Site icon Vistara News

Fire Accident: ಸಿದ್ದಾಪುರದಲ್ಲಿ ಆಕಸ್ಮಿಕ ಬೆಂಕಿಗೆ ಹುಲ್ಲಿನ ಬಣವೆ ಭಸ್ಮ

Accidental fire destroys grass stock in Siddapur

ಕಾರಟಗಿ: ಆಕಸ್ಮಿಕ ಬೆಂಕಿ ತಗುಲಿ (Fire Accident) ಹುಲ್ಲಿನ ಬಣವೆ ಸುಟ್ಟು ಭಸ್ಮವಾದ ಘಟನೆ ಇಲ್ಲಿಗೆ ಸಮೀಪದ ಸಿದ್ದಾಪುರ ಗ್ರಾಮದಲ್ಲಿ ಜರುಗಿದೆ.

ಸಿದ್ದಾಪುರ ಹೋಬಳಿಯ 9ನೇ ವಾರ್ಡಿನ ಹಗಲು ವೇಷಗಾರರ ಓಣಿಯ ಮಲ್ಲಪ್ಪ ಎಂಬುವವರ ಹುಲ್ಲಿನ ಬಣವೆಗೆ ಬೆಂಕಿ ತಗುಲಿ ಸುಮಾರು 60 ಸಾವಿರ ಮೌಲ್ಯದ ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 2 ಗಂಟೆ ಕಾಲ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಈ ಸಂದರ್ಭದಲ್ಲಿ ಅಗ್ನಿಶಾಮಕ ಠಾಣೆಯ ಪ್ರಭಾರಿ ಅಧಿಕಾರಿ ರಾಘವೇಂದ್ರ ಈಳಿಗೇರ್ ಮತ್ತು ಸಿಬ್ಬಂದಿ ಮಂಜುನಾಥ್ ಸೂಗೂರಯ್ಯ, ಯುವರಾಜ, ಕಿರಣ್, ವಿನೋದ್ ಕುಮಾರ್, ಇತರರು ಇದ್ದರು.

Exit mobile version