Koppala News: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಗಂಗಾವತಿಯಲ್ಲಿ ಸಂಭ್ರಮಾಚರಣೆ - Vistara News

ಕೊಪ್ಪಳ

Koppala News: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಗಂಗಾವತಿಯಲ್ಲಿ ಸಂಭ್ರಮಾಚರಣೆ

Koppala News: 3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿಯ ಮಹಾತ್ಮಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ಮಾಡಿದರು.

VISTARANEWS.COM


on

BJP wins in 3 states Celebration in Gangavathi
3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿಯ ಗಾಂಧಿವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಗಾವತಿ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ಮಾಡಿದರು.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತ ಪಡೆದು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪ್ರಮುಖರು, ಪಕ್ಷದ ಕಾರ್ಯಕರ್ತರು, ಪ್ರಮುಖರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Masala Tea: ಚಳಿಗಾಲವೆಂದು ಅತಿಯಾಗಿ ಮಸಾಲೆ ಚಹಾ ಕುಡಿಯುತ್ತೀರಾ? ಹಾಗಾದರೆ ಎಚ್ಚರ!

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಜನರಿಗೆ ಕಾಂಗ್ರೆಸ್ ಪಕ್ಷದ ಬಿಟ್ಟಿ ಭಾಗ್ಯಗಳು ಬೇಕಿಲ್ಲ. ಅವರಿಗೆ ಬೇಕಿರುವುದು ಮೋದಿ ಎಂಬ ಒಂದೇ ಒಂದು ಗ್ಯಾರಂಟಿ ಎಂಬುವುದು ಈ ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ ಎಂದು ತಿಳಿಸಿದರು.

ಯುವ ಮುಖಂಡ ಸಂಗಮೇಶ ಸುಗ್ರೀವಾ, ಕಾಡಾದ ಮಾಜಿ ಅಧ್ಯಕ್ಷ ಎಚ್.ಗಿರೇಗೌಡ, ಎಚ್.ಎಂ. ತಿಪ್ಪೇರುದ್ರಸ್ವಾಮಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕಾಶಿನಾಥ ಚಿತ್ರಗಾರ ಮಾತನಾಡಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

ಈ ಸಂದರ್ಭದಲ್ಲಿ ಮುಖಂಡರಾದ ಶೋಭಾ ರಾಯ್ಕರ್, ಗಿರಿಜಮ್ಮ, ಶೈಲಜಾ, ಸರಸ್ವತಿ ರಾಯಭಾಗಿ, ರೂಪಾ, ಸರಸ್ವತಿ ಕಾಟ್ವಾ, ಅಕ್ಕಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Karnataka Rain: ಸೋಮವಾರ ರಾತ್ರಿ ಸುರಿದ ಮಳೆಗೆ (Heavy Rain) ಜನರು ಕಂಗಲಾಗಿದ್ದಾರೆ. ಹಲವೆಡೆ ಭಾರಿ ಮಳೆಗೆ (Karnataka Weather) ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳಿದ್ದರೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ಜಾಗರಣೆ ಮಾಡುವಂತಾಯಿತು.

VISTARANEWS.COM


on

By

karnataka Rain Effected
Koo

ಬೆಂಗಗಳೂರು/ಬೆಳಗಾವಿ: ತಡರಾತ್ರಿ ಸುರಿದ ಮಳೆಯು (Karnataka Rain) ಅವಾಂತರವನ್ನೇ ಸೃಷ್ಟಿಸಿ ಮಾಡಿದೆ. ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಅಬ್ಬರಿಸಿದ ಮಳೆಗೆ (Rain News) ಮರಗಳು ಧರೆಗುರುಳಿದ್ದವು. ನೃಪತುಂಗದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎದುರಿಗೆ ಮರದ ಕೊಂಬೆ ನೆಲಕ್ಕೆ ಉರುಳಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇತ್ತ ಬುಕ್‌ಫೀಲ್ಡ್‌ನಲ್ಲಿ ಮರ ಬಿದ್ದು ಕಾರೊಂದು ಜಖಂಗೊಂಡಿತ್ತು. ಚಾಮರಾಜಪೇಟೆಯ ಗುಡ್ಡದಹಳ್ಳಿಯಲ್ಲಿ ಮನೆಗಳಿಗೆ ಕೆಸರುಮಯ ನೀರು ನುಗ್ಗಿದ್ದರಿಂದ ಹೊರಹಾಕಲು ಜನರು ತೊಂದರೆ ಅನುಭವಿಸಿದರು.

