Killer CEO : ಸುಚನಾ ಸೇಠ್‌ ಬಂಧನವೇ ರೋಚಕ; ಪೊಲೀಸರ ಕೈಹಿಡಿದ ಕೊಂಕಣಿ - Vistara News

ಕರ್ನಾಟಕ

Killer CEO : ಸುಚನಾ ಸೇಠ್‌ ಬಂಧನವೇ ರೋಚಕ; ಪೊಲೀಸರ ಕೈಹಿಡಿದ ಕೊಂಕಣಿ

Killer CEO : ತಾಯಿಯಿಂದಲೇ ಮಗು ಹತ್ಯೆಯಾದ ಪ್ರಕರಣಕ್ಕೆ (Mother Kills 4 Year Old Son) ಸಂಬಂಧಿಸಿದ್ದಂತೆ ಹಂತಕಿ ಸಿಕ್ಕಿಬಿದ್ದಿದ್ದೆ (Goa Murder Case) ರೋಚಕವಾಗಿದೆ.

VISTARANEWS.COM


on

Suchana Seth was arrested by the police
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಗೋವಾದಲ್ಲಿ ತಾಯಿಯಿಂದಲೇ ಮಗನ (Goa Murder Case) ಹತ್ಯೆ ಪ್ರಕರಣಕ್ಕೆ (Mother Kills 4 Year Old Son) ಸಂಬಂಧಿಸಿದ್ದಂತೆ ಹಂತಕಿ ಸುಚನಾ ಸೇಠ್‌ಳನ್ನು (Suchana seth) ಪೊಲೀಸರು ಬಂಧನ ಮಾಡಿದ್ದೇ ರೋಚಕವಾಗಿದೆ. ಹೊಟೇಲ್ ಸಿಬ್ಬಂದಿಯ ಸಮಯಪ್ರಜ್ಞೆ ಒಂದು ಕಡೆಯಾದರೆ ಕಾರು ಚಾಲಕನ ಪಾತ್ರವು ಹಂತಕಿ ಸೆರೆಯಾಗಲು ಕಾರಣವಾಗಿದೆ.

ಹೋಟೆಲ್‌ನಲ್ಲಿದ್ದ ಸುಚನಾ ಸೇಠ್ ಮಗ ಚಿನ್ಮಯ್‌ (chinmay) ಕೊಂದು ಬಳಿಕ ಸೂಟ್ ಕೇಸ್‌ನಲ್ಲಿ ಶವವನ್ನು ತುಂಬಿಕೊಂಡು ಕಾರಲ್ಲಿ ಹೊರಟಿದ್ದಳು. ಆದರೆ ರೂಮು ಕ್ಲೀನ್‌ ಮಾಡಲು ಹೋದ ಸಿಬ್ಬಂದಿಗೆ ರಕ್ತದ ಕಲೆಗಳು ಅನುಮಾನ ಮೂಡಿಸಿದ್ದವು. ಹೀಗಾಗಿ ಸ್ಥಳೀಯ ಪೊಲೀಸರಿಗೆ ಹೋಟೆಲ್‌ ಸಿಬ್ಬಂದಿ ಮಾಹಿತಿ ನೀಡಿದ್ದರು. ಇದರ ಆಧಾರದ ಮೇಲೆ ಸುಚನಾ ಸೇಠ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಈ ಮೊದಲೇ ಮಗನನ್ನು ಕೊಲೆ ಮಾಡುವ ಉದ್ದೇಶವನ್ನು ಹೊಂದಿದ್ದಳು ಎಂಬುದಕ್ಕೆ ಪುಷ್ಟಿಯು ಸಿಕ್ಕಿತ್ತು. ಸುಚನಾ ಸೇಠ್‌ ಹೋಟೆಲ್‌ಗೆ ನೀಡಿದ ವಿಳಾಸವು ನಕಲಿ ಎಂದು ತಿಳಿದು ಬಂದಿತ್ತು.

ಕೊಂಕಣಿ ಮಾತಾಡಿ ಕಾರು ಚಾಲಕನ ವಿಶ್ವಾಸ ಗಳಿಸಿದ ಪೊಲೀಸರು

ಹೋಟೆಲ್‌ ಸಿಬ್ಬಂದಿ ನೀಡಿದ ಮಾಹಿತಿ ಆಧರಿಸಿ ಕಲ್ಲಂಗೋಟ್ ಪೊಲೀಸರು ಇನ್ನೋವಾ ಕಾರು ಚಾಲಕನ ಸಂಪರ್ಕಿಸಿದ್ದರು. ನೀವು ಕಾರಿನಲ್ಲಿ ಕರೆದುಹೋಗುತ್ತಿರುವ ಮಹಿಳೆ ಬಗ್ಗೆ ಸಂಶಯವಿದೆ ಎಂದಿದ್ದರು. ಸುಚನಾ ಸೇಠ್‌ಗೆ ಹಿಂದಿ ಹಾಗು ಇಂಗ್ಲೀಷ್ ಹೊರತುಪಡಿಸಿ ಬೇರೆ ಯಾವುದೇ ಭಾಷೆ ಬರುತ್ತಿರಲಿಲ್ಲ. ಹೀಗಾಗಿ ಪೊಲೀಸರು ಕಾರು ಚಾಲಕನೊಂದಿಗೆ ಕೊಂಕಣಿಯಲ್ಲಿ‌ ಮಾತು ಆರಂಭಿಸಿ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಸಿ, ವಿಶ್ವಾಸಕ್ಕೆ ತೆಗೆದುಕೊಂಡಿದ್ದರು.

