Lok Sabha Election 2024: ಎಚ್‌ಡಿಕೆ ಭೇಟಿ ಮಾಡಿದ ಕರಡಿ ಸಂಗಣ್ಣ; ಕೈ ಸೇರ್ಪಡೆಯೋ? ಬಿಜೆಪಿಗೆ ಬೆಂಬಲವೋ? - Vistara News

ಕೊಪ್ಪಳ

Lok Sabha Election 2024: ಎಚ್‌ಡಿಕೆ ಭೇಟಿ ಮಾಡಿದ ಕರಡಿ ಸಂಗಣ್ಣ; ಕೈ ಸೇರ್ಪಡೆಯೋ? ಬಿಜೆಪಿಗೆ ಬೆಂಬಲವೋ?

Lok Sabha Election 2024: ಒಂದು ವೇಳೆ ಕಾಂಗ್ರೆಸ್‌ ಸೇರುವುದಾದರೆ ತಮಗೆ ಸೇರಿದಂತೆ ತಮ್ಮ ಬೆಂಬಲಿಗರಿಗೆ ಯಾವ ರೀತಿ ಸ್ಥಾನಮಾನವನ್ನು ಕಲ್ಪಿಸಲಾಗುತ್ತದೆ? ಮುಂದಿನ ರಾಜಕೀಯ ಗುರಿ ಏನು? ಎಂಬಿತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳುವ ಇರಾದೆಯನ್ನು ಸಂಗಣ್ಣ ಕರಡಿ ಹೊಂದಿದ್ದಾರೆ. ಅಲ್ಲದೆ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Karadi Sanganna meets HD Kumaraswamy and discusstion on loksabha election BJP ticket miss
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಈಗ ರಾಜಕೀಯ ಪಕ್ಷಗಳಲ್ಲಿ ಟಿಕೆಟ್‌ ವಂಚಿತರಿಂದ ಭಿನ್ನಮತದ ಪರ್ವ ಆರಂಭವಾಗಿದೆ. ಇದರ ಭಾಗವಾಗಿ ಕರ್ನಾಟಕ ಬಿಜೆಪಿಯಲ್ಲಿಯೂ ಬಂಡಾಯ ಮುಂದುವರಿದಿದೆ. ಕೊಪ್ಪಳ ಲೋಕಸಭಾ ಕ್ಷೇತ್ರದ (Lok Sabha Election 2024) ಟಿಕೆಟ್ ವಂಚಿತ ಹಾಲಿ ಸಂಸದ ಕರಡಿ ಸಂಗಣ್ಣ (Karadi Sanganna) ಅವರು ಈಗಾಗಲೇ ತಮ್ಮ ಮುನಿಸನ್ನು ಹೊರಹಾಕಿದ್ದಾರೆ. ಅವರು ಈಗ ಬಿಜೆಪಿ ಅಭ್ಯರ್ಥಿಗೆ ಬೆಂಬಲ ನೀಡಬೇಕೋ? ಅಥವಾ ಕಾಂಗ್ರೆಸ್‌ (Congress Karnataka) ಸೇರಬೇಕೋ ಎಂಬ ಗೊಂದಲದಲ್ಲಿ ಇದ್ದಾರೆ. ಈ ಸಂಬಂಧ ಮಹತ್ವದ ಸಭೆ ನಡೆಸಿ ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ. ಇದರ ಜತೆಗೆ ಸೋಮವಾರ ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಸಹ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಸಂಸದ ಸಂಗಣ್ಣ ಕರಡಿ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಮಧ್ಯಾಹ್ನ ಬೆಂಬಲಿಗರ ಸಭೆ ಕರೆದಿದ್ದಾರೆ. ಇಲ್ಲಿ ಬಿಜೆಪಿಯಲ್ಲಿಯೇ ಇರುವ ಇಲ್ಲವೇ ಅಥವಾ ಕಾಂಗ್ರೆಸ್ ಸೇರ್ಪಡೆಯಾದರೆ ಅಲ್ಲಿನ ಸ್ಥಾನಮಾನ ಏನು ಎಂಬ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ.

