ಕೊಪ್ಪಳದ ಗವಿಮಠದ ಕೆರೆಯಲ್ಲಿ ಅಪರಿಚಿತ ಶವ ಪತ್ತೆ! - Vistara News

ಕೊಪ್ಪಳ

ಕೊಪ್ಪಳದ ಗವಿಮಠದ ಕೆರೆಯಲ್ಲಿ ಅಪರಿಚಿತ ಶವ ಪತ್ತೆ!

ಗವಿಮಠದ ಕೆರೆಯಲ್ಲಿ ಇಂದು ಅಚಾನಕ್‌ ಒಂದು ಅಪರಿಚಿತ ಶವ ಪತ್ತೆಯಾಗಿದೆ. ವಿಕಾರಗೊಂಡಿರುವ ಸ್ಥಿತಿಯಲ್ಲಿ ಶವ ಕಂಡಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

VISTARANEWS.COM


on

ಕೊಪ್ಪಳದ ಗವಿಮಠ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಕೊಪ್ಪಳ ನಗರದಲ್ಲಿರುವ ಪ್ರಸಿದ್ದ ಗವಿಮಠದ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 30 ವರ್ಷದ ಯುವಕನ ಶವ ಪತ್ತೆಯಾಗಿದ್ದು ಎರಡು ಮೂರು ದಿನಗಳ ಹಿಂದೆ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಿಗ್ಗೆ ಕೆರೆಯಲ್ಲಿ ಶವ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಸ್ಥಳೀಯರು ಕೂಡಲೇ ನಗರದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕೊಪ್ಪಳ ನಗರ ಪೊಲೀಸರು ಶವವನ್ನು ಹೊರತೆಗೆದು ಪಂಚನಾಮೆ ಮಾಡಿದ್ದಾರೆ. ವಿಕಾರಗೊಂಡ ಶವವನ್ನು ನೋಡಿ ಸ್ಥಳೀಯರು ಆತಂಕಗೊಂಡಿದ್ದಾರೆ. ಎರಡು ಮೂರು ದಿನಗಳ ಹಿಂದೆಯೇ ವ್ಯಕ್ತಿ ಕೆರೆಗೆ ಬಿದ್ದಿರುವ ಸಾಧ್ಯತೆ ಇರುವುದರಿಂದ ಕಣ್ಣು, ಮುಖವನ್ನು ಜಲಚರಗಳು ತಿಂದಿದ್ದು, ಶವ ವಿಕಾರಗೊಂಡಿದೆ.

ಶವದ ಶರ್ಟ್ ಜೇಬಿನಲ್ಲಿ ಬೈಕ್ ಕೀಲಿಕೈ ಪತ್ತೆಯಾಗಿದ್ದು ಕೊಪ್ಪಳ ನಗರ ಪೊಲೀಸರು ತನಿಖೆ ನಡೆಸಿದ್ದಾರೆ.

ಹೆಚ್ಚಿನ ಓದಿಗಾಗಿ: ಗ್ರಾಮ ಕಲಹ ಎಂದುಕೊಂಡಿದ್ದ ಪೊಲೀಸರು: ಸಿಮ್‌ ಕಸಿದುಕೊಂಡಿದ್ದಕ್ಕೆ ಪತ್ನಿಯಿಂದಲೇ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಕಾಂಗ್ರೆಸ್‌ ಸೇರಿದ ಕರಡಿ ಸಂಗಣ್ಣ; ಪಕ್ಷ ಸೇರ್ಪಡೆಗೆ ಲಕ್ಷ್ಮಣ ಸವದಿ ಕಾರಣ!

Lok Sabha Election 2024: ನಾನು ಕಾಂಗ್ರೆಸ್ ಸೇರಲು ಲಕ್ಷ್ಮಣ ಸವದಿ ಕಾರಣರು. ಅಂದು ಬಿಜೆಪಿ ಸೇರುವುದಕ್ಕೂ ಅವರೇ ಕಾರಣರಾಗಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರು ನನಗೆ ಗೊತ್ತಿರುವವರು. ಎರಡು ಜಿಲ್ಲೆಗಳ ಅಭಿವೃದ್ಧಿಗಾಗಿ ನಾನು ಪಕ್ಷ ಸೇರ್ಪಡೆ ಆಗುತ್ತಿದ್ದೇನೆ. ರಾಜಶೇಖರ ಹಿಟ್ನಾಲ್ ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಹೊತ್ತಿದ್ದೇನೆ ಎಂದು ಹೇಳಿದ್ದಾರೆ.

VISTARANEWS.COM


on

Lok Sabha Election 2024 Karadi Sanganna joins Congress
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ (Sanganna Karadi) ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಂಗಳವಾರ (ಏಪ್ರಿಲ್‌ 16) ರಾಜಿನಾಮೆ ನೀಡಿದ ಬೆನ್ನಲ್ಲೇ, ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಮ್ಮುಖದಲ್ಲಿ ಕಾಂಗ್ರೆಸ್‌ (Congress Karnataka) ಸೇರ್ಪಡೆಯಾಗಿದ್ದಾರೆ.

