Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ 'ಕುಂದಾಪ್ರ ಕನ್ನಡ ಹಬ್ಬ' - Vistara News

ಕರ್ನಾಟಕ

Kundapra Kannada Habba : ಬೆಂಗಳೂರಿನ ಅರಮನೆ ಮೈದಾನದಲ್ಲಿ 2 ದಿನ ಅದ್ಧೂರಿ ‘ಕುಂದಾಪ್ರ ಕನ್ನಡ ಹಬ್ಬ’

Kundapra Kannada Habba : ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʼಕುಂದಾಪ್ರ ಕನ್ನಡ ಪ್ರತಿಷ್ಠಾನ, ಬೆಂಗಳೂರುʼ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ 2 ದಿನಗಳ ಅದ್ಧೂರಿ ʼಕುಂದಾಪ್ರ ಕನ್ನಡ ಹಬ್ಬʼವನ್ನು (Kundapra Kannada Habba) ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆ.17ರ ಸಂಜೆ 5ಕ್ಕೆ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದ ಗೇಟ್ ನಂ. 3ರಲ್ಲಿರುವ ವೈಟ್‌ ಪೆಟಲ್ಸ್‌ನಲ್ಲಿ ಆ. 17 ಮತ್ತು 18ರಂದು ನಡೆಯಲಿರುವ ಈ ಹಬ್ಬದ ಕುರಿತು ಪ್ರತಿಷ್ಠಾನದ ಅಧ್ಯಕ್ಷ ಡಾ. ದೀಪಕ್ ಶೆಟ್ಟಿ ಬಾರ್ಕೂರು ಅವರು ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶನಿವಾರ ಖ್ಯಾತ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಅಂದು ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಸಂಗೀತ ನಿರ್ದೇಶಕ ರವಿ ಬಸ್ರೂರು, ಮಾರಣಕಟ್ಟೆ ಎಂ.ಎಸ್. ಮಂಜ ಚಾರಿಟಬಲ್ ಟ್ರಸ್ಟ್‌ನ ಕೃಷ್ಣಮೂರ್ತಿ ಮಂಜ, ಲೈಫ್‌ಲೈನ್ ಫೀಡ್ಸ್ ಪ್ರೈ.ಲಿ. ಎಂಡಿ ಕಿಶೋರ್ ಕುಮಾರ್ ಹೆಗ್ಡೆ ಇರಲಿದ್ದಾರೆ.

ಭಾನುವಾರ ಸಂಜೆ 5ರ ಸಮರೋಪ ಸಮಾಂಭದಲ್ಲಿ ಪದ್ಮಶ್ರೀ ಮತ್ತು ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಡಾ.ಮಾಲತಿ ಕೆ. ಹೊಳ್ಳ ಅವರಿಗೆ ಊರ ಗೌರವದ ಸನ್ಮಾನ ಇರಲಿದೆ. ಆ ದಿನ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಎಂ.ಆರ್.ಜಿ. ಸಮೂಹದ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಯುನಿವರ್ಸಲ್ ಗ್ರೂಪ್‌ನ ಉಪೇಂದ್ರ ಶೆಟ್ಟಿ, ಬಸ್ರೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ, ಸೌತ್‌ ಫೀಲ್ಡ್ ಪೇಂಟ್ಸ್ ಪ್ರೈ. ಲಿ. ಎಂಡಿ ಶಿವರಾಮ ಹೆಗ್ಡೆ, ಚೆಪ್ ಟಾಕ್‌ನ ಗೋವಿಂದಬಾಬು ಪೂಜಾರಿ ಇರಲಿದ್ದಾರೆ.

ಒಂದು ಲಕ್ಷ ಜನರು ಸೇರುವ ನಿರೀಕ್ಷೆ

ಇದು ಕುಂದಾಪ್ರ ಕನ್ನಡ ಹಬ್ಬವಾದರೂ ಸಮಸ್ತ ಕನ್ನಡಿಗರ ಸಂಭ್ರಮ. ಹೀಗಾಗಿ ಈ ಹಬ್ಬಕ್ಕೆ ನಾವು ಎಲ್ಲರನ್ನೂ ಆಹ್ವಾನಿಸುತ್ತಿದ್ದು, ಎರಡು ದಿನಗಳ ಹಬ್ಬದಲ್ಲಿ ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಒಂದು ಸಾವಿರ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಲಾಗಿದೆ. ಅದಾಗ್ಯೂ ಅನುಕೂಲದ ದೃಷ್ಟಿಯಿಂದ ಸಾರ್ವಜನಿಕ ಸಾರಿಗೆ ಮೂಲಕ ಆಗಮಿಸುವುದು ಉತ್ತಮ. ಶನಿವಾರ ಮಧ್ಯಾಹ್ನ 2ರಿಂದ ರಾತ್ರಿ 10.30 ಮತ್ತು ಭಾನುವಾರ ಬೆಳಗ್ಗೆ 9.30ರಿಂದ ರಾತ್ರಿ 10.30ರ ವರೆಗೆ ನಿರಂತರ ಕಾರ್ಯಕ್ರಮಗಳಿದ್ದು, ಈ ಹಬ್ಬಕ್ಕೆ ಯಾವುದೇ ಪ್ರವೇಶ ಶುಲ್ಕವಿಲ್ಲ ಎಂದು ದೀಪಕ್ ಹೇಳಿದ್ದಾರೆ.

