Site icon Vistara News

Love Case : ಪ್ರೀತಿಸಿದ ಹುಡುಗಿಗೆ ಅಬಾರ್ಷನ್‌ ಮಾಡಿಸಿ ಕೈಕೊಟ್ಟು ಪರಾರಿಯಾದ ಪ್ರೇಮಿ

Man abandons girl after aborting her

ಕೊಪ್ಪಳ: ಪ್ರೀತಿಸಿದ ಹುಡುಗಿಗೆ (Love Case) ಮದುವೆ ಆಗುವುದಾಗಿ ನಂಬಿಸಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯೆಂದು ತಿಳಿದಾಕ್ಷಣ ಅಬಾರ್ಷನ್‌ ಮಾಡಿಸಿ ಅರ್ಧ ದಾರಿಯಲ್ಲೇ ಬಿಟ್ಟು ಹೋಗಿದ್ದಾನೆ. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರನಖೇಡದಲ್ಲಿ ಘಟನೆ ನಡೆದಿದೆ.

ವರನಖೇಡ ಗ್ರಾಮದ ಮಂಜುನಾಥ ಎಂಬಾತ ಆತನ ಅಣ್ಣ ಹನುಮೇಶ ನಾಯಕ ಸೇರಿ ಯುವತಿಗೆ ಗರ್ಭಪಾತ ಮಾಡಿಸಿದ್ದಾರೆ. ಅದೇ ಗ್ರಾಮದ ಯುವತಿಯನ್ನು ಮಂಜುನಾಥ ಎರಡು ವರ್ಷದಿಂದ ಪ್ರೀತಿಸುತ್ತಿದ್ದ. ಯುವತಿಯನ್ನು ಪುಸಲಾಯಿಸಿ ಕಳೆದ ಎರಡು ತಿಂಗಳ ಹಿಂದೆ ಮನೆ ಬಿಟ್ಟು ಪರಾರಿಯಾಗಿದ್ದ.

ಇದನ್ನೂ ಓದಿ:Water Crisis: ಬೆಂಕಿ ನಂದಿಸಲು ಅಪಾರ್ಟ್‌ಮೆಂಟ್‌ಗಳಿಂದ ನೀರಿಗಾಗಿ ಬೇಡಿದ ಅಗ್ನಿಶಾಮಕ ದಳ ಸಿಬ್ಬಂದಿ

ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಯುವತಿಯ ತಂದೆಯಿಂದ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ಈ ನಡುವೆ ಮೂರು ದಿನಗಳ ಹಿಂದೆ ಮಂಜುನಾಥ ವಾಪಸ್‌ ಯುವತಿಯನ್ನು ಕರೆದುಕೊಂಡು ಬಂದಿದ್ದ. ಯುವತಿಗೆ ಹಿರೇವಂಕಲಕುಂಟಿ ವೈದ್ಯರೊಬ್ಬರಿಂದ ಅಬಾರ್ಷನ್ ಮಾಡಿಸಿ ಮಾದಿನಾಳ ಕ್ರಾಸ್ ಬಳಿ ಬಿಟ್ಟು ಹೋಗಿದ್ದಾನೆ.

ಸದ್ಯ ಕನಕಗಿರಿ ಪೊಲೀಸ್‌ ಠಾಣೆಯಲ್ಲಿದ್ದ ಯುವತಿಗೆ ರಕ್ತಸ್ರಾವ ಹೆಚ್ಚಾದ ಹಿನ್ನೆಲೆಯಲ್ಲಿ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಅಲ್ಲಿಂದ ಆಕೆಯನ್ನು ಗಂಗಾವತಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಕನಕಗಿರಿ ಪೊಲೀಸ್ ಠಾಣೆಯಲ್ಲಿ ಮಂಜುನಾಥ, ಹನುಮೇಶ ಹಾಗೂ ವೈದ್ಯರ ವಿರುದ್ಧ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯ್ತೀನಿ ಎಂದಳು ಇನ್ಸ್ಟಾಗ್ರಾಮ್ ಚೆಲುವೆ

ಮೈಸೂರು: ಪ್ರೇಮ ವೈಫಲ್ಯಕ್ಕೆ (Love Failure) ಬೇಸತ್ತ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಬಿಹಾರ ಮೂಲದ ನಾಸಿಂ ಬೇಗಂ(31) ಆತ್ಮಹತ್ಯೆಗೆ ಯತ್ನಿಸಿದವಳು.

