Kodagu News: ಮಡಿಕೇರಿಯಲ್ಲಿ ಮತದಾನ ಜಾಗೃತಿ ಅಭಿಯಾನ; ರಂಗೋಲಿ, ಚಿತ್ರಕಲೆ ಸ್ಪರ್ಧೆ - Vistara News

ಕೊಡಗು

Kodagu News: ಮಡಿಕೇರಿಯಲ್ಲಿ ಮತದಾನ ಜಾಗೃತಿ ಅಭಿಯಾನ; ರಂಗೋಲಿ, ಚಿತ್ರಕಲೆ ಸ್ಪರ್ಧೆ

Kodagu News: ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ರಂಗೋಲಿ ಮತ್ತು ಚಿತ್ರಕಲೆ ಸ್ಪರ್ಧೆ ಜರುಗಿತು.

VISTARANEWS.COM


on

Voting Awareness Campaign Rangoli painting competition
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಗುರುವಾರ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ರಂಗೋಲಿ ಮತ್ತು ಚಿತ್ರಕಲೆ ಸ್ಪರ್ಧೆಯನ್ನು (Kodagu News) ಹಮ್ಮಿಕೊಳ್ಳಲಾಗಿತ್ತು.

ಭಾರತೀಯ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಮಡಿಕೇರಿ ನಗರಸಭೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಡಿಕೇರಿ ನಗರಸಭೆಯ ಆಯುಕ್ತ ವಿಜಯ್‌, ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಇದನ್ನೂ ಓದಿ: Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ

ಕಾಲೇಜಿನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಸಕ್ರೀಯವಾಗಿ ಪಾಲ್ಗೊಂಡರು.

ಈ ಸಂದರ್ಭದಲ್ಲಿ ಮುಖ್ಯ ಲೆಕ್ಕಾಧಿಕಾರಿ ಜುವೆಲ್ ಖಾನ್, ಎಇಇ ಸೌಮ್ಯ, ಕಂದಾಯ ಅಧಿಕಾರಿ ತಾಹಿರ್ ಎಂ.ಎ., ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ. ರಾಘವ ಬಿ., ಸಹ ಪಠ್ಯ ಚಟುವಟಿಕೆಯ ಸಂಯೋಜಕಿ ಡಾ. ರೇಣುಶ್ರೀ ಹಾಗೂ ಬೂತ್ ಮಟ್ಟದ ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ರಂಗೋಲಿ ಸ್ಪರ್ಧೆ

ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ವರ್ಷದ ಎಂಕಾಂ ವಿದ್ಯಾರ್ಥಿ ಶಿವ ಪ್ರಥಮ ಸ್ಥಾನ, ಬಿಕಾಂ ದ್ವಿತೀಯ ವರ್ಷದ ವಿದ್ಯಾರ್ಥಿನಿ ಯೋಗಿನಿ ದ್ವಿತೀಯ, ಎಂ.ಎ. ದ್ವಿತೀಯ ವರ್ಷದ ವಿದ್ಯಾರ್ಥಿನಿ ಯಶೋಧ ತೃತೀಯ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: Coconut oil massage: ಮುಖದ ಕಾಂತಿ ಹೆಚ್ಚಿಸಿಕೊಳ್ಳಬೇಕೆ? ತೆಂಗಿನೆಣ್ಣೆ ಹಚ್ಚಿಕೊಂಡರೆ ಸಾಕು!

ಚಿತ್ರಕಲೆ ಸ್ಪರ್ಧೆ

ಚಿತ್ರಕಲೆ ಸ್ಪರ್ಧೆಯಲ್ಲಿ ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿ ರೋಹಿತ್ ಪಿ.ವಿ. ಪ್ರಥಮ ಸ್ಥಾನ, ಬಿ.ಎ. ಪ್ರಥಮ ವರ್ಷದ ವಿದ್ಯಾರ್ಥಿ ಭೀಮಾ ದ್ವಿತೀಯ, ಬಿಸಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ಮೋನಿಕಾ ತೃತೀಯ ಸ್ಥಾನ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Karnataka Weather Forecast : ರಾಜ್ಯದ ವಿವಿಧೆಡೆ ಮಳೆಯು ಅಬ್ಬರಿಸುತ್ತಿದೆ. ಭಾರಿ ಮಳೆಗೆ ಕೊಟ್ಟೂರು ಬಸ್ ನಿಲ್ದಾಣವು ಕೆರೆಯಾಗಿ ಪರಿವರ್ತನೆ ಆಗಿತ್ತು. ಬಲಿಗಾಗಿ ಕಾಯುತ್ತಿದ್ದ ದೊಡ್ಡ ಚರಂಡಿಯೊಂದು ಬಾಯ್ತೆರೆದಿತ್ತು. ಸ್ವಲ್ಪ ಯಾಮಾರಿದ್ರೂ ತಾಯಿ-ಮಗ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು.

