ಕರ್ನಾಟಕ
Saffronisation issue : ಬಿಜೆಪಿಯವರಿಗೆ ತೊಂದರೆ ಇದ್ರೆ ಪಾಕಿಸ್ತಾನಕ್ಕೆ ಹೋಗಲಿ; ಪ್ರಿಯಾಂಕ್ ಖರ್ಗೆ ವಿವಾದಿತ ಹೇಳಿಕೆ
Priyanka Kharge: ನೈತಿಕ ಪೊಲೀಸ್ಗಿರಿ ನಡೆಸಿದರೆ ಯಾವ ಸಂಘಟನೆ ಎಂದು ನೋಡದೆ ಬ್ಯಾನ್ ಮಾಡಲಾಗುತ್ತದೆ. ಅದು ಬಜರಂಗದಳ, ಆರೆಸ್ಸೆಸ್ ಅಥವಾ ಯಾವುದೇ ಮತೀಯ ಸಂಘಟನೆ ಇರಬಹುದು ಎಂದಿದ್ದಾರೆ ಪ್ರಿಯಾಂಕ್ ಖರ್ಗೆ.
ಬೆಂಗಳೂರು: ʻನೈತಿಕ ಪೊಲೀಸ್ಗಿರಿ (Moral policing) ಮಾಡುವ ಸಂಘಟನೆಗಳನ್ನು ಬ್ಯಾನ್ ಮಾಡಲು ಹಿಂದೇಟು ಹಾಕುವುದಿಲ್ಲ. ಅದು ಬಜರಂಗದಳ (Bajarang dal) ಆಗಿರಬಹುದು, ಆರೆಸ್ಸೆಸ್ ಆಗಿರಬಹುದು ಅಥವಾ ಯಾವುದೇ ಮತೀಯ ಸಂಘಟನೆ ಆಗಿರಬಹುದುʼʼ ಎಂದು ಕಾಂಗ್ರೆಸ್ ನಾಯಕ, ನೂತನ ಸಚಿವ ಪ್ರಿಯಾಂಕ್ ಖರ್ಗೆ (Priyanka Kharge) ಹೇಳಿದ್ದಾರೆ. ಒಂದು ವೇಳೆ ಇದರಿಂದ ಕಷ್ಟ ಆಗುತ್ತದೆ ಎಂದಾದರೆ ಬಿಜೆಪಿಯವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಹೇಳಿದ್ದಾರೆ.
ʻʻಶಾಂತಿ ಭಂಗ ಮಾಡಿದರೆ, ಕಾನೂನು ಮುರಿದರೆ ಬಜರಂಗದಳ, ಆರೆಸ್ಸೆಸ್ ಬ್ಯಾನ್ಗೆ ಹಿಂದೇಟು ಹಾಕುವುದಿಲ್ಲ. ಇದರಿಂದ ಬಿಜೆಪಿಯವರಿಗೆ ತೊಂದರೆ ಆದರೆ ಅವರು ಪಾಕಿಸ್ತಾನಕ್ಕೆ ಹೋಗಲಿʼʼ ಎಂದರು.
ಬುಧವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಹೇಳಿದ್ದೇವೆ. ಶಾಂತಿ ಕದಡಿದ್ರೆ ಬಜರಂಗದಳ, ಆರ್ ಎಸ್ ಎಸ್ ಸಹ ನೋಡಲ್ಲ. ಕಾನೂನು ಕೈಗೆತ್ತಿಕೊಂಡ್ರೆ ಬ್ಯಾನ್ ಮಾಡ್ತೀವಿ. ನಮ್ಮ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಬರೀ ಬಜರಂಗದಳ ಅಲ್ಲ ಆರೆಸ್ಸೆಸ್ ಸೇರಿದಂತೆ ಯಾವುದೇ ಸಂಘಟನೆ ಆಗಿರಬಹುದು ಬ್ಯಾನ್ ಮಾಡ್ತೀವಿ ಎಂದು ಹೇಳಿದರು.
ಪೊಲೀಸರು ಕೇಸರಿ ಬಟ್ಟೆ ಧರಿಸಿ ಹಿಂದು ಕಾರ್ಯಕರ್ತರಂತೆ ಮನೋಸ್ಥಿತಿ ತೋರುವುದರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಪ್ರಿಯಾಂಕ ಖರ್ಗೆ ಕೂಡಾ ಮಾತನಾಡಿದ್ದಾರೆ.
