LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು? - Vistara News

ಕರ್ನಾಟಕ

LKG UKG In Govt Schools: 578 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಸರ್ಕಾರ ಆದೇಶ; ಶಿಕ್ಷಕರಾಗಲು ಅರ್ಹತೆ ಏನು?

LKG UKG In Govt Schools: 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.

VISTARANEWS.COM


on

LKG UKG
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (LKG UKG In Govt Schools) ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ 2023-24 ಹಾಗೂ 2024-25ನೇ ಸಾಲಿನಲ್ಲಿ ಕ್ರಮವಾಗಿ ರಾಜ್ಯದ 262 ಮತ್ತು 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ. ಅದರಂತೆ, 2023-24 ನೇ ಸಾಲಿನಲ್ಲಿ ರಾಜ್ಯದ ಆಯ್ದ 262 ಮತ್ತು 2024-25ನೇ ಸಾಲಿನಲ್ಲಿ 316 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದ ಅನುಮತಿ ನೀಡುವಂತೆ ಕೋರಿ ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಇನ್ನು ಶಿಕ್ಷಣ ಸಚಿವಾಲದ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾಯೋಗಿಕವಾಗಿ ಪ್ರಾರಂಭಿಸುವ ಸಂಬಂಧದಲ್ಲಿ ಈ ಕೆಳಗಿನಂತೆ ವಿವರವಾದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಇದನ್ನೂ ಓದಿ | NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

