Site icon Vistara News

KPTCL Strike: ಗುರುವಾರದ ಕೆಪಿಟಿಸಿಎಲ್‌ ನೌಕರರ ಮುಷ್ಕರಕ್ಕೆ ತಾತ್ಕಾಲಿಕ ತಡೆ

KPTCL Strike

#image_title

ಬೆಂಗಳೂರು: ವಿದ್ಯುತ್‌ ನೌಕರರಿಗೆ ವೇತನ ಹೆಚ್ಚಳ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮಾ.16ರಿಂದ ಕರೆ ನೀಡಿದ್ದ ಮುಷ್ಕರವನ್ನು (KPTCL Strike) ತಾತ್ಕಾಲಿಕವಾಗಿ ನಿಲ್ಲಿಸಲಾಗುವುದು ಎಂದು ಕೆಪಿಟಿಸಿಎಲ್‌ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀಪತಿ ತಿಳಿಸಿದ್ದಾರೆ.

ಕೆಪಿಟಿಸಿಎಲ್‌ ನೌಕರರ ಸಂಘ ಶೇ.22 ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿತ್ತು. ಬೊಮ್ಮಾಯಿ ಅವರು ಶೇ.20ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಮುಷ್ಕರ ರದ್ದು ಮಾಡಲಾಗಿದೆ. ಎಂದಿನಂತೆ ನೌಕರರು ಕೆಲಸ ನಿರ್ವಹಿಸಲಿದ್ದಾರೆ. ನಮ್ಮ ಬೇಡಿಕೆ ಈಡೇರುವ ಭರವಸೆ ಇದೆ. ಈ ಹಿನ್ನೆಲೆಯಲ್ಲಿ ಮುಷ್ಕರಕ್ಕೆ ತಾತ್ಕಾಲಿಕ ತಡೆ ಹಾಕಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

Exit mobile version