KSRTC MD negotiation meeting successful, Transport employees call off strikeKSRTC Employees Strike: ಕೆಎಸ್‌ಆರ್‌ಟಿಸಿ ಎಂಡಿ ಸಂಧಾನ ಸಫಲ; ಸಾರಿಗೆ ನೌಕರರ ಮುಷ್ಕರ ವಾಪಸ್ - Vistara News

ಕರ್ನಾಟಕ

KSRTC Employees Strike: ಕೆಎಸ್‌ಆರ್‌ಟಿಸಿ ಎಂಡಿ ಸಂಧಾನ ಸಫಲ; ಸಾರಿಗೆ ನೌಕರರ ಮುಷ್ಕರ ವಾಪಸ್

KSRTC Employees Strike: ಮಾ.21ರಿಂದ ಮುಷ್ಕರ ನಡೆಸುವುದಾಗಿ ಕೆಎಸ್‌ಆರ್‌ಟಿಸಿ ನೌಕರರ ಸಂಘಟನೆ ಅಧ್ಯಕ್ಷ ಅನಂತ ಸುಬ್ಬರಾವ್ ಎಚ್ಚರಿಕೆ ನೀಡಿದ್ದರು. ಸಂಧಾನ ಸಭೆ ಸಫಲವಾದ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್‌ ಪಡೆದಿದ್ದಾರೆ.

VISTARANEWS.COM


on

KSRTC MD negotiation meeting successful, Transport employees call off strike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಜತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ(ಎಂಡಿ) ಅನ್ಬುಕುಮಾರ್ ಅವರು ನಡೆಸಿದ ಸಂಧಾನ ಸಭೆ ಸಫಲವಾಗಿದ್ದು, ಮಾ.21ರಿಂದ ಕರೆದಿದ್ದ ಮುಷ್ಕರವನ್ನು ಸಾರಿಗೆ ನೌಕರರ ಸಂಘ ವಾಪಸ್ ಪಡೆದಿ‌ದೆ. ಯುಗಾದಿ ಸಂದರ್ಭದಲ್ಲಿ ನೌಕರರು ಕೊನೆಗೂ ಮುಷ್ಕರ (KSRTC Employees Strike) ವಾಪಸ್ ಪಡೆದಿರುವುದರಿಂದ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟಂತಾಗಿದೆ.

ಸಾರಿಗೆ ನೌಕರರಿಗೆ ಶೇ.15 ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಾ.17ರಂದು ಆದೇಶ ಹೊರಡಿಸಿತ್ತು. ಆದರೆ, ಶೇ. 20 ವೇತನ ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ ಮಾ.21ರಿಂದ ಮುಷ್ಕರ ನಡೆಸುವುದಾಗಿ ಕೆಎಸ್‌ಆರ್‌ಟಿಸಿ ನೌಕರರ ಸಂಘಟನೆ ಅಧ್ಯಕ್ಷ ಅನಂತ ಸುಬ್ಬರಾವ್ ಎಚ್ಚರಿಕೆ ನೀಡಿದ್ದರು. ಆದರೆ, ಶನಿವಾರ ಕೆಎಸ್‌ಆರ್‌ಟಿಸಿ ಎಂಡಿ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸರ್ಕಾರದಿಂದ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಸಾರಿಗೆ ನೌಕರರು ವಾಪಸ್‌ ಪಡೆದಿದ್ದಾರೆ .

ಸರ್ಕಾರ, ನೌಕರರಿಗೆ 2020ರ ಜನವರಿ 1ರಿಂದ ಹೆಚ್ಚುವರಿ ವೇತನ ನೀಡುವ ಭರವಸೆ ನೀಡಿದೆ. ಹಾಗೆಯೇ ಮುಷ್ಕರದ ವೇಳೆ ಮಾಡಿದ್ದ ನೌಕರರ ವಜಾ ಆದೇಶ ಹಿಂಪಡೆಯುವುದು ಹಾಗೂ ವಾರ್ಷಿಕ ವೇತನ ಬಡ್ತಿ ಹೆಚ್ಚಳಕ್ಕೂ ಸರ್ಕಾರ ಸಮ್ಮತಿಸಿದೆ. ಹೀಗಾಗಿ ಸೋಮವಾರ (ಮಾ.13) ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಅನಂತ್ ಸುಬ್ಬರಾವ್ ಬಣ ಭೇಟಿ ಮಾಡಿ, ಈಗಾಗಲೇ ಮಾಡಿರುವ ಆದೇಶಗಳನ್ನು ಕಾರ್ಯರೂಪಕ್ಕೆ ತರುವಂತೆ ಮನವಿ ಮಾಡಲಿದ್ದಾರೆ.