ತರಗತಿ ಪ್ರಾರಂಭಿಸಲು ಪಾಲಿಸಬೇಕಾದ ಸೂಚನೆಗಳು

  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಎಲ್ಲಾ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
  • 2024-25ನೇ ಸಾಲಿನಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರಿ ಪ್ರಾಥಮಿಕ ಶಾಲೆಗಳ ಎಸ್.ಡಿ.ಎಂ.ಸಿಯವರು ಮತ್ತು ಶಿಕ್ಷಕರು ಸ್ಥಳೀಯ ಮಟ್ಟದಲ್ಲಿ ಪ್ರಚಾರ ಮಾಡಬೇಕು.
  • 2024-25ನೇ ಸಾಲಿನ ಪೂರ್ವ ಪ್ರಾಥಮಿಕ LKGಯ ಒಂದು ವಿಭಾಗವನ್ನು ಮಾತ್ರ ಪ್ರಾರಂಭಿಸುವುದು, ಈ LKG ತರಗತಿಗೆ 4 ವರ್ಷದಿಂದ 5 ವರ್ಷದ ವಯೋಮಿತಿಯ ಒಳಗಿನ ಮಕ್ಕಳನ್ನು ದಾಖಲುಮಾಡಿಕೊಳ್ಳುವುದು. ಈ ವಿಭಾಗ ಪ್ರಾರಂಭಿಸಲು 4 ವರ್ಷದಿಂದ 5 ವರ್ಷದ ವಯೋಮಾನದ ಕನಿಷ್ಠ 20 ಮಕ್ಕಳು ಪ್ರವೇಶ ಪಡೆಯುವಂತಿರಬೇಕು ಹಾಗೂ ಗರಿಷ್ಠ 30 ಮಕ್ಕಳನ್ನು ಮಾತ್ರ ದಾಖಲಿಸಬೇಕು.
  • ಪೂರ್ವ ಪ್ರಾಥಮಿಕ ತರಗತಿಯನ್ನು ಪ್ರಾರಂಭಿಸಲು ಒಂದು ಕೊಠಡಿಯನ್ನು ಗುರುತಿಸಿಕೊಳ್ಳುವುದು ಹಾಗೂ ಕೊಠಡಿ ಸಜ್ಜುಗೊಳಿಸುವುದು ಅವಶ್ಯ ಸಾಧನ ಸಾಮಗ್ರಿಗಳನ್ನು ನಿಯಮಾನುಸಾರ ಖರೀದಿಸುವುದು. ಕೊಠಡಿ ಸಜ್ಜುಗೊಳಿಸಲು ಸ್ಥಳಿಯ ಚಿತ್ರಕಲಾ ಶಿಕ್ಷಕರನ್ನು / ಚಿತ್ರಕಲಾ ಪರಿಣಿತರನ್ನು ಬಳಸಿಕೊಂಡು ಮಕ್ಕಳಿಗೆ ಆಕರ್ಷಕವಾದ ಚಿತ್ರಗಳ ರಚನೆ, ಗೋಡೆ ಮೇಲೆ ನೆಲ ಮಟ್ಟದಿಂದ 2 ಅಡಿಯವರೆಗೆ ಮಕ್ಕಳು ಬರೆಯಲು/ ಚಿತ್ರ ರಚಿಸಲು ಸಾಧ್ಯವಾಗುವಂತೆ ಗ್ರೀನ್ ಬೋರ್ಡ/ಕರಿಹಲಗೆ ರಚನೆ ಮುಂತಾದ ಕಾರ್ಯಗಳನ್ನು ಮಾಡುವುದು. ಖರೀದಿಸಬೇಕಾದ ಸಾಧನ ಸಾಮಗ್ರಿಗಳ ಪಟ್ಟಿಯನ್ನು ಹಾಗೂ ಕೆಲವು ಕೊಠಡಿಯ ವಿನ್ಯಾಸದ ಕೆಲವು ಮಾದರಿ ಉದಾಹರಣೆಗಳನ್ನು ಕೂಡಲೇ ಒದಗಿಸಬೇಕು.
  • ಪ್ರತಿ ಪೂರ್ವ ಪ್ರಾಥಮಿಕ ತರಗತಿಗೆ ಒಬ್ಬ ಶಿಕ್ಷಕಿ/ಶಿಕ್ಷಕ ಮತ್ತು ಒಬ್ಬರು ಆಯಾರವರನ್ನು ಶಾಲಾ ಎಸ್.ಡಿ.ಎಂ.ಸಿ ವತಿಯಿಂದ ತಾತ್ಕಾಲಿಕವಾಗಿ 10 ತಿಂಗಳುಗಳ ಅವಧಿಗೆ ನೇಮಕ ಮಾಡಿಕೊಳ್ಳತಕ್ಕದ್ದು. ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕರಿಗೆ ಪ್ರಸ್ತುತ ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಸಂಭಾವನೆಯಂತೆಯೇ ಮಾಸಿಕ 10,000 ರೂ. ಮತ್ತು ಆಯಾಗಳಿಗೆ ಮಾಸಿಕ 5000 ರೂ. ಸಂಭಾವನೆಯನ್ನು ನಿಗದಿಪಡಿಸತಕ್ಕದ್ದು.
  • ವೇತನ ಅನುದಾನವನ್ನು ಆಯಾ ಎಸ್.ಡಿ.ಎಂ.ಸಿ. ಖಾತೆಗೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಿಂದ ಬಿಡುಗಡೆ ಮಾಡಬೇಕು.

ಆಡಳಿತಾತ್ಮಕ ಕ್ರಮಗಳು

ಶಿಕ್ಷಕಿ/ಶಿಕ್ಷಕರನ್ನು ಮತ್ತು ಆಯಾ ಅವರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಈ ಕೆಳಗಿನ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ | NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಶಿಕ್ಷಕರ ಆಯ್ಕೆಗೆ ಆರ್ಹತೆ

ಪೂರ್ವ ಪ್ರಾಥಮಿಕ ತರಗತಿ ಶಿಕ್ಷಕಿ/ಶಿಕ್ಷಕ, ಪದವಿ ಪೂರ್ವ ಶಿಕ್ಷಣದಲ್ಲಿ (PUC) ಕನಿಷ್ಠ ಶೇ.50 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು ಮತ್ತು NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜ್ಯುಕೇಶನ್/ಪ್ರೀ- ಸ್ಕೂಲ್ ಎಜ್ಯುಕೇಶನ್/ಅರ್ಲಿ ಚೈಲ್ಡ್‌ಹುಡ್ ಎಜುಕೇಶನ್ ಪ್ರೊಗ್ರಾಂ (ಡಿ.ಇ.ಸಿ.ಇಡಿ) ಅಥವಾ ಬಿ.ಇಡಿ (ನರ್ಸರಿ) ಅರ್ಹತೆ (Diploma in Nursery Teachers Education/pre-School Education/Early Childhood Education Programme (D.E.C.ED) of duration of not less than two years or B.Ed(Nursery)] ಹೊಂದಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು.