ಹಬ್ಬಕ್ಕೆ ತಾರಾ ಮೆರುಗು

ಕುಂದಾಪುರ ಕನ್ನಡ ಹಬ್ಬದಲ್ಲಿ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ನಟ-ನಿರ್ದೇಶಕ ರಾಜ್ ಬಿ. ಶೆಟ್ಟಿ, ಗೋಲ್ಡನ್ ಸ್ಟಾರ್ ಗಣೇಶ್ ಆಗಮಿಸಲಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಅವರನ್ನೂ ಆಹ್ವಾನಿಸಲಾಗಿದ್ದು, ಅವರೂ ಬರುವ ನಿರೀಕ್ಷೆ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

ಇದೇ ಮೊದಲು

ಈ ಹಬ್ಬ ಕುಂದಾಪುರ ಸಂಸ್ಕೃತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತುತಿಪಡಿಸುವ ಪ್ರಯತ್ನ. ಆ ಪೈಕಿ ಪ್ರಮುಖ ಆಕರ್ಷಣೆ ಆಗಿ ಜೋಡಾಟ ಇರಲಿದೆ. ಇದು ಇತಿಹಾಸದಲ್ಲಿ ಇದೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿದೆ. ಒಂದೇ ಪ್ರಸಂಗ ಏಕಕಾಲದಲ್ಲಿ ಎರಡು ರಂಗಸ್ಥಳಗಳಲ್ಲಿ ಸ್ಪರ್ಧೆಯ ಮೇಲೆ ನಡೆಯುವ ಈ ಪ್ರದರ್ಶನವನ್ನು ನೋಡಲು ಊರಿನಿಂದಲೇ 2 ಸಾವಿರಕ್ಕೂ ಅಧಿಕ ಮಂದಿ ಆಗಮಿಸುತ್ತಿದ್ದಾರೆ. ಮತ್ತೊಂದೆಡೆ ಭಾನುವಾರ ಸಂಜೆ 7.30ಕ್ಕೆ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರಿಂದ ʼರವಿ ಬಸ್ರೂರ್ ನೈಟ್ಸ್ʼ ಎಂಬ ವಿಶೇಷ ಸಂಗೀತ ಕಾರ್ಯಕ್ರಮ ಇರಲಿದೆ. ಇದು ಕೂಡ ಇದೇ ಪ್ರಥಮ ಬಾರಿಗೆ ನಡೆಯುತ್ತಿರುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ರಾಘವೇಂದ್ರ ಕಾಂಚನ್ ಮಾಹಿತಿ ನೀಡಿದರು.

ದಿನವಿಡೀಯ ವಿಶೇಷ

ʼಹೊಟ್ಟಿ ಕಂಡದ್ದ್ ನಾವೇ ಸೈʼ ಎಂಬ ಹೆಸರಿನಲ್ಲಿ ಕರಾವಳಿ ಖಾದ್ಯಮೇಳ ಇರಲಿದ್ದು, ವಿಶೇಷ ತಿಂಡಿ-ತಿನಿಸುಗಳು ಲಭ್ಯ ಇರಲಿವೆ. ಅಲ್ಲದೆ ಕಡಲೂರಿನ ವಸ್ತು, ಒಡವೆ, ವಸ್ತ್ರಪ್ರದರ್ಶನ ಮತ್ತು ಮಾರಾಟದ ʼಕುಂದಾಪ್ರ ಸಂತಿʼ ಕೂಡ ಇರಲಿದೆ.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಸುದ್ದಿಗೋಷ್ಠಿಯಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಕೋಶಾಧಿಕಾರಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು, ಲೆಕ್ಕಪರಿಶೋಧಕ ವಿಜಯ್ ಶೆಟ್ಟಿ, ಕ್ರೀಡಾ ಸಂಚಾಲಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಕುಂದಾಪುರ ಕನ್ನಡ ಹಬ್ಬದ ಇತರ ಕಾರ್ಯಕ್ರಮಗಳ ವಿವರ

ಆಗಸ್ಟ್ 17, ಶನಿವಾರ
ಮಧ್ಯಾಹ್ನ 3: ದಿಬ್ಬಣ- ನಗರದ ವಿವಿಧ ಭಾಗಗಳಿಂದ ಆಗಮಿಸುವ ಜನರ ಪುರ ಮೆರವಣಿಗೆ.
ಸಂಜೆ 4: ನಾಕ್ ಘನಾ ಸುರ್ಲ್- ಮಂಗಳೂರಿನ ಜರ್ನಿ ಥೇಟರ್ ಗ್ರೂಪ್​ನಿದ ಜಾನಪದ, ರಂಗ ಹಾಗೂ ಕುಂದಾಪ್ರ ಕನ್ನಡ ಗೀತಗಾಯನ.
ಸಂಜೆ 6.30: ಜೋಡಾಟ- ಕರಾವಳಿ ಜಿಲ್ಲೆಗಳ ಸುಪ್ರಸಿದ್ಧ ಕಲಾವಿದರ ಮೇಳೈಸುವಿಕೆ.