ಇದನ್ನೂ ಓದಿ | Male Mahadeshwara Statue: 108 ಅಡಿ ಎತ್ತರದ ಮಲೆ ಮಹದೇಶ್ವರಸ್ವಾಮಿ ಭವ್ಯ ಪ್ರತಿಮೆ ಲೋಕಾರ್ಪಣೆ ಮಾಡಿದ ಸಿಎಂ

ಬೇಡಿಕೆ ಈಡೇರಿಸದಿದ್ದರೆ ಮುಷ್ಕರವನ್ನು ಹಿಂಪಡೆಯುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘಟನೆ ಅಧ್ಯಕ್ಷ ಅನಂತ ಸುಬ್ಬರಾವ್ ಹಾಗೂ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಪ್ರತ್ಯೇಕವಾಗಿ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದ್ದರು. ಅನಂತ ಸುಬ್ಬರಾವ್ ಬಣದಿಂದ ಮಾ.21 ಹಾಗೂ ಆರ್. ಚಂದ್ರಶೇಖರ್ ಬಣದಿಂದ ಮಾ.24ರಿಂದ ಮುಷ್ಕರಕ್ಕೆ ಕರೆ ನೀಡಲಾಗಿತ್ತು.

ಮುಷ್ಕರ ಹಿಂಪಡೆದ ನಿರ್ಧಾರಕ್ಕೆ ಚಂದ್ರಶೇಖರ್ ಬಣ ಖಂಡನೆ

ಮುಷ್ಕರ ವಾಪಸ್‌ ಬಗ್ಗೆ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಅಧ್ಯಕ್ಷ ಆರ್. ಚಂದ್ರಶೇಖರ್ ಪ್ರತಿಕ್ರಿಯಿಸಿ, ಸರ್ಕಾರ ಹೊರಡಿಸಿದ ಆದೇಶ ಕೇವಲ‌ ಮೂಲವೇತನಕ್ಕೆ ಶೇ.15 ಕೊಡುವ ವೇತನಕ್ಕೆ ಸಂಬಂಧಿಸಿದೆ. ಇವತ್ತು ಜಂಟಿ ಕ್ರಿಯಾ ಸಮಿತಿಯವರು ಎಂಡಿ ಜತೆ ಮೀಟಿಂಗ್ ನಡೆಸಿದ್ದಾರೆ. ಅವರು ಯಾವ ಒಪ್ಪಂದ ಮಾಡಿಕೊಂಡು ಮುಷ್ಕರ ವಾಪಸ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಇದರ ಉದ್ದೇಶ ಮಾ. 24ರಂದು ನಡೆಯುವ ಸಾರಿಗೆ ಮುಷ್ಕರವನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಆದರೆ ನಮ್ಮ ಬೇಡಿಕೆಗಳು ಈಡೇರಿಲ್ಲವೆಂದರೆ ಮಾರ್ಚ್ 24 ರಿಂದ ಸಾರಿಗೆ ನೌಕರರ ಮುಷ್ಕರ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಬೇಡಿಕೆ ಏನಿತ್ತು?
• ಮೂಲ ವೇತನವನ್ನು ಶೇ. 25ರಷ್ಟು ಪರಿಷ್ಕರಣೆ ಮಾಡಬೇಕು
• ಬಾಟಾ/ಭತ್ಯೆಯನ್ನು ಐದು ಪಟ್ಟು ಹೆಚ್ಚಿಸಬೇಕು
• ಏಪ್ರಿಲ್ 2011 ರಂದು ವಜಾಗೊಂಡ ಸಿಬ್ಬಂದಿಯ ಮರುನೇಮಕ ಮಾಡಬೇಕು
• ಸಿಬ್ಬಂದಿ ಮೇಲಿನ FIR ರದ್ದು ಮಾಡಬೇಕು
• ಮುಷ್ಕರದ ಸಮಯದಲ್ಲಿ ವರ್ಗಾವಣೆಯಾದ ನೌಕರರ ಮರು ನಿಯೋಜನೆ ಮಾಡಿಕೊಳ್ಳಬೇಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Karnataka Assembly Live: ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲು ಕಡ್ಡಾಯ ವಿಧೇಯಕದ ಕುರಿತ ಚರ್ಚೆಯೂ ಭುಗಿಲೆದ್ದಿದೆ. ವಾಲ್ಮೀಕಿ, ಮುಡಾ ಹಗರಣಗಳಿಂದ ಗಮನವನ್ನು ಬೇರೆಡೆಗೆ ಹರಿಸಲು ಸಿದ್ದರಾಮಯ್ಯ ಸರಕಾರ ಈ ಭಾವನಾತ್ಮಕ ವಿಷಯ ಎತ್ತಿಹಾಕಿದೆ ಎಂಬ ಆರೋಪ ಪ್ರತಿಪಕ್ಷಗಳದ್ದಾಗಿದೆ. ಪ್ರತಿಪಕ್ಷಗಳ ಆ ಆರೋಪದ ಬಿಸಿ ಕಲಾಪದಲ್ಲೂ ಪ್ರತಿಧ್ವನಿಸಬಹುದು.

