ಎತ್ತಿನ ಹೊಳೆ ಯೋಜನೆಯಲ್ಲಿ ನೀರು ಬಂದರೆ ಅದೃಷ್ಟ: ದೇವೇಗೌಡ ವ್ಯಂಗ್ಯ - Vistara News

ಕೋಲಾರ

ಎತ್ತಿನ ಹೊಳೆ ಯೋಜನೆಯಲ್ಲಿ ನೀರು ಬಂದರೆ ಅದೃಷ್ಟ: ದೇವೇಗೌಡ ವ್ಯಂಗ್ಯ

ರಾಜ್ಯದ ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎನ್ನುವುದು ಯಾತ್ರೆಯ ಪ್ರಮುಖ ಉದ್ದೇಶ. ಇದಕ್ಕಾಗಿ ರಥಗಳನ್ನು ರೂಪಿಸಿಕೊಂಡು ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಲಾಗುತ್ತಿದೆ.

VISTARANEWS.COM


on

Threatening people with false cases, HD Deve Gowda files complaint against transfer of 3 inspectors
Devegowda janatha dala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

Kiran Kumar D K,ಚಿಕ್ಕಬಳ್ಳಾಪುರ:

ಕೋಲಾರ ಹಾಗೂ ಚಿಕ್ಕಬಳ್ಳಾಪುರಗಳಿಗೆ ಶಾಶ್ವತ ಕುಡಿಯುವ ನೀರನ್ನು ಕಲ್ಪಿಸಲು ಪ್ರಮುಖವಾದದ್ದು ಎನ್ನಲಾಗುವ ಎತ್ತಿನ ಹೊಳೆ (Ettina Hole) ಯೋಜನೆಯಿಂದ ನೀರು ಬಂದರೆ ಅದು ಈ ಭಾಗದ ಜನರ ಪುಣ್ಯ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ (H.D. Devegowda) ವ್ಯಂಗ್ಯವಾಡಿದ್ದಾರೆ.

ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಜಾತ್ಯತೀತ ಜನತಾದಳ ಪಕ್ಷದ (JDS) ವತಿಯಿಂದ ಆಯೋಜಿಸಿರುವ ಜನತಾ ಜಲಧಾರೆ ಕಾರ್ಯಕ್ರಮದ ಭಾಗವಾಗಿ ಚಿಕ್ಕಬಳ್ಳಾಪುರದ ಪರೇಸಂದ್ರದಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯದಲ್ಲಿ ಕೃಷ್ಣಾ, ಕಾವೇರಿ ಹಾಗೂ ಮಹದಾಯಿ ಪ್ರಮುಖ ನದಿಗಳು. ಇವುಗಳ ಜತೆಗೆ 19 ಉಪನದಿಗಳಿವೆ. ಚಿಕ್ಕಬಳ್ಳಾಪುರ, ಕೋಲಾರಕ್ಕೆ ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಎತ್ತಿನ ಹೊಳೆ ಎಂಬ ಯೋಜನೆಯನ್ನು ಸರ್ಕಾರ ಅಂದಾಜು ಮಾಡಿದೆ. ಈ ಯೋಜನೆಗೆ ₹8 ಸಾವಿರ ಕೋಟಿ ಬೇಕಾಗುತ್ತದೆ ಎಂದು 15 ವರ್ಷದ ಹಿಂದೆ ತೀರ್ಮಾನಿಸಲಾಗಿತ್ತು. ನಂತರ ಈ ಮೊತ್ತ ₹12 ಸಾವಿರ ಕೋಟಿಗೆ ಹೆಚ್ಚಳವಾಗಿ, ಈಗ ₹24 ಸಾವಿರ ಕೋಟಿ ಬೇಕಾಗುತ್ತದೆ ಎನ್ನುತ್ತಿದ್ದಾರೆ. ಆ ನೀರು ಚಿಕ್ಕಬಳ್ಳಾಪುರಕ್ಕೆ ಬರುತ್ತೋ ಇಲ್ಲವೋ ಗೊತ್ತಿಲ್ಲ. ಅಷ್ಟರೊಳಗೆ ನಾನೂ ಬದುಕಿರುತ್ತೀನೊ ಇಲ್ಲವೋ ಗೊತ್ತಿಲ್ಲ. ಆ ನೀರು ಬಂದರೆ ನಿಮ್ಮ ಪುಣ್ಯ ಅಷ್ಟೆ ಎಂದರು.

ವಾಗ್ದಾನ ಈಡೇರದಿದ್ದರೆ ಪಕ್ಷವೇ ವಿಸರ್ಜನೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕು ಎನ್ನುವುದು ಯಾತ್ರೆಯ ಪ್ರಮುಖ ಉದ್ದೇಶ. ಇದಕ್ಕಾಗಿ ರಥಗಳನ್ನು ರೂಪಿಸಿಕೊಂಡು ರಾಜ್ಯದ 180 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ ಮಾಡಲಾಗುತ್ತಿದೆ. ಏಪ್ರಿಲ್‌ 16ರಿಂದ ಚಾಲನೆ ನೀಡಲಾಗಿರುವ ಈ ರಥಗಳು ಎಲ್ಲ ಕಡೆಗಳಿಂದ ನದಿಯ ನೀರನ್ನು ಸಂಗ್ರಹಿಸಿಕೊಂಡು ಬರುತ್ತವೆ. ಅವುಗಳನ್ನು ಬೆಂಗಳೂರಿನ ಜೆಡಿಎಸ್‌ ಕಚೇರಿ ಬಳಿ ಇರಿಸಿ 2023ರ ಚುನಾವಣೆವರೆಗೆ ಪೂಜೆ ಮಾಡಲಾಗುತ್ತದೆ.

ತಮಗೆ ಐದು ವರ್ಷ ಅಧಿಕಾರ ನೀಡಿದರೆ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನೂ ಪೂರ್ಣಗೊಳಿಸಲಾಗುತ್ತದೆ ಎನ್ನುವುದು ಎಚ್‌.ಡಿ. ಕುಮಾರಸ್ವಾಮಿಯವರ ವಾಗ್ದಾನ. ಹಾಗೇನಾದರೂ ತಾವು ಐದು ವರ್ಷದಲ್ಲಿ ಮಾತನ್ನು ಈಡೇರಿಸದಿದ್ದರೆ ಜೆಡಿಎಸ್‌ ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದು ಹೇಳಿದ್ದಾರೆ.