ಬಿಜೆಪಿಯನ್ನು ಜನರು ವಿರೋಧ ಪಕ್ಷದ ಸ್ಥಾನದಲ್ಲಿ ಯಾಕೆ ಕೂರಿಸಿದರು ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಕೇಸರೀಕರಣ ತಪ್ಪು ಎಂದು ಹೇಳಿದ್ದೇವೆ. ಆದರೆ, ಕಾಂಗ್ರೆಸೀಕರಣ ತಪ್ಪಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಕಾಂಗ್ರೆಸೀಕರಣ ಯಾಕೆ ತಪ್ಪಲ್ಲ ಎಂದರೆ ಕಾಂಗ್ರೆಸ್ನದು ಬಸವ ತತ್ವ ಪಾಲನೆ. ಅದನ್ನು ಎಲ್ಲರೂ ಅನುಸರಿಸಬಹುದು ಎಂದು ಹೇಳಿದರು ಪ್ರಿಯಾಂಕ್ ಖರ್ಗೆ. ʻʻಮತದಾನ ಯಾರಿಗೆ ಬೇಕಾದರೂ ಮಾಡಲಿ. ಆದರೆ ಪೊಲೀಸ್ ಡ್ರೆಸ್ನಲ್ಲಿ ಕಾರ್ಯಕರ್ತರು ಆಗುವುದು ಬೇಡʼʼ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ʻʻಹಿಜಾಬ್, ಹಲಾಲ್, ಗೋಹತ್ಯೆ ನಿಷೇಧ ಕಾಯಿದೆ ವಾಪಸು ಮಾಡುತ್ತೇವೆʼʼ ಎಂದು ಹೇಳಿದ ಪ್ರಿಯಾಂಕ್ ಖರ್ಗೆ, ʻಕೆಲವರು ʻಪೊಲೀಸರ ಯಾವ ಭಯವೂ ಇಲ್ಲದೆ ಸಮಾಜದಲ್ಲಿ ಓಡಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ಇದು ನಡೆಯುತ್ತಿದೆʼʼ ಎಂದರು.
ಪೊಲೀಸ್ ಅಧಿಕಾರಿಗಳಿಗೆ ಡಿ.ಕೆ. ಶಿವಕುಮಾರ್ ತರಾಟೆ
ಮಂಗಳವಾರ ನಡೆದ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು, ಪೊಲೀಸರು ಕೇಸರಿ ಬಟ್ಟೆ ತೊಟ್ಟು ಹಿಂದು ಸಂಘಟನೆಗಳ ಕಾರ್ಯಕರ್ತರಂತೆ ವರ್ತಿಸುವುದರ ವಿರುದ್ಧ ಎಚ್ಚರಿಕೆ ನೀಡಿದ್ದರು.
ʻʻಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನು ಕೇಸರಿಕರಣ ಮಾಡಲು ನಾವು ಬಿಡೊಲ್ಲʼ ಎಂದು ಎಚ್ಚರಿಕೆ ನೀಡಿದ್ದರು.
ಉಡುಪಿ
Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್ ವಾಪಸ್; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್
Govt School: ಶಾಲಾ ಮಕ್ಕಳಿಗೆ ಕುಡಿಯಲು ನೀರು ಕೊಡಿ (Drinking Water) ಎಂದು ಶಿಕ್ಷಕರು ಕೇಳಿದರೆ, ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರು, ಶಾಲೆಗೆ ನೀರು ಕೊಡಬೇಡ ವಾಪಸ್ಸು ಬಾ ಎಂದು ಟ್ಯಾಂಕರ್ ಚಾಲಕನನ್ನು ವಾಪಸ್ ಕರೆಸಿಕೊಂಡಿದ್ದಾರೆ. ಇದಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದ್ದು ಆಡಿಯೋ ವೈರಲ್ ಆಗಿದೆ.
ಉಡುಪಿ: ಇಲ್ಲಿನ ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರ ವರ್ತನೆಗೆ ಪಂಚಾಯತ್ ಸದಸ್ಯರು ಕಿಡಿಕಾರಿ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಕುಡಿಯಲು ನೀರಿಲ್ಲ ಎಂದು ಶಿಕ್ಷಕರು ಪತ್ರವೊಂದನ್ನು ಬರೆದಿದ್ದರು. ಹೀಗಾಗಿ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಶಾಲೆಗೆ ನೀರಿನ ಟ್ಯಾಂಕರ್ ಅನ್ನು ಕಳಿಸಿದ್ದರು. ಆದರೆ ಪಂಚಾಯತ್ ಅಧ್ಯಕ್ಷ, ಟ್ಯಾಂಕರ್ ಚಾಲಕನಿಗೆ ಅವಾಜ್ ಹಾಕಿ ನೀರು ಕೊಡಬೇಡ ಬಾ ಎಂದು ವಾಪಸ್ ಕರೆಸಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಆಡಿಯೊವೊಂದು ಬಹಿರಂಗಗೊಂಡಿದ್ದು, ವೈರಲ್ (Viral news) ಆಗಿದೆ.
