Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್; ಆಂಧ್ರ ಪೊಲೀಸರಿಂದ ಕರ್ನಾಟಕ ಪೊಲೀಸ್‌ ಅರೆಸ್ಟ್‌! - Vistara News

ಕೋಲಾರ

Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್; ಆಂಧ್ರ ಪೊಲೀಸರಿಂದ ಕರ್ನಾಟಕ ಪೊಲೀಸ್‌ ಅರೆಸ್ಟ್‌!

Murder Case : ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ ಸ್ಕೆಚ್‌ ಹಾಕಿ ಸುಪಾರಿ ಕೊಟ್ಟಿದ್ದ ಕೋಲಾರ ಪೊಲೀಸ್‌ ಪೇದೆಯನ್ನು ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Murder case
ಪೇದೆ ವಿನಾಯಕ ಹಾಗೂ ಲಕ್ಕಹಳ್ಳಿ ಶ್ರೀನಿವಾಸ ರೆಡ್ಡಿ ಸುಪಾರಿ ಕೊಟ್ಟವರು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಟಿಡಿಪಿ ಶಾಸಕ ಬೆಂಬಲಿಗನ ಕೊಲೆಗೆ (Attempt to murder case) ಸ್ಕೆಚ್ ಹಾಕಿದ್ದಕ್ಕೆ, ಕೋಲಾರ ಪೊಲೀಸ್ ಪೇದೆ ವಿನಾಯಕ ಎಂಬಾತನನ್ನು ಆಂಧ್ರಪ್ರದೇಶದ ಗಂಗವರಂ ಪೊಲೀಸರು ಬಂಧಿಸಿದ್ದಾರೆ. ವಿನಾಯಕ ಕೋಲಾರ ಪೊಲೀಸ್ ಠಾಣೆ ಅಪರಾಧ ಕಾನ್ಸ್‌ಟೇಬಲ್‌ ಆಗಿದ್ದು, ಟಿಡಿಪಿ ಶಾಸಕನ ಬೆಂಬಲಿಗನನ್ನು ಕೊಲ್ಲಲು ಸುಪಾರಿ ನೀಡಿದ್ದ (Murder case) ಎನ್ನಲಾಗಿದೆ.

ಇಚರ್ ವಾಹನದಿಂದ ಅಪಘಾತ ಮಾಡುವಂತೆ ವಿನಾಯಕ ಐಡಿಯಾ ಕೊಟ್ಟಿದ್ದ. ಕೊಲೆಗೆ ಯೋಜನೆ ರೂಪಿಸಿ , ಅಪಘಾತಕ್ಕೆ ವಾಹನವನ್ನು ಸಿದ್ಧಪಡಿಸಿದ್ದ. ಆದರೆ ಅದೃಷ್ಟವಶಾತ್ ಟಿಡಿಪಿ ಕಾರ್ಯಕರ್ತ ಪ್ರಾಣಾಪಾಯದಿಂದ ಪಾರಾಗಿದ್ದರು. ಲಕ್ಕಹಳ್ಳಿ ಶ್ರೀನಿವಾಸ ರೆಡ್ಡಿ ಹಾಗೂ ಪೇದೆ ವಿನಾಯಕ ಸೇರಿ ಟಿಡಿಪಿ ನಾಯಕ ರವಿಚಂದ್ರ ಗುಪ್ತರ ಕಾರಿಗೆ ಡಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ್ದರು. ಸದ್ಯ ಸುಪಾರಿ ನೀಡಿದ ವಿನಾಯಕ ವಿರುದ್ಧ ಗಂಗವಾರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

murder case
ಟಿಡಿಪಿ ನಾಯಕ ರವಿಚಂದ್ರ ಗುಪ್ತ

ಇದನ್ನೂ ಓದಿ: Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

ತುಮಕೂರಿನಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ಅಟ್ಯಾಕ್‌

ಹಾಡಹಗಲೇ ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ಅಟ್ಯಾಕ್ ಮಾಡಿ ಕೊಲೆಗೆ ಯತ್ನಿಸಲಾಗಿದೆ. ದುಷ್ಕರ್ಮಿಗಳು ಸ್ಕಾರ್ಫಿಯೋ ಕಾರಿನಲ್ಲಿ ಬಂದು ಗುಬ್ಬಿ ಪಟ್ಟಣದ ಮನೋಜ್ (29) ಎಂಬಾತನ ಕೊಲೆಗೆ ಯತ್ನಿಸಲಾಗಿದೆ. ಕೊಲೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ @ ಡೆಲ್ಲಿ ಸೀನಾ, ನಾಗರಾಜು, ದುಷ್ಯಾಂತ, ದರ್ಶನ್ ಬಂಧಿತ ಆರೋಪಿಗಳು.