ಸಂಗಣ್ಣ ಕರಡಿ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಮುಖಂಡರಾದ ಲಕ್ಷ್ಮಣ ಸವದಿ, ಹಂಪನಗೌಡ ಬಾದರ್ಲಿ, ಬಸವಗೌಡ ತುರವಿಹಾಳ್, ರಾಘವೇಂದ್ರ ಹಿಟ್ನಲ್ ಇತರರು ಉಪಸ್ಥಿತರಿದ್ದರು.

ಬಿಜೆಪಿಯಲ್ಲಿ ಎರಡು ಬಣ: ಸಿಎಂ ಸಿದ್ದರಾಮಯ್ಯ

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಕರಡಿ ಸಂಗಣ್ಣ ಒಟ್ಟಿಗೆ ಕೆಲಸ ಮಾಡಿದ್ದೇವೆ. ಬೇರೆ ಪಕ್ಷದಲ್ಲಿ ಅವರು ಇದ್ದರೂ ನಮ್ಮ ನಡುವೆ ಸಂಬಂಧ ಚೆನ್ನಾಗಿದೆ. ಕ್ಷೇತ್ರದಲ್ಲಿ ಜನಾನುರಾಗಿ ಆಗಿದ್ದವರು. ಇವರಿಗೆ ಯಾಕೆ ಟಿಕೆಟ್ ತಪ್ಪಿಸಿದ್ದಾರೋ ಗೊತ್ತಿಲ್ಲ. ‌ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಸಿಎಂ ಮಾಡುವ ಸಂಬಂಧ ಹಿರಿಯರಿಗೆ ಟಿಕೆಟ್ ತಪ್ಪಿಸಿದ್ದಾರೆ. ಅಲ್ಲಿ ಯಡಿಯೂರಪ್ಪ ಮತ್ತು ಬಿ.ಎಲ್. ಸಂತೋಷ್ ಬಣಗಳಿವೆ.‌ ಸಂತೋಷ್ ಜತೆ ಇದ್ದವರಿಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ಹೇಳಿದರು.

ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ

ರಾಜ್ಯದಲ್ಲಿ ಬಿಜೆಪಿ ವಿರುದ್ಧ ಅಲೆ ಇದೆ. ಕಾಂಗ್ರೆಸ್ ಐದು ಗ್ಯಾರಂಟಿಗಳ ಅಲೆ ಇದೆ. ಕಾಂಗ್ರೆಸ್ ಮೇಲೆ ಜನರಿಗೆ ನಂಬಿಕೆಯಿದೆ. ದೇಶದಲ್ಲಿ ಸುಳ್ಳು ಮತ್ತು ಸತ್ಯದ ನಡುವೆ ಚುನಾವಣೆ ನಡೆಯುತ್ತಿದೆ. ರಾಜ್ಯದಲ್ಲಿ ನಾವು 20 ಸ್ಥಾನ ಗೆಲ್ಲುತ್ತೇವೆ. 2014ರಲ್ಲಿ ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಯಲ್ಲಿ ಒಂದನ್ನೂ ಈಡೇರಿಸಿಲ್ಲ. ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರಗಳನ್ನು ಹೇಳಿ ಯಶಸ್ವಿಯಾಗಿದ್ದರು. ಈ ಬಾರಿ ಯಾವುದೇ ಕಾರಣಕ್ಕೂ ಅದು ವರ್ಕೌಟ್ ಆಗಲ್ಲ. ಬಿಜೆಪಿ ಸರ್ವೆಯಲ್ಲಿ 200 ಸ್ಥಾನ ಗೆಲ್ಲುವುದಾಗಿ ಬಂದಿದೆ. ಯಾವುದೇ ಕಾರಣಕ್ಕೂ ಮತ್ತೆ ಎನ್‌ಡಿಎ ಅಧಿಕಾರಕ್ಕೆ ಬರುವುದಿಲ್ಲ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲ್ಲ. ಅಂಡರ್ ಕರೆಂಟ್ ಕಾಂಗ್ರೆಸ್ ಪರ ಇದೆ. ಜನ ಬಹಿರಂಗವಾಗಿ ಬಂದು ಕಾಂಗ್ರೆಸ್‌ಗೆ ಮತ ಹಾಕುತ್ತೇವೆ ಎಂದು ಹೇಳುತ್ತಿದ್ದಾರೆ.

ಸಂಗಣ್ಣ ಕರಡಿಯವರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ. ಅವರು ನಮ್ಮ ಪಕ್ಷಕ್ಕೆ ಬಂದಿರುವುದರಿಂದ ಕೊಪ್ಪಳದಲ್ಲಿ ಶಕ್ತಿ ಬಂದಿದೆ. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Lok Sabha Election 2024 Karadi Sanganna and Herebagewadi ex MLA Malagi joins Congress

