KUWJ Endowment Award: ಕೆಯುಡಬ್ಲ್ಯೂಜೆ ವಾರ್ಷಿಕ ದತ್ತಿ ಪ್ರಶಸ್ತಿ ಪ್ರಕಟ; ಮೈಸೂರಿನಲ್ಲಿ ಮಾ.18 ರಂದು ಪ್ರಶಸ್ತಿ ಪ್ರದಾನ - Vistara News

ಕರ್ನಾಟಕ

KUWJ Endowment Award: ಕೆಯುಡಬ್ಲ್ಯೂಜೆ ವಾರ್ಷಿಕ ದತ್ತಿ ಪ್ರಶಸ್ತಿ ಪ್ರಕಟ; ಮೈಸೂರಿನಲ್ಲಿ ಮಾ.18 ರಂದು ಪ್ರಶಸ್ತಿ ಪ್ರದಾನ

KUWJ Endowment Award: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾ.18 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಫಲಕ ಮತ್ತು ಗೌರವಾದರಗಳನ್ನು ಒಳಗೊಂಡಿದೆ.

VISTARANEWS.COM


on

KUWJ Annual Endowment Award Announced
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವಾರ್ಷಿಕ ದತ್ತಿ ಪ್ರಶಸ್ತಿ (KUWJ Endowment Award) ಪ್ರಕಟಿಸಲಾಗಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ವಿವಿಧ ಮಾಧ್ಯಮಗಳ ಪತ್ರಕರ್ತರು ಪ್ರಶಸ್ತಿಗೆ ಆಯ್ಕೆಯಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾ.18 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು 5 ಸಾವಿರ ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಪ್ರಶಸ್ತಿ ವಿವರಗಳು

ಡಿವಿಜಿ ಪ್ರಶಸ್ತಿ
ಬಿ.ವಿ.ಮಲ್ಲಿಕಾರ್ಜುನಯ್ಯ,
ಸಂಪಾದಕರು-ಸಮನ್ವಯ ಮತ್ತು ವಿಶೇಷ ಯೋಜನೆ, ಕನ್ನಡಪ್ರಭ

ಪಾಟೀಲ ಪುಟ್ಟಪ್ಪ ಪ್ರಶಸ್ತಿ
ಜಿ.ವೀರಣ್ಣ, ಸಹಾಯಕ ಸಂಪಾದಕರು, ವಿಜಯವಾಣಿ

ಎಸ್.ವಿ.ಜಯಶೀಲರಾವ್ ಪ್ರಶಸ್ತಿ
ವಸಂತ ನಾಡಿಗೇರ, ಸಂಪಾದಕರು, ಸಂಯುಕ್ತ ಕರ್ನಾಟಕ

ಡಾ.ಎಂ.ಎಂ.ಕಲಬುರ್ಗಿ ಪ್ರಶಸ್ತಿ
ಅರುಣಕುಮಾರ್ ಹಬ್ಬು, ಹಿರಿಯ ಪತ್ರಕರ್ತರು, ಹುಬ್ಬಳ್ಳಿ

ಎಚ್.ಕೆ.ವೀರಣ್ಣಗೌಡ ಪ್ರಶಸ್ತಿ
ಕೆ.ಎನ್.ರವಿ, ಹಿರಿಯ ಪತ್ರಕರ್ತರು, ಮಂಡ್ಯ

ಕಿಡಿ ಶೇಷಪ್ಪ ಪ್ರಶಸ್ತಿ
ಚಂದ್ರಶೇಖರ ಸಿದ್ದಪ್ಪ ಜಿಗಜಿನ್ನಿ,
ಸಂಪಾದಕರು, ಶ್ರಾವಣ ಪತ್ರಿಕೆ, ಬಾಗಲಕೋಟೆ.

ಪಿ.ಆರ್.ರಾಮಯ್ಯ ಪ್ರಶಸ್ತಿ
ಮುಂಜಾನೆ ಸತ್ಯ, ಹಿರಿಯ ಪತ್ರಕರ್ತರು

ಎಚ್.ಎಸ್.ದೊರೆಸ್ವಾಮಿ ಪ್ರಶಸ್ತಿ
ಮೊಹಮ್ಮದ್ ಭಾಷ್ಯಂ ಗೂಳ್ಯಂ, ದಿ ಡೈಲಿ ನ್ಯೂಸ್.

ಪಿ.ರಾಮಯ್ಯ ಪ್ರಶಸ್ತಿ
ಎಂ.ಜಿ.ಪ್ರಭಾಕರ, ಸಂಪಾದಕರು, ಹೊನ್ನುಡಿ ಪತ್ರಿಕೆ, ಕೋಲಾರ.