ಮೈಸೂರಿನಲ್ಲಿ ಕುಸಿದು ಬಿದ್ದ ಮನೆ

ಭಾರಿ ಮಳೆಗೆ ಮನೆಯೊಂದು ಕುಸಿದು ಬಿದ್ದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಮೂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ಸುರಿದ ಬಾರಿ ಬಿರುಗಾಳಿ ಸಹಿತ ಮಳೆಗೆ ಭಾಗ್ಯಮ್ಮ ಎಂಬುವವರಿಗೆ ಸೇರಿದ ಮನೆ ಕುಸಿದಿದೆ. ಮನೆ ಕುಸಿದು ಬಿದ್ದಿದ್ದು, ವಾಸ ಮಾಡಲು ಮನೆ ಇಲ್ಲದೆ ಭಾಗ್ಯಮ್ಮ ಕಣ್ಣೀರು ಹಾಕಿದರು. ಮನೆಯಲ್ಲಿ ಸುಮಾರು 6 ತಿಂಗಳು ಸಣ್ಣ ಮಗುವಿದ್ದು ಮಧ್ಯರಾತ್ರಿ ಸುರಿದ ಭಾರಿ ಮಳೆಯಿಂದ ಮನೆ ಕುಸಿದು ಬಿದ್ದು ಕುಟುಂಬವು ಕಂಗಲಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನಾಶವಾಗಿವೆ. ನಮಗೆ ಆದಷ್ಟು ಬೇಗ ಸರ್ಕಾರ ಪರಿಹಾರ ಮಾಡಿಕೊಡಬೇಕು ಎಂದು ಭಾಗ್ಯಮ್ಮ ಮನವಿ ಮಾಡಿದರು.

ವಿಜಯನಗರದಲ್ಲಿ ಮಳೆಗೆ ಬೆಳೆ ಹಾನಿ

ಕಳೆದ ರಾತ್ರಿ ಮಳೆ ಜೆತಗೆ ಬಿರುಗಾಳಿ ಬೀಸಿದ ಹಿನ್ನೆಲೆಯಲ್ಲಿ ಬಾಳೆ, ಭತ್ತ, ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ವಿಜಯನಗರದ ಹುರುಳಿಹಾಳ ಗ್ರಾಮದಲ್ಲಿ ಗಾಳಿ ಪ್ರಮಾಣ ಹೆಚ್ಚಿದರಿಂದ ವೀಳ್ಯದೆಲೆ ತೋಟಕ್ಕೆ ಹಾನಿಯಾಗಿದೆ. ಕಾನಾಹೊಸಹಳ್ಳಿ ಹೋಬಳಿಯ ಎಕ್ಕೆಗೊಂದಿ ಗ್ರಾಮದಲ್ಲಿ ರೇಷ್ಮೆ ಸಾಗಾಣೆ ಮನೆಗೆ ಹಾನಿಯಾಗಿದೆ. ಹರಪನಹಳ್ಳಿ ತಾಲೂಕಿನಲ್ಲಿ ಗುಡುಗು, ಮಿಂಚು ಸಿಡಿಲಿನ ಆರ್ಭಟ ಮಧ್ಯೆ ಸಾಧಾರಣ ಮಳೆ ವರದಿಯಾಗಿದೆ.

ಧರೆಗುರುಳಿದ ಮರಗಳು

ಚಿಕ್ಕೋಡಿ ಗಡಿ ತಾಲೂಕು ನಿಪ್ಪಾಣಿಯಲ್ಲಿ ರಣ ಗಾಳಿ-ಮಳೆಗೆ ಸಿಕ್ಕಿ ನಲುಗಿದೆ. ನಿಪ್ಪಾಣಿ ನಗರದ ವಿವಿಧೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನಿಪ್ಪಾಣಿಯ ಭೀಮನಗರ,ವಿದ್ಯಾನಗರ,ಅಂಬೇಡ್ಕರ್ ನಗರದ ಹತ್ತಿರ ಮರಗಳು ಬಿದ್ದಿವೆ. ಮುನ್ಸಿಪಲ್ ಹೈಸ್ಕೂಲ್,ಅಬಕಾರಿ ಫೀಸ್ ಸೇರಿದಂತೆ ವಿವಿಧೆಡೆ ಹಾನಿಯಾಗಿದೆ. ಭಾರಿ ಗಾಳಿಗೆ ವಿದ್ಯುತ್ ಕಂಬಗಳು ವಾಲಿದರೆ, ಮನೆಯ ಚಾವಣೆ ಹಾರಿ ಹೋಗಿವೆ. ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ನಿಪ್ಪಾಣಿ ನಗರಸಭೆ ಪೌರಾಯುಕ್ತ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ವಾಹನ ಸೇರಿದಂತೆ ಸುಮಾರು 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ. ಹಾನಿಯಾದ ಪ್ರದೇಶಗಳಿಗೆ ಜಗದೀಶ ಹುಲಗೆಜ್ಜಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಿಪ್ಪಾಣಿ ನಗರ ತತ್ತರಿಸಿದೆ. ಭಾರಿ ಮಳೆಗೆ 20 ಕ್ಕೂ ಹೆಚ್ಚು ಮನೆಗಳ ಚಾವಣಿ ಹಾರಿ ಹೋಗಿದೆ. ಪತ್ರಾಸ್ ಶೇಡ್ ಹಾಗೂ ಹಂಚಿನ ಮನೆಗಳಿಗೆ ಹೆಚ್ಚಿನ ಹಾನಿಯಾಗಿದೆ. ಭಾರಿ ಮಳೆ ಗಾಳಿಗೆ 30 ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ಮರಗಳ ಜತೆಗೆ ನಗರದಲ್ಲಿ 50 ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾನಿಯಾಗಿವೆ. ಮರಗಳು ಬಿದ್ದು 10 ಕ್ಕೂ ಹೆಚ್ಚು ವಾಹನಗಳು ಸಹ ಜಖಂಗೊಂಡಿವೆ. ಕಳೆದ ರಾತ್ರಿಯಿಂದ ನಿಪ್ಪಾಣಿ ನಗರದಲ್ಲಿ ವಿದ್ಯುತ್ ಕಟ್ ಆಗಿದೆ. ನಿಪ್ಪಾಣಿ ನಗರಸಭೆಯಿಂದ ಮರಗಳ ತೆರುವು ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿಪ್ಪಾಣಿ ನಗರಸಭೆ ಅಧಿಕಾರಿಗಳು ಹಾನಿಯಾದ ಮನೆಗಳ ಸರ್ವೆಗೆ ಮುಂದಾಗಿದ್ದಾರೆ. ನಿಪ್ಪಾಣಿ ಪಟ್ಟಣದ ಅಂಬೇಡ್ಕರ್ ಗಲ್ಲಿಗೆ ಭೀಮ ನಗರ ಪ್ರದೇಶದಲ್ಲಿ ಅತಿ ಹೆಚ್ಚಿನ ಹಾನಿಯಾಗಿದೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