ಬಿಜೆಪಿಯನ್ನು ಕಸ ಗುಡಿಸಿದಂತೆ ಗುಡಿಸುತ್ತಾರೆ: ಡಿಕೆಶಿ

ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಸಂಗಣ್ಣ ಕರಡಿಗೆ ಬಿಜೆಪಿಯವರು ಟಿಕೆಟ್ ತಪ್ಪಿಸಿದ್ದಾರೆ. ದೇಶದಲ್ಲಿ ಬಿಜೆಪಿ ವಿರೋಧ ಅಲೆಯಿದೆ. ಗ್ಯಾರಂಟಿ ಮುಂದುವರಿಸಲ್ಲ ಅಂತಿದ್ದಾರೆ. ಈ ಗ್ಯಾರಂಟಿಗಳನ್ನು ನೀವು ಮುಟ್ಟಲು ಸಾಧ್ಯವಿಲ್ಲ. ನಿಮ್ಮ ಹಣೆಬರಹದಲ್ಲಿ ಇದು ಸಾಧ್ಯವಿಲ್ಲ ಎಂದು ಆಕ್ರೋಶ ಹೊರಹಾಕಿದರು. ನಮ್ಮ ತಾಯಂದಿರ ಬಗ್ಗೆ ನೀವು ಮಾತನಾಡಿದ್ದೀರಿ. ನಿಮಗೆ ಜನ ಬುದ್ಧಿ ಕಲಿಸುತ್ತಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಸ ಗುಡಿಸಿದಂತೆ ಗುಡಿಸುತ್ತಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಬೆಳಗಾವಿಯಲ್ಲಿ ಕಸಗುಡಿಸದಂತೆ ಗುಡಿಸಿದ್ದೇವೆ. ಈ ಬಾರಿ ಬಿಜೆಪಿಯನ್ನು ರಾಜ್ಯದಿಂದ ಗುಡಿಸುತ್ತಾರೆ ಎಂದು ಹೇಳಿದರು.

ಐದು ಬೆರಳು ಸೇರಿದರೆ ಮುಷ್ಟಿ, ಐದು ಗ್ಯಾರಂಟಿಗಳು ಸೇರಿ ಕೈ ಗಟ್ಟಿ ಮಾಡಿವೆ. ಮೊನ್ನೆ ನಾಮಪತ್ರ ಸಲ್ಲಿಕೆ ಮಾಡುವಾಗ ಸೇರಿದ ಜನರೇ ಇದಕ್ಕೆ ಸಾಕ್ಷಿ. ಯಡಿಯೂರಪ್ಪ ಮತ್ತು ವಿಜಯೇಂದ್ರ ಇಬ್ಬರಿಗೂ ನಾನು ಹೇಳುವುದೆಂದರೆ ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ. ರಾಘವೇಂದ್ರ ಗೆಲ್ಲುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಸೇರಿದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ

ಮಾಜಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ನಾನು ಕಾಂಗ್ರೆಸ್ ಸೇರಲು ಲಕ್ಷ್ಮಣ ಸವದಿ ಕಾರಣರು. ಅಂದು ಬಿಜೆಪಿ ಸೇರುವುದಕ್ಕೂ ಅವರೇ ಕಾರಣರಾಗಿದ್ದರು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರು ನನಗೆ ಗೊತ್ತಿರುವವರು. ಎರಡು ಜಿಲ್ಲೆಗಳ ಅಭಿವೃದ್ಧಿಗಾಗಿ ನಾನು ಪಕ್ಷ ಸೇರ್ಪಡೆ ಆಗುತ್ತಿದ್ದೇನೆ. ರಾಜಶೇಖರ ಹಿಟ್ನಾಲ್ ಅವರನ್ನು ಗೆಲ್ಲಿಸಿಕೊಂಡು ಬರುವ ಹೊಣೆಯನ್ನು ಹೊತ್ತಿದ್ದೇನೆ ಎಂದು ಹೇಳಿದರು.

Continue Reading

ಮಳೆ

Karnataka Weather : ರಭಸವಾದ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆ; ಇನ್ನೊಂದು ವಾರ ಈ ಜಿಲ್ಲೆಗಳಿಗೆ ಅಲರ್ಟ್‌

Rain News : ಈ ವಾರ ಪೂರ್ತಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಆದರೆ ಕರಾವಳಿಯಲ್ಲಿ ಬಿಸಿ ಹಾಗೂ ಆರ್ದ್ರತೆ ವಾತಾವರಣ ಮೇಲುಗೈ ಸಾಧಿಸಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ (Rain News) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಉಳಿದೆಡೆ ಶುಷ್ಕ ವಾತಾವರಣ ಇರಲಿದೆ. ಇತ್ತ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಅಲ್ಲಲ್ಲಿ ಸಣ್ಣ ಮಳೆಯಾಗಬಹುದು.

ಬೆಂಗಳೂರು ಸೇರಿ ಹಲವೆಡೆ ಒಣ ಹವೆ

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಆಕಾಶವು ನಿರ್ಮಲವಾಗಿರಲಿದೆ. ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ.

ಹೀಟ್‌ ವೇವ್‌ ಅಲರ್ಟ್‌

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಹವಾಮಾನದ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಖ್ಯವಾಗಿ ಏಪ್ರಿಲ್ 18 ರಿಂದ 20 ರವರೆಗೆ ಇದೇ ಹವಾಮಾನ ಇರಲಿದೆ.

ಬಿರುಗಾಳಿ ಎಚ್ಚರಿಕೆ

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇನ್ನು ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.

