Road Accident: ವಿಜಯನಗರ, ಕುಶಾಲನಗರದಲ್ಲಿ ಪ್ರತ್ಯೇಕ ಅಪಘಾತ, ನಾಲ್ಕು ಮಂದಿಯ ಸಾವು - Vistara News

ಕೊಡಗು

Road Accident: ವಿಜಯನಗರ, ಕುಶಾಲನಗರದಲ್ಲಿ ಪ್ರತ್ಯೇಕ ಅಪಘಾತ, ನಾಲ್ಕು ಮಂದಿಯ ಸಾವು

ವಿಜಯನಗರ ಹಾಗೂ ಕೊಡಗಿನ ಕುಶಾಲನಗರಗಳಲ್ಲಿ ಸಂಭವಿಸಿದ ನಾಲ್ಕು ಅಪಃಆತಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

VISTARANEWS.COM


on

road accident kushalnagar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಜಯನಗರ: ಹೊಸಪೇಟೆ ತಾಲೂಕಿನಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿ, ಮೂವರು ಸಾವಿಗೀಡಾಗಿದ್ದಾರೆ.

ಮಹೀಂದ್ರಾ ಪಿಕಪ್ ವಾಹನ ಹಿಂಬದಿ ಲಾಕ್ ಕಟ್ ಆಗಿ ಬಿದ್ದು ವ್ಯಕ್ತಿ ಸಾವಿಗೀಡಾಗಿದ್ದಾರೆ. ಮೃತ ವ್ಯಕ್ತಿಯನ್ನು ರಾಮಾಂಜನೇಯ (35) ಎಂದು ಗುರುತಿಸಲಾಗಿದೆ.

ಹೊಸಪೇಟೆ ತಾಲೂಕಿನ ಕಡ್ಡಿರಾಂಪೂರ ಹೋಬಳಿಯ ಕೊಟಗಿನಹಾಳ್ ಬಳಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ಉರುಳಿ ಬಿದ್ದು ಹಿಂಬದಿ ಕುಳಿತಿದ್ದ ಶ್ವೇತಾಬಾಯಿ (28) ಎಗರಿ ಬಿದ್ದು ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಮಲಾಪೂರ ಬಳಿ ಕಾರು ಡಿಕ್ಕಿ ಹೊಡೆದು ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಹೋಬಳಿಯ ಅಂಬೇಡ್ಕರ್ ವೃತ್ತದ ಬಳಿ ನಡೆದ ದುರ್ಘಟನೆಯಲ್ಲಿ ಮೃತರಾದ ವ್ಯಕ್ತಿ ವೆಂಕಟಾಪೂರ ಗ್ರಾಮದ ಕೆಂಚಪ್ಪ (65) ಎಂದು ಗುರುತಿಸಲಾಗಿದೆ. ಕಾರು ಚಾಲಕಿ ಆಲವೇಲು ಎಂಬವರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ. ಕಮಲಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಡಗು: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಬೈಕ್ ಸವಾರನ ಮೇಲೆಯೇ ಲಾರಿ ಹರಿದ ಪರಿಣಾಮ ದೇಹ ಎರಡು ತುಂಡಾಗಿದೆ.

ಕುಶಾಲನಗರ ತಾಲ್ಲೂಕಿನ ಕೂಡ್ಲೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಬೈಕ್‌ಗೆ ಕೂಡಿಗೆ ಕಡೆಯಿಂದ ಕಾಫೀ ವರ್ಕ್ಸ್ ಕಡೆಗೆ ಬರುತ್ತಿದ್ದ 10 ವೀಲ್ ಲಾರಿ ಡಿಕ್ಕಿಯಾಗಿವೆ. ಕುಶಾಲನಗರದಿಂದ ಕೆಲಸ ಮುಗಿಸಿ ರೂಮ್‌ಗೆ ತೆರಳುತ್ತಿದ್ದ ಬೈಕ್ ಸವಾರ ಗಂಗಾಧರ ಸಾವಿಗೀಡಾಗಿದ್ದಾರೆ. ಹಾಸನ ಜಿಲ್ಲೆಯ ಅರಸಿಕೆರೆ ನಿವಾಸಿ ಗಂಗಾಧರ ಕುಶಾಲನಗರದಲ್ಲಿ‌ ವಿದ್ಯುತ್ ಕಂಬ ನೆಡುವ ಕೆಲಸ ಮಾಡುತ್ತಿದ್ದರು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: Bike Accident: ಅಪರಿಚಿತ ಕಾರು ಬೈಕ್‌ಗೆ ಡಿಕ್ಕಿಯಾಗಿ ಸವಾರ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Rain: ಸಿಡಿಲಾಘಾತಕ್ಕೆ ಕುರಿಗಳು ಬಲಿ; ಮೇವಿನ ಬಣವೆ ಭಸ್ಮ, ಮನೆಗಳಿಗೆ ಹಾನಿ