VISTARANEWS.COM


on

CM Siddaramaiah and R Ashok karnataka assembly live
Koo

ಬೆಂಗಳೂರು: ವಿಧಾನ ಮಂಡಲದ ಮೂರನೇ ದಿನದ ಕಲಾಪ (Karnataka Assembly Live) ಗದ್ದಲದಲ್ಲೇ ಮುಗಿದಿದ್ದು, ನಾಲ್ಕನೇ ದಿನವೂ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಲು ಪ್ರತಿಪಕ್ಷಗಳು (Opposition parties) ಮುಂದಾಗಿವೆ. ವಾಲ್ಮೀಕಿ ನಿಗಮ ಹಗರಣದ (Valmiki Corporation Scam) ಕುರಿತ ವಿಪಕ್ಷಗಳ ಆರೋಪಗಳಿಗೆ ನಿನ್ನೆ ಉತ್ತರ ನೀಡಲು ಸಿಎಂ ಸಿದ್ದರಾಮಯ್ಯ (CM Siddaramaiah) ಆರಂಭಿಸಿದ್ದು, ಇಂದು ಕೂಡ ಮುಂದುವರಿಸಲಿದ್ದಾರೆ.

ನಿನ್ನೆ ಸಿಎಂ ವಿಧಾನಸಭೆ (Vidhan Sabha) ಕಲಾಪದಲ್ಲಿ ಉತ್ತರ ನೀಡಲು ಆರಂಭಿಸುತ್ತಿದ್ದಂತೆ ಆಕ್ಷೇಪ ತೆಗೆದಿದ್ದ ಪ್ರತಿಪಕ್ಷ ಬಿಜೆಪಿ ಸದಸ್ಯರು ಗದ್ದಲ ಆರಂಭಿಸಿದ್ದರು. ವಾಲ್ಮಿಕಿ ನಿಗಮದ ಹಗರಣ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್​ ಎಂಬವರ ಡೆತ್ ನೋಟ್​ ಓದುವಾಗ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನೇ ಬಿಟ್ಟಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ (R Ashok) ಆರೋಪಿಸಿದರು. ಬಳಿಕ ಬಿಜೆಪಿ ಹಾಗೂ ಜೆಡಿಎಸ್​ ಕಾರ್ಯಕರ್ತರು ಸದನದ ಬಾವಿಗೆ ಇಳಿದ ಪ್ರತಿಭಟನೆ ನಡೆಸಿದರು.

ಸಿಎಂ ಸಿದ್ದರಾಮಯ್ಯ ಅವರು ಉತ್ತರ ಕೊಡುವಾಗ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿರುವ ಹಿನ್ನೆಲೆಯಲ್ಲಿಯ ಸ್ಪೀಕರ್​ ಯುಟಿ ಖಾದರ್ (Speaker UT Khader) ಸಂಧಾನ ಸಭೆ ಕರೆದರು. ಆಡಳಿತ ಪಕ್ಷದ ಕಡೆಯಿಂದ ಸಿದ್ದರಾಮಯ್ಯ, ಎಚ್ ಕೆ ಪಾಟೀಲ್, ಜಾರ್ಜ್ ಹಾಗೂ ವಿಪಕ್ಷಗಳಿಂದ ಆರ್ ಆಶೋಕ್, ವಿಜೇಯೇಂದ್ರ, ಸುರೇಶ್ ಬಾಬು ಇದ್ದರು. ಸಂಧಾನ ಸಭೆ ನಡೆಸಿದ ಬಳಿಕವೂ ವಿಪಕ್ಷಗಳ ಸದಸ್ಯರು ತಮ್ಮ ಹೋರಾಟ ಮುಂದುವರಿಸಿದ ಕಾರಣ ಕಲಾಪ ಬಹುತೇಕ ಗದ್ದಲದಲ್ಲಿಯೇ ಅಂತ್ಯಗೊಂಡಿತು.

ನಿಯಮ‌ 69ರ ಅಡಿಯಲ್ಲಿ ನಡೆದ ವಾಲ್ಮೀಕಿ ಅಭಿವೃದ್ಧಿ ನಿಗಮ ಕುರಿತಾದ ಚರ್ಚೆಗೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ನೀಡಿದ್ದಾರೆ. ಕಾಂಗ್ರೆಸ್ ಇರುವವರೆಗೂ, ನಾನು ಇರುವವರೆಗೂ ಸಾಮಾಜಿಕ ನ್ಯಾಯಕ್ಕೆ ನಾವು ಬದ್ದರು. ನಿಮ್ಮಿಂದ ಸಾಮಾಜಿಕ ನ್ಯಾಯದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಇದಕ್ಕೂ ಹಿಂದಿನ ದಿನ ಮಾತನಾಡಿದ್ದ ಪ್ರತಿಪಕ್ಷ ನಾಯಕ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಈ ನಡುವೆ, ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲು ಕಡ್ಡಾಯ ವಿಧೇಯಕದ ಕುರಿತ ಚರ್ಚೆಯೂ ಭುಗಿಲೆದ್ದಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಗೆ ಇನ್ನೂ ಪ್ರತಿಪಕ್ಷ ಅವಕಾಶ ಕೇಳಿಲ್ಲ ಹಾಗೂ ಸರಕಾರವೂ ಅದನ್ನು ಪ್ರಸ್ತಾಪಿಸಿಲ್ಲ. ಆದರೆ ವಾಲ್ಮೀಕಿ, ಮುಡಾ ಹಗರಣಗಳಿಂದ ಗಮನವನ್ನು ಬೇರೆಡೆಗೆ ಹರಿಸಲು ಸಿದ್ದರಾಮಯ್ಯ ಸರಕಾರ ಈ ಭಾವನಾತ್ಮಕ ವಿಷಯ ಎತ್ತಿಹಾಕಿದೆ ಎಂಬ ಆರೋಪ ಪ್ರತಿಪಕ್ಷಗಳದ್ದಾಗಿದೆ. ಪ್ರತಿಪಕ್ಷಗಳ ಆ ಆರೋಪದ ಬಿಸಿ ಕಲಾಪದಲ್ಲೂ ಪ್ರತಿಧ್ವನಿಸಬಹುದು.