ಹೆಚ್ಚಿನ ಓದಿಗಾಗಿ: JDS ಚುನಾವಣಾ ರಣಕಹಳೆ ಇಂದಿನಿಂದ: ಜನತಾ ಜಲಧಾರೆಗೆ ದೇವೇಗೌಡರಿಂದ ಚಾಲನೆ

ಯಾತ್ರೆಯ ಪ್ರಮುಖ ಉದ್ದೇಶ
  1. ಜಲಸಂಪನ್ಮೂಲಗಳ ಸಮರ್ಪಕ ನಿರ್ವಹಣೆಗಾಗಿ ಸಮಂಜಸ ಯೋಜನೆಗಳ ಶಾಶ್ವತೀಕರಣ
  2. ಶತಮಾನಗಳು ಕಳೆದರೂ ಶಾಪಗ್ರಸ್ಥವಾಗಿರುವ ನಾಲೆ, ಕಾಲುವೆಗಳ ನವೀಕರಣ
  3. ನಾಡಿನ ನಾಳಿನ ಭವಿಷ್ಯಕ್ಕಾಗಿ ನೂತನ ಆಣೆಕಟ್ಟುಗಳ ನಿರ್ಮಾಣ
  4. ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಪುನಶ್ಚೇತನ
  5. ಮನೆಮನೆಗೆ ಶುದ್ಧ ಕುಡಿಯುವ ನೀರು ಕೊಡುವ ಜಲಯೋಜನೆಯ ಸಾಕ್ಷಾತ್ಕರಣ
  6. ಪರಿಸರ ಕಾಳಜಿಯೊಂದಿಗೆ ಜಲಮೂಲಗಳ ಸಮೃದ್ಧೀಕರಣ
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024: ಮೋದಿಯವರೇ ಜಾತಿ ಗಣತಿ ಬಗ್ಗೆ ನಿಮ್ಮ ನಿಲುವೇನು? ಮೌನ ಮುರಿಯಿರಿ: ರಾಹುಲ್‌ ಗಾಂಧಿ ಸವಾಲು

Lok Sabha Election 2024: ಈ ದೇಶದ ಶೇಕಡಾ 90ರಷ್ಟು ಜನರಿಗೆ ಅವರ ಹಕ್ಕುಗಳ ಬಗ್ಗೆ ಮಾತನಾಡಲೂ ಸಾಧ್ಯವಿಲ್ಲ. ಇದಕ್ಕೆಲ್ಲ ಉತ್ತರ ಸಿಂಪಲ್ ಆಗಿದೆ. ಅವರೆಲ್ಲ ಕಾರ್ಮಿಕ ವರ್ಗದಲ್ಲಿ ದುಡಿಯುತ್ತಾರೆ. ರೈತರಿದ್ದಾರೆ, ಹೊರಗುತ್ತಿಗೆಯಲ್ಲಿ ದುಡಿಯುತ್ತಾರೆ. ಈ ರೀತಿಯ ದೇಶ ನಮಗೆ ನಿಮಗೆ ಬೇಕಿದೆಯಾ? ನಿಮ್ಮ ಧ್ವನಿ ಇಲ್ಲ, ನಿಮಗೆ ಪಾಲಿಲ್ಲ. ರೈತರ ಸಾಲ ಮನ್ನಾ ಮಾಡಿದರೆ ಅವರನ್ನು ಹಾಳು ಮಾಡುತ್ತೀರಾ ಎಂದು ಹೇಳುತ್ತಾರೆ. ಆದರೆ, ಸಾಹುಕಾರರ ಸಾಲಾ ಮನ್ನಾ ಮಾಡಿದ್ದಾರಲ್ಲ? ಉದ್ಯೋಗ ಸೃಷ್ಟಿ ಮಾಡುವವರಿಗೆ ನಮ್ಮ ಬೆಂಬಲ ಖಂಡಿತ ಇದೆ. ಅದಕ್ಕಾಗಿ ನಾನು ಕರ್ನಾಟಕದ ಸರ್ಕಾರ ಬಗ್ಗೆ ಹೆಮ್ಮೆ ಪಡುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

VISTARANEWS.COM


on

Lok Sabha Election 2024 what is stand on caste census Rahul Gandhi question to PM Modi
Koo

ಕೋಲಾರ: ಪ್ರಧಾನಿ ನರೇಂದ್ರ ಮೋದಿ ಅವರೇ ನನ್ನ ಮಾತನ್ನು ಸರಿಯಾಗಿ ಕೇಳಿಸಿಕೊಳ್ಳಿ, ನೀವು ಜಾತಿ ಜನಗಣತಿ ಪರವಾಗಿ ಇದ್ದೀರಾ ಅಥವಾ ಜನಗಣತಿ ವಿರುದ್ಧವಾಗಿ ಇದ್ದೀರಾ? ನಾನು ಜಾತಿ ಗಣತಿ ಬಗ್ಗೆ ಪ್ರಸ್ತಾಪ ಮಾಡಿದಾಗಲೆಲ್ಲ ನೀವು ಮೌನ ವಹಿಸುತ್ತೀರಿ. ಹೀಗಾಗಿ ನೀವು ಯಾವುದರ ಪರವಾಗಿ ಇದ್ದೀರಿ ಎಂಬುದನ್ನು ಸ್ಪಷ್ಟಪಡಿಸಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೋಲಾರದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಪ್ರಚಾರ ಸಮಾವೇಶದಲ್ಲಿ ಪ್ರಶ್ನೆ ಮಾಡಿದರು.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚೊಕ್ಕಂಡಹಳ್ಳಿ ಗೇಟ್ ಬಳಿ ಕಾಂಗ್ರೆಸ್‌ ಏರ್ಪಡಿಸಿದ್ದ ಬೃಹತ್‌ ಸಮಾವೇಶದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ. ಗೌತಮ್‌ ಪರವಾಗಿ ಮತಯಾಚನೆ ಮಾಡಿ ಮಾತನಾಡಿದ ರಾಹುಲ್‌ ಗಾಂಧಿ, ದೇಶದಲ್ಲಿ ಜಾತಿ ಗಣತಿಯನ್ನು ಮಾಡದೆ ನ್ಯಾಯ ಕೊಡಲು ಸಾಧ್ಯವಿಲ್ಲ ಎಂದು ಹೇಳಿದರು.

ಉದ್ಯೋಗ ವ್ಯವಸ್ಥೆಯನ್ನು ಹಾಳು ಮಾಡಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ವ್ಯವಸ್ಥೆಯನ್ನೇ ಹಾಳು ಮಾಡಿಟ್ಟಿದ್ದಾರೆ. ನಾನು ಪ್ರಮುಖ 22 ಉದ್ಯಮಿಗಳ ಬಳಿ ಇರುವ ಉನ್ನತ ಹುದ್ದೆಗಳನ್ನು ಪರಿಶೀಲನೆ ಮಾಡಿದ್ದೇನೆ. ಅಲ್ಲಿ ದಲಿತ, ಹಿಂದುಳಿತ, ಅಲ್ಪಸಂಖ್ಯಾತ, ಬಡವರಿಗೆ ಸ್ಥಾನವೇ ಇಲ್ಲ. ಕಂಪನಿಗಳ ಹಿರಿಯ ಉದ್ಯೋಗಗಳಲ್ಲಿ ಶೇಕಡಾ 90ರಷ್ಟು ಕಡೆಗಳಲ್ಲಿ ಈ ಸಮುದಾಯಗಳ ಪ್ರತಿನಿಧಿಗಳು ಇಲ್ಲ. ಇನ್ನು ದೇಶದ ಸರ್ಕಾರಿ ಹುದ್ದೆಗಳನ್ನು ಗಮನಿಸಿದ್ದೇನೆ. ಹಿಂದುಳಿದ ಶೇಕಡಾ 50ರಷ್ಟು ಮಂದಿಗೆ ಸರ್ಕಾರಿ ಹುದ್ದೆ ಸಿಕ್ಕಿದೆ. ಆದರೆ, ಉನ್ನತ ಹುದ್ದೆಗಳಲ್ಲಿ ಬೆರಳೆಣಿಕೆಯಷ್ಟು ಮಂದಿ ಇದ್ದಾರೆ. ಅವರಿಗೂ ಕೆಲಸಕ್ಕೆ ಬಾರದ ಸ್ಥಾನಗಳನ್ನು ನೀಡಲಾಗಿದೆ. ಇವೆಲ್ಲಕಿಂತ ಅವಮಾನಕರ ವಿಷಯವೆಂದರೆ ದೇಶದ ಬಜೆಟ್‌ನಲ್ಲಿ ದಲಿತ, ಪರಿಶಿಷ್ಟರು, ಹಿಂದುಳಿದವರ ಪಾಲು ಕೇವಲ 6 ಪರ್ಸೆಂಟ್ ಆಗಿದೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಕರ್ನಾಟಕದ ಸರ್ಕಾರ ಬಗ್ಗೆ ಹೆಮ್ಮೆ ಪಡುತ್ತೇನೆ