ಒಂದು ವೇಳೆ ಈ ಮೇಲಿನ ಪೂರ್ವ ಪ್ರಾಥಮಿಕ ಶಿಕ್ಷಕರ ತರಬೇತಿ ಪಡೆದ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಪಿ.ಯು.ಸಿ.ಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆಯುವುದರ ಜತೆಗೆ NCTE ಮಾನ್ಯತೆ ಪಡೆದ ಸಂಸ್ಥೆಯಿಂದ ಡಿ.ಎಡ್ ತರಬೇತಿ ಹೊಂದಿರುವ 45 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳನ್ನು ಪರಿಗಣಿಸತಕ್ಕದ್ದು.

ಆಯಾಗಳ ಹುದ್ದೆಗೆ ಅರ್ಹತೆ:

  1. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು ಕಡ್ಡಾಯವಾಗಿ ಮಹಿಳೆಯಾಗಿರಬೇಕು, ವಯಸ್ಸು 45 ವರ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಸ್ಥಳಿಯರಾಗಿರಬೇಕು (ಆಯಾ ಗ್ರಾಮ/ವಾರ್ಡ್ ವ್ಯಾಪ್ತಿಯವರು), ಒಂದು ವೇಳೆ ಸ್ಥಳಿಯವಾಗಿ ಯಾವುದೇ ಅಭ್ಯರ್ಥಿ ಲಭ್ಯವಿಲ್ಲದೇ ಇದ್ದಲ್ಲಿ ಸರ್ಕಾರಿ ಶಾಲೆ ಇರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದವರನ್ನು/ಪಕ್ಕದ ವಾರ್ಡಿನವರನ್ನು ಪರಿಗಣಿಸತಕ್ಕದ್ದು.

ಶಿಕ್ಷಕರ/ಆಯಾರ ಆಯ್ಕೆಯಲ್ಲಿ ಅನುಸರಿಸಬೇಕಾದ ಮಾನದಂಡಗಳು

  1. a) ಶಿಕ್ಷಕರ/ಆಯಾರ ಆಯ್ಕೆ ಸಮಿತಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇರುವ ಮುಖ್ಯ ಶಿಕ್ಷಕರು, ಪ್ರಾಥಮಿಕ ವಿಭಾಗದ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಒಬ್ಬ ಹಿರಿಯ ಸಹ ಶಿಕ್ಷಕ / ಶಿಕ್ಷಕಿ ಸದಸ್ಯರಾಗಿರತಕ್ಕದ್ದು.
    B)ಶಿಕ್ಷಕರ ಆಯ್ಕೆಗೆ ವಿವಿಧ ಅಂಶಗಳಿಗೆ ನೀಡಬೇಕಾದ ಮೌಲ್ಯ (weightage): ಅರ್ಹ ಅಭ್ಯರ್ಥಿಗಳ ಪೈಕಿ ನಿಗದಿತ ಮಾನದಂಡದಂತೆ ಅತೀ ಹೆಚ್ಚು ಒಟ್ಟು ಅಂಕಗಳಿಸಿದವರನ್ನು ಪರಿಗಣಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.


    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

    ಗದಗ

    Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

    Lakshmeshwara Town : ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

    VISTARANEWS.COM


    on

    By

    Gosavi samaj lathicharged Sri Ram Sene calls for bandh in Lakshmeshwara town on October 19
    Koo

    ಗದಗ: ಲಕ್ಷ್ಮೇಶ್ವರ ಪಟ್ಟಣವನ್ನು (Lakshmeshwara Town) ಬಂದ್‌ ಮಾಡುವುದು ಖಚಿತ ಎಂದು ಶ್ರೀರಾಮ ಸೇನೆ ಪಣ ತೊಟ್ಟಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

    ಗುರುವಾರ ಗದಗನ ಪತ್ರಿಕಾ ಭವನದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಶ್ರೀರಾಮಸೇನೆ ರಾಜ್ಯ‌ ಕಾರ್ಯದರ್ಶಿ ರಾಜು ಖಾನಪ್ಪನವರ, ದಸರಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆಯಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಆಗಿದೆ. ಇದೆಲ್ಲದಕ್ಕೂ‌ ಕಾರಣ, ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಆಗಿದ್ದು, ಅವರನ್ನು ಕೂಡಲೇ‌ ಅಮಾನತು ಮಾಡುವಂತೆ ಒತ್ತಾಯಿಸಿದರು.

