Child Kidnapped : ಬುಲೆಟ್‌ನಲ್ಲಿ ಬಂದು 7 ವರ್ಷದ ಬಾಲಕನ ಅಪಹರಣ, Whatsappನಿಂದಾಗಿ ಸಿಕ್ಕಿಬಿದ್ದ ದುರುಳರು - Vistara News

ಕರ್ನಾಟಕ

Child Kidnapped : ಬುಲೆಟ್‌ನಲ್ಲಿ ಬಂದು 7 ವರ್ಷದ ಬಾಲಕನ ಅಪಹರಣ, Whatsappನಿಂದಾಗಿ ಸಿಕ್ಕಿಬಿದ್ದ ದುರುಳರು

Child kidnapped : ಏಳು ವರ್ಷದ ಪುಟ್ಟ ಹುಡುಗನನ್ನು ಮನೆಯ ಅಂಗಳದಿಂದಲೇ ಅಪಹರಿಸಲಾಗಿದೆ. ಆದರೆ Whatsapp ಸಂದೇಶದಿಂದಾಗಿ ಅಪಹರಣಕಾರರು ಸಿಕ್ಕಿಬಿದ್ದರು. ಮಗು ಸೇಫ್‌ ಆಯಿತು. ಆದರೆ, ಅಪಹರಣಕಾರರನ್ನು ನೋಡಿ ಮಗುವಿನ ತಂದೆ ಬೆಚ್ಚಿಬಿದ್ದರು. ಯಾಕೆ?

VISTARANEWS.COM


on

Child kidnappers and child
ಅಪಹರಣಕಾರರು ಮತ್ತು ಅಪಹರಣವಾದ ಮಗು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಬುಲೆಟ್‌ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಮನೆಯಂಗಳದಲ್ಲಿದ್ದ ಏಳು ವರ್ಷದ ಬಾಲಕನನ್ನು ಅಪಹರಿಸಿದ (Child Kidnapped) ಘಟನೆಯೊಂದು ಕೋಲಾರ ಜಿಲ್ಲೆ (Kolara News) ಶ್ರೀನಿವಾಸಪುರ ಸಮೀಪದ ಹರಳ್ಳಿಯಲ್ಲಿ ನಡೆದಿದೆ. ಆದರೆ, ವಾಟ್ಸ್‌ ಆಪ್‌ ಮೂಲಕ ಮಗುವಿನ ಅಪಹರಣದ ಸುದ್ದಿ ತಕ್ಷಣವೇ ವೈರಲ್‌ ಆದ ಪರಿಣಾಮವಾಗಿ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಹೆಡೆಮುರಿಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಹರಳ್ಳಿ ಗ್ರಾಮದ ಉದ್ಯಮಿ ಲೋಕೇಶ್ ಗೌಡ ಅವರ ಏಳು ವರ್ಷದ ಮಗು (Business mans son) ಯಶ್ವಿತ್‌ ಗೌಡ ಅಪಹರಣಕ್ಕೆ ಒಳಗಾದವನು. ಖಾಸಗಿ ಶಾಲೆಗೆ ಹೋಗುತ್ತಿರುವ ಆತ ಸಂಜೆ 4.50ರ ಹೊತ್ತಿಗೆ ಮನೆಗೆ ಬಂದಿದ್ದ. ಅದೇ ಹೊತ್ತಿಗೆ ಬಂದ ದುಷ್ಕರ್ಮಿಗಳು ಆತನನ್ನು ಅಪಹರಿಸಿದರು.

ಬುಲೆಟ್‌ನಲ್ಲಿ ಬಂದಿದ್ದ ಅಪಹರಣಕಾರರು ಮಗುವನ್ನು ಸೆಳೆದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದರು. ಈ ರೀತಿ ಅಪಹರಣ ಆಗಿದೆ ಎಂಬ ಮಾಹಿತಿಯನ್ನು ವಾಟ್ಸ್‌ಆಪ್‌ ಮೂಲಕ ಹಂಚಲಾಗಿತ್ತು. ಅಪರಹಣಕಾರರು ಶ್ರೀನಿವಾಸಪುರ ಕಡೆ ಬೈಕ್ ಹೋಗಿದ್ದ ಖಚಿತ ಮಾಹಿತಿ ಆಧಾರ ಮೇಲೆ ಹುಡುಕಾಟ ನಡೆದಿತ್ತು.

ಬುಲೆಟ್‌ ಬೈಕ್‌ ಎನ್ನುವ ಆಧಾರದಲ್ಲಿ ಎಲ್ಲ ಕಡೆ ಜನರು ಕಣ್ಗಾವಲು ಇಟ್ಟಿದ್ದರು. ಕೊನೆಗೆ ದುಷ್ಕರ್ಮಿಗಳು ಶ್ರೀನಿವಾಸಪುರ ತಾಲ್ಲೂಕು ಸೋಮಯಾಜಲಹಳ್ಳಿ ಬಳಿ ಗ್ರಾಮಸ್ಥರ ಕೈಗೆ ಸಿಕ್ಕಿ ಹಾಕಿಕೊಂಡರು. ಅಪಹರಣಕಾರರನ್ನು ಹೆಡೆಮುರಿ ಕೊಟ್ಟಿ ಮಗುವನ್ನು ವಶಕ್ಕೆ ಪಡೆದ ಗ್ರಾಮಸ್ಥರು ದುಷ್ಕರ್ಮಿಗಳನ್ನು ಪೊಲೀಸರಿಗೆ ಒಪ್ಪಿಸಿದರು.

