ಕರ್ನಾಟಕ
KR Market Flyover: ಕೆ.ಆರ್. ಮಾರುಕಟ್ಟೆಯಲ್ಲಿ ಸೂಟ್ ಧರಿಸಿ ಹಣ ಎಸೆದವನು ಖಾಕಿ ಕಂಡೊಡನೆ ಪರಾರಿ!
KR Market Flyover: ಕೆ.ಆರ್ ಮಾರುಕಟ್ಟೆಯಲ್ಲಿ ದುಡ್ಡಿನ ಸುರಿಮಳೆ ಸುರಿದವನು ಪೊಲೀಸರ ಕಂಡೊಡನೆ ಪರಾರಿ ಆಗಿದ್ದಾನೆ. ಕೆಲವರು ಇದು ಪ್ರಚಾರದ ಗಿಮಿಕ್ ಎಂದೂ ಹೇಳಿದ್ದಾರೆ. ಮತ್ತೆ ಕೆಲವರು ಆ ದುಡ್ಡನ್ನು ನಮಗೇ ಕೊಡಿ ಎಂದು ಕೇಳಿದ್ದಾರೆ.
ಬೆಂಗಳೂರು: ಕೆ.ಆರ್. ಮಾರುಕಟ್ಟೆ ಫ್ಲೈಓವರ್ (KR Market Flyover) ಮೇಲಿಂದ ದುಡ್ಡಿನ ಸುರಿಮಳೆಗೈದು ಎಲ್ಲರ ಗಮನ ಸೆಳೆದಾತ ಅರುಣ್ ಎಂಬ ವಿಷಯ ತಿಳಿದು ಬಂದಿದೆ. ಮಂಗಳವಾರ 11.30ರ ಸುಮಾರಿಗೆ ಸೂಟು ಬೂಟು ಧರಿಸಿ ಜತೆಗೆ ಕತ್ತಿಗೆ ಗಡಿಯಾರವೊಂದನ್ನು ನೇತು ಹಾಕಿಕೊಂಡು ಬ್ಯಾಗ್ನಲ್ಲಿ ದುಡ್ಡಿನ ಕಂತೆ ಹಿಡಿದು ಬಂದಿದ್ದ ಈತ ನೇರವಾಗಿ ಕೆಳಗಡೆ ಜನರತ್ತ ದುಡ್ಡನ್ನು ಚೆಲ್ಲಿದ್ದಾನೆ. ೧೦, ೨೦ ರೂಪಾಯಿಯ ಕಂತೆ ಕಂತೆ ಹಣವನ್ನು ಕೆಳಗೆ ಬಿಸಾಡಿರುವುದು ಸಖತ್ ಸುದ್ದಿಯಾಗಿದ್ದು, ಪ್ರಚಾರ ಗಿಮಿಕ್ ಎಂದೂ ಹೇಳಲಾಗುತ್ತಿದೆ.
ಕತ್ತಿಗೆ ಗಡಿಯಾರ ಹಾಕಿಕೊಂಡು ಸೂಟು ಧರಿಸಿ ಬಂದ ಅರುಣ್ ಕೆ.ಆರ್ ಮಾರುಕಟ್ಟೆ ಫ್ಲೈಓವರ್ ಮೇಲೆ ನಿಂತು ತನ್ನ ಕೈಚೀಲದಲ್ಲಿದ್ದ 10,20,50 ರೂಪಾಯಿಯ ಕಂತೆ ಕಂತೆ ನೋಟುಗಳನ್ನು ತೆಗೆದು ಏಕಾಏಕಿ ಕೆಳಗೆ ಎಸೆದಿದ್ದಾನೆ. ಇತ್ತ ಜನ ಮರಳೊ ಜಾತ್ರೆ ಮರಳೋ ಎಂಬಂತೆ ಚೆಲ್ಲಾಪಿಲ್ಲಿಯಾಗಿ ಬೀಳುತ್ತಿದ್ದ ಹಣವನ್ನು ಫ್ಲೈಓವರ್ ಕೆಳಗೆ ನಿಂತಿದ್ದ ಜನ ತಾ ಮುಂದು ನಾ ಮುಂದು ಎಂಬಂತೆ ಹಣವನ್ನು ಬಾಚಿಕೊಂಡರು.
