Lok Sabha Election 2024: ನನಗೆ ಕ್ಷೇತ್ರ ಪರಿಚಯ ಇಲ್ಲ, ಆದ್ರೆ ಜನರ ಪರಿಚಯ ಇದೆ: ಡಾ.ಸಿ.ಎನ್‌.ಮಂಜುನಾಥ್‌ - Vistara News

ಕರ್ನಾಟಕ

Lok Sabha Election 2024: ನನಗೆ ಕ್ಷೇತ್ರ ಪರಿಚಯ ಇಲ್ಲ, ಆದ್ರೆ ಜನರ ಪರಿಚಯ ಇದೆ: ಡಾ.ಸಿ.ಎನ್‌.ಮಂಜುನಾಥ್‌

Lok Sabha Election 2024: ರಾಮನಗರ ಜಿಲ್ಲೆಯ ಕನಕಪುರದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮ್ಮಿಲನ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮುಂಜುನಾಥ್‌ ಮಾತನಾಡಿದ್ದಾರೆ.

VISTARANEWS.COM


on

Dr CN Manjunath
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ರಾಮನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ‌. ಸಿ.ಎನ್. ಮಂಜುನಾಥ್ ಗೆಲುವಿಗಾಗಿ ಬಿಜೆಪಿ ನಾಯಕರು ಹೈವೋಲ್ಟೇಜ್ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಈಗಾಗಲೇ ಐದು ವಿಧಾಸಭೆ ಕ್ಷೇತ್ರಗಳಲ್ಲಿ ಸಭೆ ಮಾಡಿರುವ ಡಾಕ್ಟರ್ ಮಂಜುನಾಥ್ ಅವರು ಸೋಮವಾರ, ಡಿಸಿಎಂ ಸ್ವಕ್ಷೇತ್ರ ಕನಕಪುರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮ್ಮಿಲನ ಸಭೆ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಮಾತನಾಡಿ, ನನಗೆ ಕ್ಷೇತ್ರ ಪರಿಚಯ ಇಲ್ಲ. ಆದ್ರೆ ಜನ ಪರಿಚಯ ಇದ್ದಾರೆ. ನಿಮ್ಮ ಋಣ ತಿರಿಸುತ್ತೇವೆ ಅಂತ ಜನರೇ ಹೇಳುತ್ತಿದ್ದಾರೆ. ಟೀಕೆ ಟಿಪ್ಪಣಿಗಳಿಗೆ ನಗುವೇ ನನ್ನ ಉತ್ತರ. ಕಾರ್ಯಕರ್ತರ ಉತ್ಸಾಹ, ಹುರುಪು ನೋಡಿದರೆ ಖುಷಿ ಆಗುತ್ತದೆ. ಎರಡೂ ಪಕ್ಷದ ಕಾರ್ಯಕರ್ತರ ಸಮ್ಮಿಲನ ಆನೆ ಬಲ ಬಂದಂತೆ ಎಂದು ಹೇಳಿದರು.

ಜನ ಶಕ್ತಿ ಮುಂದೆ ಯಾವುದೇ ಶಕ್ತಿ ನಡೆಯಲ್ಲ. ಬಿಜೆಪಿ-ಜೆಡಿಎಸ್ ಎರಡೂ ಹೃದಯಗಳು ಜೋಡಣೆ ಆಗಿವೆ. ಕನಕಪುರದಲ್ಲಿ ಬರುವ ಒಂದೊಂದು ಮತಕ್ಕೂ ಬಹಳ ಸ್ವಾಭಿಮಾನ, ಪಾವಿತ್ರ್ಯತೆ ಇದೆ. ಇಲ್ಲಿಯ ಒಂದು ಮತ ಬೇರೆ ಕ್ಷೇತ್ರದ ಮೂರು ಮತಕ್ಕೆ ಸಮಾನ. ಟೀಕೆಗಳು ಸಾಯುತ್ತವೆ, ಕೆಲಸ ಉಳಿಯುತ್ತವೆ. ನಾವು ಆರೋಗ್ಯ ಕ್ಷೇತ್ರದಲ್ಲಿ 8 ಲಕ್ಷ ಜನಕ್ಕೆ ಹೃದಯ ಶಸ್ತ್ರಚಿಕಿತ್ಸೆ ಮಾಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | ಲೋಕಸಭೆ ಚುನಾವಣೆ ಗೆಲುವಿಗಾಗಿ ಕಾರ್ಯಕರ್ತರಿಗೆ 100 ದಿನಗಳ ಟಾಸ್ಕ್‌ ಕೊಟ್ಟ ಮೋದಿ!