ಲೋಕೇಶ್‌ಗೆ ಪರಿಚಿತರೇ ಆಗಿರುವ ದುಷ್ಕರ್ಮಿಗಳು

ದುಷ್ಕರ್ಮಿಗಳನ್ನು ಪೊಲೀಸ್‌ ಠಾಣೆಗೆ ಕರೆತಂದಾಗ ಮಗುವಿನ ತಂದೆ ಲೋಕೇಶ್‌ ಕೂಡಾ ಬಂದಿದ್ದರು. ಆಗ ಅವರು ಆರೋಪಿಗಳನ್ನು ನೋಡಿ ಬೆಚ್ಚಿ ಬಿದ್ದರು. ಯಾಕೆಂದರೆ ಅಪಹರಣಕಾರರು ಲೋಕೇಶ್‌ ಅವರ ಉದ್ದಿಮೆಯಲ್ಲಿ ಕೆಲಸ ಮಾಡುವ ಕೆಲಸಗಾರರೇ ಆಗಿದ್ದರು.

ಬಂಧಿತರನ್ನು ಅರಹಳ್ಳಿ ಗ್ರಾಮದ ಶ್ರೀಕಾಂತ್, ಬೇತಮಂಗಲ ಮೂಲದ ವೆಂಕಟರಾಜ್ ಎಂದು ಗುರುತಿಸಲಾಗಿದೆ. ಇವರು ಬುಲೆಟ್ ನಂಬರ್ ಬದಲಿಸಿ ಮಗುವನ್ನು ಅಪಹರಿಸಿದ್ದರು.

ಈ ವ್ಯಕ್ತಿಗಳು ಮಗುವಿಗೆ ಕೂಡಾ ಪರಿಚಿತರಾಗಿದ್ದು, ಅವರು ಕರೆದ ಕೂಡಲೇ ಹತ್ತಿರ ಹೋಗಿರಬಹುದು ಎಂದು ಹೇಳಲಾಗುತ್ತಿದೆ. ಹಣಕ್ಕಾಗಿ ಈ ಅಪಹರಣ ನಡೆದಿದೆ. ಮಗುವನ್ನು ಇಟ್ಟುಕೊಂಡು ಹಣ ಕೀಳುವ ಉದ್ದೇಶ ಅಪಹರಣಕಾರರಿಗೆ ಇತ್ತು ಎಂದು ಹೇಳಲಾಗುತ್ತಿದೆ. ಆದರೆ, ಇದರ ಹಿಂದೆ ಬೇರೇನೋ ಪಿತೂರಿ ಇರುವ ಸಾಧ್ಯತೆಯೂ ದಟ್ಟವಾಗಿದೆ.

ಲೋಕೇಶ್‌ ಅವರ ಜತೆ ಕೆಲಸ ಮಾಡಿಕೊಂಡಿರುವ ಅಪಹರಣಕಾರರು ಯಾವುದೋ ಕಾರಣಕ್ಕೆ ಸಿಟ್ಟುಗೊಂಡು ಪಾಠ ಕಲಿಸುವ ಉದ್ದೇಶದಿಂದ ಮಗುವನ್ನು ಅಪಹರಿಸಿರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ಶ್ರೀನಿವಾಸಪುರ ಪೊಲೀಸರು ಹಾಗೂ ಕೋಲಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಇದರ ಹಿಂದಿನ ಹುನ್ನಾರಗಳನ್ನು ಪೊಲೀಸರು ಬಯಲಿಗೆ ಎಳೆಯಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

Actor Darshan: ಆರ್‌.ಆರ್‌.ನಗರದ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಆರೋಪಿಗಳ ತಂಡ ಪಾರ್ಟಿ ಮಾಡಿತ್ತು. ಆರೋಪಿ ವಿನಯ್ ಮಾಲೀಕತ್ವದ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ 30 ಲಕ್ಷ ಹಣ ಸೀಜ್ ಮಾಡಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renuka Swamy murder case) ಈಗಾಗಲೇ ದರ್ಶನ್‌ ಸೇರಿ 13 ಆರೋಪಿಗಳನ್ನು (Actor Darshan) ‌ಪೊಲೀಸರು ಅರೆಸ್ಟ್‌ ಮಾಡಿದ್ದು, ಮತ್ತಷ್ಟು ಆರೋಪಿಗಳು ಸೆರೆಯಾಗುವ ಸಾಧ್ಯತೆ ಇದೆ. ಈ ನಡುವೆ ಹಂತಕರಿಗೆ ನೀಡಲು ಆರೋಪಿ ವಿನಯ್ ಮಾಲೀಕತ್ವದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ರೂ.ಗಳನ್ನು ಜಪ್ತಿ ಮಾಡಲಾಗಿದೆ.

