Anjanadri Hill | ಅಂಜನಾದ್ರಿಯಲ್ಲಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ಅವಕಾಶ ಬೇಡ; ಜಿಲ್ಲಾಧಿಕಾರಿಗೆ ಹಿಂಜಾವೇ ಮನವಿ - Vistara News

ಕೊಪ್ಪಳ

Anjanadri Hill | ಅಂಜನಾದ್ರಿಯಲ್ಲಿ ಅನ್ಯ ಧರ್ಮೀಯರ ವ್ಯಾಪಾರಕ್ಕೆ ಅವಕಾಶ ಬೇಡ; ಜಿಲ್ಲಾಧಿಕಾರಿಗೆ ಹಿಂಜಾವೇ ಮನವಿ

Anjanadri Hill | ಅನ್ಯ ಧರ್ಮೀಯರ ವ್ಯಾಪಾರ ವಹಿವಾಟಿಗೆ ಅಂಜನಾದ್ರಿ ಕ್ಷೇತ್ರದಲ್ಲಿ ಅನುಮತಿ ನೀಡಬಾರದು. ಒಂದು ವೇಳೆ ಅನುಮತಿ ನೀಡಿದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹಿಂದು ಜಾಗರಣಾ ವೇದಿಕೆ ಎಚ್ಚರಿಕೆ ನೀಡಿದೆ.

VISTARANEWS.COM


on

Anjanadri Hill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಅಂಜನಾದ್ರಿಯಲ್ಲಿ ಧರ್ಮ ದಂಗಲ್ ಮುನ್ಸೂಚನೆ ಕಂಡುಬಂದಿದೆ. ಹಿಂದುಗಳ ಪವಿತ್ರ ಕ್ಷೇತ್ರ ಅಂಜನಾದ್ರಿಯಲ್ಲಿ (Anjanadri Hill) ಹಿಂದುಗಳಿಗೆ ಹೊರತುಪಡಿಸಿ ಅನ್ಯ ಧರ್ಮೀಯರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬಾರದು ಎಂದು ಹಿಂದು ಜಾಗರಣಾ ವೇದಿಕೆಯಿಂದ‌‌ ಗಂಗಾವತಿ ತಹಸೀಲ್ದಾರ್‌ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.

ಹಿಂದುಗಳ ಪವಿತ್ರ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ಡಿಸೆಂಬರ್ 3, 4 ಹಾಗೂ 5 ರಂದು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯುತ್ತದೆ. ಹೀಗಾಗಿ ಅಂಜನಾದ್ರಿಗೆ ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ, ವ್ಯಾಪಾರ ವಹಿವಾಟು ನಡೆಸುವ ನೆಪದಲ್ಲಿ ಮುಸ್ಲಿಂ ಉಗ್ರರು ಧಾರ್ಮಿಕ ಕ್ಷೇತ್ರಗಳಿಗೆ ಲಗ್ಗೆ ಹಾಕಿ ಆತಂಕ ಮೂಡಿಸುತ್ತಿದ್ದಾರೆ. ಹೀಗಾಗಿ ಅನ್ಯ ಧರ್ಮದ ವ್ಯಾಪಾರಿಗಳಿಗೆ ಕ್ಷೇತ್ರದಲ್ಲಿ ಅನುಮತಿ ನೀಡಬಾರದು ಎಂದು ಕಾರ್ಯಕರ್ತರು ಕೋರಿದ್ದಾರೆ.

Anjanadri Hill@koppal

ಅಂಜನಾದ್ರಿ ಪರ್ವತದ ಸುತ್ತಮುತ್ತ ಹಿಂದುಗಳ ಹೊರತಾಗಿ ಅನ್ಯಧರ್ಮೀಯರಿಗೆ ಪೂಜೆ ಸಾಮಗ್ರಿ, ಹೋಟೆಲ್ ಸೇರಿ ಯಾವುದೇ ರೀತಿಯ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬಾರದು. ಒಂದು ವೇಳೆ ಮುಸ್ಲಿಂ ಹಾಗೂ ಕ್ರೈಸ್ತರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಹಿಂದು ಜಾಗರಣಾ ವೇದಿಕೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ | Karnataka election | ಸಿದ್ದರಾಮಯ್ಯ – ಡಿಕೆಶಿ ಜೋಡೆತ್ತುಗಳಲ್ಲ, ಕಿತ್ತಾಡುವ ಚಿರತೆಗಳು ಎಂದ ಶ್ರೀರಾಮುಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Lok Sabha Election 2024: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿ ಗಂಗಾವತಿಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