ಆನೇಕಲ್‌ನಲ್ಲಿ ಮನೆಗೆ ನುಗ್ಗಿದ ಚರಂಡಿ ನೀರು

ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ಮನೆಗಳಿಗೆ ಹಾಗೂ ಬಡಾವಣೆಗಳಿಗೆ ಕೊಳಚೆ ನೀರು ನುಗ್ಗಿದೆ. ಚರಂಡಿ-ರಾಜಕಾಲುವೆ ವ್ಯವಸ್ಥೆ ಸರಿ ಇಲ್ಲದೆ ಮನೆಗಳಿಗೆ ನೀರು ನುಗ್ಗಿದೆ. ಇಡೀ ರಾತ್ರಿ ನೀರಿನಲ್ಲಿ ನಿವಾಸಿಗಳು ಕಾಲ ಕಳೆದಿದ್ದಾರೆ. ಹೆಬ್ಬಗೋಡಿ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗುತ್ತದೆ. ಮನೆಯೊಳಗೆ ನುಗ್ಗಿದ ಕೊಳಚೆ ನೀರನ್ನು ಸ್ವಚ್ಛ ಮಾಡುವುದರಲ್ಲಿ ದಿನದೂಡುತ್ತಿದ್ದಾರೆ.

ವಿಜಯನಗರದಲ್ಲಿ ವರುಣನ ಕೃಪೆಗಾಗಿ ಜಪ – ತಪ

ಜಪ – ತಪ ಮಾಡಿದ ಕೇವಲ ಎಂಟು ದಿನದಲ್ಲಿ ವರುಣನ ಆಗಮನವಾಗಿದೆ. ಕಳೆದ ಒಂದು ವಾರದಲ್ಲಿ ಎರಡು ಬಾರಿ ವಿಜಯನಗರದ ಹೊಸಪೇಟೆ ತಾಲೂಕಿನಲ್ಲಿ ಮಳೆ ಸುರಿದಿದೆ. ಭೀಕರ ಬರಗಾಲ, ಬಿಸಿಲಿನ ಧಗೆಯಿಂದ ಜನರು ಆಂಜನೇಯನ ಮೊರೆ ಹೋಗಿದ್ದರು. ಮಳೆಗಾಗಿ ನೂರಾರು ವರ್ಷ ಹಳೆಯದಾದ ಐತಿಹಾಸಿಕ ಹಿನ್ನೆಲೆವೊಳ್ಳ ಆಂಜನೇಯನಿಗೆ ಮಳೆಗಾಗಿ ನಿತ್ಯ ಪೂಜೆ, ಭಜನೆ ಮಾಡುತ್ತಿದ್ದರು. ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿರೋ ಐತಿಹಾಸಿಕ ಆಂಜನೇಯ ದೇಗುಲವನ್ನು ವಿಜಯನಗರ ಅರಸರ ಕಾಲದಿಂದಲೂ ವಿಶೇಷ ಸಲ್ಲಿಕೆ ಮಾಡುತ್ತಿದ್ದಾರೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಂತ ನೀರು

