Lok Sabha Election 2024: ಫಲಿತಾಂಶ ಬರುವ ಮುಂಚೆಯೇ ಗೆದ್ರಾ ಎಚ್‌.ಡಿ. ಕುಮಾರಸ್ವಾಮಿ?; ಚುನಾವಣೆ ಬಗ್ಗೆ ಹೇಳಿದ್ದೇನು? - Vistara News

ಕರ್ನಾಟಕ

Lok Sabha Election 2024: ಫಲಿತಾಂಶ ಬರುವ ಮುಂಚೆಯೇ ಗೆದ್ರಾ ಎಚ್‌.ಡಿ. ಕುಮಾರಸ್ವಾಮಿ?; ಚುನಾವಣೆ ಬಗ್ಗೆ ಹೇಳಿದ್ದೇನು?

Lok Sabha Election 2024: ಫಲಿತಾಂಶ ಬರುವ ಮುಂಚೆಯೇ ಮಂಡ್ಯ ಕ್ಷೇತ್ರದಲ್ಲಿ ಗೆಲುವು ತಮ್ಮದೇ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಂಡ್ಯ : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ (Lok Sabha Election 2024) ಶುಕ್ರವಾರ ಮತದಾನ ನಡೆದಿದ್ದು, ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ನಂತರ ಜೂನ್‌ 4ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಮಂಡ್ಯ ಕ್ಷೇತ್ರದಲ್ಲಿ ಗೆಲುವು ತಮ್ಮದೇ ಎಂದು ವಿಶ್ವಾಸದಿಂದ ಹೇಳಿರುವುದು ಕಂಡುಬಂದಿದೆ.

ಜಿಲ್ಲೆಯ ಹೊನ್ನಲಗೆರೆ ಗ್ರಾಮದಲ್ಲಿ ಮಾತನಾಡಿರುವ ಎಚ್‌.ಡಿ. ಕುಮಾರಸ್ವಾಮಿ ಅವರು, ನನ್ನ ಪರವಾಗಿ ಮಂಡ್ಯ ಜಿಲ್ಲೆಯ ಎಲ್ಲಾ ಜನ ಚುನಾವಣೆ ನಡೆಸಿದ್ದಾರೆ. ಈ ಜಯ ನನ್ನದಲ್ಲಾ ಇದು ಎಲ್ಲರ ಜಯ. ಜಿಲ್ಲೆಯ ಎಲ್ಲಾ ಪಕ್ಷದಲ್ಲಿರುವ ನನ್ನ ಅಭಿಮಾನಿಗಳ ಜಯ. ಪಕ್ಷ ಭೇದ ಮರೆತು ಎಲ್ಲರೂ ನನ್ನ ಪರ ಕೆಲಸ ಮಾಡಿದ್ದಾರೆ, ರಾಜ್ಯದಲ್ಲೇ ಅತ್ಯಂತ ಹೆಚ್ಚು ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಎಂದು ಹೇಳುವ ಮೂಲಕ ಫಲಿತಾಂಶ ಬರುವ ಮುಂಚೆಯೇ ತಮ್ಮದೇ ಗೆಲುವು ಎಂದು ಹೇಳಿದ್ದಾರೆ.

ಸುಮಲತಾ ಸಪೋರ್ಟ್ ಮಾಡಿಲ್ಲ ಎಂದ ಎಚ್‌ಡಿಡಿ; ದೇವೇಗೌಡರು ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ ಎಂದ ಎಚ್‌ಡಿಕೆ

ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಪೋರ್ಟ್ ಮಾಡಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ದೇವೇಗೌಡರು ಆ ರೀತಿ ಯಾಕೆ ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ಸುಮಲತಾ ಅವ್ರ ಪ್ರಶ್ನೆ ಇಲ್ಲಿ ಬರಲ್ಲ. ದೇವೇಗೌಡರು ಯಾಕೆ ಹಾಗೆ ಹೇಳಿದ್ದಾರೆ ಗೊತ್ತಿಲ್ಲ. ದೇವೇಗೌಡರಿಗೆ ಮಾಹಿತಿ ಕೊರತೆ ಆಗಿರಬೇಕು ಅನಿಸುತ್ತದೆ. ಪಕ್ಷ ಭೇದ ಮರೆತು ಕಾಂಗ್ರೆಸ್, ಬಿಜೆಪಿಯವರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ಯಾರು ವಿರೋಧ ಮಾಡಿಲ್ಲ ಎಲ್ಲರೂ ನನಗೆ ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರೂ ನನ್ನ ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ, ಇದಕ್ಕಿಂತ ಇನ್ನೇನು ಮಾಡಬೇಕು. ಅಂಬರೀಶ್ ಅಭಿಮಾನಿಗಳು ಸಹ ನನಗೆ ಸಹಾಯ ಮಾಡಿದ್ದಾರೆ. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನು 2 ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಗೊಂದಲದ ಪ್ರಚಾರ ಮಾಡೋದು ಬೇಡ.
ಬೆಂಗಳೂರಿನಿಂದ ಬಂದು ಸುಮಲತಾ ನನಗೆ ಓಟ್ ಮಾಡಿದ್ದಾರೆ. ಪಕ್ಷ ಭೇದ ಮರೆತು ಕೆಲಸ ಮಾಡಿದ್ದಾರೆ ರಾಜ್ಯದಲ್ಲೆ ಅತ್ಯಂತ ಹೆಚ್ಚು ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದ ಸುಮಲತಾ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ 164ರಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತ ಚಲಾಯಿಸಿದರು. ಈ ವೇಳೆ ಮಾತನಾಡಿದ ಅವರು, ಮತದಾನ ಮಾಡೋದು ಕರ್ತವ್ಯ, ಅದನ್ನು ನಿರ್ವಹಿಸಿದ್ದೀನಿ. ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ
ಅವರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಕೊಡದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಸ್ಚತಂತ್ರ ಸಂಸದೆಯಾಗಿ ನನ್ನ‌ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೀನಿ ಎಂದರು.

ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್‌ಡಿಎಗೆ ಕೊಟ್ಟಿದ್ದೇವೆ. ನಾವು ನಿಷ್ಠೆಯಿಂದ ಕೆಲಸ ಮಾಡಿದ್ದೇವೆ, ಈ‌ ದಿನದವರೆಗೂ ಜೆಡಿಎಸ್‌ನ ಯಾವುದೇ ನಾಯಕರು ಯಾವುದೇ ಸಭೆಗೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಹೋಗದಿದ್ದರೆ ತಪ್ಪಾಗುತ್ತದೆ, ಆದ್ರೆ ಅವರು ನನ್ನ‌ ಕರೆದೇ ಇಲ್ಲ ಎಂದು ಹೇಳಿದರು.

ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations

ಬೆಂಗಳೂರು: ಈ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Constituency) ಕನಕಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಕಣ್ಣು ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಕೇತಗಾನಹಳ್ಳಿಯಲ್ಲಿ ಕುಟುಂಬ ಸಮೇತ ಬಂದು ಮತಚಲಾಯಿಸಿದ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ. ಈ ಹಿಂದೆ ಕುಕ್ಕರ್ ಎಲ್ಲ ಕೊಟ್ಟಿದ್ದಾರೆ. ಈಗ ಕಾರ್ಡ್ ಮತ್ತು ಕೂಪನ್ ಕೊಟ್ಟಿದ್ದಾರೆ. ಈಗ ಎಲ್ಲ ಕಡೆ ಇದನ್ನು ಶುರು ಮಾಡಿದ್ದಾರೆ. ಹಾಲಿ ಶಾಸಕರ ಫೋಟೋ ಹಾಕಿ 10 ಸಾವಿರದ ರೂಪಾಯಿಯ ಕೂಪನ್ ಕೊಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಕೊಡುವ ಚಾಳಿಯನ್ನು ಶುರು ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