VISTARANEWS.COM


on

By

Karnataka Weather Forecast
Koo

ವಿಜಯನಗರ/ಚಿಕ್ಕಮಗಳೂರು: ರಾಜ್ಯಾದ್ಯಂತ ಮಳೆಯಾಟ (Karnataka Weather Forecast) ಜೋರಾಗಿದೆ. ನಿನ್ನೆ ಬುಧವಾರ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ತಿರುಗಿ ನೋಡದ ಅಧಿಕಾರಿಗಳು, ಶಾಸಕರ ವಿರುದ್ಧ ಪ್ರಯಾಣಿಕರು ಕಿಡಿಕಾರಿದರು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

ಹಾವೇರಿಯಲ್ಲಿ ಸಿಡಿಲಿಗೆ ಯುವಕ ಬಲಿ

ಹಾವೇರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನ ಆರ್ಭಟಕ್ಕೆ ಯುವಕ ಬಲಿಯಾಗಿದ್ದಾನೆ. ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ದಯಾನಂದ (22) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಭಾರಿ ಮಳೆಯೊಂದಿಗೆ ಗುಡುಗು ಸಿಡಿಲಿನ ಆರ್ಭಟಕ್ಕೆ ದಯಾನಂದ ಮರದ ಕೆಳಗೆ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಯಾನಂದ ಮೃತಪಟ್ಟಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಮಲ್ಲಿಗೆ ಹೂವಿನಂತೆ ಸುರಿದ ಆಲಿಕಲ್ಲು

ಚಿಕ್ಕಮಗಳೂರಿನಲ್ಲಿ ಗುರುವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮುತ್ತೋಡಿ ಅಭಯಾರಣ್ಯದ ಬಳಿ ಭಾರಿ ಆಲಿಕಲ್ಲು ಮಳೆಯು ಮಲ್ಲಿಗೆ ಹೂವಿನಂತೆ ಕಂಡು ಬಂತು. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಾಗುತ್ತಿದ್ದು, ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮಳೆ ನೀರಿಗಿಂತ ಆಲಿಕಲ್ಲು ಆರ್ಭಟ ಜೋರಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಜಖಂ

ಚಿಕ್ಕಮಗಳೂರಿನಲ್ಲಿ ಗುರುವಾರವೂ ಮಳೆಯು ಆರ್ಭಟಿಸಿದೆ. ಭಾರಿ ಮಳೆಗೆ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಅವಾಂತರವೇ ಸೃಷ್ಟಿಯಾಗಿತ್ತು. ಮನೆಯಲ್ಲಿದ್ದ ವಸ್ತುಗಳು, ದವಸ ಧಾನ್ಯಗಳು ನಾಶವಾಗಿದ್ದವು. ಗಾಳಿ- ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದವು. ಕಳಸ ಪಟ್ಟಣದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳಸ-ಕುದುರೆಮುಖ, ಬಾಳೆಹೊನ್ನೂರು-ಕಳಸ ಹೆದ್ದಾರಿಯಲ್ಲಿ ಸುಮಾರು 15 ಹೆಚ್ಚು ಕಡೆ ಮರ ಬಿದ್ದು, ಪ್ರಯಾಣಿಕರು ಪರದಾಟ ಅನುಭವಿಸಿದರು.

ಕಳಸ ತಾಲೂಕಿನ ನೆಲ್ಲಿಕೆರೆ, ಕಲ್ಮಕ್ಕಿ, ಕೈಮರ ಗ್ರಾಮಗಳಲ್ಲಿ ಹಲವು ಮನೆಗಳ ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದಿತ್ತು. ಮನೆಗಳ ಹೆಂಚುಗಳು, ಕೊಟ್ಟಿಗೆಯ ಚಾವಣಿ ಹಾನಿಯಾಗಿತ್ತು. ಇನ್ನೂ ಮರಗಳ ಕೊಂಬೆ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತವಾಗಿತ್ತು. ಧಾರವಾಡದಲ್ಲೂ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ನೋಡ ನೋಡುತ್ತಿದ್ದಂತೆ ಮಳೆ ಸುರಿದಿದೆ.