ಇದನ್ನೂ ಓದಿ: Oil Pulling: ಆಯಿಲ್‌ ಪುಲ್ಲಿಂಗ್‌; ನಿಮ್ಮ ಬಾಯಿಯೊಳಗಿನ ಎಲ್ಲ ಸಮಸ್ಯೆಗಳಿಗೂ ಉತ್ತರ ಇಲ್ಲಿದೆ!

Summer Fashion: ಸಮ್ಮರ್‌ ಫ್ಯಾಷನ್‌ನಲ್ಲಿ ಬಂತು ತಂಪೆರೆಯುವ ವಾಟರ್‌ಫಾಲ್‌ ಇಯರಿಂಗ್ಸ್‌


ಈ ಸೀಸನ್‌ನ ಸಮ್ಮರ್‌ ಫ್ಯಾಷನ್‌ನಲ್ಲಿ (Summer Fashion) ಇದೀಗ ತಂಪೆರೆಯುವ ವಾಟರ್‌ ಫಾಲ್‌ ಇಯರಿಂಗ್‌ಗಳು ಟ್ರೆಂಡಿಯಾಗಿವೆ. ಮೇಲಿನಿಂದ ಕೆಳಗೆ ಇಳಿಯುವ ಜಲಧಾರೆಯಂತೆ ಕಾಣಿಸುವ ಕ್ರಿಸ್ಟಲ್‌ ಅಥವಾ ಅಮೆರಿಕನ್‌ ಡೈಮಂಡ್‌ ಹೊಂದಿರುವ ಈ ಇಯರಿಂಗ್ಸ್‌ ಸದ್ಯ ಹುಡುಗಿಯರ ಫೇವರೇಟ್‌ ಆಕ್ಸೆಸರೀಸ್‌ ಲಿಸ್ಟ್‌ಗೆ ಸೇರಿವೆ.

Summer Fashion

ಏನಿದು ವಾಟರ್ಫಾಲ್‌ ಇಯರಿಂಗ್ಸ್‌ ?

ನೋಡಲು ಥೇಟ್‌ ಜಲಪಾತದಂತೆ ಕಾಣಿಸುವ ಈ ಹ್ಯಾಂಗಿಂಗ್ಸ್‌ನಂತಹ ಕಿವಿಯೊಲೆಗಳು ನೋಡಲು ವಾಟರ್‌ಫಾಲ್‌ನಂತೆ ಕಾಣುತ್ತವೆ. ಹಾಗಾಗಿ ಇವನ್ನು ವಾಟರ್‌ಫಾಲ್‌ ಇಯರಿಂಗ್ಸ್‌ ಎನ್ನಲಾಗುತ್ತದೆ. ಕಿವಿಗೆ ಧರಿಸಿದಾಗ ಇಳೆ ಬೀಳುವ ಲೇಯರ್‌ನಂತಹ ಕ್ರಿಸ್ಟಲ್‌ ಸರಪಳಿಗಳು ವಾಟರ್‌ಫಾಲ್‌ನಂತೆ ಕಾಣಿಸುತ್ತವೆ. ಈ ವಿನ್ಯಾಸದಲ್ಲೆ ಇದೀಗ ಸಾಕಷ್ಟು ಡಿಸೈನ್‌ನವು ಆಕ್ಸೆಸರೀಸ್‌ ಲೋಕಕ್ಕೆ ಬಂದಿವೆ. ಮೈಕ್ರೋ ಕ್ರಿಸ್ಟಲ್ಸ್‌ ಅಂದರೇ, ಅಮೆರಿಕನ್‌ ಡೈಮಂಡ್‌ ಅಥವಾ ಆರ್ಟಿಫಿಷಿಯಲ್‌ ಅಮೆರಿಕನ್‌ ಡೈಮಂಡ್‌ ಹೊಂದಿರುವ ನಾಲ್ಕೈದು ಲೇಯರ್‌ ಹೊಂದಿರುವಂತಹ ಇಳೆ ಬೀಳುವಂತಹ ಇಯರಿಂಗ್‌ಗಳು ವೈಟ್‌ ಶೇಡ್‌ನಲ್ಲಿ ಲಭ್ಯ. ಇದೀಗ ಪಾಸ್ಟೆಲ್‌ ಶೇಡ್‌ಗಳಲ್ಲೂ ದೊರಕುತ್ತಿವೆ. ಲೈಟ್‌ ಪಿಂಕ್‌, ಪೀಚ್‌, ಬೀಚ್‌ ಬ್ಲ್ಯೂ, ಸ್ಕೈ ಬ್ಲ್ಯೂ, ಪಿಸ್ತಾ ಗ್ರೀನ್‌ ಶೇಡ್‌ನವು ಹೆಚ್ಚು ಪಾಪುಲರ್‌ ಆಗಿವೆ. ಹುಡುಗಿಯರನ್ನು ಸೆಳೆದಿವೆ.

