Site icon Vistara News

Lok Sabha Election 2024: ಜಯ ಘೋಷದ ಮಧ್ಯೆ ಪ್ರಲ್ಹಾದ್‌ ಜೋಶಿ ನಾಮಪತ್ರ ಸಲ್ಲಿಕೆ

Pralhad Joshi filed Nomination for Dharwad Lok Sabha Constituency

ಹುಬ್ಬಳ್ಳಿ: ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಸೋಮವಾರ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ (Lok Sabha Election 2024) ನಾಮಪತ್ರ ಸಲ್ಲಿಸಿದರು.

ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಜಗದೀಶ್‌ ಶೆಟ್ಟರ್ ಅವರ ನೇತೃತ್ವದಲ್ಲಿ ಅದ್ಧೂರಿ ಮೆರವಣಿಗೆ ನಡೆಸಿ, ಬಳಿಕ ಜಿಲ್ಲಾ ಚುನಾವಣಾಧಿಕಾರಿ ದಿವ್ಯಾ ಪ್ರಭು ಅವರಿಗೆ ಪ್ರಲ್ಹಾದ್‌ ಜೋಶಿ ನಾಮಪತ್ರ ಸಲ್ಲಿಸಿದರು.

ಇದನ್ನೂ ಓದಿ: 2nd PUC Exam: ದ್ವಿತೀಯ ಪಿಯುಸಿ; ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಪಡೆಯಲು ನಾಳೆಯೇ ಕೊನೇ ದಿನ!

ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಮಾಜಿ ಸಂಸದ ವಿಜಯ ಸಂಕೇಶ್ವರ, ಪ್ರಭಾಕರ್ ಕೋರೆ, ಮಾಜಿ ಸಚಿವ ಸಿಸಿ ಪಾಟೀಲ ಹಾಗೂ ಶಾಸಕರಾದ ಅರವಿಂದ ಬೆಲ್ಲದ್, ಮಹೇಶ ತೆಂಗಿನಕಾಯಿ, ಎಂ.ಆರ್. ಪಾಟೀಲ್ ಸಾಥ್ ನೀಡಿದರು.

ದೇವಸ್ಥಾನ-ಮಠಗಳಿಗೆ ಭೇಟಿ

ನಾಮಪತ್ರ ಸಲ್ಲಿಕೆಗೂ ಮುನ್ನ ಪ್ರಲ್ಹಾದ್‌ ಜೋಶಿ ಅವರು ಹುಬ್ಬಳ್ಳಿ-ಧಾರವಾಡದ ವಿವಿಧ ಮಠ- ಮಾನ್ಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ, ಶ್ರೀಗಳ ಆಶೀರ್ವಾದ ಪಡೆದರು.

ಹುಬ್ಬಳ್ಳಿ ಸಿದ್ಧಾರೂಢ ಮಠ, ಮೂರು ಸಾವಿರ ಮಠ, ಧಾರವಾಡ ಮುರುಘಾ ಮಠ, ಭವಾನಿ ನಗರ ಮತ್ತು ನವನಗರದ ರಾಘವೇಂದ್ರ ಸ್ವಾಮಿ ಮಠಗಳಿಗೆ ತೆರಳಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಅಲ್ಲದೇ, ನಾಗಶೆಟ್ಟಿಕೊಪ್ಪದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ, ಧಾರವಾಡ ಲಕ್ಷ್ಮಿನರಸಿಂಹ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಮೂರುಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ಧಾರವಾಡ ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಅವರು ಜೋಶಿ ಅವರನ್ನು ಆಶೀರ್ವದಿಸಿ, ಶುಭ ಹಾರೈಸಿದರು.

ವರಿಷ್ಠರೊಂದಿಗೆ ಬೃಹತ್ ಮೆರವಣಿಗೆ

ದೇವಸ್ಥಾನ-ಮಠಗಳ ಭೇಟಿ ಬಳಿಕ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ, ಪಕ್ಷದ ವರಿಷ್ಠರೊಂದಿಗೆ ಧಾರವಾಡದ ಶಿವಾಜಿ ವೃತ್ತದಲ್ಲಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ತೆರೆದ ವಾಹನದಲ್ಲಿ ಅದ್ದೂರಿ ಮೆರವಣಿಗೆ ಆರಂಭಿಸಿದರು.