ಆರ್‌.ಆರ್‌.ನಗರದ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಆರೋಪಿಗಳ ತಂಡ ಪಾರ್ಟಿ ಮಾಡಿತ್ತು. ವಿನಯ್ ಮಾಲೀಕತ್ವದ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ ನಡೆಸಿದ್ದು, ಈ ವೇಳೆ 30 ಲಕ್ಷ ಹಣ ಸೀಜ್ ಮಾಡಲಾಗಿದೆ. ಇದು ಕೊಲೆ ಆರೋಪ ಹೊರುವ ಯುವಕರಿಗೆ ನೀಡಲು ಇಟ್ಟಿದ್ದ ಹಣ ಎನ್ನಲಾಗಿದೆ. ಕೊಲೆ ನಾವೇ ಮಾಡಿದ್ದು ಎಂದು ಒಪ್ಪಿಕೊಂಡು ಬಂದಿದ್ದ ರಾಘವೇಂದ್ರ, ಕಾರ್ತಿಕ್, ನಿಖಿಲ್ ನಾಯಕ್, ಕೇಶವಮೂರ್ತಿಗೆ ತಲಾ 5 ಲಕ್ಷ ನೀಡಲು ಹಣ ಇಡಲಾಗಿತ್ತು.

ಪವಿತ್ರಾ ಗೌಡ ಕಾಲಿಗೆ ಬಿದ್ದರೂ ಕರಗಲಿಲ್ಲ ಆರೋಪಿಗಳ ಮನಸ್ಸು

ಹಲ್ಲೆ ಸಮಯದಲ್ಲಿ ಪವಿತ್ರಾ ಗೌಡ ಕಾಲಿಗೆ ರೇಣುಕಾಸ್ವಾಮಿಯನ್ನು ಬೀಳಿಸಿ ಡಿ ಗ್ಯಾಂಗ್ ಕ್ಷಮಾಪಣೆ ಕೇಳಿಸಿತ್ತು ಎನ್ನಲಾಗಿದೆ. ಅಕ್ಕನ ಕಾಲಿಗೆ ಬೀಳೋ ಎಂದು ಸೂ… ಮಗನನೇ ಎಂದು ಹಿಂಸೆ ನೀಡಲಾಗಿದೆ. ದರ್ಶನ್ ಹೊಡೆತಕ್ಕೆ ನೋವು ತಾಳಲಾರದೆ ಪವಿತ್ರಾ ಗೌಡ ಕಾಲಿಗೆ ಬಿದ್ದು ರೇಣುಕಾಸ್ವಾಮಿ ಅಂಗಲಾಚಿಕೊಂಡಿದ್ದ. ಮೆಡ್ಂ ತಪ್ಪಾಯಿತು, ಕ್ಷಮಿಸಿ ಬಿಡಿ, ನಿಮ್ಮ ಕಾಲು ಹಿಡಿದುಕೊಳ್ತೇನೆ ಎಂದು ಗೋಗರೆದಿದ್ದ. ಆಗ ತಪ್ಪಾಯಿತು ಸಾರ್ ಎಂದು ಕಾಲಿಗೆ ಬಿದ್ದಾಗ, ದರ್ಶನ್ ಎಗರಿಸಿ ಒದ್ದಿದ್ದರು. ಪೊಲೀಸರು ಸ್ಥಳ ಮಹಜರು ಮಾಡುವಾಗ ಈ ಬಗ್ಗೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.

ಇದನ್ನೂ ಓದಿ | Actor Darshan: ಹಲವು ವರ್ಷಗಳಿಂದ ದರ್ಶನ್ ಆಪ್ತ ʻಮಲ್ಲಿʼನಾಪತ್ತೆ; ರೇಣುಕಾ ಸ್ವಾಮಿಯ ಗತಿಯೇ ಆಯ್ತಾ?

ಎ13 ಆರೋಪಿಯ ರಕ್ಷಣೆಗೆ ಪೊಲೀಸರ ಯತ್ನ?

ಪ್ರಕರಣದಲ್ಲಿ ಎ13 ಆರೋಪಿಯ ರಕ್ಷಣೆಗೆ ಪೊಲೀಸರು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ದೀಪಕ್ ಬಗ್ಗೆ ಮಾಹಿತಿ ಬಹಿರಂಗಪಡಿಸದಂತೆ ಒತ್ತಡ ಹೇರಲಾಗಿದೆ. ದೀಪಕ್ ಪೋಟೋ ಲೀಕ್ ಮಾಡದಂತೆಯೂ ದೊಡ್ಡ ಮೊತ್ತದ ಡೀಲ್‌ಗ ಮುಂದಾದ ಆರೋಪ ಕೇಳಿಬಂದಿದೆ. ಆದರೆ ಹಂತಕ ದೀಪಕ್ ಪೋಟೋ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ. ದೀಪಕ್, ಪ್ರಭಾವಿ ರಾಜಕಾರಣಿ ಸೋದರಿಯ ಮಗಳ ಪತಿ ಎಂದು ತಿಳಿದುಬಂದಿದೆ.