Summer Fashion

ಪಾರ್ಟಿವೇರ್‌ ಆಕ್ಸೆಸರೀಸ್‌

ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಗೆ ಸೇರುವ ಈ ವಾಟರ್‌ ಫಾಲ್‌ ಇಯರಿಂಗ್‌ಗಳು ಕೆಲವು ಮೇಲ್ಭಾಗದಲ್ಲಿ ಬಿಗ್‌ ಸ್ಟೋನ್‌ ಅಥವಾ ಕಲರ್‌ಫುಲ್‌ ಇಮಿಟೇಡ್‌ ಸ್ಟೋನ್ಸ್‌ ಹೊಂದಿರುತ್ತವೆ. ಇಲ್ಲವೇ ಬೀಡ್ಸ್‌ ಅಥವಾ ಪರ್ಲ್‌ ಹೊಂದಿರುತ್ತವೆ. ಅದರ ಕೆಳಗೆ ಸುಮಾರು ನಾಲ್ಕೈದು ಇಂಚಿನಷ್ಟು ಉದ್ದದ ಹ್ಯಾಂಗಿಂಗ್‌ ಡಿಸೈನ್‌ ಹೊಂದಿರುತ್ತವೆ. ಕೆಲವು ಒಂದೇ ಸಮನಾಗಿ ಇದ್ದರೇ, ಇನ್ನು ಕೆಲವು ಆಸೆಮ್ಮಿಟ್ರಿಕಲ್‌ ಲೆಂಥ್‌ ಹೊಂದಿರುತ್ತವೆ. ಇವು ಇದೀಗ ಪಾರ್ಟಿವೇರ್‌ ಆಕ್ಸೆಸರೀಸ್‌ ಕೆಟಗರಿಯಲ್ಲಿ ಟಾಪ್‌ ಲಿಸ್ಟ್‌ನಲ್ಲಿವೆ. ಇವುಗಳ ವಿಶೇಷತೆಯೇಂದರೇ, ಯಾವುದೇ ಬಗೆಯ ಶಿಮ್ಮರ್‌ ಅಥವಾ ಶೈನಿಂಗ್‌ ಫ್ಯಾಬ್ರಿಕ್‌ನ ಪಾರ್ಟಿವೇರ್‌ ಔಟ್‌ಫಿಟ್‌ನೊಂದಿಗೆ ಇವನ್ನು ಧರಿಸಬಹುದು. ಎಲ್ಲವಕ್ಕೂ ಇವು ಮ್ಯಾಚ್‌ ಆಗುತ್ತವೆ. ಎಲ್ಲದಕ್ಕಿಂತ ಹೆಚ್ಚಾಗಿ ಇಡೀ ಮುಖವನ್ನು ಹೈ ಲೈಟ್‌ ಮಾಡುತ್ತವೆ. ಮಿರುಗುತ್ತವೆ ಎನ್ನುತ್ತಾರೆ ಸ್ಟೈಲಿಸ್ಟ್‌ಗಳು.

Summer Fashion

ವಾಟರ್‌ ಫಾಲ್‌ ಕ್ಲಾಸಿ ಲುಕ್‌

“ಶಿಮ್ಮರ್‌ ಔಟ್‌ಫಿಟ್‌ಗಳಿಗೆ ಈ ವಾಟರ್‌ಫಾಲ್‌ ಇಯರಿಂಗ್‌ಗಳು ಹೇಳಿ ಮಾಡಿಸಿದಂತಿರುತ್ತವೆ. ಕಿವಿ ಮಾತ್ರವಲ್ಲ, ಇಡೀ ಲುಕ್‌ಗೆ ಇವು ಸಾಥ್‌ ನೀಡುತ್ತವೆ. ಆಕರ್ಷಕವಾಗಿ ಕಾಣಿಸುತ್ತವೆ. ಕ್ಲಾಸಿ ಲುಕ್‌ ನೀಡುವುದರೊಂದಿಗೆ ಸೆಲೆಬ್ರೆಟಿ ಇಮೇಜ್‌ ನೀಡುತ್ತವೆ” ಎನ್ನುತ್ತಾರೆ ಜ್ಯುವೆಲ್‌ ಡಿಸೈನರ್‌ ರೀಟಾ. ಅವರ ಪ್ರಕಾರ, ಯುವತಿಯರು ಮಾತ್ರವಲ್ಲ, ಎಲ್ಲಾ ವಯಸ್ಸಿನ ಮಹಿಳೆಯರು ಧರಿಸುವುದು ಹೆಚ್ಚಾಗಿದೆ.

Summer Fashion

ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಹೀಗಿರಲಿ

  • ಶಿಮ್ಮರ್‌ ಡಿಸೈನರ್‌ವೇರ್‌ ಶೇಡ್ಸ್‌ಗೆ ತಕ್ಕಂತೆ ವಾಟರ್‌ ಫಾಲ್‌ ಇಯರಿಂಗ್‌ ಆಯ್ಕೆ ಮಾಡಿ.
  • ಪಾಸ್ಟೆಲ್‌ ಶೇಡ್‌ ಡಿಸೈನ್‌ನವು ಟ್ರೆಂಡ್‌ನಲ್ಲಿವೆ.
  • ಆದಷ್ಟೂ ಮಿನುಗುವಂತವನ್ನು ಸೆಲೆಕ್ಟ್‌ ಮಾಡಿ.
  • ಶೋಲ್ಡರ್‌ ತನಕ ನೇತಾಡುವಂತವು ಇದೀಗ ಜೆನ್‌ ಜಿ ಹುಡುಗಿಯರನ್ನು ಸೆಳೆದಿವೆ.
  • ನಾಲ್ಕೈದು ಎಳೆ ಎಳೆಯಾಗಿರುವಂತವನ್ನು ಧರಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Lok Sabha Election 2024: ಸಂಸತ್‌ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಕರಡಿ ರಾಜೀನಾಮೆ; ನಾಳೆ ಕಾಂಗ್ರೆಸ್‌ ಸೇರ್ಪಡೆ?

