Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ! - Vistara News

ಕರ್ನಾಟಕ

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Lok Sabha Election 2024: ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ಭವಿಷ್ಯ ನುಡಿದಿದೆ.

VISTARANEWS.COM


on

Lok Sabha Election 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮೈಸೂರು: 2024ರ ಲೋಕಸಭಾ ಚುನಾವಣೆಯ (Lok Sabha Election 2024) 7ನೇ ಹಂತದ ಮತದಾನ ಶನಿವಾರ ಮುಕ್ತಾಯವಾದ ಬೆನ್ನಲ್ಲೇ ಬಿಡುಗಡೆಯಾದ ಎಕ್ಸಿಟ್‌ ಪೋಲ್‌ಗಳ ಫಲಿತಾಂಶದಲ್ಲಿ ಬಹುತೇಕವು ಕೇಂದ್ರದಲ್ಲಿ ಸತತ ಮೂರನೇ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ, ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಲಾಗಿದೆ. ಈ ನಡುವೆ ಮೈಸೂರಿನಲ್ಲಿ ಶ್ವಾನವೊಂದು ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿರುವ ಶ್ವಾನ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಯಾರು ಜಯಭೇರಿ ಬಾರಿಸುತ್ತಾರೆ ಎಂಬುವುದರ ಬಗ್ಗೆಯೂ ತಿಳಿಸಿದೆ.

ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ಮುಗಿದಿದ್ದು, ಫಲಿತಾಂಶಕ್ಕಾಗಿ (ಜೂನ್‌ 4) ಜನರು ಕಾತರಿಂದ ಕಾಯುತ್ತಿದ್ದಾರೆ. ಇದಕ್ಕೂ ಮೊದಲು ನಗರದ ಕೆ.ಟಿ. ಸ್ಟ್ರೀಟ್‌ನ ಕಾಲಭೈರವೇಶ್ವರ ದೇಗುಲದಲ್ಲಿ ಭೈರವ ಎಂಬ 2 ವರ್ಷದ ಶ್ವಾನ ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿದೆ. ಶ್ವಾನದ ಭವಿಷ್ಯ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಇದನ್ನೂ ಓದಿ | MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

ಗೋಪಿನಾಥ್ ಎಂಬುವವರು ಸಾಕಿರುವ ಭೈರವ ಶ್ವಾನದ ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರವಿಟ್ಟಾಗ ಶ್ವಾನ ಮೋದಿ ಅವರ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಬಿಜೆಪಿ ಮೈತ್ರಕೂಟ ಮತ್ತೊಮ್ಮೆ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದೆ. ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಎಂ. ಲಕ್ಷ್ಮಣ್ ಹಾಗೂ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಚಿತ್ರ ತೋರಿಸಿದಾಗ ಶ್ವಾನ ಯದುವೀರ್ ಭಾವಚಿತ್ರ ಆಯ್ಕೆ ಮಾಡುವ ಮೂಲಕ ಈ ಚುನಾವಣೆಯಲ್ಲಿ ಗೆಲುವು ಯಾರಿಗೆ ಎಂಬುವುದನ್ನು ಸೂಚಿಸಿದೆ.

Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

Exit poll 2024

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಈ ಬಾರಿ ಕರ್ನಾಟಕದಲ್ಲಿ ಫಲಿತಾಂಶ ಬಿಜೆಪಿಗೆ 2019ರ ಚುನಾವಣೆಯಷ್ಟು ಪೂರಕವಾಗಿಲ್ಲ (Exit Poll 2024 ) ಎಂದು ಚುನಾವಣೋತ್ತರ ಸಮೀಕ್ಷೆಗಳು ಅಂದಾಜಿಸಿವೆ. ಈ ಬಾರಿ ಕರ್ನಾಟಕದಲ್ಲಿ 18 ಸೀಟುಗಳು ಬಿಜೆಪಿಗೆ ದೊರೆಯಲಿದ್ದು, 8 ಸ್ಥಾನಗಳು ಕಾಂಗ್ರೆಸ್​ಗೆ ದೊರೆಯಲಿವೆ ಎಂದು ಪೋಲ್​​ ಸ್ಟಾಟ್ ಹೇಳಿದೆ. ಜೆಡಿಎಸ್​​ ರೀತಿ ಸ್ಪರ್ಧಿಸಿರುವ ಒಟ್ಟು 3ರಲ್ಲಿ ಎರಡು ಸ್ಥಾನಗಳನ್ನು ಜೆಡಿಎಸ್​ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳಿವೆ. ದೇಶಾದ್ಯಂತ ಬಿಜಪಿಗೆ ಹಿಂದಿಗಿಂತ ಹೆಚ್ಚು ಸೀಟುಗಳು ಸಿಗಲಿವೆ ಎಂಬ ಟ್ರೆಂಡ್ ಇರುವ ಹೊರತಾಗಿಯೂ ಕರ್ನಾಟಕದಲ್ಲಿ ಸ್ವಲ್ಪ ಮಟ್ಟಿಗೆ ಬಿಜೆಪಿಗೆ ಹಿನ್ನಡೆಯಾಗಿದೆ. 2019ರಲ್ಲಿ ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ತಲಾ ಒಂದು ಸ್ಥಾನವನ್ನು ಹಂಚಿಕೊಂಡಿತ್ತು. ಪಕ್ಷೇತರರಾದ ಸುಮಲತಾ ಅವರು ಮಂಡ್ಯ ಕ್ಷೇತ್ರದಲ್ಲಿ ಗೆದ್ದಿದ್ದರು.

ವಿಸ್ತಾರ ನ್ಯೂಸ್​- COPS ನಡೆಸಿರುವ ಸಮೀಕ್ಷೆಯಲ್ಲಿ ಬಿಜೆಪಿಗೆ 18ರಿಂದ-22 ಸ್ಥಾನಗಳು ದೊರಕಿದೆ, ಕಾಂಗ್ರೆಸ್​ಗೆ 08ರಿಂದ 10 ಸ್ಥಾನಗಳು ಲಭಿಸಲಿವೆ. ಜೆಡಿಎಸ್​ಗೆ 2ರಿಂದ 3 ಸ್ಥಾನ ಸಿಗುವುದು ಎಂದು ಹೇಳಲಾಗಿದೆ. ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ 20ರಿಂದ 22, ಕಾಂಗ್ರೆಸ್ 3ರಿಂದ 5 ಮತ್ತು ಜೆಡಿಎಸ್ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ . ಇಂಡಿಯಾ ಟುಡೆ ಪ್ರಕಾರ ಕರ್ನಾಟದಲ್ಲಿ ಬಿಜೆಪಿಗೆ 23ರಿಂದ 25 ಹಾಗೂ ಕಾಂಗ್ರೆಸ್​ಗೆ 04ರಿಂದ 05 ಹಾಗೂ ಜೆಡಿಎಸ್​ಗೆ 1ರಿಂದ 3ಸ್ಥಾನ ಸಿಗಲಿದೆ ಎಂದು ಅಂದಾಜಿಸಿದೆ.

ಜನ್​ಕಿ ಬಾತ್​ ಸಮೀಕ್ಷೆ ಪ್ರಕಾರ ಬಿಜೆಪಿಗೆ 17ರಿಂದ 23 ಹಾಗೂ ಕಾಂಗ್ರೆಸ್​ಗೆ 4ರಿಂದ 8 ಹಾಗೂ ಜೆಡಿಎಸ್​ಗೆ 1ರಿಂದ 2 ಸ್ಥಾನ ಸಿಗಬಹುದು ಅಂದಾಜಿಸಿದೆ. ಜಿ ನ್ಯೂಸ್ ಪ್ರಕಾರ ಬಿಜೆಪಿಗೆ 18ರಿಂದ22, ಕಾಂಗ್ರೆಸ್​ಗೆ 4ರಿಂದ 5 ಹಾಗೂ ಜೆಡಿಎಸ್​​ 01ರಿಂದ 3 ಸೀಟುಗಳು ಸಿಗಲಿವೆ.