ಮ.ರಾಮಮೂರ್ತಿ ಪ್ರಶಸ್ತಿ
ಶ್ರೀಶೈಲ ಗು.ಮಠದ, ಹಿರಿಯ ಪತ್ರಕರ್ತರು, ಕನ್ನಡ ಪ್ರಭ, ಬೆಳಗಾವಿ

ಗರುಡನಗಿರಿ ನಾಗರಾಜ್ ಪ್ರಶಸ್ತಿ
ಎನ್.ಬಸವರಾಜ್, ಹಿರಿಯ ಪತ್ರಕರ್ತರು

ಮಹದೇವ ಪ್ರಕಾಶ್ ಪ್ರಶಸ್ತಿ
ಜಿ.ಆರ್.ಸತ್ಯಲಿಂಗರಾಜು, ಹಿರಿಯ ಪತ್ರಕರ್ತರು

ಶಿವಮೊಗ್ಗ ಮಿಂಚು ಶ್ರೀನಿವಾಸ ಪ್ರಶಸ್ತಿ
ನಾಗರಾಜ ಶೆಣೈ, ಫೋಟೋ ಜರ್ನಲಿಸ್ಟ್, ಶಿವಮೊಗ್ಗ.

ಎಚ್.ಎಸ್.ರಂಗಸ್ವಾಮಿ ಪ್ರಶಸ್ತಿ
ಆರ್.ಎನ್.ಸಿದ್ಧಲಿಂಗ ಸ್ವಾಮಿ, ಹಿರಿಯ ಪತ್ರಕರ್ತ, ಚಾಮರಾಜನಗರ

ಎಂ.ನಾಗೇಂದ್ರರಾವ್ ಪ್ರಶಸ್ತಿ
ಡಾ.ಉಳ್ಳಿಯಡ ಎಂ. ಪೂವಯ್ಯ, ಸಂಪಾದಕರು, ಬ್ರಹ್ಮಗಿರಿ ಕೊಡವ ಪತ್ರಿಕೆ, ಮಡಿಕೇರಿ

ಅಭಿಮಾನಿ ಪ್ರಕಾಶನ ಪ್ರಶಸ್ತಿ
ಸಿರಾಜ್‌ ಬಿಸರಳ್ಳಿ, ಹಿರಿಯ ಪತ್ರಕರ್ತ, ಕೊಪ್ಪಳ

ಗುಡಿಹಳ್ಳಿ ನಾಗರಾಜ್ ಪ್ರಶಸ್ತಿ
ಜಯತೀರ್ಥ ಪಾಟೀಲ್, ಹಿರಿಯ ಪತ್ರಕರ್ತ, ಕಲಬುರಗಿ

ರಾಜಶೇಖರ ಕೋಟಿ ಪ್ರಶಸ್ತಿ
ಸಿ.ಕೆ.ಮಹೇಂದ್ರ, ಪ್ರಧಾನ ಸಂಪಾದಕರು, ಪ್ರತಿನಿಧಿ, ಮೈಸೂರು

ಅಪ್ಪಾಜಿಗೌಡ ಸಿನಿಮಾ ಪ್ರಶಸ್ತಿ
ಎಸ್.ಜಿ. ತುಂಗರೇಣುಕ, ಸಹ ಸಂಪಾದಕಿ, ಚಿತ್ರ ಸಿನಿಮಾ ಪತ್ರಿಕೆ

ಶ್ರೀಮತಿ ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ
ಡಿ.ಎನ್.ಶಾಂಭವಿ, ಹಿರಿಯ ಪತ್ರಕರ್ತೆ, ಹರಿಹರ, ದಾವಣಗೆರೆ ಜಿಲ್ಲೆ

ಟಿ.ಕೆ.ಮಲಗೊಂಡ ಪ್ರಶಸ್ತಿ
ನಾರಾಯಣ ಹೆಗಡೆ, ಹಿರಿಯ ಪತ್ರಕರ್ತರು, ಹಾವೇರಿ

ಆರ್.ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ಪುಟ ವಿನ್ಯಾಸಕ್ಕಾಗಿ)
ವಿಜಯ ಕರ್ನಾಟಕ, ಬೆಂಗಳೂರು

ಕೆಯುಡಬ್ಲ್ಯೂಜೆ ವಿಶೇಷ ಪ್ರಶಸ್ತಿ

ಜಯಲಕ್ಷ್ಮಿ ಸಂಪತ್ ಕುಮಾರ್, ಸಂಪಾದಕರು, ಸುಧರ್ಮ ಪತ್ರಿಕೆ

ಎಚ್.ಎನ್.ಆರತಿ, ದೂರದರ್ಶನ

ಎಸ್.ಎಂ.ಜಂಬುಕೇಶ್ವರ, ಹಿರಿಯ ಪೋಟೊ ಜರ್ನಲಿಸ್ಟ್

ಕೆ.ದೀಪಕ್, ಹಿರಿಯ ಪತ್ರಕರ್ತರು

ಇದನ್ನೂ ಓದಿ | Development: ಮುಂದುವರಿದ ಒಳಗೊಳ್ಳುವಿಕೆಯ ಅಭಿವೃದ್ಧಿಯ ಅನ್ವೇಷಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