ಈ ದೇಶದ ಶೇಕಡಾ 90ರಷ್ಟು ಜನರಿಗೆ ಅವರ ಹಕ್ಕುಗಳ ಬಗ್ಗೆ ಮಾತನಾಡಲೂ ಸಾಧ್ಯವಿಲ್ಲ. ಇದಕ್ಕೆಲ್ಲ ಉತ್ತರ ಸಿಂಪಲ್ ಆಗಿದೆ. ಅವರೆಲ್ಲ ಕಾರ್ಮಿಕ ವರ್ಗದಲ್ಲಿ ದುಡಿಯುತ್ತಾರೆ. ರೈತರಿದ್ದಾರೆ, ಹೊರಗುತ್ತಿಗೆಯಲ್ಲಿ ದುಡಿಯುತ್ತಾರೆ. ಈ ರೀತಿಯ ದೇಶ ನಮಗೆ ನಿಮಗೆ ಬೇಕಿದೆಯಾ? ನಿಮ್ಮ ಧ್ವನಿ ಇಲ್ಲ, ನಿಮಗೆ ಪಾಲಿಲ್ಲ. ರೈತರ ಸಾಲ ಮನ್ನಾ ಮಾಡಿದರೆ ಅವರನ್ನು ಹಾಳು ಮಾಡುತ್ತೀರಾ ಎಂದು ಹೇಳುತ್ತಾರೆ. ಆದರೆ, ಸಾಹುಕಾರರ ಸಾಲಾ ಮನ್ನಾ ಮಾಡಿದ್ದಾರಲ್ಲ? ಉದ್ಯೋಗ ಸೃಷ್ಟಿ ಮಾಡುವವರಿಗೆ ನಮ್ಮ ಬೆಂಬಲ ಖಂಡಿತ ಇದೆ. ಅದಕ್ಕಾಗಿ ನಾನು ಕರ್ನಾಟಕದ ಸರ್ಕಾರ ಬಗ್ಗೆ ಹೆಮ್ಮೆ ಪಡುತ್ತೇನೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಮಾಧ್ಯಮಗಳ ವಿರುದ್ಧ ರಾಹುಲ್‌ ಗಂಭೀರ ಆರೋಪ

ಮಾಧ್ಯಮಗಳು ಕೇಂದ್ರದ ಲೋಪಗಳ ಬಗ್ಗೆ ಹೇಳಲ್ಲ. ನಿರುದ್ಯೋಗ, ಜನರ ಸಮಸ್ಯೆ ಬಗ್ಗೆ ಮಾಧ್ಯಮಗಳು ಮಾತನಾಡಲ್ಲ. ಈ ತರಹದ ಮಾಧ್ಯಮಗಳ ಹಾಗೂ ಸುದ್ದಿ ನಿರೂಪಕರ‌ ಪಟ್ಟಿಯೇ ನನ್ನ ಬಳಿ ಇದೆ. ಈ ಮಾಧ್ಯಮಗಳು, ನಿರೂಪಕರು ಕೇಂದ್ರದ ಪರ ಜನಾಭಿಪ್ರಾಯ ರೂಪಿಸುತ್ತಿದ್ದಾರೆ. ಇವರಲ್ಲಿ ಯಾರೂ ಅಹಿಂದ ವರ್ಗದವರು ಇಲ್ಲ. ಹಾಗಾಗಿ ಈ ಮಾಧ್ಯಮಗಳು ದೇಶದ ನಿಜವಾದ ಸಮಸ್ಯೆ ಬಗ್ಗೆ ಮಾತನಾಡಲ್ಲ ಎಂದು ರಾಹುಲ್‌ ಗಾಂಧಿ ಗಂಭೀರ ಆರೋಪ ಮಾಡಿದರು.

ದೊಡ್ಡ ದೊಡ್ಡ ಉದ್ಯಮಿಗಳ ಕಂಪನಿಗಳ ಉನ್ನತ ಹುದ್ದೆಯಲ್ಲಿ ಯಾರೂ ಹಿಂದುಳಿದ ವರ್ಗದವರು ಇಲ್ಲ. ಶೇಕಡಾ 90ರಷ್ಟು ಜನರು ಈ ಕಂಪನಿಗಳ ಭಾಗವೇ ಆಗಿಲ್ಲ. ಶೇಕಡಾ 50ರಷ್ಟು ಒಬಿಸಿಯವರು ದೇಶದಲ್ಲಿದ್ದಾರೆ. 90 ಅಧಿಕಾರಿಗಳ ಪೈಕಿ ಕೇವಲ 3 ಜನ ಒಬಿಸಿಯವರು ಇದ್ದಾರೆ. ದಲಿತರು, ಆದಿವಾಸಿಗಳಿಗೆ ಅಧಿಕಾರದಲ್ಲಿ ಅವಕಾಶವೇ ಇಲ್ಲದಂತಾಗಿದೆ. ದೇಶವನ್ನು ಕೇವಲ ಒಂದು ವರ್ಗದ ಜನ ಮುನ್ನಡೆಸುತ್ತಿದ್ದಾರೆ. ಶೇ. 95 ರಷ್ಟು ಜನರು ದನಿ ಇಲ್ಲದೆ ಬದುಕುತ್ತಲಿದ್ದಾರೆ. ಇಂಥ ಗಂಭೀರ ವಿಚಾರಗಳನ್ನು ಮಾಧ್ಯಮಗಳು ಎಂದೂ ನಿಮಗೆ ತೋರಿಸಲ್ಲ. ಕೇವಲ ನರೇಂದ್ರ ಮೋದಿ ಮುಖವನ್ನು ಮಾಧ್ಯಮಗಳು ತೋರಿಸುತ್ತವೆ ಎಂದು ರಾಹುಲ್‌ ಗಾಂಧಿ ಕಿಡಿಕಾರಿದರು.