ರಾಜಕೀಯ ಭವಿಷ್ಯದ ಬಗ್ಗೆ ಚಿಂತೆ

ಸಂಗಣ್ಣ ಕರಡಿ ಅವರಿಗೆ ಈಗ ತಮ್ಮ ಮುಂದಿನ ರಾಜಕೀಯ ಭವಿಷ್ಯದ ಚಿಂತೆ ಎದುರಾಗಿದೆ ಎಂದು ಹೇಳಲಾಗಿದೆ. ಕಾರಣ, ಅವರಿಗೆ ಈಗ ಬಿಜೆಪಿಯಿಂದ ಟಿಕೆಟ್‌ ಮಿಸ್‌ ಆಗಿದೆ. ಆದರೆ, ಮುಂದೇನು? ಎಂಬ ಬಗ್ಗೆ ರಾಜ್ಯ ನಾಯಕರಾಗಲೀ, ಹೈಕಮಾಂಡ್‌ ನಾಯಕರಾಗಲೀ ಏನೂ ಹೇಳಿಲ್ಲ ಎಂದು ಹೇಳಲಾಗಿದೆ. ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುವ ಬಗ್ಗೆಯೂ ಅವರಿಗೆ ಯಾವುದೇ ಭರವಸೆ ಸಿಕ್ಕಿಲ್ಲವೇ? ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಕರೆದಿರುವ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಿದ್ದಾರೆ.

ಒಂದು ವೇಳೆ ಕಾಂಗ್ರೆಸ್‌ ಸೇರುವುದಾದರೆ ತಮಗೆ ಸೇರಿದಂತೆ ತಮ್ಮ ಬೆಂಬಲಿಗರಿಗೆ ಯಾವ ರೀತಿ ಸ್ಥಾನಮಾನವನ್ನು ಕಲ್ಪಿಸಲಾಗುತ್ತದೆ? ಮುಂದಿನ ರಾಜಕೀಯ ಗುರಿ ಏನು? ಎಂಬಿತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕಾಗುತ್ತದೆ. ಹೀಗಾಗಿ ಈ ಬಗ್ಗೆ ಕಾಂಗ್ರೆಸ್‌ ನಾಯಕರ ಬಳಿ ಒಂದು ಸಾರಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆಯೂ ಸಂಗಣ್ಣ ಕರಡಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಎಚ್‌ಡಿಕೆ ಭೇಟಿ ಮಾಡಿದ ಸಂಗಣ್ಣ ಕರಡಿ

ಸಂಸದ ಸಂಗಣ್ಣ ಕರಡಿ ಅವರು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಈ ನಡುವೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ ನಡೆಸಿದ್ದಾರೆ ಎನ್ನಲಾಗಿದೆ. ಆಗ ತಮಗೆ ಟಿಕೆಟ್‌ ಕೈತಪ್ಪಿದ್ದರ ಬಗ್ಗೆಯೂ ಸಂಗಣ್ಣ ಕರಡಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಎಚ್‌ಡಿಕೆ, ಯಾವುದೇ ಆತುರದ ನಿರ್ಧಾರವನ್ನು ಕೈಗೊಳ್ಳದಂತೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Lok Sabha Election 2024: ಮೋದಿ ಮೋದಿ ಎಂದವರ ಕಪಾಳಕ್ಕೆ ಹೊಡೆಯಿರಿ ಎಂದ ಸಿದ್ದರಾಮಯ್ಯ ಸಂಪುಟ ಸಚಿವ!