UDR Case: ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ

UDR Case: ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

VISTARANEWS.COM


on

udr case foreigner
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore crime) ವಿದೇಶಿ ಪ್ರಜೆಯ (Foreigner) ಶವ (Body) ಕೊಳೆತ ಸ್ಥಿತಿಯಲ್ಲಿ (UDR Case) ಪತ್ತೆಯಾಗಿದೆ. ಯುಕೆ ಮೂಲದ ಪ್ರಜೆ ಗೇವಿನ್ ಜೇಮ್ಸ್ ಯಂಗ್ (59) ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಶಂಕೆ ಇದೆ.

ಕೋರಮಂಗಲ 7ನೇ ಬ್ಲಾಕ್‌ಲ್ಲಿ ಘಟನೆ ನಡೆದಿದೆ. ಮೃತ ಜೇಮ್ಸ್‌ ಡೆತ್ ನೋಟ್ ಬರೆದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 1ರಂದು ಬೆಂಗಳೂರಿಗೆ ಬಂದಿದ್ದ ಜೇಮ್ಸ್ ಯಂಗ್, ಆಪ್ ಮೂಲಕ ಕೋರಮಂಗಲದಲ್ಲಿ ಮನೆ ಬಾಡಿಗೆಗೆ ಪಡೆದಿದ್ದ. ಜನಾರ್ದನ್ ಎಂಬವರ ಮನೆಯಲ್ಲಿ ಬಾಡಿಗೆಗೆ ಇದ್ದ. ಶೆಫ್ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದ.

ಜೇಮ್ಸ್‌ ಹೆಂಡತಿಯಿಂದ ಡೈವೋರ್ಸ್‌ ಕೂಡ ಪಡೆದಿದ್ದು, ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಅನಾರೋಗ್ಯದಿಂದ ಕೂಡ ಬಳಲುತ್ತಿದ್ದ ಜೇಮ್ಸ್‌ಗೆ ಬಿಪಿ, ಶುಗರ್ ಕೂಡ ಇತ್ತು. ಶುಗರ್ ಹಿನ್ನೆಲೆಯಲ್ಲಿ ಮಾತ್ರೆ ಹಾಗೂ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದ. ಓವರ್ ಡೋಸ್ ಟ್ಯಾಬ್ಲೆಟ್ ಹಾಗೂ ಇನ್ಸುಲಿನ್ ತಗೆದುಕೊಂಡು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಅನುಮಾನಿಸಲಾಗಿದೆ.

ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್‌ ಮಾಡಬೇಡಿ ಎಂದು ಹೇಳಿದ್ದ. ಶನಿವಾರ ಮನೆ ಮಾಲೀಕ ಎಷ್ಟೇ ಕರೆ ಮಾಡಿದರೂ ಜೇಮ್ಸ್ ಸ್ವೀಕರಿಸಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮನೆ ಬಳಿ ಹೋಗಿ ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕೂಡಲೇ ಕೋರಮಂಗಲ ಪೊಲೀಸರಿಗೆ ಮನೆ ಮಾಲೀಕ ಜನಾರ್ದನ್ ಮಾಹಿತಿ ನೀಡಿದ್ದಾರೆ. ಕೋರಮಂಗಲ ಪೊಲೀಸರು ಹಾಗೂ ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾವಿನ ಬಗ್ಗೆ ತನಿಖೆ ಕೈಗೊಂಡಿರುವ ಪೊಲೀಸರು, ಈ ಬಗ್ಗೆ ಎಫ್ಆರ್‌ಆರ್‌ಓಗೆ ಮಾಹಿತಿ ನೀಡಿದ್ದಾರೆ. ಕೋರಮಂಗಲ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Continue Reading

ಕರ್ನಾಟಕ

Shravan 2024: ಇಂದಿನಿಂದ ಶ್ರಾವಣ ಶುಭಾರಂಭ; ಈ ತಿಂಗಳ ವಿಶೇಷ ಏನು?

Shravan 2024: ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Shravan 2024
Koo