ಇನ್ನು ಫ್ಲೈಓವರ್ ಮೇಲೂ ಈತನ ಕೃತ್ಯವನ್ನು ನೋಡಿದ ವಾಹನ ಸವಾರರು ತಕ್ಷಣವೇ ಬೈಕ್ ನಿಲ್ಲಿಸಿ ಅರುಣ್ ಬಳಿ ಓಡಿಬಂದಿದ್ದಾರೆ. ಬಳಿಕ ಕೈಯಲ್ಲಿ ಮೊಬೈಲ್ ಹಿಡಿದು ವಿಡಿಯೊ ಮಾಡಿದ್ದಾರೆ. ಕೆಲವರು ಯಾಕ್ ಸರ್ ಹಣ ಎಸೆಯುತ್ತಿದ್ದೀರಾ? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲೇ ಸಮೀಪ ಇದ್ದವರು ಕೆಳಗೆ ಬೀಳುತ್ತಿದ್ದ ನೋಟುಗಳನ್ನು ಹೆಕ್ಕಿಕೊಳ್ಳುತ್ತಿದ್ದಾರೆ. ಗಾಳಿಯಲ್ಲಿ ಹಾರಿ ಬಂದ ನೋಟುಗಳನ್ನು ತೆಗೆದುಕೊಳ್ಳು ಮುಂದಾಗಿದ್ದಾರೆ. ಮತ್ತೊಬ್ಬನಂತೂ ಸರ್ ಈ ಕಡೆಗೂ ನೋಟು ಎಸೆಯಿರಿ, ನನಗೆ ಕೊಡಿ, ಬೇಕಿದ್ದರೆ ನಾನೇ ಎಸೆಯುತ್ತೇನೆ ಎಂದೂ ಒಬ್ಬ ಅರುಣ್ ಹಿಂದೆಯೇ ಬಿಟ್ಟು ಬಿಡದಂತೆ ಕೇಳಿರುವುದು ವಿಡಿಯೊದಲ್ಲಿ ಗೊತ್ತಾಗಿದೆ. ಒಟ್ಟಿನಲ್ಲಿ ಅಲ್ಲಿದ್ದವರಲ್ಲಿ ಕೆಲವರು ಈತನ ಹುಚ್ಚಾಟವನ್ನು ನೋಡುತ್ತಾ ನಿಂತಿದ್ದರೆ, ಮತ್ತೆ ಕೆಲವರು ಕಂತೆ ನೋಟಿಗೆ ಮುಗಿಬಿದ್ದಿದ್ದರು.
ನ್ಯೂಸೆನ್ಸ್ ಕ್ರಿಯೆಟ್ ಮಾಡಿ ಪರಾರಿ
ಅರುಣ್ ಫ್ಲೈ ಓವರ್ನ ಎರಡು ಬದಿಯಲ್ಲಿ ನೋಟುಗಳು ಎಸೆಯುತ್ತಿದ್ದರೆ, ಕೆಲಸ ಕಾರ್ಯಗಳಲ್ಲಿ ತೊಡಗಿದ್ದವರು, ಬಸ್ಸಿಗಾಗಿ ಕಾದು ನಿಂತಿದ್ದವರು ಮಾತ್ರವಲ್ಲ, ತಮ್ಮ ಗಾಡಿಯಲ್ಲಿ ಹೋಗುತ್ತಿದ್ದ ಎಲ್ಲರೂ ಆ ದುಡ್ಡನ್ನು ಎತ್ತಿಕೊಳ್ಳಲು ಮುಗಿಬಿದ್ದಿದ್ದರು. ನಾನೇ ಮೊದಲು ಸಾಧ್ಯವಾದಷ್ಟು ದುಡ್ಡನ್ನು ಬಾಚಿಕೊಳ್ಳಬೇಕು ಎಂದು ನೆಲಕ್ಕೆ ಬೀಳುವುದರೊಳಗೇ ಹಿಡಿದುಕೊಳ್ಳಲು ಯತ್ನಿಸಿದರು. ಕೆಲವರು ಮೇಲಕ್ಕೆ ಎಗರಿ ಎಗರಿ ಹಿಡಿದುಕೊಳ್ಳುತ್ತಿದ್ದರು.
ಇದನ್ನೂ ಓದಿ: KR Market Flyover : ಕೆ.ಆರ್. ಮಾರ್ಕೆಟ್ ಬಳಿ ದುಡ್ಡಿನ ಮಳೆಗರೆದ ಅರುಣ್ ಯಾರು?; ಇಲ್ಲಿದೆ ಅವನ ಫುಲ್ ಡಿಟೇಲ್ಸ್!