ಸಂಗಣ್ಣ ಮನೆಗೆ ನೂರಾರು ಬೆಂಬಲಿಗರ ಆಗಮನ

ಬೆಂಗಳೂರಿನ ಕರಡಿ ಸಂಗಣ್ಣ ಅವರ ಮನೆಗೆ ಕೊಪ್ಪಳ ಜಿಲ್ಲೆಯಿಂದ ನೂರಾರು ಬೆಂಬಲಿಗರು ಆಗಮಿಸಿದ್ದಾರೆ. ಇಲ್ಲೀಗ ತಮ್ಮ ಬೆಂಬಲಿಗರ ಜತೆ ಕರಡಿ ಸಂಗಣ್ಣ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ. ಬೆಂಬಲಿಗರ ಸಭೆ ನಂತರ ಮಧ್ಯಾಹ್ನ ಬಿಜೆಪಿ ಕಚೇರಿಗೆ ತೆರಳಿ ಪಕ್ಷದ ನಾಯಕರ ಜತೆಗೆ ಮಾತುಕತೆ ನಡೆಸಲಿದ್ದಾರೆ. ಅಲ್ಲಿನ ಚರ್ಚೆಯ ಫಲಿತಾಂಶದ ಬಳಿಕ ಇವರ ನಿರ್ಧಾರ ಅಂತಿಮವಾಗಲಿದೆ ಎಂದು ಹೇಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

Karnataka Weather Forecast : ರಾಜ್ಯಾದ್ಯಂತ ಮಳೆ (Rain News) ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ವಾರಾಂತ್ಯದಲ್ಲಿ 7 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಹಗುರದಿಂದ ಮಧ್ಯಮದೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಚದುರಿದಂತೆ ಹಗುರದಿಂದ ಮಳೆಯಾಗುವ (Rain News) ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಸೇರಿದಂತೆ ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲೂ ಮಳೆಯಾಗಲಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಮಲೆನಾಡು ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಜತೆಗೆ ಭಾರಿ ಮಳೆಯೊಂದಿಗೆ 40-50 ಕಿ.ಮೀ ಗಾಳಿಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಧಾರಾಕಾರ ಮಳೆ ಹಿನ್ನೆಲೆ ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ

Karnataka Weather Forecast: ರಾಜ್ಯಾದ್ಯಂತ ಮಳೆ (rain News) ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಶನಿವಾರದಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಚಿಕ್ಕಮಗಳೂರು/ಕೊಡಗು: ಭಾರಿ ಗಾಳಿ-ಮಳೆ (Karnataka Weather Forecast) ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ (School Holiday) ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶನಿವಾರ ಮಾತ್ರ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನೂ ಕಡೂರು, ತರೀಕೆರೆ ಹಾಗೂ ಅಜ್ಜಂಪುರ ತಾಲೂಕಿಗೆ ಯಾವುದೇ ರಜೆ ಇಲ್ಲ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕೊಡಗಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ‌ನದಿಯಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಹರಿಹರ-ಬಲ್ಯಮುಂಡೂರು ರಸ್ತೆ ಸಂಪರ್ಕ ಕಡಿತಗೊಂಡಿದ್ದು, ನದಿ ನೀರು ರಸ್ತೆ ಮೇಲೆ ಹರಿದಿದೆ. ಪೊನ್ನಂಪೇಟೆ ತಾಲೂಕಿನ ಗ್ರಾಮಗಳ ಗದ್ದೆಪ್ರದೇಶಗಳು ಮುಳುಗಡೆಯಾಗಿದೆ.

ಇನ್ನೂ ಕೊಡಗು ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಬೆಳಗಾವಿಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ರಜೆ ಮುಂದುವರಿದಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಎಲ್ಲ ಕಡೆ ಶಾಲಾ‌-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೊಹ್ಮದ್ ರೋಷನ್‌ರಿಂದ ರಜೆ‌ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಧಾರವಾಡ ಜಿಲ್ಲೆಯಲ್ಲೂ ಮಳೆ ಜತೆಗೆ ಶೀತಗಾಳಿ ಮುಂದುವರಿದಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಇದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ (ಘಟ್ಟ ಪ್ರದೇಶಗಳು) ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 40-50 ಕಿಮೀ ತಲುಪುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು 40-50ಕಿ.ಮೀ ತಲುಪುವ ಸಾಧ್ಯತೆಯಿದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಾಳಿಯ ವೇಗದೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Koppala News: ಗಾಯಗೊಂಡ ರಣಹದ್ದಿಗೆ ಆರೈಕೆ ಮೂಲಕ ಮಾನವೀಯತೆ ತೋರಿದ ಸ್ನೇಕ್ ಪುಟ್ಟು