ಸುಚನಾ ಸೇಠ್‌ಗೆ ಅನುಮಾನ ಬರದಂತೆ ಚಾಲಕ ರಾಯ್ ಜಾನ್‌ ಜತೆಗೆ ಇನ್‌ಸ್ಪೆಕ್ಟರ್‌ ಪರೇಶ್ ನಾಯ್ಕ್ ಸ್ನೇಹಿತನ ರೀತಿಯಲ್ಲೆ ಮಾತನಾಡುತ್ತಿದ್ದರು. ಸುಚನಾಗೆ ಸೇಠ್‌ಗೆ ಕೊಂಕಣಿ ಅರ್ಥವಾಗುತ್ತಿರಲಿಲ್ಲ. ಹೀಗಾಗಿ ಚಾಲಕ ರಾಯ್‌ಗೆ ಕೊಂಕಣಿಯಲ್ಲೆ ಹತ್ತಿರದ ಪೊಲೀಸ್ ಠಾಣೆಗೆ ಹೋಗುವಂತೆ ಸೂಚಿಸಿದ್ದರು. ರಾಯ್‌ಜಾನ್‌ ಸುಲಭವಾಗಿ ಪೊಲೀಸ್ ಠಾಣೆಗೆ ತಲುಪಿದ್ದ. ಹೀಗಾಗಿ ಸುಚನಾ ಸೇಠ್‌ ಸ್ಕೂಟ್‌ಕೇಸ್‌ ಸಮೇತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಸದ್ಯ ಮಂಗಳವಾರ ಆರೋಪಿ ಸುಚನಾ ಸೇಠ್‌ಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ಕಲ್ಲಂಗೋಟ್ ಪೊಲೀಸರು ಆರು ದಿನಗಳ ಕಾಲ ವಶಕ್ಕೆ ಪಡೆದು, ತೀವ್ರ ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Killer CEO: ಎತ್ತಿ ಆಡಿಸಿದ ತೋಳಲ್ಲಿ ಮಗು ಚಿನ್ಮಯ್‌ ಅಂತ್ಯಕ್ರಿಯೆ; ಈ ನೋವು ಮತ್ತಾವ ತಂದೆಗೂ ಬೇಡ

ಮಗುವನ್ನೇ ಕೊಂದ ಬುದ್ಧಿವಂತೆ; ಭೀಕರ ಕ್ರೌರ್ಯದ ಬೆಚ್ಚಿಬೀಳಿಸುವ ಕಥೆ!

ಬೆಂಗಳೂರು: ಉತ್ತರ ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಸೋಲ್ ಬನಿಯನ್ ಗ್ರಾಂಡೆಗೆ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗುವನ್ನು ಕೊಂದು ಹಾಕಿದ ಧೂರ್ತ ಮಹಿಳೆ ಸುಚನಾ ಸೇಠ್‌ (39) ವಿದ್ಯಾವಂತರೆಲ್ಲರೂ ವಿವೇಕಿಗಳಾಗಿರಬೇಕಾಗಿಲ್ಲ ಎಂಬ ಮಾತಿಗೆ ಅತ್ಯಂತ ಸೂಕ್ತ ನಿದರ್ಶನ. ಜಗತ್ತಿನ ಅತ್ಯಂತ ನವೀನ ಜ್ಞಾನಶಾಖೆಯಾಗಿರುವ ಕೃತಕ ಬುದ್ಧಿಮತ್ತೆಯನ್ನು (Artificial Intelligence) ಅರೆದು ಕುಡಿದಂತಿರುವ ಸುಚನಾ ಸೇಠ್‌ಳ (Suchana Seth) ಬುದ್ಧಿಯೇ ನೆಟ್ಟಗಿರಲಿಲ್ಲ!

ಬೆಂಗಳೂರಿನಲ್ಲಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್ ಮೈಂಡ್‌ಫುಲ್ ಎಐ ಲ್ಯಾಬ್ಸ್‌ನ (Mindful AI Labs) ಸಹ-ಸ್ಥಾಪಕಿ ಹಾಗೂ ಸಿಇಒ ಆಗಿರುವ ಸುಚನಾ ಸೇಠ್ ಅತ್ಯಂತ ಪ್ರಭಾವಿ ಮಹಿಳೆ. ಅಪ್ರತಿಮ ಪ್ರತಿಭಾವಂತೆ. ಆದರೇನು ಮಾಡೋಣ? ಮಗುವನ್ನೇ ಕೊಲ್ಲುವ ಕ್ರೌರ್ಯವನ್ನು ಮೆರೆದಿದ್ದಾಳೆ.

ಇದನ್ನೂ ಓದಿ: Killer CEO: ಸಿಇಒ ಮಗನ ಕೊಲೆ ಪೂರ್ವಯೋಜಿತ; ಆಕೆಯ ಕಂಪನಿಗೆ ಕಚೇರಿಯೇ ಇರಲಿಲ್ಲ!

ಹಾಗಿದ್ದರೆ ಈ ಸುಚನಾ ಸೇಠ್‌ ಯಾರು? ಆಕೆ ಕೃತಕ ಬುದ್ಧಿಮತ್ತೆಯ ಶಕ್ತಿ ಎಷ್ಟು?