ಕಳೆದ ಎರಡು ವರ್ಷಗಳ ಹಿಂದೆ ಹಣಕಾಸು ವಿಚಾರಕ್ಕೆ ಗುಬ್ಬಿ ಡಿಎಸ್‌ಎಸ್ ಮುಖಂಡ ನರಸಿಂಹ ಮೂರ್ತಿ@ ಕುರಿ ಮೂರ್ತಿಯನ್ನು ಗುಬ್ಬಿ ಪಟ್ಟಣದ ಬಿ.ಹೆಚ್ ರಸ್ತೆಯಲ್ಲಿ ಹಾಡಹಗಲೇ ಕೊಲೆ ಮಾಡಲಾಗಿತ್ತು. ಈ ಬಳಿಕ ನರಸಿಂಹ ಮೂರ್ತಿ ಪುತ್ರ ಮನೋಜ್ ಕೊಲೆಗೆ ಯತ್ನಿಸಲಾಗಿತ್ತು.

ಇದೇ ಬುಧವಾರ ಗುಬ್ಬಿ ತಾಲೂಕು ಕಚೇರಿ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಮನೋಜ್ ಮೇಲೆ ಅಟ್ಯಾಕ್ ಮಾಡಲಾಗಿತ್ತು. ಈ ವೇಳೆ ದುಷ್ಕರ್ಮಿಗಳ ಕೈಗೆ ಸಿಗದೇ ಮನೋಜ್‌ ತಪ್ಪಿಸಿಕೊಂಡಿದ್ದ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಗುಬ್ಬಿ ಪೊಲೀಸರು, ಸ್ಕಾರ್ಫಿಯೋ ಕಾರಿನಲ್ಲಿ ಬಂದು ಕೊಲೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಪೊಲೀಸ್ ತನಿಖೆ ವೇಳೆ ಮೇಲ್ನೋಟಕ್ಕೆ ಹಳೆ ವೈಷಮ್ಯಕ್ಕೆ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Accident Case : ಈಜಲು ಚಂಪಕ ಸರಸು ಕಲ್ಯಾಣಿಗೆ ಜಿಗಿದ ಎಂಜಿನಿಯರ್‌ ಶವವಾಗಿ ಹೊರ ಬಂದ

Accident Case : ಬೆಂಗಳೂರಿನಿಂದ ಸ್ನೇಹಿತರೊಟ್ಟಿಗೆ ಪ್ರವಾಸಕ್ಕೆ ಹೋದ ಯುವಕರ್ನೊವ ಹೆಣವಾಗಿ ಪತ್ತೆಯಾಗಿದ್ದಾನೆ. ಕಲ್ಯಾಣಿಯಲ್ಲಿ ಈಜಲು ಹೀಗಿ ನೀರುಪಾಲಾಗಿದ್ದಾನೆ.

VISTARANEWS.COM


on

By

Accident case
Koo

ಶಿವಮೊಗ್ಗ : ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದ (Drowned in water) ಎಂಜಿನಿಯರ್‌ ಮೃತಪಟ್ಟಿದ್ದಾನೆ. ಶಿವಮೊಗ್ಗದ ಸಾಗರದ ಆನಂದಪುರ ಬಳಿ ಇರುವ ಚಂಪಕ ಸರಸು ಕಲ್ಯಾಣಿಯಲ್ಲಿ ಘಟನೆ (Accident Case) ನಡೆದಿದೆ. ಬೆಂಗಳೂರು ಮೂಲದ ಕುಶಾಲ್ (22) ಎಂಬ ಇಂಜಿನಿಯರ್ ಸಾವನ್ನಪ್ಪಿರುವ ದುರ್ದೈವಿ.