ಬೆಂಗಳೂರು: ಹಿಂದೂ ಪಂಚಾಂಗದಲ್ಲಿ ಬರುವ 12 ಮಾಸಗಳಲ್ಲಿ ಶ್ರಾವಣ ಮಾಸ (Shravan 2024) ಐದನೇ ಮಾಸವಾಗಿದೆ. ಎಲ್ಲಾ ಮಾಸಗಳು ಹುಣ್ಣಿಮೆಯ ದಿನ ಪ್ರಾರಂಭವಾಗುತ್ತದೆ ಮತ್ತು ಆ ದಿನ ಬರುವ ನಕ್ಷತ್ರದ ಹೆಸರಿನಿಂದ ಆ ಮಾಸವನ್ನು ಕರೆಯಲಾಗುತ್ತದೆ. ಅದರಂತೆ ಈ ಮಾಸ ಪ್ರಾರಂಭವಾಗುವ ಹುಣ್ಣಿಮೆಯ ದಿನ ಶ್ರವಣ ನಕ್ಷತ್ರ ಬಂದ ಕಾರಣ ಈ ಮಾಸಕ್ಕೆ ಶ್ರಾವಣ ಮಾಸ ಎಂದು ಕರೆಯುತ್ತಾರೆ. ಈ ಮಾಸ ಹಿಂದೂಗಳಿಗೆ ಬಹಳ ಶ್ರೇಷ್ಠವಾದ ಹಾಗೂ ವಿಶೇಷವಾದ ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಹಾಗಾಗಿ ಈ ಮಾಸದಲ್ಲಿ ಶಿವ, ಪಾರ್ವತಿ, ಲಕ್ಷ್ಮಿ, ವಿಷ್ಣು ಸೇರಿದಂತೆ ಅನೇಕ ದೇವಾನುದೇವತೆಗಳ ಪೂಜೆ ಮಾಡುತ್ತಾರೆ. ಹಾಗೇ ಮದುವೆ, ಮುಂಜಿಯಂತಹ ಶುಭ ಕಾರ್ಯಗಳನ್ನು ಈ ಮಾಸದಲ್ಲಿ ಮಾಡಲಾಗುತ್ತದೆ. ಹಿಂದೂ ಕ್ಯಾಲೆಂಡರ್‌ನಲ್ಲಿ 2024ರಲ್ಲಿ ಶ್ರಾವಣ ಮಾಸ ಆಗಸ್ಟ್ 5ರ ಸೋಮವಾರದಂದು ಪ್ರಾರಂಭವಾಗಿ ಸೆಪ್ಟೆಂಬರ್ 3, 2024 ಮಂಗಳವಾರದ ಅಮಾವಾಸ್ಯೆಯ ತಿಥಿಯಂದು ಕೊನೆಗೊಳ್ಳುತ್ತದೆ. ಹಾಗಾಗಿ ಈ ಮಾಸದ ವಿಶೇಷತೆ ಏನು ಮತ್ತು ಶುಭ ಕಾರ್ಯಗಳನ್ನು ಮಾಡಲು ಈ ಮಾಸ ಸೂಕ್ತ ಏಕೆ ಎಂಬುದನ್ನು ತಿಳಿಯೋಣ.

Shravanmasa 2024
Shravanmasa 2024

ಶ್ರಾವಣ ಮಾಸದ ವಿಶೇಷತೆ:

ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ.

ಶ್ರಾವಣ ಮಾಸದಲ್ಲಿ ಹಬ್ಬ ಹರಿದಿನಗಳು ಒಂದರ ನಂತರ ಒಂದು ಸಾಲು ಸಾಲಾಗಿ ಬರುತ್ತದೆ. ಶ್ರಾವಣ ಮಾಸದ ಪ್ರತಿದಿನವೂ ಹಬ್ಬವೇ ಇರುತ್ತದೆ. ಹಾಗಾಗಿ ಶ್ರಾವಣ ಮಾಸದ ಎಲ್ಲಾ ದಿನಗಳು ಬಹಳ ಶುಭವೇ ಆಗಿರುತ್ತದೆ. ಆದಕಾರಣ ಈ ಶುಭ ದಿನಗಳಲ್ಲಿ ಶುಭ ಕಾರ್ಯ ಮಾಡಿದರೆ ಅದಕ್ಕೆ ಬಹಳ ಉತ್ತಮವಾದ ಫಲ ಶೀಘ್ರದಲ್ಲಿಯೇ ಸಿಗುತ್ತದೆ ಎಂಬ ನಂಬಿಕೆ ಇದೆ.

ಅಲ್ಲದೇ ಈ ಮಾಸದಲ್ಲಿ ಪ್ರಕೃತಿಯಲ್ಲಿನ ಗಿಡಮರಗಳು ಚಿಗುರೊಡೆದು ಹಚ್ಚಹಸಿರಾಗಿ, ಹೂಗಳನ್ನು ಬಿಟ್ಟು ಬಣ್ಣಗಳಿಂದ ಕಂಗೊಳಿಸುತ್ತಾ ಸಂತಸದಿಂದ ಇರುತ್ತದೆಯಂತೆ. ಹಾಗೇ ಪ್ರಾಣಿ ಪಕ್ಷಿಗಳು ಕೂಡ ಉಲ್ಲಾಸದಿಂದ ಇರುತ್ತದೆಯಂತೆ. ಇದನ್ನು ಕಂಡು ದೈವಾನುದೇವತೆಗಳು ಕೂಡ ಸಂಭ್ರಮ ಪಡುತ್ತಾರಂತೆ. ಹಾಗಾಗಿ ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಿದರೂ ದೇವರು ಬಹಳ ಬೇಗನೇ ಪ್ರಸನ್ನರಾಗಿ ಅನುಗ್ರಹ ನೀಡುತ್ತಾರೆ ಎನ್ನಲಾಗುತ್ತದೆ.

