Site icon Vistara News

Murder revenge | ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ; ಸಂಬಂಧಿಕರಿಂದ ಆರೋಪಿಯ ಮಾವನ ಮನೆಗೆ ಬೆಂಕಿ

ಕೊಲೆ

ಕೋಲಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಕೊಲೆಯಾಗಿದ್ದು, ಇದರಿಂದ ಆಕ್ರೋಶಗೊಂಡ ಮೃತರ ಸಂಬಂಧಿಕರು ಆರೋಪಿಯ ಮಾವನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕರಿಪಲ್ಲಿ ಗ್ರಾಮದಲ್ಲಿ ನಡೆದಿದೆ.

ವೆಂಕಟರವಣಪ್ಪ (55) ಕೊಲೆಯಾದ ವ್ಯಕ್ತಿ. ಭಾನುವಾರ ನ್ಯಾಯ ಪಂಚಾಯತಿ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ವೆಂಕಟರವಣಪ್ಪನನ್ನು ಗಣೇಶ್ ಹಾಗೂ ಸಹಚರರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಮೃತರ ಸಂಬಂಧಿಕರು, ಆರೋಪಿ ಗಣೇಶನ ಮಾವ ಲಚ್ಚನ್ನ ಮನೆಗೆ ಬೆಂಕಿ ಹಚ್ಚಿದ್ದಾರೆ.

ಅವಘಡದಲಿ ಮನೆಯಲ್ಲಿದ್ದ ಟಿವಿ, ಬಟ್ಟೆಗಳು, ಪೀಠೋಪಕರಣ, ದ್ವಿಚಕ್ರ ವಾಹನ ಸೇರಿ ವಿವಿಧ ಸಾಮಗ್ರಿ ಭಸ್ಮವಾಗಿವೆ. ಸ್ಥಳಕ್ಕೆ ಕೋಲಾರ ಪೊಲೀಸ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ರಕ್ತದ ಮಾದರಿ ಪಡೆಯುವಾಗ ನವಜಾತ ಶಿಶು ಸಾವು; ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

Exit mobile version