ಬೆಂಗಳೂರಿನ ಕುಶಾಲ್‌ ತನ್ನಿಬ್ಬರು ಸ್ನೇಹಿತರೊಡನೆ ಪ್ರವಾಸಕ್ಕೆಂದು ಕಾರಿನಲ್ಲಿ ಆಗಮಿಸಿದ್ದ. ಕುಶಾಲ್, ಸಾಯಿರಾಂ ಹಾಗೂ ಯಶವಂತ ಈ ಮೂವರು ಇತಿಹಾಸ ಹೊಂದಿರುವ ಮಹಂತಿನ ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕುಶಾಲ್‌ ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದಾನೆ. ಆದರೆ ಉಸಿರುಗಟ್ಟಿ ನೀರಿಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಹಲವಾರು ವರ್ಷಗಳ ಕಾಲ ಪಾಳು ಬಿದ್ದಿದ್ದ ಚಂಪಕ ಸರಸು ಕಲ್ಯಾಣಿಯನ್ನು ಚಲನಚಿತ್ರ ನಟ ಯಶ್ ಅವರ ಯಶೋಮಾರ್ಗ ಸಂಸ್ಥೆ ಕಳೆದೆರೆಡು ವರ್ಷಗಳ ಹಿಂದೆಯಷ್ಟೇ ಸ್ವಚ್ಚಗೊಳಿಸಿದ್ದರು. ಸ್ನೇಹಿತರೊಂದಿಗೆ ಈಜಾಡಲು ಬಂದ ಕುಶಾಲ್‌ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಲ್ಯಾಣಿಯಿಂದ ಶವ ಮೇಲಕ್ಕೇತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Assault Case : ಬೀದಿಯಲ್ಲೇ ಲೇಟ್‌ ನೈಟ್‌ ಪಾರ್ಟಿ; ಪ್ರಶ್ನಿಸಿದ್ದಕ್ಕೆ ಯುವಕನಿಂದ ಪೊಲೀಸರಿಗೆ ಅವಾಜ್

ಗದಗದಲ್ಲಿ ಬಸ್‌ ಹರಿದು 30 ಕುರಿಗಳು ಸಾವು

ಗದಗದ ಗಜೇಂದ್ರಗಡ-ರೋಣ ರಸ್ತೆ ಮಾರ್ಗದ ದಿಂಡೂರ ಗ್ರಾಮದ ಕ್ರಾಸ್‌ನಲ್ಲಿ ಬಸ್‌ ಹರಿದು 30 ಕುರಿಗಳು ಮೃತಪಟ್ಟಿವೆ. ಓವರ್ ಟೆಕ್ ಮಾಡಲು ಹೋಗಿ ಮೂವತ್ತು ಕುರಿಗಳ ಮೇಲೆ ಬಸ್‌ ಹರಿದಿದೆ. ಬದಾಮಿ ಘಟಕದ ಸರ್ಕಾರಿ ಬಸ್ ಚಾಲಕ ನಿರ್ಲಕ್ಷ್ಯದಿಂದ ಸುಮಾರು 4.5 ಲಕ್ಷ‌ ಮೌಲ್ಯದ ಕುರಿಗಳು ಮೃತಪಟ್ಟಿವೆ. ಕುರಿಗಳನ್ನು ಕಳೆದುಕೊಂಡು ಕುರಿಗಾಯಿಗಳು ಗೋಳಾಡಿದ್ದರು.