ಬಡ ಮಹಿಳೆಯರಿಗೆ 1 ಲಕ್ಷ ರೂಪಾಯಿ ಕೊಡುತ್ತೇವೆ

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಪಂಚ ಗ್ಯಾರಂಟಿಯನ್ನು ಜಾರಿಗೆ ತಂದಿದೆ. ಸಹೋದರಿಯರಿಗೆ ಸಹಾಯ ಧನ‌ ನೀಡುತ್ತಿದೆ, ಉಚಿತ ವಿದ್ಯುತ್ ನೀಡುತ್ತಿದೆ, ಅಕ್ಕಿ ನೀಡುವ ಕಾರ್ಯಕ್ರಮ ನನಗೆ ಖುಷಿ ಕೊಟ್ಟಿದೆ. ಹಸಿವಿನಿಂದ ದೇಶ ಕಟ್ಟಲು ಸಾಧ್ಯವಿಲ್ಲ. ಉಚಿತ ಪ್ರಯಾಣ, ನಿರುದ್ಯೋಗ ಭತ್ಯೆ ನೀರುತ್ತಿರುವುದರಿಂದ ಸಮಾಜಕ್ಕೆ ನ್ಯಾಯ ನೀಡುವ ಕೆಲಸ‌ವನ್ನು ಮಾಡಲಾಗುತ್ತಿದೆ. ಈ ಭಾರಿ‌ ನಮ್ಮ‌ ಸರ್ಕಾರ ಬಂದರೆ ಐದು ಗ್ಯಾರಂಟಿಗಳನ್ನು ನೀಡುತ್ತೇವೆ. ಇವತ್ತು ದೇಶದಲ್ಲಿರುವ ತಾರತಮ್ಯವನ್ನು ಬಿಡಬಾರದು. ನಮ್ಮ‌ ತಂದೆ – ತಾಯಿಗಳಿಗೆ ಮೋಸ ಮಾಡುವಂತಾಗಬಾರದು. ಪ್ರತಿ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತೇವೆ. ರೈತರ ಸಾಲ ಮನ್ನಾ ಮಾಡುತ್ತೇವೆ. ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಯಜಮಾನಿಯರಿಗೆ ವರ್ಷಕ್ಕೆ 24,000 ಕೊಡುತ್ತಿದೆ. ಮೋದಿಯವರೇ ಕೇಳಿಸಿಕೊಳ್ಳಿ, ನೀವು ಅದಾನಿ ಅಂಬಾನಿಗೆ ಕೋಟಿ ಕೋಟಿ‌ ಕೊಡಿ. ನಾವು ಪ್ರತಿ ವರ್ಷ ಈ ದೇಶದ ಬಡ ಮಹಿಳೆಯರಿಗೆ 1 ಲಕ್ಷ ರೂಪಾಯಿ ಕೊಡುತ್ತೇವೆ ಎಂದು ರಾಹುಲ್‌ ಗಾಂಧಿ ಹೇಳಿದರು.

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ ವರ್ಷಕ್ಕೆ 1.24 ಲಕ್ಷ ರೂ. ಜಮೆ: ರಾಹುಲ್‌ ಗಾಂಧಿ

ಇಂದಿರಾ ಗಾಂಧಿ ಹೇಳಿಕೊಟ್ಟ ರಾಜಕೀಯ ಪಾಠ

ಇಲ್ಲಿನ ಜನ ಮೊದಲು ಕೋಲಾರದಲ್ಲಿ ಚಿನ್ನ ತೆಗೆದು ಪರಿಷ್ಕರಣೆ ಮಾಡುತ್ತಿದ್ದರು. ನಾನು ಚಿಕ್ಕವನಿದ್ದಾಗ ನನ್ನ ಅಜ್ಜಿ ಇಂದಿರಾ ಗಾಂಧಿ ಅವರು ಆಡಿದ ಮಾತುಗಳು ಆಗ ಅಷ್ಟಾಗಿ ಅರ್ಥವಾಗಿರಲಿಲ್ಲ. ಆದರೆ, ಅವರು ಅಂದೇ ನನ್ನನ್ನು ರಾಜಕಾರಣಕ್ಕೆ ತಯಾರು ಮಾಡುವ ರೀತಿಯಲ್ಲಿ ಹೇಳುತ್ತಿದ್ದರು ಎಂದು ಈಗ ಅರ್ಥವಾಗಿದೆ. ರಾಜಕೀಯ ಬಹಳ ಕಷ್ಟ ಎಂದು ಹಲವರು ತಿಳಿದುಕೊಂಡಿದ್ದಾರೆ. ಸಾಕಷ್ಟು ಲೆಕ್ಕಾಚಾರಗಳನ್ನು ಹೆಣೆಯಬೇಕು ಎಂದುಕೊಂಡಿದ್ದಾರೆ. ಆದರೆ, ಇಂದಿರಾ ಗಾಂಧಿ ಈ ರೀತಿಯ ರಾಜಕೀಯ ಮಾಡಲಿಲ್ಲ. ಅವರು ಹೇಳಿದ ಒಂದು ಮಾತು ರಾಜಕಾರಣ ಏನೆಂಬುದನ್ನು ಅರ್ಥೈಸುತ್ತದೆ. ಭಯ ಇಲ್ಲದೆ ಸಮಾಜದ ಹುಳುಕು, ತಾರತಮ್ಯ, ಅನ್ಯಾಯಗಳನ್ನು ತಿಳಿಸಬೇಕು. ಅನ್ಯಾಯದ ಬಗ್ಗೆ ಪ್ರಶ್ನಿಸಿದರೆ ನಮ್ಮ ಮೇಲೆ ದಾಳಿ, ದೌರ್ಜನ್ಯ ಆಗಬಹುದು. ಎಷ್ಟು ಹೀಯಾಳಿಕೆ, ದಾಳಿ, ಹಲ್ಲೆಯಾದರೂ ಹೆಜ್ಜೆ ಹಿಂದಕ್ಕಿಡಬಾರದು ಎಂದು ರಾಹುಲ್‌ ಗಾಂಧಿ ಹೇಳಿದರು.

ಅದಾನಿ ಕೇಳಿದ ಯಾವುದೇ ಜಾಗವು ತಕ್ಷಣ ಸಿಕ್ಕಿಬಿಡುತ್ತದೆ

ಇದು ರಾಜಕೀಯ ಹಾಗೂ ನಮ್ಮ ಬದುಕಿಗೂ ಅನ್ವಯ. ಇವತ್ತು ಭಾರತದಲ್ಲಿ ಏನಾಗುತ್ತಿದೆ? ಕೇಂದ್ರ ಸರ್ಕಾರದಿಂದ ಅನ್ಯಾಯ, ತಾರತಮ್ಯ ಹೆಚ್ಚಾಗಿದೆ. ದೇಶದ 25 ಬಂಡವಾಳಶಾಹಿಗಳ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಲಾಗಿದೆ. ಇದು ಪ್ರಜೆಗಳಿಗೆ ಅನುಮಾನ ಮೂಡಿಸುವ ವಿಚಾರವಾಗಿದೆ. ಈ ಹಣದಿಂದ ನರೇಗಾ ಯೋಜನೆಯಡಿ 25 ವರ್ಷ ಶ್ರಮಿಕರಿಗೆ ಕೂಲಿ ಕೊಡಬಹುದಾಗಿತ್ತು. ರೈತರ ಸಾಲಮನ್ನಾ ಮಾಡಿದ್ದು ಕಾಂಗ್ರೆಸ್ ಸರ್ಕಾರವಾಗಿದೆ. ಉದ್ಯಮಿಗಳ ಸಾಲಮನ್ನಾ ಮೂಲಕ ದೇಶದ ರೈತರಿಗೆ ಅಪಮಾನ ಮಾಡಲಾಗಿದೆ. ರೈತರು ಸಾಲಮನ್ನಾ ಕೇಳಿದಾಗ ಕೇಂದ್ರ ಸಾಲ‌ ಮನ್ನಾ ಮಾಡಲಿಲ್ಲ. ಆ 25 ಉದ್ಯಮಿಗಳ ಒಟ್ಟು ಆಸ್ತಿ ದೇಶದ 72 ಕೋಟಿಗಳ ಜನರ ಆಸ್ತಿಗೆ ಸಮವಾಗಿದೆ. ಆ ಉದ್ಯಮಿಗಳ ಬಳಿ ಅಸಂಖ್ಯ ಹಣ ಇದೆ. ಅಪಾರ ಸೌಕರ್ಯ, ಸಂಪನ್ಮೂಲ ಇದೆ. ಅಂಥವರ ಸಾಲಮನ್ನಾ ಮಾಡುವ ಅಗತ್ಯ ಇತ್ತಾ? ಗೌತಮ್‌ ಅದಾನಿ ಕೇಳಿದ ಯಾವುದೇ ಜಾಗವು ಅವರಿಗೆ ತಕ್ಷಣ ಸಿಕ್ಕಿಬಿಡುತ್ತದೆ. ಕೇಂದ್ರ ಸರ್ಕಾರವು ರೈತರಿಂದ ಕಿತ್ತು ಕೊಡುತ್ತದೆ. ಮುಂಬೈ ಏರ್‌ಪೋರ್ಟ್‌‌ ಕೇಳಿದರೂ ಪ್ರಧಾನಿ ನರೇಂದ್ರ ಮೋದಿ ಕೊಡಬಲ್ಲರು. ಐಟಿ, ಇಡಿ ಮೂಲಕ ಬೆದರಿಸಿ ಆ ಏರ್‌ಪೋರ್ಟ್‌ ಕೊಡಿಸುತ್ತಾರೆ ಎಂದು ರಾಹುಲ್‌ ಗಾಂಧಿ ಆರೋಪ ಮಾಡಿದರು.