ಚುನಾವಣಾ ಆಯೋಗದ ವಿರುದ್ಧ ಎಚ್‌ಡಿಕೆ ಗರಂ

ಚುನಾವಣಾ ಆಯೋಗವು ಈ ರೀತಿ ಚುನಾವಣೆಯನ್ನು ನಡೆಸುವ ಬದಲು ನೇರವಾಗಿ ಹಣ ಕೊಡುವ ವ್ಯವಸ್ಥೆಯನ್ನು ಜಾರಿಗೆ ತರಬಹುದು. ಆಯಾಯ ಅಭ್ಯರ್ಥಿಗಳು ತಮ್ಮ ಶಕ್ತಿ ಅನುಸಾರ ಹಣ ನೀಡುತ್ತಾರೆ. ದೇಶದಲ್ಲಿ ಈ ರೀತಿಯ ವ್ಯವಸ್ಥೆಯನ್ನು ತಂದರೆ ಒಳ್ಳೆಯದು ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನು ಚುನಾವಣಾ ಅಂತ ಕರೆಯುತ್ತಾರಾ? ಪ್ರಜಾಪ್ರಭುತ್ವದ ಹಬ್ಬ ಎಂದು ಹೇಳಲಾಗುತ್ತದೆಯೇ? ದುಡ್ಡು ಇರುವವರಿಗೆ, ಲೂಟಿ ಮಾಡುವವರಿಗೆ ಮಾತ್ರ ಇದು ಹಬ್ಬ. ಜನಸಾಮಾನ್ಯರಿಗೆ ಅಲ್ಲ. ಈ ರೀತಿಯಾಗಿ ಮತ ಪಡೆಯೋದು ಅಂದರೆ ಹೇಗೆ? ಮಹಾನಭಾವರು ಬುದ್ಧಿ ಹೇಳಿದ್ದೇ ಹೇಳಿದ್ದು ಎಂದು ಡಿ.ಕೆ. ಸಹೋದರರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಮತಗಟ್ಟೆ ಮುಂದೆ ಡಿಕೆ ಶಿವಕುಮಾರ್‌ ರಿಯಾಕ್ಷನ್;‌ ಇಲ್ಲಿದೆ ವಿಡಿಯೊ

ಜ್ಯೋತಿಷಿ ಹೇಳಿದಂತೆ ಹಣ ಹಂಚಿಕೆ

ಕನಕಪುರದಲ್ಲಿ ಜ್ಯೋತಿಷಿ ಹೇಳಿದಂತೆ ಹಣ ಹಂಚಿದ್ದಾರೆ. ಯಾರೋ ಶಾಸ್ತ್ರದವರು ಹೇಳಿದ್ದಾರೆ ಎಂದು 505 ರೂಪಾಯಿ, ಮಲೆ ಮಹದೇಶ್ವರ ದೇವರ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯಲ್ಲ ಹಂಚಿದ್ದಾರೆ. ಈ ಬಗ್ಗೆ ನಮ್ಮ ಡಿಸಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಕ್ತವಾದ ಚುನಾವಣೆ ನಡೆಯುತ್ತಿಲ್ಲ. ಇವತ್ತು ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣಾ ಅಕ್ರಮಗಳ ಮೂಲಕ ಗೆಲ್ಲುತ್ತೇವೆ ಎಂದು ಹೋಗುತ್ತಿದ್ದಾರೆ. ಅಕ್ರಮ ಮಾಡಿದರೂ ಜನತೆ ಬಲಿಯಾಗಿದೆ ನ್ಯಾಯಯುತವಾಗಿ ಮತದಾನ ಮಾಡಿ ಎಂದು ಮನವಿ ಮಾಡುತ್ತೇನೆ. ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು. ಚುನಾವಣಾ ಆಯೋಗ ತನ್ನ ವ್ಯವಸ್ಥೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಆಗಸ್ಟ್‌ 31ರ ಒಳಗೆ GBA ಚುನಾವಣೆ ನಡೆಸಿ- ಸುಪ್ರೀಂ ಕೋರ್ಟ್‌

VISTARANEWS.COM


on

ಆಗಸ್ಟ್‌ 31ರ ಒಳಗೆ ಜಿಬಿಎ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ಗಡುವು ನೀಡಿದೆ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗದ ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌, ಆಗಸ್ಟ್‌ 31ರವರೆಗೆ ಕಾಲಾವಕಾಶ ನೀಡಿದೆ. ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನೂ ಮೂರು ತಿಂಗಳ ಗಡುವು ವಿಸ್ತರಣೆ ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು.