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಬಂಡಾಯದ ಕಹಳೆ ಊದಿದ್ದರು. ಆದರೆ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಮಾಡಿದ್ದರು. ಆದರೆ, ಒಳಗೊಳಗೇ ಕುದಿಯುತ್ತಿದ್ದ ಸಂಗಣ್ಣ ಕರಡಿ ಕೊನೆಗೂ ಕಾಂಗ್ರೆಸ್‌ ಕದ ತಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಂಸತ್‌ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆ ಇದೆ.

VISTARANEWS.COM


on

Lok Sabha Election 2024 Sanganna Karadi resigns from primary membership of BJP
Koo

ಕೊಪ್ಪಳ: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ (Sanganna Karadi) ಅವರು ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ (CM Siddaramaiah) ಸಮ್ಮುಖದಲ್ಲಿ ಕಾಂಗ್ರೆಸ್‌ (Congress Karnataka) ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಬಂಡಾಯದ ಕಹಳೆ ಊದಿದ್ದರು. ಆದರೆ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಮಾಡಿದ್ದರು. ಅಲ್ಲದೆ, ಅವರಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಭರವಸೆಯನ್ನೂ ನೀಡಲಾಗಿತ್ತು. ಕೊನೆಗೆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವುದಾಗಿ ಸಂಗಣ್ಣ ಕರಡಿ ಸಹ ಒಪ್ಪಿಕೊಂಡಿದ್ದರು.

ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎಂದು ಅಂದುಕೊಳ್ಳುವಷ್ಟರಲ್ಲಿ ಸಂಗಣ್ಣ ಕರಡಿ ತಮ್ಮ ಮನಸ್ಸನ್ನು ಬದಲಾಯಿಸಿದ್ದರು. ಕೆಲವು ಕಾಂಗ್ರೆಸ್‌ ಮುಖಂಡರು ಅವರನ್ನು ಸಂಪರ್ಕ ಮಾಡಿದ್ದರು. ಈ ವೇಳೆ ಕೆಲವು ಸುತ್ತಿನ ಚರ್ಚೆಗಳು ಸಹ ನಡೆದಿವೆ. ಹೀಗಾಗಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ತಮ್ಮ ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಲೋಕಸಭಾಧ್ಯಕ್ಷರಿಗೆ ಇ- ಮೇಲ್ ಮೂಲಕ ರಾಜಿನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ಹತ್ತು ವರ್ಷದಿಂದ ಲೋಕಸಭಾ ಸದಸ್ಯರಾಗಿದ್ದ ಸಂಗಣ್ಣ ಕರಡಿ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು. ಆದರೆ, ಬಿಜೆಪಿಯೊಂದಿಗಿನ ತಮ್ಮ ಹಲವು ವರ್ಷಗಳ ಸಂಬಂಧವನ್ನು ಕಡಿದುಕೊಂಡಿದ್ದು, ಈಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

ಇದರ ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ಸಂಗಣ್ಣ ಕರಡಿ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇ-ಮೇಲ್ ಮೂಲಕ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ?

ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಸಂಬಂಧ ಕೆಲವು ಸುತ್ತಿನ ಮಾತುಕತೆ ಸಹ ನಡೆದಿವೆ ಎನ್ನಲಾಗಿದೆ. ಅಲ್ಲದೆ, ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಇರುವುದಕ್ಕೆ ಮುನಿಸಿಕೊಂಡಿರುವ ಕರಡಿಯನ್ನು ಪಕ್ಷಕ್ಕೆ ಸೆಳೆದರೆ ಲಾಭವಾಗುತ್ತದೆ ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ಹಾಕಿಕೊಂಡಿತ್ತು. ಹೀಗಾಗಿ ನಿರಂತರವಾಗಿ ಸಂಪರ್ಕ ಸಾಧಿಸಿ ಕರಡಿಯನ್ನು ಕಾಂಗ್ರೆಸ್‌ನತ್ತ ಸೆಳೆಯುವಲ್ಲಿ ಯಶ ಕಾಣಲಾಗಿದೆ ಎಂದೇ ಹೇಳಲಾಗುತ್ತಿದೆ. ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಲಿರುವ ಸಂಗಣ್ಣ ಕರಡಿ, ತಮ್ಮ ಕೆಲವು ಷರತ್ತುಗಳನ್ನು ಇಡಲಿದ್ದಾರೆ. ಇದಕ್ಕೆ ಅವರು ಒಪ್ಪಿದಲ್ಲಿ ಕೂಡಲೇ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ವಿಧಾನಸಭೆ ಚುನಾವಣೆಯಲ್ಲಿ ಸೊಸೆಗೆ ಟಿಕೆಟ್‌