ಆಗಸ್ಟ್ 18, ಭಾನುವಾರ

ಬೆಳಗ್ಗೆ 10: ಬಯಲಾಟ- ಗ್ರಾಮೀಣ ಉತ್ಸವ
ಬೆಳಗ್ಗೆ 10: ತಾರೆಯರ ಜೊತೆ ಮಾತುಕತೆ, ಕವಿತೆ.
ಬೆಳಗ್ಗೆ 11: ಅರೆಹೊಳೆ ಪ್ರತಿಷ್ಠಾನದ ನಂದಗೋಕುಲ ಕಲಾವಿದರಿಂದ ʼಡಾನ್ಸ್ ಕುಂದಾಪ್ರ ಡಾನ್ಸ್ʼ
ಬೆಳಗ್ಗೆ 11.15: ಕುಂದಾಪುರ ಭಾಷೆ ಬದುಕು ಬರಹ ಕುರಿತ ನುಡಿಚಾವಡಿ.
ಮಧ್ಯಾಹ್ನ 12: ಮನು ಹಂದಾಡಿ ಅವರಿಂದ ʼಹಂದಾಡ್ತಾ ನೆಗ್ಯಾಡಿʼ ಹಾಸ್ಯ ಕಾರ್ಯಕ್ರಮ.
ಮಧ್ಯಾಹ್ನ 1.30: ಚಂಡೆ-ಜಂಬೆ ಜುಗಲ್ಬಂದಿ ಕಾರ್ಯಕ್ರಮ ʼಪೆಟ್ ಒಂದೇ, ಸ್ವರ ಬೇರೆʼ
ಮಧ್ಯಾಹ್ನ 2.30: ಮಂದರ್ತಿ ಶ್ರೀ ದುರ್ಗಾಪರಮೇಶ್ವರಿಯ ನೃತ್ಯಗಾಥೆ ʼಮಂದಾರ್ತಿ ಮಾದೇವಿʼ
ಸಂಜೆ 4.30: ರಥೋತ್ಸವ
ರಾತ್ರಿ 7.30: ʼರವಿ ಬಸ್ರೂರ್ ನೈಟ್ಸ್ʼ ವಿಶೇಷ ಸಂಗೀತ ಸಂಜೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Muda Scam: ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳ ವಿಚಾರಣೆ ನಡೆಸಿದ್ದಾರೆ. ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಅರ್ಜಿಯ ಆದೇಶ ಆ.20ಕ್ಕೆ ಕಾಯ್ದಿರಿಸಿದ್ದು, ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ದೂರಿನ ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆ.20ಕ್ಕೆ ಕಾಯ್ದಿರಿಸಿದೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಲ್ಲಿಸಿದ್ದ ಖಾಸಗಿ ಅರ್ಜಿ ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿದೆ.

ಮುಡಾದಲ್ಲಿ ಕಾನೂನು ಬಾಹಿರವಾಗಿ ನಿವೇಶನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿದ್ದ ಎರಡು ಖಾಸಗಿ ದೂರಿನ ಅರ್ಜಿಗಳನ್ನು ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿದೆ. ಮೊದಲಿಗೆ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ಟ ಅವರು, ದೂರಿನ ಸಂಬಂಧ ಅಂತಿಮ ಆದೇಶವನ್ನು ಆ.20ಕ್ಕೆ ಕಾಯ್ದಿರಿಸಿದರು. ಅದೇ ರೀತಿ ಮಾಹಿತಿ ಆರ್‌ಟಿಐ ಟಿ.ಜೆ.ಅಬ್ರಹಾಂ ದಾಖಲಿಸಿದ್ದ ಅರ್ಜಿ ವಿಚಾರಣೆಯನ್ನು ಆ.21ಕ್ಕೆ ಮುಂದೂಡಿದರು.

ಟಿ.ಜೆ.ಅಬ್ರಹಾಂ ವಾದ ಮಂಡನೆ; ನಕಲಿ ದಾಖಲೆ ಸೃಷ್ಟಿಸಿ ಜಾಗ ಮಾರಾಟ ಆರೋಪ

ಪ್ರಕರಣದಲ್ಲಿ ದೂರುದಾರ ಅಬ್ರಹಾಂ ಅವರೇ ವಾದ ಮಂಡಿಸಿ, ಮೈಸೂರಿನ ಹೊರವಲಯದ ಕೆಸರೆ ಗ್ರಾಮ ಹಾಗೂ ದೇವನೂರು ಗ್ರಾಮಗಳಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಹಿತಿ ನೀಡಿದರು. ಕೆಸರೆ ಗ್ರಾಮದಲ್ಲಿ ದೇವನೂರು ಬಡವಾಣೆ ನಿರ್ಮಾಣ ಮಾಡಲಾಗಿದೆ. ಆದರೆ, ಅಲ್ಲಿ ಜಮೀನೇ ಇಲ್ಲದಿದ್ದರೂ ದೇವರಾಜ್ ನಕಲಿ‌ ದಾಖಲೆ ಸೃಷ್ಟಿಸಿದ್ದಾನೆ. ನಕಲಿ ದಾಖಲೆಗಳ ಮೂಲಕ‌ ಸೃಷ್ಟಿಸಿದ ಜಾಗವನ್ನು ಮಲ್ಲಿಕಾರ್ಜುನಗೆ ಮಾರಾಟ ಮಾಡಿದ್ದ ಎಂದು ತಿಳಿಸಿದರು.