ಈ ಹಿಂದೆ ಜೂನ್‌ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿತ್ತು. ಆದರೆ ಇದೀಗ ಸರ್ಕಾರದ ಮನವಿ ಮೇರೆಗೆ ಚುನಾವಣಾ ಗಡುವನ್ನು ಆಗಸ್ಟ್‌ ಅಂತ್ಯದವರೆಗೆ ವಿಸ್ತರಿಸಲಾಗಿದೆ.

ಸೆಪ್ಟೆಂಬರ್‌ ಅಂತ್ಯದವರೆಗೆ ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗದ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದವು. ಮನವಿಯನ್ನು ಆಲಿಸಿದ ಸಿಜೆಐ ಅವರನ್ನು ಒಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳಲ್ಲಿ, ರಾಜ್ಯದಲ್ಲಿ ಚುನಾವಣಾ ಸಿಬ್ಬಂದಿ ವರ್ಗ ಜನಗಣತಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಿಬಿಎ ಚುನಾವಣೆ ನಡೆಸಲು ಮೂರು ತಿಂಗಳ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದವು.

Continue Reading

Latest

ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ ಬಂದ್‌

VISTARANEWS.COM


on

ಇ-ಫಾರ್ಮಸಿ ಹಾಗೂ ಆನ್‌ಲೈನ್‌ ಮೂಲಕ ಔಷಧ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇಂದು ಮೆಡಿಕಲ್‌ ಸ್ಟೋರ್‌ಗಳು ಬಂದ್‌ ಆಗಿವೆ. ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಕರೆ ಮೇರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಮೆಡಿಕಲ್‌ ಸ್ಟೋರ್‌ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಆನ್‌ಲೈನ್‌ ಔಷಧ ವ್ಯಾಪಾರಕ್ಕೆ ಕಟ್ಟುನಿಟ್ಟಾದ ನಿಯಮ ಜಾರಿಗೊಳಿಸಬೇಕು, ಕಾರ್ಪೊರೇಟ್‌ ಸಂಸ್ಥೆಗಳ ಭಾರಿ ರಿಯಾಯಿತಿ ದರ ಸಮರಕ್ಕೆ ಬ್ರೇಕ್‌ ಹಾಕಬೇಕು ಹಾಗೂ ಎಲ್ಲಾ ವ್ಯಾಪಾರಿಗಳಿಗೆ ಸಮಾನ ಮುಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಅಖಿಲ ಭಾರತ ಕೆಮಿಸ್ಟ್‌ ಮತ್ತು ಡ್ರಗ್ಗಿಸ್ಟ್‌ ಸಂಘ ಮುಂದಿಟ್ಟಿದೆ.

ಈ ಬಂದ್‌ನಿಂದ ಅನೇಕ ಕಡೆಗಳಲ್ಲಿ ಔಷಧ ಖರೀದಿಗೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ ತುರ್ತು ಸೇವೆಗಳಿಗಾಗಿ ಕೆಲವು ಮೆಡಿಕಲ್‌ ಸ್ಟೋರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