ಟ್ಯಾಂಕರ್ ಚಾಲಕನ ತರಾಟೆ ತೆಗೆದುಕೊಂಡ ಪಂಚಾಯತ್ ಸದಸ್ಯ
ಶಾಲೆಗೆ ನೀರು ತಲುಪಿಸದ ಹಿನ್ನೆಲೆಯಲ್ಲಿ ಚಾಲಕನಿಗೆ ಫೋನ್ ಮೂಲಕ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ತರಾಟೆ ತೆಗೆದುಕೊಂಡಿದ್ದಾರೆ. ಶಾಲೆಗೆ ಯಾಕೆ ನೀರು ಪೂರೈಸಿಲ್ಲ ಎಂದು ಪಂಚಾಯತ್ ಸದಸ್ಯ ಕೇಳಿದಾಗ, ಅಧ್ಯಕ್ಷರು ಶಾಲೆಗೆ ನೀರು ಬಿಟ್ಟರೆ ಬಿಲ್ ಮಾಡುವುದಿಲ್ಲ ಎಂದಿದ್ದಾರೆ. ಹೀಗಿರುವಾಗ ನಾನೇನು ಮಾಡಲಿ ಸರ್ ಎಂದು ಅಸಹಾಯಕತೆ ತೋರಿದ್ದಾನೆ. ಚಾಲಕ ಹಾಗೂ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ನಡುವಿನ ಸಂಭಾಷಣೆಯ ಆಡಿಯೊ ವೈರಲ್ ಆಗಿದೆ.
ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದ ಪಂಚಾಯತ್ ಸದಸ್ಯ
ವಂಡ್ಸೆ ವ್ಯಾಪ್ತಿಗೆ ಬರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 400ಕ್ಕೂ ಹೆಚ್ಚು ಮಕ್ಕಳು ಓದುತ್ತಿದ್ದಾರೆ. ಇತ್ತೀಚೆಗೆ ಶಾಲೆಯಲ್ಲಿ ನೀರಿನ ಅಭಾವ ಉಂಟಾಗಿದೆ. ಹೀಗಾಗಿ ಶಾಲೆಯ ಶಿಕ್ಷಕರು ಶಾಲೆಗೆ ನೀರು ಬೇಕೆಂದು ಗ್ರಾಮ ಪಂಚಾಯತ್ಗೆ ಪತ್ರವೊಂದನ್ನು ಬರೆದಿದ್ದರು.
ಶಿಕ್ಷಕರ ಲಿಖಿತ ಪತ್ರಕ್ಕೆ ಸ್ಪಂದಿಸಿದ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಪಂಚಾಯತ್ ವತಿಯಿಂದ ಕಳೆದ ಜೂ 7ರಂದು ಮಧ್ಯಾಹ್ನ 12:30ರ ಸುಮಾರಿಗೆ ಶಾಲೆಗೆ ನೀರಿನ ಟ್ಯಾಂಕರ್ ಕಳುಹಿಸಿದ್ದರು. ಆದರೆ, ಪಂಚಾಯತ್ ಅಧ್ಯಕ್ಷ ಟ್ಯಾಂಕರ್ ಚಾಲಕನಿಗೆ ಫೋನ್ ಮಾಡಿ ʻನೀರು ಕೊಡಬೇಡ ವಾಪಸ್ ಬಾʼ ಎಂದು ತಿಳಿಸಿದ್ದರಂತೆ.