Continue Reading

ಪ್ರಮುಖ ಸುದ್ದಿ

Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

Darshan Arrested: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬೀಗರ ಊಟ ನಡೆಯುತ್ತಿದೆಯೇ? ಅಲ್ಲಿ ಯಾಕೆ ಶಾಮಿಯಾನ ಹಾಕಿದ್ದಾರೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಠಾಣೆಯಲ್ಲೇ ಮದುವೆ ಮನೆ, ಬೀಗರ ಊಟ ಹೀಗೆ ಸಾಲು ಸಾಲು ಕಮೆಂಟ್​ಗಳು ಬಂದಿವೆ.

VISTARANEWS.COM


on

Darshan Arrested
Koo

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಸೆರೆಯಾಗಿರುವ ನಟ ದರ್ಶನ್(Darshan Arrested) ಮತ್ತು ಆತನ ಗ್ಯಾಂಗ್​ ಸದ್ಯ ಅನ್ನಪೂರ್ಣೇಶ್ವರಿನಗರ ಪೊಲೀಸ್​ ಠಾಣೆಯ ಲಾಕ್​ಅಪ್​ನಲ್ಲಿದ್ದಾರೆ. ಕೋರ್ಟ್​​ನಿಂದ ಕಸ್ಟಡಿಗೆ ಪಡೆದಿರುವ ಪೊಲೀಸರು ಸ್ಥಳ ಮಹಜರು ಸೇರಿದಂತೆ ನಾನಾ ಕಾನೂನು ಹಾಗೂ ತನಿಖಾ ಪ್ರಕ್ರಿಯಗಳನ್ನು ನಡೆಸುತ್ತಿದ್ದಾರೆ. ಹೈಪ್ರೊಫೈಲ್ ಕೇಸ್​ ಆಗಿದ್ದರಿಂದ ಪೊಲೀಸ್​ ಠಾಣೆಯ ಕಡೆಗೆ ಮಾಧ್ಯಮಗಳು ಹಾಗೂ ಜನರ ದೃಷ್ಟಿ ನೆಟ್ಟಿರುವುದು ಸಹಜ. ಆದರೆ ಎಲ್ಲರ ಕಣ್ತಪ್ಪಿಸಲು ಉದ್ದೇಶಿಸಿರುವ ಪೊಲೀಸರು ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ್ದಾರೆ. ಇದು ಸಾರ್ವಜನಿಕರ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್​ನಂಥ ಕೊಲೆಗಾರರು ಇರುವ ಸ್ಟೇಷನ್​​ಗೆ ಶಾಮಿಯಾನ ಹಾಕಿರುವ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ. ಇವೆಲ್ಲದರ ನಡುವೆ ಪೊಲೀಸರ ಶಾಮಿಯಾನ ತಂತ್ರ ಸೋಶಿಯಲ್ ಮೀಡಿಯಾಗಳಲ್ಲಿ ಟ್ರೋಲ್ ಆಗಿದೆ.

ದರ್ಶನ್​ಗೆ ಸಿಗರೇಟ್​, ಹೆಂಡವೆಂದರೆ ಬಲು ಪ್ರೀತಿ. ಪೊಲೀಸರ ವಶದಲ್ಲಿದ್ದ ಸಮಯದಲ್ಲೂ ಎಣ್ಣೆ, ಕೊಡಿ ಎಂದು ಕೇಳಿದ್ದಾರೆ ಎಂಬುದಾಗಿಯೂ ಸುದ್ದಿಯಾಗಿತ್ತು. ನ್ಯಾಯಾಲಯದಿಂದ ತಮ್ಮ ಕಸ್ಟಡಿಗೆ ಪಡೆದ ಮೊದಲ ದಿನವೇ ಪೊಲೀಸರು ಚಿಕ್ಕಪೇಟೆ ಬಿರಿಯಾನಿ ತಂದುಕೊಟ್ಟು ಸುದ್ದಿಯಾಗಿದ್ದರು. ಹೀಗಾಗಿ ಪೊಲೀಸರು ತಮಗೆ ಬೇಕಾದ ರೀತಿಯಲ್ಲಿ ವರ್ತಿಸಲು ಹಾಗೂ ದರ್ಶನ್​ ಗ್ಯಾಂಗ್​ನ ಬೇಕು, ಬೇಡಗಳನ್ನು ಪೂರೈಸಲು ಶಾಮಿಯಾನ ಹಾಕಿದ್ದಾರೆ ಎಂಬ ಊಹಾಪೋಹಗಳೇ ಹೆಚ್ಚಾಗಿದೆ.

ತರೇಹವಾರಿ ಚರ್ಚೆ

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಬೀಗರ ಊಟ ನಡೆಯುತ್ತಿದೆಯೇ? ಅಲ್ಲಿ ಯಾಕೆ ಶಾಮಿಯಾನ ಹಾಕಿದ್ದಾರೆ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಠಾಣೆಯಲ್ಲೇ ಮದುವೆ ಮನೆ, ಬೀಗರ ಊಟ ಹೀಗೆ ಸಾಲು ಸಾಲು ಕಮೆಂಟ್​ಗಳು ಬಂದಿವೆ.