ಧಾರಾಕಾರ ಮಳೆಗೆ ಹಳೇ ಮೈ-ಬೆಂ ಹೆದ್ದಾರಿಯಲ್ಲಿ ಜಲಾವೃತಗೊಂಡಿತ್ತು. ಶ್ರೀರಂಗಪಟ್ಟಣದ ಅಗ್ನಿಶಾಮಕ ದಳದ ಎದುರಿನ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ಮಧ್ಯೆ ಮೂರು ಅಡಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡಿದರು. ಹೆದ್ದಾರಿಯಲ್ಲಿ ತೆರಳಲಾಗದೆ ಬೈಕ್ ಸವಾರರು ಬದಲಿ ರಸ್ತೆಯಲ್ಲಿ ಸಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka weather Forecast: ರಾಜ್ಯದ ವಿವಿಧೆಡೆ ಮಳೆ ಅಬ್ಬರ (Heavy Rain)ಮುಂದುವರಿದಿದೆ. ಮೇ 14ರಂದು ಭಾರಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದ್ದು, ಹವಾಮಾನ ಇಲಾಖೆಯು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿ ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಕಲಬುರಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಡಿಗ್ರಿ ಸೆಲ್ಸಿಯಸ್ ಮತ್ತು 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಯೆಲ್ಲೋ ಅಲರ್ಟ್‌:

ಭಾರೀ ಮಳೆಯೊಂದಿಗೆ ಗುಡುಗು ಹಾಗೂ ಬಿರುಗಾಳಿ ಇರಲಿದ್ದು ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಪ್ರಮುಖವಾಗಿ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕಲಬುರಗಿ, ಬಾಗಲಕೋಟೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Rain News : ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಗಾಳಿಯೊಟ್ಟಿಗೆ ಧಾರಾಕಾರ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಭಾನುವಾರದಂದು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವ (Rain News) ವರದಿ ಆಗಿದೆ. ಅತಿ ಹೆಚ್ಚು ಮಳೆಯು ಪುತ್ತೂರು ಹಾಗೂ ರಾಯಚೂರಿನಲ್ಲಿ ತಲಾ 10 ಸೆಂ.ಮೀ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉಪ್ಪಿನಂಗಡಿ 9, ಸಿರಾ ಮತ್ತು ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ, ಗಬ್ಬೂರು, ಬೆಳಗಾವಿಯಲ್ಲಿ 7 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ. ಗರಿಷ್ಠ ಉಷ್ಣಾಂಶ ರಾಯಚೂರಿನಲ್ಲಿ 39.4 ಡಿ. ಸೆ ದಾಖಲಾಗಿದೆ.

ಕಾಸರಗೋಡಿನಲ್ಲಿ ಗಾಳಿ ಮಳೆಗೆ ನೆಲಕ್ಕುರುಳಿದ ಬೃಹತ್ ಹೋರ್ಡಿಂಗ್‌

ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೇರಳದ ಕಾಸರಗೋಡಿನ ಬಸ್ ನಿಲ್ದಾಣ ಬಳಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್‌ ನೆಲಕ್ಕುರುಳಿದ ಘಟನೆ ನಡೆದಿದೆ. ಹೋರ್ಡಿಂಗ್‌ ಬೀಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಹೋರ್ಡಿಂಗ್‌ ಬಿದ್ದು ಕೆಳಗಡೆ ಪಾರ್ಕ್ ಮಾಡಿದ್ದ ವಾಹನಗಳಿಗೆ ಹಾನಿಯಾಗಿದೆ. ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಪಾರ್ಕಿಂಗ್‌ ಜಾಗದಲ್ಲಿ ಜನರು ಇರಲಿಲ್ಲ. ಇದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ.

ಹಾಸನದಲ್ಲಿ ಉರುಳಿ ಬಿದ್ದ ಮರ

ಹಾಸನ ಜಿಲ್ಲೆಯ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮರವೊಂದು ಉರುಳಿ ಬಿದ್ದಿತ್ತು. ಪರಿಣಾಮ ಎರಡು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿಘಾಟ್‌ ರಸ್ತೆಯಲ್ಲಿ ಘಟನೆ ನಡೆದಿದೆ.

ಮಂಗಳೂರು-ಬೆಂಗಳೂರು ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿಘಾಟ್ ರಸ್ತೆಗೆ ಮರ ಬಿದ್ದಿತ್ತು. ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಸ್ಥಳಕ್ಕಾಗಮಿಸಿ ಟ್ರಾಫಿಕ್‌ ಪೊಲೀಸರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಿದರು.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಮಳೆ ಜತೆಗೆ 60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಬಿರುಗಾಳಿ

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದ್ದು, ಮೇ 14ರಂದು ಭಾರಿ ಮಳೆಯೊಂದಿಗೆ ಗಾಳಿ ವೇಗವು 50-60 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಚಿಕ್ಕಮಗಳೂರು, ಹಾಸನ, ಮಂಡ್ಯ,ಮೈಸೂರು ಸೇರಿ ಕಲಬುರಗಿ, ಬೆಳಗಾವಿ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ವಿಜಯಪುರ, ಬಾಗಲಕೋಟೆ, ಬೀದರ್‌, ಧಾರವಾಡ,ಗದಗದಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ನಂತರ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಹಾಗೂ ಕನಿಷ್ಠ ಉಷ್ಣಾಂಶ 22 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