  1. 1. ಸುಚನಾ ಸೇಠ್‌ ಮೈಂಡ್‌ ಎಐ ಲ್ಯಾಬ್‌ ಎಂಬ ಕೃತಕ ಬುದ್ಧಿಮತ್ತೆ ಕುರಿತ ಕಂಪನಿಯ ಸಹ ಸ್ಥಾಪಕಿ ಮತ್ತು ಸಿಇಒ
  2. 2. ಎಐ ಎಥಿಕ್ಸ್‌ (ಕೃತಕ ಬುದ್ಧಿಮತ್ತೆ ನೈತಿಕ ಬಳಕೆ) ವಿಚಾರದಲ್ಲಿ 2021ರಲ್ಲಿ ಗುರುತಿಸಲಾದ 100‌ ಪ್ರತಿಭಾನ್ವಿತ ಮಹಿಳೆಯರಲ್ಲಿ ಒಬ್ಬರು.
  3. 3.ಡೇಟಾ ಸೈನ್ಸ್‌ ಮಾನಿಟರಿಂಗ್‌ ವಿಭಾಗದಲ್ಲಿ 12 ವರ್ಷ ಅನುಭವ ಇರುವ ಡೇಟಾ ಸೈಂಟಿಸ್ಟ್‌.
  4. 4. ಡೇಟಾ ಎಂಡ್‌ ಸೊಸೈಟಿಯಲ್ಲಿ ಮೋಝಿಲ್ಲಾ ಫೆಲೋ ಆಗಿ ಕೆಲಸ ಮಾಡಿದ್ದರು.
  5. 5. ಹಾರ್ವರ್ಡ್‌ ವಿವಿಯ ಬರ್ಕ್‌ಮನ್‌ ಕ್ಲೀನ್‌ ಸೆಂಟರ್‌ನಲ್ಲಿ ಫೆಲೋ ಆಗಿದ್ದರು.
  6. 6. ರಾಮನ್‌ ರಿಸರ್ಚ್‌ ಇನ್‌ಸ್ಟಿಟ್ಯೂಷನ್‌ನಲ್ಲಿ ಸಂಶೋಧನಾ ಫೆಲೋ ಆಗಿದ್ದರು.
  7. 7. ಕೃತಕ ಭಾಷಾ ಸಂಸ್ಕರಣೆ, ಮೆಷಿನ್‌ ಲರ್ನಿಂಗ್‌, ಟೆಕ್ಸ್ಟ್‌ ಮೈನಿಂಗ್‌, ನ್ಯಾಚುರಲ್‌ ಲಾಂಗ್ವೇಜ್‌ ವಿಚಾರದಲ್ಲಿ ಅಮೆರಿಕದಿಂದ ನಾಲ್ಕು ಪೇಟೆಂಟ್‌ಗಳನ್ನು ಹೊಂದಿದ್ದಾರೆ.
  8. 8. 2020ರಲ್ಲಿ ಅವರು ಮೈಂಡ್‌ ಫುಲ್‌ ಎಐ ಲ್ಯಾಬ್‌ ಸ್ಥಾಪನೆ ಮಾಡಿದ್ದರು. ಇದು ಎಐ ನೈತಿಕತೆ, ಪ್ರೊಟೊಟೈಪಿಂಗ್‌, ಮೆಷಿನ್‌ ಲರ್ನಿಂಗ್‌ ಸಿಸ್ಟಮ್‌ಗಳನ್ನು ಸ್ಥಾಪಿಸುವ ಕೆಲಸವನ್ನು ಮಾಡುತ್ತದೆ.
  9. 9. ಕೋಡಿಂಗ್‌ ವಿಭಾಗದಲ್ಲಿ ಮಹಿಳೆಯರು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಆಕೆ ಹಲವಾರು ಡೇಟಾ ಸೈನ್ಸ್‌ ವರ್ಕ್‌ ಶಾಪ್‌ಗಳನ್ನು ನಡೆಸಿದ್ದಾರೆ.
  10. 10. ಅವರು ಪಾಲಿಮರ್‌ ಫಿಸಿಕ್ಸ್‌ನ ಸಮಸ್ಯೆಗಳಿಗೆ ಮೆಕ್ಯಾನಿಕ್ಸ್‌ ಮೂಲಕ ಪರಿಹಾರ ಕಂಡುಕೊಂಡಿದ್ದರು.
Suchana Mind ful

ಇದನ್ನೂ ಓದಿ: Killer CEO : ಗಂಡನ ಮೇಲಿನ ಸಿಟ್ಟಿಗೆ ಮಗುವನ್ನೇ ಬಲಿ ಕೊಟ್ಟಳಾ ಹಂತಕಿ ಸಿಇಒ?; ಏನಿದು ಕೌಟುಂಬಿಕ ಕಲಹ

ಸುಚನಾ ಸೇಠ್‌ ವೈಯಕ್ತಿಕ ಬದುಕು

  1. 1. ಸುಚನಾ ಸೇಠ್‌ ಮೂಲತಃ ಪಶ್ಚಿಮ ಬಂಗಾಳದವರು.. ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸ.
  2. 2. ಸುಚನಾ ಸೇಠ್‌ ಗಂಡ ವೆಂಕಟರಮಣ್‌ ಮೂಲತಃ ಕೇರಳದವರು. ವೃತ್ತಿಯಲ್ಲಿ ಓರ್ವ ಟೆಕ್ಕಿ.
  3. 3. ಸುಚನಾ ಮತ್ತು ವೆಂಕಟರಮಣ್‌ಗೆ 2010ರಲ್ಲಿ ಮದುವೆಯಾಗಿದ್ದು, 2019ರಲ್ಲಿ ಮಗು ಹುಟ್ಟಿತ್ತು.
  4. 4. 2020ರಲ್ಲಿ ದಂಪತಿ ನಡುವೆ ಬಿರುಕು ಮೂಡಿ ಕೋರ್ಟ್‌ ವಿಚ್ಛೇದನ ನೀಡಿತ್ತು. ಮಗುವನ್ನು ತಾಯಿ ಜತೆಗೆ ಇರಲು ಅನುಮತಿ ನೀಡಿದ್ದ ಕೋರ್ಟ್‌ ಪ್ರತಿ ಭಾನುವಾರ ತಂದೆಗೆ ಮಗುವನ್ನು ಭೇಟಿ ನೀಡಲು ಅವಕಾಶ ನೀಡಬೇಕು ಎಂದು ಸೂಚಿಸಿತ್ತು.
  5. 5. ವಿಚ್ಛೇದನ ಪಡೆದ ವೆಂಕಟರಮಣ್‌ ಈಗ ಇಂಡೋನೇಷ್ಯಾದ ಜಕಾರ್ತದಲ್ಲಿದ್ದಾರೆ.
  6. 6. ವಿಚ್ಛೇದಿತ ಗಂಡ ಪ್ರತಿ ವಾರ ಬಂದು ಮಗನ ಜತೆಗೆ ಮಾತನಾಡುವುದು ಸುಚನಾಗೆ ಇಷ್ಟವಿರಲಿಲ್ಲ. ಈ ವಿಷಯದಲ್ಲಿ ಹಲವಾರು ಬಾರಿ ಜಗಳವಾಗಿತ್ತು. ಅಂತಿಮವಾಗಿ ಮಗನೇ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದಳಾ ಈ ಹಂತಕಿ!?
Suchana seth family
ಸುಚನಾ ಸೇಠ್‌, ವೆಂಕಟರಮಣ ಮತ್ತು ಮಗು