Karnataka Rain: ಸಿಡಿಲಾಘಾತಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ. ಹಲವೆಡೆ ಸಿಡಿಲು ಸಹಿತ ಮಳೆಗೆ (Rain News) ಅನಾಹುತಗಳು ಸಂಭವಿಸಿದೆ. ಸಿಡಿಲು ಬಡಿದು ಕುರಿಗಳು ಬಲಿಯಾದರೆ, ಮೇವಿನ ಬಣವೆ, ತೆಂಗಿನ ಮರ ಸೇರಿ ಮನೆಯು ಹಾನಿಯಾಗಿದೆ. ಗಾಳಿ ಮಳೆಗೆ ಬೆಳೆಗಳು ನಾಶವಾಗಿವೆ.

VISTARANEWS.COM


on

By

karnataka Rain Effected
Koo

ವಿಜಯಪುರ/ಹಾವೇರಿ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಭಾರಿ ಗಾಳಿಯೊಂದಿಗೆ (Karnataka Rain) ಮಳೆಯಾಗುತ್ತಿದೆ. ಮಳೆ ಅನಾಹುತ (Rain News) ಒಂದು ಕಡೆಯಾದರೆ, ಮತ್ತೊಂದು ಕಡೆ ಸಿಡಿಲಾಘಾತಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ವಿಜಯಪುರದಲ್ಲಿ ಸಿಡಿಲು ಬಡಿದು ಕುರಿಗಳು ಮೃತಪಟ್ಟರೆ, ಹಾವೇರಿಯಲ್ಲಿ ಮೇವಿನ ಬಣವೆ ಸುಟ್ಟು ಕರಕಲಾಗಿದೆ. ಕೊಡಗಿನಲ್ಲಿ ಸಿಡಿಲಿಗೆ ಮನೆಗೆ ಹಾನಿಯಾಗಿದ್ದು ಚಾವಣಿ ಕಿತ್ತುಬಂದಿದೆ. ಕೊಪ್ಪಳದಲ್ಲಿ ಗಾಳಿ ಮಳೆಗೆ ಮನೆಯ ಶೀಟ್‌ಗಳು ಹಾರಿ ಹೋದರೆ, ವಿಜಯಪುರ, ವಿಜಯನಗರದಲ್ಲಿ ಬೆಳೆಗಳಿಗೆ ಹಾನಿಯಾಗಿವೆ.

ವಿಜಯಪುರದಲ್ಲಿ ಸಿಡಿಲಿಗೆ ಕುರಿಗಳು ಬಲಿ

ಸಿಡಿಲು ಬಡಿದು ಎರಡು ಕುರಿಗಳು ಮೃತಪಟ್ಟಿವೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಹಾಲಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಸಾಬಣ್ಣ ಬಸನಗೌಡ ಬಿರಾದಾರ ಎಂಬುವವರ ಕುರಿಗಳು ಮೃತಪಟ್ಟಿವೆ. ಇತ್ತ ಶಿವಸಂಗಪ್ಪ ರಾಯಪ್ಪ ಬೇವಿನಮಟ್ಟಿ ಎಂಬುವವರಿಗೆ ಸಿಡಿಲು ಬಡಿದು ಗಾಯಗೊಂಡಿದ್ದಾರೆ. ಗಾಯಾಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Karnataka Rain