Karnataka Rain: ಯಾದಗಿರಿ ಹಾಗೂ ವಿಜಯನಗರದಲ್ಲಿ ಸಿಡಿಲ ಹೊಡೆತಕ್ಕೆ ಇಬ್ಬರು ಕುರಿಗಾಹಿ ಮೃತಪಟ್ಟರೆ, ಜತೆಗಿದ್ದ ಹತ್ತಾರು ಕುರಿಗಳು ದಾರುಣವಾಗಿ ಪ್ರಾಣ ಕಳೆದುಕೊಂಡಿವೆ. ತಡರಾತ್ರಿ ಸುರಿದ ಭಾರಿ ಮಳೆಯು (Heavy Rain) ಅವಾಂತರವನ್ನೇ ಸೃಷ್ಟಿಸಿದೆ. ಮಳೆಯಿಲ್ಲದೆ ಕಂಗಲಾಗಿದ್ದ ಜನತೆಗೆ ಮಳೆಯಿಂದಲೇ ಭೀತಿ ಪಡುವಂತಾಗಿದೆ.

VISTARANEWS.COM


on

By

Karnataka Rain
Koo

ಯಾದಗಿರಿ: ಗುಡುಗು ಸಹಿತ ಬಿರುಗಾಳಿ ಮಳೆಗೆ (Heavy Rain) ಸಾವು-ನೋವು ಸಂಭವಿಸಿದೆ. ಯಾದಗಿರಿಯಲ್ಲಿ ಸುರಿದ ಭಾರಿ ಮಳೆಗೆ (Karnataka Rain) ಜನರು ಬೆಚ್ಚಿ ಬಿದ್ದಿದ್ದಾರೆ. ಯಾದಗಿರಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಿಡಿಲಿಗೆ ಕುರಿಗಾಹಿ ಸೇರಿ 20ಕ್ಕೂ ಹೆಚ್ಚು ಕುರಿಗಳು ಪ್ರಾಣ ಕಳೆದುಕೊಂಡಿವೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮ ಹೊರಭಾಗದಲ್ಲಿ ಸಿಡಿಲು ಬಡಿದು ಕುರಿಗಾಹಿ ಮೃತಪಟ್ಟಿದ್ದಾರೆ. ಭಾನುವಾರ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿದಿತ್ತು. ಈ ವೇಳೆ ಸಿಡಿಲು ಬಡಿದು ಕುರಿಗಾಹಿ ಬುಯೆಪ್ಪ (22) ಎಂಬುವವರು ಮೃತಪಟ್ಟಿದ್ದಾರೆ. ಕುರಿಗಾಹಿ ಜತೆಗೆ ಸ್ಥಳದಲ್ಲೇ 7 ಕುರಿಗಳು ಮೃತಪಟ್ಟಿವೆ. ಸ್ಥಳದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಐಕೂರು ಗ್ರಾಮದಲ್ಲೂ ಸಿಡಿಲು ಬಡಿದು ಕುರಿಗಳು ಮೃತಪಟ್ಟಿವೆ. ಸಿಡಿಲು ಬಡಿದು ಐಕೂರು ಗ್ರಾಮದಲ್ಲಿ 10 ಕುರಿಗಳು ಸಾವನ್ನಪ್ಪಿವೆ. ಐಕೂರು ಗ್ರಾಮದ ರಾಯಪ್ಪ ಎಂಬ ಕುರಿಗಾಹಿಗೆ ಸೇರಿದ ಕುರಿಗಳನ್ನು ಜಮೀನಿನಲ್ಲಿರುವ ಕುರಿ ಹಟ್ಟಿಯಲ್ಲಿ ಬಿಡಲಾಗಿತ್ತು. ನಿನ್ನೆ ತಡರಾತ್ರಿ ಬಿರುಗಾಳಿ ಸಹಿತ ಭಾರಿ ಮಳೆ ವೇಳೆ ಸಿಡಿಲು ಬಡಿದಿದೆ. ಪರಿಣಾಮ ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Murder Case: ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ವಿಜಯನಗರದಲ್ಲೂ ಸಿಡಿಲಿಗೆ ರೈತ ಸಾವು

ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿದ್ದಾರೆ. ಚೌಡಪ್ಪ( 33) ಮೃತ ದುರ್ದೈವಿ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅಡವಿ ಮಲ್ಲಾಪುರದಲ್ಲಿ ಘಟನೆ ನಡೆದಿದೆ. ಮೇವಿನ ಬಣವೆಗೆ ಹೋದಿಗೆ ಹಾಕುತ್ತಿದ್ದಾಗ ಸಿಡಿಲು ಬಡಿದು ಚೌಡಪ್ಪ ಮೃತಪಟ್ಟಿದ್ದಾರೆ. ಹರಪನಹಳ್ಳಿ ತಾಲೂಕಾಡಳಿತ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿಯಲ್ಲಿ ಪಿಡಬ್ಲೂಡಿ ಕಚೇರಿಗೆ ನುಗ್ಗಿದ ನೀರು