ಪ್ರಮಾಣಿಕವಾಗಿ ತನಿಖೆ ನಡೆಸುವವರಿಗೆ ಯಾಕೆ ಬೇಕು ಈ ಶಾಮಿಯಾನದ ಮರೆಯಾಕೆ ಇನ್ನೊಬ್ಬರು ಪ್ರಶ್ನಿಸಿದ್ದಾರೆ. ಪೊಲೀಸರ ಮೊದಲ ದಿನದ ಅರ್ಭಟ ಈಗ ಕಡಿಮೆಯಾಗಿದೆ, ಶಾಮಿಯಾನದ ಕಳ್ಳಾಟಕ್ಕೆ ಬಂದಿದ್ದೇಕೆ ಎಂದು ಪ್ರಶ್ನಿಸಿದ್ದಅರೆ. ನಿಜವಾಗ್ಲೋ ಇದು ಪೊಲೀಸ್ ಠಾಣೆಯೋ ಮದುವೆ ಮಂಟಪವೊ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ. ಇನ್ನೊಬ್ಬರು ನಾವೂ ಠಾಣೆಗೆ ಹೋದರೆ ಊಟ ಇದೆಯಾ ಎಂದು ಕೇಳಿದ್ದಾರೆ.

ಇದನ್ನೂ ಓದಿ: V Somanna : ತಮ್ಮನ್ನು ಕಡೆಗಣಿಸಿದ ಜಿಲ್ಲಾಧಿಕಾರಿ, ಸಿಇಒಗೆ ಕೇಂದ್ರ ಸಚಿವ ಸೋಮಣ್ಣ ತರಾಟೆ

ಪೊಲೀಸ್ ಠಾಣೆಯ ಗೇಟೂಗೂ ಶಾಮಿಯಾನ ಯಾಕೆ? ಒಳಗೆ ಆತ ಎಣ್ಣೆ ಹೊಡೆಯೋದು ಸಿಗರೇಟು ಸೇದೋದು ಕಾಣಬಾರದು ಅಂಥನಾ ಇನ್ನೊಬ್ಬರು ಪ್ರಶ್ನಿಸಿದ್ದಾರೆ. ಅನ್ನಪೂರ್ಣೇಶ್ವರಿ ಸ್ಟೇಷನ್​ನಲ್ಲಿ ಇನ್ವೆಸ್ಟಿಗೇಷನ್ ನಡಿತಿಯೆಯಾ ಅಥವಾ ಫಂಕ್ಷನ್ ನಡೆಯುತ್ತಿದೆಯಾ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ.

ಶಾಮಿಯಾನ, ಪರ್ದಾ ಎಲ್ಲ ಪೊಲೀಸ್​ ಸ್ಟೇಷನ್​ಗೆ ಯಾಕೆ ಹಾಕುತ್ತಾರೆ. ಆರಕ್ಷಕ ಠಾಣೆ ಅರ್ಥ ಕಳೆದುಕೊಳ್ಳುತ್ತದೆ. ಇಸ್ಸಿ ಮೊದಲು ತೆಗಿರಿ ಇದನ್ನು ಎಂದು ಬರೆದುಕೊಂಡಿದ್ದಾರೆ. ಪೊಲೀಸರು ಶಾಮಿಯಾನ ಹಾಕಿದ್ದು ಯಾಕೆ ಗೊತ್ತಾ? ಒಳಗೆ ಪ್ರೈವೆಸಿ ಮ್ಯಾಟರ್ ನಡೀತಿದೆ ಎಂದು ಇನ್ನೊಬ್ಬರು ಬರೆದಿದ್ದಾರೆ. ಇವತ್ತು ಶಾಮಿಯಾನ ಹಾಕ್ತಾರೆ, ನಾಳೆ ತಗಡು ಹೊಡೆಸ್ತಾರೆ ಎಂದು ಇನ್ನೊಬ್ಬರು ಬರೆದುಕೊಂಡಿದ್ದಾರೆ.

Continue Reading

ಕರ್ನಾಟಕ

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Pralhad Joshi: ರಾಜ್ಯದಲ್ಲಿ ಕಾಂಗ್ರೆಸ್‌ಗೆ ಪ್ರಸಕ್ತ ಲೋಕಸಭೆ ಚುನಾವಣೆ ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿದ್ದಾರೆ.

VISTARANEWS.COM


on

Union Food and Consumer Affairs Minister Pralhad Joshi latest statement
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್‌ಗೆ (Congress) ಲೋಕಸಭೆ ಚುನಾವಣೆ (Lok Sabha Election) ಸೋಲನ್ನು ಅರಗಿಸಿಕೊಳ್ಳಲಾಗಿಲ್ಲ. ಹೀಗಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ರಾಜಕೀಯ ವೈಷಮ್ಯ ತೋರುತ್ತಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ದುರಾಡಳಿತ ಮರೆಮಾಚಲು ಮಾಜಿ ಸಿಎಂ, 81 ವರ್ಷದ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಇಲ್ಲಸಲ್ಲದ ಪ್ರಕರಣ ದಾಖಲಿಸಿ ಷಡ್ಯಂತ್ರ ನಡೆಸುತ್ತಿದೆ. ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅದನ್ನು ಜೀರ್ಣಿಸಿಕೊಳ್ಳಲಾಗದೆ ಆಡಳಿತವನ್ನು ಮನಬಂದಂತೆ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮೂರ್ನಾಲ್ಕು ತಿಂಗಳ ಹಿಂದೆ ಮಾಜಿ ಸಿಎಂ ಬಿ.ಎಸ್.ವೈ ವಿರುದ್ಧ ಪೋಸ್ಕೋ ಪ್ರಕರಣ ದಾಖಲಿಸಿದ ಮಹಿಳೆ ಮಾನಸಿಕ ಅಸ್ವಸ್ಥಳು, ದುರುದ್ದೇಶದಿಂದ ದೂರು ನೀಡಿದ್ದಾಳೆ ಎಂದು ಆಗಲೇ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಆದರೆ ಈಗ ಚುನಾವಣೆ ಮುಗಿದ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಹೊಸ ಡ್ರಾಮಾ ಶುರು ಮಾಡಿದ್ದಾರೆ ಎಂದು ಸಚಿವರು ಖಂಡಿಸಿದ್ದಾರೆ.