ಹಾವೇರಿಯಲ್ಲಿ ಸಿಡಿಲಿಗೆ ಸುಟ್ಟು ಕರಕಲಾದ ಮೇವಿನ ಬಣವೆ

ಸಿಡಿಲು ಬಡಿದು ಮೇವಿನ ಬಣವೆ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ ತಾಲೂಕಿನ ವರ್ದಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಪರಶುರಾಮ ಬಾರ್ಕಿ ಎಂಬ ರೈತ ಧನಕರುಗಳಿಗೆ ಮೇವಿನ ಬಣವೆ ಸಂಗ್ರಹಿಸಿಟ್ಟಿದ್ದರು. ಆದರೆ ಬೆಂಕಿ ಎಲ್ಲವೂ ಸುಟ್ಟು ಕರಲಾಗಿದೆ. ಆಡೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇತ್ತ ಸಿಡಿಲು ಬಡಿದು ತೆಂಗಿನಮರ ಸುಟ್ಟು ಭಸ್ಮವಾಗಿದೆ. ಹನುಮಂತಪ್ಪ ದೇಸೂರ ಮನೆಯ ಆವರಣದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿದಿದೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ‌ ಹಿರೇಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕೊಡಗಿನಲ್ಲಿ ಸಿಡಿಲಿಗೆ ಮನೆಗೆ ಹಾನಿ

ಕೊಡಗಿನಲ್ಲಿ ರಾತ್ರಿ ಸಿಡಿಲು ಬಡಿದು ಮನೆಯೊಂದಕ್ಕೆ ಹಾನಿಯಾಗಿದೆ. ಮಡಿಕೇರಿ ಸಮೀಪದ ಕಾಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಎನ್.ಟಿ.ಲಿಂಗಮ್ಮ ಎಂಬವರಿಗೆ ಸೇರಿದ ಮನೆ ಸಂಪೂರ್ಣ ಜಖಂಗೊಂಡಿದೆ. ಸಿಡಿಲಿಗೆ ಮನೆಯ ಚಾವಣಿ ಕುಸಿದು ಬಿದ್ದಿದೆ. ಸಿಡಿಲಿನಾಘಾತಕ್ಕೆ ಮನೆ ಮಂದಿ ಕಂಗಾಲಾಗಿದ್ದಾರೆ. ಜಿಲ್ಲೆಯ ಹಲವೆಡೆ ರಾತ್ರಿಯೆಲ್ಲ ಗುಡುಗು ಸಹಿತ ಮಳೆಯಾಗಿದೆ.

Karnataka Rain

ಇದನ್ನೂ ಓದಿ: POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

ಕೊಪ್ಪಳದಲ್ಲಿ ಭಾರಿ ಗಾಳಿ ಮಳೆಗೆ ಹಾರಿ ಹೋದ ಚಾವಣಿ

ಶನಿವಾರ ರಾತ್ರಿ ಕೊಪ್ಪಳ ಸೇರಿದಂತೆ ಹಲವು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಭಾರಿ ಮಳೆಗೆ ಮನೆ ಚಾವಣಿಯ ಶೀಟ್‌ಗಳು ಹಾರಿಹೋಗಿವೆ. ಮರಗಳು ಉರುಳಿ ಬಿದ್ದಿವೆ. ಕೊಪ್ಪಳ ತಾಲೂಕಿನ ನರೇಗಲ್ ಗ್ರಾಮದಲ್ಲಿ ವೀರೇಶಪ್ಪ ಯಲಬುರ್ಗಿ ಎಂಬುವವರ ಮನೆಯಲ್ಲಿ ಬಿರುಗಾಳಿಗೆ ಶೀಟ್‌ಗಳು ಹಾರಿ ಹೋಗಿವೆ.

ವಿಜಯನಗರದಲ್ಲಿ ಭಾರಿ ಮಳೆಗೆ ಬಾಳೆ ಗಿಡಗಳು ನಾಶ

ಭಾರಿ ಮಳೆಗೆ ನೂರಾರು ಎಕರೆ ಬಾಳೆ ಗಿಡಗಳು ನೆಲಕ್ಕೆ ಬಾಗಿವೆ. ವಿಜಯನಗರದ ಹೊಸಪೇಟೆ ತಾಲೂಕಿನ ಹೊಸೂರು ಮಾಗಾಣಿ, ನಾಗೇನಹಳ್ಳಿ ಹಾಗೂ ಚಿತ್ತವಾಡ್ಗಿ, ಹಾನಗಲ್, ಇಪ್ಪತೇರಿ, ಕರೆಕಲ್ ಮಾಗಾಣಿ, ನರಸಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಸುಗಂಧಿ, ಯಾಲಕ್ಕಿ, ಬಾಳೆಗಿಡಗಳು ನೆಲಕ್ಕುರುಳಿವೆ. ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಅನ್ನದಾತರು ಕಂಗಾಲಾಗಿದ್ದಾರೆ.