ಹೀಗಾಗಿ ಚಾಲಕ ಶಾಲಾ ಆವರಣದಲ್ಲೇ 2,750 ಲೀಟರ್ ಬ್ಯಾರಲ್ ಇರಿಸಿ ವಾಪಸ್ ಆಗಿದ್ದಾನೆ. ಬಳಿಕ ಜೂನ್ 8ರ ಬೆಳಗ್ಗೆ ಪುನಃ ಪಂಚಾಯತ್ ಅಧ್ಯಕ್ಷ, ಟ್ಯಾಂಕರ್ ಚಾಲಕನನ್ನು ಕರೆಸಿ, ಶಾಲೆಗೆ ನೀರು ಕೊಡುವುದು ಬೇಡ, ನೀರು ಕೊಟ್ಟಲ್ಲಿ ನೀರಿನ ಬಿಲ್ ಮಾಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Road Accident: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಮರಣ; ಶಿವಮೊಗ್ಗ, ಕೊಡಗಿನಲ್ಲೂ ಹಾರಿಹೋಯ್ತು ಪ್ರಾಣ
ಹೀಗಾಗಿ ಪಂಚಾಯತ್ ಅಧ್ಯಕ್ಷರ ಬೇಜವಾಬ್ದಾರಿಗೆ ಬೇಸತ್ತಿರುವ ಪಂಚಾಯತ್ ಸದಸ್ಯ ಪ್ರಶಾಂತ್ ಪೂಜಾರಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ. ಪಂಚಾಯತ್ ಅಧ್ಯಕ್ಷರು ಶಾಲೆಗೆ ನೀರು ಬಿಡದಂತೆ ಪಿಡಿಒ ಮತ್ತು ನೀರಿನ ಚಾಲಕನಿಗೆ ಧ್ಕಮಿ ಹಾಕಿದ್ದಾರೆ. ಹೀಗಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಜತೆಗೆ ಹರಸಾಹಸ ಪಟ್ಟು ಶಾಲೆಗೆ ನೀರಿನ ವ್ಯವಸ್ಥೆಯನ್ನು ಮಾಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Karnataka Govt: ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಬಿಜೆಪಿ ನೀತಿಯನ್ನು ಕಿತ್ತೆಸೆದ ಕಾಂಗ್ರೆಸ್ ಸರ್ಕಾರ: ಇಬ್ಬರು ಸಚಿವರಿಗೆ ಜಿಲ್ಲೆ ಇಲ್ಲ
ಬಿಜೆಪಿ ಸರ್ಕಾರದಲ್ಲಿ (Karnataka Govt), ಅದೇ ಜಿಲ್ಲೆಯ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬಾರದು ಎಂಬ ನೀತಿ ಇತ್ತು.
ಬೆಂಗಳೂರು: ರಾಜ್ಯ ಸರ್ಕಾರವು (Karnataka Govt) ಎಲ್ಲ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ. ರಾಜ್ಯದ ಎಲ್ಲ ಸರ್ಕಾರಿ ಬಸ್ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವ ಶಕ್ತಿ ಯೋಜನೆಗೆ ಜೂನ್ 11ರಂದು ರಾಜ್ಯಾದ್ಯಂತ ಚಾಲನೆ ನೀಡಲಾಗುತ್ತಿದ್ದು, ಜಿಲ್ಲಾ ಕೇಂದ್ರದಲ್ಲಿ ಇದೀಗ ನೇಮಕವಾಗಿರುವ ಜಿಲ್ಲಾ ಉಸ್ತುವಾರಿ ಸಚಿವರೇ ಹೊಣೆ ಹೊರಲಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಕ್ಕೆ ನಿಯಮ ಹಾಕಿಕೊಳ್ಳಲಾಗಿತ್ತು. ಅದೇ ಜಿಲ್ಲೆಯ ಶಾಸಕರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬಾರದು ಎಂಬ ನೀತಿ ಇತ್ತು. ಆದರೆ ಈ ನೀತಿಯ ಕುರಿತು ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಜಿಲ್ಲಾ ಅಭಿವೃದ್ಧಿ ಸರಿಯಾಗಿ ನಡೆಯುವುದಿಲ್ಲ ಎಂದಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಇದಕ್ಕೆ ಸೊಪ್ಪು ಹಾಕಿರಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲುಂಡ ನಂಥರ ಅವಲೋಕನ ಸಭೆಯಲ್ಲೂ ಅಭ್ಯರ್ಥಿಗಳು ಇದೇ ಮಾತನ್ನು ಹೇಳಿದ್ದರು. ನಾಯಕರ ಮಾತನ್ನು ಕೇಳಿ ಅನೇಕರು ಸೋತರು ಎಂದು ತಿಳಿಸಿದ್ದರು.
ಇದೀಗ ಕಾಂಗ್ರೆಸ್ ಸರ್ಕಾರ, ಅದೇ ಜಿಲ್ಲೆಗೆ ನೇಮಕ ಮಾಡಬಾರದು ಎಂಬ ನೀತಿಯನ್ನು ಒಟ್ಟಾರೆ ಕೈಬಿಟ್ಟಿದೆ. ಬಹಳಷ್ಟು ಸಚಿವರಿಗೆ ಅದೇ ಜಿಲ್ಲೆಯನ್ನು ನೀಡಲಾಗಿದೆ. ಆದರೆ ಒಂದೇ ಜಿಲ್ಲೆಯಲ್ಲಿ ಇಬ್ಬರು ಸಚಿವರಿರುವಾಗ ಅನೇಕ ಜಿಲ್ಲೆಗಳಿಗೆ ಹೊರಗಿನವರನ್ನೂ ನೇಮಿಸಲಾಗಿದೆ.
