Site icon Vistara News

Knife Attack | ಸ್ನೇಹಿತರಿಬ್ಬರ ಹತ್ತು ವರ್ಷಗಳ ವೈಮನಸಿಗೆ ಮತ್ತೆ ಜೀವ: ಚಾಕುವಿನಿಂದ ಇರಿದವನ ಬಂಧನ

ಕೊಡಗು: ಮಡಿಕೇರಿ ನಗರದಲ್ಲಿ ನಡೆದ ಆಟೋ ರಿಕ್ಷಾಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಚಾಕು (Knife Attack Case) ಇರಿದ ಘಟನೆ ನಡೆದಿದೆ. ರಾಣಿಪೇಟೆ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್ ಎಂಬವರ ನಡುವೆ ಕಳೆದ 10 ವರ್ಷಗಳಿಂದ ವೈಯಕ್ತಿಕ ದ್ವೇಷವಿತ್ತು. ವಾಟ್ಸಾಪ್ ಮೂಲಕವೂ ಆಗಾಗ ಜಗಳವಾಗುತ್ತಿತ್ತು. ಇದೇ ವಿಚಾರವಾಗಿ ಕೋಪಗೊಂಡಿದ್ದ ಹ್ಯಾರಿಸ್, ಕಳೆದ ಡಿ.29 ರಂದು ರಾಣಿಪೇಟೆಯಲ್ಲಿ ನಿಲ್ಲಿಸಲಾಗಿದ್ದ ಅಬ್ದುಲ್ ರೆಹಮಾನ್ ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ್ದ.

ಆಟೋ ಸಮೀಪದಲ್ಲಿ ಆರೋಪಿ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನಾಧರಿಸಿ ಆರೋಪಿ ಹ್ಯಾರಿಸ್‌ನನ್ನು ಡಿ.30 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧನವಾದ ಒಂದೇ ದಿನದಲ್ಲಿ ಹ್ಯಾರಿಸ್ ಜಾಮೀನು ಪಡೆದು ಹೊರ ಬಂದಿದ್ದ.

ಭಾನುವಾರ ಬೆಳಗ್ಗೆ ನಗರದ ಮಹದೇವಪೇಟೆಯ ಬಳಿ ಹ್ಯಾರಿಸ್ ಹಾಗೂ ಅಬ್ದುಲ್ ರೆಹಮಾನ್ ಮುಖಾಮುಖಿಯಾಗಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಹ್ಯಾರಿಸ್ ಕುತ್ತಿಗೆಗೆ ಅಬ್ದುಲ್ ರೆಹಮಾನ್ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವಕ್ಕೊಳಗಾದ ಹ್ಯಾರಿಸ್‌ನನ್ನು ಕೂಡಲೇ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮಡಿಕೇರಿ ನಗರ ಠಾಣಾ ಪೊಲೀಸರು ಆರೋಪಿ ಅಬ್ದುಲ್ ರೆಹಮಾನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Murder Case | ಕ್ಲಾಸ್‌ ರೂಮ್‌ನಲ್ಲಿಯೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಂದ ಪಾಗಲ್‌ ಪ್ರೇಮಿ; ತಾನೂ ಇರಿದುಕೊಂಡ!

Exit mobile version