Site icon Vistara News

Siddheshwar Swamiji | ಮಂಗಳವಾರ ಜ್ಞಾನ ಯೋಗಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳ ಅಂತ್ಯ ಸಂಸ್ಕಾರ; ವಿಜಯಪುರ ಜಿಲ್ಲೆಯಲ್ಲಿ ರಜೆ ಘೋಷಣೆ

Siddheshwar Swamiji

ವಿಜಯಪುರ: ತೀವ್ರ ಅನಾರೋಗ್ಯದಿಂದ ದೇಹ ತ್ಯಾಗ ಮಾಡಿದ ಸಿದ್ದೇಶ್ವರ ಸ್ವಾಮೀಜಿ ಅವರ ಅಂತ್ಯಸಂಸ್ಕಾರ ಮಂಗಳವಾರ ಸಂಜೆ 5 ಗಂಟೆಗೆ ಜ್ಞಾನ ಯೋಗಾಶ್ರಮದದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ. ಶ್ರೀಗಳ (Siddheshwar Swamiji) ನಿಧನದ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.

ಮಂಗಳವಾರ ಬೆಳಗಿನ 4ರ ತನಕ ಆಶ್ರಮದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಸೈನಿಕ ಶಾಲೆಯಲ್ಲಿ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿಎಂ, ಸಚಿವರು ಹಾಗೂ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದ್ದಾರೆ.

ಸುತ್ತೂರು ಶ್ರೀ, ಕನ್ಹೇರಿ ಮಠದ ಶ್ರೀ, ಆಶ್ರಮದ ಅಧ್ಯಕ್ಷ ಗುರು ಬಸವಲಿಂಗ ಸ್ವಾಮೀಜಿ, ಎಂ.ಬಿ.ಪಾಟೀಲ, ವಚನಾನಂದ ಶ್ರೀ ಮತ್ತಿತರರಿದ್ದರು.

Exit mobile version