ಕನಕಪುರದಲ್ಲಿ ಸಮ್ಮಿಲನ ಸಭೆ ಆತ್ಮವಿಶ್ವಾಸ ಕೊಟ್ಟಿದೆ. ಉರಿ ಬಿಸಿಲಿನಲ್ಲಿ‌ ಜನರು ಕಿಕ್ಕಿರಿದು ಜನರು ಬಂದಿದ್ದಾರೆ. ಹೀಗಾಗಿ ನಾನು ಗೆಲ್ಲುವುದು 100% ಖಚಿತವಾಗಿದೆ. ಕನಕಪುರದಲ್ಲಿ ಗಣನೀಯವಾಗಿ ಜಾಸ್ತಿ ಮತಗಳು ಬರುತ್ತವೆ.
ಕಳೆದ ಬಾರಿಗಿಂತ ಈ ಬಾರಿ ಜೆಡಿಎಸ್ ಬಿಜೆಪಿ ಹೆಚ್ಚು ಮತಗಳನ್ನು ಗಳಿಸುತ್ತದೆ ಎಂದು ತಿಳಿಸಿದರು.

ಶಾಸಕ ಮುನಿರತ್ನ ಮಾತನಾಡಿ, ರಾಜಕಾರಣಕ್ಕೆ ಬಂದರೆ ಜನಸೇವೆ ಮಾಡಬೇಕು. ಡಾ.ಮಂಜುನಾಥ್ ಬಂದಿರುವುದು ಸ್ವಾರ್ಥಕ್ಕಲ್ಲ ಜನಸೇವೆಗೆ. ಬೇರೆಯವರಿಗೆ ಓಟ್ ಹಾಕಿದರೆ ಅದು ಸ್ವಾರ್ಥಕ್ಕೆ ಹೋಗುತ್ತೆ. ಡಾ.ಮಂಜುನಾಥ್ ಅವರ ಸೇವೆ 140 ಕೋಟಿ ಜನತೆಗೆ ಬೇಕು. ಇದನ್ನು ಬರೆದಿಟ್ಟುಕೊಳ್ಳಿ, ಮೈತ್ರಿ ಸಚಿವರು ಯಾರಾದರೂ ಇದ್ದರೆ ಅದು ಡಾ.ಮಂಜುನಾಥ್, ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ಅಷ್ಟೇ ಸತ್ಯ. ಡಾ.ಮಂಜುನಾಥ್ ಅವರು ಮೋದಿ ಸಂಪುಟದಲ್ಲಿ ಸಚಿವರಾಗೋದು ಅಷ್ಟೇ ಸತ್ಯ ಎಂದು ಹೇಳಿದರು.