ಸಚಿವರು ಹಾಗೂ ಉಸ್ತುವಾರಿ ಜಿಲ್ಲೆಗಳು
ಸಿಎಂ ಸಿದ್ದರಾಮಯ್ಯ (ಹಣಕಾಸು, ಗುಪ್ತಚರ)
ಡಿಸಿಎಂ ಡಿ.ಕೆ ಶಿವಕುಮಾರ್(ಸಣ್ಣ ಮತ್ತು ಬೃಹತ್ ನೀರಾವರಿ, ಬೆಂಗಳೂರು ಅಭಿವೃದ್ಧಿ)- ಬೆಂಗಳೂರು ನಗರ
ಜಿ.ಪರಮೇಶ್ವರ್ (ಗೃಹ)- ತುಮಕೂರು
ಹೆಚ್.ಕೆ ಪಾಟೀಲ್ (ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ)- ಗದಗ
ಕೆ.ಹೆಚ್ ಮುನಿಯಪ್ಪ (ಆಹಾರ ಮತ್ತು ನಾಗರಿಕ ಸರಬರಾಜು)-ಬೆಂಗಳೂರು ಗ್ರಾಮಾಂತರ
ರಾಮಲಿಂಗಾ ರೆಡ್ಡಿ (ಸಾರಿಗೆ ಹಾಗೂ ಮುಜರಾಯಿ)-ರಾಮನಗರ
ಎಂ.ಬಿ ಪಾಟೀಲ್ (ಬೃಹತ್ ಕೈಗಾರಿಕೆ)-ವಿಜಯಪುರ
ಕೆ.ಜೆ ಜಾರ್ಜ್ (ಇಂಧನ)-ಚಿಕ್ಕಮಗಳೂರು
ದಿನೇಶ್ ಗುಂಡೂರಾವ್ (ಆರೋಗ್ಯ)-ದಕ್ಷಿಣ ಕನ್ನಡ
ಹೆಚ್.ಸಿ ಮಹದೇವಪ್ಪ (ಸಮಾಜಕಲ್ಯಾಣ)-ಮೈಸೂರು
ಸತೀಶ್ ಜಾರಕಿಹೊಳಿ (ಲೋಕೋಪಯೋಗಿ)-ಬೆಳಗಾವಿ
ಕೃಷ್ಣ ಬೈರೇಗೌಡ (ಕಂದಾಯ)- ಇಲ್ಲ
ಪ್ರಿಯಾಂಕ್ ಖರ್ಗೆ (ಗ್ರಾಮೀಣಾಭಿವೃದ್ಧಿ, ಐಟಿ-ಬಿಟಿ)-ಕಲಬುರಗಿ
ಶಿವಾನಂದ ಪಾಟೀಲ್ (ಜವಳಿ, ಸಕ್ಕರೆ)-ಹಾವೇರಿ
ಜಮೀರ್ (ವಸತಿ)-ವಿಜಯನಗರ
ಶರಣಬಸಪ್ಪ ದರ್ಶನಾಪುರ್ (ಸಣ್ಣ ಕೈಗಾರಿಕೆ)-ಯಾದಗಿರಿ
ಈಶ್ವರ್ ಖಂಡ್ರೆ (ಅರಣ್ಯ)-ಬೀದರ್
ಚಲುವರಾಯಸ್ವಾಮಿ (ಕೃಷಿ)-ಮಂಡ್ಯ
ಎಸ್.ಎಸ್ ಮಲ್ಲಿಕಾರ್ಜುನ (ಗಣಿ ಮತ್ತು ಭೂಗರ್ಭ ಶಾಸ್ತ್ರ, ತೋಟಗಾರಿಕೆ)-ದಾವಣಗೆರೆ
ರಹೀಂ ಖಾನ್ (ಪೌರಾಡಳಿತ, ಹಜ್)- ಇಲ್ಲ
ಸಂತೋಷ ಲಾಡ್ (ಕಾರ್ಮಿಕ)-ಧಾರವಾಡ
ಡಾ.ಶರಣುಪ್ರಕಾಶ್ ಪಾಟೀಲ್ (ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ)-ರಾಯಚೂರು
ಆರ್.ಬಿ ತಿಮ್ಮಾಪುರ (ಅಬಕಾರಿ)-ಬಾಗಲಕೋಟೆ
ಕೆ. ವೆಂಕಟೇಶ್ (ಪಶುಸಂಗೋಪನೆ)-ಚಾಮರಾಜನಗರ
ಶಿವರಾಜ್ ತಂಗಡಗಿ (ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ)-ಕೊಪ್ಪಳ
ಡಿ.ಸುಧಾಕರ್ (ಯೋಜನೆ ಮತ್ತು ಸಾಂಖ್ಯಿಕ)-ಚಿತ್ರದುರ್ಗ
ಬಿ.ನಾಗೇಂದ್ರ (ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ)-ಬಳ್ಳಾರಿ
ಕೆ.ಎನ್.ರಾಜಣ್ಣ (ಸಹಕಾರ)-ಹಾಸನ
ಬಿ.ಎಸ್ ಸುರೇಶ್ (ನಗರಾಭಿವೃದ್ಧಿ)-ಕೋಲಾರ
