Site icon Vistara News

Couple Death: ಸಾವಿನಲ್ಲೂ ಒಂದಾದ ದಂಪತಿ, ಕೊಪ್ಪಳದಲ್ಲಿ ನಡೆದ ಘಟನೆ

couple death koppala

ಕೊಪ್ಪಳ: ವಯೋವೃದ್ಧ ದಂಪತಿಗಳು ಸಾವಿನಲ್ಲೂ ಒಂದಾಗಿರುವ (Couple Death) ಘಟನೆ ಕೊಪ್ಪಳ (koppala news) ಜಿಲ್ಲೆಯ ಕುಷ್ಟಗಿ ಪಟ್ಟಣದ ಅನ್ನದಾನೇಶ್ವರ ನಗರದಲ್ಲಿ ನಡೆದಿದೆ.

ನಿವೃತ್ತ ಮುಖ್ಯಶಿಕ್ಷಕ ಹನುಮಂತಪ್ಪ ಮೇಟಿ ಹಾಗೂ ಪತ್ನಿ ಗೌರಮ್ಮ ಅವರು ಸಾವಿನಲ್ಲೂ ಜೊತೆ ಬಿಡದ ದಂಪತಿಗಳಾಗಿದ್ದಾರೆ. ನಿನ್ಮೆ ರಾತ್ರಿ ಹನುಮಂತಪ್ಪ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಪತಿಯ ಸಾವಿನ ಅಘಾತಕ್ಕೊಳಗಾದ 65 ವರ್ಷದ ಗೌರಮ್ಮ ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಐದಾರು ಗಂಟೆಯ ಅವಧಿಯಲ್ಲಿ ಕುಟುಂಬದಲ್ಲಿ ಎರಡು ಸಾವುಗಳು ಘಟಿಸಿವೆ. ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.

ನೈಸ್‌ ರಸ್ತೆಯಲ್ಲಿ ಭೀಕರ ಅಪಘಾತ, ತಾಯಿ- ಮಗು ಸಜೀವ ದಹನ

ಬೆಂಗಳೂರು: ರಾಜಧಾನಿಯಲ್ಲಿ ಬೆಳಗಿನ ಜಾವ ಭೀಕರ ಅಪಘಾತ (Road Accident) ಸಂಭವಿಸಿದೆ. ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ, ತಾಯಿ- ಮಗು ಸಜೀವ ದಹನಗೊಂಡಿದ್ದಾರೆ.

ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳಿದ್ದರು. ದಂಪತಿಯನ್ನು ಮಹೇಂದ್ರನ್ ಮತ್ತು ಸಿಂಧು ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ ನಾಲ್ಕು ಘಂಟೆ ಸಮಯದಲ್ಲಿ ನಿದ್ರೆ ಮಂಪರಿನಲ್ಲಿ ಅಪಘಾತ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕಾರು ರಸ್ತೆಯಿಂದ ಹೊರಬಂದು ಲಾರಿ ಮತ್ತು ಮೋರಿಯ ಗೋಡೆಗೆ ಡಿಕ್ಕಿಯಾಗಿದೆ. ಲಾರಿಯೂ ಸಹ ಪಲ್ಟಿಯಾಗಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಅದರೊಳಗೇ ಸುಟ್ಟುಹೋಗಿದ್ದಾರೆ.

ಮೃತ ದೇಹಗಳನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಚಲಾಯಿಸುತ್ತಿದ್ದ ಮಹೇಂದ್ರನ್ ಮತ್ತು ಇನ್ನೊಂದು ಮಗು ತೀವ್ರವಾಗಿ ಗಾಯಗೊಂಡಿದ್ದು, ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral Video: ಫ್ರಿಡ್ಜ್‌ ಡೋರ್ ತೆಗೆಯಲು ಹೋದ 4 ವರ್ಷದ ಬಾಲಕಿಗೆ ಕರೆಂಟ್ ಶಾಕ್, ಸ್ಥಳದಲ್ಲೇ ಸಾವು

Exit mobile version