ಇದನ್ನೂ ಓದಿ | Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ರೆವಿನ್ಯೂ ಲ್ಯಾಂಡ್ ಅನ್ನು ಕನ್ವರ್ಷನ್ ಮಾಡಲಾಗಿದೆ. ಬಳಿಕ 2010ರಲ್ಲಿ ಕಾನೂನು ಬಾಹಿರವಾಗಿ ಗಿಫ್ಟ್ ಡೀಡ್ ಮಾಡಲಾಗಿದೆ. ಅದರ ಫಲಾನುಭವಿ ಸಿದ್ದರಾಮಯ್ಯ ಅವರ ಪತ್ನಿಯಾಗಿದ್ದಾರೆ.
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಬೋಗಸ್ ಕನ್ವರ್ಷನ್ ಆಗಿದೆ. ಜಿಲ್ಲಾಧಿಕಾರಿ ಜಾಗವನ್ನು ಪರಿಶೀಲನೆ ಮಾಡಿ ಕನ್ವರ್ಷನ್ ಮಾಡ್ಡಿದ್ದೇವೆ ಎನ್ನುವುದು ಸುಳ್ಳು. 2010ರಲ್ಲಿ ಪಾರ್ವತಿಯವರಿಗೆ ಕಾನೂನು ಬಾಹಿರವಾಗಿ ದಾನ ನೀಡಲಾಗಿದೆ ಎಂದು ಟಿ‌.ಜೆ. ಅಬ್ರಹಾಂ ತಿಳಿಸಿದ್ದಾರೆ.

2013ರ ಚುನಾವಣೆಯಲ್ಲಿ ಈ ಜಾಗದ ಮಾಹಿತಿಯನ್ನು ಸಿದ್ದರಾಮಯ್ಯ ಮುಚ್ಚಿಟ್ಟಿದ್ದಾರೆ. 2011 ರಿಂದ 2014 ರವರೆಗೆ ಲೋಕಾಯುಕ್ತಕ್ಕೆ ಸಿದ್ದರಾಮಯ್ಯ ನೀಡಿದ್ದ ಮಾಹಿತಿಯಲ್ಲೂ‌ ಮುಚ್ಚಿಡಲಾಗಿದೆ. ಇವರು ಹೇಗೆ ದೇವನೂರು ಬಡಾವಣೆಯನ್ನು ಕೆಸರೆ ಗ್ರಾಮ ಮಾಡುತ್ತಾರೆ. ಹೇಗೆ ಬಡಾವಣೆಯನ್ನು ಕೃಷಿ ಭೂಮಿಯಲ್ಲಿ ಮಾಡುತ್ತಾರೆ? ಆದರೂ ಬಹಳ ಅಭಿವೃದ್ಧಿ ಹೊಂದಿದ ಅರ್ಜಿಯನ್ನು 55 ಕೋಟಿ 80 ಲಕ್ಷ ಬೆಲೆಯ ಸೈಟ್‌ಗಳ ನೀಡಿದ್ದಾರೆ. ಅದು ಕೂಡ ತುಂಬಾ ಡೆವಲಪ್ಮೆಂಟ್ ಆಗಿರುವ ಲೇಔಟ್ ನಲ್ಲಿ ನೀಡ್ತಾರೆ.

ಸಿದ್ದರಾಮಯ್ಯ ಪತ್ನಿಯ ಸ್ವಾಧೀನದಲ್ಲೇ ಇಲ್ಲದ ಜಾಗವನ್ನು ಹೇಗೆ ರಿಲೀಸ್ ಡೀಡ್ ನೀಡಲು ಹೇಗೆ ಸಾಧ್ಯ.? ಪಾರ್ವತಿ ಅವರು ಕ್ಲೈಂ ಮಾಡುವ ರೀತಿ ಕೃಷಿ ಭೂಮಿ ಇರಲೇ ಇಲ್ಲ. ಕೇವಲ ದಾಖಲೆಗಳನ್ನು ಮಾತ್ರ ಸೃಷ್ಟಿ ಮಾಡಿ ಪರಿಹಾರ ಪಡೆದಿದ್ದಾರೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿದೆ. ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಖಾಸಗಿ ದೂರು ಸಲ್ಲಿಸಲಾಗಿದೆ. ಭ್ರಷ್ಟಾಚಾರ ಕಾಯಿದೆ 17A ಸಿದ್ದರಾಮಯ್ಯ ಅವರಿಗೆ ಅನ್ವಯ ಆಗಲ್ಲ. ಪಿ.ಸಿ.ಆ್ಯಕ್ಟ್ 19ರ ಅಡಿ ಕಾಗ್ನಿಜೆನ್ಸ್ ತೆಗೆದುಕೊಳ್ಳಲು ಕೋರ್ಟ್‌ಗೆ ಟಿ.ಜೆ.ಅಬ್ರಹಾಂ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್‌, ವಿಚಾರಣೆಯನ್ನು ಆಗಸ್ಟ್ 21ಕ್ಕೆ ಮುಂದೂಡಿತು.

ಏನಿದು ಕೋರ್ಟ್​ ಪ್ರಕರಣ?

ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರ್ಬಳಕೆ ಮಾಡಿ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನಗಳನ್ನು ತಮ್ಮ ಪತ್ನಿಯ ಹೆಸರಿಗೆ ಪಡೆದುಕೊಂಡಿರುವ ಆರೋಪ ಸಂಬಂಧ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುವುದಕ್ಕೆ ಸೂಚನೆ ನೀಡಬೇಕು ಎಂದು ಕೋರಿ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೈಸೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಅದರ ವಿಚಾರಣೆ ನಡೆಯುತ್ತಿರುವ ನಡುವೆಯೇ ಬೆಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ಟಿ.ಜೆ. ಅಬ್ರಾಹಂ ಮತ್ತೊಂದು ದೂರು ಸಲ್ಲಿಸಿದ್ದರು.