Koppala News: ಆಕಾಶದಲ್ಲಿ ಸಂಚರಿಸುತ್ತ ಬೇಟೆಯಾಡುವ ವೇಳೆ ಆಕಸ್ಮಿಕವಾಗಿ ಗಾಯಗೊಂಡು ನೆಲಕ್ಕೆ ಬಿದ್ದು, ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ರಣ ಹದ್ದನ್ನು ಸಂರಕ್ಷಿಸಿದ ಗಂಗಾವತಿಯ ಸ್ನೇಕ್ ಪುಟ್ಟು, ಅದಕ್ಕೆ ಚಿಕಿತ್ಸೆ ನೀಡಿ ಆರೈಕೆ ಮಾಡುವ ಮೂಲಕ ಮಾನವೀಯತೆ ತೋರಿದ್ದಾರೆ.

VISTARANEWS.COM


on

Koppala News Snake Puttu showed humanity by treating and caring for an injured vulture
Koo

ಗಂಗಾವತಿ: ಆಕಾಶದಲ್ಲಿ ಸಂಚರಿಸುತ್ತಾ, ಬೇಟೆಯಾಡುವ ವೇಳೆ ಆಕಸ್ಮಿಕ ಗಾಯಗೊಂಡು ನೆಲಕ್ಕೆ ಬಿದ್ದು, ಬೀದಿ ನಾಯಿಗಳ ದಾಳಿಗೆ ಒಳಗಾಗಿದ್ದ ರಣಹದ್ದನ್ನು ಸಂರಕ್ಷಿಸಿದ ವ್ಯಕ್ತಿಯೊಬ್ಬರು ಅದಕ್ಕೆ ಚಿಕಿತ್ಸೆ ನೀಡಿ ಆರೈಕೆ ಮಾಡುವ ಮೂಲಕ ಮಾನವೀಯತೆ (Koppala News) ತೋರಿದ್ದಾರೆ.

ಜನವಸತಿ ಪ್ರದೇಶದಕ್ಕೆ ಬರುವ ವಿಷಜಂತು, ಕೀಟ, ಹಾವು, ಮೊಸಳೆಗಳನ್ನು ಅವುಗಳ ಜೀವಕ್ಕೆ ಹಾನಿಯಾಗದಂತೆ ಹಿಡಿದು ಸುರಕ್ಷಿತ ಪ್ರದೇಶಕ್ಕೆ ಬಿಟ್ಟು ಬರುವ ಹವ್ಯಾಸ ರೂಢಿಸಿಕೊಂಡಿರುವ ಈ ಯುವಕ, ಜನಸಾಮಾನ್ಯರಿಂದ ಸ್ನೇಕ್ ಪುಟ್ಟು ಎಂದು ಕರೆಯಿಸಿಕೊಳ್ಳುತ್ತಾರೆ.

ಇದನ್ನೂ ಓದಿ: Kannada New Movie: ʼಜೀನಿಯಸ್ ಮುತ್ತʼನಿಗೆ ಸಾಥ್ ನೀಡಿದ ʼಚಿನ್ನಾರಿ ಮುತ್ತʼ; ಆಗಸ್ಟ್‌ನಲ್ಲಿ ಸಿನಿಮಾ ರಿಲೀಸ್‌

ಸ್ನೇಕ್ ಪುಟ್ಟು ಅಲಿಯಾಸ್ ರಾಘವೇಂದ್ರ ಸಿರಿಗೇರಿ ಎಂಬುವವರು ರಣಹದ್ದನ್ನು ಸಂರಕ್ಷಣೆ ಮಾಡಿದ್ದಾರೆ. ತಮ್ಮ ಮನೆಗೆ ಕೊಂಡೊಯ್ದು ಗಾಯಗೊಂಡಿದ್ದ ಹದ್ದಿನ ರೆಕ್ಕೆಯ ಪುನಶ್ಚೇತನಕ್ಕೆ ನೋವು ನಿವಾರಕ ಚುಚ್ಚು ಮದ್ದು ನೀಡಿ ಆರೈಕೆ ಮಾಡುತ್ತಿದ್ದಾರೆ.

