Site icon Vistara News

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಬಾಲಕ ಸಾವು, ಮೂವರು ಪ್ರಾಣಾಪಾಯದಿಂದ ಪಾರು

ಶಾರ್ಟ್‌ ಸರ್ಕ್ಯೂಟ್‌

ಕೊಪ್ಪಳ: ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಬಾಲಕನೊಬ್ಬ ಮೃತಪಟ್ಟಿದ್ದು, ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯ ಕುಕನೂರು ತಾಲೂಕಿನ ಕೋಮಲಾಪುರ ಗ್ರಾಮದಲ್ಲಿ ಮಂಗಳವಾರ ರಾತ್ರಿ ಸುಮಾರು ೧೦ ಗಂಟೆಗೆ ಈ ಅವಘಡ ಸಂಭವಿಸಿದೆ. ಜಯರಾಜ (6) ಎಂಬ ಬಾಲಕ ಮೃತಪಟ್ಟಿದ್ದು, ಬಾಲಕನ ತಂದೆ ಹನುಮಪ್ಪ, ಸಹೋದರರಾದ ಶಂಕರ್(9), ವಿನೋದ್(11) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಗೆ ಹೊಂದಿಕೊಂಡಿರುವ ಕಿರಾಣಿ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿದ ಬೆಂಕಿ, ಮನೆಗೂ ವ್ಯಾಪಿಸಿದೆ. ಈ ವೇಳೆ ಮನೆಯಲ್ಲಿದ್ದ ಇಬ್ಬರು ಮಕ್ಕಳನ್ನು ತಂದೆ ಹನುಮಪ್ಪ ರಕ್ಷಿಸಿದ್ದಾರೆ. ಆದರೆ ಇನ್ನೊಬ್ಬನನ್ನು ರಕ್ಷಿಸುವ ಹೊತ್ತಿಗೆ ಬೆಂಕಿಯ ಕೆನ್ನಾಲಿಗೆಗೆ ಬಾಲಕ ಬಲಿಯಾಗಿದ್ದಾನೆ.

ತಂದೆಯ ಕಣ್ಮುಂದೆಯೇ ಮಗ ಬೆಂಕಿಗಾಹುತಿಯಾಗಿದ್ದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಿತು. ಕುಕನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Leopard Attack | ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ದಾಳಿ; ಕೃಷಿ ಕಾರ್ಮಿಕ ಮಹಿಳೆ ಸಾವು

Exit mobile version