ್‌ ಮಾಡಲಿ. ಅವರ ಬಳಿ ಇದಕ್ಕಿಂತಲೂ ಹೆಚ್ಚು ವಿಡಿಯೊ ಮತ್ತು ಪೆನ್‌ಡ್ರೈವ್ ಇದೆ. ಕಾಂಗ್ರೆಸ್‌ನ ಯಾವೊಬ್ಬ ಕಾರ್ಯಕರ್ತನ ವಿಚಾರಣೆಯನ್ನು ಇದುವರೆಗೆ ಏಕೆ ಮಾಡಿಲ್ಲ? ಇದೆಲ್ಲ ಪ್ರೀ ಪ್ಲ್ಯಾನ್‌ ಆಗಿದೆ ಎಂದು ಆರ್.‌ ಅಶೋಕ್‌ ದೂರಿದರು.

ಗೌಡರ ಕುಟುಂಬದ ಬಗ್ಗೆ ಡಿಕೆಶಿ ಕಿಂಡಲ್‌

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅನುಕಂಪ ತೋರಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್, ಡಿ.ಕೆ. ಶಿವಕುಮಾರ್‌ ಅವರು ಕಿಂಡಲ್‌ ಮಾಡುತ್ತಿದ್ದಾರೆ. ಅವರು ದೇವೇಗೌಡರ ಕುಟುಂಬಕ್ಕೆ ಈ ಹೇಳಿಕೆ ಮೂಲಕ ಲೇವಡಿ ಮಾಡಿದ್ದಾರೆ ಎಂದು ವ್ಯಾಖ್ಯಾನಿಸಿದರು.

ತಿಮಿಂಗಿಲ ಬಗ್ಗೆ ಗೊತ್ತಾಗುತ್ತೆ

ಎಚ್.ಡಿ. ಕುಮಾರಸ್ವಾಮಿ ಅವರು ಡಿಕೆಶಿಗೆ ಪರೋಕ್ಷವಾಗಿ ತಿಮಿಂಗಿಲ ಎಂದಿರುವ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ ಆರ್.‌ ಅಶೋಕ್‌, ಪ್ರಕರಣದಲ್ಲಿ ತಿಮಿಂಗಿಲ ಯಾರು ಅಂತ ಗೊತ್ತಾಗಲೇಬೇಕು. ಸಮುದ್ರದಲ್ಲಿರುವ ತಿಮಿಂಗಿಲ ಆಮ್ಲಜನಕಕ್ಕಾಗಿ ನೀರಿಂದ ಹೊರಗೆ ಬರಲೇಬೇಕು. ಆಗ ಆ ತಿಮಿಂಗಿಲ ಕಾಂಗ್ರೆಸ್‌ದಾ? ಜೆಡಿಎಸ್‌ದಾ ಅಂತ ಗೊತ್ತಾಗುತ್ತದೆ ಎಂದು ಹೇಳಿದರು.

ಹಗಲು ಕನಸು ಕಾಣುತ್ತಿರುವ ಸಿದ್ದರಾಮಯ್ಯ

ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆಯನ್ನು ನಿರಾಕರಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್.‌ ಅಶೋಕ್‌, ಬಿಜೆಪಿಯವರು ಭ್ರಮೆಯಲ್ಲಿದ್ದಾರೆಂದು ಅವರು ಹೇಳುತ್ತಿರಬಹುದು. ಆದರೆ, ಭ್ರಮೆಯಲ್ಲಿರುವುದು ನಾವಲ್ಲ. ಹಗಲು ಕನಸು ಕಾಣುತ್ತಿರುವುದು ನಾವಲ್ಲ, ಸಿದ್ದರಾಮಯ್ಯ ಅವರಾಗಿದ್ದಾರೆ. ಈ ಹಿಂದೆ 17 ಶಾಸಕರು ಹೋಗ್ತಾರಾ? ಸಾಧ್ಯವಿಲ್ಲ ಅಂದಿದ್ದರು. ಆದರೆ, ಅದು ಸಾಧ್ಯವಾಗಿಲ್ಲವಾ? 17 ಶಾಸಕರು ಬಂದರಲ್ಲವೇ? ಮಹಾರಾಷ್ಟ್ರದಲ್ಲೂ 90 ಜನ ಶಾಸಕರು ಆಚೆ ಹೋದರಲ್ಲ. ಇದೆಲ್ಲವೂ ಹೇಗಾಯ್ತು? ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಕಾಂಗ್ರೆಸ್‌ ಮೊದಲು ಬಿಡುವವರು ಇವರೇ

ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗಿ ಚುನಾಯಿತರಾದರೆ ಕಾಂಗ್ರೆಸ್‌ನವರಿಗೆ ಗಂಟು ಮೂಟೆ ಕಟ್ಟೋದಷ್ಟೇ ಬಾಕಿ. ಯಾರು ನಾನಲ್ಲ, ನಾನಲ್ಲ ಅಂತ ಹೇಳುತ್ತಿದ್ದಾರೋ, ಅವರೇ ಮೊದಲು ಕಾಂಗ್ರೆಸ್ ಬಿಡುತ್ತಾರೆ. ಆ ರೀತಿಯ ಸನ್ನಿವೇಶ ನಿರ್ಮಾಣವಾದರೆ ಅವರೇ ಬಿಜೆಪಿಗೆ ಬರಲು ಮೊದಲು ನಿಂತುಕೊಳ್ಳುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