ಮಗುವಿನ ಕೊಲೆ ಪ್ರಕರಣ: ಏನೇನು ನಡೆಯಿತು? ಕೊಂದಿದ್ದು ಹೇಗೆ?

  1. 1. ಸುಚನಾ ಸೇಠ್‌ ಜನವರಿ 6ರಂದು ಉತ್ತರ ಗೋವಾದ ಕಾಂಡೋಲಿಮ್‌ನಲ್ಲಿರುವ ಸರ್ವಿಸ್‌ ಅಪಾರ್ಟ್‌ಮೆಂಟ್‌ಗೆ ಪ್ರವೇಶ ಪಡೆಯುತ್ತಾರೆ. ಹಾಗೆ ಒಳಗೆ ಹೋಗುವಾಗ ಆಕೆಯ ಕೈಯಲ್ಲಿದ್ದದ್ದು ಒಂದು ಬ್ಯಾಗ್‌ ಮತ್ತು ಪುಟ್ಟ ನಾಲ್ಕು ವರ್ಷದ ಮಗ.
  2. 2. ಅಲ್ಲಿ ಎರಡು ದಿನ ಕಳೆದ ಸುಚನಾ ಅಪಾರ್ಟ್‌ಮೆಂಟ್‌ ಸಿಬ್ಬಂದಿಗೆ ಒಂದು ಬೇಡಿಕೆ ಸಲ್ಲಿಸುತ್ತಾರೆ: ನಾನು ಒಂದು ಕೆಲಸಕ್ಕಾಗಿ ಬೆಂಗಳೂರಿಗೆ ಹೋಗಬೇಕಾಗಿದೆ. ನನಗೆ ಒಂದು ಟ್ಯಾಕ್ಸಿ ಅರೇಂಜ್‌ ಮಾಡಿಕೊಡಿ.
  3. 3 ಆಗ ಅಲ್ಲಿನ ಸಿಬ್ಬಂದಿ, ಟ್ಯಾಕ್ಸಿ ಯಾಕೆ ಮೇಡಂ, ಅದು ತುಂಬಾ ಕಾಸ್ಟ್ಲೀ. ಅದಕ್ಕಿಂತ ವಿಮಾನವೇ ಒಳ್ಳೆಯದು, ಕಡಿಮೆ ದುಡ್ಡಿನಲ್ಲಿ ಆಗುತ್ತದೆ ಮತ್ತು ಬೇಗನೆ ತಲುಪುತ್ತದೆ ಎಂದು ಹೇಳಿದ್ದರು. ಆದರೆ, ನನಗೆ ಟ್ಯಾಕ್ಸಿನೇ ಬೇಕು ಎಂದು ಸುಚನಾ ಹಠ ಹಿಡಿದಿದ್ದರು.
  4. 4. ಅಂತಿಮವಾಗಿ ಜನವರಿ 8ರಂದು ಟ್ಯಾಕ್ಸಿಯನ್ನು ಬುಕ್‌ ಮಾಡಿ ಕೊಡಲಾಯಿತು. ಮುಂಜಾನೆ ಅವರು ಅಲ್ಲಿಂದ ಟ್ಯಾಕ್ಸಿ ಹತ್ತಿ ಹೊರಟಿದ್ದಾರೆ.
  5. 5. ಟ್ಯಾಕ್ಸಿ ಹೊರಟು ಹೋದ ಬಳಿಕ ಅಪಾರ್ಟ್‌ಮೆಂಟ್‌ನ ಸಿಬ್ಬಂದಿ ಸುಚನಾ ಅವರು ತಂಗಿದ್ದ ಕೋಣೆಯನ್ನು ಕ್ಲೀನ್‌ ಮಾಡಲು ಹೋಗುತ್ತಾರೆ. ಅಲ್ಲಿನ ಟವೆಲ್‌ನಲ್ಲಿ ರಕ್ತದ ಕಲೆಗಳು ಗೋಚರಿಸುತ್ತವೆ. ಆಗ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುತ್ತಾರೆ.
  6. 6. ಈ ನಡುವೆ, ಸುಚನಾ ಸೇಠ್‌ ಜತೆಗೆ ಬಂದಿದ್ದ ನಾಲ್ಕು ವರ್ಷದ ಮಗು ಮರಳಿ ಹೋಗುವಾಗ ಇರಲಿಲ್ಲ ಎನ್ನುವುದು ಸಿಬ್ಬಂದಿಗೆ ನೆನಪಾಗುತ್ತದೆ. ಜತೆಗೆ ಆಕೆ ಒಂದು ಭಾರವಾದ ಸೂಟ್‌ ಕೇಸನ್ನು ಎತ್ತಿಕೊಂಡು ಹೋಗಿದ್ದರು ಎಂದು ಪೊಲೀಸರಿಗೆ ತಿಳಿಸುತ್ತಾರೆ.
  7. 7. ಪೊಲೀಸರು ಚಾಲಕನಿಗೆ ಕರೆ ಮಾಡಿ ಸುಚನಾ ಅವರಿಗೆ ಫೋನ್‌ ಕೊಡುವಂತೆ ಕೇಳುತ್ತಾರೆ. ಫೋನ್‌ನಲ್ಲಿ ರಕ್ತದ ಕಲೆ, ಮತ್ತು ಮಗು ಇಲ್ಲದಿರುವ ಬಗ್ಗೆ ಕೇಳುತ್ತಾರೆ.
  8. 8. ಆಗ ಸುಚನಾ ಅವರು ಟವೆಲ್‌ನಲ್ಲಿದ್ದದ್ದು ಋತುಸ್ರಾವಕ್ಕೆ ಸಂಬಂಧಿಸಿದ್ದು ಎನ್ನುತ್ತಾರೆ. ಮಗನನ್ನು ದಕ್ಷಿಣ ಗೋವಾದ ಮರ್ಗೋವಾ ಪಟ್ಟಣದಲ್ಲಿರುವ‌ ಸ್ನೇಹಿತರ ಮನೆಯಲ್ಲಿ ಬಿಟ್ಟಿದ್ದಾಗಿ ಹೇಳುತ್ತಾರೆ. ಮತ್ತು ನಂಬರ್‌ ಕೂಡಾ ಕೊಡುತ್ತಾರೆ. ಆದರೆ, ಅದು ಫೇಕ್‌ ನಂಬರ್‌ ಎನ್ನುವುದು ಪರಿಶೀಲಿಸಿದಾಗ ಗೊತ್ತಾಗುತ್ತದೆ!
  9. 9. ಪೊಲೀಸರು ಕೂಡಲೇ ಟ್ಯಾಕ್ಸಿ ಚಾಲಕನಿಗೆ ಕರೆ ಮಾಡಿ ಕೊಂಕಣಿಯಲ್ಲಿ ಮಾತನಾಡಿ, ಟ್ಯಾಕ್ಸಿಯನ್ನು ಸಮೀಪದ ಪೊಲೀಸ್‌ ಠಾಣೆಗೆ ಕರೆದೊಯ್ಯುವಂತೆ ಸೂಚಿಸುತ್ತಾರೆ. ಅವನು ಚಿತ್ರದುರ್ಗದ ಐಮಂಗಲ ಪೊಲೀಸ್‌ ಠಾಣೆಯ ಮುಂದೆ ಟ್ಯಾಕ್ಸಿ ನಿಲ್ಲಿಸುತ್ತಾನೆ.
  10. 10. ಐಮಂಗಲ ಪೊಲೀಸರು ಕಾರನ್ನು ಪರಿಶೀಲಿಸಿದಾಗ ಬ್ಯಾಗ್‌ನಲ್ಲಿ ಮಗುವಿನ ಶವ ಪತ್ತೆಯಾಗುತ್ತದೆ, ಪೊಲೀಸರು ಆಕೆಯನ್ನು ವಶಕ್ಕೆ ಪಡೆಯುತ್ತಾರೆ.
Suchana seth arrested