ಚಿಕ್ಕಬಳ್ಳಾಪುರದಲ್ಲಿ ಚಲಿಸುವ ರೈಲಿಗೆ ಸಿಲುಕಿ ವಯೋವೃದ್ಧ ಸಾವು

ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ ರೈಲ್ವೇ‌ ನಿಲ್ದಾಣದ ಬಳಿ ಚಲಿಸುವ ರೈಲಿಗೆ ಸಿಲುಕಿ ಅಪರಿಚಿತ ವಯೋವೃದ್ಧ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಿಂದ ಬಂಗಾರಪೇಟೆಗೆ ಹೋಗುತಿದ್ದ ರೈಲಿಗೆ ಸಿಲುಕಿದ್ದಾರೆ. ವೈಯುಕ್ತಿಕ‌ ಕಾರಣ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸದ್ಯ ವೃದ್ಧನ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕೋಲಾರದಲ್ಲಿ ರಸ್ತೆ ಬದಿ ಅಂಗಡಿಗೆ ನುಗ್ಗಿದ ಕಾರು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿ ಅಂಗಡಿಗೆ ನುಗ್ಗಿದೆ. ಅಪಘಾತದಲ್ಲಿ ಅಂಗಡಿಯಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ. ಕೋಲಾರ ಜಿ. ಶ್ರೀನಿವಾಸಪುರ ತಾ.ಕಶೆಟ್ಟಿಪಲ್ಲಿ ಕ್ರಾಸ್‌ನಲ್ಲಿ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಮರಿಪಲ್ಲಿ ಗ್ರಾಮದ ನಾಗರತ್ನಮ್ಮ ಎಂಬವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡಪಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಾಗರತ್ಮಮ್ಮ ಟೀ- ಕಾಫಿ, ಟಿಫನ್ ತಿಂಡಿ ತಿನಿಸುಗಳನ್ನು ಇಟ್ಟಿಕೊಂಡಿದ್ದರು. ಅಪಘಾತದಲ್ಲಿ ಒಂದು ದ್ವಿಚಕ್ರ ವಾಹನ ಹಾಗೂ ಅಂಗಡಿ ಜಖಂಗೊಂಡಿದೆ. ಸ್ಥಳೀಯರ ಸಹಾಯದೊಂದಿಗೆ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ರಭಸವಾಗಿ ಬೀಸಲಿದೆ ಗಾಳಿ; ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿಯ ಸಮುದ್ರ ತೀರದಲ್ಲಿ ಗಾಳಿ ವೇಗ ಹೆಚ್ಚಾಗಿರಲಿದ್ದು, ಮಲೆನಾಡು ಹಾಗೂ ಒಳನಾಡಿನಲ್ಲಿ ಹಗುರದಿಂದ ಸಾಧಾರಣ (Rain News) ಮಳೆಯಾಗಲಿದೆ.

VISTARANEWS.COM


on

By

karnataka weather forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ,ಚಾಮರಾಜನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯನಗರ, ರಾಯಚೂರು ಮತ್ತು ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 31 , ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಇದನ್ನೂ ಓದಿ: Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

ಯೆಲ್ಲೋ ಅಲರ್ಟ್‌

ಗುಡಗು ಸಹಿತ ಭಾರಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ 24ರಂದು ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather: ಅಲೆಗಳ ಅಬ್ಬರಕ್ಕೆ ಅಂಕೋಲಾದಲ್ಲಿ ಕೊಚ್ಚಿ ಹೋದ ಮನೆ; ಭಾರಿ ಮಳೆಗೆ ಚಾರ್ಮಾಡಿಯಲ್ಲಿ ಧರೆಗುರುಳಿದ ಬಂಡೆಗಳು

Karnataka Weather Forecast: ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದ್ದರೆ, ಇತ್ತ ಮಲೆನಾಡಿನಲ್ಲಿ ಭಾರಿ ಮಳೆಗೆ (Rain News) ಚಾರ್ಮಾಡಿ ಘಾಟ್‌ನಲ್ಲಿ ಬಂಡೆ ಕಲ್ಲುಗಳು ಧರೆಗುರುಳಿವೆ. ವಿಜಯಪುರ, ವಿಜಯನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka weather Forecast
Koo

ಕಾರವಾರ: ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಅಲೆಗಳ ಅಬ್ಬರ (Karnataka Weather Forecast) ಜೋರಾಗಿದೆ. ಭಾರೀ ಅಲೆಗಳ ಅಬ್ಬರಕ್ಕೆ (Rain News) ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಹಾರವಾಡದ ತರಂಗಮೇಟ ಪ್ರದೇಶದಲ್ಲಿ ಮನೆಯೊಂದು ಕೊಚ್ಚಿಹೋಗಿದೆ. ಮೀನುಗಾರ ಅಶೋಕ್ ಹರಿಕಂತ್ರ ಎಂಬುವವರ ಮನೆ ಸಮುದ್ರಪಾಲಾಗಿದೆ.

ತರಂಗಮೇಟ ತೀರದ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ಅಲೆಗಳ ಅಬ್ಬರಕ್ಕೆ ಕಳೆದ ಮೂರು ತಿಂಗಳಿಂದ ಕಡಲಕೊರೆತ ಉಂಟಾಗಿತ್ತು. ಕುಟುಂಬಸ್ಥರು ಎರಡು ತಿಂಗಳ ಹಿಂದೆಯೇ ಮನೆ ಬಿಟ್ಟು ಬೇರೆಡೆ ಉಳಿದುಕೊಂಡಿದ್ದರು. ಇಂದು ಗುರುವಾರ ಅಲೆಗಳ ಅಬ್ಬರಕ್ಕೆ ಮನೆ, ತೆಂಗಿನಮರ ನೀರುಪಾಲಾಗಿದೆ. ಮನೆ, ತೆಂಗಿನಮರ ಕೊಚ್ಚಿಹೋಗುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ತರಂಗಮೇಟ ಕಡಲತೀರಕ್ಕೆ ಹೊಂದಿಕೊಂಡು 30ಕ್ಕೂ ಅಧಿಕ ಮೀನುಗಾರರ ಮನೆಗಳು ಇವೆ. ಕಡಲತೀರಕ್ಕೆ ಅಲೆತಡೆಗೋಡೆ ನಿರ್ಮಿಸುವಂತೆ ಮನವಿ ಮಾಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನ ತಪ್ಪಲಿನಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರ ಮಳೆಗೆ ಚಾರ್ಮಾಡಿಯಲ್ಲಿ ಬಂಡೆಗಳು ಧರೆಗುರುಳಿವೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್‌ನ 8 ಮತ್ತು 9ನೇ ತಿರುವಿನಲ್ಲಿ ಘಟನೆ ನಡೆದಿದೆ.

ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದೆ. ಮಳೆ ನೀರಿನ ಜತೆ ರಸ್ತೆಗೆ ಕಲ್ಲುಗಳು ತೇಲಿ ಬಂದಿದೆ. ಗುಡ್ಡ ಕುಸಿದು ರಸ್ತೆ ಮೇಲೆ ಬಂಡೆ ಕಲ್ಲುಗಳು ಉರುಳಿವೆ. ಸ್ಥಳಕ್ಕೆ ಚಾರ್ಮಾಡಿ ಘಾಟಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರ ಎಂದಿನಂತೆ ಇದ್ದು, ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಇಲ್ಲ.

ಇನ್ನೂ ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಗ್ರಾಮಸ್ಥರ ಕಣ್ಣೆದುರೆ ಮನೆಗೆ ಸಿಡಿಲು ಬಡಿದು, ಮನೆ ಚಾವಣಿ ಸಂಪೂರ್ಣ ಹಾನಿಯಾಗಿ, ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಮಾಳಿಗನಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಗ್ರಾಮದ ಸೀತು ಎಂಬುವವರ ಮನೆಗೆ ಸಂಪೂರ್ಣ ಹಾನಿಯಾಗಿದೆ. ಮನೆಯ ಸದಸ್ಯರು ತೋಟದ ಕೆಲಸಕ್ಕೆ ಹೋಗಿದ್ದರಿಂದ ಅವಘಡ ಸಂಭವಿಸಿದಾಗ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಮನೆಯ ಹೆಂಚುಗಳು, ಬಾಗಿಲು ಕಿಟಕಿ ಸುಟ್ಟ ಸ್ಥಿತಿ ತಲುಪಿದೆ.

ಇದನ್ನೂ ಓದಿ: Belgavi News : ಪರಿಹಾರ ನೀಡಲು ವಿಳಂಬ; ಬೆಳಗಾವಿ ಎಸಿ ಕಚೇರಿಯ ಕಂಪ್ಯೂಟರ್, ಪ್ರಿಂಟರ್ ಹೊತ್ತೊಯ್ದ ರೈತರು!