ಆ ಮಹಿಳೆ ಈಗಾಗಲೇ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ರಾಜಕಾರಣಿಗಳ ಮೇಲೆ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾಳೆ ಎಂದೂ ಗೃಹ ಮಂತ್ರಿಗಳೇ ಖುದ್ದಾಗಿ ಈ ಹಿಂದೆ ಹೇಳಿದ್ದರು. ಈಗ ತಮ್ಮ ದುರಾಡಳಿತವನ್ನು ಮರೆಮಾಚಲು ಬಿಜೆಪಿ ವರಿಷ್ಠ ಬಿಎಸ್‌ವೈ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್ ಮೂಲಕ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ಇಲ್ಲ ಸಲ್ಲದ ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎಳೆಯುತ್ತಿರುವುದು ರಾಜಕೀಯ ವೈಷಮ್ಯ ಸರಿ. ಅವರ ಈ ದುರ್ಬುದ್ಧಿಗೆ ತಕ್ಕ ಪಾಠ ಕಲಿಯಲಿದ್ದಾರೆ ಎಂದು ಸಚಿವ ಜೋಶಿ ಎಚ್ಚರಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

Pradeep Eshwar: ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೋಲಿನ ಬಗ್ಗೆ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಕ್ರಿಯಿಸಿದ್ದಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.

VISTARANEWS.COM


on

Pradeep Eshwar
Koo

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಬಳಿಕ ಮತ್ತೆ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮದ ಮೂಲಕ ಮನೆಮನೆಗೆ ತೆರಳಿ ಜನರ ಅಹವಾಲು ಸ್ವೀಕರಿಸಲು ಶಾಸಕ ಪ್ರದೀಪ್‌ ಈಶ್ವರ್‌ ಮುಂದಾಗಿದ್ದಾರೆ. ಈ ವೇಳೆ ಕ್ಷೇತ್ರದ ನೂತನ ಸಂಸದ ಡಾ.ಕೆ.ಸುಧಾಕರ್‌ ಅವರಿಗೆ ಶುಭ ಹಾರೈಸಿರುವ ಅವರು, ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರ್ತಾರೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ, ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ, ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ ಎಂದು ಕಾರ್ಯಕರ್ತರಿಗೆ ಹೇಳಿದರು.

ಕ್ಷೇತ್ರದಲ್ಲಿ ಡಾ.ಕೆ. ಸುಧಾಕರ್‌ಗೆ ಒಂದು ವೋಟ್ ಲೀಡ್ ಬಂದರೂ ರಾಜೀನಾಮೆ ಕೊಡೋದಾಗಿ ಹೇಳಿದ್ದರಿಂದ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಗಳು ಕೇಳಿಬಂದಿದ್ದವು. ಹೀಗಾಗಿ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಶುಕ್ರವಾರ ʼನಮಸ್ತೆ ಚಿಕ್ಕಬಳ್ಳಾಪುರʼ ಕಾರ್ಯಕ್ರಮ ನಡೆಸಲಾಯಿತು. ನಗರದ 17ನೇ ವಾರ್ಡ್‌ನಲ್ಲಿ ಮನೆಮನೆಗೆ ತೆರಳಿ ಶಾಸಕ ಪ್ರದೀಪ್‌ ಈಶ್ವರ್, ಜನರ ಅಹವಾಲು ಆಲಿಸಿದರು.