ಲಕ್ಷ್ಮಿ ಹೆಬ್ಬಾಳ್ಕರ್ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ)-ಉಡುಪಿ
ಮಂಕಾಳ್ ವೈದ್ಯ (ಮೀನುಗಾರಿಕೆ ಮತ್ತು ಬಂದರು)-ಉತ್ತರ ಕನ್ನಡ
ಮಧು ಬಂಗಾರಪ್ಪ (ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ)-ಶಿವಮೊಗ್ಗ
ಡಾ.ಎಂ.ಸಿ .ಸುಧಾಕರ್ (ಉನ್ನತ ಶಿಕ್ಷಣ)-ಚಿಕ್ಕಬಳ್ಳಾಪುರ
ಎನ್.ಎಸ್.ಬೋಸರಾಜ್ (ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ)-ಕೊಡಗು
ಇದನ್ನೂ ಓದಿ: Cow slaughter: ಗೋಹತ್ಯೆ ಹೇಳಿಕೆ ನೀಡಿದ್ದು ಖಾತೆ ಬದಲಾವಣೆಗಾಗಿ: ಸಚಿವ ಕೆ. ವೆಂಕಟೇಶ್ ಕುರಿತು ಮಾಜಿ ಸಿಎಂ ಹೇಳಿದ್ದೇನು?
ಕರ್ನಾಟಕ
Guest Lecturer: 13,000 ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆಗೆ ಎದುರಾಗಿದೆ ಕಾನೂನು ಸಮಸ್ಯೆ!
ಪಠ್ಯ ಪುಸ್ತಕ ಪರಿಷ್ಕರಣೆಗೆ ಬಿಜೆಪಿ ಆಕ್ಷೇಪಿಸುವುದಕ್ಕೆ ತಲೆ ಕಡಿಸಿಕೊಳ್ಳದೆ ತಮ್ಮ ಪ್ರಣಾಳಿಕೆಯನ್ನು ಜಾರಿ ಮಾಡುವುದಾಗಿ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಂಗಳೂರು: ಅತಿಥಿ ಶಿಕ್ಷಕರ (Guest Lecturer) ನೇಮಕ ಪ್ರಕ್ರಿಯೆ ಆರಂಭವಾಗಿದ್ದು, ಕೆಲವು ಕಾನೂನಾತ್ಮಕ ಸಮಸ್ಯೆಗಳು ಎದುರಾಗಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜತೆಗೆ ಮಾತನಾಡಿದ ಮಧು ಬಂಗಾರಪ್ಪ, ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಾರಂಭ ಆಗಿದೆ. ಖಾಯಂ ನೇಮಕಾತಿಯಲ್ಲಿ ಹೈದರಾಬಾದ್ ಕರ್ನಾಟಕ, ನಾನ್ ಹೈದರಾಬಾದ್ ಕರ್ನಾಟಕ ಎಂದು ಲೀಗಲ್ ಸಮಸ್ಯೆ ಇತ್ತು. ಹೈದರಾಬಾದ್ ಕರ್ನಾಟಕ ಲೀಗಲ್ ಸಮಸ್ಯೆ ಇನ್ನೂ ಇದೆ. ಕೆಲವರು ಕೋರ್ಟ್ಗೆ ಹೋಗಿದ್ದಾರೆ. ಈ ಬಗ್ಗೆ ಅಂತಿಮ ಆದೇಶ ಬರಬೇಕು.
ಅಂತಿಮ ಆದೇಶ ಬಂದ ತಕ್ಷಣ ಪ್ರಕ್ರಿಯೆ ಆರಂಭ ಆಗಲಿದೆ. ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ. 13 ಸಾವಿರಕ್ಕೂ ಅಧಿಕ ಶಿಕ್ಷಕ ನೇಮಕಾತಿ ಆಗಲಿದೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲ ಅಂಶಗಳನ್ನು ಮಾಡುತ್ತೇವೆ. ಸಚಿವ ಸಂಪುಟದಲ್ಲಿಟ್ಟು ಅನುಮತಿ ಪಡೆಯುತ್ತೇವೆ ಎಂದರು.