Shravanmasa 2024
Shravanmasa 2024

ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳು :

  • ಉಪಕರ್ಮ:
  • ಶ್ರಾವಣ ಮಾಸ ಹುಣ್ಣಿಮೆ ಜ್ಞಾನಕ್ಕೆ ಕಾರಣವಾಗಿದ್ದರಿಂದ ಈ ದಿನ ಜನೀವಾರ ಹಬ್ಬ ಅಥವಾ ಉಪಕರ್ಮ ಅಥವಾ ನೂಲು ಹುಣ್ಣಿಮೆಯನ್ನು ಆಚರಿಸುತ್ತಾರೆ.
  • ರಕ್ಷಾಬಂಧನ :
  • ಶ್ರಾವಣ ಹುಣ್ಣಿಮೆಯಂದು ಸಹೋದರ ಪ್ರೇಮಕ್ಕೆ ಹೆಚ್ಚು ಮಹತ್ವವಿರುವುದರಿಂದ ರಕ್ಷಾಬಂಧನವನ್ನು ಆಚರಿಸುವ ಮೂಲಕ ಸಹೋದರಿ ಸಹೋದರನಿಗೆ ರಾಖಿ ಕಟ್ಟುತ್ತಾರೆ.
  • ಹಯಗ್ರೀವ ಜಯಂತಿ :
  • ಮಕ್ಕಳಿಗೆ ವಿದ್ಯೆ ಬುದ್ಧಿ ಕರುಣಿಸಲಿ ಎಂದು ವಿದ್ಯೆಯನ್ನು ಅನುಗ್ರಹಿಸುವ ಹಯಗ್ರೀವನನ್ನು ಪೂಜಿಸಿ ಪ್ರಾರ್ಥಿಸುತ್ತಾರೆ.
  • ಸಂಕಷ್ಟ ಚತುರ್ಥಿ :
  • ಅಪಘಾತ, ಆರೋಗ್ಯ ಸಮಸ್ಯೆ, ಸಂಕಷ್ಟಗಳು ಜೀವನದಲ್ಲಿ ಬರಬಾರದೆಂದು ಸಂಕಷ್ಟಹರ ಚತುರ್ಥಿಯನ್ನು ಮಾಡುತ್ತಾರೆ.
  • ಕೃಷ್ಣಾಷ್ಟಮಿ :
  • ದುಷ್ಟ ಸಂಹಾರಕ್ಕಾಗಿ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನ ಶ್ರೀಕೃಷ್ಣ ಜನ್ಮ ತಾಳಿದ ಕಾರಣ ಈ ಮಾಸದಲ್ಲಿ ಕೃಷ್ಣಾಷ್ಟಮಿಯನ್ನು ಆಚರಿಸುವ ಮೂಲಕ ಕೃಷ್ಣನನ್ನು ಪೂಜಿಸುತ್ತಾರೆ.
  • ಶ್ರಾವಣ ಸೋಮವಾರ:
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಸೋಮವಾರದಂದು ಶಿವನ ಆರಾಧನೆ ಮಾಡಲಾಗುತ್ತದೆ. ಇದರಿಂದ ಶಿವನು ಬೇಗನೆ ಪ್ರಸನ್ನನಾಗಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ.
  • ಕಾಮನ ಏಕಾದಶಿ:
  • ನಿಮ್ಮ ಕೋರಿಕೆಗಳು ಈಡೇರಲು ಶ್ರಾವಣ ಮಾಸದಲ್ಲಿ ಕಾಮನ ಏಕಾದಶಿಯನ್ನು ಆಚರಿಸುವ ಮೂಲಕ ವಿಷ್ಣುವಿನ ಪೂಜೆ ಮಾಡಲಾಗುತ್ತದೆ.
  • ಪುತ್ರ ಏಕಾದಶಿ :