ಇದನ್ನೂ ಓದಿ: ಕನ್ನಡಿಗರ ಮನೆಗಳನ್ನು ನೆಲಸಮಗೊಳಿಸಿದ ಗೋವಾ ಸರ್ಕಾರ; ನಾರಾಯಣ ಗೌಡ ಖಂಡನೆ

ಪ್ರಮುಖ ಬೀದಿಗಳಲ್ಲಿ ಸಾಗಿದ ಬೃಹತ್ ಮೆರವಣಿಗೆಯಲ್ಲಿ ಹುಬ್ಬಳ್ಳಿ-ಧಾರವಾಡ, ಶಿಗ್ಗಾವಿ-ಸವಣೂರು ಸೇರಿದಂತೆ ಕ್ಷೇತ್ರದ ವಿವಿಧೆಡೆಯಿಂದ ಅಸಂಖ್ಯಾತ ಕಾರ್ಯಕರ್ತರು ಭಾಗವಹಿಸಿದ್ದರು. ಜೆಡಿಎಸ್ ಪ್ರಮುಖರು, ಕಾರ್ಯಕರ್ತರು ಸಹ ಪಾಲ್ಗೊಂಡು ಮೈತ್ರಿಕೂಟದ ಬಲ ಪ್ರದರ್ಶಿಸಿದರು.

ಈ ವೇಳೆ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ, ದೇಶದ ಒಳಿತಿಗಾಗಿ ಎಲ್ಲರೂ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ಬೆಂಬಲ ನೀಡಿದ್ದಾರೆ. ಕಾರ್ಯಕರ್ತರ ಅತೀವ ಬೆಂಬಲ ಈ ಬಾರಿಯೂ ಬಿಜೆಪಿ ಗೆಲುವು ನಿಶ್ಚಿತ ಎಂಬ ಆತ್ಮವಿಶ್ವಾಸ ಮೂಡಿಸಿದೆ ಎಂದು ಪ್ರತಿಕ್ರಿಯಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಜಿ ಸಂಸದರಾದ ವಿಜಯ್ ಸಂಕೇಶ್ವರ್, ಪ್ರಭಾಕರ್ ಕೋರೆ, ಮಾಜಿ ಸಚಿವರಾದ ಭೈರತಿ ಬಸವರಾಜ್, ಸಿ.ಸಿ.ಪಾಟೀಲ್ ಮುಂತಾದವರು ಸಾಥ್ ನೀಡಿ ತಮ್ಮ ಗೆಲುವಿನ ಮನೋಬಲವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Elon Musk: ಭಾರತದಲ್ಲಿ 2 ಲಕ್ಷ ಎಕ್ಸ್‌ ಖಾತೆಗಳು ಬ್ಯಾನ್‌

ಈ ಸಂದರ್ಭದಲ್ಲಿ ಶಾಸಕರಾದ ಅರವಿಂದ ಬೆಲ್ಲದ, ಮಹೇಶ್ ಟೆಂಗಿನಕಾಯಿ, ಎಂ.ಆರ್. ಪಾಟೀಲ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ನಾಗರಾಜ್ ಛಬ್ಬಿ, ಮಹಾಂತೇಶ್ ಕವಟಗಿಮಠ, ಶಂಕರ್ ಪಾಟೀಲ್ ಮುನೇನಕೊಪ್ಪ, ಸಿ.ಟಿ.ರವಿ, ಅಮೃತ್ ದೇಸಾಯಿ, ಸೀಮಾ ಮಸೂತಿ, ಕೆಎಲ್ಇ ಸಂಸ್ಥೆ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು, ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ತಿಪ್ಪಣ್ಣ ಮಜ್ಜಗಿ ಹಾಗು ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version