karnataka Rain

ವಿಜಯಪುರದಲ್ಲಿ ನಿಂಬೆ ಬೆಳೆ ನಾಶ

ಶನಿವಾರ ತಡರಾತ್ರಿ ಬೀಸಿದ ಮಳೆ ಗಾಳಿಗೆ ನಿಂಬೆ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಹೊರ ಭಾಗದಲ್ಲಿನ ನಿಂಬೆ ತೋಟಕ್ಕೆ ಹಾನಿಯಾಗಿದೆ. ಇಂಡಿ ಅಹಿರಸಂಗ ರಸ್ತೆಯಲ್ಲಿನ ಸಂಜು ವಾಘಮೋಡೆ ಎಂಬುವವರ ನಿಂಬೆ ತೋಟದಲ್ಲಿನ‌ ನಿಂಬೆ ಗಿಡಗಳು ಹಾನಿಯಾಗಿದೆ.

ಬರಗಾಲ ಹಾಗೂ ಬೇಸಿಗೆಯಲ್ಲಿ ಕಷ್ಟಪಟ್ಟು ಉಳಿಸಿಕೊಂಡಿದ್ದ ನಿಂಬೆ ಬೆಳೆ, ನಿನ್ನೆ ತಡರಾತ್ರಿ ಮಳೆಯ ಗಾಳಿಗೆ ಬುಡ ಸಮೇತ ಕಿತ್ತು ಬಿದ್ದಿವೆ. ಎರಡು ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆಯು ನಾಶವಾಗಿವೆ. ತೋಟಗಾರಿಕಾ ಇಲಾಖೆಯಿಂದ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದ್ದಾರೆ.

ಚಿಕ್ಕೋಡಿಯಲ್ಲಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮಳೆ ಅವಾಂತರ ಮುಂದುವರಿದಿದೆ. ನಿನ್ನೆ ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ವಿಧ್ಯುತ್ ಕಂಬಗಳು ಧರೆಗುರುಳಿವೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರ ವಲಯದಲ್ಲಿ ಘಟನೆ ನಡೆದಿದೆ.

Karnataka Rain

ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ಪರಿವರ್ತಕ ಸಹಿತ ವಿದ್ಯುತ್ ಕಂಬಗಳು ಧರೆಗುರುಳಿವೆ. ಏಳು ಕಂಬಗಳು ಧರೆಗುರುಳಿದ ಪರಿಣಾಮ ಕರೆಂಟ್‌ ಇಲ್ಲದ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳಲ್ಲಿ ರಾತ್ರಿ ಇಡಿ ಸುರಿದ ಬಿರುಗಾಳಿ ಸಹಿತ ಮಳೆಗೆ ವಾತಾವರಣ ತಂಪಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Karnataka Weather : ರಾಜ್ಯಾದ್ಯಂತ ಇನ್ನೂ ಮೂರು ದಿನಗಳು ಗುಡುಗು ಸಹಿತ ಮಳೆಯು (Rain News) ಅಬ್ಬರಿಸಲಿದೆ. ಗಾಳಿ ವೇಗವು 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ (Karnataka Rain) ಸಾಧ್ಯತೆಯಿದೆ. ಇನ್ನೂ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಮೇ 14ರವರೆಗೆ ಗುಡುಗು ಸಹಿತ ಮಿಂಚು ಮತ್ತು ಗಾಳಿಯೊಂದಿಗೆ (40-50 ಕಿ.ಮೀ) ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Karnataka Weather Forecast) ನೀಡಿದೆ.