Continue Reading

Latest

ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ ಬಂದ್‌

VISTARANEWS.COM


on

ಆನ್‌ಲೈನ್‌ನಲ್ಲಿ ಔಷಧ ಮಾರಾಟವನ್ನು ವಿರೋಧಿಸಿ ನಾಳೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳ ಬಂದ್‌ಗೆ ಕರೆ ನೀಡಲಾಗಿದೆ. ದೇಶದಾದ್ಯಂತ ಸುಮಾರು 9 ಲಕ್ಷ ಔಷಧ ಅಂಗಡಿಗಳು ಪ್ರತಿಭಟನೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಕರ್ನಾಟಕದಲ್ಲೂ ಸುಮಾರು 26 ಸಾವಿರಕ್ಕೂ ಹೆಚ್ಚು ಮೆಡಿಕಲ್ ಶಾಪ್‌ಗಳು ಬಂದ್ ಆಗುವ ಸಾಧ್ಯತೆ ಇದ್ದು, ಗ್ರಾಹಕರು ಅಗತ್ಯ ಔಷಧಿಗಳನ್ನು ಮುಂಚಿತವಾಗಿ ಖರೀದಿಸಿಕೊಳ್ಳುವಂತೆ ಸಂಘಟನೆಗಳು ಮನವಿ ಮಾಡಿವೆ.

ಇ-ಫಾರ್ಮಸಿ ವೇದಿಕೆಗಳ ಮೂಲಕ ಭಾರಿ ರಿಯಾಯಿತಿಯಲ್ಲಿ ಔಷಧ ಮಾರಾಟವಾಗುತ್ತಿರುವುದು ಸಣ್ಣ ಹಾಗೂ ಮಧ್ಯಮ ಮಟ್ಟದ ಮೆಡಿಕಲ್ ಅಂಗಡಿಗಳಿಗೆ ಹೊಡೆತ ನೀಡುತ್ತಿದೆ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ. ಜೊತೆಗೆ ಆನ್‌ಲೈನ್ ಮೂಲಕ ನಿಯಂತ್ರಣವಿಲ್ಲದೆ ಔಷಧ ವಿತರಣೆ ನಡೆಯುತ್ತಿರುವುದರಿಂದ ರೋಗಿಗಳ ಆರೋಗ್ಯಕ್ಕೂ ಅಪಾಯ ಉಂಟಾಗಬಹುದು ಎಂದು ಎಚ್ಚರಿಸಿದ್ದಾರೆ.
ಆನ್‌ಲೈನ್ ಮೂಲಕ ಔಷಧ ಖರೀದಿ ವ್ಯವಸ್ಥೆಯನ್ನು ನಿಯಂತ್ರಿಸುವುದು ಹಾಗೂ ಇ-ಫಾರ್ಮಸಿ ಕಂಪನಿಗಳ ವಿರುದ್ಧ ಕಠಿಣ ನಿಯಮ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗಿದೆ.

Continue Reading

Latest

ಕಂಜನ್ ದಾಳಿಗೆ ತುತ್ತಾಗಿದ್ದ ಮಾರ್ತಾಂಡ ದುರ್ಮರಣ

VISTARANEWS.COM


on

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ಸಾಕಾನೆಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿನ್ನೆ ಕಂಜನ್ ಮತ್ತು ಮಾರ್ತಾಂಡ ನಡುವೆ ನಡೆದ ಕಾದಾಟ ನಡೆದಿತ್ತು. ಈ ವೇಳೆ ಆನೆಯ ಕೆಳಗೆ ಸಿಲುಕಿ ಪ್ರವಾಸಿ ಮಹಿಳೆ ದುರ್ಮರಣ ಹೊಂದಿದ್ದರು.

ಘಟನೆಯ ಬೆನ್ನಲ್ಲೇ ದುಬಾರೆ ಆನೆ ಶಿಬಿರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದ್ದು, ಮುಂದಿನ ಆದೇಶದವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಇದೇ ವೇಳೆ ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಿಗೆ ಹೊಸ SOP ಜಾರಿಗೊಳಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಹೊಸ ಮಾರ್ಗಸೂಚಿಗಳ ಪ್ರಕಾರ ಆನೆಗಳಿಂದ ಕನಿಷ್ಠ 100 ಅಡಿ ದೂರ ಕಾಪಾಡಿಕೊಳ್ಳಬೇಕು, ಆನೆಗಳ ಬಳಿ ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಪ್ರವಾಸಿಗರು ಸಾಕಾನೆಗಳಿಗೆ ಯಾವುದೇ ಆಹಾರ ನೀಡಬಾರದು ಎಂದು ಸೂಚಿಸಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