Site icon Vistara News

Self Harm: ಸಾರ್ವಜನಿಕವಾಗಿ ಕುತ್ತಿಗೆ ಕೊಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ

self harm kolar

ಕೋಲಾರ: ಸಾರ್ವಜನಿಕವಾಗಿ ಕುತ್ತಿಗೆ ಕೊಯ್ದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ (Self harm, suicide case) ಡಿಕೊಂಡಿದ್ದಾರೆ. ಕೋಲಾರ ನಗರದ ಜನನಿಬಿಡ ಇಟಿಸಿಎಂ ಸರ್ಕಲ್ ಬಳಿ ಘಟನೆ ನಡೆದಿದೆ.

ಬೇತಮಂಗಲ ನಿವಾಸಿ ರೆಹಮತ್ ಉಲ್ಲಾ ಬೇಗ್ (35) ಕುತ್ತಿಗೆ ಕುಯ್ದುಕೊಂಡು ಮೃತಪಟ್ಟ ವ್ಯಕ್ತಿ. ಸಾರ್ವಜನಿಕವಾಗಿ ಕುತ್ತಿಗೆ ಕುಯ್ದುಕೊಂಡ ರೆಹಮತ್‌ ಉಲ್ಲಾ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆ ಮೃತಪಟ್ಟರು. ಗ್ಯಾಸ್ ಸ್ಟವ್ ರಿಪೇರಿ ಕೆಲಸ ಮಾಡಿಕೊಂಡಿದ್ದ ರಹಮತ್‌ ಉಲ್ಲಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಕೋಲಾರ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ವಿಸರ್ಜನೆ ವೇಲೆ ಮುಳುಗುತ್ತಿದ್ದ ಮಹಿಳೆಯ ರಕ್ಷಣೆ

ಕೊಡಗು: ಗಣಪತಿ ವಿಸರ್ಜನೆ ಸಂದರ್ಭ ಕಾಲುಜಾರಿ ಕೆರೆಗೆ ಬಿದ್ದ ಮಹಿಳೆಯೊಬ್ಬರನ್ನು ಯುವಕರು ಸಿನಿಮೀಯ ರೀತಿಯಲ್ಲಿ ಯುವಕರು ರಕ್ಷಿಸಿದ್ದಾರೆ. ಕೊಡಗು ಜಿಲ್ಲೆ ವೀರಾಜಪೇಟೆ ತಾಲೂಕಿನ ಅಮ್ಮತ್ತಿ- ಕಾರ್ಮಾಡು ಗ್ರಾಮದಲ್ಲಿ ಘಟನೆ ನಡೆದಿದೆ.

ಮೇರಿ (35) ಮರುಜೀವ ಪಡೆದ ಮಹಿಳೆ. ಗ್ರಾಮದ ಚೌಡೇಶ್ವರಿ ನಗರದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಗಣೇಶ ವಿಸರ್ಜನೆ ಕೆರೆಯಲ್ಲಿ ನಡೆಯುತ್ತಿದ್ದ ಸಂದರ್ಭ ಕೆರೆಯ ಮತ್ತೊಂದು ಬದಿಯಲ್ಲಿ ಮೇರಿ ಎಂಬವರು ಕಾಲು ಜಾರಿ ಕೆರೆಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಶಿವಕುಮಾರ್ ಹಾಗೂ ಸಂಕೇತ್ ಎಂಬವರು ಮಹಿಳೆಯನ್ನು ಮೇಲೆತ್ತಿ ಜೀವ ಉಳಿಸಿದ್ದಾರೆ. ಮಹಿಳೆಯನ್ನು ರಕ್ಷಣೆ ಮಾಡಿದ ವೀಡಿಯೋ ಮೊಬೈಲಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: Mangalore News: 70, 80 ವರ್ಷದ ಇಬ್ಬರು ವೃದ್ಧ ಸಹೋದರಿಯರು ಆತ್ಮಹತ್ಯೆಗೆ ಶರಣು

Exit mobile version