ಒಂದು ತಪ್ಪು ಮತ ಹಾಕಿದರೆ ನಿಮಗೆ ಯಮ ಕಾಣಿಸುತ್ತಾನೆ: ಮುನಿರತ್ನ

ಡಾ.ಮಂಜುನಾಥ್ ಕೇಂದ್ರ ಸಚಿವರಾಗುತ್ತಾರೆ ಅಂತಲೇ ನೀವು ಮತ ಕೇಳಿ! ನೀವು ಸ್ವರ್ಗಕ್ಕೆ ಹೋಗಬೇಕು ಅಂತ ಆಸೆ ಇದ್ದರೆ ಮಂಜುನಾಥ್‌ಗೆ ಮತ ನೀಡಿ. ಒಂದು ತಪ್ಪು ಮತ ಹಾಕಿದರೆ ನಿಮಗೆ ಯಮ ಕಾಣಿಸುತ್ತಾನೆ. ಕುದಿಯೋ ಎಣ್ಣೆಗೆ ಹಾಕುತ್ತಾನೆ, ಸ್ವರ್ಗಕ್ಕೆ ಹೋದರೆ ರಂಭೆ, ಊರ್ವಸಿ, ಮೇನಕೆ ನೋಡಬಹುದು. ನರಕಕ್ಕೆ ಯಾಕೆ ಹೋಗ್ತೀರಾ? ನಾನೇ ಕಠಾರಿವೀರ ಅಂತ ಒಂದು ಸಿನಿಮಾ ಮಾಡಿದ್ದೀನಿ. ಅದರಲ್ಲಿ ನೋಡಿ ಸ್ವರ್ಗ, ನರಕ ಹೇಗಿರುತ್ತೆ ಅಂತ. ಈ ಚುನಾವಣೆ ರಾಮ-ರಾವಣರ ಯುದ್ಧ, ನಿಮಗೆ ರಾಮ ಬೇಕಾ, ರಾವಣ ಬೇಕಾ! ನಾವು ಈ ರಾಮನನ್ನು ಪಾರ್ಲಿಮೆಂಟ್‌ಗೆ ಕಳುಹಿಸಬೇಕು ಎಂದು ಮುನಿರತ್ನ ಹೇಳಿದರು.

ಬಿಜೆಪಿ ಹೃದಯದಲ್ಲಿ ಜೆಡಿಎಸ್ ಇದೆ. ಓಟು ಹಾಕುವಾಗ ಜೆಡಿಎಸ್ ಇಲ್ಲ ಅಂತ ಗೊಂದಲಕ್ಕೀಡಾಗಬೇಡಿ. ಮಂಜುನಾಥ್ ಹೃದಯದಲ್ಲಿ ಜೆಡಿಎಸ್ ಇದೆ. ಹಾಗಾಗಿ ಬಿಜೆಪಿ ಚಿಹ್ನೆಗೆ ಮತ ಹಾಕಿ ಎಂದು ಮತದಾರರನ್ನು ಕೋರಿದರು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಮಾತನಾಡಿ, ಈ ಹಿಂದೆ ಡಿ.ಕೆ.ಸುರೇಶ್ ಗೆಲುವಿಗೆ ನಾನೇ ಸಹಾಯ ಮಾಡಿದ್ದೆ. ನನ್ನ ತಮ್ಮನನ್ನು ಗೆಲ್ಲಿಸಿಕೊಡಿ ಅಂತ ಡಿಕೆಶಿ ಕಾಲಿಗೆ ಬಿದ್ದಿದ್ದರು. ರಾಜಕೀಯ ವ್ಯವಸಾಯದಲ್ಲಿ ಡಿಕೆ ಬ್ರದರ್ಸ್ ಪ್ರವೀಣರು. ಪ್ರತಿ ವರ್ಷ ಆಸ್ತಿ ಹೆಚ್ಚಿಸಿಕೊಂಡು ಶ್ರೀಮಂತರಾಗ್ತಿದ್ದಾರೆ. ಚನ್ನಪಟ್ಟಣದಲ್ಲಿ ನಾವು, ಜಿಡಿಎಸ್‌ನವರು ಒಟ್ಟಾಗಿ ಕೆಲಸ ಮಾಡ್ತಿದ್ದೀವಿ. ಕನಕಪುರದಲ್ಲಿ ಕಾಂಗ್ರೆಸ್ ತೆಗೆದುಕೊಳ್ಳುವ ಲೀಡನ್ನು ನಾವು ಚನ್ನಪಟ್ಟಣದಲ್ಲಿ ತೆಗೆದುಕೊಳ್ತೀವಿ. ಉಳಿದ ಎಲ್ಲಾ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಸಿಗುತ್ತೆ. ಹಾಗಾಗಿ ಈ ಚುನಾವಣೆಯಲ್ಲಿ ನಮ್ಮ ಗೆಲುವು ಖಚಿತ ಎಂದು ಹೇಳಿದರು.