Continue Reading

ಮಳೆ

Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್‌

Rain News : ಈ ವಾರ ಪೂರ್ತಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಆದರೆ ಕರಾವಳಿಯಲ್ಲಿ ಬಿಸಿ ಹಾಗೂ ಆರ್ದ್ರತೆ ವಾತಾವರಣ ಮೇಲುಗೈ ಸಾಧಿಸಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ. ಇತ್ತ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಮಳೆಯಾಗಬಹುದು.

ಬೆಂಗಳೂರು ಸೇರಿ ಹಲವೆಡೆ ಒಣ ಹವೆ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಆಕಾಶವು ನಿರ್ಮಲವಾಗಿರಲಿದೆ. ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ.

ಹೀಟ್‌ ವೇವ್‌ ಅಲರ್ಟ್‌

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹವಾಮಾನದ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಖ್ಯವಾಗಿ ಏಪ್ರಿಲ್ 18 ರಿಂದ 20 ರವರೆಗೆ ಇದೇ ಹವಾಮಾನ ಇರಲಿದೆ.

ಬಿರುಗಾಳಿ ಎಚ್ಚರಿಕೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌


ಈ ಸೀಸನ್‌ನ ಸಮ್ಮರ್‌ ಫ್ಯಾಷನ್‌ನಲ್ಲಿ (Summer Fashion) ಇದೀಗ ತಂಪೆರೆಯುವ ವಾಟರ್‌ ಫಾಲ್‌ ಇಯರಿಂಗ್‌ಗಳು ಟ್ರೆಂಡಿಯಾಗಿವೆ. ಮೇಲಿನಿಂದ ಕೆಳಗೆ ಇಳಿಯುವ ಜಲಧಾರೆಯಂತೆ ಕಾಣಿಸುವ ಕ್ರಿಸ್ಟಲ್‌ ಅಥವಾ ಅಮೆರಿಕನ್‌ ಡೈಮಂಡ್‌ ಹೊಂದಿರುವ ಈ ಇಯರಿಂಗ್ಸ್‌ ಸದ್ಯ ಹುಡುಗಿಯರ ಫೇವರೇಟ್‌ ಆಕ್ಸೆಸರೀಸ್‌ ಲಿಸ್ಟ್‌ಗೆ ಸೇರಿವೆ.

Summer Fashion

ಏನಿದು ವಾಟರ್ಫಾಲ್‌ ಇಯರಿಂಗ್ಸ್‌ ?

ನೋಡಲು ಥೇಟ್‌ ಜಲಪಾತದಂತೆ ಕಾಣಿಸುವ ಈ ಹ್ಯಾಂಗಿಂಗ್ಸ್‌ನಂತಹ ಕಿವಿಯೊಲೆಗಳು ನೋಡಲು ವಾಟರ್‌ಫಾಲ್‌ನಂತೆ ಕಾಣುತ್ತವೆ. ಹಾಗಾಗಿ ಇವನ್ನು ವಾಟರ್‌ಫಾಲ್‌ ಇಯರಿಂಗ್ಸ್‌ ಎನ್ನಲಾಗುತ್ತದೆ. ಕಿವಿಗೆ ಧರಿಸಿದಾಗ ಇಳೆ ಬೀಳುವ ಲೇಯರ್‌ನಂತಹ ಕ್ರಿಸ್ಟಲ್‌ ಸರಪಳಿಗಳು ವಾಟರ್‌ಫಾಲ್‌ನಂತೆ ಕಾಣಿಸುತ್ತವೆ. ಈ ವಿನ್ಯಾಸದಲ್ಲೆ ಇದೀಗ ಸಾಕಷ್ಟು ಡಿಸೈನ್‌ನವು ಆಕ್ಸೆಸರೀಸ್‌ ಲೋಕಕ್ಕೆ ಬಂದಿವೆ. ಮೈಕ್ರೋ ಕ್ರಿಸ್ಟಲ್ಸ್‌ ಅಂದರೇ, ಅಮೆರಿಕನ್‌ ಡೈಮಂಡ್‌ ಅಥವಾ ಆರ್ಟಿಫಿಷಿಯಲ್‌ ಅಮೆರಿಕನ್‌ ಡೈಮಂಡ್‌ ಹೊಂದಿರುವ ನಾಲ್ಕೈದು ಲೇಯರ್‌ ಹೊಂದಿರುವಂತಹ ಇಳೆ ಬೀಳುವಂತಹ ಇಯರಿಂಗ್‌ಗಳು ವೈಟ್‌ ಶೇಡ್‌ನಲ್ಲಿ ಲಭ್ಯ. ಇದೀಗ ಪಾಸ್ಟೆಲ್‌ ಶೇಡ್‌ಗಳಲ್ಲೂ ದೊರಕುತ್ತಿವೆ. ಲೈಟ್‌ ಪಿಂಕ್‌, ಪೀಚ್‌, ಬೀಚ್‌ ಬ್ಲ್ಯೂ, ಸ್ಕೈ ಬ್ಲ್ಯೂ, ಪಿಸ್ತಾ ಗ್ರೀನ್‌ ಶೇಡ್‌ನವು ಹೆಚ್ಚು ಪಾಪುಲರ್‌ ಆಗಿವೆ. ಹುಡುಗಿಯರನ್ನು ಸೆಳೆದಿವೆ.

