Site icon Vistara News

ಎಲ್ಲರ ಬೆನ್ನಿಗೂ ಚೂರಿ ಹಾಕಿದ್ದು ನಾನೆ, ಏನಿವಾಗ?: ಎಚ್‌.ಡಿ. ಕುಮಾರಸ್ವಾಮಿ

HD Kumaraswamy (2)

ತುಮಕೂರು: ತುಮಕೂರು ಗುಬ್ಬಿ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಕುರಿತು ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಬೆನ್ನಿಗೆ ಚೂರಿ ಹಾಕಿದ್ದು ನಾನೇ ಎನ್ನುವುದಾದರೆ ಏನು ಇವಾಗ? ಎಂದು ಮರುಪ್ರಶ್ನಿಸಿದ್ದಾರೆ.

ಎಚ್‌.ಡಿ. ಕುಮಾರಸ್ವಾಮಿಯವರೇ ಬೆನ್ನಿಗೆ ಚೂರಿ ಹಾಕಿದರು ಎಂದು ಎಸ್‌.ಆರ್‌. ಶ್ರೀನಿವಾಸ್‌ ಹೇಳಿರುವುದರ ಕುರಿತು ತುಮಕೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಎಚ್‌.ಡಿ. ಕುಮಾರಸ್ವಾಮಿ, ಅದೆಲ್ಲ ಮುಗಿದು ಹೋಗಿರುವ ಕಥೆ. ಹೌದು, ನಾನೇ ಬೆನ್ನಿಗೆ ಚೂರಿ ಹಾಕಿದ್ದೇನೆ. ಅವರಷ್ಟೆ ಅಲ್ಲ ಎಲ್ಲರ ಬೆನ್ನಿಗೂ ಚೂರಿ ಹಾಕಿದ್ದು ನಾನೆ. ಏನಿವಾಗ? ಎಂದರು.

ಇದನ್ನೂ ಓದಿ | ಎಚ್ಡಿಕೆಗೆ ತಾಕತ್ತಿದ್ರೆ ಗುಬ್ಬಿಯಲ್ಲಿ ಗೆದ್ದು ತೋರಿಸಲಿ : ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ಓಪನ್‌ ಚಾಲೆಂಜ್

ಅದೆಲ್ಲ ಮುಗಿದುಹೋದ ಕಥೆ, ಚರ್ಚೆ ಮಾಡಲು ನಾನು ಹೋಗುವುದಿಲ್ಲ. ಇವರ ಬಗ್ಗೆ ಜನರೇ ತೀರ್ಮಾನ ಮಾಡುತ್ತಾರೆ. ಶಿಕ್ಷಣ ಸಚಿವರಾಗಿದ್ದಾಗ ಸ್ವಾತಂತ್ರ್ಯ ಕೊಟ್ಟಿರಲಿಲ್ಲ ಎನ್ನುವುದೂ ಮುಗಿದು ಹೋದ ವಿಚಾರ. ಅದರ ಬಗ್ಗೆಯೂ ಮಾತನಾಡುವುದಿಲ್ಲ ಎಂದರು.

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಪ್ರತಿಕ್ರಿಯೆ ನೀಡಿದ ಎಚ್‌.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ಹಾಗೂ ಬಿಜೆಪಿ ಇಬ್ಬರೂ ಪರಸ್ಪರರ ವಿರುದ್ಧ ದೂಷಾರೋಪಣೆಯಲ್ಲಿ ತೊಡಗಿದ್ದಾರೆ. ಹಾಗಾಗಿ, ಯಾರ ಅವಧಿಯಲ್ಲಿ ಏನೇನಾಯಿತು ಎಂಬುದರ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಆನಂತರ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ | ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ದಿಗ್ಭ್ರಮೆ ಮೂಡಿಸಿದ ಸುದ್ದಿ

Exit mobile version