ಇದಕ್ಕೂ ಮುನ್ನ, ಜಿಟಿ ಮಾಲ್‌ನಲ್ಲಿ ನಡೆದ ರೈತನಿಗೆ ಅವಮಾನ ಸಂಗತಿಯೂ ಸದನದಲ್ಲಿ ಪ್ರಸ್ತಾವವಾಗಿತ್ತು. ಈ ಘಟನೆಯ ಕುರಿತು ಸರ್ಕಾರದ ನಿಲುವು ಏನು ಎಂದು ಸ್ಪೀಕರ್‌ ಪ್ರಶ್ನಿಸಿದ್ದರು. ಮಾಲ್‌ ಅನ್ನು ಏಳು ದಿನ ಮುಚ್ಚಿಸಲಾಗುವುದು ಎಂದು ನಗರಾಭೀವೃದ್ಧಿ ಸಚಿವ ಬೈರತಿ ಸುರೇಶ್‌ ಹೇಳಿದ್ದರು. ಅದರಂತೆ ಇಂದಿನಿಂದ ಜಿಟಿ ಮಾಲ್‌ ಮುಚ್ಚಿ ಸೀಲ್‌ ಮಾಡಲಾಗಿದೆ.

ಇದನ್ನೂ ಓದಿ: Karnataka Assembly Live: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ 7 ದಿನ ಬಂದ್: ವಿಧಾನಸಭೆಯಲ್ಲಿ ಘೋಷಣೆ, ವಿಸ್ತಾರ್‌ ನ್ಯೂಸ್‌ ಬಿಗ್‌ ಇಂಪ್ಯಾಕ್ಟ್

Continue Reading

ಕ್ರೈಂ

Horrible Accident: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

Horrible Accident: ಮೃತ ಯುವಕರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದೆ. ಮೂವರೂ ಗಂಗಾವತಿಯವರಾಗಿದ್ದಾರೆ. ಇವರು ಕುಡಿದ ಮತ್ತಿನಲ್ಲಿ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು ಎಂಬುದಕ್ಕೆ ಸ್ಥಳದಲ್ಲಿದ್ದ ಮದ್ಯದ ಬಾಟಲಿಗಳು ಸಾಕ್ಷಿಯಾಗಿವೆ.

VISTARANEWS.COM


on

railway track horrible accident
Koo

ಕೊಪ್ಪಳ: ರೇಲ್ವೆ ಟ್ರ್ಯಾಕ್ (Railway Track) ಮೇಲೆ ಮದ್ಯ ಸೇವಿಸಿ (Liquor) ಅಲ್ಲೇ ಮಲಗಿದ್ದ ಯುವಕರ‌ ಮೇಲೆ ರೈಲು (Train Accident) ಹರಿದಿದ್ದು, ಸ್ಥಳದಲ್ಲಿಯೇ ಮೂರು ಜನ ಯುವಕರು ಸಾವಿಗೀಡಾಗಿದ್ದಾರೆ. ಈ ಘೋರ ದುರಂತ (Horrible Accident) ಕೊಪ್ಪಳ ಜಿಲ್ಲೆ (Koppala news) ಗಂಗಾವತಿ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತ ಯುವಕರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದೆ. ಮೂವರೂ ಗಂಗಾವತಿಯವರಾಗಿದ್ದಾರೆ. ಇವರು ಕುಡಿದ ಮತ್ತಿನಲ್ಲಿ ರೇಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದರು ಎಂಬುದಕ್ಕೆ ಸ್ಥಳದಲ್ಲಿದ್ದ ಮದ್ಯದ ಬಾಟಲಿಗಳು ಸಾಕ್ಷಿಯಾಗಿವೆ. ರೈಲು ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿತ್ತು. ಮದ್ಯದ ಅಮಲಿನಲ್ಲಿ ರೈಲಿನ ಆಗಮನ ಯುವಕರಿಗೆ ಗೊತ್ತಾಗಿರಲಿಕ್ಕಿಲ್ಲ ಎನ್ನಲಾಗಿದೆ. ದೇಹಗಳು ಛಿದ್ರಛಿದ್ರವಾಗಿವೆ. ಗದಗ ರೇಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಅನಾಹುತ; ಮನೆಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

ಹಾವೇರಿ: ರಾಜ್ಯದಲ್ಲಿ ಮಳೆ ಅನಾಹುತ ಸೃಷ್ಟಿಸುತ್ತಿದೆ. ಹಾವೇರಿಯಲ್ಲಿ (Haveri news) ಮಳೆಗೆ ಒದ್ದೆಯಾದ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ದುರಂತ ಸಂಭವಿಸಿದೆ.