Continue Reading

ಕ್ರೈಂ

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Murder Case: ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

VISTARANEWS.COM


on

woman murder case kengeri
ಕೊಲೆಯಾದ ದಿವ್ಯಾ, ಆರೋಪಿ ಮೋನಿಕಾ
Koo

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ (Woman murder case) ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ (kengeri murder, bangalore crime) ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ (Strangle) ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

“ನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ” ಎಂದವನು ಮಾಡಿಯೇ ಬಿಟ್ಟ!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು (Stabbing) ಮತ್ತೊಬ್ಬ ಯುವತಿಯನ್ನು ಕೊಲೆ (Woman Murder Case) ಮಾಡಲಾಗಿದೆ. ಇದು ಕೂಡ ಪಾಗಲ್‌ ಭಗ್ನಪ್ರೇಮಿಯ ಕೃತ್ಯವಾಗಿದೆ. ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಈ ಕೊಲೆಯೂ ಘಟಿಸಿದೆ. ಕೊಲೆಗೆ ಕೆಲ ದಿನಗಳ ಮುನ್ನ ಆರೋಪಿ, ಯುವತಿಗೆ “ನೇಹಾ ಹಿರೇಮಠ ಥರ ಮಾಡ್ತೀನಿ” ಎಂದು ಬೆದರಿಸಿದ್ದ ಎಂದು ಗೊತ್ತಾಗಿದೆ.

woman murder case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಂಜಲಿ ಅಂಬಿಗೇರ (20) ಕೊಲೆಯಾಗಿರುವ ಯುವತಿ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ. ಬೆಳಗಿನ ಜಾವ 5.30ಕ್ಕೆ ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ಪ್ರತಿಭಟಿಸಿದರೂ ಅವರ ಎದುರೇ ಇರಿದಿದ್ದಾನೆ.

ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಇದನ್ನೂ ಓದಿ: Murder Case: ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ‌ ಕಲ್ಲು ಎತ್ತಿ ಹಾಕಿ ಕೊಲೆ

Continue Reading

ಚಿನ್ನದ ದರ

Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹40 ಹಾಗೂ ₹43 ಏರಿಕೆಯಾಗಿವೆ. ಅಕ್ಷಯ ತದಿಗೆಯ ಭಾರೀ ಏರಿಕೆಯ ಬಳಿಕ ಚಿನ್ನದ ಬೆಲೆಗಳು ಇಳಿದಿದ್ದವು. ಇಂದು ಮತ್ತೆ ಏರಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹40 ಹಾಗೂ ₹43 ಏರಿಕೆಯಾಗಿವೆ. ಅಕ್ಷಯ ತದಿಗೆಯ ಭಾರೀ ಏರಿಕೆಯ ಬಳಿಕ ಚಿನ್ನದ ಬೆಲೆಗಳು ಇಳಿದಿದ್ದವು. ಇಂದು ಮತ್ತೆ ಏರಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,715ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,150 ಮತ್ತು ₹6,71,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,325 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,600 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,250 ಮತ್ತು ₹7,32,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹86.50, ಎಂಟು ಗ್ರಾಂ ₹692 ಮತ್ತು 10 ಗ್ರಾಂ ₹865ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,650 ಮತ್ತು 1 ಕಿಲೋಗ್ರಾಂಗೆ ₹86,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,30073,400
ಮುಂಬಯಿ67,150 73,250
ಬೆಂಗಳೂರು67,150 73,250
ಚೆನ್ನೈ67,25073,360

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading
Advertisement
Cannes 2024 seven Indian Films To Be Screened
ಸಿನಿಮಾ9 mins ago

Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

pes university student self harming
ಕ್ರೈಂ14 mins ago

Student Self Harming: ಪರೀಕ್ಷೆಗೆ ತಡ ಮಾಡಿದ್ದಕ್ಕೆ ನಿಂದನೆ, ಎಂಜಿನಿಯರಿಂಗ್‌ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ

Prajwal Revanna Case Prajwal case controlled by Congress government says R Ashok
ರಾಜಕೀಯ21 mins ago

Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

Himanta Biswa Sarma
ರಾಜಕೀಯ27 mins ago

Himanta Biswa Sarma: ಬಿಜೆಪಿಗೆ ಏಕೆ 400 ಸೀಟುಗಳು ಬೇಕೇಬೇಕು? ಹಿಮಂತ ಬಿಸ್ವ ಶರ್ಮಾ ಉತ್ತರ ಹೀಗಿದೆ!

Facebook, Instagram Down
ತಂತ್ರಜ್ಞಾನ35 mins ago

Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

Madhavi Raje Scindia
ದೇಶ47 mins ago

Madhavi Raje Scindia: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಮಾತೃ ವಿಯೋಗ

woman murder case kengeri
ಕ್ರೈಂ56 mins ago

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

Anchor Anushree talking with fans on instagram live
ಕಿರುತೆರೆ57 mins ago

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

NewsClick case
ದೇಶ1 hour ago

NewsClick Case: ಚೀನಾ ಪರ ಪ್ರಚಾರ; ಬಂಧನದಲ್ಲಿದ್ದ ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ರಿಲೀಸ್‌

Drone Prathap Special Gift For sangeetha sringeri Birthday
ಕಿರುತೆರೆ2 hours ago

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ6 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ8 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ18 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202420 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202424 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