ಕರ್ನಾಟಕ
Koppala News: ಬೇಸಿಗೆ ಶಿಬಿರ ಕೇಂದ್ರದಲ್ಲಿ ಶಾಲಾ ಮಕ್ಕಳೊಂದಿಗೆ ಬೆರೆತು ಆಟವಾಡಿದ ಜಿ.ಪಂ. ಸಿಇಒ
Koppala News: ಕುಕನೂರು ತಾಲೂಕಿನ ಭಾನಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ್ದ ಕೊಪ್ಪಳ ಜಿ.ಪಂ.ಸಿಇಒ ರಾಹುಲ್ ರತ್ನಂ ಪಾಂಡೇಯ ಅವರು ಪ್ರತಿಯೊಂದು ಮಗುವಿನ ಕೈಕುಲಕಿ ಮಕ್ಕಳಲ್ಲಿದ್ದ ಭಯವನ್ನು ದೂರ ಮಾಡಿ, ಕೆಲಕಾಲ ಅವರೊಂದಿಗೆ ಆಟವಾಡುವ ಮೂಲಕ ಸಮಯ ಕಳೆದರು.
ಕುಕನೂರು: ತಾಲೂಕಿನ ಭಾನಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿರುವ ಬೇಸಿಗೆ ಶಿಬಿರ (Summer camp) ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ್ದ ಕೊಪ್ಪಳ ಜಿ.ಪಂ. ಸಿಇಒ (CEO) ರಾಹುಲ್ ರತ್ನಂ ಪಾಂಡೇಯ ಅವರು ಕೆಲಕಾಲ ಶಾಲಾ ಮಕ್ಕಳೊಂದಿಗೆ (School children’s) ಆಟವಾಡುವ ಮೂಲಕ ಸಮಯ ಕಳೆದರು.
ಜಿಲ್ಲಾ ಪಂಚಾಯಿತಿಯ ಸಹಯೋಗದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಓದುವ ಬೆಳಕು ಕಾರ್ಯಕ್ರಮದಡಿ ತಾಲೂಕಿನ ಭಾನಾಪೂರ ಮತ್ತು ತಳಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಈಗಾಗಲೇ ಪ್ರಾರಂಭವಾಗಿರುವ ಬೇಸಿಗೆ ಶಿಬಿರದಲ್ಲಿ ಶಾಲಾ ಮಕ್ಕಳಿಗೆ ಆಟ ಪಾಠಗಳೊಂದಿಗೆ ಕಚ್ಚಾ ವಸ್ತುಗಳಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಬಗೆಗೆ ತರಬೇತಿಯನ್ನು ನೀಡಲಾಗುತ್ತಿದೆ.
ಇದನ್ನೂ ಓದಿ: ನಾನು ಮಂತ್ರಿಯಾಗಿದ್ದರೆ ಒಂದು ಇಲಾಖೆಗೆ ಮಾತ್ರ; ಈಗ ಎಲ್ಲ ಮಂತ್ರಿಗಳೂ ನನ್ನ ವ್ಯಾಪ್ತಿಗೆ ಬರುತ್ತಾರೆ: ಯು.ಟಿ. ಖಾದರ್
ಪ್ರತಿಯೊಂದು ಮಗುವಿನ ಕೈಕುಲುಕಿ ಮಕ್ಕಳಲ್ಲಿದ್ದ ಭಯವನ್ನು ದೂರ ಮಾಡಿ, ಅವರೊಂದಿಗೆ ಬೆರೆತು ಮಕ್ಕಳ ಚಟುವಟಿಕೆಗಳನ್ನು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ ಅವರು ಸೂಕ್ಷ್ಮವಾಗಿ ಗಮಸಿದರು. ಇದೇ ವೇಳೆ ಮಕ್ಕಳೊಂದಿಗೆ ಕೆಲಕಾಲ ಲಗೋರಿ, ಖೋಖೋ, ಕಬಡ್ಡಿ, ಕೇರಂ, ಕೆರೆ ದಡ, ಹಾವು ಏಣಿ ಆಟಗಳನ್ನು ಆಡಿ, ಖುಷಿಪಟ್ಟರು.