ಕರಾವಳಿಯಲ್ಲಿ ಮೇ 13ರವರೆಗೆ ಹಾಗೂ ಉತ್ತರ ಒಳನಾಡಿನಲ್ಲಿ ಮೇ 12ರಿಂದ 13ರವರೆಗೆ, ದಕ್ಷಿಣ ಒಳನಾಡಿನಲ್ಲಿ ಮೇ 13ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Sleeping Tips: ನಿಮಗೆ ರಾತ್ರಿ ನಿದ್ದೆ ಬರುತ್ತಿಲ್ಲವೆ? ಮಲಗುವ ಮುನ್ನ ಈ ಪೇಯಗಳನ್ನು ಕುಡಿಯಿರಿ!

ಬೆಂಗಳೂರು ವ್ಯಾಪ್ತಿಯಲ್ಲಿ ಅಲ್ಲಿಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮೇಣ 32 ಮತ್ತು 21 ಡಿ.ಸೆ ಇರಲಿದೆ. ಉತ್ತರ ಒಳನಾಡಿನ ಬಳ್ಳಾರಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉಳಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain: ಶನಿವಾರ ಸಂಜೆ ಅಬ್ಬರಿಸಿದ ಗಾಳಿ ಮಳೆಗೆ ತೊಯ್ದು ತೊಪ್ಪೆಯಾದ ಮಂದಿ; ರಸ್ತೆಗೆ ಬಿದ್ದ ಮರಗಳು

Karnataka Rain: ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ಶನಿವಾರ ಸಂಜೆ ಗಾಳಿಯೊಂದಿಗೆ ಸುರಿದ ಭಾರಿ ಮಳೆಗೆ ಜನರು ತೊಯ್ದು ತೊಪ್ಪೆಯಾದರು. ವಿಜಯಪುರ, ಹುಬ್ಬಳ್ಳಿ, ರಾಯಚೂರು ಸೇರಿ ಚಿಕ್ಕಮಗಳೂರಲ್ಲೂ ಮಳೆಯು (Heavy Rain alert) ಅಬ್ಬರಿಸಿತ್ತು. ರಸ್ತೆ ಮೇಲೆ ನೀರು ಹರಿದುಮ ಕೆಲವೆಡೆ ಕೆರೆಯಂತಾಗಿತ್ತು. ಇನ್ನೂ ನಾಲ್ಕೈದು ದಿನಗಳು ಗುಡುಗು ಸಹಿತ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka rain
Koo

ವಿಜಯಪುರ/ಹುಬ್ಬಳ್ಳಿ: ಶನಿವಾರ ಹಲವೆಡೆ ದಿಢೀರ್‌ ಸುರಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದರು. ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಹುಬ್ಬಳ್ಳಿ, ಧಾರವಾಡ ಹಾಗೂ ಮಲೆನಾಡಿನ ಚಿಕ್ಕಮಗಳೂರಿನಲ್ಲೂ ವರುಣಾರ್ಭಟ (Karnataka Rain) ಜೋರಾಗಿತ್ತು. ಮೇ 15ರವರೆಗೆ ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

ವಿಜಯಪುರ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯು ಬಿಸಿಲಿನಿಂದ ಕಂಗೆಟ್ಟಿದ್ದ ಜನತೆಗೆ ತಂಪು ತಂದಿತ್ತು. ಬಿರು ಬಿಸಿಲಿಗೆ ಕಂಗೆಟ್ಟು ಹೋಗಿದ್ದ ಜನರು, ಶನಿವಾರ ಸುರಿದ ಅರ್ಧ ಗಂಟೆಗೂ ಆಧಿಕ ಕಾಲ ಮಳೆಗೆ ಸಂತಸಗೊಂಡರು. ಇನ್ನೂ ರೈತರು ಮುಂಗಾರು ಹಂಗಾಮಿಗೆ ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಈವರೆಗೂ ಮಳೆಯಿಂದ ಯಾವುದೇ ಹಾನಿಯಾದ ವರದಿಯಾಗಿಲ್ಲ.