ಕೆ.ಆರ್ ಮಾರುಕಟ್ಟೆ ಬಳಿ ಈ ರೀತಿ ನ್ಯೂಸೆನ್ಸ್ ಆಗುತ್ತಿದ್ದಂತೆ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಆಗಮಿಸಿ ಸೇರಿದ್ದ ಸಾರ್ವಜನಿಕರನ್ನು ಚದುರಿಸುವ ಕೆಲಸವನ್ನು ಮಾಡಿದರು. ಇತ್ತ ಫ್ಲೈಓವರ್ ಮೇಲೆ ಪೊಲೀಸರು ಬರುತ್ತಿದ್ದಂತೆ ಸ್ಕೂಟರ್ ಏರಿ ಅರುಣ್ ಪರಾರಿ ಆದ ಎಂದು ತಿಳಿದು ಬಂದಿದೆ. ಪರಾರಿಯಾದವನಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Live News
Bangalore Bandh Live: ಬೆಂಗಳೂರು ಬಂದ್ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?
ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್ಡೇಟ್ ಇಲ್ಲಿದೆ. .
ಬೆಂಗಳೂರು: ಕಾವೇರಿ ನೀರಿನಲ್ಲಾದ ಅನ್ಯಾಯ ಪ್ರತಿಭಟಿಸಿ ಹಲವು ಸಂಘಟನೆಗಳು ನೀಡಿರುವ ಬೆಂಗಳೂರು ಬಂದ್ಗೆ (Bangalore bandh) ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಎಲ್ಲೆಲ್ಲಿ ಏನಾಗುತ್ತಿದೆ ಎಂಬುದರ ಅಪ್ಡೇಟ್ ಇಲ್ಲಿದೆ. .
ಕರ್ನಾಟಕ
ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ
Vistara Editorial: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನಕ್ಕೆ ಹೊಸ ಆಯಾಮ ನೀಡುತ್ತಿರುವುದು ಸ್ವಾಗತಾರ್ಹ. ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ.
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯಂತೆ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆದಿದೆ. ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಗದಗ ಮತ್ತು ಬೆಳಗಾವಿ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲೂ ಜನತಾ ದರ್ಶನ ನಡೆದಿದೆ. ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21ಕ್ಕೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ. ಉಳಿದಂತೆ 6663 ಅರ್ಜಿ, ಅಹವಾಲುಗಳು ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ರವಾನೆಯಾಗಿವೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ʼʼನಾವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನ ರೀತಿಯ ಪ್ರತಿಕ್ರಿಯೆ ಸಾರ್ವಜನಿಕರಿಂದ ಸಿಕ್ಕಿದೆ. ಅಧಿಕಾರಿಗಳ ಸ್ಪಂದನೆ ಕೂಡ ಸಮಾಧಾನಕರವಾಗಿದೆ. ಇವತ್ತಿನ ಅನುಭವದ ಹಿನ್ನೆಲೆಯಲ್ಲಿ ಮುಂದಿನ ಜನತಾ ದರ್ಶನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆʼʼ ಎನ್ನುವ ಅಭಿಪ್ರಾಯ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳಿಂದ ವ್ಯಕ್ತವಾಗಿದೆ(Vistara Editorial).