ಬಳಿಕ ಮಾತನಾಡಿದ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೇಯ, ಬೇಸಿಗೆ ಶಿಬಿರ ವೀಕ್ಷಣೆಯೊಂದಿಗೆ ಗ್ರಾಮದ ಆರೋಗ್ಯ ಕೇಂದ್ರ, ಪೋಸ್ಟ್ ಆಫೀಸ್, ಗ್ರಾಮ ಪಂಚಾಯತಿ, ಕುಡಿಯುವ ನೀರಿನ ನಿರ್ವಹಣೆ, ಸ್ವ ಸಹಾಯ ಸಂಘಗಳ ಕಾರ್ಯವೈಖರಿಗಳನ್ನು ತಿಳಿದುಕೊಳ್ಳಲು ಈ ಶಿಬಿರ ಸಹಕಾರಿಯಾಗಿದೆ ಎಂದು ತಿಳಿಸಿದರು.
ಮಕ್ಕಳು ಬೇಸಿಗೆ ಶಿಬಿರದ ದೈನಂದಿನ ಚಟುವಟಿಕೆಯಲ್ಲಿ ಮಾಡಿದ ಕ್ರಾಫ್ಟ್ಗಳನ್ನು ವೀಕ್ಷಿಸಿ, ಮಕ್ಕಳ ಕಲಿಕಾ ಆಸಕ್ತಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಇದನ್ನೂ ಓದಿ: New Parliament Building: ಸಂಸತ್ ಭವನದ ಉದ್ಘಾಟನೆ; ರಾಷ್ಟ್ರಪತಿಗೆ ಆಹ್ವಾನ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ
ನಂತರ ತಳಕಲ್ ಗ್ರಾಮದಲ್ಲಿ ನಿರ್ಮಾಣವಾದ ಉದ್ಯಾನವನ ಹಾಗೂ ಸ್ವ-ಸಹಾಯ ಸಂಘದಿಂದ ಮಹಿಳೆಯರು ನಡೆಸುತ್ತಿರುವ ಮೊಬೈಲ್ ಕ್ಯಾಂಟೀನ್ ಅನ್ನು ವೀಕ್ಷಿಸಿದರು.
ಕರ್ನಾಟಕ
Bandipur National Park: ಬಂಡೀಪುರವೀಗ ಫುಲ್ ರಶ್, ದಿನಕ್ಕೆ 8 ಲಕ್ಷ ರೂ. ಆದಾಯ; ಇದು ಮೋದಿ ಎಫೆಕ್ಟ್!
Bandipur Safari: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಈಗ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಪ್ರತಿ ದಿನಕ್ಕೆ ಎರಡರಿಂದ ಮೂರು ಸಾವಿರ ಮಂದಿ ಭೇಟಿ ನೀಡುತ್ತಿದ್ದು, ಏಳರಿಂದ ಎಂಟು ಲಕ್ಷ ರೂಪಾಯಿ ವರೆಗೂ ಆದಾಯ ಬರುತ್ತಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಹೋದ ಮೇಲೆ ಇಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಆಗಿದೆ ಎಂದು ಹೇಳಲಾಗುತ್ತಿದೆ.
ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನ (Bandipur National Park) ಈಗ ಮತ್ತಷ್ಟು ಕಳೆಗಟ್ಟಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಭೇಟಿ ಬಳಿಕ ಇಲ್ಲಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ವಾರಾಂತ್ಯವಾದರೆ ಸಾಕು ಬಂಡಿಪುರ ಸಫಾರಿಗೆ ಪ್ರವಾಸಿಗರು ಹರಿದು ಬರುತ್ತಿದ್ದಾರೆ.
2023ರ ಏಪ್ರಿಲ್ 9ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬಂಡಿಪುರದಲ್ಲಿ ಸಫಾರಿ ನಡೆಸಿದ್ದರು. ಪ್ರಾಜೆಕ್ಟ್ ಟೈಗರ್ನ (Project Tiger) 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಬಂಡೀಪುರದಲ್ಲಿ ಹುಲಿ ಸಂರಕ್ಷಣೆ ಸಂಬಂಧಿತ ಕಾರ್ಯಕ್ರಮ ಮತ್ತು ಹುಲಿಗಣತಿ ಬಿಡುಗಡೆ ಸೇರಿದಂತೆ ಹಲವು ಕಾರಣಗಳಿಗಾಗಿ ಅವರು ಆಗಮಿಸಿದ್ದರು. ಈ ವೇಳೆ ಮೋದಿ ಸುಮಾರು 2 ಗಂಟೆ ಕಾಲ ಬಂಡೀಪುರ ಉದ್ಯಾನವನವನ್ನು ಸುತ್ತಿದ್ದರು.