Karnataka Rain

ಹುಬ್ಬಳ್ಳಿ, ಬೆಳಗಾವಿಯಲ್ಲಿ ಗುಡುಗು -ಸಿಡಿಲಿನ ಮಳೆ ಅಬ್ಬರ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಕೆಲವೆಡೆ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗಿದೆ. ಎಡೆಬಿಡದೆ ಆರ್ಭಟಿಸುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿತ್ತು. ರಸ್ತೆಗಳಲ್ಲಿ ನೀರು ತುಂಬಿ ಹರಿದು ಸಂಚಾರಕ್ಕೆ ಅಡ್ಡಿಯಾಗಿತ್ತು. ಇತ್ತ ಬೆಳಗಾವಿಯಲ್ಲಿ ಗುಡುಗು ಸಿಡಿಲು ಮಿಶ್ರಿತ ಧಾರಾಕಾರ ಮಳೆಯಾಗುತ್ತಿದೆ. ಬಿಸಿಲಿನ ಬೇಗೆಗೆ ಬೇಸೆತ್ತು ಹೋಗಿದ್ದ ಕುಂದಾನಗರಿ ಜನರಿಗೆ ವರುಣ ತಂಪೆರೆದಿದ್ದಾನೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.

ಇದನ್ನೂ ಓದಿ: Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

ಜೋರು‌ ಮಳೆಯಲ್ಲೇ ಶನಿವಾರದ ಸಂತೆ ಸಂಭ್ರಮ

ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದಲ್ಲಿ ವರುಣಾರ್ಭಟದ ನಡುವೆಯೇ ಶನಿವಾರದ ಸಂತೆ ಜೋರಾಗಿತ್ತು. ಧಾರಾಕಾರ ಮಳೆ‌‌ಯಲ್ಲೇ ವ್ಯಾಪಾರಸ್ಥರು ಸಂತೆ ಮಾಡಿದರು. ಮಳೆಗೆ ಡೋಂಟ್ ಕೇರ್ ಎಂದ ಸಾವಿರಾರು ಜನರು ಖರೀದಿಯಲ್ಲಿ ಬ್ಯುಸಿಯಾಗಿದ್ದರು.

ಧಾರವಾಡದಲ್ಲಿ ಮಳೆ ಗಾಳಿಗೆ ಜಖಂ ಆದ ಬಸ್‌ಗಳು

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಗೆ ನಗರದ ಬಹುತೇಕ ಕಡೆ ಮರಗಳು ನೆಲಕ್ಕುರುಳಿದ್ದವು. ಮಳೆ ಗಾಳಿಗೆ ಬಸ್‌ಗಳು ಜಖಂ ಆಗಿದ್ದವು. ನಿರ್ಮಾಣ ಹಂತದಲ್ಲಿದ್ದ ಈಜುಕೊಳದ ಕಟ್ಟಿಗೆ ಸೆಂಟ್ರಿಂಗ್ ಬಿದ್ದು ಖಾಸಗಿ ಬಸ್ ಜಖಂಗೊಂಡಿತ್ತು. ನಗರದ ಡಿಸಿ ಕಂಪೌಂಡ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಘಟನೆ ನಡೆದಿತ್ತು.

Karnataka Rain

ಚಿಕ್ಕಮಗಳೂರಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ

ಕಾಫಿನಾಡು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಗುಡುಗು-ಸಿಡಿಲಿನೊಂದಿಗೆ ಎಡಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯಲ್ಲಿ ನೀರು ನದಿಯಂತೆ ಹರಿಯುತ್ತಿದೆ. ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗದಲ್ಲಿ ಮಳೆ ಜತೆ ಭಾರಿ ಗಾಳಿ ಬೀಸುತ್ತಿದೆ. ಇನ್ನೂ ಕಳೆದೊಂದು ಗಂಟೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ಭಾರೀ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕವಿಲ್ಲದೆ ಕುಗ್ರಾಮಗಳು ಕತ್ತಲಲ್ಲಿವೆ. ಮಳೆ ಕಂಡು ರೈತರು, ಅಡಿಕೆ-ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ.