ಮೂಲ ಜಮೀನಿಗೆ ಮಾಲೀಕರೇ ಇಲ್ಲ. ಆ ಜಮೀನು ಸಿದ್ದರಾಮಯ್ಯ ಸಂಬಂಧಿಕರ ಹೆಸರಿಗೆ ಬಂದಿದೆ. ಅಲ್ಲಿಂದ ಸಿದ್ದರಾಮಯ್ಯ ಪತ್ನಿ ಹೆಸರಿಗೆ ಉಡುಗೊರೆಯಾಗಿ ಬಂದಿದ್ದು, ಅಂತಹ ಜಮೀನಿಗೆ ಬದಲಿ ನಿವೇಶನ ಪಡೆದುಕೊಳ್ಳಲಾಗಿದೆ. ಇಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ | Muda Case : ಪಿಸಿಆರ್​ ಏನೆಂದು ಗೊತ್ತಿಲ್ಲದವರು ಸಿದ್ದರಾಮಯ್ಯ ಪರ ಅರ್ಜಿ ಸಲ್ಲಿಸಿದ್ದೀರಾ? ಸಿಎಂ ಪರ ಅರ್ಜಿ ಸಲ್ಲಿಸಿದವರಿಗೆ ಕೋರ್ಟ್ ತರಾಟೆ

ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅಕ್ರಮವಾಗಿ 14 ನಿವೇಶನಗಳನ್ನು ಪಡೆದಿದ್ದಾರೆ ಎಂಬ ಆರೋಪ ಸಂಬಂಧ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

Continue Reading

ಕರ್ನಾಟಕ

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Lakshmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಸಚಿವರ ಮನೆಯ ಬಳಿ ಗೃಹ ಕಚೇರಿಗೆ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

VISTARANEWS.COM


on

Lakshmi Hebbalkar
Koo

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರಿಗೆ ಅಹವಾಲು ಸಲ್ಲಿಸಲು ಮಂಗಳವಾರ ವಿವಿಧ ಭಾಗಗಳಿಂದ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಬೆಳಗ್ಗೆಯಿಂದ ಸಂಜೆ 4 ಗಂಟೆಯವರೆಗೂ ಊಟ, ತಿಂಡಿ ಬಿಟ್ಟು ಸಚಿವರು ಅಹವಾಲು ಸ್ವೀಕರಿಸಿದರು.

ಸಚಿವರು ಬೆಳಗಾವಿಯಲ್ಲಿದ್ದಾಗಲೆಲ್ಲ ವಿವಿಧ ಸಮಸ್ಯೆಗಳನ್ನು ಹೇಳಿಕೊಂಡು ಸಚಿವರ ಮನೆಯ ಬಳಿ ಗೃಹ ಕಚೇರಿಗೆ ನೂರಾರು ಜನರು ಆಗಮಿಸುತ್ತಾರೆ. ತಾಳ್ಮೆಯಿಂದ ಎಲ್ಲರ ಅಹವಾಲು ಆಲಿಸಿ, ಸಮಾಧಾನ ಪಡಿಸಿ ಕಳುಹಿಸುತ್ತಾರೆ. ಮಂಗಳವಾರವೂ ದೊಡ್ಡ ಸಂಖ್ಯೆಯಲ್ಲೇ ಜನರು ಆಗಮಿಸಿದ್ದರು.

ಇದನ್ನೂ ಓದಿ: Kannada New Movie: ರವೀಂದ್ರ ಸೊರಗಾವಿ ಕಂಠಸಿರಿಯಲ್ಲಿ ʼಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರುʼ ಚಿತ್ರದ ಹಾಡು

ಕಳದ 4 ದಿನಗಳಿಂದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮೈಸೂರು, ಭದ್ರಾವತಿ, ಗದಗ ಪ್ರವಾಸದಲ್ಲಿದ್ದಾರೆ. ಸೋಮವಾರ ಗದಗ ಜಿಲ್ಲಾ ಪ್ರವಾಸ ಮಾಡಿ ಮಂಗಳವಾರ ಬೆಳಗಿನ ಜಾವ 2 ಗಂಟೆಗೆ ಬೆಳಗಾವಿ ತಲುಪಿದ್ದಾರೆ. ಮಂಗಳವಾರ ಸಂಜೆ ಬೆಂಗಳೂರಿಗೆ ತೆರಳಿ, ಬುಧವಾರ ಉಡುಪಿಗೆ ಹೋಗುವ ಕಾರ್ಯಕ್ರಮವಿದೆ. ಆದರೂ ಮಂಗಳವಾರ ಬಹು ಹೊತ್ತಿನವರೆಗೂ ಜನರ ಸಮಸ್ಯೆಗಳಿಗೆ ಕಿವಿಯಾದರು. ಬಂದ ಜನರು ಸಚಿವರ ಸ್ಪಂದನೆಗೆ ಧನ್ಯವಾದ ಸಲ್ಲಿಸಿ ಮರಳುತ್ತಿದ್ದರು.