ಬಂಡೀಪುರ ಅಭಯಾರಣ್ಯದ ಸೊಬಗಿನ ಜತೆಗೆ ಕಾಲ ಕಳೆದಿದ್ದ ನರೇಂದ್ರ ಮೋದಿ ಅವರು ವನ್ಯಜೀವಿ, ನೈಸರ್ಗಿಕ ಸೌಂದರ್ಯವನ್ನು ವೀಕ್ಷಿಸಿ ಖುಷಿಪಟ್ಟಿದ್ದರು. ಸುದೀರ್ಘ 2 ಗಂಟೆ 15 ನಿಮಿಷ ಟೈಗರ್ ಸಫಾರಿ ನಡೆಸಿ, ಪ್ರಾಣಿ, ಪಕ್ಷಿಗಳನ್ನು ವೀಕ್ಷಿಸಿ ಅವುಗಳ ಫೋಟೊ ತೆಗೆದು ಖುಷಿಪಟ್ಟಿದ್ದರು. ಇದಾದ ಬಳಿಕ ಪರಿಸರ ಪ್ರೇಮಿಗಳು, ಪ್ರವಾಸಿ ಪ್ರೇಮಿಗಳಿಗೆ ಇದು ಫೇವರಿಟ್ ತಾಣವಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದಲ್ಲದೆ, ಕೇರಳ-ತಮಿಳುನಾಡು ಸೇರಿದಂತೆ ಇನ್ನಿತರ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸೆಂಗೋಲ್ ಪ್ರತಿಷ್ಠಾಪನೆ; ಕೈಮುಗಿದುಕೊಂಡು ರಾಜದಂಡ ಹಿಡಿದು ಬಂದ ಪ್ರಧಾನಿ ಮೋದಿ
ನಿತ್ಯ 2 ಸಾವಿರ ಜನ ಭೇಟಿ
ಪ್ರತಿ ನಿತ್ಯ ಒಂದೂವರೆಯಿಂದ ಎರಡು ಸಾವಿರ ಜನರ ಭೇಟಿ ನೀಡುತ್ತಿದ್ದು, ಸಫಾರಿಯಿಂದಲೇ ಪ್ರತಿ ದಿನ 7 ರಿಂದ 8 ಲಕ್ಷ ರೂಪಾಯಿ ಆದಾಯ ಸಂಗ್ರಹವಾಗುತ್ತಿದೆ. ಪ್ರವಾಸಿಗರ ಹೆಚ್ಚಳದಿಂದ ಅರಣ್ಯ ಇಲಾಖೆಯ ಆದಾಯದಲ್ಲಿಯೂ ಹೆಚ್ಚಳವಾಗುತ್ತಿದೆ.
ಹೊಸ ವಾಹನಗಳ ಖರೀದಿ
ಸಾರ್ವಜನಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು 4 ಹೊಸ ವಾಹನಗಳನ್ನು ಖರೀದಿಸಿದೆ. ಸಫಾರಿಗಾಗಿ ಮತ್ತೆ 2 ಬಸ್, 2 ಜೀಪ್ಗಳನ್ನು ಖರೀದಿ ಮಾಡಲಾಗಿದೆ.
ಟಿಕೆಟ್ಗಾಗಿ ಪರದಾಟ
ಆನ್ಲೈನ್ ಟಿಕೆಟ್ ವ್ಯವಸ್ಥೆ ಮಾಡಿರುವುದರಿಂದ ಮೊದಲೇ ಬುಕ್ಕಿಂಗ್ ನಡೆಯುತ್ತಿದ್ದು, ಸೋಲ್ಟ್ಔಟ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಆಫ್ಲೈನ್ ಟಿಕೆಟ್ ಕಡಿಮೆ ಪ್ರಮಾಣದಲ್ಲಿಟ್ಟಿದ್ದರಿಂದ ಅವುಗಳು ಎಲ್ಲರಿಗೂ ಸಿಗುತ್ತಿಲ್ಲ ಎಂದು ಹೇಳಲಾಗುತ್ತಿದ್ದು, ಟಿಕೆಟ್ ಸಿಗದೇ ಪ್ರವಾಸಿಗರು ನಿರಾಸೆಯಿಂದ ವಾಪಸ್ ಆಗುತ್ತಿರುವ ಸನ್ನಿವೇಶವೂ ಇದೆ.