ಅಮೂಲ್ಯ ಹಾಗೂ ಅನನ್ಯ ಮೃತಪಟ್ಟ ಎರಡು 2 ವರ್ಷದ ಅವಳಿಜವಳಿ ಕಂದಮ್ಮಗಳಾಗಿವೆ. ಇವರ ತಾಯಿ ಚೆನ್ನಮ್ಮ (30) ಕೂಡ ಮೃತಪಟ್ಟಿದ್ದಾರೆ. ಮನೆಯೊಳಗಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆ ಬೀಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ರಕ್ಷಣೆಗೆ ಧಾವಿಸಿದ್ದು, ಮೃತ ದೇಹಗಳನ್ನ ಹೊರ ತೆಗೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಾಂಜಾ ನಶೆಯಲ್ಲಿ ಬಾಲಕಿಯರನ್ನು ಬೆದರಿಸಿದ ಪುಂಡರು

ಬೆಂಗಳೂರು: ಕಾರಿನಲ್ಲಿ ಬಂದ ಮದ್ಯ ಹಾಗೂ ಗಾಂಜಾ ಮತ್ತಿನಲ್ಲಿ ಬಂದ ಪುಂಡರ ಗುಂಪೊಂದು, ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ (Bangalore News). ಇನ್ನೋವಾ ಕಾರಿನಲ್ಲಿ ಬಂದಿದ್ದ ಪುಂಡರು ಕೃತ್ಯ ಎಸಗಿದ್ದು ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀರ ಮೇಲೂ ದಾಳಿ ಮಾಡಿದ್ದಾರೆ. ಬೆಂಗಳೂರಿನ ಎಚ್​ಎಎಲ್ ಬಳಿಯಿರುವ ಇರುವ ಖಾಸಗಿ ಶಾಲೆಯ ಮಕ್ಕಳ ಜೊತೆ ಅಸಭ್ಯ ವರ್ತನೆ ತೋರಲಾಗಿದೆ.

ಶಾಲಾ ಮಕ್ಕಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರನ್ನು ಫುಟ್​ಪಾತ್ ಮೇಲೆ ಹತ್ತಿಸಿದ್ದರು. ಬಳಿಕ ಮಕ್ಕಳಿಗೆ ಹೆದರಿಸಲು ಯತ್ನಿಸಿದ್ದ. ಈ ವೇಳೆ ಕಾರಿನಲ್ಲಿದ್ದ ಒಬ್ಬ ನಶೆಯಲ್ಲಿ ತೂರಾಡಿ ಕೆಳಗೆ ಬಿದ್ದಿದ್ದಾನೆ. ಅಲ್ಲದೆ ಮಕ್ಕಳ ಮುಂದೆಯೇ ಅಸಭ್ಯ ವರ್ತನೆ ತೋರಿದ್ದಾನೆ. ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಅವರ ಮೇಲೆ ದರ್ಪ ತೋರಿದ್ದಾರೆ. ಪ್ರಶ್ನೆ ಮಾಡಿದ ಸಾರ್ವಜನಿಕನ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದರು. ತಕ್ಷಣ ಪೊಲೀಸ್​ ಕಂಟ್ರೋಲ್ ರೂಂಗೆ ಕರೆ ಮಾಡಿದ್ದ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹೊಯ್ಸಳ ವಾಹನ ಬರುವಷ್ಟರಲ್ಲಿ ಕಾರಿನಲ್ಲಿದ್ದವು ಪರಾರಿಯಾಗಿದ್ದಾರೆ. ಗಾಂಜಾ ನಶೆ ಹಾಗು ಕುಡಿತದ ಅಮಲಿನಲ್ಲಿ ಕೃತ್ಯ ಎಸಗಿರುವ ಸಾಧ್ಯತೆ ಎಂದು ಸ್ಥಳೀಯರ ಶಂಕಿಸಿದ್ದಾರೆ. ಎಚ್​​ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: GT World Mall : ಜಿಟಿ ಮಾಲ್​ ಏಳು ದಿನಗಳ ಕಾಲ ಬಂದ್​, ಮಾಲೀಕರಿಂದಲೇ ಸ್ವಯಂಪ್ರೇರಿತ ಕ್ರಮ

Continue Reading

ವೈರಲ್ ನ್ಯೂಸ್

Viral Video: ತಿಂಗಳಲ್ಲಿ 35 ಲಕ್ಷ ರೂ. ಗಳಿಸಿದ ಬೆಂಗಳೂರಿನ 22 ವರ್ಷದ ಯುವಕ; ಹೇಗೆ?