ಈ ವೇಳೆ ನೂತನ‌ ಸಂಸದ ಡಾ.ಕೆ.ಸುಧಾಕರ್‌ಗೆ ಶುಭ ಹಾರೈಸಿದ ಪ್ರದೀಪ್ ಈಶ್ವರ್, ಒಳ್ಳೆ ಕೆಲಸ ಮಾಡಿಕೊಂಡು ಹೋಗಲಿ. ಜನಾಭಿಪ್ರಾಯ ಸುಧಾಕರ್ ಪರವಾಗಿ ಬಂದಿದೆ. ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಗಲಾಟೆಗಳಾಗುತ್ತಿವೆ. ನನ್ನ ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ತಕ್ಷಣ ನಾನು ರಿಯಾಕ್ಟ್ ಮಾಡಿದ್ರೆ ನಮ್ಮ ಕಾರ್ಯಕರ್ತರು, ಅವರ ಕಾರ್ಯಕರ್ತರು ಹೊಡೆದಾಡಿಕೊಳುತ್ತಾರೆ. ನಾನು ಬೈಯ್ಯಬೇಕಾ, ನಾನೇ ಅಖಾಡಕ್ಕೆ ಇಳಿಯುತ್ತೇನೆ‌. ನನ್ನ ಕಾರ್ಯಕರ್ತರನ್ನು ಯಾವುದೇ ಕಾರಣಕ್ಕೂ ಬಲಿ ಕೊಡಲ್ಲ. ನನ್ಮ ಅಸ್ತಿತ್ವದ ಪ್ರಶ್ನೆ ನಾನೇ ಕಾಪಾಡಿಕೊಳ್ತೀನಿ ಎಂದರು.

ಇದನ್ನೂ ಓದಿ | DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

ನಾಲ್ಕೈದು ಕಡೆ ದಾಳಿಯಾದರೂ ನಾನು ತಾಳ್ಮೆಯಿಂದ ಇದ್ದೇನೆ. ಕೆ.ಸುಧಾಕರ್ ದೆಹಲಿಯಲ್ಲಿ ಆರಾಮಾಗಿ ಇರುತ್ತಾರೆ. ನಾನು ಬೆಂಗಳೂರಿನಲ್ಲಿ ಆರಾಮಾಗಿ ಇರುತ್ತೇನೆ. ನಾವು ನಮ್ಮ ಹೆಂಡತಿ‌, ಮಕ್ಕಳ ಜೊತೆ ಆರಾಮಾಗಿರ್ತೀವಿ. ನೀವ್ಯಾಕೆ ನಮಗೋಸ್ಕರ ಹೊಡೆದಾಡ್ತೀರಾ? ಯಾಕೆ ಸುಮ್ಮನೆ ಬಟ್ಟೆ ಹರ್ಕೋತೀರಾ? ನಮಗೆಲ್ಲಾ ನಮ್ಮ ಹೆಂಡತಿ ಮಕ್ಕಳೇ ಮುಖ್ಯ ಎಂದು ಹೇಳುವ ಮೂಲಕ ನಾವೆಲ್ಲಾ ಒಂದೇ ಎನ್ನುವ ಅರ್ಥದಲ್ಲಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ.

ಮನೆಗೆ ಕಲ್ಲು ಹೊಡೆದ ನಾಲ್ಕು ಜನರನ್ನು ಠಾಣೆಗೆ ಕರೆಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೇಕ್ ರಾಜೀನಾಮೆ ಪತ್ರ ಹರಿಬಿಟ್ಟಿದ್ದಾರೆ. ಮೈಸೂರಿನ ಅವಿನಾಶ್ ಜೊತೆ ಇನ್ನಿಬ್ಬರು ಹುಡುಗರು ಈ ರೀತಿ ಮಾಡಿದ್ದಾರೆ. ಫೇಕ್ ರಾಜೀನಾಮೆ ಲೆಟರ್ ಹರಿಬಿಟ್ಟಿರುವ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಅಖಾಡದಲ್ಲಿ ನಾನು ಇದ್ದಿದ್ರೆ ಅದರ ಕಥೆ ಬೇರೆ ಆಗ್ತಿತ್ತು

ಕ್ಷೇತ್ರದಲ್ಲಿ ಪಕ್ಷದ ಸೋಲಿಗೆ ಪರೋಕ್ಷವಾಗಿ ರಕ್ಷಾರಾಮಯ್ಯಗೆ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ವಿರುದ್ಧ ಅಖಾಡದಲ್ಲಿ ನಾನು ಇದ್ದಿದ್ದರೆ ಅದರ ಕಥೆ ಬೇರೆ ಆಗ್ತಿತ್ತು. ಎಲ್ಲರೂ ಪ್ರದೀಪ್ ಈಶ್ವರ್ ಆಗಕ್ಕೆ ಸಾಧ್ಯವಿಲ್ಲ. ಇನ್ನು ಮುಂದೆ ನಾನೆ ಮನೆಮನೆಗೆ ಸುತ್ತುತ್ತೇನೆ. ಕಾರ್ಯಕರ್ತರನ್ನು ಬಲಪಡಿಸುತ್ತೇನೆ. ಕಾಂಗ್ರೆಸ್ ಪಕ್ಷ ದೊಡ್ಡದು, ಪ್ರದೀಪ್ ಈಶ್ವರ್ ಅಲ್ಲ. ನನ್ನಂಥಹ ಅಹಿಂದ ಹುಡುಗರ ರಕ್ಷಣೆ ಸಿಗಬೇಕಾದರೆ ಕಾಂಗ್ರೆಸ್ ಉಳಿಯಬೇಕು. ಚಿಕ್ಕಬಳ್ಳಾಪುರಲ್ಲಿ ಈ ಸೋಲು ಸೋಲಲ್ಲ, ಗೆಲುವು ಇನ್ನು ಐದು ವರ್ಷ ಮುಂದಕ್ಕೆ ಹೋಗಿದೆ ಅಷ್ಟೇ ಎಂದು ಹೇಳಿದರು.