912.04 ಚದರ ಕಿ.ಮೀ ವಿಸ್ತೀರ್ಣ
ಬಂಡೀಪುರ ರಾಷ್ಟ್ರೀಯ ಉದ್ಯಾನ ಹಾಗೂ ಹುಲಿ ಮೀಸಲು ಪ್ರದೇಶವು ಭಾರತದ 2ನೇ ಅತಿ ದೊಡ್ಡ ಹುಲಿ ಸಂರಕ್ಷಣಾ ತಾಣವಾಗಿದ್ದು, 912.04 ಚದರ ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ. ಈ ಬಂಡೀಪುರ ರಾಷ್ಟ್ರೀಯ ಉದ್ಯಾನವು ವಯನಾಡ್ (ವನ್ಯಜೀವಿ ಅಭಯಾರಣ್ಯ), ಮುದುಮಲೈ ಮತ್ತು ನಾಗರಹೊಳೆಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ.
ಇನ್ನು ಈ ಬಂಡೀಪುರವು ದಕ್ಷಿಣ ಭಾರತದ ಅತಿದೊಡ್ಡ ಸಂರಕ್ಷಿತ ಪ್ರದೇಶಗಳಲ್ಲಿ ಒಂದು ಎಂಬ ಖ್ಯಾತಿಯನ್ನು ಹೊಂದಿದೆ. ದಕ್ಷಿಣ ಏಷ್ಯಾದ ಕಾಡಾನೆಗಳ ಅತಿ ದೊಡ್ಡ ಆವಾಸ ಸ್ಥಾನವೂ ಇದಾಗಿದೆ. ಇದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿದೆ.
ಇದನ್ನೂ ಓದಿ: Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ
ಇಲ್ಲಿರುವ ವನ್ಯಜೀವಿಗಳು
ಹುಲಿಗಳು, ಚಿರತೆ, ಜಿಂಕೆ, ಕಡವೆಗಳು, ಕಾಡು ನಾಯಿಗಳು, ಕಾಡುಹಂದಿ, ಕರಡಿಗಳು, ದೈತ್ಯ ಮಲಬಾರ್ ಅಳಿಲುಗಳು, ಕಾಡೆಮ್ಮೆ ಇತ್ಯಾದಿಗಳು ವನ್ಯಜೀವಿಗಳನ್ನು ಬಂಡಿಪುರದಲ್ಲಿ ಕಾಣಬಹುದಾಗಿದೆ.
ದಿನಕ್ಕೆರಡು ಬಾರಿ ಅರಣ್ಯ ಸಫಾರಿ
ಬಂಡೀಪುರದಲ್ಲಿ ಪ್ರತಿದಿನ ಎರಡು ಬಾರಿ ಸಫಾರಿ ನಡೆಸಲಾಗುತ್ತದೆ. ಇಲ್ಲಿ ಎರಡು ರೀತಿಯ ಸಫಾರಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, ಬಸ್ ಹಾಗೂ ಜೀಪ್ ವ್ಯವಸ್ಥೆ ಇದೆ. ಬಸ್ನಲ್ಲಿ ಹೆಚ್ಚಿನ ಜನರು ಒಮ್ಮೆಲೆಗೆ ಹೋಗಬಹುದಾಗಿದ್ದು, ಇದು 45 ನಿಮಿಷಗಳಿಂದ 1 ಗಂಟೆಯ ಅವಧಿಯನ್ನು ಹೊಂದಿರುತ್ತದೆ. ಇನ್ನು ಜೀಪ್ ಸಫಾರಿಯಲ್ಲಿ ಸರಿಸುಮಾರು 2 ಗಂಟೆಗಳ ಅವಧಿ ಇರುತ್ತದೆ. ಈ ಎರಡೂ ಸಫಾರಿಗಳು ಬೆಳಗ್ಗೆ 6 ರಿಂದ 9 ಮತ್ತು ಮಧ್ಯಾಹ್ನ 3 ರಿಂದ 6 ಗಂಟೆ ನಡುವೆ ಕಾರ್ಯನಿರ್ವಹಿಸುತ್ತವೆ. ಇನ್ನು ನೀವು ಕ್ಯಾಮೆರಾಗಳನ್ನು ಕೊಂಡೊಯ್ಯುವುದಾದರೆ ಅದಕ್ಕೆ ಹೆಚ್ಚುವರಿ ಶುಲ್ಕವಿರುತ್ತದೆ.