ಜಯನಗರದಲ್ಲಿ ಪತ್ತೆ

ಗಾಯಗೊಂಡಿದ್ದ ರಣ ಹದ್ದು ಜಯನಗರದ ಮೊದಲ ಹಂತದ 6ನೇ ತಿರುವಿನ ಮನೆಯೊಂದರ ಬಳಿ ಕಂಡು ಬಂದಿದೆ. ಹಾರಲಾಗದ ಸ್ಥಿತಿಯಲ್ಲಿದ್ದ ಹದ್ದಿನ ಮೇಲೆ ಮೂರು-ನಾಲ್ಕು ಬೀದಿ ನಾಯಿಗಳು ದಾಳಿ ಮಾಡಲು ಮುಂದಾಗಿದ್ದನ್ನು ಕಂಡ ಸ್ಥಳೀಯರೊಬ್ಬರು ನಾಯಿಗಳನ್ನು ಓಡಿಸಿದ್ದಾರೆ. ಬಳಿಕ ಸಿರಿಗೇರಿ ರಾಘವೇಂದ್ರ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ರಾಘವೇಂದ್ರ ಹದ್ದನ್ನು ನಿಧಾನವಾಗಿ ಹಿಡಿದುಕೊಂಡು ಸುರಕ್ಷಿತವಾಗಿ ತಮ್ಮ ಮನೆಗೆ ಕೊಂಡೊಯ್ದಿದ್ದಾರೆ. ಬಳಿಕ ಅದಕ್ಕೆ ಚಿಕಿತ್ಸೆ ನೀಡಿ ಆರೈಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

ಹದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಪಶು ವೈದ್ಯರಲ್ಲಿ ಕರೆದೊಯ್ದು ಹೆಚ್ಚಿನ ಚಿಕಿತ್ಸೆ ನೀಡಲಾಗುವುದು. ಹದ್ದು ಸಂಪೂರ್ಣ ಚೇತರಿಸಿಕೊಂಡ ಬಳಿಕ ಸುರಕ್ಷಿತ ತಾಣಕ್ಕೆ ಬಿಟ್ಟು ಬರಲಾಗುವುದು ಎಂದು ರಾಘವೇಂದ್ರ ಸಿರಿಗೇರಿ ತಿಳಿಸಿದ್ದಾರೆ.

Continue Reading

ಮಳೆ

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain : ಕರಾವಳಿ ಹಾಗೂ ಮಲೆನಾಡು ಸುತ್ತಮುತ್ತ ಮಳೆಯು ಅಬ್ಬರಿಸುತ್ತಿದೆ. ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ರಕ್ಷಣೆ ಮಾಡಲಾಗಿದೆ. ಕಾರವಾರದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್ ರಸ್ತೆ ಕೊಚ್ಚಿಹೋಗಿತ್ತು.

VISTARANEWS.COM


on

By

karnataka rain
Koo

ಮಂಗಳೂರು: ಭಾರಿ ಮಳೆಗೆ ಜನರು ಮಾತ್ರವಲ್ಲ ಜಾನುವಾರುಗಳು ತತ್ತರಿಸಿ ಹೋಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ‌ ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೊಚ್ಚಿಕೊಂಡು (Karnataka Rain) ಹೋಗುತ್ತಿದ್ದ ಹಸುವನ್ನು ರಕ್ಷಣೆ ಮಾಡಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಧಾವಿಸಿದ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ದೋಣಿಯಲ್ಲಿ ಸಾಗಿ ಹಗ್ಗ ಹಾಕಿ ಹಸುವನ್ನು ಜೀವಂತವಾಗಿ ರಕ್ಷಿಸಿ ಕರೆತಂದಿದ್ದಾರೆ.