  • ಸಂತಾನ ಭಾಗ್ಯ ಬಯಸುವವರು ಶ್ರಾವಣ ಮಾಸದಲ್ಲಿ ಬರುವ ಪುತ್ರ ಏಕಾದಶಿಯನ್ನು ಆಚರಿಸುತ್ತಾರೆ.
  • ಶ್ರಾವಣ ಮಂಗಳವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಮಂಗಳವಾರದಂದು ಮಂಗಳಗೌರಿ ವ್ರತವನ್ನು ಮಾಡಲಾಗುತ್ತದೆ. ಇದು ಮದುವೆಯಾದ ಹೆಣ್ಣುಮಕ್ಕಳು ಮಾಡಿದರೆ ಅವರ ವೈವಾಹಿಕ ಜೀವನ ಸುಖಕರವಾಗಿರುತ್ತದೆಯಂತೆ.
  • ವರಮಹಾಲಕ್ಷ್ಮಿ ವ್ರತ:
  • ಈ ದಿನ ಮಹಿಳೆಯರು ಲಕ್ಷ್ಮಿದೇವಿಯನ್ನು ಕಳಸದ ಮೇಲೆ ಪ್ರತಿಷ್ಠಾಪನೆ ಮಾಡಿ ಜರಿ ಸೀರೆ ಉಡಿಸಿ, ಧನ, ಚಿನ್ನದ ಆಭರಣಗಳಿಂದ ದೇವಿಯನ್ನು ಅಲಂಕರಿಸಿ ಪೂಜೆ ಮಾಡಿ ವರವನ್ನು ಬೇಡಿಕೊಳ್ಳುತ್ತಾರೆ.
  • ಶ್ರಾವಣ ಶುಕ್ರವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಂದು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿದೇವಿಯನ್ನು ಪೂಜಿಸುವ ಮೂಲಕ ಸಂಪತ್ ಗೌರಿ ವ್ರತವನ್ನು ಆಚರಿಸುತ್ತಾರೆ.
  • ನಾಗರಪಂಚಮಿ :
  • ಶ್ರಾವಣ ಮಾಸದ ಪ್ರಾರಂಭವಾದ 5ನೇ ದಿನದಂದು ಬರುವ ನಾಗರ ಪಂಚಮಿ ಹಬ್ಬದಂದು ಮಹಿಳೆಯರು ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ.
  • ದೂರ್ವಾ ಗಣಪತಿ ವ್ರತ :
  • ಶ್ರಾವಣ ಮಾಸದಲ್ಲಿ ಬರುವ ಈ ವ್ರತದಂದು ಗಣಪತಿಗೆ ಪ್ರಿಯವಾದ ದೂರ್ವಾ ಅಥವಾ ಗರಿಕೆಯನ್ನು ಅರ್ಪಿಸಿ ಪೂಜಿಸಲಾಗುತ್ತದೆ.
  • ಶ್ರಾವಣ ಶನಿವಾರ:
  • ಶ್ರಾವಣ ಮಾಸದ ಪ್ರತಿ ಶನಿವಾರ ಶ್ರಾವಣ ಶನಿವಾರವೆಂದು ಕರೆಯುತ್ತಾರೆ. ಈ ದಿನ ಲಕ್ಷ್ಮಿ ಮತ್ತು ವೆಂಕಟೇಶ್ವರನನ್ನು ಆರಾಧಿಸುತ್ತಾರೆ. ಹಾಗೇ ಕೆಲವರು ಶ್ರಾವಣ ಶನಿವಾರದಂದು ಉಪವಾಸ ವ್ರತವನ್ನು ಆಚರಿಸುತ್ತಾರೆ. ಹಾಗೇ ಈ ದಿನ ಆಂಜನೇಯ ಸ್ವಾಮಿಯ ಪೂಜೆ ಹಾಗೂ ಶನಿ ಶಾಂತಿ ಪೂಜೆಗೆ ಬಹಳ ಉತ್ತಮ ಎನ್ನಲಾಗಿದೆ.