ಖಾಸಗಿ ಹೋಟೆಲ್‌ನ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮದುವೆ ಆಗದಿದ್ದರೆ ಬಿಲ್ಡಿಂಗ್ ಮೇಲಿಂದ ಬಿದ್ದು ಸಾಯುವುದಾಗಿ ಹೇಳಿ ರಂಪಾಟ ಮಾಡಿದ್ದಾಳೆ. ಕಟ್ಟಡದ ತುದಿಯಲ್ಲಿ ನಿಂತು ಆತ್ಮಹತ್ಯೆಗೆ ಯತ್ನಿಸುವುದಾಗಿ ಬೆದರಿಕೆ ಹಾಕಿದ್ದಾಳೆ.

ಈಗಾಗಲೇ ಮದುವೆ ಆಗಿದ್ದ ಬಿಹಾರ ಮೂಲದ ನಾಸಿಂ ಬೇಗಂ, ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿದ್ದ ವಯಸ್ಸಿನಲ್ಲಿ ಚಿಕ್ಕವನ್ನಾಗಿದ್ದ ಆಸಿಬೂರ್ ರೆಹಮಾನ್ ಎಂಬಾತನನ್ನು ಪ್ರೀತಿಸಿದ್ದಳು. ನಂಜನಗೂಡಿನ ಹಿಮ್ಮಾವು ಗ್ರಾಮದಲ್ಲಿ ವಾಸವಾಗಿದ್ದ ಆಸಿಬೂರ್ ರೆಹಮಾನ್ ಏಷಿಯನ್ ಪೈಂಟ್ಸ್‌ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ವರ್ಷದಿಂದ ಆಸಿಬೂರ್ ರೆಹಮಾನ್ ಹಾಗೂ ನಾಸಿಂ ಬೇಗಂ ಪರಿಚಯವು ಪ್ರೀತಿಗೆ ತಿರುಗಿತ್ತು.

ಇದನ್ನೂ ಓದಿ: Orry With Radhika Merchant: ರಾಧಿಕಾ ಮರ್ಚಂಟ್‌ ಜತೆ ಪೋಸ್‌ ಕೊಟ್ಟ ಓರಿ!

ಈ ನಡುವೆ ಆಸಿಬೂರನನ್ನು ನೋಡಲು ನಾಸಿಂ ಬೇಗಂ ಬಿಹಾರದಿಂದ ನಂಜನಗೂಡಿಗೆ ಬಂದಿದ್ದಳು. ಆಕೆಯನ್ನು ಕಾಣಲು ಕಾತುರನಾಗಿದ್ದ ಆಸಿಬೂರ ಮಹಿಳೆಯನ್ನು ಕಂಡ ಮೇಲೆ ಮನಸ್ಸು ಬದಲಾಗಿತ್ತು. ಯಾಕೆಂದರೆ ನಾಸಿಂ ಬೇಗಂಗೆ ಈಗಾಗಲೇ ಮದುವೆ ಆಗಿತ್ತು. ಜತೆಗೆ ವಯಸ್ಸಿನ ಅಂತರ ಹೆಚ್ಚಿದೆ ಎಂದು ಮದುವೆಗೆ ಒಲ್ಲೆ ಎಂದಿದ್ದ.

ಯುವಕನ ಮಾತಿನಿಂದ ಸಿಟ್ಟಿಗೆದ್ದ ವಿವಾಹಿತೆ ಮದುವೆ ಮಾಡಿಕೊಳ್ಳುವಂತೆ ಒತ್ತಾಯ ಮಾಡಿದ್ದಾಳೆ. ಯುವಕ ಮದುವೆಯನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ನಾಸಿಂ ಬೇಗಂ ತಾನು ತಂಗಿದ್ದ ಹೋಟೆಲ್‌ನ ಕಟ್ಟಡ ಏರಿ ಹೈಡ್ರಾಮಾವನ್ನೇ ಮಾಡಿದ್ದಳು. ಇತ್ತ ವಿಷಯ ತಿಳಿಯುತ್ತಿದ್ದಂತೆ ನಂಜನಗೂಡು ಪಟ್ಟಣ ಪೊಲೀಸರು ಸ್ಥಳಕ್ಕಾಗಮಿಸಿ, ನಾಸಿಂ ಬೇಗಂನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಂಜನಗೂಡು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version