Site icon Vistara News

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

road Accident in kolar evm

ಕೋಲಾರ : ಕೋಲಾರದ ವಡಗೂರ್ ಗೇಟ್ ಬಳಿ ಇವಿಎಂ‌ (EVM) ಸಾಗಿಸುತ್ತಿದ್ದಾಗ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ (Road Accident) ಘಟನೆ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ.

ಇದರಿಂದಾಗಿ ಅಡ್ಡಾದಿಡ್ಡಿಯಾಗಿ ಹೋದ ಕ್ಯಾಂಟರ್‌ ರಸ್ತೆ ಬದಿ ನಿಂತಿದೆ. ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇವಿಎಂ ಹೊತ್ತ ವಾಹನ ಕಳೆದೊಂದು ಗಂಟೆಯಿಂದ ರಸ್ತೆಯಲ್ಲೇ ನಿಂತಿದೆ.

ಸದ್ಯ ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗುತ್ತದೆ. ಸ್ಥಳದಲ್ಲೇ‌ ತಹಸೀಲ್ದಾರ್ ಹಾಗೂ ಪೊಲೀಸ್ ‌ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

ಬೆಂಗಳೂರು: ಆಂಬ್ಯುಲೆನ್ಸ್‌ ಚಾಲಕನ (Ambulance driver) ಎಡವಟ್ಟಿನಿಂದ ಸರಣಿ ಅಪಘಾತ (Road Accident) ಸಂಭವಿಸಿದೆ. ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಆಂಬ್ಯುಲೆನ್ಸ್‌ ಚಾಲಕ ಸುಮಂತ್‌ ಎಂಬಾತ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.

ಸರಣಿ ಅಪಘಾತಕ್ಕೆ ಟೆಕ್ಷನ್‌ ಆದ ಚಾಲಕ ಬ್ರೇಕ್ ತುಳಿಯುವ ಬದಲು ಎಕ್ಸಿಲೇಟರ್ ತುಳಿದು ಮತ್ತೆ ಅವಾಂತರ ಸೃಷ್ಟಿಸಿದ್ದಾನೆ. ಈ ವೇಳೆ ಕಾರುಗಳಿಗೆ ಗುದ್ದಿದ ಪರಿಣಾಮ ಸಂಪೂರ್ಣ ಜಖಂಗೊಂಡಿವೆ. ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬ್ಯುಲೆನ್ಸ್ ಚಾಲಕ ಸುಮಂತ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ಕಲಬುರಗಿ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದಾರೆ. ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version