ಮಂಗಳೂರಿನ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಗಾಳಿ,ಗುಡುಗು ಸಹಿತ ಮಳೆಯಾಗುತ್ತಿದೆ. ಸುಮಾರು ಅರ್ಧಗಂಟೆಗಳ ಕಾಲ ಮಳೆಯು ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಿಸಿದ ಸುಬ್ರಹ್ಮಣ್ಯದಲ್ಲಿ ಹಠಾತ್‌ ಮಳೆಯು ಕ್ಷೇತ್ರಕ್ಕೆ ಆಗಮಿಸಿದ ಭಕ್ತರಲ್ಲಿ ಸಂತಸ ಮೂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Murder Case : ಕೊಡಗು ಹತ್ಯೆ ಕೇಸ್‌; ಬಾಲಕಿ ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ! ಬೆಚ್ಚಿ ಬಿದ್ದ ಪೊಲೀಸರು

Murder Case : ಬಾಲಕಿಯ ತಲೆ ಕತ್ತರಿಸಿ ಕಾಡಿನಲ್ಲಿ ಅಡಗಿ ಕುಳಿತಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಇತ್ತ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆ ಆಗಿದ್ದು, ಮರದ ಮೇಲೆ ಇರಿಸಿದ್ದ ರುಂಡವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ರುಂಡ ಕಂಡು ಬಾಲಕಿ ಸಹೋದರ ಮೈಮೇಲೆ ಶಕ್ತಿ ಆವಾಹನೆ ಅದಂತೆ ವರ್ತಿಸಿದ ಘಟನೆಯೂ ನಡೆದಿದೆ.

VISTARANEWS.COM


on

By

Murder Case in kodagu
Koo

ಕೊಡಗು:‌ ಮದುವೆ ರದ್ದಾಗಿದ್ದಕ್ಕೆ ಕೋಪಗೊಂಡ ಪಾಗಲ್‌ ಪ್ರೇಮಿಯೊಬ್ಬ ಬಾಲಕಿಯನ್ನು ಕೊಲೆ (Murder Case) ಮಾಡಿ ರುಂಡದೊಂದಿಗೆ ಪರಾರಿ ಆಗಿದ್ದ. ಕಾಡಿನಲ್ಲಿ ಬಚ್ಚಿಟ್ಟುಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ ಪೊಲೀಸರು ಶನಿವಾರ ಬಂಧಿಸಿದ್ದರು. ಆದರೆ ಆರೋಪಿ ಸಿಕ್ಕರೂ ಬಾಲಕಿಯ ರುಂಡ ಪತ್ತೆಯಾಗಿರಲಿಲ್ಲ. ಇದೀಗ ಹತ್ಯೆ ನಡೆದ ಅನತಿ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲೆ ಇರಿಸಿದ್ದ. ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಶುಕ್ರವಾರ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾಳ ತಲೆ ಸಿಕ್ಕಿರಲಿಲ್ಲ. ಇತ್ತ ಮಗಳ ತಲೆ ಸಿಗದೆ ಮೃತದೇಹದ ಅಂತ್ಯ ಸಂಸ್ಕಾರ ಮಾಡುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದರು. ಹೀಗಾಗಿ ಶನಿವಾರ ಮತ್ತೆ 40ಕ್ಕೂ ಹೆಚ್ಚು ಪೊಲೀಸರಿಂದ ಶೋಧ ಕಾರ್ಯ ನಡೆದಿದ್ದು, ಹತ್ಯೆಯಾಗಿದ್ದ ಮೀನಾ ರುಂಡ ಪತ್ತೆ ಮಾಡಿದ್ದಾರೆ. ತಲೆ ವಶಕ್ಕೆ ಪಡೆದು ಬಾಲಕಿ ಮನೆ ಬಳಿ ಮಹಜರ್‌ ನಡೆಸಿದ್ದಾರೆ.