ಗೋವಾದ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದ ಬೆಂಗಳೂರಿನ 22 ವರ್ಷದ ಯುವಕ ಇಶಾನ್ ಶರ್ಮಾ ಸಣ್ಣ ವಯಸ್ಸಿನಲ್ಲಿ ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಶಿಕ್ಷಣವನ್ನು ಅರ್ಧದಲ್ಲಿ ಕೈಬಿಟ್ಟು ಕಳೆದ ತಿಂಗಳು ಯೂಟ್ಯೂಬ್ ವಿಡಿಯೊ ಮೂಲಕ 35 ಲಕ್ಷ ರೂ. ಗಳಿಸಿರುವುದಾಗಿ ಬೆಂಗಳೂರಿನ (bengaluru) 22 ವರ್ಷದ ಯುವಕ ಇಶಾನ್ ಶರ್ಮಾ (Ishan Sharma) ಇತ್ತೀಚೆಗೆ ಉದ್ಯಮಿಗಳಾದ ಅಶ್ನೀರ್ ಗ್ರೋವರ್ (Ashneer Grover), ಆಶಿಶ್ ಮೊಹಾಪಾತ್ರ (Asish Mohapatra), ಸಾರ್ಥಕ್ ಅಹುಜಾ (Sarthak Ahuja) ಮತ್ತು ಸಂಜೀವ್ ಬಿಖ್‌ಚಂದಾನಿ (Sanjeev Bikhchandani) ಅವರೊಂದಿಗೆ ಪಾಡ್‌ಕಾಸ್ಟ್ ನಲ್ಲಿ ತಿಳಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ.

ಗೋವಾ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದು ಸಣ್ಣ ವಯಸ್ಸಿನಲ್ಲಿ ಇಷ್ಟು ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇಶಾನ್ ಅವರು ಕಳೆದ ತಿಂಗಳು 35 ಲಕ್ಷ ರೂ. ಗಳಿಸಿದ್ದಾರೆ. ಆದರೆ ಅವರು, ಇದು ಸಣ್ಣ ಮೊತ್ತ. ಹೊರಗೆ ಹೋಗಿ ಅಷ್ಟು ಸಣ್ಣ ಮೊತ್ತದಿಂದ ಬಿಸಿನೆಸ್ ಪ್ರಾರಂಭಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ಆದರೆ ಅವರ ಈ ಹೇಳಿಕೆಗೆ ಅಶ್ನೀರ್ ಗ್ರೋವರ್, ಆಸಿಶ್ ಮೊಹಾಪಾತ್ರ, ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಆಶ್ಚರ್ಯಕರ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಇಶಾನ್ ಶರ್ಮಾ ಅವರು ಇಷ್ಟೊಂದು ದೊಡ್ಡ ಮೊತ್ತವನ್ನು ಗಳಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಆಗ ಅಶ್ನೀರ್ ಗ್ರೋವರ್, ನಾವು ನಿಮ್ಮ ಕಥೆಯನ್ನು ಕೇಳಬೇಕು ಎಂದು ಆಸಕ್ತಿ ತೋರುತ್ತಾರೆ. ಅಲ್ಲದೇ ತಾವು 22 ವರ್ಷದವರಾಗಿದ್ದಾಗ ಏನನ್ನೂ ಗಳಿಸುತ್ತಿರಲಿಲ್ಲ ಎಂದು ಬಹಿರಂಗಪಡಿಸಿದರು.

Viral Video


ಮತ್ತೊಂದೆಡೆ ಆಶಿಶ್ ಮೊಹಾಪಾತ್ರ ಅವರು ತಿಂಗಳಿಗೆ 35,000 ರೂ. ಪಡೆದಿದ್ದರು ಎಂದು ಹೇಳಿದರೆ ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಅವರು ತಿಂಗಳಿಗೆ ಕ್ರಮವಾಗಿ 5,000 ರೂ. ಮತ್ತು 1,500 ರೂ. ಗಳಿಸುತ್ತಿರುವುದಾಗಿ ತಿಳಿಸಿದರು.

ಮಾರ್ಕೆಟಿಂಗ್ ಏಜೆನ್ಸಿ ಮಾರ್ಕಿಟ್‌ಅಪ್ ಅನ್ನು ತನ್ನ ಕಾಲೇಜ್ ಮೇಟ್ ಸರನ್ಶ್ ಆನಂದ್ ಅವರೊಂದಿಗೆ ಸ್ಥಾಪಿಸಿರುವ ಇಶಾನ್ ಶರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸುಮಾರು 2 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಈ ಮೂಲಕ ಅವರು ಭಾರೀ ಹಣ ಗಳಿಸಿದ್ದಾರೆ.

ಇವರ ಈ ವಿಡಿಯೋ ವೈರಲ್ ಆದ ಬಳಿಕ 80,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಸಾಕಷ್ಟು ಲೈಕ್ ಗಳನ್ನು ಗಳಿಸಿದೆ.


ಇದಕ್ಕೆ ಹಲವು ಮಂದಿ ಪ್ರತಿಕ್ರಿಯಿಸಿದ್ದು, ನಾನು 23 ವರ್ಷ ವಯಸ್ಸಿನವನಾಗಿದ್ದರೂ ಒಂದು ಪೈಸೆಯನ್ನೂ ಗಳಿಸುತ್ತಿಲ್ಲ. ತಂದೆಯ ಮೇಲೆ ಅವಲಂಬಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

ಮತ್ತೊಬ್ಬರು ಕಾಮೆಂಟ್ ನಲ್ಲಿ ತಿಂಗಳಿಗೆ 35 ಲಕ್ಷ ರೂ. ಅನ್ನು ಒಂದು ಸಣ್ಣ ಮೊತ್ತ ಎಂದು ಹೇಳುತ್ತಿದ್ದಾರಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನನಗೆ ತಿಳಿದಿರುವ ಅತ್ಯಂತ ಶ್ರಮಜೀವಿಗಳಲ್ಲಿ ಅವರು ಒಬ್ಬರು ಎಂದು ಇನ್ನೊಬ್ಬರು ಕಾಮೆಂಟ್ ನಲ್ಲಿ ಹೇಳಿದ್ದಾರೆ.