ಇದನ್ನೂ ಓದಿ:ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!
ಒಟ್ಟಾರೆ ಈ ಎಲ್ಲಾ ಶುಭ ದಿನಗಳು ಮತ್ತು ಹಬ್ಬಗಳಿಂದ ಶ್ರಾವಣ ಮಾಸ ತುಂಬಾ ವಿಶೇಷವಾದ ಹಾಗೂ ಪವಿತ್ರವಾದ ಮಾಸವಾಗಿದೆ. ಹಾಗಾಗಿ ಇಂತಹ ಶುಭಕರವಾದ ಶ್ರಾವಣ ಮಾಸವನ್ನು ಎಲ್ಲರೂ ಸಂತೋಷದಿಂದ ಸ್ವಾಗತಿಸಿ. ಹಾಗೇ ಈ ಮಾಸದಲ್ಲಿ ಎಲ್ಲರೂ ಶ್ರದ್ಧೆ, ಭಕ್ತಿಯಿಂದ ದೇವರ ಆರಾಧನೆ ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಿ.

ಇದನ್ನೂ ಓದಿ: Shravan 2024: ಶ್ರಾವಣ ಮಾಸದಲ್ಲಿ ಯಾವ ಹಬ್ಬ, ಯಾವ ದಿನ?

Continue Reading

ಮಳೆ

Karnataka weather : ಬೆಂಗಳೂರಿನಲ್ಲಿ ಚದುರಿದಂತೆ, ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ

Karnataka weather Forecast : ರಾಜ್ಯದ ಹಲವೆಡೆ ಮಳೆ (Rain News) ಪ್ರಮಾಣ ತಗ್ಗಿದೆ. ಕರಾವಳಿಯ ಕೆಲವೆಡೆ ಭಾರಿ ಮಳೆಯಾದರೆ, ಒಳನಾಡಿನಲ್ಲಿ ಒಣ ವಾತಾವರಣ ಇರಲಿದೆ. ಕೆಲವೊಮ್ಮೆ ಮೇಲ್ಮೇ ಗಾಳಿ ಬೀಸಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆಯಿದೆ. ಮಲೆನಾಡು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಲವಾದ ಮೇಲ್ಮೈ ಮಾರುತಗಳು (Karnataka Weather Forecast) ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಬಳ್ಳಾರಿ, ಚಿತ್ರದುರ್ಗ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ದಾವಣಗೆರೆ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರಿನಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಕೂಡಿರಲಿದೆ. ಮಲೆನಾಡಿನ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Karnataka Weather Forecast
Karnataka Weather Forecast

ಇದನ್ನೂ ಓದಿ: Road Accident : ಅಮಾವಾಸ್ಯೆಗೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಬೈಕ್‌ ಸವಾರ ಅಪಘಾತಕ್ಕೆ ಬಲಿ

ಬೆಂಗಳೂರಿನಲ್ಲಿ ಚದುರಿದ ಮಳೆ

ಬೆಂಗಳೂರು ವ್ಯಾಪ್ತಿಯಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುತ್ತದೆ.

ಕರಾವಳಿಗೆ ಯೆಲ್ಲೋ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Bengaluru: ಬೆಂಗಳೂರಿನ ಕೋಣನಕುಂಟೆ ಬಳಿಯ ಕೃಷ್ಣಾ ನಗರದಲ್ಲಿ ಮಹಿಳೆಯೊಬ್ಬರು ವಾಕಿಂಗ್‌ ಮಾಡುತ್ತಿದ್ದರು. ಇದೇ ವೇಳೆ ದುಷ್ಕರ್ಮಿಯೊಬ್ಬ ಅವರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆಗೆ ಕಿಸ್‌ ಕೊಟ್ಟು ಆತ ಪರಾರಿಯಾಗಿದ್ದಾನೆ. ಈ ವಿಡಿಯೊ ಈಗ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

VISTARANEWS.COM


on

Bengaluru
Koo

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಹೆಣ್ಣುಮಕ್ಕಳಿಗೆ ಸುರಕ್ಷತೆಯೇ ಇಲ್ಲದಂತಾಗಿದೆ. ಮನೆ ಎದುರು ತಿರುಗಾಡುತ್ತಿರುವಾಗ ಚಿನ್ನದ ಸರ ಕಿತ್ತುಕೊಂಡು ಹೋಗುವುದು, ಅವರ ಮೇಲೆ ಹಲ್ಲೆ ನಡೆಸುವುದು, ಮೊಬೈಲ್‌, ಪರ್ಸ್‌ ಎಗರಿಸುವುದು ಸೇರಿ ಹಲವು ರೀತಿಯ ಪ್ರಕರಣಗಳು ಸುದ್ದಿಯಾಗುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಕೋಣನಕುಂಟೆಯ (Konanakunte) ಕೃಷ್ಣಾ ನಗರದಲ್ಲಿ ಮನೆ ಬಳಿ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ.

ಹೌದು, ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ. ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಅವರ ಹಿಂದೆಯೇ ಓಡಿ ಬಂದ ದುರುಳನು, ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ. ಈ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಹಾಗೆಯೇ, ನಗರದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಆತಂಕ ವ್ಯಕ್ತವಾಗುತ್ತಿದೆ. ಜನ ಆಕ್ರೋಶವನ್ನೂ ವ್ಯಕ್ತಪಡಿಸುತ್ತಿದ್ದಾರೆ.

ಸಿಸಿಟಿವಿ ದೃಶ್ಯಾವಳಿ

ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೊ ವೈರಲ್‌ ಆದ ಬಳಿಕ ಹೆಣ್ಣುಮಕ್ಕಳು ಮನೆಯಿಂದ ಹೊರಬರಲು ಕೂಡ ಭಯಪಡುವಂತಾಗಿದೆ. ಹೆಣ್ಣುಮಕ್ಕಳ ಆಭರಣ, ಮೊಬೈಲ್‌ ಸೇರಿ ಬೆಲೆ ಬಾಳುವ ವಸ್ತುಗಳನ್ನು ಕಿತ್ತುಕೊಂಡು ಹೋಗುವುದು ಸೇರಿ ಹಲವು ಕೃತ್ಯ ಎಸಗುತ್ತಿರುವ ಇಂತಹ ದುಷ್ಕರ್ಮಿಗಳನ್ನು ಪೊಲೀಸರು ನಿಯಂತ್ರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಕೆಲವು ವಾರಗಳಿಂದ ಸಕ್ರಿಯವಾಗಿರುವ ಎಟಿಎಂ ಕಳ್ಳರ ಗ್ಯಾಂಗ್‌ಗಳು ಕೂಡ ಪೊಲೀಸರಿಗೆ ತಲೆನೋವಾಗಿವೆ. ಹರಿಯಾಣ ಮೂಲದ ಎರಡು ಗ್ಯಾಂಗ್‌ಗಳು ಸತತವಾಗಿ ಎಟಿಎಂಗಳಿಂದ ಹಣ ಎತ್ತುತ್ತಿವೆ. ಗುರುತೇ ಸಿಗದಂತೆ ದರೋಡೆ ಮಾಡುತ್ತಿರುವ ಈ ಗ್ಯಾಂಗ್‌ಗಳು ಪೊಲೀಸರಿಗೆ ತಲೆನೋವಾಗಿವೆ.