ವಿಜಯಪುರದಲ್ಲಿ ಉಕ್ಕಿ ಹರಿಯುತ್ತಿರುವ ಹಳ್ಳ

ಇತ್ತ ರೋಣಿಹಾಳ ಹಳ್ಳ ಉಕ್ಕಿ ಹರಿಯುತ್ತಿದ್ದು, ಜನರು ಹಳ್ಳದಲ್ಲೆ ಓಡಾಡುತ್ತಿದ್ದಾರೆ. ನಿನ್ನೆ ಬುಧವಾರ ತಡರಾತ್ರಿ ಸುರಿದ ಮಳೆಗೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ರೋಣಿಹಾಳ. ಗರಸಂಗಿ, ಆಸಂಗಿ ಹಳ್ಳಗಳು ಉಕ್ಕಿ ಹರಿದಿದೆ. ಅಪಾಯದ ನಡುವೆಯೂ ಗ್ರಾಮಸ್ಥರು ಜೀವದ ಹಂಗು ತೊರೆದು ಹಳ್ಳ ದಾಟಲು ಯತ್ನಿಸುತ್ತಿದ್ದಾರೆ. ವಿಜಯಪುರ ತಾಲೂಕಿನ ಲೋಗಾಂವಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆಗೆ ಹಾನಿಯಾಗಿದೆ. ರಾಜು ಹುನ್ನೂರ್ ಎಂಬುವವರಿಗೆ ಸೇರಿದ ದ್ರಾಕ್ಷಿ ಬೆಳೆ ಭಾರಿ ಮಳೆಗೆ ಬೆಳೆಯ ಕಂಬಗಳು ಹಾಗೂ ದ್ರಾಕ್ಷಿ ಬೆಳೆ ನೆಲಕ್ಕುರುಳಿವೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ದ್ರಾಕ್ಷಿ ಹಾನಿಯಾಗಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ರೈತರ ಮನವಿ ಮಾಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ತಡ ರಾತ್ರಿ ಭರ್ಜರಿ ಮಳೆಗೆ ಬಹುತೇಕ ಕಡೆ ರಸ್ತೆಗಳು ಜಲಾವೃತಗೊಂಡಿದ್ದವು. ದಾವಣಗೆರೆ ನಗರ ಹಾಗೂ ಹೊನ್ನಾಳಿ ಪಟ್ಟಣ ಸೇರಿದಂತೆ ಜಿಲ್ಲೆಯ ವಿವಿಧ ಕಡೆ ಸುರಿದ ಮಳೆಯಿಂದಾಗಿ ಜಮೀನಿಗೆ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ರೈತರ ಜಮೀನಿ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಭಾರಿ ಮಳೆಗೆ ಬೈಲುವದ್ದಿಗೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ಕೆರೆ ಕೋಡಿ ಬಿದ್ದು ಗುಲಾಬಿ ತೋಟ, ಮೆಣಸಿನಕಾಯಿ ತೋಟ, ಹತ್ತಿ, ಹಾಗೂ ಮೆಕ್ಕೆಜೋಳ ಬೆಳೆದಿದ್ದ ಜಮೀನಿಗೆ ನೀರು ನುಗ್ಗಿದೆ. ಹತ್ತಾರು ಸಾವಿರ ಖರ್ಚು ಮಾಡಿದ್ದ ಬೆಳೆ ಮಳೆಗೆ ಮುಕ್ಕಾಲು ಭಾಗ ಹಾನಿಯಾಗಿದೆ. ಬೆಳೆ ಹಾನಿಯಾಗಿದ್ದಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂದು ಗುಲಾಬಿ ಬೆಳೆಗಾರ ಕಂಗಾಲಾಗಿದ್ದಾರೆ. ಪರಿಹಾರಕ್ಕಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ ಬೆಳೆದ ರೈತರಿಂದ ಆಗ್ರಹಿಸಿದ್ದಾರೆ.

ಬಿರುಗಾಳಿಗೆ ವಾಲಿದ ಸಿಗ್ನಲ್ ಕಂಬ!

ಬಿರುಗಾಳಿಗೆ ಸಿಗ್ನಲ್‌ ಕಂಬ ವಾಲಿದ ಘಟನೆ ಗದಗ ನಗರದ ಮುಳಗುಂದ ನಾಕಾದ ಸಿಗ್ನಲ್‌ನಲ್ಲಿ ಘಟನೆ ನಡೆದಿದೆ. ವಾಹನಗಳ ಓಡಾಡುವ ಸಂದರ್ಭದಲ್ಲಿ ಕಂಬ ವಾಲಿದ್ದು, ಸವಾರರು ಕಕ್ಕಾಬಿಕ್ಕಿಯಾದರು. ತಕ್ಷಣ ಅಲರ್ಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೆಡ್ ಹಾಕಿ ಪರ್ಯಾಯ ಸಂಚಾರಕ್ಕೆ ವ್ಯವಸ್ಥೆ ಮಾಡಿದರು. ಸ್ಥಳಕ್ಕೆ ಟ್ರಾಫಿಕ್ ಪಿಎಸ್ಐ ಶಕುಂತಲಾ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಾಳೆಗೂ ಇರಲಿದೆ ಮಳೆ ಅಬ್ಬರ

ನಾಳೆ ಶುಕ್ರವಾರ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಗುಡುಗು ಸಹಿತ ಮಳೆಯಾಗಲಿದೆ. ಕೆಲವೊಮ್ಮೆ ನಿರಂತರ ಗಾಳಿಯ ವೇಗ 40-50 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೋಲಾರ

Road Accident : ಬಂಗಾರಪೇಟೆಯಲ್ಲಿ ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ; ರಸ್ತೆ ದಾಟುತ್ತಿದ್ದವನಿಗೆ ಕಾರು ಡಿಕ್ಕಿ

Road Accident : ಕೋಲಾರದಲ್ಲಿ ವ್ಹೀಲಿಂಗ್‌ ಹಾವಳಿಗೆ ಅರ್ಚಕರೊಬ್ಬರು ಮೃತಪಟ್ಟಿದ್ದಾರೆ. ದೇವನಹಳ್ಳಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಉರುಳಿ ಬಿದ್ದಿದೆ.