ಎಷ್ಟು ದೂರ?
ಬಂಡೀಪುರ ರಾಷ್ಟ್ರೀಯ ಉದ್ಯಾನ ಮತ್ತು ಹುಲಿ ಮೀಸಲು ಬೆಂಗಳೂರಿನಿಂದ 220 ಕಿ.ಮೀ ದೂರದಲ್ಲಿದೆ. ಮೈಸೂರು ನಗರವು ಹತ್ತಿರದ ವಿಮಾನ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣವಾಗಿದೆ (ಬಂಡೀಪುರದಿಂದ 73 ಕಿ.ಮೀ). ಮೈಸೂರಿನಿಂದ ಬಂಡೀಪುರ ತಲುಪಲು ಬಸ್ಗಳು ಅಥವಾ ಟ್ಯಾಕ್ಸಿಗಳು ಸಿಗುತ್ತವೆ.
ವಸತಿ ವ್ಯವಸ್ಥೆಯೂ ಇದೆ
ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ಸ್ ಲಿಮಿಟೆಡ್ ರಾಷ್ಟ್ರೀಯ ಉದ್ಯಾನವನದ ಹೊರಗಡೆ ಬಂಡೀಪುರ ಸಫಾರಿ ಲಾಡ್ಜ್ ಅನ್ನು ನಡೆಸುತ್ತಿದೆ. ಕೆಲವು ಖಾಸಗಿ ರೆಸಾರ್ಟ್ಗಳು ಲಭ್ಯವಿವೆ. ಮೈಸೂರು ನಗರದಲ್ಲಿ ಹೆಚ್ಚಿನ ವಾಸ್ತವ್ಯದ ಆಯ್ಕೆಗಳೂ ಇದ್ದು, ಪ್ರವಾಸಿಗರು ಅನುಕೂಲಕ್ಕೆ ತಕ್ಕಂತೆ ವ್ಯವಸ್ಥೆ ಮಾಡಿಕೊಳ್ಳಬಹುದು.
ಯಾವ ಸಮಯ ಹೆಚ್ಚು ಸೂಕ್ತ
ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ವರ್ಷದ ಯಾವ ಸಮಯದಲ್ಲಿ ಭೇಟಿ ನೀಡಬಹುದಾದರೂ ಮುಂಗಾರು ನಂತರದ ಅಂದರೆ, ಅಕ್ಟೋಬರ್ನಿಂದ ಫೆಬ್ರವರಿವರೆಗೆ ಭೇಟಿ ನೀಡುವುದು ಉತ್ತಮ ಸಮಯ ಎಂದು ಹೇಳಲಾಗುತ್ತದೆ.
ಇದನ್ನೂ ಓದಿ: ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?
ರಾತ್ರಿ ಸಂಚಾರ ನಿಷೇಧ
ರಾತ್ರಿ 9 ರಿಂದ ಬೆಳಗ್ಗೆ 6 ರವರೆಗೆ ಬಂಡೀಪುರ ಕಾಡಿನ ಮೂಲಕ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಕಾರಣ ರಾತ್ರಿ ವಾಹನಗಳ ಸಂಚಾರದಿಂದ ಅಪಘಾತಗಳು ಸಂಭವಿಸಿ ಕಾಡು ಪ್ರಾಣಿಗಳು ಮೃತಪಡುತ್ತವೆ. ಹೀಗಾಗಿ ರಾತ್ರಿ ಸಂಚಾರವನ್ನು ನಿಷೇಧ ಮಾಡಲಾಗಿದೆ.