    ಇನ್ನು ಈ ಬಂದ್ ಕರೆ ವಿರೋಧಿಸಿ ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ ವಿರೋಧ ಮಾಡಿದ್ದಾರೆ. ಆದರೆ ಅ.19 ರಂದು ಲಕ್ಷ್ಮೇಶ್ವರ ಬಂದ್ ಮಾಡೋದಕ್ಕೆ ಸ್ಥಳಿಯರೇ ನಮಗೆಲ್ಲ ಬೆಂಬಲ ನೀಡುತ್ತಿದ್ದಾರೆ. ಬಂದ್‌ಗೆ ವಿರೋಧಿಸುತ್ತಿರುವವರು ಯಾರೂ ಸಹ ಸ್ಥಳೀಯ ನಾಯಕರಲ್ಲ. ಅವರೆಲ್ಲ ಗ್ಯಾಂಬ್ಲರ್ ಗಳು. ಇವರು ಮಾಡುವ ದಂಧೆಗೆಲ್ಲ ಪಿಎಸ್ಐ ಈರಣ್ಣ ರಿತ್ತಿ ಬೆಂಬಲ ಇದೆ.‌ ಹೀಗಾಗಿ ಪಿಎಸ್‌ಐ ಪರವಾಗಿ ಇವರೆಲ್ಲ ನಿಂತಿದ್ದಾರೆ.‌ ಅದೇನೆ ಇರಲಿ,‌ ನಾವು ಮಾತ್ರ ಬಂದ್ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ್ದರು.

    ಏನಿದು ಘಟನೆ?

    ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಅಂಗವಾಗಿ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಗೋಸಾವಿ ಸಮುದಾಯ ಸಂಭ್ರಮ ಸಡಗರದಿಂದ ಭಾಗಿಯಾಗಿದ್ದರು. ಈ ವೇಳೆ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್ ಪ್ರದೇಶದಲ್ಲಿ ಮೆರವಣಿಗೆ ಸಾಗುವ ವೇಳೆ,‌ ಅನ್ಯಕೋಮಿನ ಯುವಕರು ಬಂದು ಮೆರವಣಿಗೆಯಲ್ಲಿ ಭಾಗಿಯಾದ ಗೋಸಾವಿ ಯುವಕರ ನಡುವೆ ಗಲಾಟೆಯಾಗಿದೆ. ಆಗ ಗೋಸಾವಿ ಯುವಕರು ಕೇಸರಿ ಶಾಲನ್ನು ಹಿಡಿದು ಹಲ್ಲೆ ಮಾಡಿದ್ದಾರಂತೆ.

    ಹೀಗಾಗಿ ಶನಿವಾರ ತಡವಾಗಿದ್ದಕ್ಕೆ ಮರುದಿನ ರವಿವಾರ, ಹಲ್ಲೆಗೊಳಗಾದ ಯುವಕರು ಹಾಗೂ ಗೋಸಾವಿ ಸಮುದಾಯದ ಜನರು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆಗ ಲಕ್ಷ್ಮೇಶ್ವರ ಪೊಲೀಸರು ದೂರು ದಾಖಲು ಮಾಡಿಕೊಳ್ಳದೆ,‌ ಗೋಸಾವಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿದ್ದರಂತೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ, ಗೋಸಾವಿ ಸಮುದಾಯದವರು ಲಕ್ಷ್ಮೇಶ್ವರ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

    ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಇನ್ನು ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ ಎಂದು ಗದಗ ಎಸ್ಪಿ ಕಚೇರಿಗೆ ಗೋಸಾವಿ ಸಮುದಾಯದ, ಯುವಕರು, ಮಹಿಳೆಯರು, ಹಿರಿಯರು ಆಗಮಿಸಿದ್ದರು.