ಇದನ್ನೂ ಓದಿ: Exit Poll 2024: ಮೋದಿ ಹ್ಯಾಟ್ರಿಕ್‌ ಖಚಿತ, ಇಂಡಿಯಾ ಒಕ್ಕೂಟಕ್ಕೆ ಸೋಲು ನಿಶ್ಚಿತ; ಇಲ್ಲಿದೆ ಎಕ್ಸಿಟ್‌ ಪೋಲ್‌ ವರದಿ

ಅಭ್ಯರ್ಥಿಗಳ ಆಯ್ಕೆ ಮತ್ತು ಕೆಲವೊಂದು ಗೊಂದಲಗಳ ಕಾರಣ ಕರ್ನಾಟಕದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದು ಎಂಬುದಾಗಿ ರಾಜಕೀಯ ವಿಶ್ಲೇಷಕರು ಈ ಹಿಂದೆಯೇ ಅಂದಾಜಿಸಿದ್ದರು. ಚುನಾವಣೋತ್ತರ ಸಮೀಕ್ಷೆಯಲ್ಲೂ ಅದು ಪ್ರತಿಫಲನಗೊಂಡಿದೆ. ಬಿಜೆಪಿ ಕಳೆದ ಬಾರಿಗಿಂತ 3ರಿಂದ 5 ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆಗಳು ಕಂಡಿವೆ. ಏತನ್ಮಧ್ಯೆ ಕಾಂಗ್ರೆಸ್​ ತನಗೆ ಭಾಗ್ಯಗಳು ಕೈ ಹಿಡಿಯಬಹುದು ಎಂದು ಅಂದಾಜಿಸಿತ್ತು. ಹೀಗಾಗಿ 10ಕ್ಕಿಂತಲೂ ಹೆಚ್ಚು ಸ್ಥಾನವನ್ನು ಗೆಲ್ಲಬಲ್ಲೆವು ಎಂದು ಆಂತರಿಕವಾಗಿ ಹೇಳಿಕೊಂಡಿತ್ತು. ಆದರೆ, ಅವರ ಲೆಕ್ಕಾಚಾರವೂ ತಪ್ಪಾಗಿದೆ. ಇವೆಲ್ಲದರ ನಡುವೆ ಜೆಡಿಎಸ್​ ಬಿಜೆಪಿ ಜತೆಗಿನ ಮೈತ್ರಿಯ ಸಂಪೂರ್ಣ ಲಾಭವನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ. ಸಮೀಕ್ಷೆಗಳ ಪ್ರಕಾರ ಈ ಪಕ್ಷ ಕನಿಷ್ಠ2 ಸೀಟ್​ ಗೆಲ್ಲುವು ಖಾತರಿ. ಇನ್ನೊಂದು ಸೀಟ್​ ಕೂಡ ಅವರ ಪರವಾಗಬಹುದು ಎಂದು ಹೇಳಲಾಗಿದೆ.

2024 ರ ಲೋಕಸಭಾ ಚುನಾವಣೆ ಎರಡು ಪ್ರಮುಖ ಮೈತ್ರಿಕೂಟಗಳಾದ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಎನ್ಡಿಎ ಬಣಗಳ ನಡುವೆ ತೀವ್ರ ಹೋರಾಟವಾಗಿ ರೂಪುಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಸತತ ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ನಿರ್ಧರಿಸಿದ್ದರೆ, ಬಿಜೆಪಿ ಮೈತ್ರಿಕೂಟವು ಅಸಮಾಧಾನದ ಗೆಲುವನ್ನು ಸಂಘಟಿಸಲು ದಣಿವರಿಯದೆ ಕೆಲಸ ಮಾಡುತ್ತಿದೆ. ಈ ಚುನಾವಣೆಯ ಫಲಿತಾಂಶವು ರಾಷ್ಟ್ರದ ರಾಜಕೀಯ ಭೂದೃಶ್ಯದ ಮೇಲೆ ದೂರಗಾಮಿ ಪರಿಣಾಮಗಳನ್ನು ಬೀರುತ್ತದೆ.