ರುಂಡ ಕಂಡು ವಿಚಿತ್ರವಾಗಿ ವರ್ತಿಸಿದ ಸಹೋದರ

ಕೊಡಗಿನಲ್ಲಿ ಬಾಲಕಿ ಹತ್ಯೆಯ ಸ್ಥಳ ಮಹಜರು ವೇಳೆ ವಿಚಿತ್ರ ಘಟನೆಯೂ ನಡೆದಿದೆ. ರುಂಡ ಪತ್ತೆ ಸ್ಥಳದಲ್ಲಿ ಬಾಲಕಿ ಸಹೋದರನ ಮೈಮೇಲೆ ಶಕ್ತಿ ಆವಾಹನೆ ಆದ ರೀತಿ ವರ್ತಿಸಿದ್ದಾನೆ. ರುಂಡ ಪತ್ತೆಯಾದ ಸ್ಥಳಕ್ಕೆ ಆರೋಪಿ ಪ್ರಕಾಶ್‌ ಮತ್ತು ಬಾಲಕಿ ಸಹೋದರ ಹೋದಾಗ ಏಕಾಏಕಿ ಶಕ್ತಿ ಆವಾಹನೆ ಆದಂತೆ ವರ್ತಿಸಿದ್ದಾನೆ. ಏಕಾಏಕಿ ಆತನ ವರ್ತನೆಗೆ ಪೊಲೀಸರು ಕ್ಷಣಕಾಲ ಬೆಚ್ಚಿ ಬಿದ್ದರು. ಕೂಡಲೇ ಅಲ್ಲಿದ್ದವರು ಮೀನಾಳ ಸಹೋದರನನ್ನು ಹಿಡಿದುಕೊಂಡು ಸಮಾಧಾನಪಡಿಸಿದರು.

ಏನಿದು ಪ್ರಕರಣ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Narendra Modi
ದೇಶ2 mins ago

Narendra Modi: ತಾಯಂದಿರ ದಿನದಂದು ಮೋದಿಗೆ ವಿಶೇಷ ಉಡುಗೊರೆ ಕೊಟ್ಟ ಫ್ಯಾನ್ಸ್; ಏನದು ನೋಡಿ!

Murder case
ಕ್ರೈಂ3 mins ago

Murder Case : ಪತಿಯ ಡೆಡ್ಲಿ ಅಟ್ಯಾಕ್‌ಗೆ ಪತ್ನಿ ಸಾವು; ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ

Kannada New Movie Moorane Krishnappa trailer Out
ಸ್ಯಾಂಡಲ್ ವುಡ್13 mins ago

Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

Vimala Raman confirms her relationship with this villan actor
ಸ್ಯಾಂಡಲ್ ವುಡ್20 mins ago

Vimala Raman: ಖಳನಟನ ಜತೆ ಪ್ರೀತಿಲಿ ಬಿದ್ದ ʻಆಪ್ತರಕ್ಷಕʼ ನಟಿ

Money Guide
ಮನಿ-ಗೈಡ್28 mins ago

Money Guide: ಎಫ್‌ಡಿ V/S ಆರ್‌ಡಿ; ಯಾವುದು ಉತ್ತಮ? ಯಾವುದರಲ್ಲಿ ಹೂಡಿಕೆ ಮಾಡಬೇಕು?

Lok Sabha Election
ದೇಶ35 mins ago

Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ನಾಳೆ ಮತದಾನ; ಕಣದಲ್ಲಿರುವ ಪ್ರಮುಖರು ಯಾರು?

Neha Murder Case
ಕರ್ನಾಟಕ40 mins ago

Neha Murder Case: ನೇಹಾ ಕೊಲೆ ಪ್ರಕರಣ; ಚಾರ್ಜ್‌ಶೀಟ್ ಸಲ್ಲಿಸಲು ಸಿಐಡಿ ತಯಾರಿ

Prajwal Revanna Case Will Not Be Handed Over To CBI Says Cm Siddaramaiah
Lok Sabha Election 20241 hour ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್;‌ ಸಿಬಿಐಗೆ ಏಕೆ ಕೊಡಲ್ಲ ಎಂದು ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

Drowned in water
ಚಿಕ್ಕಬಳ್ಳಾಪುರ1 hour ago

Drowned in water : ಕೆರೆಯಲ್ಲಿ ಈಜುವ ಸವಾಲು; ಜೋಶ್‌ನಲ್ಲಿ ನೀರಿಗೆ ಇಳಿದ ಟೆಕ್ಕಿ ಮೃತ್ಯು

PoK
ಪ್ರಮುಖ ಸುದ್ದಿ1 hour ago

PoK Crisis: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ದಂಗೆಯೆದ್ದ ಜನ, ಗಲಾಟೆ; ಭಾರತದ ಜತೆ ವಿಲೀನಕ್ಕೆ ಆಗ್ರಹ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ3 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ4 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ12 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

ಟ್ರೆಂಡಿಂಗ್‌