VISTARANEWS.COM


on

By

Road Accident
Koo

ಕೋಲಾರ: ವ್ಹೀಲಿಂಗ್ ಹಾವಳಿಗೆ (Road Accident) ದೇಗುಲದ ಅರ್ಚಕರೊಬ್ಬರು ಬಲಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ವಿವೇಕಾನಂದ ರಸ್ತೆ ಬಸ್ ನಿಲ್ದಾಣ ಬಳಿ ಘಟನೆ ನಡೆದಿದೆ. ಗಾಂಧಿನಗರದ ಆಂಜನೇಯಸ್ವಾಮಿ ದೇವಾಲಯದ ಅರ್ಚಕ ಗೋಪಾಲ (45) ಮೃತ ದುರ್ದೈವಿ.

ನಿನ್ನೆ ರಾತ್ರಿ 10 ಗಂಟೆ ಸಮಯದಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರಿಂದ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗಾಯಗೊಂಡಿದ್ದ ಗೋಪಾಲರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅರ್ಚಕ ಗೋಪಾಲ್ ಮೃತಪಟ್ಟಿದ್ದಾರೆ. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಕಾರು ಡಿಕ್ಕಿ ಪಾದಚಾರಿ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವ್ಯಕ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸೋಲೂರು ಗ್ರಾಮದ ಕೃಷ್ಣಪ್ಪ (80) ಮೃತ ದುರ್ದೈವಿ. ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ತಾಲೂಕಿನ ಬ್ಯಾಡರಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಡಿಕ್ಕಿ ಹೊಡೆದ ಬಳಿಕ ಕಾರು ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಅಪಘಾತ ಮಾಡಿ ಕಾರು ಚಾಲಕ ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರು ರಾಷ್ಟ್ರೀಯ ಹೆದ್ಧಾರಿ 207ರಲ್ಲಿ ದೊಡ್ಡಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Gas Cylinder Blast: ಸಿಲಿಂಡರ್‌ ಸ್ಫೋಟಕ್ಕೆ ಸುಟ್ಟುಕರಕಲಾದ ವ್ಯಕ್ತಿ; ಮನೆ ಗೋಡೆ ಬಿದ್ದು ಮಕ್ಕಳು ಗಾಯ

ಹಾಸನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಲಾರಿ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕಕ್ಕೆ ಬಿದ್ದಿದೆ. ಲಾರಿ ಚಾಲಕ ಸೇರಿ ಮೂವರಿಗೆ ಗಾಯವಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್ ರಸ್ತೆಯ ದೋಣಿಗಲ್ ಬಳಿ ಅಪಘಾತ ನಡೆದಿದೆ. ಲಾರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಸರಕು ತುಂಬಿಕೊಂಡು ತೆರಳುತ್ತಿತ್ತು.

ಕೆಲ ದಿನಗಳ ಹಿಂದೆ ಭಾರಿ ಮಳೆಯಿಂದ ನೀರು ಹರಿದು ಹೆದ್ದಾರಿ ಪಕ್ಕದಲ್ಲಿ ಬೃಹತ್ ಗುಂಡಿ ಸೃಷ್ಟಿಯಾಗಿತ್ತು. ತಡರಾತ್ರಿ ತಿರುವಿನಲ್ಲಿ ಚಾಲಕನಿಗೆ ನಿಯಂತ್ರಣ ಸಿಗದೆ ಲಾರಿ ಕಂದಕಕ್ಕೆ ಪಲ್ಟಿಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳದ ಸಿಬ್ಬಂದಿ. ಲಾರಿಯಲ್ಲಿ ಸಿಲುಕಿದ್ದ ಕುಣಿಗಲ್ ಮೂಲದ ಲಾರಿ ಚಾಲಕ ಜಾಫರ್, ಸಿಮ್ರಾನ್ ಮತ್ತು ಹತಾಹುಲ್ಲರನ್ನು ರಕ್ಷಿಸಿದ್ದಾರೆ. ಗಾಯಾಳುಗಳಿಗೆ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೀದಿನಾಯಿ ದಾಳಿಗೆ 15 ಕುರಿ ಮರಿ ದಾರುಣ ಸಾವು