ಸುಚನಾ ಸೇಠ್‌ ಬಂಧನದ ಕ್ಷಣ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

VISTARANEWS.COM


on

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಜಂಟಿಯಾಗಿ ಮೇ 16ರಂದು ನಗರದಲ್ಲಿ “ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026” ಆಯೋಜಿಸಿವೆ.
“ತಂತ್ರಜ್ಞಾನದಲ್ಲಿನ ಸ್ವಾಯತ್ತತೆ” ಎಂಬ ವಿಷಯದಡಿ ಈ ಸಮ್ಮಿಟ್ ನಡೆಯಲಿದೆ ಎಂದು ಇ-ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕ, ವಿಶೇಷವಾಗಿ ಬೆಂಗಳೂರು, ಇಂದು ಭಾರತದ ತಂತ್ರಜ್ಞಾನ ಮಹತ್ವಾಕಾಂಕ್ಷೆಯ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ದೇಶದ ಪ್ರಮುಖ ಜಿಡಿಪಿ ಕೊಡುಗೆ ನೀಡುವ ನಗರಗಳಲ್ಲಿ ಬೆಂಗಳೂರು ಒಂದಾಗಿದೆ, ವೆಂಚರ್ ಕ್ಯಾಪಿಟಲ್ ಹೂಡಿಕೆಗಳ ಪ್ರಮುಖ ಕೇಂದ್ರವಾಗಿಯೂ ಗುರುತಿಸಿಕೊಂಡಿದೆ.
ಸ್ಟಾರ್ಟ್‌ಅಪ್‌ಗಳ ನಿಧಿ ಸಂಗ್ರಹ ಹಾಗೂ ನವೀನ ಚಟುವಟಿಕೆಗಳಲ್ಲಿ ಮಹತ್ತರ ಪಾತ್ರವಹಿಸಿದ್ದು, ಸಾವಿರಾರು ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ವಿಶ್ವದ ಅತಿ ದೊಡ್ಡ ಪ್ರತಿಭಾ ಸಂಪನ್ಮೂಲಗಳಲ್ಲಿ ಒಂದನ್ನು ಹೊಂದಿರುವುದರಿಂದ ಬೆಂಗಳೂರು “ಪೂರ್ವದ ಸಿಲಿಕಾನ್ ವ್ಯಾಲಿ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಅವರು ಹೇಳಿದರು.
ಸಾರ್ವಜನಿಕ ವಲಯ ಮತ್ತು ತಾಂತ್ರಿಕ ಕಂಪನಿಗಳ ಮೂಲಕ ಏರೋಸ್ಪೇಸ್, ರಕ್ಷಣಾ ಹಾಗೂ ಮೂಲ ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಕರ್ನಾಟಕ ಬಲವಾದ ನೆಲೆ ನಿರ್ಮಿಸಿತು. ಬಳಿಕ ಇನ್ಫೋಸಿಸ್, ಟಿಸಿಎಸ್, ಎಚ್‌ಸಿಎಲ್ ಮತ್ತು ವಿಪ್ರೋ ಮುಂತಾದ ಐಟಿ ದಿಗ್ಗಜಗಳ ಉದಯದೊಂದಿಗೆ ಭಾರತವನ್ನು ಜಾಗತಿಕ ತಂತ್ರಜ್ಞಾನ ನಕ್ಷೆಯಲ್ಲಿ ಸ್ಥಾಪಿಸುವಲ್ಲಿ ಮಹತ್ವದ ಪಾತ್ರವಹಿಸಿದೆ ಎಂದು ಅವರು ವಿವರಿಸಿದರು.
ಪ್ರಸ್ತುತ ಭಾರತ ಡೀಪ್ ಟೆಕ್, ಕೃತಕ ಬುದ್ಧಿಮತ್ತೆ ಮತ್ತು ವೈಜ್ಞಾನಿಕ ನವೀನತೆಯ ಹಂತಕ್ಕೆ ಸಾಗುತ್ತಿದೆ. ಈ ಹಂತದಲ್ಲಿ ಅಕಾಡೆಮಿಯಾ, ಕೈಗಾರಿಕೆ ಮತ್ತು ಸರ್ಕಾರಗಳ ನಡುವಿನ ಗಟ್ಟಿಯಾದ ಸಹಕಾರ ಅತ್ಯಾವಶ್ಯ. ತಂತ್ರಜ್ಞಾನ ಸ್ವಾಯತ್ತತೆ ಸಾಧಿಸಲು ಇದು ಪ್ರಮುಖ ಹಂತವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ಯಾನ್-ಐಐಟಿ ಬೆಂಗಳೂರು ಸಮಿಟ್ 2026 ರೂಪುಗೊಂಡಿದೆ ಎಂದು ತಿಳಿಸಿದರು.