ರಾಮನಗರ ಶಾಸಕ ಗಂಡಸ್ತನದ ವಿಚಾರ ಚರ್ಚೆ ಮಾಡ್ತಾನೆ. ಅವನಿಗೆ ಜನ ತಕ್ಕಪಾಠ ಕಲಿಸ್ತಾರೆ. ಮೊನ್ನೆ ಶಿವಮೊಗ್ಗದಲ್ಲಿ ಡಾ.ಮಂಜುನಾಥ್ ಮೋದಿಯವರನ್ನು ಭೇಟಿ ಮಾಡಿದ್ದರು. ಆಗ ಮೋದಿಯವರು ಡಾ.ಮಂಜುನಾಥ್ ಹೆಚ್ಚಿನ ಲೀಡ್‌ನಲ್ಲಿ ಗೆಲ್ಲಿಸುವಂತೆ ಕರೆ ಕೊಟ್ಟಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಡಾ.ಮಂಜುನಾಥ್ ಗೆಲ್ಲಿಸಲು ಇಬ್ಬರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಹೇಳಿದ್ದಾರೆ. ಡಿ.ಕೆ.ಬ್ರದರ್ಸ್‌ಗೆ ಅವರ ಆಡಳಿತ ವಿರೋಧಿ ಅಲೆ ಇದೆ. ಡಿ.ಕೆ.ಸುರೇಶ್ ದೇಶ ವಿರೋಧಿ ಹೇಳಿಕೆ ನೀಡಿ ಇಬ್ಭಾಗದ ಮಾತನಾಡಿದ್ದಾರೆ. ಕನಕಪುರ ಇಬ್ಭಾಗ ಮಾಡಾಯ್ತು, ಈಗ ದೇಶ ಇಬ್ಭಾಗ ಮಾಡಲು ಹೋಗ್ತಿದ್ದಾರೆ ಎಂದು ಕಿಡಿಕಾರಿದರು.

ಸ್ಟಾಲಿನ್ ಜೊತೆ ಸೇರಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದ್ದಾರೆ. ಇವರಿಗೆ ತಕ್ಕಪಾಠ ಕಲಿಸಬೇಕು. ಚುನಾವಣೆ ಕೊನೆ ದಿನದವರೆಗೂ ನಾನು ನಿಮ್ಮ ಜೊತೆ ನಿಲ್ಲುವೆ. ನೀವು ಯಾರಿಗೂ ಹೆದರದೇ ಎಲೆಕ್ಷನ್ ಮಾಡಿ. ಇಲ್ಲಿ ಫ್ರಾಕ್ಸಿ ಮತಗಳು ಬೀಳುವ ಆತಂಕ ಇದೆ. ಫ್ಯಾರಾಮಿಲಿಟರಿ ಕರೆಸಿ ಇಲ್ಲಿ ಪಾರದರ್ಶಕ ಚುನಾವಣೆ ಮಾಡ್ತೇವೆ. ರಾಜ್ಯ ಸರ್ಕಾರ ದಿವಾಳಿ ಆಗಿದೆ. ಈ ಎಲೆಕ್ಷನ್ ಮುಗಿದ ಮೇಲೆ ಗ್ಯಾರಂಟಿಗಳು ನಿಲ್ಲುತ್ತವೆ. ಸರ್ಕಾರದಲ್ಲಿ ಹಣ ಇಲ್ಲ ಎಂಬುದು ಗೊತ್ತಾಗ್ತಿದೆ.. ಕಾಂಗ್ರೆಸ್ ನಾಯಕರು ಸರ್ಕಾರದ ಖಜಾನೆ ಖಾಲಿ ಮಾಡಿದ್ದಾರೆ. ಹಾಗಾಗಿ ಇದನ್ನು ಜನ ಗಮನದಲ್ಲಿಟ್ಟುಕೊಂಡು ಮತಹಾಕಬೇಕು ಎಂದು ಹೇಳಿದರು.

