Site icon Vistara News

Kodi Mutt Swamiji : 2023ರಲ್ಲಿ ಜಾಗತಿಕ ಮಟ್ಟದಲ್ಲಿ ದೊಡ್ಡ ಸಮಸ್ಯೆ ಎದುರಾಗಲಿದೆ; ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ: ಕೋಡಿ ಮಠದ ಶ್ರೀ

Kodi Mutt Swamiji

ಹೊಸಪೇಟೆ: ಒಲೆ ಹೊತ್ತಿ ಉರಿದರೆ ನಿಲ್ಲಬಹುದು, ಧರೆ ಹೊತ್ತಿ ಉರಿದರೆ ನಿಲ್ಲದು. 2023ರಲ್ಲಿ ಜಾಗತಿಕ ಮಟ್ಟದಲ್ಲಿ ಈ ರೀತಿ ಸಮಸ್ಯೆ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ.

ಹೊಸಪೇಟೆಯ ಬಿಜೆಪಿ ನಾಯಕಿ ರಾಣಿ‌ ಸಂಯುಕ್ತ ಅವರ ನಿವಾಸದಲ್ಲಿ ಶುಕ್ರವಾರ ಪಾದಪೂಜೆ ಸ್ವೀಕರಿಸಿ ಮಾತನಾಡಿರುವ ಅವರು, ಸಾಧು ಸಂತರಿಗೆ ಸಮಸ್ಯೆಯಾಗುವುದಿದೆ. ಜಾಗತಿಕವಾಗಿ ಬಹಳ ದೊಡ್ಡ ಸಮಸ್ಯೆ ಕಾಡುತ್ತದೆ. ಎರಡ್ಮೂರು ದೊಡ್ಡ- ದೊಡ್ಡ ತಲೆಗಳು ಉರುಳುತ್ತವೆ. ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಅಧಿಕಾರ‌ಕ್ಕೆ ಬರಲ್ಲ ಎಂದು ತಿಳಿಸಿದ್ದಾರೆ.

ಕೊರೊನಾ ಬಂದರೂ ಅಂತಹ ತೊಂದರೆಯಾಗಲ್ಲ. ಸಂಕ್ರಾಂತಿ, ಯುಗಾದಿಯ ಬಳಿಕ ಮತ್ತೆ ಮಳೆಯಾಗುತ್ತದೆ. ಕಳೆದ ಬಾರಿ ಹೇಗೆ ಆಯಿತೋ ಹಾಗೆಯೇ ಮಳೆ ಆಗುತ್ತದೆ. ಸಂಕ್ರಾಂತಿಗೆ ಇನ್ನೂ ಎರಡು ದಿನಗಳಿವೆ. ಸಂಕ್ರಾಂತಿ ಹಾಗೂ ಯುಗಾದಿ ಭವಿಷ್ಯ ಆ ಕಾಲಕ್ಕೆ ಹೇಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ | Joshimath Sinking | ಕೇವಲ 12 ದಿನದಲ್ಲಿ 5.4 ಸೆಂ.ಮೀ ಮುಳುಗಿದ ಜೋಶಿಮಠ ಪಟ್ಟಣ, ಆತಂಕ ಹೆಚ್ಚಿಸಿದ ಸ್ಯಾಟಲೈಟ್‌ ಫೋಟೊಗಳು

Exit mobile version