ಬೆಳ್ಳಂದೂರು ಠಾಣೆ ವ್ಯಾಪ್ತಿಯ ಎಕ್ಸಿಸ್ ಬ್ಯಾಂಕ್ ಎಟಿಎಂನಿಂದ ಕಳ್ಳತನ ಮಾಡಲಾಗಿದೆ. ಇಕೋ ಎರ್ಟಿಗಾ ಕಾರ್‌ನಲ್ಲಿ ಬಂದು ಕಳವು ಮಾಡಲಾಗಿದೆ. ಪರಿಶೀಲಿಸಿದಾಗ ಕಾರು ಕೂಡ ಕಳವು ಮಾಲು ಎಂಬುದು ಗೊತ್ತಾಗಿದೆ. ಆರೋಪಿಗಳು ಮೈಮೇಲೆ ಹೊದಿಕೆ ಹೊದ್ದುಕೊಂಡು ಎಟಿಎಂ ಒಳಗೆ ಹೋಗಿ ಕೃತ್ಯ ನಡೆಸುತ್ತಿದ್ದಾರೆ. ಹೀಗಾಗಿ ಇವರು ಗುರುತು ಕಾಣಿಸದಾಗಿದೆ.

ಇದನ್ನೂ ಓದಿ: Kangana Ranaut: ಮಲಗುವ ಕೋಣೆಗಳಲ್ಲಿ ಲೈಂಗಿಕತೆ ಏಕೆ ಉಳಿಯಬಾರದು?; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ

Continue Reading
Advertisement
teacher jobs alert
ಪ್ರಮುಖ ಸುದ್ದಿ1 second ago

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

udr case foreigner
ಕ್ರೈಂ15 mins ago

UDR Case: ವಿದೇಶಿ ಪ್ರಜೆಯ ಕೊಳೆತ ಶವ ಬೆಂಗಳೂರಿನಲ್ಲಿ ಪತ್ತೆ

gratitude ರಾಜಮಾರ್ಗ ಅಂಕಣ
ಅಂಕಣ44 mins ago

ರಾಜಮಾರ್ಗ ಅಂಕಣ: ಕೃತಜ್ಞತೆ ಎಂಬ ಮಹಾನ್ ಪ್ರವಾಹ

Shravan 2024
ಕರ್ನಾಟಕ2 hours ago

Shravan 2024: ಇಂದಿನಿಂದ ಶ್ರಾವಣ ಶುಭಾರಂಭ; ಈ ತಿಂಗಳ ವಿಶೇಷ ಏನು?

Waqf Act
EXPLAINER2 hours ago

Waqf Act: ವಕ್ಫ್‌ ಮಂಡಳಿ ಪರಮಾಧಿಕಾರಕ್ಕೆ ಮೋದಿ ಮೂಗುದಾರ; ಏನೆಲ್ಲ ತಿದ್ದುಪಡಿ? 9.4 ಲಕ್ಷ ಎಕರೆ ಯಾರ ಪಾಲು?

ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳು ಎಷ್ಟಿವೆ? ಇಲ್ಲಿದೆ ಎಲ್ಲ ವಿವರಗಳು

karnataka Weather Forecast
ಮಳೆ2 hours ago

Karnataka weather : ಬೆಂಗಳೂರಿನಲ್ಲಿ ಚದುರಿದಂತೆ, ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Bengaluru
ಕ್ರೈಂ8 hours ago

Bengaluru:‌ ಬೆಂಗಳೂರಲ್ಲಿ ಸ್ತ್ರೀಯರಿಗಿಲ್ಲ ರಕ್ಷಣೆ; ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಕಿಸ್‌ ಕೊಟ್ಟ ಕಾಮುಕ; Video ವೈರಲ್

Wanindu Hasaranga
ಕ್ರೀಡೆ8 hours ago

Wanindu Hasaranga : ಭಾರತ ವಿರುದ್ಧದ ಏಕ ದಿನ ಸರಣಿಗೆ ಲಂಕಾದ ಆಲ್​ರೌಂಡರ್​ ಔಟ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ18 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