ಇದನ್ನೂ ಓದಿ | PM Narendra Modi: ಮೋದಿ ಯುವ ಪಡೆಯ ಕಪಾಳಕ್ಕೆ ಹೊಡೆಯುವ ಶಕ್ತಿ ‘ಕೈ’ಗಿದೆಯೇ? ಪ್ರಲ್ಹಾದ್‌ ಜೋಶಿ ಪ್ರಶ್ನೆ

ಕಾಂಗ್ರೆಸ್ ಅಭ್ಯರ್ಥಿ ಹೇಗೆ 8 ಕ್ಷೇತ್ರಕ್ಕೂ ಹೋಗಬೇಕೋ. ಹಾಗೇ ನಾವು ಕನಕಪುರಕ್ಕೂ ಬಂದಿದ್ದೇವೆ. ಕನಕಪುರಕ್ಕೆ ಬರೋಕೆ ಯಾವ ಲೈಸೆನ್ಸ್ ತೆಗೆದುಕೊಂಡು ಬರಬೇಕಾಗಿಲ್ಲ. ಕನಕಪುರಕ್ಕೆ ಬಂದಾಗ ಸಣ್ಣಪುಟ್ಟ ವ್ಯತ್ಯಾಸವಾದರೆ, ಅವರು 8 ಕ್ಷೇತ್ರಕ್ಕೂ ಬರ್ತಾರಲ್ಲ. ರಾಮನಗರ ಜಿಲ್ಲೆ ಚುನಾವಣೆ ಪಾರದರ್ಶಕವಾಗಿ ನಡೆಯಲು ಒಳ್ಳೆಯ ವೇದಿಕೆ. ನಾವು ಪಾರದರ್ಶಕವಾಗಿ ಚುನಾವಣೆ ನಡೆಸುತ್ತೇವೆ. ಕನಕಪುರದಲ್ಲಿ ಸಾರ್ವಜನಿಕರು ಆಚೆ ಬಂದಿದ್ದಾರೆ, ನಾವಲ್ಲ. ಇಲ್ಲಿ ಯಾವ ಕಾರ್ಯಕರ್ತರಿಗೂ ದುಡ್ಡು‌ಕೊಟ್ಟು ಕರೆಸಿಲ್ಲ. ಕಾಂಗ್ರೆಸ್‌ನವರ ರೀತಿ ಸೀರೆ, ಪಂಚೆ ಕೊಟ್ಟು‌ ನಾವು ಯಾರನ್ನೂ ಕರೆದುಕೊಂಡು‌ ಬಂದಿಲ್ಲ. ಇಲ್ಲಿಗೆ ಬಂದವರು ಪ್ರಾಮಾಣಿಕೆ ಬಿಜೆಪಿ- ಜೆಡಿಎಸ್ ಕಾರ್ಯಕರ್ತರು ಎಂದರು ಹೇಳಿದರು.


ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

VISTARANEWS.COM


on

ದುಬಾರೆ ಶಿಬಿರದಲ್ಲಿ ಆನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಚೆನ್ನೈ ಮೂಲದ ಜಿನ್ಶು (33) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ದುಬಾರೆ ಶಿಬಿರದಲ್ಲಿ ಆನೆಗಳನ್ನು ಕಾವೇರಿ ನದಿಯಲ್ಲಿ ಸ್ನಾನ ಮಾಡಿಸಲು ಕರೆದೊಯ್ಯಲಾಗಿತು. ಈ ವೇಳೆ ಮಾರ್ತಾಂಡ ಆನೆಗೆ ಕಂಜನ್ ಆನೆ ತಿವಿದ ಪರಿಣಾಮ, ನಿಯಂತ್ರಣ ತಪ್ಪಿದ ಆನೆ ಪ್ರವಾಸಿ ಮಹಿಳೆಯ ಮೇಲೆ ಬಿದ್ದಿದೆ ಎನ್ನಲಾಗಿದೆ.

ಆನೆ ಕೆಳಗೆ ಸಿಲುಕಿದ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಶಿಬಿರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading
Advertisement
Latest18 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest20 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest22 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest24 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest4 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest5 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