ಬೀದಿ ನಾಯಿ ದಾಳಿಗೆ 15 ಕುರಿಮರಿ ದಾರುಣವಾಗಿ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಜಿ.ಪಿ ರಂಗಪ್ಪ ಬಡಾವಣೆಯಲ್ಲಿ ಮಾರಣ್ಣ ಎಂಬುವವರಿಗೆ ಸೇರಿದ ಕುರಿಮರಿಗಳನ್ನು ಮೇಯಿಸಲು ಹೋದಾಗ ನಾಯಿ ದಾಳಿ ನಡೆದಿದೆ. ಸುಮಾರು 50 ಸಾವಿರ ಬೆಲೆ ಬಾಳುತ್ತಿದ್ದ ಕುರಿಮರಿ ಮೃತಪಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
MB Patil
ಕರ್ನಾಟಕ43 seconds ago

M B Patil: ಕಾನೂನು ಪ್ರಕಾರವೇ ಜಿಂದಾಲ್‌ ಕಂಪನಿಗೆ ಜಮೀನು: ಎಂ.ಬಿ. ಪಾಟೀಲ್

Prabhas
ಸಿನಿಮಾ54 seconds ago

Prabhas: ಶಾರುಖ್, ಸಲ್ಮಾನ್ ಹಿಂದಿಕ್ಕಿ ‘ಅತ್ಯಂತ ಜನಪ್ರಿಯ ಪುರುಷ ತಾರೆ’ಯಾಗಿ ಹೊರಹೊಮ್ಮಿದ ಪ್ರಭಾಸ್!

Sexual assault
ಪ್ರಮುಖ ಸುದ್ದಿ16 mins ago

Sexual assault: ಶಾಲೆಗಳಲ್ಲಿ ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಅತ್ಯಾಚಾರ; ಪ್ರಮುಖ ಆರೋಪಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

Health Tips
ಆರೋಗ್ಯ33 mins ago

Health Tips: ನಿಂತು ಊಟ ಮಾಡುವುದಕ್ಕಿಂತ ಕೂತು ಊಟ‌ ಮಾಡಿದರೆ ಏನೇನು ಲಾಭಗಳಿವೆ ನೋಡಿ!

Nirmal Benny
ಸಿನಿಮಾ35 mins ago

Nirmal Benny: ಹೃದಯಾಘಾತದಿಂದ ಮಾಲಿವುಡ್‌ನ ಖ್ಯಾತ ನಟ ನಿರ್ಮಲ್ ಬೆನ್ನಿ ನಿಧನ

Self Harming
ಮೈಸೂರು43 mins ago

Self Harming : ಪ್ರೇಮ ವೈಫಲ್ಯಕ್ಕೆ ಯುವಕ ಆತ್ಮಹತ್ಯೆ; ಅಪ್ಪನ ಸಾಲಕ್ಕೆ ನೇಣು ಬಿಗಿದುಕೊಂಡ ಮಗ!

Shakib Al Hasan
ಕ್ರೀಡೆ46 mins ago

Shakib Al Hasan: ಬಾಂಗ್ಲಾ ತಂಡದ ನಾಯಕ ಶಕಿಬ್​ ವಿರುದ್ಧ ಕೊಲೆ ಪ್ರಕರಣ ದಾಖಲು

Fashion Trend
ಫ್ಯಾಷನ್48 mins ago

Fashion Trend: ಜೆನ್‌ ಜಿ ಫ್ಯಾಷನ್‌‌‌ಗೆ ಎಂಟ್ರಿ ಕೊಟ್ಟ ವೈಬ್ರೆಂಟ್‌ ಕ್ವಿರ್ಕಿ ಲೆಗ್ಗಿಂಗ್ಸ್!

PM Modi Ukraine Visit
ವಿದೇಶ56 mins ago

PM Modi Ukraine Visit: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ- ಝೆಲೆನ್ಸ್ಕಿಗೆ ಆತ್ಮೀಯ ಅಪ್ಪುಗೆ

Consolidated Fund Misuse
ಪ್ರಮುಖ ಸುದ್ದಿ58 mins ago

Consolidated Fund Misuse: 1,494 ಕೋಟಿ ಸಂಚಿತ ನಿಧಿ ದುರ್ಬಳಕೆ; ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