VISTARANEWS.COM


on

MLA G Janardan Reddy latest statement in Gangavathi
Koo

ಗಂಗಾವತಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿ ಬಾಂಬ್ ಅವರು ಲೋಕಸಭಾ ಚುನಾವಣಾ (Lok Sabha Election 2024) ಪ್ರಚಾರ ಭಾಷಣದಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಗಂಗಾವತಿ ನಗರದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ನನ್ನೊಂದಿಗೆ (ರೆಡ್ಡಿ) ಹೊಂದಾಣಿಕೆ ಮಾಡಿಕೊಂಡು ತನ್ನ ಸೋಲಿಗೆ ಕಾರಣರಾದರು ಎಂದು ಇಕ್ಬಾಲ್ ಅನ್ಸಾರಿ ಪದೇ ಪದೆ ಪ್ರಸ್ತಾಪಿಸುತ್ತಾರೆ. ಆದರೆ, ಅಸಲಿಗೆ ವಾಸ್ತವವೇ ಬೇರೆ ಇದೆ. ನನ್ನೊಂದಿಗೆ ಕೈಜೋಡಿಸಿದ್ದು ಸ್ಥಳೀಯ ಕಾಂಗ್ರೆಸ್ ನಾಯಕರಲ್ಲ. ಸ್ವತಃ ಸಿದ್ದರಾಮಯ್ಯ ಅವರೇ ನನಗೆ ಸಾಥ್ ನೀಡಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದುಕೊಳ್ಳುವ ವಿಶ್ವಾಸ ಸ್ವತಃ ಕಾಂಗ್ರೆಸ್ ಪಕ್ಷಕ್ಕೂ ಇರಲಿಲ್ಲ. ಹೀಗಾಗಿ ಸ್ವತಃ ಸಿದ್ದರಾಮಯ್ಯ ನನ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರು. ರೆಡ್ಡಿಯ ಕೆಆರ್‌ಪಿಪಿ ಎಲ್ಲಾದರೂ ಒಂದು ಹತ್ತು ಕ್ಷೇತ್ರದಲ್ಲಿ ಗೆದ್ದುಬಿಟ್ಟರೆ ಸರ್ಕಾರ ರಚನೆಯ ಸಂದರ್ಭದಲ್ಲಿ ಅವಸರಕ್ಕೆ ಇರಲಿ ಎಂಬ ಕಾರಣಕ್ಕೆ ಸ್ವತಃ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಮತ್ತು ನನ್ನ ಮಧ್ಯೆ ಒಳ ಒಪ್ಪಂದವಾಗಿತ್ತು. ಇದನ್ನು ಅರಿಯದ ಇಕ್ಬಾಲ್ ಅನ್ಸಾರಿ, ಸ್ಥಳೀಯ ಕಾಂಗ್ರೆಸ್ ನಾಯಕರು ರೆಡ್ಡಿಯೊಂದಿಗೆ ಬುಕ್ ಆಗಿದ್ದಾರೆ ಎಂದು ಭಾವಿಸಿ ಚುನಾವಣೆ ಮುಗಿದ ಬಳಿಕ ತಮ್ಮ ಮನೆ ಬಾಗಿಲು ಹಾಕಿದರು. ಎರಡು ದಿನಗಳ ಬಳಿಕ ಓಪನ್ ಮಾಡಿದ್ದರು ಎಂದು ರೆಡ್ಡಿ ಹೇಳಿದರು.

ಸಿದ್ದರಾಮಯ್ಯ ಮತ್ತು ನನ್ನ ನಡುವೆ ನಡೆದ ಒಳ ಒಪ್ಪಂದದಿಂದಾಗಿಯೇ ಸಿದ್ದರಾಮಯ್ಯ ಅಪ್ಪಿತಪ್ಪಿಯೂ ಗಂಗಾವತಿಗೆ ಪ್ರಚಾರಕ್ಕೆ ಬರಲಿಲ್ಲ. ಅಷ್ಟೆ ಅಲ್ಲ, ನನ್ನ ಪತ್ನಿ ಪ್ರತಿನಿಧಿಸಿದ್ದ ಬಳ್ಳಾರಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗಿರಲಿಲ್ಲ. ಈ ಬಗ್ಗೆ ಬೇಕಿದ್ದರೆ ಒಮ್ಮೆ ಪರಿಶೀಲಿಸಬಹುದು ಎಂದು ರೆಡ್ಡಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