ಪ್ಯಾನ್ ಐಐಟಿ ಅಧ್ಯಕ್ಷರಾದ ಶ್ರೀ ಪ್ರಭಾತ್ ಕುಮಾರ್ (ಐ.ಆರ್.ಎಸ್) ಅವರು ಮಾತನಾಡಿ, ಸಮ್ಮಿಟ್‌ನಲ್ಲಿ ಉನ್ನತ ಮಟ್ಟದ ಪ್ಲೀನರಿ ಸೆಷನ್‌ಗಳು, ಆಳವಾದ ಪ್ಯಾನೆಲ್ ಚರ್ಚೆಗಳು ಹಾಗೂ ಎಐ, ರಕ್ಷಣಾ, ಸೆಮಿಕಂಡಕ್ಟರ್, ಇಂಧನ, ಮೊಬೈಲಿಟಿ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಸಮಾಂತರ ಚರ್ಚೆಗಳು ನಡೆಯಲಿವೆ ಎಂದರು.
23 ಐಐಟಿಗಳ 5 ಲಕ್ಷಕ್ಕೂ ಹೆಚ್ಚು ಅಲ್ಯೂಮ್ನಿಗಳ ಸಂಯುಕ್ತ ಚಿಂತನೆಯ ಫಲವಾಗಿರುವ ಈ ಸಮ್ಮಿಟ್, ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ, ವ್ಯವಹಾರ ಮತ್ತು ನೀತಿ ರೂಪಣೆಯಲ್ಲಿ ಸಕ್ರಿಯ ಸಮುದಾಯವನ್ನು ಒಂದೇ ವೇದಿಕೆಗೆ ತರಲಿದೆ. ನವೀನತೆ, ಉದ್ಯಮಶೀಲತೆ ಮತ್ತು ರಾಷ್ಟ್ರ ನಿರ್ಮಾಣದ ಮುಂದಿನ ಹಂತವನ್ನು ಉತ್ತೇಜಿಸುವ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದರು.

Continue Reading

ಕರ್ನಾಟಕ

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

VISTARANEWS.COM


on

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆಯ ಚರ್ಚೆಗಳು ಈಗ ಹೊಸ ತಿರುವು ಪಡೆದಿವೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸತತವಾಗಿ ದೆಹಲಿಗೆ ಪ್ರವಾಸ ಕೈಗೊಳ್ಳುತ್ತಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. “ಹೈಕಮಾಂಡ್ ಏನು ತೀರ್ಮಾನ ಮಾಡಿದೆಯೋ, ಅದು ಸಮಯ ಬಂದಾಗ ಜಾರಿಗೆ ಬರಲಿದೆ” ಎಂದು ಡಿಕೆಶಿ ನೀಡಿರುವ ಮಾರ್ಮಿಕ ಹೇಳಿಕೆಯು, ಅಧಿಕಾರ ಹಸ್ತಾಂತರದ ಪ್ರಕ್ರಿಯೆ ಚುರುಕಾಗಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅವರು ನಡೆಸಿದ ಸುದೀರ್ಘ ಮಾತುಕತೆ ಈ ಗುಮಾನಿಯನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

ಇನ್ನೊಂದೆಡೆ, ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದೊಳಗೆ ‘ಗೊಂದಲ’ ಇರುವುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡಿರುವುದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. “ನಾಯಕತ್ವ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟ ವಿಚಾರ” ಎಂದು ಅವರು ಹೇಳಿದ್ದರೂ, ಪಕ್ಷದ ಒಳಗಿನ ಆಂತರಿಕ ಅಸಮಾಧಾನ ಮತ್ತು ಗೊಂದಲಗಳ ಬಗ್ಗೆ ಅವರು ನೀಡಿರುವ ಸುಳಿವು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಯ ಮುನ್ಸೂಚನೆಯಂತೆ ಕಾಣುತ್ತಿದೆ. ಸಿದ್ದರಾಮಯ್ಯ ಬಣ ಮತ್ತು ಡಿಕೆಶಿ ಬಣದ ನಡುವಿನ ಈ ಹಗ್ಗಜಗ್ಗಾಟ ಈಗ ಕ್ಲೈಮಾಕ್ಸ್ ಹಂತಕ್ಕೆ ತಲುಪಿದಂತೆ ಭಾಸವಾಗುತ್ತಿದೆ.