ವಿಜಯನಗರದಲ್ಲಿ ಗಾಳಿ ಮಳೆಯ ಅವಾಂತರ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಗಾಳಿ ಮಳೆಯ ಅವಾಂತರಕ್ಕೆ ಗುರುವಾರ ಸಂಜೆ ಸಾರ್ವಜನಿಕ ಗ್ರಂಥಾಲಯ ಮುಂಭಾಗ ವಿದ್ಯುತ್ ಕಂಬ ಧರೆಗೆ ಉರುಳಿದೆ. ಅದೇ ರೀತಿ ಪಟ್ಟಣದ ಕುಡಿಯುವ ನೀರಿನ ಘಟಕದ ಬಳಿ ಬೃಹತ್ ಮರ ಬಿದ್ದಿದೆ. ಇತ್ತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಳೆ ನೀರು ನುಗ್ಗಿ ಚಿಕಿತ್ಸೆಗೆ ಬಂದಿದ್ದವರು ತೊಂದರೆ ಅನುಭವಿಸಿದರು. ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು.

ಕೆರೆಯಲ್ಲಿ ಮರಿಯಾನೆಯೊಂದಿಗೆ ಮಳೆಯಾಟ

ಮೈಸೂರಿನಲ್ಲೂ ಮಳೆಯಾಗುತ್ತಿದ್ದು, ಹನಿಗಳ ನಡುವೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ನೋಡುಗರ ಸೆಳೆದವು. ನಾಗರಹೊಳೆಯ ಕುಟ್ಟ ಬಳಿ ಕೆರೆಯಲ್ಲಿ ಆನೆಯು ಮರಿಯೊಂದಿಗೆ ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಖ್ಯಾತ ವನ್ಯಜೀವಿ ಫೋಟೋಗ್ರಾಫರ್ ರವಿಶಂಕರ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರನ್ನು ಕೈಬೀಸಿ ಕರೆಯುತ್ತಿದೆ.

ಮೇ 21ರವರೆಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿರುಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಮಂಡ್ಯ, ಹಾಸನದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ರಭಸವಾಗಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ ಇಳಿಕೆ

ಮುಂದಿನ 5 ದಿನ ಗರಿಷ್ಠ ಉಷ್ಣಾಂಶ 2-3 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ವಾತಾವರಣವು ತಂಪಾಗಿ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಂಜೆ ಅಥವಾ ರಾತ್ರಿ ನಂತರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30 ಹಾಗೂ 22 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Rain News : ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು, 7 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather Forecast) ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗಲಿದೆ (Rain News) ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಮತ್ತು ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ವಿಜಯನಗರ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಳೆಯು ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ.

ಇದನ್ನು ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಾಳಿ ವೇಗವು ಗಂಟೆಗೆ 40-50 ಕಿ.ಮೀ ಇರಲಿದೆ. ಹೀಗಾಗಿ ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Karnataka weather: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

VISTARANEWS.COM


on

Karnataka weather Man from Siddapura killed in lightning Heavy rain warning for four more days
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯಾರ್ಭಟ ಜೋರಾಗಿದೆ. ಗುಡುಗು – ಸಿಡಿಲಿನಿಂದ ಕೂಡಿದ ಮಳೆಯಾಗುತ್ತಿದೆ. ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನು ಮೇ 18ರ ವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು (Karnataka weather Forecast) ಹವಾಮಾನ ಇಲಾಖೆ ನೀಡಿದೆ.

ಸಿದ್ದಾಪುರ ಗ್ರಾಮದ ಸುರೇಶ್‌ ಶೆಟ್ಟಿ (38) ಮೃತ ದುರ್ದೈವಿ. ಇಂದು ಸಂಜೆ ಹೊತ್ತಿಗೆ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿದಿದೆ. ಈ ವೇಳೆ ಸುರೇಶ್‌ ಶೆಟ್ಟಿ ಅವರಿಗೆ ಸಿಡಿಲು ಬಡಿದಿದ್ದು, ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯ ಸುರಿದಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಾಕಾರ ಮಳೆ‌ಯಾಗಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿದೆ. ಬಲವಾದ ಗಾಳಿ – ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿಯ ಹರಿವು ಕೊಂಚ ಏರಿಕೆಯಾಗುವ ಸಾಧ್ಯತೆ ಇದೆ. ಧಾರವಾಡದಲ್ಲಿಯೂ ಭಾರಿ ಮಳೆಯಾಗಿದೆ.