ಇತ್ತ ಮಂಗಳೂರಿನಲ್ಲೂ ಬಿಟ್ಟು ಬಿಟ್ಟು ಸುರಿಯುತ್ತಿರುವ ಭಾರೀ ಗಾಳಿ ಮಳೆಗೆ ಮನೆಯೊಂದು ಕುಸಿದು ಬಿದ್ದಿದೆ. ಮಂಗಳೂರು ಹೊರವಲಯದ ಕಾಜಿಲ ನೂಯಿ ಎಂಬಲ್ಲಿ ಧನಲಕ್ಷ್ಮೀ ಅವರ ಮನೆ ಸಂಪೂರ್ಣ ಕುಸಿದಿದೆ. ಮನೆಯವರೆಲ್ಲ ಅಂಗಳದಲ್ಲಿದ್ದಾಗ ಮನೆ ಕುಸಿದಿದೆ, ಹೀಗಾಗಿ ಭಾರಿ ದುರಂತವೊಂದು ತಪ್ಪಿದೆ. ಮನೆ ಸಾಮಾಗ್ರಿ ಸೇರಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕಾಂಕ್ರೀಟ್ ರಸ್ತೆ

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳ್ ಗ್ರಾಮದಲ್ಲಿ ಅಲೆಗಳ ಅಬ್ಬರಕ್ಕೆ ಕಾಂಕ್ರೀಟ್‌ ರಸ್ತೆಯು ಕೊಚ್ಚಿ ಹೋಗಿದೆ. ಸುಮಾರು ನೂರು ಅಡಿ ರಸ್ತೆ ಕಡಲಕೊರತಕ್ಕೆ ಬಲಿಯಾಗಿದೆ. ದೇವಭಾಗ್ ನಿಂದ ಮಾಜಾಳಿ ಸಂಪರ್ಕ ಮಾಡುವ ರಸ್ತೆಯನ್ನು ನಾಲ್ಕು ವರ್ಷದ ಹಿಂದೆ ನಿರ್ಮಿಸಲಾಗಿತ್ತು. ಆದರೆ ಮಳೆ ಗಾಳಿಗೆ ಹೆಚ್ಚಾದ ಕಡಲ ಕೊರೆತಕ್ಕೆ ಕೊಚ್ಚಿಹೋಗಿದೆ. ಇದರಿಂದಾಗಿ ಬಾವಳ್, ಮಾಜಾಳಿ,‌ ದೇವಭಾಗ ಗ್ರಾಮಸ್ಥರು ರಸ್ತೆ ಸಂಪರ್ಕ ಕಳೆದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಜೋರು ಗಾಳಿ, ಮಳೆಗೆ ಕೋಳಿ ಫಾರಂ ಧರಶಾಹಿ

ಶಿವಮೊಗ್ಗದ ಮೋಜಪ್ಪ ಹೊಸೂರು ಗ್ರಾಮದಲ್ಲಿ ಏಜಾಜ್ ಎಂಬುವವರಿಗೆ ಸೇರಿದ್ದ ಕೋಳಿ ಫಾರಂ ಧರಶಾಹಿ ಆಗಿದೆ. ಫಾರಂ ಮಾಲೀಕ ಸುಮಾರು 6 ಸಾವಿರ ಕೋಳಿಗಳನ್ನು ಸಾಕಿದ್ದರು. ಭಾರಿ ಮಳೆ ಗಾಳಿಗೆ ಕೋಳಿ ಫಾರಂ ನೆಲಚ್ಚಿದ್ದು, ಸುಮಾರು 3 ಸಾವಿರಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಜೀವನೋಪಾಯಕ್ಕಾಗಿ ಕೋಳಿ ಫಾರಂ ನಡೆಸುತ್ತಿದ್ದ ಏಜಾಜ್ ಕುಟುಂಬ ಕಂಗಲಾಗಿದ್ದಾರೆ. ಇತ್ತ ಮಳೆ ಅಬ್ಬರಕ್ಕೆ ಕುಣೆಗದ್ದೆಯಿಂದ ಹಲಸೆ ದೇವಸ್ಥಾನಕ್ಕೆ ಹೋಗುವ ರಸ್ತೆ ಕುಸಿದು ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಸ್ತೆ ಕುಸಿತದಿಂದ ವಾಹನ ಸಂಚಾರ ವ್ಯತ್ಯಯವಾಗಿತ್ತು.

