Site icon Vistara News

ಕೆಂಗೇರಿ ಬಳಿ ಮೆಟ್ರೊ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್‌, ನಾಲ್ಕು ಮಂದಿಗೆ ಗಾಯ

ಬೆಂಗಳುರು: ಮೈಸೂರಿನಿಂದ ಬೆಂಗೂರು ಕಡೆಗೆ ಬರುತ್ತಿದ್ದ ಸರಕಾರಿ ಬಸ್ಸೊಂದು ಸೋಮವಾರ ಮುಂಜಾನೆ ಕೆಂಗೇರಿ ಬಳಿ ಮೆಟ್ರೋ ಪಿಲ್ಲರ್‌ಗೆ ಡಿಕ್ಕಿ ಹೊಡೆದು 25 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕೆಂಗೇರಿಯ ಭಾರತ್ ಪೆಟ್ರೋಲಿಯಂ ಬಳಿ ಈ ಘಟನೆ ನಡೆದಿದೆ. ಬಸ್ಸು ವೇಗವಾಗಿ ಧಾವಿಸುವ ವೇಳೆ ರಸ್ತೆಯ ಅಂಚಿಗೆ ಬಂದಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಹೇಳಲಾಗಿದೆ.

ರಾತ್ರಿ ಮಡಿಕೇರಿಯಿಂದ ಹೊರಟಿದ್ದ ಈ ಬಸ್‌ ಮೈಸೂರು ಮೂಲಕ ಬೆಂಗಳೂರಿಗೆ ಬರುತ್ತಿತ್ತು. ಬಸ್ಸಿನಲ್ಲಿ ಪ್ರಯಾಣಿಕರಿದ್ದರು. ಅವರಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಉಳಿದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ. ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಇದನ್ನೈನೂ ಓದಿ: ಸ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರ ಸಾವು – 

Exit mobile version