Continue Reading

ಧಾರವಾಡ

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Physical Abuse: ಧಾರವಾಡದಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ ಲಾಡ್ಜ್‌ಗೆ ಕರೆದುಕೊಂಡ ಹೋದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಜತೆಗೆ ಆಕೆಯೊಂದಿಗೆ ಇದ್ದ ವಿಡಿಯೊ ಮಾಡಿಕೊಂಡು ಎಲ್ಲೆಡೆ ಹರಿಬಿಟ್ಟಿದ್ದಾನೆ. ಇತ್ತ ಬೆಂಗಳೂರಿನಲ್ಲಿ ಅನುಮಾನಸ್ಪಾದ ರೀತಿಯಲ್ಲಿ ಗೃಹಿಣಿಯೊಬ್ಬಳು ಮೃತಪಟ್ಟಿದ್ದಾಳೆ.

VISTARANEWS.COM


on

By

Physical abuse
Koo

ಧಾರವಾಡ: ಅಪ್ರಾಪ್ತೆ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ (Physical abuse) ಎಸಗಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ಅದನ್ನು ವಿಡಿಯೊ ಮಾಡಿಕೊಂಡಿದ್ದಾನೆ.

ಆಗಸ್ಟ್ 8 ರಂದು ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಆ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಹಲವು ವಾಟ್ಸ್‌ಆ್ಯಪ್ ಗ್ರೂಪ್‌ಗೂ ಹಾಕಿದ್ದು, ಹಲವರು ಬೇರೆ ಗ್ರೂಪ್‌ಗೆ ಶೇರ್‌ ಮಾಡಿದ್ದಾರೆ.

ಸದ್ಯ ಯುವಕನನ್ನು ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜತೆಗೆ ಬೇರೆ ಬೇರೆ ಗ್ರೂಪ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದ 9 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಸದ್ಯ ದೌರ್ಜನ್ಯ ಎಸಗಿದ ಆರೋಪಿ ಮೇಲೆ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

ಪ್ರೀತಿಸಿ ಮದುವೆಯಾದ ಯುವತಿ ಸಾವು

ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿದ್ದಾಲೇ. ಪ್ರೀತಿಸಿ ಮದುವೆಯಾದ ಪತಿಯಿಂದಲೆ ಪತ್ನಿಯ‌ ಕೊಲೆಯಾಗಿದೆ ಎಂದು ಯುವತಿ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಉತ್ತನಹಳ್ಳಿ ಬಳಿ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಮೃತ ದುರ್ದೈವಿ.

ಕಳೆದ ಎರಡು ವರ್ಷಗಳಿಂದ ದುರ್ಗಮ್ಮ ಮಾರುತಿ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದಳು. ಪೋಷಕರ ವಿರೋಧದ ನಡುವೆ ಮದುವೆಯಾಗಿ ನಂತರ ಎರಡು ಕುಟುಂಬಗಳು ಒಂದಾಗಿದ್ದರು. ಮದುವೆ ನಂತರ ಕೂಡ್ಲಗಿಯಿಂದ ಬೆಂಗಳೂರಿಗೆ ಬಂದಿದ್ದ ದಂಪತಿ ಚಿಕ್ಕಜಾಲದ ಉತ್ತನಹಳ್ಳಿ ಬಳಿ ಗಾರೆ ಕೆಲಸ‌ ಮಾಡಿಕೊಂಡು ಜೀವನ ಮಾಡುತ್ತಿದ್ದರು.

ಆದರೆ ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಮಾರುತಿ ಹೊಡೆದು ಕಿರುಕುಳ ನೀಡುತ್ತಿದ್ದ. ಕಳೆದ ಒಂದು ತಿಂಗಳ ಹಿಂದೆಯೂ ಗಲಾಟೆ‌ ಮಾಡಿಕೊಂಡು ದುರ್ಗಮ್ಮ ಊರಿಗೆ ಹೋಗಿದ್ದಳು. ಆದರೆ 15 ದಿ‌‌ನಗಳ ಹಿಂದೆ ಪತ್ನಿಯ ಮನವೊಲಿಸಿ ಮಾರುತಿ ಬೆಂಗಳೂರಿಗೆ ಕರೆತಂದಿದ್ದ. ಇದೀಗ ದುರ್ಗಮ್ಮ ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Murder Case : ಕಂಡವರ ಹೆಂಡ್ತಿ ಮೇಲೆ ವ್ಯಾಮೋಹ; ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಕಿರಾತಕ

Murder Case : ಪರಸ್ತ್ರೀ ಮೇಲೆ ಕಣ್ಣು ಹಾಕಿದ್ದ ಕಿರಾತಕನೊಬ್ಬ, ಆಕೆಯನ್ನು ಒಲಿಸಿಕೊಳ್ಳಲು ಸುಪಾರಿ ಕೊಟ್ಟು ಮಹಿಳೆಯ ಗಂಡನನ್ನೇ ಕೊಲ್ಲಿಸಿದ್ದಾನೆ. ಸುಪಾರಿ ಪಡೆದವರು ಅರೆಸ್ಟ್‌ ಆಗಿದ್ದು, ಮುಖ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