ಕರ್ನಾಟಕ
Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?
Karnataka Cabinet: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟವು ಶನಿವಾರ ಅಸ್ತಿತ್ವಕ್ಕೆ ಬಂದಿದೆ. 34 ಸಚಿವರ ಪೈಕಿ 16 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಬೆಂಗಳೂರು, ಕರ್ನಾಟಕ: ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರದಲ್ಲಿ ಎಲ್ಲ ಮಂತ್ರಿ ಸ್ಥಾನಗಳ್ನು (Karnataka Cabinet) ಭರ್ತಿ ಮಾಡಲಾಗಿದೆ. ಕಳೆದ ವಾರ 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ, ನಿನ್ನೆ ಮತ್ತೆ 24 ಶಾಸಕರು ಸಚಿವರಾಗಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಂತಾಗಿದೆ. ಈ ಮಧ್ಯೆ, ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವರ ಪೈಕಿ ಅಂದರೆ, 34 ಸಚಿವರ ಪೈಕಿ 16 ಜನರು ಕ್ರಿಮಿನಲ್ ಪ್ರಕರಣಗಳನ್ನು (Criminal Cases) ಎದುರಿಸುತ್ತಿದ್ದಾರೆ. ಎಡಿಆರ್ (ADR) ಈ ಮಾಹಿತಿಯನ್ನು ಹೊರ ಹಾಕಿದೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ಸಚಿವ ಬಿ ನಾಗೇಂದ್ರ ಅವರ 42 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಈ ಪಟ್ಟಿಯಲ್ಲಿ ಅವರೇ ಅಗ್ರಸ್ಥಾನಿಯಾಗಿದ್ದಾರೆ. ನಾಗೇಂದ್ರ ನಂತರದ ಸ್ಥಾನದಲ್ಲಿ ಉಪ ಮುಖ್ಯಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರಿದ್ದು, 19 ಕ್ರಿಮಿನಲ್ ಪ್ರಕ್ರಣಗಳ ವಿಚಾರಣೆ ನಡೆಯುತ್ತಿದೆ. ನಾಗೇಂದ್ರ ಅವರ ವಿರುದ್ಧ ಪ್ರಕರಣಗಳಲ್ಲಿ 21 ಪ್ರಕರಣಗಳು ಲೋಕಾಯುಕ್ತ ಮುಂದಿವೆ. ಉಳಿದ ಪ್ರಕರಣಗಳು ಸಿಬಿಐ, ಸಿಐಡಿಗಳ ಮುಂದಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡ 13 ಪ್ರಕರಣಗಳಿವೆ. ಕಾನೂನು ಬಾಹಿರ ಸಭೆ, ಚುನಾವಣೆ ಮೇಲೆ ಪ್ರಭಾವ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಜಮೀರ್ ಖಾನ್ ಅವರು ವಿರುದ್ಧ 6 ಗಂಭೀರ ಪ್ರಕರಣಗಳಿವೆ. ಇನ್ನುಳಿದಂತೆ ಪ್ರಿಯಾಂಕ್ ಖರ್ಗೆ(9), ಈಶ್ವರ್ ಖಂಡ್ರೆ(7), ಎಂ ಬಿ ಪಾಟೀಲ್(5), ರಾಮಲಿಂಗಾ ರೆಡ್ಡಿ(4), ಡಾ. ಜಿ ಪರಮೇಶ್ವರ್(3), ಎಚ್ ಕೆ ಪಾಟೀಲ್ (2), ಡಿ ಸುಧಾಕರ್ (2), ಸತೀಶ್ ಜಾರಕಿಹೊಳಿ (2), ಕೃಷ್ಣ ಭೈರೇಗೌಡ (1), ಎನ್ ಚಲುವರಾಯಸ್ವಾಮಿ (1), ಕೆ ಎಚ್ ಮುನಿಯಪ್ಪ (1) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.
ಇದನ್ನೂ ಓದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
ಅಸೋಶಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(Association for Demorcatic Reforms- ADR) ಈ ಮಾಹಿತಿಯನ್ನು ಹೊರ ಹಾಕಿದೆ. ಚುನಾವಣಾ ವೇಳೆ ಆಯೋಗಕ್ಕೆ ಸಲ್ಲಿಸಲಾದ ಅಫಿಡವಿಟ್ಗಳ ಮೂಲಕ ಈ ಪಟ್ಟಿಯನ್ನು ರಚಿಸಲಾಗಿದೆ.
