Site icon Vistara News

Koppala News: ಸಂಸದ ಸಂಗಣ್ಣ ಕರಡಿ ಅವರ ಮುನಿಸು ಶೀಘ್ರ ಶಮನ, ಬಿಜೆಪಿ ಪರ ಪ್ರಚಾರ: ಡಾ. ಬಸವರಾಜ ಕ್ಯಾವಟರ್

Koppala Lok Sabha Constituency BJP Candidate Dr Basavaraja kyavator

ಗಂಗಾವತಿ: ಟಿಕೆಟ್ ಸಿಗದ ಹಿನ್ನೆಲೆ ಅಸಮಧಾನಗೊಂಡಿರುವ ಕೊಪ್ಪಳ ಲೋಕಸಭಾ ಕ್ಷೇತ್ರದ (Koppala Lok Sabha Constituency) ಹಾಲಿ ಸಂಸದ ಸಂಗಣ್ಣ ಕರಡಿ ಅವರ ಮುನಿಸು ಶೀಘ್ರ ಶಮನವಾಗಲಿದ್ದು, ಬಿಜೆಪಿಯ ಪರವಾಗಿ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ (Koppala News) ಹೇಳಿದರು.

ಇದನ್ನೂ ಓದಿ: Koppala News: ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದಂತೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ: ಡಿಸಿ ಸೂಚನೆ

ನಗರಕ್ಕೆ ಸೋಮವಾರ ಭೇಟಿ ನೀಡಿದ್ದ ಅವರು, ಬಿಜೆಪಿ ಪಕ್ಷದ ಪ್ರಮುಖ ನಾಯಕರು, ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಸಂಗಣ್ಣ ಕರಡಿ ಅವರನ್ನು ಮನವೊಲಿಸುವ ಕೆಲಸ ರಾಜ್ಯ ನಾಯಕರು ನಿರಂತರವಾಗಿ ಮಾಡುತ್ತಿದ್ದಾರೆ. ಈಗಾಗಲೇ ನಾನು ಹಲವು ಬಾರಿ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ ಅವರ ಮುನಿಸು ಶಮನವಾಗಲಿದ್ದು, ನನ್ನ ಪರವಾಗಿ ಪ್ರಚಾರಕ್ಕೆ ಆಗಮಿಸಲಿದ್ದಾರೆ. ದೇಶದಲ್ಲಿ ಮೋದಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುವುದು ಸಂಗಣ್ಣ ಕರಡಿ ಅವರ ಆಶಯವೂ ಆಗಿದೆ. ಹೀಗಾಗಿ ಖಚಿತವಾಗಿ ನಮ್ಮೊಂದಿಗೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Ballari News: ಪೇಯಿನ್‌ ಕಿಲ್ಲರ್‌ ಮಾತ್ರೆಗಳಿಂದ ಕಿಡ್ನಿ ಕಾಯಿಲೆ: ಡಾ. ವಸಂತ್ ಶೇಠ್

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಬೇಕು ಎಂದು ಇಡೀ ದೇಶದ ಜನತೆ ಬಯಸಿದ್ದಾರೆ. ಹೀಗಾಗಿ ಶೀಘ್ರ ಮತ್ತೇ ಸಂಸದ ಸಂಗಣ್ಣ ಕರಡಿ ಅವರು ಬಿಜೆಪಿಯೊಂದಿಗೆ ಪ್ರಚಾರಕ್ಕೆ ಬರಲಿದ್ದಾರೆ. ಅವರ ಮುಂದಾಳತ್ವದಲ್ಲಿ ನಾವು ಪ್ರಚಾರ ಮಾಡಲಿದ್ದೇವೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ತಿಳಿಸಿದರು.

Exit mobile version