ಇನ್ನು ಕಳೆದ ವಿಧಾನಸಭಾ ಚುನಾವಣೆ ವೇಳೆ ಸಂಗಣ್ಣ ಕರಡಿ ಸೊಸೆ ಮಂಜುಳಾ ಅಮರೇಶ್ ಸ್ಪರ್ಧೆ ಮಾಡಿದ್ದರು. ಇವರನ್ನೇ ಕಣಕ್ಕಿಳಸಬೇಕು ಎಂದು ಸಂಗಣ್ಣ ಕರಡಿ ಪಟ್ಟು ಹಿಡಿದಿದ್ದರು. ಕೊನೆಗೆ ಇವರ ಒತ್ತಡಕ್ಕೆ ಬಿಜೆಪಿ ಹೈಕಮಾಂಡ್‌ ಮಣಿದಿತ್ತು. ಆದರೆ, ಚುನಾವಣೆಯಲ್ಲಿ ಮಂಜುಳಾ ಅವರು ಸೋಲು ಕಂಡಿದ್ದರು. ಆದರೆ, ಸಂಗಣ್ಣ ಕರಡಿ ಅವರಿಗೆ ಕೊಪ್ಪಳ ಭಾಗದಲ್ಲಿ ಒಳ್ಳೆಯ ಹಿಡಿತವಿದೆ. ಈ ಹಿನ್ನೆಲೆಯಲ್ಲಿ ಅವರ ಕಾಂಗ್ರೆಸ್‌ ಸೇರ್ಪಡೆ ಹಿಂದೆ ತಂತ್ರಗಾರಿಕೆ ಅಡಗಿದೆ ಎನ್ನಲಾಗಿದೆ.

Continue Reading

ಮಳೆ

Karnataka Weather : ಮುಂದಿನ 4 ತಿಂಗಳು ವಾಡಿಕೆಗಿಂತ‌ ಹೆಚ್ಚು ಮಳೆ; ನಾಳಿನ ಹವಾಮಾನ ಏನು?

Karnataka Weather : ಬರಗಾಲದಿಂದ ತತ್ತರಿಸಿರುವ ಜನತೆಗೆ ಮುಂಗಾರು ಮಳೆಯು ವರವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇದರ ಮಧ್ಯೆ ಈ ವಾರ ಪೂರ್ತಿ ಗುಡುಗು ಸಹಿತ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಸೂಚನೆ ಇದೆ ಇಲ್ಲಿದೆ ಮಾಹಿತಿ.

VISTARANEWS.COM


on

By

Karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮಳೆ ಕಾಣದೆ ಕಂಗೆಟ್ಟಿದ್ದ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆಯು (Karnataka Weather Forecast) ದೀರ್ಘಕಾಲಿನ ಮುಂಗಾರು ಮಳೆ ಕುರಿತು ಗುಡ್ ನ್ಯೂಸ್ ನೀಡಿದೆ. ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಜೂನ್‌ನಿಂದ ಸೆಪ್ಟೆಂಬರ್‌ ಅವಧಿಯಲ್ಲಿ ಕರ್ನಾಟಕ ಸೇರಿದಂತೆ ನೈರುತ್ಯ ಭಾರತದಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯಕ್ಕೆ ಮುಂಗಾರು ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆ.ಮೀ ರಷ್ಟಿದೆ. ದೀರ್ಘಾಕಾಲಿನ ಮುಂಗಾರು ಮಳೆ ಮುನ್ಸೂಚನೆ ಪ್ರಕಾರ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದೀರ್ಘಾವಧಿ ಸರಾಸರಿ ವಾಡಿಕೆ ಮಳೆ ಜೂನ್‌ನಲ್ಲಿ 19.9 ಸೆಂ.ಮೀ, ಜುಲೈನಲ್ಲಿ 27.1 ಸೆಂ.ಮೀ. ಆಗಸ್ಟ್‌ನಲ್ಲಿ 22 ಸೆಂ.ಮೀ ಹಾಗೂ ಸೆಪ್ಟೆಂಬರ್‌ನಲ್ಲಿ 16.1 ಸೆಂ.ಮೀ ನಷ್ಟಿದ್ದು ಒಟ್ಟಾರೆ ರಾಜ್ಯಕ್ಕೆ ಮುಂಗಾರು ಹಂಗಾಮಿನಲ್ಲಿ 85.2 ಸೆಂ.ಮೀ ನಷ್ಟಿದೆ.

2024ರ ಜೂನ್‌ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದೇಶದಾದ್ಯಂತ ದೀರ್ಘಾವಧಿ ಸರಾಸರಿ ಮಳೆ ಪ್ರಮಾಣ ಹೆಚ್ಚಾಗಲಿದೆ. ಶೇಕಡಾ 5ರಷ್ಟು ವ್ಯತ್ಯಯದೊಂದಿಗೆ ಶೇಕಡಾ 106 ರಷ್ಟು ವಾಡಿಕೆಗಿಂತಾ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಕಳೆದ 1971-2020ರ ಸರಾಸರಿ ವಾಡಿಕೆ ಮಳೆ ಪ್ರಮಾಣ 87 ಸೆಂ.ಮೀ ನಷ್ಟಿದೆ . ಮುಂಗಾರು ಮಳೆ ಮುನ್ಸೂಚನೆ ಅನ್ವಯ ದೇಶದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿ ಸರಾಸರಿ ಶೇ. 104-110ರಷ್ಟು ಇರಲಿದೆ.