ಮೇ 4 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಆ ನಂತರ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಬದಲಾವಣೆಗಳಾಗಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಡಿಕೆಶಿ ಬಣವು ಹಳೆಯ ವಾಗ್ದಾನಗಳನ್ನು ಈಡೇರಿಸುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದರೆ, ಸಿದ್ದರಾಮಯ್ಯ ಬಣವು ತನ್ನದೇ ಆದ ರಕ್ಷಣಾತ್ಮಕ ತಂತ್ರಗಳನ್ನು ಹೆಣೆಯುತ್ತಿದೆ. ಒಟ್ಟಿನಲ್ಲಿ, ಮೇ 15 ರ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಸುಮಾರಿಗೆ ಕಾಂಗ್ರೆಸ್ ಪಾಳಯದಲ್ಲಿ ಒಂದು ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆಯಿದ್ದು, ಅಲ್ಲಿಯವರೆಗೆ ಈ ಕುತೂಹಲ ಮುಂದುವರಿಯಲಿದೆ.

Continue Reading

Latest

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

VISTARANEWS.COM


on

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮರಳಿದ ಡಿಸಿಎಂ ಡಿ.ಕೆ. ಶಿವಕುಮಾರ್, ನಾಯಕತ್ವದ ಕುರಿತಾದ ಪ್ರಶ್ನೆಗಳಿಗೆ ಬಹಳ ಸಂಯಮದಿಂದ ಉತ್ತರಿಸಿದ್ದಾರೆ. “ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಎಲ್ಲವೂ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲೇ ನಡೆಯಲಿದೆ” ಎಂದು ಹೇಳುವ ಮೂಲಕ ಸದ್ಯಕ್ಕೆ ಎದ್ದಿರುವ ಊಹಾಪೋಹಗಳಿಗೆ ಸೌಮ್ಯವಾಗಿ ಪ್ರತಿಕ್ರಿಯಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹ ತಮ್ಮ ಆಪ್ತ ವಲಯದೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ತಮ್ಮ ಆಪ್ತರೊಬ್ಬರ ಮನೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದ ನೆಪದಲ್ಲಿ ಸಿಎಂ ಪ್ರಮುಖ ನಾಯಕರನ್ನು ಭೇಟಿ ಮಾಡಿದ್ದು, ರಾಜ್ಯದ ಪ್ರಚಲಿತ ರಾಜಕೀಯ ವಿದ್ಯಮಾನಗಳು ಮತ್ತು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಹೈಕಮಾಂಡ್ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ತಮ್ಮ ಬಣದ ನಾಯಕರ ವಿಶ್ವಾಸವನ್ನು ಉಳಿಸಿಕೊಳ್ಳಲು ಸಿಎಂ ಈ ಭೇಟಿಯನ್ನು ಬಳಸಿಕೊಂಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಮುಂಬರುವ ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿರುವ ಕಾರಣ, ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಆದರೆ, ನಗರದ ಸೌಂದರ್ಯ ಮತ್ತು ಕಾನೂನು ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಡಿಸಿಎಂ ಅವರು ತಮ್ಮ ಬೆಂಬಲಿಗರಿಗೆ ಪ್ರೀತಿಯ ಎಚ್ಚರಿಕೆ ನೀಡಿದ್ದಾರೆ. “ನನ್ನ ಹುಟ್ಟುಹಬ್ಬದಂದು ಯಾವುದೇ ಅನಧಿಕೃತ ಫ್ಲೆಕ್ಸ್ ಅಥವಾ ಬ್ಯಾನರ್‌ಗಳನ್ನು ಹಾಕಬೇಡಿ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ” ಎಂದು ಅವರು ತಿಳಿಸಿದ್ದಾರೆ. ಏಪ್ರಿಲ್ ಅಂತ್ಯದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನಡೆಯಲಿರುವ ಭೇಟಿಯ ಬಳಿಕ ರಾಜ್ಯ ರಾಜಕಾರಣದ ಮುಂದಿನ ಹಾದಿ ಇನ್ನಷ್ಟು ಸ್ಪಷ್ಟವಾಗುವ ಸಾಧ್ಯತೆಯಿದೆ.

Continue Reading

Latest

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

VISTARANEWS.COM


on

ತಮ್ಮ ನಿಖರ ಭವಿಷ್ಯವಾಣಿಗಳಿಗೆ ಹೆಸರಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಇದೀಗ ದೇಶದ ಭವಿಷ್ಯದ ಕುರಿತು ಭಯಾನಕ ಮುನ್ಸೂಚನೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾತನಾಡಿದ ಶ್ರೀಗಳು, ಹವಾಮಾನ ವೈಪರಿತ್ಯದಿಂದ ಪ್ರಕೃತಿಯಲ್ಲಿ ಭಾರಿ ಏರುಪೇರು ಉಂಟಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹವಾಮಾನ ಬದಲಾವಣೆಯು ದೇಶದ ಹಲವು ಭಾಗಗಳಲ್ಲಿ ಅನ್ನ ಮತ್ತು ನೀರಿಗಾಗಿ ತೀವ್ರ ಹಾಹಾಕಾರ ಸೃಷ್ಟಿಸಲಿದ್ದು, ಅಪಮೃತ್ಯುಗಳ (ಅಕಾಲಿಕ ಮರಣ) ಸಂಖ್ಯೆ ಹೆಚ್ಚಾಗಲಿದೆ ಎಂಬ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ.

