Site icon Vistara News

ನಗರಸಭೆ ಸದಸ್ಯನ ಕೊಲೆ ಆರೋಪಿಗೆ ಪೊಲೀಸರ ಗುಂಡೇಟು

ಪೊಲೀಸರಿಂದ ಫೈರಿಂಗ್‌

ಕೋಲಾರ: ನಗರಸಭೆ ಸದಸ್ಯ ಜಗನ್‌ ಮೋಹನ್‌ ರೆಡ್ಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಫಾರಿ ಕಿಲ್ಲರ್‌ ಬಾಲಾಜಿ ಸಿಂಗ್‌ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮುಳಬಾಗಿಲು ಇನ್ಸ್‌ಪೆಕ್ಟರ್‌ ಲಕ್ಷ್ಮೀಕಾಂತ್‌ ಫೈರಿಂಗ್‌ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಆತ ಹಲ್ಲೆಗೆ ಯತ್ನಿಸಿದ ಎನ್ನಲಾಗಿದೆ. ಈ ವೇಳೆ ಆರೋಪಿ ಬಾಲಾಜಿ ಸಿಂಗ್‌ ಮೇಲೆ ಗುಂಡು ಹಾರಿಸಲಾಗಿದೆ. ಆರೋಪಿಯನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ | Agnipath protest: ʻಅಗ್ನಿʼಕುಂಡವಾದ ಏಳು ರಾಜ್ಯಗಳು; ಬಿಹಾರ ಡಿಸಿಎಂ ಮನೆಗೆ ಬೆಂಕಿ, ತೆಲಂಗಾಣದಲ್ಲಿ ಫೈರಿಂಗ್‌

ಘಟನೆಯ ಹಿನ್ನೆಲೆ ಏನು?

ಜೂನ್‌ 7ರಂದು ಜಿಲ್ಲೆಯ ಮುಳುಬಾಗಿಲು ನಗರಸಭೆ ಸದಸ್ಯ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜಗನ್‌ ಮೋಹನ್‌ ಹತ್ಯೆ ನಡೆದಿತ್ತು. ಮುತ್ಯಾಲಪೇಟೆಯ ಗಂಗಮ್ಮ ದೇವಾಲಯಕ್ಕೆ ಹೋಗುವಾಗ ಅಪರಿಚಿತ ಗುಂಪೊಂದು ಜಗನ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಜಗನ್‌ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪ್ರಾಣ ಬಿಟ್ಟಿದ್ದರು. ಮಾಜಿ ಶಾಸಕ ಕೊತ್ತೂರು ಮಂಜುನಾಥ ಬೆಂಬಲಿಗ ಮೋಹನ್‌ ಮೇಲೆ ನಡೆದ ದಾಳಿಯಿಂದ ಕೋಲಾರ ಬೆಚ್ಚಿ ಬಿದ್ದಿತ್ತು.

ಇದನ್ನೂ ಓದಿ | Agneepath | ಅಗ್ನಿಪಥ್ ಯೋಜನೆ ಕಿಚ್ಚು: ರಾಜ್ಯದಲ್ಲೂ ಹೈ ಅಲರ್ಟ್​​ ಆದ ರೈಲ್ವೇ ಪೊಲೀಸರು

Exit mobile version