VISTARANEWS.COM


on

By

Murder Case
ಕೊಲೆ ಆರೋಪಿ ನಾಗಪ್ಪ ಹಾಗೂ ಹತ್ಯೆಯಾದ ಕಾಡಪ್ಪ
Koo

ಬೆಳಗಾವಿ: ಪರಸ್ತ್ರೀಯನ್ನು ಒಲಿಸಿಕೊಳ್ಳಲು ಕಿರಾತಕನೊಬ್ಬ ಆಕೆಯ ಗಂಡನಿಗೆ ಚಟ್ಟ ಕಟ್ಟಿದ್ದಾನೆ. ಪಾರ್ಟಿ ಮಾಡೋಣ ಬಾ ಎಂದು ಕರೆದಿದ್ದಾನೆ. ಬಳಿಕ ನಶೆಯಲ್ಲಿದ್ದಾಗಲೇ ಕುತ್ತಿಗೆಗೆ ಬಟ್ಟೆ ಬಿಗಿದು ಉಸಿರುಗಟ್ಟಿಸಿ ಕೊಲೆ (Murder Case) ಮಾಡಿ ಪರಾರಿ ಆಗಿದ್ದಾನೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕಾಡಪ್ಪ ಶಿಗರಸಂಗಿ (42) ಕೊಲೆಯಾದ ದುರ್ದೈವಿ. ನಾಗಪ್ಪ ರೈನಾಪುರ ಎಂಬಾತ ಕೊಲ್ಲಲ್ಲು ಸುಪಾರಿ ಕೊಟ್ಟವನು. ಕೊಲೆಯಾದ ಕಾಡಪ್ಪನ ಪತ್ನಿಯ ಮೇಲೆ ಕಣ್ಣು ಹಾಕಿದ ನಾಗಪ್ಪ ಆಕೆಯನ್ನು ವ್ಯಾಮೋಹಿಸಿದ್ದ. ಹೀಗಾಗಿ ಕಾಡಪ್ಪನನ್ನು ಕೊಲ್ಲಲು 2.5 ಲಕ್ಷ ರೂ. ಸುಪಾರಿ ಕೊಟ್ಟಿದ್ದ.

ಕೊಲೆ ಮಾಡಲು ವ್ಯವಸ್ಥಿತ ಪ್ರೀ ಪ್ಲಾನ್ ಮಾಡಿದ್ದ ನಾಗಪ್ಪ, ಸುಪಾರಿ ಕೊಟ್ಟ ಆರೋಪಿ ಲಕ್ಷ್ಮಣ ಜತೆ ಕಡೆಯದಾಗಿ ಬೆನಕಟ್ಟಿಯ ಪೆಟ್ರೋಲ್ ಪಂಪ್ ಒಂದರಲ್ಲಿ ಕಾಣಿಸಿಕೊಂಡಿದ್ದ. ಇವರಿಬ್ಬರ ಚಲನವಲನ ಅಲ್ಲಿನ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಮೊದಲು ಲಕ್ಷ್ಮಣನನ್ನು ಸೆರೆಹಿಡಿದ ಪೊಲೀಸರು ವಿಚಾರಣೆ ನಡೆಸಿದಾಗ, ಕೊಲೆಯ ಸಂಪೂರ್ಣ ಸಂಚು ಬಯಲಾಗಿದೆ. ಸದ್ಯ ಐವರು ಆರೋಪಿಗಳ ಪೈಕಿ ಲಕ್ಷ್ಮಣ ವಿಠ್ಠಲ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ನಾಗಪ್ಪ, ಶಿವಾನಂದ ಬಸವರಾಜ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮುರುಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Bengaluru Police: ಸಿಟಿ ಸಿವಿಲ್‌ ಕೋರ್ಟ್‌ನಿಂದ ಕೊಲೆ ಆರೋಪಿ ಎಸ್ಕೇಪ್‌! ಸಿನಿಮಾ ಸ್ಟೈಲ್‌ನಲ್ಲಿ ಚೇಸ್‌ ಮಾಡಿದ ಖಾಕಿ

ಚೂರಿ ಹಿಡಿದು ಮ್ಯಾನೇಜರ್‌ನನ್ನು ಅಟ್ಟಾಡಿಸಿದ ಸೆಕ್ಯೂರಿಟಿ ಗಾರ್ಡ್‌!

ಸೆಕ್ಯೂರಿಟಿ ಗಾರ್ಡ್‌ನಿಂದ ಶೋರೂಂ ಕ್ಲಸ್ಟರ್ ಮ್ಯಾನೇಜರ್‌ ಚೂರಿಯಿಂದ ಇರಿದು ಅಟ್ಟಾಡಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಚೂರಿಯಿಂದ ಇರಿದ ದೃಶ್ಯ ವಿಸ್ತಾರ ನ್ಯೂಶ್‌ಗೆ ಲಭ್ಯವಾಗಿದೆ. ಉಡುಪಿಯ ಹರ್ಷ ಶೋರೂಂನಲ್ಲಿ ಘಟನೆ ನಡೆದಿದೆ.

ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಇರಿತಕ್ಕೊಳಗಾದವರು. ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರಸಾದ್ ಹಲ್ಲೆ ನಡೆಸಿದವನು. ಪ್ರಸಾದ್‌ ಕೆಲಸದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ರೋನ್ಸನ್‌ ವಾರ್ನಿಂಗ್ ನೀಡಿದ್ದರು. ಕೆಲಸದಿಂದ ತೆಗೆಯದಂತೆ ರೋನ್ಸನ್ ಬಳಿ ಪ್ರಸಾದ್ ಕೇಳಿಕೊಂಡಿದ್ದ. ಮರುದಿನ ಮೀಟಿಂಗ್‌ನಲ್ಲಿ ಚರ್ಚಿಸುವುದಾಗಿ ರೋನ್ಸನ್‌ ಹೇಳಿದ್ದರು.