Continue Reading

ಬೆಂಗಳೂರು

Lokayukta Raid: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

Lokayukta Raid: ರಾಜ್ಯದ ಒಟ್ಟು 54 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, 100 ಜನ ಅಧಿಕಾರಿಗಳು ಸ್ಥಳೀಯ ಪೊಲೀಸರನ್ನು ಬಳಸಿಕೊಂಡು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಲೋಕಾಯುಕ್ತದಲ್ಲಿ 12 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು 3 ಪ್ರಕರಣ, ಮೈಸೂರು 2, ಶಿವಮೊಗ್ಗ 2, ಯಾದಗಿರಿ 1 ಸೇರಿ ಒಟ್ಟು 12 ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ದಾಳಿಗಳು ನಡೆದಿವೆ.

VISTARANEWS.COM


on

lokayukta raid mysore
ಮೈಸೂರಿನ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಚೇತನ್ ಮನೆ
Koo

ಬೆಂಗಳೂರು: ಇಂದು ಮುಂಜಾನೆ ರಾಜ್ಯದಾದ್ಯಂತ ಲೋಕಾಯುಕ್ತ ಅಧಿಕಾರಿಗಳು (Lokayukta Raid) ಭ್ರಷ್ಟಾಚಾರ ಆರೋಪ (Corruption) ದೂರು ದಾಖಲಾಗಿರುವ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ನಿದ್ರೆಯಿಂದ ಏಳುವ ಮೊದಲೇ ದಾಳಿ ನಡೆದಿದೆ.

ರಾಜ್ಯದ ಒಟ್ಟು 54 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದು, 100 ಜನ ಅಧಿಕಾರಿಗಳು ಸ್ಥಳೀಯ ಪೊಲೀಸರನ್ನು ಬಳಸಿಕೊಂಡು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ. ಲೋಕಾಯುಕ್ತದಲ್ಲಿ 12 ಭ್ರಷ್ಟಾಚಾರ ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು 3 ಪ್ರಕರಣ, ಮೈಸೂರು 2, ಶಿವಮೊಗ್ಗ 2, ಯಾದಗಿರಿ 1 ಸೇರಿ ಒಟ್ಟು 12 ಪ್ರಕರಣ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ದಾಳಿಗಳು ನಡೆದಿವೆ.

ಮೈಸೂರು: ಮೈಸೂರಿನಲ್ಲಿ ಕಾರ್ಮಿಕ ಇಲಾಖೆ ಇನ್ಸ್‌ಪೆಕ್ಟರ್ ಚೇತನ್ ಮನೆ ಮೇಲೆ ಲೋಕಾಯುಕ್ತ ರೈಡ್ ಮಾಡಿದೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆಯಲ್ಲಿ ಮೈಸೂರಿನ ಶಾರದಾದೇವಿ ನಗರದಲ್ಲಿರುವ ಚೇತನ್‌ ಮನೆ ಮೇಲೆ ದಾಳಿ ನಡೆದಿದೆ.

ತುಮಕೂರು: ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ನಾಗರಭಾವಿಯ 2ನೇ ಹಂತದಲ್ಲಿರುವ ವಾಸದ ಮನೆ, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿರುವ ಫಾರಂಹೌಸ್, ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ (ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ) ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಬಿ.ಉಮಾಶಂಕರ್, ರಾಮಕೃಷ್ಣಯ್ಯ, ಇನ್ಸ್ಪೆಕ್ಟರ್‌ಗಳಾದ ಶಿವರುದ್ರಪ್ಪ ಮೇಟಿ, ಮಹಮ್ಮದ್ ಸಲೀಂ ಇನ್ನಿತರ ಅಧಿಕಾರಿಗಳ ತಂಡಗಳಿಂದ ದಾಳಿ ನಡೆದಿದೆ.

ಯಾರ್ಯಾರ ಮೇಲೆ ದಾಳಿ?