ಇದನ್ನೂ ಓದಿ | Rahul Gandhi: ನನ್ನ ಮೇಲೆ ಮೋದಿಗಿರುವಷ್ಟು ದೇವರ ಕೃಪೆ ಇಲ್ಲ ಎಂದ ರಾಹುಲ್‌ ಗಾಂಧಿ; ಏಕಿಂಥ ಮಾತು?

ಯಾರೇ ಆಗಿದ್ರೂ ಶಿಕ್ಷೆ ಆಗಲೇ ಆಗುತ್ತೆ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಕೇಸ್‌ನಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಇಲ್ಲ. ರೇಣುಕಾಸ್ವಾಮಿ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಪ್ಪಿತಸ್ತರು ಯಾರೆ ಇದ್ದರೂ ಕಾನೂನು ಕ್ರಮ ಜರುಗಿಸಬೇಕು. ಬೆಂಗಳೂರಿನ ಪೊಲೀಸರು ಬಲಿಷ್ಠವಾಗಿದ್ದಾರೆ. ಕಾನೂನಿಗಿಂತ ದೊಡ್ಡವರು ಈ ಭೂಮಿ ಮೇಲೆ ಯಾರೂ ಇಲ್ಲ. ಯಾರೇ ಆಗಿದ್ರೂ ತಪ್ಪಿಗೆ ಶಿಕ್ಷೆ ಆಗಲೇ ಆಗುತ್ತೆ ಎಂದು ಪ್ರದೀಪ್‌ ಈಶ್ವರ್‌ ಅಭಿಪ್ರಾಯಪಟ್ಟರು.

Continue Reading
Advertisement
Viral Video
ವಿದೇಶ56 seconds ago

ಹಿಂದೂಗಳ ಆಸ್ತಿ ಲೂಟಿ ಮಾಡಿ, ದೇವರ ವಿಗ್ರಹ ಕದ್ದು ಪಾಕಿಸ್ತಾನ ಸ್ಥಾಪನೆ; ಪಾಕ್‌ ಪತ್ರಕರ್ತನ ವಿಡಿಯೊ ವೈರಲ್‌

Actor Darshan
ಪ್ರಮುಖ ಸುದ್ದಿ9 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್; ಆರೋಪಿಗಳಿಗೆ ನೀಡಲು ರೆಸ್ಟೋರೆಂಟ್‌ನಲ್ಲಿ ಇಟ್ಟಿದ್ದ 30 ಲಕ್ಷ ಸೀಜ್

Flight issues
Latest12 mins ago

flight problems: ವಿಮಾನದಲ್ಲಿ ಕೈಕೊಟ್ಟ ಎಸಿ; ಸೆಕೆ ತಾಳಲಾರದೆ ಬಟ್ಟೆ ಬಿಚ್ಚಿದ ಪ್ರಯಾಣಿಕರು!

Darshan Arrested
ಪ್ರಮುಖ ಸುದ್ದಿ12 mins ago

Darshan Arrested : ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಬೀಗರೂಟವೇ? ಶಾಮಿಯಾನ ಹಾಕಿದ ಪೊಲೀಸರ ನಡೆ ಫುಲ್ ಟ್ರೋಲ್​!

NEET UG 2024
ಶಿಕ್ಷಣ28 mins ago

NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

Union Food and Consumer Affairs Minister Pralhad Joshi latest statement
ಕರ್ನಾಟಕ29 mins ago

Pralhad Joshi: ಚುನಾವಣೆ ಸೋಲಿನ ಸೇಡಿಗಾಗಿ ಯಡಿಯೂರಪ್ಪ ಮೇಲೆ ರಾಜಕೀಯ ವೈಷಮ್ಯ; ಪ್ರಲ್ಹಾದ್‌ ಜೋಶಿ

Aliens
ವಿಜ್ಞಾನ39 mins ago

Aliens: ಏಲಿಯನ್‌ಗಳು ಅನ್ಯಗ್ರಹ ಜೀವಿಗಳಲ್ಲ; ಈ ಭೂಮಿಯ ರಹಸ್ಯ ನಿವಾಸಿಗಳು! ಹಾರ್ವರ್ಡ್ ವಿಜ್ಞಾನಿಗಳ ಸಂಶೋಧನೆ

Actress Siri marriage to actor prabhakar
ಬಿಗ್ ಬಾಸ್40 mins ago

Actress Siri: ಬಿಗ್​ಬಾಸ್​ನಲ್ಲಿ ಚಿಗುರಿತಾ ಪ್ರೇಮ? ‘ರಂಗೋಲಿ’ ಖ್ಯಾತಿಯ ಸಿರಿಯ ವರನ್ಯಾರು?

Yusuf Pathan
ಕ್ರೀಡೆ53 mins ago

Yusuf Pathan: ಜಮೀನು ಒತ್ತುವರಿ ಆರೋಪ; ನೂತನ ಸಂಸದ ಯೂಸುಫ್ ಪಠಾಣ್​ಗೆ ನೋಟಿಸ್

Pradeep Eshwar
ಪ್ರಮುಖ ಸುದ್ದಿ56 mins ago

Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