Site icon Vistara News

Leopard attack | ದೇವಸ್ಥಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿ ಮೇಲೆ ಚಿರತೆ ದಾಳಿ, ಯುವಕ ಸ್ಥಳದಲ್ಲೇ ಬಲಿ

chirathe attack

ಮೈಸೂರು: ದೇವಸ್ಥಾನಕ್ಕೆ ಹೋಗಿದ್ದ ಯುವಕನೊಬ್ಬ ಚಿರತೆ ದಾಳಿಗೆ ಬಲಿಯಾದ ಘಟನೆ ತಿ.ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ನಡೆದಿದೆ. ತಿ.ನರಸೀಪುರ ತಾಲ್ಲೂಕಿನ ಎಂ.ಎಲ್.ಹುಂಡಿ ಗ್ರಾಮದ ಮಂಜುನಾಥ್ (20) ಮೃತ ದುರ್ದೈವಿ.

ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ. ಹೋಗುವಾಗಲೋ, ಬರುವಾಗಲೋ ಚಿರತೆ ಅವನ ಮೇಲೆ ದಾಳಿ ಮಾಡಿದ್ದು, ಯುವಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಉಕ್ಕಲಗೆರೆ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟದ ಮೇಲಿದ್ದು, ಕಲ್ಲು ಬಂಡೆಗಳ ನಡುವೆ ಸಾಗಬೇಕಾಗಿದೆ. ಈ ವೇಳೆ ಹೊಂಚು ಹಾಕಿ ಕುಳಿತ ಚಿರತೆ ಆತನ ಮೇಲೆ ದಾಳಿ ಮಾಡಿದೆ. ಸಾಮಾನ್ಯವಾಗಿ ಯಾವುದೇ ಪ್ರಾಣಿಗೆ ಮಾಡುವಂತೆ ಯುವಕನ ಕುತ್ತಿಗೆಯನ್ನೇ ಚಿರತೆ ಹಿಡಿದಿದೆ. ಒಂದಷ್ಟು ದೂರ ಎಳೆದುಕೊಂಡು ಹೋದಂತೆ ಕಂಡುಬರುತ್ತಿದ್ದು, ಬಳಿಕ ಬಿಟ್ಟು ಹೋಗಿದೆ.

ದೇವಸ್ಥಾನಕ್ಕೆ ಹೋಗುತ್ತಿದ್ದ ಯಾರೋ ನೋಡಿ ವಿಷಯವನ್ನು ಮನೆಯವರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version