Summer Fashion

ಪಾರ್ಟಿವೇರ್‌ ಆಕ್ಸೆಸರೀಸ್‌

ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಗೆ ಸೇರುವ ಈ ವಾಟರ್‌ ಫಾಲ್‌ ಇಯರಿಂಗ್‌ಗಳು ಕೆಲವು ಮೇಲ್ಭಾಗದಲ್ಲಿ ಬಿಗ್‌ ಸ್ಟೋನ್‌ ಅಥವಾ ಕಲರ್‌ಫುಲ್‌ ಇಮಿಟೇಡ್‌ ಸ್ಟೋನ್ಸ್‌ ಹೊಂದಿರುತ್ತವೆ. ಇಲ್ಲವೇ ಬೀಡ್ಸ್‌ ಅಥವಾ ಪರ್ಲ್‌ ಹೊಂದಿರುತ್ತವೆ. ಅದರ ಕೆಳಗೆ ಸುಮಾರು ನಾಲ್ಕೈದು ಇಂಚಿನಷ್ಟು ಉದ್ದದ ಹ್ಯಾಂಗಿಂಗ್‌ ಡಿಸೈನ್‌ ಹೊಂದಿರುತ್ತವೆ. ಕೆಲವು ಒಂದೇ ಸಮನಾಗಿ ಇದ್ದರೇ, ಇನ್ನು ಕೆಲವು ಆಸೆಮ್ಮಿಟ್ರಿಕಲ್‌ ಲೆಂಥ್‌ ಹೊಂದಿರುತ್ತವೆ. ಇವು ಇದೀಗ ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಯಲ್ಲಿ ಟಾಪ್‌ ಲಿಸ್ಟ್‌ನಲ್ಲಿವೆ. ಇವುಗಳ ವಿಶೇಷತೆಯೇಂದರೇ, ಯಾವುದೇ ಬಗೆಯ ಶಿಮ್ಮರ್‌ ಅಥವಾ ಶೈನಿಂಗ್‌ ಫ್ಯಾಬ್ರಿಕ್‌ನ ಪಾರ್ಟಿವೇರ್‌ ಔಟ್‌ಫಿಟ್‌ನೊಂದಿಗೆ ಇವನ್ನು ಧರಿಸಬಹುದು. ಎಲ್ಲವಕ್ಕೂ ಇವು ಮ್ಯಾಚ್‌ ಆಗುತ್ತವೆ. ಎಲ್ಲದಕ್ಕಿಂತ ಹೆಚ್ಚಾಗಿ ಇಡೀ ಮುಖವನ್ನು ಹೈ ಲೈಟ್‌ ಮಾಡುತ್ತವೆ. ಮಿರುಗುತ್ತವೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

Summer Fashion

ವಾಟರ್‌ ಫಾಲ್‌ ಕ್ಲಾಸಿ ಲುಕ್‌

“ಶಿಮ್ಮರ್‌ ಔಟ್‌ಫಿಟ್‌ಗಳಿಗೆ ಈ ವಾಟರ್‌ಫಾಲ್‌ ಇಯರಿಂಗ್‌ಗಳು ಹೇಳಿ ಮಾಡಿಸಿದಂತಿರುತ್ತವೆ. ಕಿವಿ ಮಾತ್ರವಲ್ಲ, ಇಡೀ ಲುಕ್‌ಗೆ ಇವು ಸಾಥ್‌ ನೀಡುತ್ತವೆ. ಆಕರ್ಷಕವಾಗಿ ಕಾಣಿಸುತ್ತವೆ. ಕ್ಲಾಸಿ ಲುಕ್‌ ನೀಡುವುದರೊಂದಿಗೆ ಸೆಲೆಬ್ರೆಟಿ ಇಮೇಜ್‌ ನೀಡುತ್ತವೆ” ಎನ್ನುತ್ತಾರೆ ಜ್ಯುವೆಲ್‌ ಡಿಸೈನರ್‌ ರೀಟಾ. ಅವರ ಪ್ರಕಾರ, ಯುವತಿಯರು ಮಾತ್ರವಲ್ಲ, ಎಲ್ಲಾ ವಯಸ್ಸಿನ ಮಹಿಳೆಯರು ಧರಿಸುವುದು ಹೆಚ್ಚಾಗಿದೆ.

Summer Fashion

ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಹೀಗಿರಲಿ

  • ಶಿಮ್ಮರ್‌ ಡಿಸೈನರ್‌ವೇರ್‌ ಶೇಡ್ಸ್‌ಗೆ ತಕ್ಕಂತೆ ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಮಾಡಿ.
  • ಪಾಸ್ಟೆಲ್‌ ಶೇಡ್‌ ಡಿಸೈನ್‌ನವು ಟ್ರೆಂಡ್‌ನಲ್ಲಿವೆ.
  • ಆದಷ್ಟೂ ಮಿನುಗುವಂತವನ್ನು ಸೆಲೆಕ್ಟ್‌ ಮಾಡಿ.
  • ಶೋಲ್ಡರ್‌ ತನಕ ನೇತಾಡುವಂತವು ಇದೀಗ ಜೆನ್‌ ಜಿ ಹುಡುಗಿಯರನ್ನು ಸೆಳೆದಿವೆ.
  • ನಾಲ್ಕೈದು ಎಳೆ ಎಳೆಯಾಗಿರುವಂತವನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

UPSC Results 2023: ಯುಪಿಎಸ್‌ಸಿ ಪರೀಕ್ಷೆಯಲ್ಲಿ 100ನೇ ರ‍್ಯಾಂಕ್‌ ಪಡೆಯುವ ಮೂಲಕ ವಿಜಯಪುರದ ಮೂಲದ ವಿಜೇತಾ ಬಿ. ಹೊಸಮನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

VISTARANEWS.COM


on

UPSC Results 2023
Koo

ಬೆಂಗಳೂರು: ಕನಸು ಕಾಣುವುದು ಮನುಷ್ಯನ ಸಹಜವಾದ ಗುಣ, ಆದರೆ ಆ ಕನಸನ್ನು ನನಸಾಗಿಸಿಕೊಳ್ಳೋದು ಬೆರಳೆಣಿಕೆಯಷ್ಟು ಮಂದಿ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2023ನೇ ಸಾಲಿನ ನಾಗರಿಕ ಸೇವೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶ (UPSC Results 2023) ಮಂಗಳವಾರ ಪ್ರಕಟವಾಗಿದೆ. ಒಟ್ಟು 1016 ಅಭ್ಯರ್ಥಿಗಳು ತೇರ್ಗಡೆಗೊಂಡಿದ್ದು, ರಾಜ್ಯದ 20ಕ್ಕೂ ಹೆಚ್ಚು ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿ ಸಾಧನೆಗೈದಿದ್ದಾರೆ. ಈ ಪೈಕಿ 100ನೇ ರ‍್ಯಾಂಕ್‌ ಪಡೆಯುವ ಮೂಲಕ ವಿಜಯಪುರದ ಮೂಲದ ವಿಜೇತಾ ಬಿ. ಹೊಸಮನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜಯಪುರ ಮೂಲದ ವಿಜೇತಾ ಭೀಮಸೇನ ಹೊಸಮನಿ ಅವರ ಕುಟುಂಬ ಸದ್ಯ ಹುಬ್ಬಳ್ಳಿಯಲ್ಲಿ ನೆಲೆಸಿದೆ. ವಿಜೇತಾ ಸಾಧನೆಗೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಎಲ್‌ಕೆಜಿಯಿಂದ 5ನೇ ಕ್ಲಾಸ್‌ವರೆಗೆ ವಿಜಯಪುರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ವಿಜೇತಾ ವಿದ್ಯಾಭ್ಯಾಸ ಮಾಡಿದ್ದು, 6 ರಿಂದ 10ನೇ ತರಗತಿವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರ್‌ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಓದಿದರು.