ಆಗಸ್ಟ್ 10 ರ ಸಂಜೆ 7.30ರಂದು ಮಾತುಕತೆ ಬಳಿಕ ಗ್ರೌಂಡ್ ಫ್ಲೋರ್‌ನಲ್ಲಿ ಕಾದು ಕುಳಿತಿದ್ದ ಆರೋಪಿ ಪ್ರಸಾದ್ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಬರುತ್ತಿದ್ದಂತೆ ಚೂರಿಯಲ್ಲಿ ಇರಿದಿದ್ದ. ಕೂಡಲೇ ಈತನಿಂದ ತಪ್ಪಿಸಿಕೊಂಡು ರೋನ್ಸನ್‌ ಓಡಿದ್ದರು. ಆದರೂ ಬಿಡದೇ ಪ್ರಸಾದ್‌ ಬೆನ್ನಟ್ಟಿ ಹೋಗಿ ಕೊಲೆಗೆ ಯತ್ನಿಸಿದ್ದಾನೆ. ಇದೆಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಡುಪಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Muda Scam
ಕರ್ನಾಟಕ3 mins ago

Muda Scam: ಸಿಎಂ ವಿರುದ್ಧದ ಸ್ನೇಹಮಯಿ ಕೃಷ್ಣ ಅರ್ಜಿ ಆದೇಶ ಆ.20ಕ್ಕೆ ಕಾಯ್ದಿರಿಸಿದ ಕೋರ್ಟ್‌; ಅಬ್ರಹಾಂ ಅರ್ಜಿ ವಿಚಾರಣೆ ಮುಂದೂಡಿಕೆ

Lakshmi Hebbalkar
ಕರ್ನಾಟಕ11 mins ago

Lakshmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ಗೆ ಅಹವಾಲು ಸಲ್ಲಿಸಲು ಸಾಲುಸಾಲು ಜನ

Independence day 2024
ದೇಶ16 mins ago

Independence day 2024: ಆಗಸ್ಟ್ 15ರಂದು ಪ್ರಧಾನಿ ಮೋದಿ ಭಾಷಣವನ್ನು ಎಷ್ಟು ಹೊತ್ತಿಗೆ, ಎಲ್ಲಿ ವೀಕ್ಷಿಸಬಹುದು?

Ian Bell
ಕ್ರಿಕೆಟ್21 mins ago

Ian Bell : ಲಂಕಾ ತಂಡದ ನೂತನ ಬ್ಯಾಟಿಂಗ್​ ಕೋಚ್​ ಆಗಿ ಇಯಾನ್ ಬೆಲ್​ ನೇಮಕ

Prime fashion week
ಫ್ಯಾಷನ್28 mins ago

Prime Fashion week: ಪ್ರೈಮ್‌ ಫ್ಯಾಷನ್‌ ವೀಕ್‌ನಲ್ಲಿ ಸಂಜಯ್‌ ಚೊಲಾರಿಯಾ ಡಿಸೈನರ್‌ ವೇರ್ಸ್ ಅನಾವರಣ

Physical abuse
ಧಾರವಾಡ35 mins ago

Physical Abuse : ಅಪ್ರಾಪ್ತೆಯನ್ನು ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೊ ಹರಿಬಿಟ್ಟ ಯುವಕ!

Kaun Banega Crorepati Season 16
ಬಾಲಿವುಡ್51 mins ago

Kaun Banega Crorepati Season 16: 25 ಲಕ್ಷ ರೂ. ಪ್ರಶ್ನೆಗೆ ಉತ್ತರಿಸಲು ವಿಫಲರಾದ ಬೆಂಗಳೂರಿನ ಎಂಜಿನಿಯರ್! ಏನಿತ್ತು ಆ ಪ್ರಶ್ನೆ?

Tata Nexon EV
ಆಟೋಮೊಬೈಲ್1 hour ago

Tata Nexon EV: ಕೇವಲ 200 ರೂ. ಖರ್ಚಿನಲ್ಲಿ ಈ ಕಾರು 323 ಕಿ.ಮೀ ದೂರ ಸಾಗುತ್ತದೆ!

Arshad Nadeem
ಪ್ರಮುಖ ಸುದ್ದಿ1 hour ago

Arshad Nadeem : ಲಷ್ಕರ್ ಉಗ್ರನ ಜತೆ ಕಾಣಿಸಿಕೊಂಡ ಪಾಕಿಸ್ತಾನದ ಒಲಿಂಪಿಕ್ಸ್​ ಚಿನ್ನದ ಪದಕ ವಿಜೇತ ಅರ್ಷದ್​ ನದೀಮ್​!

World Organ Donation Day
ಆರೋಗ್ಯ1 hour ago

World Organ Donation Day: ಇಂದು ವಿಶ್ವ ಅಂಗಾಂಗದಾನ ದಿನ; ಯಾರದ್ದೋ ಬದುಕಿಗೆ ಭರವಸೆಯಾಗೋಣ! ನೋಂದಣಿ ಹೇಗೆ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ5 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ5 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