ಕರ್ನಾಟಕ ರಾಜಕೀಯದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಉಡುಪಿ
Weather Report: ಭಾನುವಾರ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ; ಗಾಳಿ ವೇಗವೂ ಹೆಚ್ಚಲಿದೆ ಎಂದ ಹವಾಮಾನ ಇಲಾಖೆ
Weather report: ಉತ್ತರ ಒಳನಾಡಿನಲ್ಲಿ ಬ್ರೇಕ್ ನೀಡಿರುವ ಮಳೆರಾಯ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ (Rain News) ಅಬ್ಬರಿಸಲಿದ್ದಾನೆ. ಭಾನುವಾರ (ಮೇ 28) ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ (Bangalore Rain) ಸಾಧ್ಯತೆ ಇದೆ.
ಬೆಂಗಳೂರು: ರಾಜ್ಯದಲ್ಲಿ ತಾಪಮಾನ ಏರಿಕೆಯ ನಡುವೆಯು ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಾಗುವ (Weather Report) ಸಾಧ್ಯತೆ ಇದೆ. ಚಾಮರಾಜನಗರ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather Update) ಮುನ್ಸೂಚನೆಯನ್ನು ನೀಡಿದೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವೂ ಗಂಟೆಗೆ 30-40 ಕಿ.ಮೀ ವ್ಯಾಪಿಸಲಿದೆ.
ಪ್ರಮುಖ ನಗರಗಳಲ್ಲಿನ ಪ್ರಸ್ತುತ ಹವಾಮಾನ ಹೀಗಿದೆ
ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್)
ಕಲಬುರಗಿ: 40 ಡಿ.ಸೆ – 26 ಡಿ.ಸೆ
ಗದಗ: 38 ಡಿ.ಸೆ – 22 ಡಿ.ಸೆ
ಚಿತ್ರದುರ್ಗ: 35 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 21 ಡಿ.ಸೆ
ಕಾರವಾರ: 36 ಡಿ.ಸೆ – 27 ಡಿ.ಸೆ
ಮಂಗಳೂರು: 34 ಡಿ.ಸೆ – 25 ಡಿ.ಸೆ
ಹೊನ್ನಾವರ: 34 ಡಿ.ಸೆ- 25 ಡಿ.ಸೆ
ಬೆಂಗಳೂರು ನಗರ: 33 ಡಿ.ಸೆ – 22 ಡಿ.ಸೆ
ಕರ್ನಾಟಕ
ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್ಟಿಐ ಕಾರ್ಯಕರ್ತ
ಹರೀಶ್ ಹಳ್ಳಿ ಆರ್ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ.
ದಾವಣಗೆರೆ: ಕೋಟ್ಯಂತರ ರೂಪಾಯಿ ಭೂ ಅಕ್ರಮದ ಆರೋಪಿಯಾಗಿದ್ದ ಹರೀಶ್ ಹಳ್ಳಿ (Harish Halli) ಎಂಬಾತ ಪೊಲೀಸ್ ಕಾರಿ (Police Vehicle)ನಿಂದ ಜಿಗಿದು ಮೃತಪಟ್ಟಿದ್ದಾನೆ. ತನ್ನ ಪತಿಯನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಆತನ ಪತ್ನಿ ಆರೋಪಿಸಿದ್ದಾರೆ. ಈ ಘಟನೆ ನಡೆದಿದ್ದು ದಾವಣಗೆರೆಯಲ್ಲಿ (Davanagere News).