ಯಾದಗಿರಿ ಜಿಲ್ಲೆಯಲ್ಲಿ ನಸುಕಿನ ಜಾವ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಪಿಡಬ್ಲೂಡಿ ಕಚೇರಿ ಆವರಣ ಹಾಗೂ ಮನೆಗೆ ಮಳೆ ನೀರು ನುಗ್ಗಿದೆ. ಯಾದಗಿರಿ ನಗರದ ಸುಭಾಷ್ ವೃತ್ತದ ಸಮೀಪದಲ್ಲಿರುವ ಪಿಡಬ್ಲೂಡಿ ಕಚೇರಿ ಹಾಗೂ ಮನೆಯೊಳಗೆ ನೀರು ನುಗ್ಗಿದ ಕಾರಣಕ್ಕೆ ಪರದಾಡಬೇಕಾಯಿತು. ಸೋಮವಾರ ಬೆಳಗಿನಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಬಿಸಿಲಿಗೆ ತತ್ತರಿಸಿದ ಜನರಿಗೆ ವರುಣ ತಂಪೆರೆದಿದ್ದಾನೆ.

ರಾಯಚೂರಿನಲ್ಲಿ ರಾತ್ರಿ ಇಡೀ ಮಳೆ ಅಬ್ಬರ

ರಾಯಚೂರಿನಲ್ಲಿ ರಾತ್ರಿ ಇಡೀ ಗುಡುಗು ಸಹಿತ ಭಾರೀ ಮಳೆಯಾಗಿದೆ. ನಗರದಲ್ಲಿ ಈ ಬೇಸಿಗೆಯಲ್ಲೇ ಮೊದಲ ಬಾರಿಗೆ ವರುಣ ದರ್ಶನ ಕೊಟ್ಟಿದ್ದಾನೆ. ಬಿಸಿಲಿನ ಸೆಕೆಯಿಂದ ಕಂಗೆಟ್ಟ ಜನರಿಗೆ ಸುಮಾರು 5 ಗಂಟೆಗಳ ಕಾಲ ಧಾರಾಕಾರವಾಗಿ ಮಳೆ ಸುರಿದಿದೆ. ಮಳೆಯಿಂದಾಗಿ ಇಡೀ ರಾಯಚೂರು ನಗರದಾದ್ಯಂತ ವಿದ್ಯುತ್ ವ್ಯತ್ಯಯವಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಯಲ್ಲಿ ರಸ್ತೆ ಕಾಣದೆ ಅಪಘಾತ

ಮಳೆಯಲ್ಲಿ ರಸ್ತೆ ಕಾಣದೆ ಟಿಟಿ ವಾಹನವೊಂದು ವಿದ್ಯುತ್ ಕಂಬಕ್ಕೆ ಗುದ್ದಿದೆ. ಟಿಟಿ ವಾಹನ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿತ್ತು. ಭಾರಿ ಮಳೆ ಹಿನ್ನೆಲೆಯಲ್ಲಿ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡಿತ್ತು. ಇದರಿಂದಾಗಿ ಅದೃಷ್ಟವಶಾತ್ ವಾಹನದಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಪಾರಾಗಿದ್ದರು. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕುಂಚೆ ಬೈಲು ಗ್ರಾಮದ ಬಳಿ ಘಟನೆ ನಡೆದಿದೆ. ಪ್ರಯಾಣಿಕರು ಟಿಟಿ ವಾಹನದಲ್ಲಿ ಹಾಸನದಿಂದ ಶೃಂಗೇರಿ ಕಡೆಗೆ ತೆರಳುತ್ತಿದ್ದರು.

ವಿಜಯನಗರದಲ್ಲಿ ಮಳೆಗೆ ಕ್ಷಣಾರ್ಧದಲ್ಲೇ ಕೊಚ್ಚಿ ಹೋಯ್ತು ಫಸಲು

ಬಿರುಗಾಳಿ ಸಹಿತ ಭಾರಿ ಮಳೆಗೆ ನೂರಾರು ಎಕರೆ ಬಾಳೆ ಬೆಳೆ ಧರೆಗೆ ಉರುಳಿವೆ. ವಿಜಯನಗರದ ಹೊಸೂರು, ಇಪ್ಪಿತೇರಿ, ನರಸಾಪುರ, ಮಾಗಾಣಿಗಳು, ಕಮಲಾಪುರ ಗ್ರಾಮ ಸೇರಿ ಹತ್ತಾರು ಗ್ರಾಮದ ರೈತ ಬದುಕು ಅಯೋಮಯವಾಗಿದೆ. ಮಕ್ಕಳಂತೆ ಜೋಪಾನ ಮಾಡಿದ್ದ ಬಾಳೆ ಬೆಳೆ ಮೇಲೆ ಪ್ರಕೃತಿಯ ಮುನಿಸಿಗೆ ಸಂಪೂರ್ಣ ನಾಶವಾಗಿದೆ.