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಡಿಪಿ ಸಭೆಗಳನ್ನು ಅತ್ಯಂತ ಗಂಭೀರವಾಗಿ ನಡೆಸುತ್ತಿದ್ದಾರೆ. ಅವರು ಜಿಲ್ಲೆಗಳಿಗೆ ಭೇಟಿ ನೀಡುವಾಗ ಹಲವಾರು ಮಂದಿ ಅವರ ಮುಂದೆ ಅಹವಾಲು ಹೇಳಿಕೊಳ್ಳಲು ಬರುತ್ತಿದ್ದಾರೆ. ಇದನ್ನು ಗಮನಿಸಿದ ಅವರು ಸಿಎಂ ಬಂದಾಗ ಜನರ ದೂರು ನೀಡಲು ಬರುತ್ತಾರೆ ಎಂದರೆ ಅವರಿಗೆ ಹೇಳಿಕೊಳ್ಳಲು ಇದೆ ಎಂದಾಯಿತು. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟದಲ್ಲೂ ಜನತಾ ದರ್ಶನ ನಡೆಸಬೇಕು ಎಂಬ ಸೂಚನೆಯನ್ನು ನೀಡಿದ್ದರು. ಇತ್ತೀಚೆಗೆ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳ ಮೀಟಿಂಗ್ನಲ್ಲಿ ಈ ಸೂಚನೆ ನೀಡಲಾಗಿತ್ತು. ಇದು ಸಫಲವಾಗಿದೆ ಎನ್ನುವುದಕ್ಕೆ ಇವತ್ತಿನ ದೃಶ್ಯವೇ ಸಾಕ್ಷಿ. ಸ್ವೀಕರಿಸಲಾಗಿರುವ ಅಹವಾಲುಗಳಲ್ಲಿ ಕಂದಾಯ ಇಲಾಖೆಯದ್ದೇ ಸಿಂಹಪಾಲು. ನಂತರದ ಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೇರಿದ ಅಹವಾಲುಗಳಿವೆ. ಮೂರನೇ ಅತಿ ಹೆಚ್ಚು ಅಹವಾಲುಗಳು ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಒಟ್ಟು ಅರ್ಜಿ ರೂಪದಲ್ಲಿ ಬಂದ ಅಹವಾಲುಗಳನ್ನು ದಾಖಲಿಸಿಕೊಳ್ಳುವ ಮತ್ತು ಸ್ಥಳದಲ್ಲೇ ಪರಿಹಾರಕ್ಕೆ ಪ್ರಯತ್ನಿಸುವ ಪ್ರಕ್ರಿಯೆ ಒಂದು ಕಡೆ ನಡೆದಿದೆ. ಮತ್ತೊಂದು ಕಡೆ ಅರ್ಜಿ ಇಲ್ಲದೆ ಮೌಖಿಕವಾಗಿ ಬಂದ ಅಹವಾಲುಗಳನ್ನೂ ದಾಖಲಿಸಿಕೊಳ್ಳುವ ಜತೆಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿದೆ.
ಜನರಿಗೆ ದೂರುಗಳಿದ್ದೇ ಇರುತ್ತವೆ. ಜನ ಯಾವಾಗ ಮಂತ್ರಿಗಳ ಬಳಿಗೆ ಬರುತ್ತಾರೆ ಎಂಬುದನ್ನೂ ಗಮನಿಸಬೇಕು. ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನೋಂದಣಿ, ಕಂದಾಯ ಹೀಗೆ ವಿಭಾಗವಾರು ಇಲಾಖೆಗಳಲ್ಲಿ ಕೇಸ್ ವರ್ಕರ್ಗಳು ತಮ್ಮ ಅರ್ಜಿಗಳ ವಿಲೇವಾರಿ ಮಾಡಲು ವಿಫಲರಾದಾಗ, ಮೇಲಧಿಕಾರಿಗಳತ್ತ ಜನ ಎಡತಾಕುವುದು ಸಾಮಾನ್ಯ. ಆದರೆ ಮೇಲಧಿಕಾರಿಗಳು ಇಂಥ ಅರ್ಜಿಗಳನ್ನು ʼಸರಿಯಾದ ರೀತಿಯಲ್ಲಿʼ (through proper channel) ಬರಲಿ ಎಂದು ಮತ್ತೆ ಅದನ್ನು ಕೆಳಗಿನ ಮೇಜುಗಳ ಕಡೆಗೆ ತಳ್ಳುವುದೂ ಸಾಮಾನ್ಯ. ಹೀಗೆ ಪ್ರಭಾವಿಗಳಲ್ಲದ ಜನಸಾಮಾನ್ಯರು ಮೇಜಿನಿಂದ ಮೇಜಿಗೆ ಅಲೆದಾಡುವುದು, ನಾಳೆ ಬಾ ಎಂದು ಹೇಳಿಸಿಕೊಳ್ಳುವುದು ಅತಿ ಸಾಮಾನ್ಯ ದೃಶ್ಯ. ಅನೇಕ ಮಂದಿಯ ಬದುಕು ಹೀಗೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಲೇ ʼತಬರನ ಕಥೆʼಯಂತೆ ಮುಗಿದುಹೋಗುತ್ತದೆ. ಇದೊಂದು ದಃಸ್ವಪ್ನವೇ ಸರಿ. ಇದರಿಂದ ಪಾರಾಗಲು ಸಣ್ಣ ಸಣ್ಣ ವಿಚಾರಗಳಿಗೂ ಜನ ಪುಢಾರಿಗಳ ಮೊರೆ ಹೋಗುತ್ತಾರೆ; ಅಥವಾ ದಲ್ಲಾಳಿಗಳನ್ನು ಹಿಡಿದುಕೊಳ್ಳುತ್ತಾರೆ. ಇವರ ಮೂಲಕ ಕೆಲಸ ಮಾಡಿಸಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೆ.