ಉತ್ತರ ಕನ್ನಡದಲ್ಲೂ ವರುಣಾರ್ಭಟ

ಉತ್ತರ ಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರಿ ಗಾಳಿ ಸಹಿತ ಮಳೆಯಾಗಿದೆ. ಶಿರಸಿಯಲ್ಲಿ ಭಾರಿ ಮಳೆಗೆ ಮರಗಳು ಧರೆಗುರುಳಿವೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆಯಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

Continue Reading

ಮಳೆ

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Karnataka Weather Forecast : ಮಂಗಳವಾರ ಸಂಜೆ ಚಿಕ್ಕಮಗಳೂರು, ಕಾರವಾರ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ವಿದ್ಯುತ್‌ ಕಂಬಗಳು ಉರುಳಿ ಬಿದ್ದರೆ, ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಈ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಬೆಂಗಳೂರು: ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಗಾಳಿ ಸಹಿತ ಭಾರಿ (Heavy Rain) ಮಳೆಯಾಗುತ್ತಿದೆ. ಮಂಗಳವಾರ ಸಂಜೆ ಶುರುವಾದ ಮಳೆಯು ಕಳೆದ ಒಂದು ಗಂಟೆಗೂ ಹೆಚ್ಚು ಸಮಯದಿಂದ ಸುರಿಯುತ್ತಿದೆ. ಶೃಂಗೇರಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನಲ್ಲಿ ಧಾರಕಾರ ಮಳೆ‌ಯಾಗುತ್ತಿದ್ದು, ಪ್ರವಾಸಿಗರು ಹಾಗೂ ಜನ-ಜೀವನ ಅಸ್ತವ್ಯಸ್ತವಾಗಿತ್ತು. ಇನ್ನೂ ಗಾಳಿ ಮಳೆಗೆ ಶೃಂಗೇರಿ ತಾಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸತತ ಮಳೆಯಿಂದಾಗಿ (Rain News) ತುಂಗಾ ನದಿ ಹರಿವು ಕೊಂಚ ಏರಿಕೆಯಾಗುವ (Karnataka weather Forecast) ಸಾಧ್ಯತೆ ಇದೆ.

ಉತ್ತರಕನ್ನಡದಲ್ಲೂ ವರುಣಾರ್ಭಟ

ಉತ್ತರಕನ್ನಡದ ಘಟ್ಟದ ಮೇಲಿನ ತಾಲೂಕುಗಳಲ್ಲೂ ವರುಣಾರ್ಭಟ ಜೋರಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲೂ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಶಿರಸಿಯಲ್ಲಿ ಭಾರೀ ಮಳೆಗೆ ಮರಗಳು ಧರೆಗುರುಳಿದೆ. ನಗರದ ಸಹ್ಯಾದ್ರಿ ಕಾಲೋನಿಯಲ್ಲಿ ಮರ ಬಿದ್ದು, ವಿದ್ಯುತ್ ಕಂಬ ಮುರಿದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ. ಹತ್ತಕ್ಕೂ ಅಧಿಕ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಕುಮಟಾ ತಾಲೂಕಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದಾನೆ. ಅರ್ಧ ಗಂಟೆಗೂ ಅಧಿಕ ಕಾಲ ಧಾರಾಕಾರ ಮಳೆಯಾಗಿದೆ. ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಮಳೆಯಾದರೂ ಕರಾವಳಿಗೆ ವರುಣ ಕಾಲಿಟ್ಟಿರಲಿಲ್ಲ. ಇದೀಗ ವರುಣಾಗಮನದಿಂದ ಕರಾವಳಿ ಜನತೆ ಖುಷಿಯಾಗಿದ್ದಾರೆ. ಭಟ್ಕಳ, ಹೊನ್ನಾವರ, ಅಂಕೋಲಾ, ಕಾರವಾರ ಭಾಗದಲ್ಲಿ ಮೋಡ ಕವಿದ ವಾತಾವರಣವಿದೆ.