    ನಾವು ಬಡ ಜನರು, ಉದ್ಯೋಗ ಮಾಡಿಕೊಂಡು ಜೀವನ ನಡೆಸುತ್ತೇವೆ. ನಾವು ಹಿಂದೂಗಳು ಹೀಗಾಗಿ ಎಲ್ಲ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಆದರೆ, ಅನ್ಯಕೋಮಿನ ಯುವಕರು ನಮ್ಮ ಯುವಕರು ಹಾಕಿದ ಕೇಸರಿ ಶಾಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ‌ಗೊಳಗಾದವರು ನ್ಯಾಯ ಕೇಳಲು ಹೋದರೆ ಅವರ ಮೇಲೆಯೇ ಲಾಠಿ ಚಾರ್ಜ್ ಮಾಡಿದ್ದಾರೆ. ಯುವಕರು, ಮಹಿಳೆಯರಿಗೆ ಏಟು ಬಿದ್ದಿವೆ. ನಮಗೆ ನ್ಯಾಯ ಕೊಡಿಸಿ ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯ ಮಾಡಿದ್ದರು.

    ಆದರೆ ಪೊಲೀಸರ ಹೇಳಿಕೆ‌ ಪ್ರಕಾರ, ಠಾಣೆ ಎದುರು ಗುಂಪು ಚದುರಿಸುವ ಸಲುವಾಗಿ, ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಾದಿಸಿದ್ದಾರೆ. ಸದ್ಯ ಎರಡು ಕಡೆ ದೂರು- ಪ್ರತಿದೂರು ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಮುಂದುವರೆದ ಭಾಗವಾಗಿ, ಅ.19 ರಂದು ಶ್ರೀರಾಮಸೇನೆ ಸಂಘಟನೆ, ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಕರೆ ನೀಡಿದೆ.

    Continue Reading

    ಬೆಂಗಳೂರು

    Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

    Murder Case: ಮಹಿಳೆಯೊಬ್ಬಳು ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತಿಗೆ ಸಿಕ್ಕಿಬಿದ್ದಿದ್ದಾಳೆ. ಪತ್ನಿಯ ಕಳ್ಳಾಟಕ್ಕೆ ಸಿಟ್ಟಾದ ಪತಿ ಇಬ್ಬರನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.

    VISTARANEWS.COM


    on

    By

    A man killed his wife and her lover then committed suicide
    Koo

    ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಪ್ರಿಯಕರನನ್ನು ಕೊಲೆ (Murder case) ಮಾಡಿದ್ದಾನೆ. ಪೈತಮ್ಮ (40), ಗಣೇಶ್ ಕುಮಾರ್ ಕೊಲೆಯಾದವರು. ಗೊಲ್ಲಬಾಬು ಕೊಲೆಗೈದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇವರೆಲ್ಲರೂ ಮೂಲತಃ ಆಂಧ್ರ ಪ್ರದೇಶದವರು ಎಂದು ತಿಳಿದು ಬಂದಿದೆ.

    ಪೈತಮ್ಮ (40), ಗೊಲ್ಲಬಾಬು (45) ದಂಪತಿ ಕೆಲಸ ಅರಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದರು. ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಪತ್ನಿ ಪೈತಮ್ಮ ಮೇಲೆ ಆಗಾಗ ಗೊಲ್ಲಬಾಬು ಅನುಮಾನ ವ್ಯಕ್ತ ಪಡಿಸಿದ್ದ. ನಿನ್ನೆ ತಡರಾತ್ರಿಯಲ್ಲಿ ಗಣೇಶ್ ಕುಮಾರ್ ಜತೆಗಿದ್ದಾಗಲೇ ಪೈತಮ್ಮ ಪತಿಗೆ ಸಿಕ್ಕಿಬಿದ್ದಿದ್ದಳು.

    ಮತ್ತೊಬ್ಬನೊಟ್ಟಿಗೆ ಪತ್ನಿಯನ್ನು ಕಂಡೊಡನೆ ಸಿಟ್ಟಾದ ಗೊಲ್ಲಬಾಬು ಅಲ್ಲೇ ಇದ್ದ ಮರದ ರಿಪೀಸ್‌ನಿಂದ ಹಲ್ಲೆ ನಡೆಸಿ, ಇಬ್ಬರನ್ನು ಕೊಲೆ ಮಾಡಿದ್ದಾನೆ. ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ ಬಿ ಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯ ನಿರ್ಮಾಣ ಹಂತದ ‌ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ.

    ಕೋಣನಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

    Continue Reading

    ಬೆಂಗಳೂರು

    Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

    Bengaluru Airport : ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿ 2 ದಶಲಕ್ಷ ಚದರ ಅಡಿ ಪ್ರದೇಶದ ಬಿಸಿನೆಸ್ ಪಾರ್ಕ್ ತೆರೆಯಲು ಮೊದಲ ಹೆಜ್ಜೆ ಇಟ್ಟಿದೆ.

    VISTARANEWS.COM


    on

    By

    ಸಾಂದರ್ಭಿಕ ಚಿತ್ರ
    Koo

    ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗ ಸಂಸ್ಥೆಯಾದ (Bengaluru Airport) ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

    ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

    Construction of Business Park of Bangalore Airport City Limited a subsidiary of Bangalore International Airport Limited
    Construction of Business Park of Bangalore Airport City Limited a subsidiary of Bangalore International Airport Limited

    ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

    ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

    ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹ ಕೊಡಲಿದೆ.

    ಇದನ್ನೂ ಓದಿ: Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

    ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

    ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪ್ರಪ್ರಥಮ ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌ ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ ಹೊರಹೊಮ್ಮಲಿದೆ.

    ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ ಧ್ಯೇಯದೊಂದಿಗೆ ಹೊಂದಿಸಲಾಗಿದೆ.

    ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

    ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

    Continue Reading

    ಮಳೆ

    Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲಾಗಿದ್ದಾರೆ. ನಾಳೆ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

    VISTARANEWS.COM


    on

    By

    karnataka Rain
    Koo

    ಬೆಂಗಳೂರು: ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ನಿರಂತರ ಮಳೆಗೆ (Karnataka Rain) ಜನರು ಕಂಗಲಾಗಿದ್ದಾರೆ. ಹೀಗಾಗಿ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ (School Holidays) ನಾಳೆ (ಬುಧವಾರ) ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಡಿಸಿ ಜಗದೀಶ್ ಮಾಹಿತಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಳೆ ಒಂದು ದಿನ ರಜೆ ನೀಡಲು ನಿರ್ಧಾರ ಮಾಡಲಾಗಿದೆ. ಮಳೆಯ ಸ್ಥಿತಿಗತಿ ನೋಡಿಕೊಂಡು ಮುಂದಿನ ತೀರ್ಮಾನ ಮಾಡಲಾಗುವುದು. ಖಾಸಗಿ ಹಾಗೂ ಸರ್ಕಾರಿ ಎರಡೂ ಶಾಲಾ ಕಾಲೇಜಿಗೆ ರಜೆ ನೀಡಲು ನಿರ್ಧಾರ ಮಾಡಲಾಗಿದೆ.

    ಮಳೆಗೆ ರಸ್ತೆಗಳು ಜಲಾವೃತ

    ಬೆಂಗಳೂರಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ. ವೈಟ್ ಫೀಲ್ಡ್‌, ಮಾರತಹಳ್ಳಿ, ಸರ್ಜಾಪುರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಮಳೆಯಿಂದ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಡ್ರೈನೇಜ್ ಪೈಪ್ ಹೊಡೆದು ರಸ್ತೆ ಮಧ್ಯೆ ಮೋರಿ ನೀರು ಹಾರಿಯುತ್ತಿದೆ. ಪರಿಣಾಮ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಇತ್ತ ಹಲಸೂರು ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದ್ದು, ಗುಪ್ತ ಲೇಔಟ್‌ನಲ್ಲಿ ಮ್ಯಾನ್ ಹೋಲ್ ಉಕ್ಕಿ ಹರಿದಿದೆ. ಭಾರಿ ಮಳೆಗೆ ಬನಶಂಕರಿ ಸಿಂಡಿಕೇಟ್ ಕಾಲೋನಿ ಸಮೀಪ ಮರವೊಂದು ನೆಲಕ್ಕೆ ಉರುಳಿದೆ. ಅದೃಷ್ಟವಶಾತ್‌ ಮಳೆ ಕಾರಣಕ್ಕೆ ಜನರ ಓಡಾಟ ಇರಲಿಲ್ಲ ಹೀಗಾಗಿ ಅನಾಹುತ ಸಂಭವಿಸಿಲ್ಲ.