ಕರ್ನಾಟಕದಲ್ಲಿ ಹೀಗಿದೆ ಚುನಾವಣಾ ಫಲಿತಾಂಶ ಸಮೀಕ್ಷೆ

  • ವಿಸ್ತಾರ-COPS: ಬಿಜೆಪಿ 18-20, ಕಾಂಗ್ರೆಸ್‌ 8-10, ಜೆಡಿಎಸ್‌ 2-3
  • ಜನ್ ಕೀ ಬಾತ್: ಬಿಜೆಪಿ 17-23, ಕಾಂಗ್ರೆಸ್ 4-8, ಜೆಡಿಎಸ್ 1-2
  • ಝೀ ನ್ಯೂಸ್: ಬಿಜೆಪಿ 18-22, ಕಾಂಗ್ರೆಸ್ 4-6, ಜೆಡಿಎಸ್ 1-3
  • CNN ನ್ಯೂಸ್ 18: ಬಿಜೆಪಿ 21-23, ಕಾಂಗ್ರೆಸ್ 3-7, ಜೆಡಿಎಸ್ 2-3
  • ಪೋಲ್‌ಸ್ಟ್ರಾಟ್‌: ಬಿಜೆಪಿ 18, ಕಾಂಗ್ರೆಸ್-08, ಜೆಡಿಎಸ್-02 ಸ್ಥಾನ
  • ಇಂಡಿಯಾ ಟಿವಿ: ಬಿಜೆಪಿ 18-22, ಕಾಂಗ್ರೆಸ್‌ 4-8, ಜೆಡಿಎಸ್‌ 1-3
  • ಸಿ-ವೋಟರ್: ಬಿಜೆಪಿ 21-22, ಕಾಂಗ್ರೆಸ್ 3-5, ಜೆಡಿಎಸ್ 1-3
  • ಇಂಡಿಯಾ ಟುಡೇ: ಬಿಜೆಪಿ 20-22, ಕಾಂಗ್ರೆಸ್ 3-5, ಜೆಡಿಎಸ್ 2-3
  • ಪೋಲ್ ಆಫ್ ಪೋಲ್: ಬಿಜೆಪಿ-20, ಕಾಂಗ್ರೆಸ್-6, ಜೆಡಿಎಸ್-2
  • ಟೈಮ್ಸ್ ನೌ: ಬಿಜೆಪಿ 21-25, ಕಾಂಗ್ರೆಸ್ 3-7, ಜೆಡಿಎಸ್ 1-2
  • ಇಂಡಿಯಾ ನ್ಯೂಝ್: ಬಿಜೆಪಿ-21, ಕಾಂಗ್ರೆಸ್-5, ಜೆಡಿಎಸ್-2
  • ನ್ಯೂಸ್ ನೇಷನ್: ಬಿಜೆಪಿ-16, ಕಾಂಗ್ರೆಸ್-10, ಜೆಡಿಎಸ್-02
  • ನ್ಯೂಸ್ 24-ಟುಡೇಸ್ ಚಾಣಕ್ಯ: ಬಿಜೆಪಿ-ಜೆಡಿಎಸ್ 24, ಕಾಂಗ್ರೆಸ್-4
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚಿತ್ರದುರ್ಗ

ಡಿ. ಸುಧಾಕರ್‌ ನಿಧನ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ: ಸಿಎಂ ಸಿದ್ದರಾಮಯ್ಯ

VISTARANEWS.COM


on

ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿ. ಸುಧಾಕರ್‌ ಅವರ ಅಗಲಿಕೆಯಿಂದ ರಾಜ್ಯ ರಾಜಕೀಯ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ. ಸುಧಾಕರ್‌ ಅವರ ನಿವಾಸದಲ್ಲಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಸುಧಾಕರ್‌ ಅವರು ಜನಪರ ನಾಯಕನಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ” ಎಂದು ಹೇಳಿದರು.

ಸುಧಾಕರ್‌ ಅವರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳು ಹಾಗೂ ಅಭಿಮಾನಿಗಳನ್ನು ಅಗಲಿದ್ದಾರೆ. “ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಸಿಎಂ ಪ್ರಾರ್ಥಿಸಿದರು.

ಡಿ. ಸುಧಾಕರ್‌ ಅವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಅವರ ನಿಧನ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸೋಮವಾರ ಸರ್ಕಾರಿ ರಜೆ ಘೋಷಿಸಲಾಗಿದೆ.

ನಾಳೆ ಸಂಜೆ 4 ಗಂಟೆಗೆ ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Continue Reading

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading
Advertisement
Latest7 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest7 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ7 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest8 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest10 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest12 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest1 day ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ1 day ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ1 day ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