ಧಾರವಾಡದಲ್ಲಿ ಮಳೆಯ ಅಬ್ಬರ

ಧಾರವಾಡದಲ್ಲಿ ಮಂಗಳವಾರ ಬೆಳಗ್ಗೆನಿಂದಲ್ಲೂ ಮೋಡ ಕವಿದ ವಾತಾವರಣವಿತ್ತು. ಇಳಿ ಸಂಜೆಯಾಗುತ್ತಿದ್ದಂತೆ ಧಾರವಾಡ ನಗರಕ್ಕೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರಿದಿದ್ದ ಮಳೆಯು ಸ್ವಲ್ಪ ಸಮಯ ಬ್ರೇಕ್‌ ಕೊಟ್ಟಿತ್ತು. ಇಂದು ಮತ್ತೆ ಮಳೆ ಸುರಿದಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

ಇದನ್ನೂ ಓದಿ: Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಮೇ 18ರ ವರೆಗೆ ಮಳೆ ಸಾಧ್ಯತೆ

ಮೇ 18ರ ವರೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ.

ಕೊಡಗು, ಮೈಸೂರು, ಮಂಡ್ಯದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿಮೀ)ಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕನ್ನಡ, ಧಾರವಾಡ, ಗದಗ, ಕೊಪ್ಪಳ, ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆ

ನಿನ್ನೆ ಸೋಮವಾರ (ಮೇ 13) ರಾಜ್ಯಾದ್ಯಂತ ಮಳೆಯಾಗಿದ್ದು, ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಶ್ರೀರಂಗಪಟ್ಟಣದಲ್ಲಿ 16 ಸೆಂ.ಮೀ ಮಳೆಯಾಗಿದ್ದು, ಮಂಡ್ಯದ ಪಿಟಿಒನಲ್ಲಿ 9 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಶಿರಾಳಿಯಲ್ಲಿ ಗರಿಷ್ಠ ಉಷ್ಣಾಂಶ 38.4 ಡಿ.ಸೆನಷ್ಟು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Car Care tips
ಪ್ರಮುಖ ಸುದ್ದಿ12 mins ago

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

ASOS brand products are available at Reliance Retail
ದೇಶ13 mins ago

Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

OTT Release
ಒಟಿಟಿ15 mins ago

OTT Release: ಒಟಿಟಿಯಲ್ಲಿ ಈ ವಾರ ಬ್ರಿಡ್ಜರ್‌ಟನ್‌, ಬಾಹುಬಲಿ ಸರಣಿ; ಇನ್ನೂ ಏನೇನಿವೆ?

Yogendra Yadav
Lok Sabha Election 202421 mins ago

Yogendra Yadav: ಈ ಬಾರಿ ಬಿಜೆಪಿಗೆ ಬಹುಮತ ಬರಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ನಿಜವಾಗಿತ್ತಾ?

KEA Department of Technical Education Director Prasanna has been appointed as the Executive Director of KEA
ಬೆಂಗಳೂರು1 hour ago

KEA : ಸಿಇಟಿ ಪರೀಕ್ಷೆಯಲ್ಲಿ ಸಾಲು ಸಾಲು ವಿವಾದ; ಕೆಇಎ ಎಕ್ಸಿಕ್ಯುಟಿವ್‌ ಡೈರೆಕ್ಟರ್‌ ರಮ್ಯಾ ಎತ್ತಂಗಡಿ

Udupi
ಕರ್ನಾಟಕ1 hour ago

Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

UPI in Healthcare
ಆರೋಗ್ಯ1 hour ago

UPI in Healthcare: ಆರೋಗ್ಯ ಕ್ಷೇತ್ರದಲ್ಲೂ ಡಿಜಿಟಲ್ ಕ್ರಾಂತಿ!

Sri Vedavyasa Jayanti Madhva Raddhanta Samvardhak Sabha 81st session at Bengaluru
ಬೆಂಗಳೂರು1 hour ago

Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

CAA
ದೇಶ1 hour ago

CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Single Screen Theaters
ಸಿನಿಮಾ2 hours ago

Single Screen Theaters: ಹತ್ತು ದಿನ ತೆಲಂಗಾಣದ ಸಿಂಗಲ್-ಸ್ಕ್ರೀನ್ ಥಿಯೇಟರ್‌ಗಳು ಬಂದ್; ಕಾರಣ ವಿಚಿತ್ರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ3 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು8 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