ಇದನ್ನೂ ಓದಿ: Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

ಪ್ರವಾಹದ ನೀರಿನಲ್ಲಿ ಮುಳುಗಿದ ಎಪಿಎಂಸಿ ಮಾರುಕಟ್ಟೆ

ಹಾಸನದ ಹೊಳೆನರಸೀಪುರ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿತ್ತು. ಮಾರುಕಟ್ಟೆ ಪ್ರಾಂಗಣ ಸ್ವಿಮ್ಮಿಂಗ್ ಪೂಲ್‌ನಂತೆ ಭಾಸವಾಗಿತ್ತು. ಹೊಳೆನರಸೀಪುರ – ಮಡಿಕೇರಿ ರಾಜ್ಯ ಹೆದ್ದಾರಿ ಸಮೀಪ ಇರುವ ಎಪಿಎಂಸಿ ಮಾರುಕಟ್ಟೆ ಉದ್ಘಾಟನೆಗೂ ಮೊದಲೇ ಹೇಮಾವತಿ ನದಿ ಪ್ರವಾಹದ ನೀರಿನಲ್ಲಿ ಮುಳುಗಿದೆ.

ರಾಯಚೂರಿನಲ್ಲಿ ನದಿ ತೀರದಲ್ಲಿ ಮೊಸಳೆಗಳ ಓಡಾಟ

ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ‌ ಮಳೆಯಿಂದಾಗಿ ತುಂಗಭದ್ರಾ ನದಿಯಲ್ಲಿ ಇದ್ದ ಮೊಸಳೆಗಳು ನದಿ ತೀರಕ್ಕೆ ಬಂದಿವೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಚಿಕಲಪರ್ವಿ ಗ್ರಾಮದ ಬಳಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿತ್ತು. ತುಂಗಭದ್ರಾ ನದಿ ತೀರದ ಗ್ರಾಮಗಳಿಗೆ ಮೊಸಳೆ ನುಗ್ಗುವ ಆತಂಕ ಎದುರಾಗಿದ್ದು, ನದಿ ದಂಡೆಗೆ ತೆರಳದಂತೆ ,ಜಾನುವಾರುಗಳನ್ನು ಬಿಡದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಇತ್ತೀಚೆಗೆ ಮೊಸಳೆಯೊಂದು ಹಸುವಿ‌ನ ಕರು ಮೇಲೆ ದಾಳಿ ಮಾಡಿತ್ತು.

ಗ್ರಾಮಗಳನ್ನು ತೊರೆಯುತ್ತಿರುವ ಜನರು

ಕೃಷ್ಣಾ ನದಿಗೆ ಕೊಯ್ನಾ ಜಲಾಶಯದ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರವಾ‌ಹ ಆತಂಕ ತೀವ್ರಗೊಂಡಿದೆ. ಪ್ರವಾಹದ ಭೀತಿಯಿಂದ ಜನರು ಗ್ರಾಮಗಳನ್ನು ತೊರೆಯುತ್ತಿದ್ದಾರೆ. ಬೆಳಗಾವಿ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದ ಐನಾಪೂರ ರಸ್ತೆ ಮೇಲೆ ನೀರು ಬರುತ್ತಿರುವುದರಿಂದ ಜಾನುವಾರುಗಳೊಂದಿಗೆ ಜನರು ಸ್ಥಳಾಂತರಗೊಂಡಿದ್ದಾರೆ.

