Site icon Vistara News

Leopard death: ಮೈ-ಬೆಂ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವು

#image_title

ಮಂಡ್ಯ: ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗ್ರಾಮದ ಸಮೀಪ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ (Leopard death) ಚಿರತೆ ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಬಳಿ ಇರುವ ಅರಣ್ಯದಿಂದ ಮೈ- ಬೆಂ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದಾಗ ಚಿರತೆಗೆ ವಾಹನ ಡಿಕ್ಕಿ ಹೊಡೆದಿದೆ.

ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ಸುಮಾರು ಎರಡು ವರ್ಷ ಪ್ರಾಯದ ಚಿರತೆ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮೃತದೇಹವನ್ನು ರವಾನಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೊಗಸಾಲೆ ಅಂಕಣ: ಹೊಸ ವರ್ಷದಲ್ಲಿ ಹಳೆ ಬಜೆಟ್, ಎಡವಟ್ಟು ಮಾಡಿದ ಗೆಹ್ಲೋಟ್

ಗೌಡಹಳ್ಳಿ ಸುತ್ತಮುತ್ತ ಆಗಾಗ ಚಿರತೆಗಳು ಪ್ರತ್ಯಕ್ಷವಾಗುತ್ತಿರುವ ಮಾಹಿತಿ ಲಭ್ಯವಾಗಿದೆ. ಚಿರತೆಗಳು ತಡರಾತ್ರಿ ಬೇಟೆ ಹುಡುಕಿಕೊಂಡು ರಸ್ತೆ ಆಸುಪಾಸಿಗೆ ಬರುವುದು, ನಾಯಿಗಳನ್ನು ಹೊತ್ತೊಯ್ಯುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಇಂಥ ಸಂದರ್ಭದಲ್ಲೇ ವಾಹನ ಚಿರತೆಗೆ ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಲಾಗಿದೆ.

Exit mobile version