ಹೀಗೆ ಸರ್ಕಾರಿ ಕೆಲಸದ ಕೆಂಪು ಪಟ್ಟಿಯ ವಿಳಂಬ ನರಕದಿಂದ ಬೇಸತ್ತ ಜನಸಾಮಾನ್ಯನಿಗೆ, ಪಾರಾಗುವ ಒಂದು ಕಿಂಡಿಯಂತೆ ಜನತಾ ದರ್ಶನ ಕಾಣಿಸಿದರೆ ಆಶ್ಚರ್ಯವಿಲ್ಲ. ನೇರವಾಗಿ ಜಿಲ್ಲಾಧಿಕಾರಿ ಅಥವಾ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದರೆ ತಮ್ಮ ಕೆಲಸ ಕೂಡಲೇ ಆಗಬಹುದು ಎಂಬ ಆಸೆ ಅವರಲ್ಲಿ ಮೂಡುವುದು ಸಹಜ. ಹೀಗಾಗಿಯೇ ಇಂಥ ಕಾರ್ಯಕ್ರಮಗಳಿಗೆ ಜನಸ್ಪಂದನ ದೊಡ್ಡ ಪ್ರಮಾಣದಲ್ಲಿ ವ್ಯಕ್ತವಾಗುತ್ತದೆ. ಜನ ಸರ್ಕಾರಿ ಕಚೇರಿಗಳ ಬಾಗಿಲಿಗೆ ಅಲೆದಾಡುವ ಬದಲು, ಜನತಾ ದರ್ಶನದ ಮೂಲಕ ಸರ್ಕಾರವೇ ಜನರ ಬಳಿ ಹೋಗುವುದು ಆಶಾದಾಯಕ. ಈ ಹಿಂದಿನ ಮುಖ್ಯಮಂತ್ರಿಗಳೂ ಇಂಥದೊಂದು ಪ್ರಯತ್ನ ಮಾಡಿದ್ದುಂಟು. ಆದರೆ ಇಷ್ಟೊಂದು ವ್ಯಾಪಕವಾಗಿ ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಮಾಡಿರಲಿಲ್ಲ. ಆ ನಿಟ್ಟಿನಿಂದ ಇದು ಸ್ವಾಗತಾರ್ಹ.
ಈ ಸಂಪಾದಕೀಯವನ್ನೂ ಓದಿ: ವಿಸ್ತಾರ ಸಂಪಾದಕೀಯ: ವಂದೇ ಭಾರತ್; ಭಾರತದಲ್ಲಿ ರೈಲು ಕ್ರಾಂತಿ
ಈ ಹಿಂದಿನ ಜನತಾ ದರ್ಶನಗಳ ಅರ್ಜಿಗಳ ಕತೆ ಏನಾಗಿದೆ ಎಂಬುದನ್ನೂ ಗಮನಿಸಬೇಕಿದೆ. ಜನತಾ ದರ್ಶನಗಳು ಕೇವಲ ತೋರಿಕೆಯ ಕಾರ್ಯಕ್ರಮ ಆಗದೆ ಜನರ ಸಂಕಷ್ಟ ಪರಿಹಾರ ಆಗುವಂತಾಗಲಿ. ಸ್ವಲ್ಪ ಆಳವಾಗಿ ವಿಮರ್ಶೆ ಮಾಡಿದರೆ, ಜನತಾ ದರ್ಶನಗಳು ಸರ್ಕಾರಗಳ ವೈಫಲ್ಯವನ್ನು ಕಾಣಿಸುವ ಕಾರ್ಯಕ್ರಮವೇ ಹೊರತು ಸಾಫಲ್ಯವನ್ನಲ್ಲ. ಸರ್ಕಾರಿ ಕಚೇರಿಗಳಲ್ಲಿ ಸಾಮಾನ್ಯ ಸಮಯದಲ್ಲಿ ಕೆಲಸ ಆಗುತ್ತಿಲ್ಲ ಅನ್ನುವ ಕಾರಣಕ್ಕಾಗಿ ತಾನೇ ಜನತಾ ದರ್ಶನದ ಸಮಯದಲ್ಲಿ ಅಷ್ಟೊಂದು ಪ್ರಮಾಣದ ಅಹವಾಲುಗಳು ಬರುವುದು? ಮೊದಲು ಗ್ರಾಮ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಅಧಿಕಾರಿಗಳು ಜನತೆಗೆ ತಮ್ಮ ಕಚೇರಿಯಲ್ಲಿಯೇ ದರ್ಶನ ಕೊಡಬೇಕು. ಕೆಳಹಂತದ ಅಧಿಕಾರಿಗಳ ಜನತಾ ದರ್ಶನ ಮೊದಲಾಗಲಿ. ಅವರ ಮೇಲೆ ಮೇಲಧಿಕಾರಿಗಳು ನಿಗೂ ಇಡುವುದೂ ಆಗಲಿ. ಹಾಗೇ ಜಿಲ್ಲಾ ಮಟ್ಟದಲ್ಲೇ ಜನತಾ ದರ್ಶನ ಪರಿಣಾಮಕಾರಿಯಾಗಿ ನಡೆದಿದ್ದೇ ಆದಲ್ಲಿ ಜನ ದೂರದ ವಿಧಾನ ಸೌಧದವರೆಗೆ ದೂರುದುಮ್ಮಾನ ಹಿಡಿದುಕೊಂಡು ಮುಖ್ಯಮಂತ್ರಿಗಳನ್ನು ಹುಡುಕಿಕೊಂಡು ಬರುವ ಪ್ರಶ್ನೆಯೇ ಬರುವುದಿಲ್ಲ. ಜನತಾ ದರ್ಶನದ ಅರ್ಜಿಗಳನ್ನೇ ಕಾಲಕಾಲಕ್ಕೆ ವಿಲೇವಾರಿ ಮಾಡುವ ಒಂದು ವ್ಯವಸ್ಥೆ ರೂಪುಗೊಳ್ಳಬೇಕು. ಆಗ ಮಾತ್ರ ಜನತಾ ದರ್ಶನದ ಬಗ್ಗೆ ಜನತೆಯಲ್ಲಿ ವಿಶ್ವಾಸ ಮೂಡಬಹುದು. ಇಲ್ಲದಿದ್ದಲ್ಲಿ ಇದೂ ಹತ್ತರಲ್ಲಿ ಇನ್ನೊಂದು ಎಂಬಂತಾಗುತ್ತದೆ.