    ಎಲ್ಲೆಲ್ಲಿ ಎಷ್ಟು ಪ್ರಮಾಣದಲ್ಲಿ ಮಳೆ

    ಹಂಪಿ ನಗರ 26 ಮಿ.ಮೀ, ಕೆಂಗೇರಿ 25.5 ಮಿ.ಮೀ, ಮಾರುತಿ ಮಂದಿರ 25 ಮಿ.ಮೀ, ದೊರೆಸಾನಿಪಾಳ್ಯ 21.5 ಮಿ.ಮೀ, ರಾಜರಾಜೇಶ್ವರಿ ನಗರ 19.5 ಮಿ.ಮೀ, ನಾಯಂಡಹಳ್ಳಿ 17 ಮಿ.ಮೀ, ನಂದಿನಿ ಲೇಔಟ್​​ 16.5 ಮಿ.ಮೀ, ಬಿಟಿಎಂ ಲೇಔಟ್​​ 16.5 ಮಿ.ಮೀ ಮಳೆಯಾಗಿದೆ.

    ಡಿಸಿ ಕಚೇರಿ ಆವರಣದಲ್ಲಿರುವ ಹೋಟೆಲ್‌ಗೆ ಮಳೆ ನೀರು ನುಗ್ಗಿದ್ದರೆ, ಗುಟ್ಟಹಳ್ಳಿ ಸರ್ಕಲ್ ಬಳಿ ಚರಂಡಿ ನೀರು ತುಂಬಿ ರಸ್ತೆ ಮೇಲೆ ಹರಿಯುತ್ತಿದೆ. ಮಾನ್ಯತಾ ಟೆಕ್ ಪಾರ್ಕ್‌ನ ರಸ್ತೆಗಳಲ್ಲಿ ಮಳೆ ನೀರು ಹೊಳೆಯಂತೆ ಹರಿಯುತ್ತಿದೆ. ಟೆಕ್ ಪಾರ್ಕ್‌ನ ರಸ್ತೆಗಳೆಲ್ಲ ಜಲಾವೃತಗೊಂಡಿದೆ. ಕೋಟಿ ಕೋಟಿ ಬೆಲೆ ಬಾಳುವ ಕಾರುಗಳು ನೀರಿನಲ್ಲಿ ಮುಳುಗಡೆಯಾಗಿದೆ.

    ಬೆಳ್ಳಂದೂರು ಲೇಕ್ ರಸ್ತೆಯಲ್ಲಿ ಕೆಸರು ಮಯವಾಗಿತ್ತು. ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಿದ್ದು, ಕೆಸರಿನ ರಸ್ತೆಯಲ್ಲಿ ಸಂಚಾರಿಸಲು ವಾಹನ ಸವಾರರು ಪರದಾಡಿದರು. ಸುತ್ತ 2 ಕಿಲೋ ಮೀಟರ್ ಸಂಚಾರ ಸಾಧ್ಯ ಆಗದೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬೆಳಿಗ್ಗೆಯಿಂದ ಹಲವು ವಾಹನಗಳು ಕೆಟ್ಟು ನಿಂತು ಫಜೀತಿ ಉಂಟಾಗಿತ್ತು. ಆಳವಾದ ಗುಂಡಿ ಭಾಗಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ರಸ್ತೆಯಲ್ಲಿ 4 ಅಡಿಯಷ್ಟು ನೀರು ನಿಂತಿತ್ತು. ಕೆ.ಆರ್ ವಿಧಾನಸಭಾ ಕ್ಷೇತ್ರದ ವಡ್ಡರಪಾಳ್ಯದ ಸಾಯಿ ಲೇಔಟ್‌ಗೆ ಮಳೆ ನೀರು ನುಗ್ಗಿದೆ. ಮಳೆ ನೀರಿನಿಂದ ಮನೆಗಳು ಜಲಾವೃತಗೊಂಡಿದ್ದವು.