ರಸ್ತೆಗೆ ಬಿದ್ದ ಮರ

ಕೊಡಗಿನ ಸೋಮವಾರಪೇಟೆ ವ್ಯಾಪ್ತಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹದಾಕಾರದ ಮರ ಬಿದ್ದಿತ್ತು. ಇದರಿಂದಾಗಿ ಸೋಮವಾರಪೇಟೆ ಸಮೀಪದ ಯಡವನಾಡು ಸಂಪರ್ಕ ರಸ್ತೆಯು ಬಂದ್‌ ಆಗಿತ್ತು. ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಸ್ಥಳೀಯರಿಂದಲೆ ರಸ್ತೆ ಅಡ್ಡಲಾಗಿ ಬಿದ್ದ ಮರ ತೆರವು ಮಾಡಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Actor Darshan Lata Jaiprakash says that since Darshan is a devotee of God,
ಸಿನಿಮಾ11 mins ago

Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

Paris Olympics
ಕ್ರೀಡೆ15 mins ago

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

illicit relationship raichur siravara
ಕ್ರೈಂ25 mins ago

Illicit Relationship: ವಿಚ್ಛೇದಿತ ನರ್ಸ್‌ ಜೊತೆ ಲವ್ವಿ ಡವ್ವಿ; ಪೊಲೀಸಪ್ಪನಿಗೇ ಕಾನೂನು ರುಚಿ ತೋರಿಸಿದ ಪತ್ನಿ

Gold Rate Today
ಚಿನ್ನದ ದರ25 mins ago

Gold Rate Today: ಬಜೆಟ್‌ ಬಳಿಕ ಇದೇ ಮೊದಲ ಬಾರಿ ಏರಿಕೆ ಕಂಡ ಚಿನ್ನದ ದರ; ಇಂದು ಇಷ್ಟು ದುಬಾರಿ

Actor Darshan Astrologer Chanda Pandey Said Facing Problems Because Of His vig
ಕ್ರೈಂ45 mins ago

Actor Darshan: ವಿಗ್‌ ಹಾಕಿದ್ದರಿಂದಲೇ ದರ್ಶನ್‌ಗೆ ಕಂಟಕ ಆಯ್ತು ಎಂದ ಕಾಳಿ ಉಪಾಸಕಿ ಚಂದಾ ಪಾಂಡೇ!

Encounter in Kupwara
ದೇಶ1 hour ago

Encounter in Kupwara: ಕುಪ್ವಾರಾದಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ: ಮೂವರು ಸೈನಿಕರಿಗೆ ಗಾಯ; ಓರ್ವ ಉಗ್ರ ಹತ

Champions Trophy 2025
ಕ್ರೀಡೆ1 hour ago

Champions Trophy 2025: ನಾವು ತುಂಬಾ ಒಳ್ಳೆಯವರು, ಪಾಕಿಸ್ತಾನಕ್ಕೆ ಬನ್ನಿ; ಟೀಮ್ ಇಂಡಿಯಾಗೆ ಪಾಕ್​ ಆಟಗಾರನ ಮನವಿ

Murder in PG Case
ಕ್ರೈಂ1 hour ago

Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

kaveri aarti
ಪ್ರಮುಖ ಸುದ್ದಿ2 hours ago

Kaveri Aarti: ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ; ದಸರಾ ಹೊತ್ತಿಗೆ ರೆಡಿ

Malaika Arora breakup rumours rushes past Arjun Kapoor
ಬಾಲಿವುಡ್2 hours ago

Malaika Arora: ಒಂದೇ ಈವೆಂಟ್‌ನಲ್ಲಿ ಇದ್ದರೂ ಒಬ್ಬರ ಮುಖವನ್ನು ಇನ್ನೊಬ್ಬರು ನೋಡಿಕೊಂಡಿಲ್ಲ! ಅರ್ಜುನ್​-ಮಲೈಕಾ ಬ್ರೇಕಪ್‌ ಖಚಿತ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ16 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ17 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ18 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ19 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