ಇದನ್ನೂ ಓದಿ: Physical Abuse : ಇವನೆಂಥ ಗಂಡ! ಕಾಲ್‌ ಗರ್ಲ್‌ ಕರೆಸಿ ಪತ್ನಿ ಮುಂದೆಯೇ ಅಸಭ್ಯ ವರ್ತನೆ

ಇನ್ನೊಂದು ವಾರ ಮಳೆ ಅಬ್ಬರ

ನಾಳೆಯಿಂದ ಅಂದರೆ ಏಪ್ರಿಲ್‌ 17 ರಿಂದ 22ರವರೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಇದೆ. ರಾಜ್ಯಾದ್ಯಂತ ಬುಧವಾರದಂದು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರುಗಿ ಹಾಗೂ ಕೊಪ್ಪಳ, ರಾಯಚೂರು, ವಿಜಯಪುರ ಸೇರಿದಂತೆ ಯಾದಗಿರಿ, ಬಳ್ಳಾರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉಳಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರಿನ ಒಂದೆರಡು ಕಡೆಗಳಲ್ಲಿ ಮಳೆ ಸಾಧ್ಯತೆ ಇದೆ. ಉಳಿದಂತೆ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ಏಪ್ರಿಲ್‌ 19, 20 ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಜತೆಗೆ ಮೇಲ್ಮೈ ಮಾರುತಗಳು ಬಲವಾದ ಮತ್ತು ರಭಸದಿಂದ ಕೂಡಿರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Weather
ಕರ್ನಾಟಕ17 mins ago

Karnataka Weather: ಇಂದು ದಕ್ಷಿಣ ಕನ್ನಡ, ಬೆಳಗಾವಿ ಸೇರಿ ವಿವಿಧೆಡೆ ಗುಡುಗು, ಬಿರುಗಾಳಿ ಸಹಿತ ಮಳೆ!

EVM
ಪ್ರಮುಖ ಸುದ್ದಿ46 mins ago

ವಿಸ್ತಾರ ಸಂಪಾದಕೀಯ: ಮತ್ತೆ ಮತಪತ್ರಗಳ ‘ಶಿಲಾಯುಗ’ಕ್ಕೆ ಹೋಗಲಾಗದು! ಆಧಾರರಹಿತವಾಗಿ ಮತಯಂತ್ರ ದೂಷಣೆ ಸರಿಯಲ್ಲ

Baking Powder
ಆಹಾರ/ಅಡುಗೆ47 mins ago

Baking Powder: ಬೇಕಿಂಗ್‌ ಪುಡಿ ಹುಟ್ಟಿದ ಕತೆ ಕುತೂಹಲಕರ! ಅಡುಗೆ ಮಾಡುವ ಇದರ ಹಿನ್ನೆಲೆ ಗೊತ್ತಿರಲಿ

daily horoscope predictions for April 18 2024
ಭವಿಷ್ಯ2 hours ago

Dina Bhavishya : ಈ ರಾಶಿಯವರು ಇಂದು ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ ಇದೆ!

DD News Logo
ದೇಶ7 hours ago

DD News Logo: ರಾಮನವಮಿ ದಿನವೇ ಡಿಡಿ ನ್ಯೂಸ್‌ ಲೋಗೊ ಕೇಸರಿಮಯ; ತೀವ್ರವಾಯ್ತು ಚರ್ಚೆ!

Jai Shree Ram slogan
ಪ್ರಮುಖ ಸುದ್ದಿ7 hours ago

Jai Shree Ram slogan: ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದ ಮೂವರ ಬಂಧನ

Union Minister Pralhad Joshi election campaign in Hubli
ಹುಬ್ಬಳ್ಳಿ8 hours ago

Lok Sabha Election 2024: ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಿಂದ ಸ್ವಚ್ಛ ಆಡಳಿತ: ಪ್ರಲ್ಹಾದ್‌ ಜೋಶಿ

Times Influential list 2024
ಕ್ರೀಡೆ8 hours ago

Times Influential list 2024: ಟೈಮ್ಸ್‌ ಪ್ರಭಾವಿ ಪಟ್ಟಿಯಲ್ಲಿ ಸ್ಥಾನ ಪಡೆದ ಸಾಕ್ಷಿ ಮಲಿಕ್,ಆಲಿಯಾ ಭಟ್

Terrorist Attack
ದೇಶ8 hours ago

Terrorist Attack: ಕಾಶ್ಮೀರದಲ್ಲಿ ಬಿಹಾರದ ಕಾರ್ಮಿಕನನ್ನು ಹತ್ಯೆಗೈದ ಉಗ್ರರು; ತಿಂಗಳಲ್ಲಿ 2ನೇ ದಾಳಿ

MP DK Suresh election campaign in various places of Channapattana
ಬೆಂಗಳೂರು ಗ್ರಾಮಾಂತರ8 hours ago

Lok Sabha Election 2024: ಚನ್ನಪಟ್ಟಣದ ವಿವಿಧೆಡೆ ಸಂಸದ ಡಿ.ಕೆ.ಸುರೇಶ್‌ ಮತಯಾಚನೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20243 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