ಇನ್ನಷ್ಟು ಸಂಪಾದಕೀಯಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Bangalore rain : ಮನೆ ಮುಂದೆ ವಾಕ್ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ
Bangalore rain: ಬೆಂಗಳೂರಿನಲ್ಲಿ ಸಂಭವಿಸಿದ ಮಳೆ ದುರಂತದಲ್ಲಿ ತಾಯಿ ಮೃತಪಟ್ಟು, ಪುಟ್ಟ ಕಂದಮ್ಮ ಗಾಯಗೊಂಡಿದ್ದಾಳೆ. ಮರ ಬಿದ್ದು ಈ ದುರಂತ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ಸಂಜೆ ಸುರಿದ ಮಳೆಗೆ (Bangalore rain) ಮರವೊಂದು ಧರೆಗುರುಳಿ (Tree Falls on mother and daughter) ವಾಕ್ ಮಾಡುತ್ತಿದ್ದ ತಾಯಿ ಮತ್ತು ಮಗುವನ್ನು ಗಾಯಗೊಳಿಸಿದೆ. ತಾಯಿ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟರೆ (Mothrer dead at Hospital), ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್ ಗಾರ್ಡನ್ (Wilson garden) ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ.
ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್ ಮೇಲೆ ತಾಯಿ ಮಗಳು ವಾಕ್ ಮಾಡುತ್ತಿದ್ದಾಗ ಬೃಹತ್ ಮರ ಉರುಳಿದೆ. ಒಂದು ಕಡೆ ಮರದ ಕೊಂಬೆ ಇನ್ನೊಂದು ಕಡೆ ವಿದ್ಯುತ್ ಕಂಬವೂ ಅವರ ಮೇಲೆ ಬಿದ್ದಿದೆ.
ಕೂಡಲೇ ಹೇಮಾವತಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಒಯ್ಯಲಾಯಿತು. ರಚಿತಾಗೆ ತಲೆಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.
ಈ ನಡುವೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹೇಮಾವತಿ ನಿಧನರಾಗಿದ್ದಾರೆ. ಅವರು ಸಂಜಯಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.
ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರ ಸಾವು
ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಬಳಿ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರಾಗಿದ್ದು, ಮೃತರಾದವರ ಗುರುತು ಪತ್ತೆಯಾಗಿಲ್ಲ.