ಜಾಗತಿಕ ಮಟ್ಟದಲ್ಲಿಯೂ ಭಾರಿ ಅಪಾಯಗಳು ಸಂಭವಿಸುವ ಲಕ್ಷಣಗಳಿವೆ ಎಂದು ಹೇಳಿರುವ ಶ್ರೀಗಳು, 2026ರ ಸಾಲಿನ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ. ಜಗತ್ತಿನಾದ್ಯಂತ ಜಲಪ್ರಳಯ ಹಾಗೂ ಅಗ್ನಿ ಅವಘಡಗಳಿಂದ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ, ಆದರೆ ಅತೃಪ್ತ ಆತ್ಮಗಳಿಗೆ ಸರಿಯಾದ ಸಂಸ್ಕಾರ ನಡೆಯದ ಕಾರಣ ಅವು ಮನುಕುಲಕ್ಕೆ ಕಂಟಕವಾಗಲಿವೆ ಎಂದು ಭೀತಿ ವ್ಯಕ್ತಪಡಿಸಿದ್ದಾರೆ. ಹವಾಮಾನ ವೈಪರಿತ್ಯದ ಈ ಭೀಕರತೆಯ ನಡುವೆ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿಯೂ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಈ ಎಲ್ಲಾ ಆತಂಕಕಾರಿ ಬೆಳವಣಿಗೆಗಳ ನಡುವೆ ಕರ್ನಾಟಕದ ಜನತೆಗೆ ಶ್ರೀಗಳು ಸಮಾಧಾನದ ಸುದ್ದಿಯನ್ನೂ ನೀಡಿದ್ದಾರೆ. ದೇಶದ ಬೇರೆ ಭಾಗಗಳಲ್ಲಿ ಸಮಸ್ಯೆಗಳಿದ್ದರೂ, ಕರ್ನಾಟಕದಲ್ಲಿ ಜನರಿಗೆ ದೈವಾರಾಧನೆ ಮತ್ತು ಭಕ್ತಿಯ ಮೇಲಿನ ಶ್ರದ್ಧೆ ಹೆಚ್ಚಿರುವುದರಿಂದ ನಾಡಿನಲ್ಲಿ ಮಳೆ-ಬೆಳೆ ಸಮೃದ್ಧವಾಗಿರಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಜನರಲ್ಲಿ ಹೆಚ್ಚುತ್ತಿರುವ ಧಾರ್ಮಿಕ ಪ್ರಜ್ಞೆಯು ನಾಡನ್ನು ಬರಗಾಲದಿಂದ ರಕ್ಷಿಸಲಿದ್ದು, ಸಮೃದ್ಧ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಕೋಡಿ ಶ್ರೀಗಳು ಅಭಿಪ್ರಾಯಪಟ್ಟಿದ್ದಾರೆ.

Continue Reading
Advertisement
Latest1 hour ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ2 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest3 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

Latest3 hours ago

ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾದ RCB! ಹೇಗಿರಲಿದೆ ಹೈವೋಲ್ಟೇಜ್‌ ಮ್ಯಾಚ್‌?

Latest20 hours ago

ಮೇ 15ಕ್ಕೆ ಸಿಗುತ್ತಾ ಗುಡ್​ ನ್ಯೂಸ್?​ ಸಂಭ್ರಮಾಚರಣೆ ಬೇಡವೆಂದು ಬೆಂಬಲಿಗರಿಗೆ ಖಡಕ್​ ಸೂಚನೆ! ಡಿ ಕೆ ಬ್ರದರ್ಸ್‌ ಪ್ಲ್ಯಾನ್‌ಗೆ ಟಕ್ಕರ್‌ ಕೊಡ್ತಾರಾ ಸಿಎಂ

Latest20 hours ago

ಮುಂದೆ ಕಾದಿದೆ ಘೋರ ವಿಪತ್ತು: ಹವಾಮಾನ ವೈಪರಿತ್ಯ, ಅನ್ನ-ನೀರಿಗೂ ಹಾಹಾಕಾರ! ಕೋಡಿ ಶ್ರೀಗಳ ಭಯಾನಕ ಭವಿಷ್ಯಕ್ಕೆ ನಡುಗಿದ ನಾಡು

Latest20 hours ago

ಮುಂದಿನ ಪಂದ್ಯದಿಂದ ‘ಯಂಗ್ ಸೆನ್ಸೇಷನ್’ ಔಟ್? ವೈಭವ್ ಸೂರ್ಯವಂಶಿ ಬಗ್ಗೆ ಕೋಚ್ ಕೊಟ್ಟ ಅಪ್ಡೇಟ್ ಏನು?

Latest21 hours ago

ಅಧ್ಯಕ್ಷ ಹುದ್ದೆ ಇಷ್ಟು ಡೇಂಜರ್ ಅಂತ ಗೊತ್ತಿರಲಿಲ್ಲ!”: ಗುಂಡಿನ ದಾಳಿಯಿಂದ ಬಚಾವಾದ ಬೆನ್ನಲ್ಲೇ ಟ್ರಂಪ್ ವ್ಯಂಗ್ಯ

Latest22 hours ago

ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹೊಸ ಬಲ: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದ ಶಿಕ್ಷಣ ಇಲಾಖೆ

Latest22 hours ago

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