ಕಳೆದ ಒಂದು ವಾರದಲ್ಲಿ ಎರಡು ಬಾರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ. ಎಕರೆ ಹೊಲದಲ್ಲಿ ಬಾಳೆ ಬೆಳೆಯೋದಕ್ಕೆ ರೈತರು ಲಕ್ಷದವರೆಗೆ ಖರ್ಚು ಮಾಡಿದ್ದರು. ಇನ್ನೇನು ಒಂದು ತಿಂಗಳಲ್ಲಿ ಬಾಳೆ ಮಾರಾಟಕ್ಕೆ ರೆಡಿ ಮಾಡಿಕೊಂಡಿದ್ದ ರೈತರಿಗೆ ಮಳೆಯು ಆಘಾತವನ್ನುಂಟು ಮಾಡಿದೆ. ಮಳೆಯು ನಮ್ಮ ಬದುಕನ್ನು ಕಸಿದುಕೊಂಡಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ಬಾಳೆ ಬೆಳೆಗಾರರು ಅಳಲು ತೊಡಿಕೊಂಡಿದ್ದಾರೆ.

ಈ ಬಾರಿ ಮಳೆಯಿಲ್ಲದೇ ತುಂಗಭದ್ರಾ ಜಲಾನಯದ ಪ್ರದೇಶದ ರೈತರು ಕಂಗಾಲಾಗಿದ್ದಾರೆ. ವಿಜಯನಗರ ಕಾಲದ ಕಾಲುವೆಗಳನ್ನು ನಂಬಿ ತಿಂಗಳಿಗೊಮ್ಮೆ ಬಂದ ನೀರಲ್ಲೇ ಬದುಕು, ಬವಣೆ ನಡೆಯುತ್ತಿದ್ದೇವೆ. 2 ಟಿಎಂಸಿ ನೀರಲ್ಲಿ ಆಗೊಮ್ಮೆ, ಈಗೊಮ್ಮೆ ಬಂದ ನೀರಲ್ಲೇ ಬಾಳೆ ಬೆಳೆದಿದ್ದರು. ಇನ್ನೂ 15 ದಿನ ಮುಗಿದಿದ್ದರೆ ಬಾಳೆ ಗೊಣೆಗಳು ಕೈಗೆ ಬರುತ್ತಿದ್ದವು. ಕೈಗೆ ಬಂದ ಬಾಳೆ ಈಗ ನೆಲಕ್ಕೆ ಬಿದ್ದಿದೆ. ಮಳೆರಾಯ ಬಡವರ ಬದುಕನ್ನು ಮೂರಾಬಟ್ಟೆ ಮಾಡಿದ್ದಾನೆ ಎಂದು ಕಿಡಿಕಾರಿದರು.

ಕೊಡಗು, ಕೊಪ್ಪಳದಲ್ಲೂ ಮಳೆಯ ಸಿಂಚನ

ಕಳೆದ ಮೂರು ತಿಂಗಳಿಂದ‌ ಬಿಸಿಲಿನ ತಾಪಕ್ಕೆ ಕೊಪ್ಪಳದ ಜನತೆ ಹೈರಾಣಾಗಿದ್ದರು. ಭಾನುವಾರ ರಾತ್ರಿ ಸುರಿದ ಗುಡುಗು ಸಹಿತ ಮಳೆಗೆ ವಾತಾವರಣ ತಂಪಾಗಿದೆ. ಕಳೆದ ಎರಡು ದಿನಗಳಿಂದ‌ ಸುರಿಯುತ್ತಿರುವ ಮಳೆಗೆ ಜನರು ಸಂತಸಗೊಂಡಿದ್ದಾರೆ. ಇತ್ತ ಕೊಡಗು‌ ಜಿಲ್ಲೆಯ ವಿವಿಧೆಡೆ ಮಳೆಯ ಸಿಂಚನವಾಗಿದೆ. ಹಲವು‌ ದಿನಗಳಿಂದ ಮಳೆಗಾಗಿ‌ ಕಾದಿದ್ದ ಜನರಿಗೆ ಸೋಮವಾರ ಮುಂಜಾನೆಯಿಂದಲೆ ತುಂತುರು ಮಳೆಯಾಗಿದೆ. ಮಳೆಯಿಂದ ಕೊಡಗಿನ‌ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