ಮೈಸೂರು ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಬೆಂಗಳೂರು ಕಡೆಗೆ ಬರುವ ರಸ್ತೆಗೆ ನುಗ್ಗಿ ಸ್ಯಾಂಟ್ರೋ ಕಾರು ಮತ್ತು ಇತರ ಮೂರು ವಾಹನಗಳಿಗೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಸ್ಯಾಂಟ್ರೋ ಚಲಾಯಿಸುತ್ತಿದ್ದ ವ್ಯಕ್ತಿ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಗೂ ಗಂಭೀರ ಗಾಯಗಳಾಗಿದ್ದು ಅವರು ಆಸ್ಪತ್ರೆಗೆ ಸಾಗಿಸುವ ಪ್ರಾಣ ಕಳೆದುಕೊಂಡರು.
ಸಂಜೆ ಸುಮಾರು 5.30ರ ಹೊತ್ತಿಗೆ ಅಪಘಾತ ಸಂಭವಿಸಿದ್ದು, ಮೃತರು ಹಾಸನ ಮೂಲದವರೆಂದು ಹೇಳಲಾಗುತ್ತಿದೆ. ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ. ಇತರ ವಾಹನಗಳಿಗೂ ಹಾನಿಯಾಗಿದೆ.
ಅಪಘಾತದಿಂದಾಗಿ ಹೆದ್ದಾರಿಯಲ್ಲಿ ತುಂಬಾ ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು.
ಕರ್ನಾಟಕ
VISTARA TOP 10 NEWS: ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ಎಐಎಡಿಎಂಕೆ-ಬಿಜೆಪಿ ಮೈತ್ರಿಯೂ ಬಂದ್
VISTARA TOP 10 NEWS : ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಬಂದ್! ಇನ್ನು ಪ್ರಧಾನಿ ಮೋದಿ ಅವರು ಅ. 1ರಂದು ಎಲ್ಲರೂ ಸೇರಿ ಕಸ ಗುಡಿಸೋಣ ಅಂದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್.
1. ಕಾವೇರಿ ಕಿಚ್ಚು: ರಾಜ್ಯಕ್ಕೆ ಡಬಲ್ ಬಂದ್ ಶಾಕ್; ನಾಳೆ ಬೆಂಗಳೂರು, ಸೆ. 29 ಕರ್ನಾಟಕ ಬಂದ್
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿರುವ ಸೆ. 26ರ ಬೆಂಗಳೂರು ಬಂದ್ ಬೆನ್ನಿಗೇ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಸೆ. 29ರಂದು ಅಖಿಲ ಕರ್ನಾಟಕ ಬಂದ್ಗೆ ಕರೆ ನೀಡಿದ್ದಾರೆ. ಹೀಗಾಗಿ ವಾರದಲ್ಲಿ ಎರಡು ಬಂದ್ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
2. ನಾಳೆ ಬೆಂಗಳೂರು ಬಂದ್: ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ; ಏನಿರುತ್ತೆ? ಏನಿರಲ್ಲ?
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಹಾಗಿದ್ದರೆ ಏನಿರುತ್ತೆ? ಏನಿರಲ್ಲ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ1: ಬಲವಂತದಿಂದ ಬಂದ್ ಮಾಡಿಸುವಂತಿಲ್ಲ; ಮೆರವಣಿಗೆಗೆ ಅವಕಾಶವಿಲ್ಲ ಎಂದ ಕಮಿಷನರ್
ಪೂರಕ ಸುದ್ದಿ2: ಬಂದ್ ಯಶಸ್ವಿ ಆಗಬೇಕು; ಹೋಟೆಲ್ ಓಪನ್ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್ವೈ
ಪೂರಕ ಸುದ್ದಿ3: ಯಾವ ಬಂದ್ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ
3 .ಜಲಶಕ್ತಿ ಇಲಾಖೆ ಸುಪ್ರೀಂ ಕೋರ್ಟ್ಗೆ ಅರ್ಜಿ ಹಾಕಲಿ, ಮೋದಿ ಮಧ್ಯಪ್ರವೇಶಿಸಲಿ: ದೇವೇಗೌಡ
ಸುಪ್ರೀಂ ಕೋರ್ಟ್ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ಸಂಬಂಧ ಜಲ ಶಕ್ತಿ ಇಲಾಖೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಇದಕ್ಕೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್ನಿಂದ ರಾಜಕೀಯ: ಸಿದ್ದರಾಮಯ್ಯ ಆರೋಪ
4. ಏಕಕಾಲಕ್ಕೆ ರಾಜ್ಯಾದ್ಯಂತ ದಾಖಲೆ ಬರೆದ ಜನತಾ ದರ್ಶನ: ಸಿದ್ದರಾಮಯ್ಯ ಚಿಂತನೆ ಕ್ಲಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಏಷ್ಯನ್ ಗೇಮ್ಸ್: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ; ಲಂಕಾ ವಿರುದ್ಧ ರೋಚಕ ಜಯ