ಈ ಹಿಂದೆ ಬೆಂಗಳೂರಿನಿಂದ ಬಳ್ಳಾರಿವರೆಗೂ ನಡೆಸಿದ ಪಾದಯಾತ್ರೆ, ರಾಜಕೀಯ ಸೇರಿದಂತೆ ಎಲ್ಲವನ್ನೂ ಮರೆತು ಬಿಡುವಂತೆ ಸಿದ್ದರಾಮಯ್ಯ ಕೇಳಿದ್ದರು. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರು ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನನ್ನ ಬಗ್ಗೆ ಟೀಕೆ ಮಾಡಿಲ್ಲ. ಗಂಗಾವತಿಯಲ್ಲೂ ಮಾಡಿಲ್ಲ. ಆದರೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಕಣ್ಣೊರೆಸಬೇಕೆಂಬ ಕಾರಣಕ್ಕೆ ಲೋಕಸಭಾ ಚುನಾವಣೆ ಅಂಗವಾಗಿ ನಡೆದ ಸಮಾವೇಶದಲ್ಲಿ ಕಾಟಾಚಾರಕ್ಕಾಗಿ ಸಿದ್ದರಾಮಯ್ಯ ನನ್ನ ಮೇಲೆ ಟೀಕೆ ಮಾಡಿದ್ದಾರೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

Continue Reading

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಪ್ಪಳ

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Medical Negligence : ವೈದ್ಯರ ನಿರ್ಲಕ್ಷ್ಯಕ್ಕೆ ಪ್ರಪಂಚ ನೋಡುವ ಮೊದಲೇ ಮಗುವೊಂದು ತಾಯಿ ಗರ್ಭದಲ್ಲೇ ಅಸುನೀಗಿದೆ. 9 ತಿಂಗಳ ಕಾಲ ಹೊತ್ತ ತಾಯಿಯು ಹೆರಿಗೆಗೂ ಮುನ್ನವೇ ಕಣ್ಮುಂಚಿದ್ದಾಳೆ. ಸಕಾಲಕ್ಕೆ ಚಿಕಿತ್ಸೆ ಸಿಗದೆ ತಾಯಿ-ಮಗು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ತಪ್ಪಿತಸ್ಥ ವೈದ್ಯರನ್ನು ಅಮಾನತು ಮಾಡಿ ಎಂದು ಒತ್ತಾಯಿಸಿದರು.

VISTARANEWS.COM


on

By

Medical Negligence
Koo

ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ (Medical Negligence) ಹೆರಿಗೆ ಸಮಯದಲ್ಲಿ ಗರ್ಭಿಣಿ ಮತ್ತು ಶಿಶು ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಕುಷ್ಟಗಿ ತಾಲೂಕಿನ ವಿಠಲಾಪುರ ಗ್ರಾಮದ ನಿವಾಸಿ ಲಕ್ಷ್ಮೀ (20) ಮೃತ ದುರ್ದೈವಿ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಿಯಲ್ಲಿ ಈ ಘಟನೆ ನಡೆದಿದೆ.

ಮೊದಲ ಹೆರಿಗೆ ಹಿನ್ನೆಲೆಯಲ್ಲಿ ಲಕ್ಷ್ಮೀಯನ್ನು ಮಂಗಳವಾರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಆದರೆ ಹೆರಿಗೆ ಆಗುವ ಮೊದಲೇ ಲಕ್ಷ್ಮಿ ಹಾಗೂ ಹೊಟ್ಟೆಯಲ್ಲಿದ್ದ ಶಿಶು ಕೂಡಾ ಮೃತಪಟ್ಟಿದ್ದಾರೆ.