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದ ಬಗ್ಗೆ ಮಧು ಬಂಗಾರಪ್ಪ ಅವರನ್ನೇ ಕೇಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಅದರಲ್ಲಿ ತಪ್ಪೇನು ಇಲ್ಲ. ಈ ಇಲಾಖೆ ನನ್ನ ಬಳಿ ಇದೆ, ಹಾಗಾಗಿ ಸಿಎಂ ಹೇಳಿದ್ದಾರೆ. ಅದು ಸಿಎಂ ಸಿದ್ದರಾಮಯ್ಯ ನನಗೆ ಕೊಟ್ಟ ಗೌರವ. ಸಪ್ಲಿಮೆಂಟರಿ ಕಳಿಸಿದ್ರೆ ಎಷ್ಟು ವೆಚ್ಚ ಆಗಲಿದೆ..? ಬಹಳ ಎನು ಆಗುವುದಿಲ್ಲ, ಸಚಿವ ಸಂಪುಟದಲ್ಲಿ ಅನುಮತಿ ಪಡೆದ ನಂತರ ಹೇಳ್ತೇನೆ. ಬಿಜೆಪಿಯವರಿಗೆ ಉತ್ತರ ಕೊಡಲು ನಾನು ಸ್ಥಾನ ಅಲಂಕರಿಸಿಲ್ಲ. ಮಕ್ಕಳ ಭವಿಷ್ಯಕ್ಕಾಗಿ ಅಲಂಕರಿಸಿದ್ದೇನೆ. ಪ್ರಣಾಳಿಕೆಯಲ್ಲಿ ಮಾತು ಕೊಟ್ಟಹಾಗೆ ಮಾಡ್ತೇವೆ ಎಂದರು.
ಇದನ್ನೂ ಓದಿ: Text Book: ಹಿಂದಿನ ಪಠ್ಯದಲ್ಲಿ ಹುಸಿ ದೇಶಭಕ್ತಿ; ಪಠ್ಯ ಪರಿಷ್ಕರಣೆ ಮಾಡುವುದೇ ಸರಿ ಅಂದ್ರು ಕುಂ. ವೀರಭದ್ರಪ್ಪ!
ಕರ್ನಾಟಕ
Electricity Bill: ನೇಕಾರರಿಗೆ ಶಾಕ್! 90 ರೂಪಾಯಿ ಮಿನಿಮಮ್ ಚಾರ್ಜ್ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?
Electricity Bill Hike: ಇಷ್ಟು ಸಮಯ ನೇಕಾರರಿಗೆ ವಿದ್ಯುತ್ ಕೈಮಗ್ಗಗಳಿಗೆ ಇದ್ದ ಕನಿಷ್ಠ ಜಾರ್ಜ್ ಅನ್ನು ಬರೋಬ್ಬರಿ 50 ರೂಪಾಯಿಗೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದರ ವಿರುದ್ಧ ನೇಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಸಂಬಂಧ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಡಿಸಿ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು (Congress guarantee) ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸಾಕಷ್ಟು ಕಸರತ್ತು ಮಾಡುತ್ತಿರುವ ರಾಜ್ಯ ಸರ್ಕಾರ ಈಗ ಆದಾಯದ ಮೂಲಗಳನ್ನು ಹುಡುಕುತ್ತಿವೆ. ಇದರ ಬೆನ್ನಲ್ಲೇ ನೇಕಾರರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರವು, ಏಕಾಏಕಿ ವಿದ್ಯುತ್ ಬಿಲ್ನ (Electricity Bill) ಕನಿಷ್ಠ ಶುಲ್ಕವನ್ನು ಹೆಚ್ಚಿಸಿ ಆದೇಶಿಸಿದೆ.
ವಿದ್ಯುತ್ ಮಗ್ಗಗಳಿಗಿದ್ದ ಕನಿಷ್ಠ 90 ರೂಪಾಯಿ ಮಿನಿಮಮ್ ಚಾರ್ಜ್ ಅನ್ನು 140ಕ್ಕೆ ಏರಿಕೆ ಮಾಡಲಾಗಿದೆ. ಅಂದರೆ ಒಂದೇ ಬಾರಿ 50 ರೂಪಾಯಿ ಹೆಚ್ಚಳ ಮಾಡಿದಂತೆ ಆಗಿದೆ. ಇದರಿಂದ ಬೀದಿಗಿಳಿದ ವಿದ್ಯುತ್ ಮಗ್ಗದ ಮಾಲೀಕರು, ಕಾರ್ಮಿಕರು ತಮಗೆ ನ್ಯಾಯ ಬೇಕೇ ಬೇಕು ಎಂದು ಪಟ್ಟುಹಿಡಿದಿದ್ದಾರೆ. ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ಆಶ್ರಯದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ.
ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ಮೊದಲೇ ನೇಕಾರರು ಸಂಕಷ್ಟದಲ್ಲಿದ್ದಾರೆ. ಸಾಲದ ಹೊರಗೆ ಬೇಸತ್ತು ರಾಜ್ಯದ 42 ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Congress Guarantee: ʼಗೃಹಲಕ್ಷ್ಮಿʼಗೂ ಮಗನ ಐಟಿಗೂ ಸಂಬಂಧ ಇಲ್ಲ; ಉಲ್ಟಾ ಹೊಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಪ್ರವಾಹ, ಕೋವಿಡ್ ಕಾರಣಕ್ಕೆ ನೇಕಾರ ಸಮುದಾಯ ಸಂಕಷ್ಟದಲ್ಲಿದ್ದು, ಮಿನಿಮಮ್ ಚಾರ್ಜ್ ಅನ್ನು ತಕ್ಷಣವೇ ಇಳಿಸಬೇಕು. ಈ ಕ್ರಮವನ್ನು ತುರ್ತಾಗಿ ಕೈಬಿಟ್ಟು, 10 ಎಚ್ಪಿವರೆಗೆ ಫ್ರೀ ವಿದ್ಯುತ್ ನೀಡಬೇಕು. ಅಧಿಕಾರಕ್ಕೆ ಬಂದರೆ ನೇಕಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ಮುಖ್ಯಮಂತ್ರಿಗಳಾದ ನೀವು ನೀಡಿದ್ದಿರಿ. ಈಗ ನಿಮ್ಮದೇ ಸರ್ಕಾರ ಬಂದಿದ್ದು, ತಾವು ನೀಡಿದ ಭರವಸೆ ಈಡೇರಿಸುವಂತೆ ಸಿಎಂ ಸಿದ್ದರಾಮಯ್ಯ ಅವರನ್ನು ನೇಕಾರರು ಆಗ್ರಹಿಸಿದ್ದಾರೆ.
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
South Cinema22 hours ago
Priya Prakash Varrier: ಕಣ್ಣು ಹೊಡೊಯೊ ಐಡಿಯಾ ಕೊಟ್ಟಿದ್ದು ನಾನೆ ಎಂದ ಪ್ರಿಯಾ; ಆಕೆಗೆ ತೈಲ ಕೊಡ್ರಪ್ಪ ಎಂದ ನಿರ್ದೇಶಕ!
-
South Cinema21 hours ago
Kannada New Movie: ಹಿಮಾಲಯದ ಕೊರೆಯುವ ಚಳಿಯಲ್ಲಿ ‘ಎಲ್ಲೋ ಜೋಗಪ್ಪ ನಿನ್ನರಮನೆ’ ಶೂಟಿಂಗ್!
-
South Cinema20 hours ago
Nandamuri Balakrishna: ‘ಐ ಡೋಂಟ್ ಕೇರ್ʼ ಎಂದು ಮಾಸ್ ಅವತಾರವೆತ್ತ ನಂದಮೂರಿ ಬಾಲಕೃಷ್ಣ; ಟೈಟಲ್ ರಿವೀಲ್!
-
ಪ್ರಮುಖ ಸುದ್ದಿ17 hours ago
ವಿಸ್ತಾರ ಸಂಪಾದಕೀಯ: ಇಂದಿರಾ ಗಾಂಧಿ ಹತ್ಯೆಯ ಸಂಭ್ರಮ; ಕೆನಡಾದಲ್ಲಿ ಖಲಿಸ್ತಾನಿಗಳ ಉದ್ಧಟತನ ಖಂಡನೀಯ
-
South Cinema23 hours ago
Sara Ali Khan: ಶುಭ್ಮನ್ ಗಿಲ್ ಜತೆ ಡೇಟಿಂಗ್, ಕೂನೆಗೂ ಉತ್ತರ ಕೊಟ್ಟರಾ ಸಾರಾ
-
ಪ್ರಮುಖ ಸುದ್ದಿ22 hours ago
ವಿಧವೆ ಅನ್ನೋದಕ್ಕೆ ರಾಷ್ಟ್ರಪತಿಯನ್ನು ಸಂಸತ್ ಭವನ ಉದ್ಘಾಟನೆಗೆ ಮೋದಿ ಆಹ್ವಾನಿಸಿಲ್ಲವೆಂದ ಕುಂ. ವೀರಭದ್ರಪ್ಪ
-
ಪ್ರಮುಖ ಸುದ್ದಿ22 hours ago
Textbook Revision: ಬುದ್ಧಿಜೀವಿ ಎಂದು ಹೇಳಿಕೊಂಡು ಕೆಲವರು ಓಡಾಡುತ್ತಿದ್ದಾರೆ!: ಸರ್ಕಾರಕ್ಕೆ ಹಿಗ್ಗಾಮುಗ್ಗಾ ಜಾಡಿಸಿದ ಮಾಜಿ ಸಚಿವ ಬಿ.ಸಿ. ನಾಗೇಶ್