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್(Asian Games 2023) ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಪ್ರಯತ್ನದಲ್ಲೇ ಐತಿಹಾಸಿಕ ಚಿನ್ನದ ಪದಕ ಜಯಿಸಿ ಮರೆದಾಡಿದೆ. ಅಲ್ಪ ಮೊತ್ತದ ಪಂದ್ಯದಲ್ಲಿ ಲಂಕಾ ವಿರುದ್ಧ ರೋಚಕ 19 ರನ್ಗಳ ಗೆಲುವು ಸಾಧಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ: ಎಲ್ಲರೂ ಬನ್ನಿ ಎಂದು ಆಹ್ವಾನಿಸಿದ ಪ್ರಧಾನಿ ಮೋದಿ
ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಂದು ಒಂದು ಗಂಟೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಎಲ್ಲ ಗ್ಯಾರಂಟಿಗಳಿಗಳ ಜಾರಿಗೂ ಮೋದಿಯೇ ಗ್ಯಾರಂಟಿ; ಪ್ರಧಾನಿ ಅಬ್ಬರದ ಭಾಷಣ
7. ಭಾರತ ವಿಭಜಿಸಿ ಹಲವು ದೇಶ ಸೃಷ್ಟಿಸುವುದು ಖಲಿಸ್ತಾನಿ ಉಗ್ರ ಪನ್ನುನ್ ಗುರಿ; ಷಡ್ಯಂತ್ರ ಬಯಲು
ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ತಿಗಳನ್ನು ಎನ್ಐಎ ಜಪ್ತಿ ಮಾಡಿದ ಬೆನ್ನಲ್ಲೇ ಉಗ್ರನ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ. “ಭಾರತವನ್ನು ವಿಭಜಿಸಿ, ಹಲವು ದೇಶಗಳನ್ನಾಗಿ ಸೃಷ್ಟಿಸುವುದು ಗುರುಪತ್ವಂತ್ ಸಿಂಗ್ ಪನ್ನುನ್ ಗುರಿಯಾಗಿದೆ” ಎನ್ನುವುದೇ ಆ ಮಾಹಿತಿ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಬಿಜೆಪಿ ಜತೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ
ತಮ್ಮ ಪಕ್ಷದ ನಾಯಕರನ್ನು ಅವಮಾನಿಸುತ್ತಿರುವ ಬಿಜೆಪಿ ಜತೆಗೆ ಸಖ್ಯವನ್ನು ಕಡಿದುಕೊಂಡಿರುವುದಾಗಿ ಇತ್ತೀಚೆಗಷ್ಟೇ ಎಐಎಡಿಎಂಕೆ ನಾಯಕರೊಬ್ಬರು ಹೇಳಿದ್ದರು. ಇದೀಗ, ಬಿಜೆಪಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಎಐಎಡಿಎಂಕೆ ಅಧಿಕೃತವಾಗಿ ಘೋಷಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. 9 ತಿಂಗಳೊಳಗೆ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್; ಜವಾನ್ ಹೊಸ ದಾಖಲೆ
ಶಾರುಖ್ ಖಾನ್ ಪ್ರಧಾನ ಪಾತ್ರದಲ್ಲಿರುವ ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection).ಪಠಾಣ್ ಸಿನಿಮಾವೂ 1000 ಕೋಟಿ ದಾಟಿತ್ತು. ಹೀಗಾಗಿ ಒಂಬತ್ತು ತಿಂಗಳ ಅವಧಿಯಲ್ಲಿ ಶಾರುಖ್ 2000 ಕೋಟಿ ಕೊಳ್ಳೆ ಹೊಡೆದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. 100 ಫ್ಯಾನ್ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ದೇಶಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿ(Ganesh Chaturthi) ಹಬ್ಬವನ್ನು ಹ್ಯಾವಲ್ಸ್ ಕಂಪೆನಿ(Havells) ಕ್ರಿಯಾತ್ಮಕವಾಗಿ ಬರಮಾಡಿಕೊಂಡಿದೆ. 100 ಫ್ಯಾನ್ಗಳನ್ನು ಬಳಸಿಕೊಂಡು ಗಣೇಶನನ್ನು ರಚಿಸಿ ಗಮನ ಸೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
-
ವಿದೇಶ18 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ16 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ11 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ12 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema15 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ19 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ16 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ8 hours ago
Lawyer Sara Sunny: ಸುಪ್ರೀಂ ಕೋರ್ಟ್ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