ವೈದ್ಯರು ಸಕಾಲಕ್ಕೆ ಚಿಕಿತ್ಸೆ ನೀಡಿಲ್ಲ ಅವರ ನಿರ್ಲಕ್ಷ್ಯಕ್ಕೆ ಸಾವಾಗಿದೆ ಎಂದು ಲಕ್ಷ್ಮೀ ಮೃತ ಕುಟುಂಬಸ್ಥರು ಮತ್ತು ಗ್ರಾಮಸ್ಥರು ತಾವರಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ರಾತ್ರಿಯಿಂದ ಧರಣಿ ನಡೆಸಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾತ್ರಿಯಿಂದಲೇ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

ಸಮುದಾಯ ಆರೋಗ್ಯ ಕೇಂದ್ರದ ಡಾ.ಕಾವೇರಿ ಸರಿಯಾದ ಚಿಕಿತ್ಸೆ ಕೊಡಲಿಲ್ಲ. ಹೀಗಾಗಿ ವೈದ್ಯರ ಅಮಾನತ್ತಿಗೆ ಆಗ್ರಹಿಸಿ ಬುಧವಾರವು ಪ್ರತಿಭಟನೆ ಮುಂದುವರಿಸಿದ್ದಾರೆ. ಸಮುದಾಯ ಕೇಂದ್ರದ ಮುಂದೆ 200ಕ್ಕೂ ಹೆಚ್ಚು ಜನರು ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಪ್ಪಳ

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

Koppala News: ಕನಕಗಿರಿ ಪಟ್ಟಣದ ಶರಣಪ್ಪ ಪಂಪಣ್ಣ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಕನಕಗಿರಿ ಮತ್ತು ಕಾರಟಗಿ ತಾಲೂಕು ಪಂಚಾಯಿತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

VISTARANEWS.COM


on

Koppala ZP CEO Rahul Ratnam Pandeya Spoke in Progress review meeting at kanakagiri
Koo

ಕನಕಗಿರಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ (Drinking Water) ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳಿಗೆ ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆ ಸೂಚನೆ (Koppala News) ನೀಡಿದರು.

ಪಟ್ಟಣದ ಶರಣಪ್ಪ ಪಂಪಣ್ಣ ಗುಗ್ಗಳಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಕನಕಗಿರಿ ಮತ್ತು ಕಾರಟಗಿ ತಾಲೂಕು ಪಂಚಾಯಿತಿಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ, ಅವರು ಮಾತನಾಡಿದರು.

ಇದನ್ನೂ ಓದಿ: Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಇದೇ ವೇಳೆ ಎರಡು ತಾಲೂಕಿನಲ್ಲಿ ಜೆಜೆಎಂ ಯೋಜನೆಯ ಪ್ರಥಮ ಹಾಗೂ ದ್ವಿತೀಯ ಹಂತದ ಕಾಮಗಾರಿಗಳನ್ನು ಕೂಡಲೇ ಮುಕ್ತಾಯಗೊಳಿಸಲು ಪಿಆರ್‌ ಇಡಿ ಎಇಇ ಯವರಿಗೆ ಸೂಚಿಸಿ ಸಂಬಂಧಿಸಿದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು. ನಂತರ ನರೇಗಾ, ವಸತಿ ಸೇರಿದಂತೆ ಸ್ವಚ್ಛ ಭಾರತ ಮಿಷನ್ ಯೋಜನೆಯ ಪ್ರಗತಿಯನ್ನು ಪರಿಶೀಲನೆ ಮಾಡಿ, ಕಡಿಮೆ ಪ್ರಗತಿ ಹೊಂದಿದ ಗ್ರಾ.ಪಂಗಳು ಪ್ರಗತಿ ಸಾಧಿಸಲು ತಿಳಿಸಿದರು.

ಇದನ್ನೂ ಓದಿ: Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

ಈ ವೇಳೆ ಕನಕಗಿರಿ ತಾ. ಪಂ ಇಒ ಎಲ್. ವಿರೇಂದ್ರ ಕುಮಾರ್, ಕಾರಟಗಿ ತಾ.ಪಂ ಇಒ ಲಕ್ಷ್ಮೀದೇವಿ, ಎಇಇ ವಿಜಯಕುಮಾರ್, ತಾ.ಪಂ ಸಹಾಯಕ ನಿರ್ದೇಶಕರಾದ ಚಂದ್ರಶೇಖರ ಬಿ. ಕಂದಕೂರ್, ವೈ.ವನಜಾ, ವೀರಣ್ಣ ನಕ್ರಳ್ಳಿ ಸೇರಿದಂತೆ ಕನಕಗಿರಿ, ಕಾರಟಗಿ ತಾಲೂಕಿನ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Bhajanotsava
ಬೆಂಗಳೂರು2 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ3 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ4 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ4 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ4 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ4 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ5 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ5 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ5 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ5 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