ತುಮಕೂರು – ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟ್ಮೆಂಟ್
ಯಾದಗಿರಿ – ಬಲವಂತ್ ಯೋಜನ ನಿರ್ದೇಶಕ , ಯಾದಗಿರಿ ಜಿಲ್ಲಾ ಪಂಚಾಯತ್
ಬೆಂಗಳೂರು ಗ್ರಾಮಾಂತರ – ಸಿದ್ದಪ್ಪ ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ನರಸಿಂಹ ಮೂರ್ತಿ ಕೆ – ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ
ಬೆಂಗಳೂರು ಸಿಟಿ – ಬಿವಿ ರಾಜ ಎಫ್ ಡಿ ಎ ಕೆಐ ಎ ಡಿಬಿ
ಬೆಂಗಳೂರು ಸಿಟಿ – ರಮೇಶ್ ಕುಮಾರ್ ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ
ಬೆಂಗಳೂರು ಸಿಟಿ- ಅಕ್ತರ್ ಅಲಿ – ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆ
ಶಿವಮೊಗ್ಗ – ಸಿ ನಾಗೇಶ್ – ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ
ಶಿವಮೊಗ್ಗ ಪ್ರಕಾಶ್ – ಡೆಪ್ಯೂಟಿ ಡೈರೆಕ್ಟರ್ – ತೋಟಗಾರಿಕಾ ಇಲಾಖೆ
ಬೆಂಗಳೂರು ಸಿಟಿ – ಚೇತನ್ ಕುಮಾರ್ – ಕಾರ್ಮಿಕ‌ಇಲಾಖೆ ಅಧಿಕಾರಿ ಮಂಡ್ಯ ವಿಭಾಗ
ಬೆಂಗಳೂರು ಸಿಟಿ – ಆನಂದ್ ಸಿ ಎಲ್ – ಕಮೀಷನರ್ ಮಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು ಸಿಟಿ – ಮಂಜುನಾಥ್ ಟಿ ಆರ್ – ಎಫ್ ಡಿಎ ಬೆಂಗಳೂರು‌ ನಾರ್ತ್ ಸಬ್ ಡಿವಿಷನ್ ಆಫೀಸರ್

ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

Continue Reading
Advertisement
Narendra Modi
ರಾಜಕೀಯ6 mins ago

Narendra Modi: ಬಿಜೆಪಿ ಕಾರ್ಯಕರ್ತರೊಂದಿಗೆ ಮೋದಿ ಸ್ನೇಹ ಮಿಲನ; ನಾವೆಲ್ಲರೂ ಒಂದೇ ಕುಟುಂಬ ಎಂದು ಬಣ್ಣಿಸಿದ ಪ್ರಧಾನಿ

Hardik Pandya
ಕ್ರೀಡೆ8 mins ago

Hardik Pandya: ವಿಚ್ಛೇದಿತ ಪತ್ನಿ ನತಾಶಾಗೆ ಶೇ.70ರಷ್ಟು ಜೀವನಾಂಶ ನೀಡಲಿದ್ದಾರಾ ಹಾರ್ದಿಕ್​ ಪಾಂಡ್ಯ?

Doda Attack
ಪ್ರಮುಖ ಸುದ್ದಿ25 mins ago

Doda Attack: ಯೋಧನ ಶಿರಚ್ಛೇದಕ್ಕೆ ಯತ್ನಿಸಿದ ವಿಡಿಯೊ ಬಿಡುಗಡೆ ಮಾಡಿದ ಭಯೋತ್ಪಾದಕರು

Urvashi Rautela Conversation With Manager 'Leaked',
ಬಾಲಿವುಡ್47 mins ago

Urvashi Rautela: ಊರ್ವಶಿ ರೌಟೇಲಾ ಸ್ನಾನ ಮಾಡುವ ವಿಡಿಯೊ ಲೀಕ್‌ ಆದ ಬೆನ್ನಲ್ಲೇ ಮ್ಯಾನೇಜರ್‌ ಜತೆಗಿನ ಆಡಿಯೋನೂ ಬಹಿರಂಗ!

Kannadiga quota
ಕ್ರಿಕೆಟ್49 mins ago

Kannadiga quota: ಆರ್​ಸಿಬಿ ತಂಡದಲ್ಲೂ ಕನ್ನಡಿಗರಿಗೆ ಮೀಸಲಾತಿ ನೀಡಿ; ಅಭಿಮಾನಿಗಳಿಂದ ಆಗ್ರಹ

CM Siddaramaiah and R Ashok karnataka assembly live
ಪ್ರಮುಖ ಸುದ್ದಿ57 mins ago

Karnataka Assembly Live: 4ನೇ ದಿನದ ವಿಧಾನಮಂಡಲ ಕಲಾಪದಲ್ಲೂ ವಾಲ್ಮೀಕಿ ಹಗರಣದ ಕರಿನೆರಳು ನಿರೀಕ್ಷೆ; ಅಸೆಂಬ್ಲಿ ಲೈವ್‌ ಇಲ್ಲಿದೆ ನೋಡಿ

Mohan Bhagwat
ದೇಶ1 hour ago

Mohan Bhagwat: ಕೆಲವರು ದೇವರಾಗಲು ಬಯಸುತ್ತಾರೆ; ಪರೋಕ್ಷವಾಗಿ ಮೋದಿಗೆ ತಿವಿದ್ರಾ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್?

Womens Asia Cup 2024
ಕ್ರೀಡೆ1 hour ago

Womens Asia Cup 2024: ಇಂದು ಭಾರತ-ಪಾಕ್​ ಹೈವೋಲ್ಟೇಜ್ ಪಂದ್ಯ

railway track horrible accident
ಕ್ರೈಂ2 hours ago

Horrible Accident: ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಯುವಕರ ಸಾವು

Janhvi Kapoor hospitalised due to food poisoning
ಬಾಲಿವುಡ್2 hours ago

Janhvi Kapoor: ಅಂಬಾನಿ ಮದುವೆ ಬಳಿಕ ಆಸ್ಪತ್ರೆಗೆ ದಾಖಲಾದ ಜಾಹ್ನವಿ ಕಪೂರ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ18 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ19 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ5 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ5 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