ಈ ಹರೀಶ್ ಹಳ್ಳಿ ಆರ್ಟಿಐ ಕಾರ್ಯಕರ್ತನಾಗಿದ್ದು, ಒಟ್ಟು 2 ಕೋಟಿ ರೂ.ಬೆಲೆಯ ಮೂರು ನಿವೇಶನಗಳನ್ನು ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡ ಆರೋಪ ಎದುರಿಸುತ್ತಿದ್ದ. ಈ ಭೂ ಅಕ್ರಮ ಕೇಸ್ನಡಿ ಹರೀಶ್ ಹಳ್ಳಿ, ಸಬ್ ರಿಜಿಸ್ಟ್ರಾರ್ ಆರ್.ಎಲ್.ವೀಣಾ ಸೇರಿ ಒಟ್ಟು ಐವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈತ ಸೈಟ್ನ್ನು ತನ್ನದಾಗಿಸಿಕೊಳ್ಳಲು ನಕಲಿ ಮಾಲೀಕರನ್ನೇ ಸೃಷ್ಟಿಸಿದ್ದ. ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದ ಎಂದೂ ಪೊಲೀಸರು ಹೇಳಿದ್ದಾರೆ.
ಭೂ ಅಕ್ರಮದ ಕೇಸ್ನಲ್ಲಿ ಎ 1 ಆರೋಪಿಯಾದ ಹರೀಶ್ನನ್ನು ಮೇ 27ರ ಮಧ್ಯರಾತ್ರಿ 12 ಗಂಟೆ ಹೊತ್ತಿಗೆ ಪೊಲೀಸರು ಬಂಧಿಸಿ, ವಿಚಾರಣೆಗೆಂದು ಕರೆದುಕೊಂಡು ಬರುವಾಗ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಫ್ಲೈಓವರ್ ಮೇಲೆ ಪೋಲೀಸ್ ವಾಹನ ಹೋಗುತ್ತಿದ್ದಾಗ ಈತ ಜಿಗಿದಿದ್ದಾನೆ. ತೀವ್ರವಾಗಿ ಪೆಟ್ಟು ಬಿದ್ದು ಗಾಯಗೊಂಡಿದ್ದ ಅವನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಆತನ ಪತ್ನಿ ಕಿಡಿಕಾರಿದ್ದಾರೆ. ನನ್ನ ಪತಿಯನ್ನು ಪೊಲೀಸರು ಮಧ್ಯರಾತ್ರಿ ಕರೆದುಕೊಂಡು ಹೋಗಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಹರಿಶ್ ಹಳ್ಳಿಯನ್ನು ಕರೆದುಕೊಂಡು ಹೋದ ಗಾಂಧಿನಗರ ಪೊಲೀಸ್ ಠಾಣೆ ಪಿಎಸ್ಐ ಮತ್ತು ಚಾಲಕನ ವಿರುದ್ಧ ದೂರು ನೀಡಿದ್ದಾರೆ.
ಅಪ್ಪ ಹೇಳೋದೇನು?
ಪೊಲೀಸರೇ ನನ್ನ ಮಗನನ್ನು ಕೊಲೆ ಮಾಡಿದ್ದಾರೆ. ಮುಂಜಾನೆ ನಮಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಪೊಲೀಸರೇ ಕೊಲೆ ಮಾಡಿ ಆಸ್ಪತ್ರೆಗೆ ತಂದು ಹಾಕಿದ್ದಾರೆ. ಈಗ ಜಂಪ್ ಮಾಡಿದ, ಅದೂ ಇದು ಎಂದು ಕಥೆ ಕಟ್ಟುತ್ತಿದ್ದಾರೆ ಎಂದು ಮೃತ ಹರೀಶ್ ಹಳ್ಳಿ ತಂದೆ ಆರೋಪಿಸಿದ್ದಾರೆ. ವಾಹನದಲ್ಲಿ ಅವನ ಅಕ್ಕ-ಪಕ್ಕ ಪೊಲೀಸರೇ ಕುಳಿತಿದ್ದರು. ಅಂದಮೇಲೆ ಅವನು ಹೇಗೆ ಕಾರಿನಿಂದ ಜಂಪ್ ಮಾಡಿದ ಎಂದೂ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:Illegal Mining | ಕೊಪ್ಪಳದಲ್ಲಿ ನೀರಾವರಿ ಭೂಮಿಯಲ್ಲಿ ಅಕ್ರಮ ಗಣಿಗಾರಿಕೆ, ಸಚಿವರಿಂದ ಕ್ರಮ ಕೈಗೊಳ್ಳುವ ಭರವಸೆ
-
ಕರ್ನಾಟಕ23 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ23 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ21 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ17 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್13 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ5 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ14 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER4 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?