    karnataka Rain
    karnataka Rain

    ಬೆಂಗಳೂರಿನ ಶಿವಾಜಿನಗರದ, ಬ್ರಹ್ಮಕುಮಾರಿ ವೃತ್ತ , ಸೆಪ್ಪಿಂಗ್ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ರಸ್ತೆಯಲ್ಲಿ ಮೊಣಕಾಲುದ್ದ ನೀರು ತುಂಬಿದ್ದು, ಅಂಗಡಿ ಮುಂಗಟ್ಟುಗಳಿಗೆ ದೇವಸ್ಥಾನಗಳಿಗೆ ನೀರು ನುಗ್ಗಿದೆ. ವಾಹನಗಳ ಇಂಜಿನ್‌ಗೆ ನೀರು ನುಗ್ಗಿ ವಾಹನಗಳು ಕೆಟ್ಟೋ ರಸ್ತೆಯಲ್ಲೇ ನಿಂತು ಹೋಗುತ್ತಿವೆ. ಪಾಟರಿ ಟೌನ್ ಬಳಿಯ ಗಾಂಧಿ ಗ್ರಾಮದ ರಸ್ತೆಯಿಂದ ಟ್ಯಾನಿರೋಡ್‌ಗೆ ಸಂಪರ್ಕಿಸುವ ರಸ್ತೆ ಕರೆಯಂತಾಗಿದೆ. ಯಲಹಂಕದಲ್ಲಿರುವ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ ಮತ್ತೆ ಜಲಾವೃತಗೊಂಡಿದೆ.

    Continue Reading
    Advertisement
    Gosavi samaj lathicharged Sri Ram Sene calls for bandh in Lakshmeshwara town on October 19
    ಗದಗ5 ಗಂಟೆಗಳು ago

    Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

    A man killed his wife and her lover then committed suicide
    ಬೆಂಗಳೂರು8 ಗಂಟೆಗಳು ago

    Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

    Parvati Nair to play dual role in suspense thriller un Paravail Tamil film
    ಸಿನಿಮಾ8 ಗಂಟೆಗಳು ago

    Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

    ಬೆಂಗಳೂರು11 ಗಂಟೆಗಳು ago

    Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

    Jio Cloud PC to turn home TV into computer
    ಹೊಸ ಸುದ್ದಿ11 ಗಂಟೆಗಳು ago

    Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

    Dina Bhavishya
    ಭವಿಷ್ಯ11 ಗಂಟೆಗಳು ago

    Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

    dina bhavishya
    ಭವಿಷ್ಯ2 ದಿನಗಳು ago

    Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

    karnataka Rain
    ಮಳೆ2 ದಿನಗಳು ago

    Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    Actor Darshan
    ಬೆಂಗಳೂರು2 ದಿನಗಳು ago

    Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

    Karnataka Rain
    ಮಳೆ2 ದಿನಗಳು ago

    Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

    galipata neetu
    ಕಿರುತೆರೆ11 ತಿಂಗಳುಗಳು ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ1 ವರ್ಷ ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ1 ವರ್ಷ ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Bigg Boss- Saregamapa 20 average TRP
    ಕಿರುತೆರೆ12 ತಿಂಗಳುಗಳು ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ12 ತಿಂಗಳುಗಳು ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ10 ತಿಂಗಳುಗಳು ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ1 ವರ್ಷ ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ11 ತಿಂಗಳುಗಳು ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Action Prince Dhruva Sarja much awaited film Martin to hit the screens on October 11
    ಸಿನಿಮಾ2 ವಾರಗಳು ago

    Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

    Sudeep's birthday location shift
    ಸ್ಯಾಂಡಲ್ ವುಡ್2 ತಿಂಗಳುಗಳು ago

    Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

    Actor Darshan
    ಸ್ಯಾಂಡಲ್ ವುಡ್2 ತಿಂಗಳುಗಳು ago

    Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

    ಮಳೆ2 ತಿಂಗಳುಗಳು ago

    Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

    karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 ತಿಂಗಳುಗಳು ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 ತಿಂಗಳುಗಳು ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 ತಿಂಗಳುಗಳು ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 ತಿಂಗಳುಗಳು ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ2 ತಿಂಗಳುಗಳು ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    ಟ್ರೆಂಡಿಂಗ್‌