ರಾಯಚೂರಲ್ಲಿ ಭತ್ತದ ರಾಶಿಗೆ ನುಗ್ಗಿದ ನೀರು

ಇನ್ನೂ ರಾಯಚೂರಿನಲ್ಲಿ ವರುಣನ ಆರ್ಭಟಕ್ಕೆ ರೈತರು ಸಂಕಷ್ಟಕ್ಕೆ ಸಿಲುಕಿದರು. ಎರಡು ಗಂಟೆಗಳ ಕಾಲ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆಗೆ ನಗರದ ರಸ್ತೆಗಳು ಹಳ್ಳದಂತಾದರೆ, ನಗರದ ಎಪಿಎಂಸಿಗೆ ನೀರು ನುಗ್ಗಿತ್ತು. ತೆಲಂಗಾಣದ ಮಕ್ತಲ್‌ನಿಂದ ಸಾಕಷ್ಟು ರೈತರು ಭತ್ತ ತಂದು ರಾಶಿ ಮಾಡಿದರು.ಆದರೆ ಮಳೆ ಸುರಿದ ಕಾರಣ ಭತ್ತದ ರಾಶಿ ನೀರುಪಾಲಾಗಿತ್ತು. ಎಪಿಎಂಸಿ ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ರೈತರು ಅಸಮಾಧಾನ ಹೊರಹಾಕಿದ್ದರು.

ಇತ್ತ ರಾಯಚೂರು ನಗರದ ವಾರ್ಡ್‌ನ 34ರಲ್ಲಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಮತ್ತು ದೇವಸ್ಥಾನವು ಜಲಾವೃತಗೊಂಡಿತ್ತು. ಚಿಕ್ಕ ಕಾಲುವೆ ಬ್ಲಾಕ್ ಆಗಿದ್ದರಿಂದ ಈ ಆವಾಂತರಗಳು ಸೃಷ್ಟಿಯಾಗಿತ್ತು. ಮಳೆ ನೀರು ನುಗ್ಗಿದ್ದರಿಂದ ರಾತ್ರಿಯಿಡೀ ಜನರು ಜಾಗರಣೆ ಮಾಡುವಂತಾಯಿತು. ಬೆಳಗ್ಗೆಯಿಂದ ಮಳೆ ನೀರು ಹೊರ ಹಾಕಲು ಜನರು ಹರಸಾಹಸ ಪಟ್ಟರು. ನಗರಸಭೆ ಮತ್ತು ಜನ ಪ್ರತಿನಿಧಿಗಳ ವಿರುದ್ಧ ವಾರ್ಡ್‌ನ ಜನರು ಆಕ್ರೋಶ ಹೊರಹಾಕಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
HSRP Number Plate Registration Deadline Near Will the government impose fines
ಬೆಂಗಳೂರು10 mins ago

HSRP Number Plate: ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌! ಸರ್ಕಾರದಿಂದ ದಂಡಾಸ್ತ್ರ ಪ್ರಯೋಗ?

kodagu News Woman gives birth to baby in ambulance
ಕೊಡಗು15 mins ago

kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

IPL 2024
ಪ್ರಮುಖ ಸುದ್ದಿ16 mins ago

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

Milk Products
ಆಹಾರ/ಅಡುಗೆ17 mins ago

Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Prajwal Revanna Case
ಕರ್ನಾಟಕ23 mins ago

Prajwal Revanna Case: ಅಶ್ಲೀಲ ವಿಡಿಯೊ ಪ್ರಕರಣ; ಲಿಖಿತ್ ಗೌಡ, ಚೇತನ್‌ಗೆ ಜಾಮೀನು ನಿರಾಕರಣೆ

Image-Fantastic Dragon Jewellery!
ಫ್ಯಾಷನ್47 mins ago

Fashion Trend: ಜೆನ್‌ ಜಿ ಹುಡುಗ-ಹುಡುಗಿಯರ ಆವರಿಸಿದ ಚಿತ್ರ-ವಿಚಿತ್ರ ಡ್ರಾಗನ್‌ ಜ್ಯುವೆಲರಿಗಳು!

Silicon City Hospital doctors successful surgery on girl suffering from Arterio Venus malpermation
ಬೆಂಗಳೂರು51 mins ago

Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

CM Siddaramaiah says Our government is stable for 5 years BJP will disintegrate
Lok Sabha Election 202458 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

Team India New Head Coach
ಕ್ರೀಡೆ1 hour ago

Team India New Head Coach: ಭಾರತ ತಂಡಕ್ಕೆ ಆಸೀಸ್ ಮಾಜಿ​ ಆಟಗಾರ ಕೋಚ್​ ಆಗುವುದು ನಿಶ್ಚಿತ

Money Guide
ಮನಿ-ಗೈಡ್1 hour ago

Money Guide: ಎಫ್‌ಡಿಯಲ್ಲಿ ಹೂಡಿಕೆ ಮಾಡುವ ಮುನ್ನ ವಿವಿಧ ಬ್ಯಾಂಕ್‌ಗಳ ಬಡ್ಡಿದರ ಪರಿಶೀಲಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 202458 mins ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20244 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ5 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು6 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ13 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ23 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ23 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ23 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ24 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ1 day ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