ಪ್ರಥಮ ಪಿಯುಸಿ ವಿಜಯಪುರ ನಗರದ ತುಂಗಳ ಕಾಲೇಜು, ದ್ವಿತೀಯ ಪಿಯುಸಿ ದರಬಾರ್ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ಕ್ಲಾಟ್ ಪರೀಕ್ಷೆ ಉತ್ತೀರ್ಣವಾಗಿ ಗುಜರಾತಿನ ನ್ಯಾಷನಲ್ ಲಾ ಯುನಿವರ್ಸಿಟಿಯಲ್ಲಿ
ಬಿಎ, ಎಲ್‌ಎಲ್‌ಬಿ ಪದವಿ ಪಡೆದಿದ್ದು, ಕ್ರಿಮಿನಲ್ ಲಾ ದಲ್ಲಿ ಗೋಲ್ಡ್ ಮೆಡಲ್ ಪಡೆದಿದ್ದಾರೆ.

2020 ರಿಂದ ಮೂರು ಬಾರಿ ಯುಪಿಎಸ್ಸಿ ಪರೀಕ್ಷೆ ಎದುರಿಸಿದ್ದು, ಆನ್ ಲೈನ್ ತರಬೇತಿ ಹಾಗೂ ಮನೆಯಲ್ಲೇ ಹೆಚ್ಚಿನ ಅಭ್ಯಾಸ ಮಾಡಿ ಇವರು ಸಾಧನೆ ಮಾಡಿದ್ದಾರೆ. ಇಂಡಿಯನ್ ರೆವೆನ್ಯೂ ಸರ್ವೀಸ್‌ನಲ್ಲಿ ಸ್ಥಾನ ಸಿಗೋ ಸಾಧ್ಯತೆ ಇದೆ. ಹುಬ್ಬಳ್ಳಿಯ ಸಿಲ್ವರ್ ಟೌನ್‌ನ ನಿವಾಸದಲ್ಲಿ ವಿಜೇತಾಗೆ ಪೋಷಕರು ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ | UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ದಾವಣಗೆರೆಯ ಸೌಭಾಗ್ಯ ರಾಜ್ಯಕ್ಕೆ 2ನೇ ಸ್ಥಾನ

ದಾವಣಗೆರೆ: ಯುಪಿಎಸ್‌ಸಿ ಫಲಿತಾಂಶದಲ್ಲಿ ದಾವಣಗೆರೆಯ ಸೌಭಾಗ್ಯ ಎಸ್. ಬೀಳಗಿಮಠ್ ಅವರು 101ನೇ ರ‍್ಯಾಂಕ್‌ ಪಡೆಯುವ ಮೂಲಕ ಕರ್ನಾಟಕದಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ದಾವಣಗೆರೆ ಆಂಜನೇಯ ಬಡಾವಣೆಯ ನಿವಾಸಿ ಸೌಭಾಗ್ಯ (22) ಧಾರವಾಡದಲ್ಲಿ ಕೋಚಿಂಗ್ ಪಡೆದಿದ್ದರು.

ಶರಣಮ್ಮ ಹಾಗೂ ಶರಣಯ್ಯ ಸ್ವಾಮಿ ದಂಪತಿಯ ಪುತ್ರಿ ಸೌಭಾಗ್ಯ ಎಸ್. ಬೀಳಗಿಮಠ್, ಸದ್ಯ ಧಾರವಾಡದಲ್ಲಿ ನೆಲೆಸಿದ್ದಾರ. ಇವರ ತಂದೆ ರೈತರಾಗಿದ್ದು, ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನವರು. ಬಿಎಸ್ಸಿ ಅಗ್ರಿಕಲ್ಚರ್ ಪದವಿ ಪಡೆದಿದ್ದಾರೆ.

ಕೋಲಾರದ ಯುವಕನಿಗೆ 939ನೇ ರ‍್ಯಾಂಕ್‌

ಕೋಲಾರ: ಯುಪಿಎಸ್ಸಿ ಫಲಿತಾಂಶದಲ್ಲಿ ಕೋಲಾರದ ಯುವಕನಿಗೆ 939ನೇ ರ‍್ಯಾಂಕ್‌ ಬಂದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೋಪಾಲಪುರ ಗ್ರಾಮದ ಶಿಕ್ಷಕ ದಂಪತಿ ಪುತ್ರ ಗೌತಮ್ 939ನೇ ರ‍್ಯಾಂಕ್‌ ಪಡೆದಿದ್ದಾರೆ. ಈ ರ‍್ಯಾಂಕ್‌ನಲ್ಲಿ ಐಎಎಸ್‌ ಹುದ್ದೆ ಸಿಗುವುದು ಕಷ್ಟ, ಮತ್ತೊಂದು ಬಾರಿ ಪರೀಕ್ಷೆ ಬರೆಯುವುದಾಗಿ ಗೌತಮ್‌ ತಿಳಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡು ಯುಪಿಎಸ್ಸಿಗೆ ಯುವಕ ತಯಾರಿ ನಡೆಸಿದ್ದು, ಪೋಷಕರಿಗೆ ಧನ್ಯವಾದ ತಿಳಿಸಿದ್ದಾರೆ. ತಾಲೂಕಿನ ಶಿಕ್ಷಕರು ಯುವಕನನ್ನು ಸನ್ಮಾನಿಸಿ, ಸಿಹಿ ತಿನಿಸಿದ್ದಾರೆ.

ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರ ಯುವಕನ ಸಾಧನೆ

ವಿಜಯಪುರ: ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಜಯಪುರದ ಸಂತೋಷ ಶ್ರೀಕಾಂತ ಶಿರಾಡೋಣ 641ನೇ ರ‍್ಯಾಂಕ್‌ ಪಡೆದಿದ್ದಾರೆ. ಇವರು ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ ಐದನೇ ತರಗತಿ ವಿದ್ಯಾಭ್ಯಾಸ ನಡೆಸಿದ್ದು, 6 ರಿಂದ 8 ತರಗತಿ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆ, 8 ರಿಂದ 10ನೇ ತರಗತಿ ವಿಜಯಪುರ ತಾಲೂಕಿನ‌ ಕಗ್ಗೋಡದ ಸಂಗನಬಸವ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿದರು. ಪಿಯುಸಿ ಹೈದರಾಬಾದಿನ ವಿಚೇತನಾ ಕಾಲೇಜು, ಬೆಂಗಳೂರಿನ ಆರ್ ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ‌ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದಾರೆ. 2019 ನಿಂದ ಯುಪಿಎಸ್ಸಿ ಪ್ರಯತ್ನ ನಡೆಸುತ್ತಿದ್ದು, 2023ರಲ್ಲಿ ಉತ್ತೀರ್ಣರಾಗಿದ್ದಾರೆ. ದೆಹಲಿಯ ವಾದಿರಾಮ್ ಕೋಚಿಂಗ್ ಸೆಂಟರ್‌ನಲ್ಲಿ ಸಂತೋಷ್ ತರಬೇತಿ ಪಡೆದಿದ್ದರು. ಸಂತೋಷ್‌ ಸಾಧನೆಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯದ 20ಕ್ಕೂ ಹೆಚ್ಚು ಕನ್ನಡಿಗರು ತೇರ್ಗಡೆ

ಈ ಬಾರಿ ಒಟ್ಟು 1,016 ಅಭ್ಯರ್ಥಿಗಳು ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದು, ಲಖನೌನ ಆದಿತ್ಯ ಶ್ರೀವಾಸ್ತವ ದೇಶಕ್ಕೆ ಅಗ್ರಸ್ಥಾನ ಪಡೆದಿದ್ದು, ಒಡಿಶಾದ ಅನಿಮೇಶ್ ಪ್ರಧಾನ್ ಎರಡನೇ ಸ್ಥಾನ ಪಡೆದಿದ್ದು, ತೆಲಂಗಾಣದ ಅನನ್ಯಾ ರೆಡ್ಡಿ ಮೂರನೇ ಸ್ಥಾನ ಪಡೆದಿದ್ದಾರೆ.

ಅದೇ ರೀತಿ ಯುಪಿಎಸ್ಸಿಯಲ್ಲಿ ರಾಜ್ಯದ 20ಕ್ಕೂ ಹೆಚ್ಚು ಕನ್ನಡಿಗರು ತೇರ್ಗಡೆಯಾಗುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಇದರಲ್ಲಿ ಆಚಾರ್ಯ ಐ.ಎ.ಎಸ್. ಅಕಾಡೆಮಿಯಿಂದ 3 ವಿದ್ಯಾರ್ಥಿಗಳು ರ್‍ಯಾಂಕ್ ಪಡೆದಿದ್ದು, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಸತತ ಎರಡು ವರ್ಷಗಳಿಂದ ಐಎಎಸ್ ತರಬೇತಿಯಲ್ಲಿ ವಿಶೇಷ ಸ್ಥಾನ ಪಡೆದು, ಅನೇಕ ಬಡ ವಿದ್ಯಾರ್ಥಿಗಳ ಐಎಎಸ್ ಸಾಧನೆಗೆ ಸಹಕಾರಿಯಾಗಿದೆ.

ಇದನ್ನೂ ಓದಿ | UPSC Result 2024: ಯುಪಿಎಸ್‌ಸಿ ಫಲಿತಾಂಶ ಪ್ರಕಟ; ಆದಿತ್ಯ ಶ್ರೀವಾಸ್ತವ ಪ್ರಥಮ ರ್‍ಯಾಂಕ್

UPSC Results 2023
ಶಾಂತಪ್ಪ ಕುರುಬರ್

ಇನ್ನು ಈ ಸಾಧನೆಗೆ ಸತತ ಪ್ರಯತ್ನ, ಶ್ರದ್ಧೆ ಹಾಗೂ ಆತ್ಮ ವಿಶ್ವಾಸವೆ ಕಾರಣ ಎನ್ನುತ್ತಿದ್ದಾರೆ ವಿಜೇತರು. ಜೊತೆಗೆ ಬಳ್ಳಾರಿಯ ಶಾಂತಪ್ಪ ಕುರುಬರ್ 644 ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿಯಿಂದ ಬೆಂಗಳೂರಿಗೆ ವಲಸೆ ಬಂದು ವಿದ್ಯಾಭ್ಯಾಸ ಮಾಡಿ ವಿಜೇತರಾಗಿದ್ದಾರೆ. ಸತತವಾಗಿ ಕಷ್ಟವನ್ನೇ ನೋಡಿಕೊಂಡು ಬಂದ ಇವರು ಪಿಯುಸಿಯಲ್ಲಿ ಫೇಲ್ ಅಗಿದ್ದರು. ತಾಯಿ ಕೂಲಿ ಕೆಲಸ ಮಾಡಿ ಇವರನ್ನು ಸಾಕಿದ್ದಾರೆ. ಇವರು PSI ಹುದ್ದೆಯಲ್ಲಿದ್ದು, ಕೆಲ್ಸದ ಜೊತೆಗೆ ಕನ್ನಡದಲ್ಲೇ ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿದ್ದರು. ಜೊತೆಗೆ ಕನ್ನಡದಲ್ಲೇ ಪರೀಕ್ಷೆ ಬರೆದು ಪಾಸಾಗಿದ್ದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಇನ್ನು ಇದೆ ಅಕಾಡೆಮಿಯಲ್ಲಿ ಓದಿದ್ದ ಭಾನು ಪ್ರಕಾಶ್ 600 ರ್ಯಾಂಕ್ ಪಡೆದಿದ್ದರೆ. ಮೂಲತಃ ಮೈಸೂರಿನವರಾದ ಇವರು ಕೊನೆ ಬಾರಿ ಕೂಡ ಐಪಿಎಸ್ ಪರೀಕ್ಷೆಯಲ್ಲಿ ಪಾಸ್ ಅಗಿದ್ದರು.

Continue Reading

Lok Sabha Election 2024

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

Modi in Karnataka: ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka on April 20 Massive rallies in Chikkaballapura and Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ )Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading
Advertisement
Karnataka Weather
ಕರ್ನಾಟಕ8 mins ago

Karnataka Weather: ಇಂದು ದಕ್ಷಿಣ ಕನ್ನಡ, ಬೆಳಗಾವಿ ಸೇರಿ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ!

EVM
ಪ್ರಮುಖ ಸುದ್ದಿ37 mins ago

ವಿಸ್ತಾರ ಸಂಪಾದಕೀಯ: ಮತ್ತೆ ಮತಪತ್ರಗಳ ‘ಶಿಲಾಯುಗ’ಕ್ಕೆ ಹೋಗಲಾಗದು! ಆಧಾರರಹಿತವಾಗಿ ಮತಯಂತ್ರ ದೂಷಣೆ ಸರಿಯಲ್ಲ

Baking Powder
ಆಹಾರ/ಅಡುಗೆ38 mins ago

Baking Powder: ಬೇಕಿಂಗ್‌ ಪುಡಿ ಹುಟ್ಟಿದ ಕತೆ ಕುತೂಹಲಕರ! ಅಡುಗೆ ಮಾಡುವ ಇದರ ಹಿನ್ನೆಲೆ ಗೊತ್ತಿರಲಿ

daily horoscope predictions for April 18 2024
ಭವಿಷ್ಯ2 hours ago

Dina Bhavishya : ಈ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ!

DD News Logo
ದೇಶ7 hours ago

DD News Logo: ರಾಮನವಮಿ ದಿನವೇ ಡಿಡಿ ನ್ಯೂಸ್‌ ಲೋಗೊ ಕೇಸರಿಮಯ; ತೀವ್ರವಾಯ್ತು ಚರ್ಚೆ!

Jai Shree Ram slogan
ಪ್ರಮುಖ ಸುದ್ದಿ7 hours ago

Jai Shree Ram slogan: ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರ ಬಂಧನ

Union Minister Pralhad Joshi election campaign in Hubli
ಹುಬ್ಬಳ್ಳಿ7 hours ago

Lok Sabha Election 2024: ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಸ್ವಚ್ಛ ಆಡಳಿತ: ಪ್ರಲ್ಹಾದ್‌ ಜೋಶಿ

Times Influential list 2024
ಕ್ರೀಡೆ7 hours ago

Times Influential list 2024: ಟೈಮ್ಸ್‌ ಪ್ರಭಾವಿ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್,ಆಲಿಯಾ ಭಟ್

Terrorist Attack
ದೇಶ8 hours ago

Terrorist Attack: ಕಾಶ್ಮೀರದಲ್ಲಿ ಬಿಹಾರದ ಕಾರ್ಮಿಕನನ್ನು ಹತ್ಯೆಗೈದ ಉಗ್ರರು; ತಿಂಗಳಲ್ಲಿ 2ನೇ ದಾಳಿ

MP DK Suresh election campaign in various places of Channapattana
ಬೆಂಗಳೂರು ಗ್ರಾಮಾಂತರ8 hours ago

Lok Sabha Election 2024: ಚನ್ನಪಟ್ಟಣದ ವಿವಿಧೆಡೆ ಸಂಸದ ಡಿ.ಕೆ.ಸುರೇಶ್‌ ಮತಯಾಚನೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20243 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